Author: admin

ಜೆಸಿಐ ಬಂಟ್ವಾಳದ ವತಿಯಿಂದ ಕ್ಷಯ ರೋಗಿಗಳಿಗೆ ಆಹಾರದ ಕಿಟ್ ವಿತರಣೆ ಬಂಟ್ವಾಳ: ಜೆಸಿಐ ಬಂಟ್ವಳದ ವತಿಯಿಂದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಬಂಟ್ವಾಳದಲ್ಲಿ ನಿಕ್ಷಯ ಮಿತ್ರ ಕಾರ್ಯಕ್ರಮದಡಿಯಲ್ಲಿ ಕ್ಷಯ ರೋಗಿಗಳಿಗೆ ಪೌಷ್ಟಿಕ ಆಹಾರದ ಕಿಟ್ ವಿತರಣೆ ಮಾಡಲಾಯಿತು.ಈ ಸಂದರ್ಭ ಜೆಸಿಐ ಬಂಟ್ವಾಳದ ಅಧ್ಯಕ್ಷ ರಾಜೇಂದ್ರ ಕೆ., ನಿಕಟಪೂರ್ವಾಧ್ಯಕ್ಷ ರೋಷನ್ ರೈ, ಪೂರ್ವಧ್ಯಕ್ಷ ಸಂತೋಷ ಜೈನ್, ಸದಸ್ಯರಾದ ಪ್ರಶಾಂತ್ ಕಲ್ಲಡ್ಕ, ಉಮೇಶ್ ಪೂಜಾರಿ, ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಶ್ವಿನಿ ಬಾಲಕೃಷ್ಣ ಉಪಸ್ಥಿತರಿದ್ದರು. Advertisement

Read More

ಬಿಜೆಪಿ ಕಚೇರಿಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನಕಾರ್ಯದರ್ಶಿ ಬಿ.ಎಲ್.‌ಸಂತೋಷ್ ಭೇಟಿ ಬಂಟ್ವಾಳ: ಬಿಜೆಪಿ ಕಚೇರಿಗೆಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನಕಾರ್ಯದರ್ಶಿ ಬಿ.ಎಲ್.‌ಸಂತೋಷ್ ಅವರು ಭಾನುವಾರ ಭೇಟಿ ನೀಡಿದರು. ಕ್ಷೇತ್ರದಲ್ಲಿ ಪಕ್ಷದ ಕಾರ್ಯವೈಖರಿಯನ್ನು ಮೆಚ್ಚಿ ಬಂಟ್ವಾಳ ಶಾಸಕ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಅವರಿಗೆ ಶುಭಹಾರೈಸಿದರು.ಅ ಬಳಿಕ ಸುಮಾರು ಅರ್ಧ ತಾಸುಗಳ ಕಾಲ ಚುನಾವಣಾ ತಂತ್ರಗಳ ಬಗ್ಗೆ ಚರ್ಚೆ ನಡೆಸಿದರು.ಅದಕ್ಕೂ ಮುನ್ನ ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿ ಚುನಾವಣಾ ತಯಾರಿಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡರು.ಈ ಸಂದರ್ಭದಲ್ಲಿ ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿಗಳಾದಡೊಂಬಯ್ಯ ಅರಳ, ರವೀಶ್ ಶೆಟ್ಟಿ ಕರ್ಕಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮ್ ದಾಸ ಬಂಟ್ವಾಳ, ಜಿಲ್ಲಾ ಮಾಧ್ಯಮ ಸಂಚಾಲಕ ಸಂದೇಶ್ ಶೆಟ್ಟಿ, ಜಿಲ್ಲಾ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ, ಕಾನೂನು ಪ್ರಕೋಷ್ಟದ ಜಿಲ್ಲಾ ಸಂಚಾಲಕ ಶ್ರೀಧರ್ ಶೆಟ್ಟಿ ಪುಳಿಂಚ, ಬಂಟ್ವಾಳ ಕ್ಷೇತ್ರ ಸಮಿತಿ ಪ್ರಮುಖರಾದ ಪುರುಷೋತ್ತಮ ಶೆಟ್ಟಿ ವಾಮದಪದವು, ಪ್ರಕಾಶ್…

Read More

ಕಾಮಿಡಿ ಪ್ರೀಮಿಯರ್‌‌ ಲೀಗ್ ಸೀಸನ್ 4 ಪ್ರದರ್ಶನಕ್ಕೆ ಬಿ.ಸಿ.ರೋಡಿನಲ್ಲಿ ಚಾಲನೆ ಬಂಟ್ವಾಳ: ವಿ4 ನ್ಯೂಸ್ ಹಾಗೂ ತುಳುಕೂಟ ಬಂಟ್ವಾಳ ಇದರ ಆಶ್ರಯದಲ್ಲಿ ಕಾಮಿಡಿ ಪ್ರೀಮಿಯರ್‌ ಲೀಗ್ ಸೀಸನ್ 4 ಫರ್ ಫಾರ್ಮೆನ್ಸ್ ಬಿ.ಸಿ.ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ನಡೆಯಿತು.ಯಕ್ಷ ಧ್ರುವ ಪಟ್ಲ ಫೌಂಡೇಷನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಅವರು ಮಾತನಾಡಿ ಕರಾವಳಿ ಭಾಗದಲ್ಲಿ ನಗುವಿಗೂ ಸ್ಟ್ಯಾಂಡರ್ಡ್ ಇದೆ. ಆದ್ದರಿಂದ ಹೊರ ಜಿಲ್ಲೆಯ ಹಾಸ್ಯ ಕಲಾವಿದರು ಕರಾವಳಿಯಲ್ಲಿ ಹಾಸ್ಯ ಪ್ರದರ್ಶನ ನೀಡಲು ಹಿಂದು ಮುಂದು ನೋಡುತ್ತಾರೆ ಎಂದರು. ಇಲ್ಲಿ ಯಕ್ಷಗಾನ, ನಾಟಕದ ಹಾಸ್ಯಗಳಿಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ, ಕಲಾವಿದನಾಗಿ ಉದ್ಯಮಿಯಾಗಿ ತೊಡಗಿಸಿಕೊಂಡಿರುವ ಲಕ್ಷ್ಮಣ್ ಕುಂದರ್ ಸಾಂಸ್ಕೃತಿಕ ಕ್ಷೇತ್ರಕ್ಕೆ ತನ್ನದೆ ಕೊಡುಗೆ ನೀಡುತ್ತಿದ್ದಾರೆ, ನಮ್ಮ‌ ನಾಡಿನ ಸಂಸ್ಕೃತಿ, ಸಂಸ್ಕಾರ ಉಳಿಯ ಬೇಕಾದರೆ ಇಂತಹ ಕಾರ್ಯಕ್ರಮಗಳು ನಡೆಯುತ್ತಿರಬೇಕು ಎಂದರು.ಸಿದ್ದಕಟ್ಟೆಯ ಅನಂತ ಪದ್ಮ ಹೆಲ್ತ್ ಸೆಂಟರ್ ನ ಡಾ. ಸುದೀಪ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಆರೋಗ್ಯವಾಗಿರಲು ನಗು ಮುಖ್ಯ. ಪ್ರಸ್ತುತ ಕಾಲ…

Read More

ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ನಾಮಪತ್ರ ಸಲ್ಲಿಕೆ, ಬಂಟ್ವಾಳ: ಇಲ್ಲಿನ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ, ಮಾಜಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಶನಿವಾರ ತಮ್ಮ ನಾಮಪತ್ರವವನ್ನು ಸಲ್ಲಿಸಿದರು. ಬಿ.ಸಿ.ರೋಡಿನ ತಾಲೂಕು ಆಡಳಿತ ಸೌಧದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾಧಿಕಾರಿ ಅಭಿದ್ ಗಡ್ಯಾಲ್ ಅವರಿಗೆ ತನ್ನ ಉಮೇದುವಾರಿಕೆ ಸಲ್ಲಿಸಿದರು. ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಮಾಜಿ ಶಾಸಕ ಎ. ರುಕ್ಮಯ ಪೂಜಾರಿ, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ ಶೆಟ್ಟಿ ಉಪಸ್ಥಿತಿಯಲ್ಲಿ ನಾಮಪತ್ರ ಸಲ್ಲಿಸಲಾಯಿತು. ಪಾದಯಾತ್ರೆಯಲ್ಲಿ ಆಗಮಿಸಿದ ರಾಜೇಶ್ ನಾಯ್ಕ್:ಪೊಳಲಿ ಶ್ರೀ ರಾಜರಾಜೇಶ್ವರೀ ದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅವರು ಬಳಿಕ ಪಾದಯಾತ್ರೆಯ ಮೂಲಕ ಬಿ.ಸಿ.ರೋಡಿನತ್ತ ಹೆಜ್ಜೆ ಹಾಕಿದರು. ಈ ಸಂದರ್ಭ ಅಪಾರ ಸಂಖ್ಯೆಯ ಬೆಂಬಲಿಗರು ಜಯಘೋಷ ಹಾಕುತ್ತ ಅವರ ಜೊತೆ ಹೆಜ್ಜೆ ಹಾಕಿದರು. ಸಹಸ್ರ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಮೆರವಣಿಗೆಯಲ್ಲಿ ಆಗಮಿಸಿ ತಮ್ಮ ಮೆಚ್ಚಿನ ನಾಯಕನಿಗೆ ಬೆಂಬಲ ವ್ಯಕ್ತಪಡಿಸಿದರು.ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಜೇಶ್…

Read More

ಮೆಚ್ಚಿನ ನಾಯಕನಿಗಾಗಿ 35 ಕಿ.ಮಿ.‌ನಡೆದು ಬಂದ ದಂಪತಿ ಬಂಟ್ವಾಳ: ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರು ನಾಮ‌ಪತ್ರ ಸಲ್ಲಿಸಲು ಪೊಳಲಿ ಕ್ಷೇತ್ರದಿಂದ‌ ಪಾದಾಯಾತ್ರೆಯ ಮೂಲಕ ಆಗಮಿಸುವ ಸುದ್ದಿ ತಿಳಿದ ದಂಪತಿ ತಮ್ಮ ಮನೆಯಿಂದ ಸುಮಾರು 35 ಕಿ.ಮಿ.ದೂರದವರೆಗೆ ಕಾಲ್ನಡಿಗೆಯಲ್ಲಿ ಆಗಮಿಸಿ ಪಕ್ಷದ ಅಭ್ಯರ್ಥಿಗೆ ಶುಭಾಶಯ ಕೋರಿದ ಘಟನೆ ಬಂಟ್ವಾಳದಲ್ಲಿ ನಡೆಯಿತು..ಬಡಗಕಜೆಕಾರು ಗ್ರಾ.ಪಂ.ಮಾಜಿ ಸದಸ್ಯ ಗಂಗಾಧರ ಪೂಜಾರಿ ತನ್ನ ಪತ್ನಿ ಚಂದ್ರಾವತಿ ಅವರ ಜೊತೆಗೂಡಿ ಕಜೆಕಾರಿನ ಮಹಾದೇಶ್ವರ‌ ದೇವಸ್ಥಾನದಿಂದ‌ ಪಾದಯಾತ್ರೆ ಆರಂಭಿಸಿದರು. ಪುಂಜಾಲಕಟ್ಟೆಯಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಬಂದು ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಅವರನ್ನು ಭೇಟಿಯಾದರು. ರಾಜೇಶ್ ನಾಯ್ಕ್ ಅವರು ಭ್ರಷ್ಟಾಚಾರ ರಹಿತ ಆಡಳಿತವನ್ನು ತನ್ನ ಶಾಸಕತ್ವದ ಸಮಯದಲ್ಲಿ ನೀಡಿದ್ದು, ಹಲವು ಬಾರಿ ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳನ್ನು ಅರಿತು ಪರಿಹರಿಸುವ ಪ್ರಯತ್ನ ಮಾಡಿದ್ದಾರೆ. ಅವರನ್ನು ಬೆಂಬಲಿಸುವ ಸಲುವಾಗಿ ಕಾಲ್ನಡಿಗೆಯ ಮೂಲಕ ಆಗಮಿಸಿದ್ದೇವೆ ಎಂದು ತಿಳಿಸಿದರು. ಮೆಚ್ಚಿನ ನಾಯಕನಿಗಾಗಿ 35 ಕಿ.ಮಿ.‌ನಡೆದು ಬಂದ ದಂಪತಿ Advertisement

Read More

ಸ್ಕೂಟರ್ ಗೆ ಬಸ್ಸು ಡಿಕ್ಕಿ, ಸವಾರ ಸಾವು ಬಂಟ್ವಾಳ : ಕೆ.ಎಸ್.ಆರ್.ಟಿ.ಸಿ.ಬಸ್ ಸ್ಕೂಟರ್ ಗೆ ಡಿಕ್ಕಿಯಾಗಿ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ.ಭಂಡಾರಿಬೆಟ್ಟು ನಿವಾಸಿ ಡೊಂಬಯ್ಯ ಮೂಲ್ಯ ಮೃತಪಟ್ಟ ವ್ಯಕ್ತಿ. ಡೊಂಬಯ್ಯ ಮೂಲ್ಯ ಮೃತಪಟ್ಟ ವ್ಯಕ್ತಿ. ಅವರು ಬಂಟ್ವಾಳ ಬೈಪಾಸ್ ರಸ್ತೆಯಲ್ಲಿ ಜಕ್ರಿಬೆಟ್ಟು ಕಡೆಯಿಂದ ಬಿಸಿರೋಡು ಕಡೆಗೆ ಬರುತ್ತಿದ್ದ ಸಂದರ್ಭದಲ್ಲಿ ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಸರಕಾರಿ ಬಸ್ ಹಿಂಬದಿಯಿಂದ ಸ್ಕೂಟರ್ ಗೆ ಡಿಕ್ಕಿಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.ಡೊಂಬಯ್ಯ ಅವರು ಅವರ ಸಂಬಂಧಿಕರ ಮನೆಯಲ್ಲಿ ಸಂಕ್ರಮಣದ ದಿನದಂದು ದೈವದ ಕೆಲಸಕ್ಕೆ ಹೂ ತರಲೆಂದು ಬಿ.ಸಿ.ರೋಡು ಕಡೆಗೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಡೊಂಬಯ್ಯ ಅವರು ಬಿ.ಸಿ.ರೋಡಿನಲ್ಲಿರುವ ಕುಲಾಲ ಸಮುದಾಯ ಭವನದಲ್ಲಿ ಅನೇಕ ವರ್ಷಗಳಿಂದ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಚಾಲಕನ ಅಜಾಗಕರೂಕತೆಯ ಚಾಲನೆಯಿಂದ ಈ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಅಪಘಾತ ಸಂಭವಿಸಿದ ಕೂಡಲೇ ಬಸ್ ಚಾಲಕ ಬಸ್ ಪರಾರಿಯಾಗಿದ್ದಾನೆ ಎಂದು…

Read More

ಎ.16: ಕಾಮಿಡಿ ಪ್ರೀಮಿಯರ್ ಲೀಗ್ ಸೀಸನ್ 4 ರ ಪ್ರದರ್ಶನ ಬಂಟ್ವಾಳ: ಜಿಲ್ಲೆಯ ಪ್ರತಿಷ್ಠಿತ ಸುದ್ದಿವಾಹಿನಿ ವಿ4 ನ್ಯೂಸ್ ಹಾಗೂ ತುಳುಕೂಟ ಬಂಟ್ವಾಳ ಇದರ ಜಂಟಿ ಆಶ್ರಯದಲ್ಲಿ ಸನ್ ಪ್ರೀಮಿಯಮ್ ರಿಫೈಂಡ್ ಸನ್ ಫ್ಲವರ್ ಆಯಿಲ್ ಪ್ರೆಸೆಂಟ್ಸ್ ಕಾಮಿಡಿ ಪ್ರೀಮಿಯರ್ ಲೀಗ್ ಸೀಸನ್ -4ರ ಎರಡನೇ ಸುತ್ತಿನ ಫರ್ಪಾಮೆನ್ಸ್ ಎ.16ರಂದು ಬಿ.ಸಿ.ರೋಡಿನ ಜೋಡುಮಾರ್ಗ ಉದ್ಯಾನದ ಬಳಿಯ ಸ್ಪರ್ಶಾ ಕಲಾ ಮಂದಿರರದಲ್ಲಿ ಅದ್ದೂರಿಯಾಗಿ ನಡೆಯಲಿದೆ ಎಂದು ಬಂಟ್ವಾಳ ತುಳುಕೂಟದ ಅಧ್ಯಕ್ಷ ಸುದರ್ಶನ ಜೈನ್ ಹೇಳಿದರು.ಸ್ಪರ್ಶಾ ಕಲಾಮಂದಿರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಅವರು ಮಾಹಿತಿ ನೀಡಿಆ ದಿನ ಬೆಳಿಗ್ಗೆ 9.30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಯಕ್ಷಧ್ರುವ ಪಟ್ಲ ಫೌಂಡೇಶನ್‌ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿ.ಎನ್.ಆರ್ ಗೋಲ್ಡ್ ಬಂಟ್ವಾಳ ಇದರ ಮಾಲಕ, ಸ್ವರ್ಣೋದ್ಯಮಿ ನಾಗೇಂದ್ರ ವಿ.ಬಾಳಿಗಾ, ಸಿದ್ಧಕಟ್ಟೆಯ ಅನಂತ ಪದ್ಮ ಹೆಲ್ತ್‌ ಸೆಂಟರ್‌ನ ಡಾ. ಸುದೀಪ್ ಕುಮಾರ್ ಭಾಗವಹಿಸಲಿದ್ದಾರೆ ಎಂದರು.ಕಾರ್ಯಕ್ರಮದಲ್ಲಿ ಅಖಿಲ ಭಾರತ ತುಳುಕೂಟದ ಬಂಟ್ವಾಳದ ಅಧ್ಯಕ್ಷ ಎ.ಸಿ. ಭಂಡಾರಿ, ರಾಜ್ಯ…

Read More

ಎ.15: ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ನಾಮಪತ್ ಬಂಟ್ವಾಳ: ಏಪ್ರಿಲ್ 15ರಂದು ಪೊಳಲಿಯಿಂದ ಪಾದಯಾತ್ರೆ ಮೂಲಕ ಬಂಟ್ವಾಳ ಚುನಾವಣಾ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡಲಿದ್ದೇನೆ ಎಂದು ಬಿಜೆಪಿ ಅಭ್ಯರ್ಥಿ ಹಾಲಿ ಶಾಸಕ ರಾಜೇಶ್ ನಾಯ್ಕ್ ಹೇಳಿದರು.ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಪಕ್ಷ ನನ್ನನ್ನು ಮೂರನೇ ಬಾರಿ ಕಣಕ್ಕಿಳಿಸಿದ್ದು, 2013ರಲ್ಲಿ ಸೋತರೂ 2018ರಲ್ಲಿ ವಿಜಯಿಯಾಗಿದ್ದೇನೆ. ಇದೀಗ ಮತ್ತೆ ಚುನಾವಣೆಗೆ ಕಣಕ್ಕಿಳಿಸಿದ್ದು, ಕಾರ್ಯಕರ್ತರ ಆಶೀರ್ವಾದ ಮತ್ತು ಸಹಕಾರ ಇದಕ್ಕೆ ಕಾರಣ ಎಂದರು. Advertisement ಬಂಟ್ವಾಳ ಕ್ಷೇತ್ರದಲ್ಲಿ ಅಭೂತಪೂರ್ವ ಅಭಿವೃದ್ಧಿಯ ಆಧಾರದಲ್ಲಿ ಚುನಾವಣೆ ಗೆಲ್ಲುತ್ತೇವೆ ಎಂದು ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ಹೇಳಿದರು. ಬೆಳಗ್ಗೆ 8 ಗಂಟೆಗೆ ಅಭಿಮಾನಿಗಳು ಪೊಳಲಿಯಿಂದ 15 ರಂದು ಹೆಜ್ಜೆ ಹಾಕಲಿದ್ದು, ಮಧ್ಯಾಹ್ನ 12.15ರ ವೇಳೆ ನಾಮ ಪತ್ರ ಸಲ್ಲಿಸಲಿದ್ದಾರೆ. ಪಕ್ಷ ಕಾರ್ಯಕರ್ತರ ಸಭೆಗಳಲ್ಲಿ ಈಗಾಗಲೇ ಉತ್ತಮ ಬೆಂಬಲ ವ್ಯಕ್ತಗೊಂಡಿದೆ ಎಂದರು. ಕ್ಷೇತ್ರ ಪ್ರಭಾರಿ ರವಿಶಂಕರ ಮಿಜಾರ್, ಬುಡಾ ಅಧ್ಯಕ್ಷ ದೇವದಾಸ ಶೆಟ್ಟಿ, ಪ್ರ.ಕಾರ್ಯದರ್ಶಿ ಡೊಂಬಯ ಅರಳ ಉಪಸ್ಥಿತರಿದ್ದರು.

Read More

ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟನೆ ಬಂಟ್ವಾಳ : ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಚುನಾವಣಾ ಕಚೇರಿ ಬಿಸಿರೋಡಿನ ಧನಲಕ್ಮೀ ಕಟ್ಟಡದಲ್ಲಿ ಬುಧವಾರ ಉದ್ಘಾಟನೆಗೊಂಡಿತು.ಈ ಸಂದರ್ಭ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ ಕಳೆದ ಚುನಾವಣೆಯಲ್ಲಿ ಅಪಪ್ರಚಾರದಿಂದಾಗಿ ಸೋಲನ್ನು ಅನುಭವಿಸಿದ್ದೇನೆ.‌ ಈ ಬಾರಿಯೂ ಅಪಪ್ರಚಾರ ಮುಂದುವರೆಸಲಾಗಿದೆ ಎಂದರು.ಬಂಟ್ವಾಳ ಕ್ಷೇತ್ರದಲ್ಲಿ ಮಾಡ ಬೇಕಾದ ಅಭಿವೃದ್ಧಿ ಕಾರ್ಯಗಳ, ಕನಸುಗಳು ಅನೇಕ ಇದ್ದು ಅದನ್ನು ಕಾರ್ಯರೂಪಕ್ಕೆ ತರಲು ಜನತೆ ನನಗೆ ಸಹಕಾರ ಮಾಡಬೇಕು ಎಂದರು. ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟನೆ ‌ಈ ಸಂದರ್ಭದಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿಕುಂದರ್, ಸುದೀಪ್ ಕುಮಾರ್ ಶೆಟ್ಟಿ ಕೆಪಿಸಿಸಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಎಂ.ಎಸ್.ಮಹಮ್ಮದ್, ಪದ್ಮಶೇಖರ್ ಜೈನ್, ಸುದರ್ಶನ ಜೈನ್, ಜಿನರಾಜ ಆರಿಗ, ಜಯಂತಿ ಪೂಜಾರಿ, ಮಲ್ಲಿಕಾ ಶೆಟ್ಟಿ, ಜನಾರ್ದನ ಶೆಟ್ಟಿ ಮೊಡಂಕಾಪು ಗುತ್ತು, ರಾಮಣ್ಣ ಪೂಜಾರಿ ,ಬಿ‌ಎಚ್ ಖಾದರ್,ವಲೇರಿಯನ್ ಡಿ.ಸೋಜ, ಬೇಬಿನಾಯ್ಕ್, ಬಾಳಪ್ಪ ಶೆಟ್ಟಿ ಮತ್ತಿತರರು…

Read More

ಏಕಾಂಗಿಯಾಗಿ ಬಾವಿ ತೋಡಿದ ಸೃಜನ್ ಗೆ ಜೆಸಿಐನಿಂದ ಸೆಲ್ಯೂಟ್ ಟು ಸೈಲೆಂಟ್ ವರ್ಕರ್ ಪ್ರಶಸ್ತಿ ಪ್ರದಾನ ಬಂಟ್ವಾಳ: ಏಕಾಂಗಿಯಾಗಿ ಬಾವಿ ತೋಡಿ ಅಸಾಮಾನ್ಯ ಸಾಧನೆ ತೋರಿದ ಬಾಲಕ ನರಿಕೊಂಬು ಗ್ರಾಮದ ನಾಯಿಲ ಕಾಪಿಕಾಡುವಿನ ಸೃಜನ್ ಪೂಜಾರಿಗೆ ಜೆಸಿಐ ಬಂಟ್ವಾಳ ಸೆಲ್ಯೂಟ್ ಟೂ ಸೈಲೆಂಟ್ ವರ್ಕರ್ ಪ್ರಶಸ್ತಿ ನೀಡಿ ಗೌರವಿಸಿದೆ.ಬಾಲಕನ ಸಾಧನೆಯ ಬಗ್ಗೆ ಮಾಧ್ಯಮಗಳ ವರದಿಯನ್ನು ಆಧಾರಿಸಿ ಬುಧವಾರ ಅವರ ಮನೆಗೆ ತೆರಳಿದ ಜೆಸಿಐ ಬಂಟ್ವಾಳದ ಅಧ್ಯಕ್ಷ ರಾಜೇಂದ್ರ ಕೆ. ಹಾಗೂ ಸದಸ್ಯರು ಸೃಜನ್ ಸಾಧನೆಯನ್ನು ಶ್ಲಾಘಿಸಿ ಪ್ರಶಸ್ತಿ ನೀಡಿ ಗೌರವಿಸಿದರು. ಎಲೆ ಮರೆಯ ಕಾಯಿಯಂತೆ ಸಾಧನೆ ಮಾಡುವ ಸಾಧಕರಿಗೆ ಜೆಸಿಐ ಸಂಸ್ಥೆ ಮೌನ ಸಾಧಕ ಪ್ರಶಸ್ತಿ ನೀಡಿ ಗೌರವಿಸಿಕೊಂಡು ಬಂದಿದೆ. ಇದೀಗ ಅರ್ಹವಾಗಿಯೇ ಸೃಜನ್ ಈ ಪ್ರಶಸ್ತಿಗೆ ಪಾತ್ರನಾಗಿದ್ದಾನೆ ಎಂದು ರಾಜೇಂದ್ರ ಅಭಿನಂದಿಸಿದರು. ಈ ಸಂದರ್ಭ ಜೆಸಿಐ ಬಂಟ್ವಾಳದ ನಿಕಟ ಪೂರ್ವಾಧ್ಯಕ್ಷ ರೋಷನ್ ರೈ, ಪೂರ್ವಾಧ್ಯಕ್ಷರಾದ ಲೋಕೇಶ್ ಸುವರ್ಣ, ಸದಾನಂದ ಬಂಗೇರ, ಸದಸ್ಯರಾದ ಉಮೇಶ್, ಮನೋಜ್ ಕನಪಾಡಿ, ಪ್ರಶಾಂತ್ ಕಲ್ಲಡ್ಕ ಹಾಗೂ…

Read More