Author: admin
ಕೊಳ್ನಾಡು ಶಕ್ತಿ ಕೇಂದ್ರದ ಬಿಜೆಪಿ ಪ್ರಮುಖ ಕಾರ್ಯಕರ್ತರ ಸಭೆ ಬಂಟ್ವಾಳ: ಮುಂದಿನ ಅವಧಿಯಲ್ಲಿ ಬಿಜೆಪಿಯ ಶಾಸಕರೇ ಆಯ್ಕೆಯಾಗುವ ದೃಷ್ಟಿಯಿಂದ ಹಿರಿಯರ, ಮತದಾರರ,ಕಾರ್ಯಕರ್ತರ ಆಶೀರ್ವಾದ ಪಡೆಯಲು ನಿಮ್ಮ ಮನೆ ಬಾಗಿಲಿಗೆ ಬಂದಿದ್ದೇನೆ, ನೀವು ನನ್ನ ಜೊತೆಯಾಗಿ ನಿಂತು ಬೆಂಬಲ ನೀಡಿದರೆ ಅದುವೇ ದೊಡ್ಡ ಶಕ್ತಿ ಎಂದು ಶಾಸಕ ರಾಜೇಶ್ ನಾಯ್ಕ್ ಅವರು ಹೇಳಿದರು.ಕೊಳ್ನಾಡು ಶಕ್ತಿ ಕೇಂದ್ರದ ಮುಂಡಪ್ಪ ಪೂಜಾರಿ ಅವರ ಮನೆಯಲ್ಲಿ ನಡೆದ ಪ್ರಮುಖ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ರಾಜಧರ್ಮದ ರಾಜಕಾರಣದ ಮೂಲಕ ಕ್ಷೇತ್ರದಲ್ಲಿ ಸರ್ವರಿಗೂ ಸಮಾನವಾದ ರೀತಿಯ ಜನಪರವಾದ ಆಡಳಿತವನ್ನು ಮಾಡಿದ್ದೇನೆ, ನನ್ನ ಅಧಿಕಾರಕ್ಕೆ ಕ್ಷೇತ್ರದ ಜನತೆ ಹಾಗೂ ಅಧಿಕಾರಿಗಳು ಸಹಕಾರ ನೀಡಿದ್ದಾರೆ ಎಂದು ತಿಳಿಸಿದರು. Advertisement ವೇದಿಕೆಯಲ್ಲಿ ಬಿಜೆಪಿ ಮಂಡಲದ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ, ಜಿ.ಪಂ.ನಿಕಟಪೂರ್ವ ಸದಸ್ಯ ರವೀಂದ್ರ ಕಂಬಳಿ,ಜಿಲ್ಲಾ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ, ಪ್ರಮುಖರಾದ ಮಾಧವ ಮಾವೆ, ಜಯರಾಮ ಕುಟ್ರಕಲ , ಪುಷ್ಪರಾಜ ಚೌಟ, ಪ್ರಕಾಶ್ ಅಂಚನ್,…
ಬಂಟ್ವಾಳ ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ 20 ನೇ ವರ್ಷಕ್ಕೆ ಪಾದಾರ್ಪಣೆ, ರೂ.92.60 ಲಕ್ಷ ನಿವ್ವಳ ಲಾಭ ಬಂಟ್ವಾಳ: ಬಿ.ಸಿ.ರೋಡಿನ ಕೈಕಂಬದಲ್ಲಿ ಪ್ರಧಾನ ಕಚೇರಿ ಹೊಂದಿರುವ ಬಂಟ್ವಾಳ ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ ನಿ. 20 ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದು ರೂ. 92.60 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಸುಭಾಶ್ಚಂದ್ರ ಜೈನ್ ತಿಳಿಸಿದರು.ಸೋಮವಾರ ಸಂಜೆ ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಈ ಬಗ್ಗೆ ಮಾಹಿತಿ ನೀಡಿದರು.2003 ನೇ ಆಗೋಸ್ತು ತಿಂಗಳಲ್ಲಿ ಬಂಟ್ವಾಳ ನಗರದ ಬೈಪಾಸ್ ಪ್ರದೇಶದ ಸುಮಾರು 20 ಜನ ಚಿಕ್ಕ ಪುಟ್ಟ ವ್ಯಾಪಾರ ವಹಿವಾಟು ಮಾಡುತ್ತಿದ್ದ, ಸಮಾನ ಮನಸ್ಕರಿಂದ ಪ್ರವರ್ತಿತವಾದ ಈ ಸಂಸ್ಥೆ 2003 ನೇ ಡಿಸೆಂಬರ್ 3 ರಂದು ಸುಮಾರು 460 ಜನ ಸದಸ್ಯರಿಂದ ರೂ. 4.02 ಲಕ್ಷ ಪಾಲು ಬಂಡವಾಳ, ಸುಮಾರು 2 ಲಕ್ಷ ಠೇವಣಿಯೊಂದಿಗೆ ಸಹಕಾರಿ ಕ್ಷೇತ್ರದಲ್ಲಿ ವಿವಿಧ ಉದ್ದೇಶಗಳನ್ನಿಟ್ಟುಕೊಂಡು, ಚಿಕ್ಕಮಟ್ಟದಲ್ಲಿ ಸಹಕಾರಿ ಬ್ಯಾಂಕಿಂಗ್ ವ್ಯವಸ್ಥೆಯನ್ನು ಕೈಗೊಂಡಿರುವ…
ಅಮ್ಟೂರು ಶಕ್ತಿ ಕೇಂದ್ರದ ಪ್ರಮುಖ ಕಾರ್ಯಕರ್ತ ಸಭೆ ಬಂಟ್ವಾಳ: ಕ್ಷೇತ್ರದ ಜನರಿಗೆ ಕುಡಿಯುವ ನೀರಿಗೆ ಹಾಗೂ ಕೃಷಿಗೆ ತೊಂದರೆಯಾಗಬಾರದು ಎಂಬ ದೂರದೃಷ್ಟಿಯಿಂದ ನೇತ್ರಾವತಿ ನದಿಗೆ ಚೆಕ್ ಡ್ಯಾಂ ಹಾಗೂ ಗ್ರಾಮೀಣ ಭಾಗದ ವಿವಿಧ ಕಡೆಗಳಲ್ಲಿ ಸಣ್ಣ ಸಣ್ಣ ತೋಡುಗಳಿಗೆ ಚೆಕ್ ಡ್ಯಾಂ ಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ತಿಳಿಸಿದರು. ಅಮ್ಟೂರು ಶಕ್ತಿ ಕೇಂದ್ರದ ಪ್ರಮುಖ ಕಾರ್ಯಕರ್ತ ಸಭೆ ಅಮ್ಟೂರು ಶಕ್ತಿ ಕೇಂದ್ರದ ಕರಿಂಗಾಣ ರಾಜು ಪೂಜಾರಿ ಅವರ ಮನೆಯಲ್ಲಿ ಪ್ರಮುಖ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಜನರು ನೀಡಿದ ಪ್ರೀತಿಯೇ ನನಗೆ ಶಕ್ತಿಯಾಗಿದ್ದು, ನಿರಂತರವಾಗಿ ಕ್ಷೇತ್ರದಲ್ಲಿ ಓಡಾಟ ಮಾಡಲು ಸಾಧ್ಯವಾಗಿದೆ ಎಂದರು.ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಎಸ್.ಸಿ.ಮೋರ್ಚಾದ ಕಾರ್ಯಕಾರಿಣಿ ಸದಸ್ಯ ದಿನೇಶ್ ಅಮ್ಟೂರು, ಕ್ಷೇತ್ರದ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿಗಳಾದ ರವೀಶ್ ಶೆಟ್ಟಿ ಕರ್ಕಳ,ಡೊಂಬಯ್ಯ ಅರಳ, ಅಮ್ಟೂರು ಗ್ರಾಮದ ಪ್ರಭಾರಿ ಗಣೇಶ್ ರೈ ಮಾಣಿ, ಜಿಲ್ಲಾ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ, ಗೋಳ್ತಮಜಲು ಗ್ರಾ.ಪಂ.ಅಧ್ಯಕ್ಷ…
ಬಿಜೆಪಿಗೆ ಕಾರ್ಯಕರ್ತರೇ ಶಕ್ತಿ- ರಾಜೇಶ್ ನಾಯ್ಕ್ ಬಂಟ್ವಾಳ: ಬಿಜೆಪಿ ಪಕ್ಷಕ್ಕೆ ಕಾರ್ಯಕರ್ತರೇ ಶಕ್ತಿಯಾಗಿದ್ದು, ಅವರ ಆಶ್ರೀರ್ವಾದದ ಮೂಲಕ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಸಾಧ್ಯವಾಯಿತು ಎಂದು ಶಾಸಕ ರಾಜೇಶ್ ನಾಯ್ಕ್ ತಿಳಿಸಿದರು.ಅವರು ದೇವಶ್ಯಪಡೂರು ಶಕ್ತಿ ಕೇಂದ್ರದ ವಿನಯ ಸಪಲ್ಯ ದೋಟ ಅವರ ಮನೆಯಲ್ಲಿ ನಡೆದ ಪ್ರಮುಖ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.ಕ್ಷೇತ್ರದ ಜನತೆಯ ಪ್ರತಿನಿಧಿಯಾಗಿ ಆಯ್ಕೆಮಾಡಿದ ಫಲವಾಗಿ ಶಾಂತಿಯ ಬಂಟ್ವಾಳವಾಗಿ ಸುಧಾರಣೆ ತರಲು ಸಾಧ್ಯವಾಯಿತು. ಬಂಟ್ವಾಳ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಎಲ್ಲರೂ ಜೊತೆಯಾಗಿ ಸಹಕಾರ ನೀಡಿದ ಋಣವನ್ನು ತೀರಿಸಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದರು. ಕ್ಷೇತ್ರದಲ್ಲಿ ಮೂರು ಬಾರಿ ಪಾದಾಯಾತ್ರೆ ಮಾಡಿ ಜನರ ಬೇಡಿಕೆಗಳನ್ನು ಪೂರೈಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ.ಕಳೆದ ಹಲವಾರು ವರ್ಷಗಳಿಂದ ಮಾಡಲು ಸಾಧ್ಯವಾಗದ ಅನೇಕ ಅಭಿವೃದ್ಧಿ ಕಾರ್ಯಗಳ ಜೊತೆ ಅನೇಕ ಜನರ ಕ್ಲಿಷ್ಟಕರವಾದ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಿದ್ದೇನೆ, ಇದರ ಜೊತೆಗೆ ಪಕ್ಷವನ್ನು ಸಂಘಟನಾತ್ಮಕ ವಾಗಿ ಬೆಳೆಸಲು ಅನೇಕ ಕಾರ್ಯಕ್ರಮಗಳನ್ನು ಮಾಡಿ ರಾಜ್ಯದಲ್ಲಿ ಗುರುತಿಸುವಂತೆ ಮಾಡಿದ್ದೇವೆ ಎಂದು ತಿಳಿಸಿದರು.…
ಮೋದಿ, ಅದಾನಿ, ಅಂಬಾನಿಗೆ ಬಂದ ಅಮೃತಕಾಲ ದಲಿತರಿಗೆ ಬರುವುದು ಯಾವಾಗ? – ರಾಜ್ಯಸಭಾ ಸದಸ್ಯ ಡಾ. ಎಲ್. ಹನುಮಂತಯ್ಯ ಪ್ರಶ್ನೆ ಬಂಟ್ವಾಳ: ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರದ ಸಚಿವರಿಗೆ, ದೊಡ್ಡ ಉದ್ಯಮಿಗಳಿಗೆ ಇಂದು ಅಮೃತಕಾಲ, ಪ್ರತಿದಿನವೂ ದಲಿತ ದೌರ್ಜನ್ಯ ನಡೆಯುತ್ತಿದ್ದು, ಅದೀಗ ಹೆಚ್ಚಾಗಿದೆ, ದಲಿತರಿಗೆ ಅಮೃತ ಕಾಲಬರುವುದು ಯಾವಾಗ? ಎಂದು ರಾಜ್ಯಸಭಾ ಸದಸ್ಯ ಡಾ. ಎಲ್. ಹನುಮಂತಯ್ಯ ಪ್ರಶ್ನಿಸಿದ್ದಾರೆ.ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೊಳಪಟ್ಟ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಘಟಕಗಳ ನೇತೃತ್ವದಲ್ಲಿ ಬಿ.ಸಿ.ರೋಡಿನ ಸ್ಪರ್ಶಾಕಲಾಮಂದಿರದಲ್ಲಿ ನಡೆದ ಐಕ್ಯತಾ ಸಮಾವೇಶದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು. ದಲಿತವಿರೋಧಿಯಾಗಿರುವ ಬಿಜೆಪಿ ರಾಜ್ಯದಲ್ಲಿ ಹಾಗೂ ಕೇಂದ್ರದಲ್ಲಿ ಅಧಿಕಾರಕ್ಕೆ ಬಾರದಂತೆ ನೋಡಿಕೊಳ್ಳಬೇಕಾಗಿದೆ. ಸಂವಿಧಾನವನ್ನು ತಿರುಚುವ ಕೆಲಸವನ್ನು ಸರಕಾರ ಮಾಡುತ್ತಿದ್ದು, ದಲಿತರಿಗೆ ಅನೇಕ ಕ್ಷೇತ್ರಗಳಲ್ಲಿ ಇನ್ನೂ ಸ್ವಾತಂತ್ರ್ಯ ದೊರಕಿಲ್ಲ. ಸರಕಾರಿ ಸ್ವಾಮ್ಯದ ಕಂಪನಿಗಳನ್ನು ಖಾಸಗಿಗೆ ನೀಡಲಾಗುತ್ತಿದ್ದು, ಅಲ್ಲಿ ದಲಿತರಿಗೆ ಉದ್ಯೋಗವಿಲ್ಲ, ಇಡೀ ದೇಶದಲ್ಲಿ ೨೪ ಲಕ್ಷ ಉದ್ಯೋಗಗಳು ಖಾಲಿ…
ನಾವೂರು ಶಕ್ತಿ ಕೇಂದ್ರದ ಪ್ರಮುಖರ ಸಭೆ ಬಂಟ್ವಾಳ: ಶಾಂತಿ,ನೆಮ್ಮದಿಯ ಜೊತೆಗೆ ಬಂಟ್ವಾಳ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಕೊಡುಗೆ ನೀಡುವ ಕಾರಣಕ್ಕಾಗಿ ಬಂಟ್ವಾಳ ಕ್ಷೇತ್ರದಲ್ಲಿ ಮತ್ತೊಮ್ಮೆ ಬಿಜೆಪಿ ಶಾಸಕರ ಆಯ್ಕೆಯಾಗಬೇಕು, ಈ ನಿಟ್ಟಿನಲ್ಲಿ ಮುಂದಿನ ಚುನಾವಣೆಯಲ್ಲಿ ಕ್ಷೇತ್ರದ ಜನರು ಸಹಕಾರ ನೀಡಿ ಗೆಲ್ಲಿಸಿ ಎಂದು ಶಾಸಕ ರಾಜೇಶ್ ನಾಯ್ಕ್ ಮನವಿ ಮಾಡಿದರು.ಅವರು ನಾವೂರ ಶಕ್ತಿ ಕೇಂದ್ರದ ಗಂಗಾಧರ ಪೂಜಾರಿ ಅವರ ಮನೆಯಲ್ಲಿ ನಡೆದ ಪ್ರಮುಖರ ಸಭೆಯಲ್ಲಿ ಮಾತನಾಡಿದರು.ಅಮಾಯಕರು ಜೀವ ಕಳೆದುಕೊಂಡು,ತಾಲೂಕಿನ ತಾಯಂದಿರು ನಿತ್ಯ ಕಣ್ಣೀರು ಹಾಕುವ ದಿನವನ್ನು ದೂರ ಮಾಡಿ, ಅನಗತ್ಯವಾಗಿ ಪ್ರಕರಣಗಳನ್ನು ಹಾಕಿಸಿಕೊಳ್ಳುವುದನ್ನು ನಿಲ್ಲಿಸಿ ಶಾಂತಿಯ ಬಂಟ್ವಾಳವಾಗಿ ಮಾಡಲು ಕ್ಷೇತ್ರದ ಜನರ ಸಹಕಾರದಿಂದ ಸಾಧ್ಯವಾಯಿತು ಎಂದು ಅವರು ತಿಳಿಸಿದರು.ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಮಾತನಾಡಿ, ಕೊರೊನಾ ಅವಧಿಯಲ್ಲಿ ಸಾವನ್ನಪ್ಪಿದ ಬಂಟ್ವಾಳದ ಮಹಿಳೆಯ ಅಂತ್ಯಕ್ರಿಯೆಗೆ ಜಾಗನೀಡದ ಸಮಯದಲ್ಲಿ ಒಡ್ಡೂರಿನ ಮನೆಯ ಜಮೀನಿನಲ್ಲಿ ಅಂತ್ಯಕ್ರಿಯೆ ಮಾಡಲು ವ್ಯವಸ್ಥೆ ಮಾಡಿ ಎಂದು ಜಿಲ್ಲಾಡಳಿತಕ್ಕೆ ತಿಳಿಸಿದ ರಾಜ್ಯದ ಏಕೈಕ ಶಾಸಕ ರಾಜೇಶ್ ನಾಯ್ಕ್.ಅಂತಹ ಮಾನವೀಯ ಮೌಲ್ಯವಿರುವ ಗುಣವಂತ…
ಹಿರಿಯರ ಸೇವಾ ಪ್ರತಿಷ್ಠಾನದ ಕಾರ್ಯಗಳಿಗೆ ಬೆಂಬಲ: ಎಡನೀರು ಶ್ರೀ ಸ್ವಾಮೀಜಿ ಬದಲಾಗುತ್ತಿರುವ ಸಾಮಾಜಿಕ ವ್ಯವಸ್ಥೆಯಲ್ಲಿ ಧರ್ಮದ ಪಥದಲ್ಲಿ ನಡೆಯಲು ಹಿರಿಯರ ಮಾರ್ಗದರ್ಶನ ಅತ್ಯಗತ್ಯ. ಹಿರಿಯರ ಸೇವಾ ಪ್ರತಿಷ್ಠಾನ ಈಗಾಗಲೇ ಕೈಗೊಂಡಿರುವ ಕಾರ್ಯಕ್ರಮಗಳು ಸಾಮಾಜಿಕ ಪರಿವರ್ತನೆಗೆ ಕೊಡುಗೆಯನ್ನು ನೀಡಿದ್ದು ಮುಂದಿನ ದಿನಗಳಲ್ಲಿ ಕಾಸರಗೋಡು ಜಿಲ್ಲಾ ಹಿರಿಯರ ಸಮಾವೇಶವನ್ನು ಏರ್ಪಡಿಸಿ ಸಂಘಟನೆಯನ್ನು ಇನ್ನಷ್ಟು ಬಲಪಡಿಸಲು ಪ್ರಯತ್ನಿಸುವುದಾಗಿ ಎಡನೀರು ಮಠದ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರು ತಿಳಿಸಿದರು. ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ(ರಿ) ಮೆಲ್ಕಾರ್ ಬಂಟ್ವಾಳ ಇದರ ಕೇಂದ್ರ ಸಮಿತಿಯ ಸಭೆಯನ್ನು ಎಡನೀರು ಪ್ರೌಢಶಾಲಾ ಸಭಾಂಗಣದಲ್ಲಿ ದೀಪ ಬೆಳಗಿಸಿ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು. ಹಿರಿಯರ ಸೇವಾ ಪ್ರತಿಷ್ಠಾನದ ಕಾರ್ಯಗಳಿಗೆ ಬೆಂಬಲ: ಎಡನೀರು ಶ್ರೀ ಸ್ವಾಮೀಜಿ ಯಾವುದೇ ಉತ್ತಮ ವಿಚಾರ ಮೂಡುವುದು ಒಬ್ಬನ ಮನಸ್ಸಿನಲ್ಲಿ. ಸಜ್ಜನರ ಸಂಘಟನೆಯ ಕೆಲಸವನ್ನು ಹಿರಿಯರ ಸೇವಾ ಪ್ರತಿಷ್ಠಾನ ಮಾಡುತ್ತಿದ್ದು ಶಂಕರಾಚಾರ್ಯ ರಾಮಾನುಜಚಾರ್ಯ ವಿವೇಕಾನಂದ, ಭಗತ್ ಸಿಂಗ್ ಮೊದಲಾದವರು ಅತ್ಯಂತ ಕಿರಿವಯಸ್ಸಿನಲ್ಲಿ ಅಪೂರ್ವ ಸಾಧನೆ ಮಾಡಿದವರಾಗಿದ್ದು…
ಅನಂತಾಡಿ : ” ಮಕ್ಕಳ ಸರ್ವತೋಮುಖ ವ್ಯಕ್ತಿತ್ವ ವಿಕಸನಕ್ಕೆ ಸಾಹಿತ್ಯದ ಕೊಡುಗೆ ಅಪಾರವಾದುದು. ಸಾಹಿತ್ಯದ ಬಗೆಗಿನ ಆಸಕ್ತಿಯು ಮಕ್ಕಳನ್ನು ಅತಿಯಾದ ಮೊಬೈಲ್ ಬಳಕೆ ಹಾಗೂ ಮತ್ತಿತರ ಕೆಟ್ಟ ಹವ್ಯಾಸಗಳಿಂದ ಮುಕ್ತಗೊಳಿಸುತ್ತದೆ ” ಎಂದು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ನ್ಯಾಯವಾದಿ ಪರಿಮಳ ಮಹೇಶ್ ರಾವ್ ಚೇಳಾರು ಅಭಿಪ್ರಾಯಪಟ್ಟರು. ಅನಂತಾಡಿ ಶಾಲೆಯಲ್ಲಿ ಜರುಗಿದ ಕರ್ನಾಟಕ ರಾಜ್ಯ ಮಕ್ಕಳ ಪರಿಷತ್ತು ಇದರ ಬಂಟ್ಟಾಳ ತಾಲೂಕು ಘಟಕದ ಉದ್ಘಾಟನೆಸಮಾರಂಭದಲ್ಲಿ ಮಾತನಾಡಿದರು. ಸಮಾರಂಭದ ಉದ್ಘಾಟನೆಯನ್ನು 7ನೇ ತರಗತಿ ವಿದ್ಯಾರ್ಥಿ ರಚನ್ ಅಶ್ವತ್ತಡಿ ನೆರವೇರಿಸಿದರು. ಮುಖ್ಯ ಅತಿಥಿಗಳಾದ NS CDF ನ ಅಧ್ಯಕ್ಷರು ಹಾಗೂ ಜಿಲ್ಲಾ ಘಟಕರ ಗೌರವ ಸಲಹೆಗಾರರಾದ ಗಂಗಾಧರ ಗಾಂಧಿ, ತಾಲೂಕು ಘಟಕದ ಗೌರವ ಸಲಹೆಗಾರರಾದ ರಮೇಶ ಎಂ ಬಾಯಾರು , ಜಯಾನಂದ ಪೆರಾಜೆ ಹಾಗೂ ಬಾಲಕೃಷ್ಣ ಕಾರಂತ್ ಅಳಿಕೆ , ಮುಖ್ಯ ಶಿಕ್ಷಕರಾದ ಜಯಂತಿ , ಎಸ್. ಡಿ .ಎಂ . ಸಿ ಅಧ್ಯಕ್ಷರಾದ ವಿವೇಕಾನಂದ ಶೆಟ್ಟಿ ,…
ಬಂಟ್ವಾಳ: ಶನಿವಾರ ಮಧ್ಯಾಹ್ನ ನಾಪತ್ತೆಯಾಗಿದ್ದ ಬಿ.ಸಿ.ರೋಡ್ ಸಮೀಪದ ಮಿತ್ತಬೈಲು ನಿವಾಸಿ, ಶಾಲಾ ಬಾಲಕನೋರ್ವನ ಮೃತದೇಹ ಕಳ್ಳಿಗೆ ಗ್ರಾಮದ ಕುಪ್ಪಿಲ ಎಂಬಲ್ಲಿ ಕೆರೆಯಲ್ಲಿ ಪತ್ತೆಯಾದ ಘಟನೆ ಶನಿವಾರ ತಡ ರಾತ್ರಿ ನಡೆದಿರುವುದಾಗಿ ವರದಿಯಾಗಿದೆ. ಸ್ಥಳೀಯ ನಿವಾಸಿ ಅಬ್ದುಲ್ ರಝಾಕ್ ಎಂಬವರ ಪುತ್ರ, ಬಿ.ಸಿ.ರೋಡಿನ ಖಾಸಗಿ ಆಂಗ್ಲ ಮಾಧ್ಯಮ ಶಾಲಾ 8ನೇ ತರಗತಿ ವಿದ್ಯಾರ್ಥಿ ಅಝೀಂ (13) ಮೃತ ಬಾಲಕ ಎಂದು ಗುರುತಿಸಲಾಗಿದೆ. ಶನಿವಾರ ಮಧ್ಯಾಹ್ನದ ವೇಳೆಗೆ ಪಾಣೆಮಂಗಳೂರು ಅಜ್ಜಿ ಮನೆಗೆ ಬಂದಿದ್ದ ಬಾಲಕ ಅಲ್ಲಿ ತನ್ನ ಸ್ನೇಹಿತರೊಂದಿಗೆ ಇದ್ದುದನ್ನು ಆ ಪರಿಸರದ ಮಂದಿ ಗಮನಿಸಿದ್ದರು, ಆದರೆ ಮಧ್ಯಾಹ್ನದ ಬಳಿಕ ಬಾಲಕ ಹಠಾತ್ ಕಾಣೆಯಾಗಿದ್ದ. ಬಾಲಕನನ್ನು ಸಂಪರ್ಕಿಸಲು ಮನೆಮಂದಿ ಸಾಕಷ್ಟು ಪ್ರಯತ್ನಿಸಿದ್ದರೂ ಸಫಲರಾಗಿರಲಿಲ್ಲ ಎನ್ನಲಾಗಿದೆ. ಬಾಲಕನ ಕೈಯಲ್ಲಿದ್ದ ಮೊಬೈಲ್ ರಿಂಗಿಣಿಸುತ್ತಿದ್ದರೂ ಕರೆ ಸ್ವೀಕಾರ ಆಗದ ಹಿನ್ನಲೆಯಲ್ಲಿ ಆತಂಕಗೊಂಡ ಮನೆ ಮಂದಿ ಬಂಟ್ವಾಳ ನಗರ ಠಾಣೆಯಲ್ಲಿ ನಾಪತ್ತೆಯಾದ ಬಗ್ಗೆ ದೂರು ದಾಖಲಿಸಿದ್ದರು. Advertisement ಪೊಲೀಸರು ಬಾಲಕನ ಕೈಯಲ್ಲಿದ್ದ ಮೊಬೈಲ್ ಟ್ರೇಸ್ ಮಾಡಿದಾಗ ದೊರೆತ ಮಾಹಿತಿಯಂತೆ ಕಳ್ಳಿಗೆ…
ಬಂಟ್ವಾಳ: ಬಿ.ಸಿ.ರೋಡಿನ ಮುಖ್ಯವೃತ್ತದ ಬಳಿ ಇಳಿಜಾರು ಪ್ರದೇಶದ ಕಸದ ರಾಶಿಯಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ನಂದಿಸಿ ಮೂರು ದಿನವಾದರೂ ಇನ್ನೂ ಆ ಸ್ಥಳದಲ್ಲಿ ಹೊಗೆಯಾಡುತ್ತಿದೆ. ಗುರುವಾರ ಬೆಂಕಿ ಕಾಣಿಸಿಕೊಂಡ ಬಳಿಕ ಸುಮಾರು ೩ ಗಂಟೆಗಳ ಕಾಲ ಅಗ್ನಿಶಾಮಕ ದಳ ನೀರು ಸಿಂಪಡಿಸಿ ಬೆಂಕಿ ನಂದಿಸಿದರೂ ಶನಿವಾರ ಸಂಜೆಯ ವೇಳೆಗೂ ಹೊಗೆ ಮೇಲೆಳುತ್ತಿತ್ತು.ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಬಳಿ, ರೈಲ್ವೇ ನಿಲ್ದಾಣದ ಬಳಿ ಗುರುವಾರ ಮಧ್ಯಾಹ್ನದ ವೇಳೆಗೆ ಇಳಿಜಾರು ಗುಂಡಿಯ ಕಸದ ರಾಶಿಯಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕದ ಸ್ಥಿತಿ ನಿರ್ಮಾಣಗೊಂಡಿತ್ತು. ಬೆಂಕಿಯಿಂದ ಹೊರ ಚಿಮ್ಮಿದ ದಟ್ಟ ಹೊಗೆ ನಗರವಿಡಿ ವ್ಯಾಪಿಸಿ ಕೊಂಡಿತ್ತು. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ನಿರಂತರ ಕಾರ್ಯಚರಣೆ ನಡೆಸಿ ಬೆಂಕಿ ನಂದಿಸಿದೆ. ಆದರೆ ಘಟನೆ ನಡೆದು ಮೂರು ದಿನವಾದರೂ ಅದೇ ಸ್ಥಳದಿಂದ ಮತ್ತೆ ಹೊಗೆಯಾಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಮರಗಳ ಮಾರಣ ಹೋಮ:ಈ ಹಿಂದೆ ಈ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡು ಸ್ಥಳದಲ್ಲಿದ್ದ ಅನೇಕ ಮರಗಳು ಆಹುತ್ತಿಯಾಗಿತ್ತು. ಈ ಭಾರಿಯೂ ಹಲವು ಮರಗಳು ಬೆಂಕಿಯ…








