Author: admin
ಬಂಟ್ವಾಳ: ಮತದಾರರು ನೀಡಿದ ಸಹಕಾರದಿಂದಾಗಿ ಬಂಟ್ವಾಳ ಕ್ಷೇತ್ರದಲ್ಲಿ ಅಭೂತಪೂರ್ವವಾದ ಅಭಿವೃದ್ಧಿ ಹಾಗೂ ನವಬಂಟ್ವಾಳವಾಗಿ ಮಾರ್ಪಾಡು ಮಾಡಲು ಸಾಧ್ಯವಾಯಿತು ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.ಅವರು ಇರ್ವತ್ತೂರು ಶಕ್ತಿ ಕೇಂದ್ರದ ಶುಭಕರ ಶೆಟ್ಟಿ ಅವರ ಮನೆಯಲ್ಲಿ ನಡೆದ ಪ್ರಮುಖ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.ಮುಂದಿನ ದಿನಗಳಲ್ಲಿ ಬಂಟ್ವಾಳ ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ಧಿಯ ಜೊತೆಗೆ ಕಾರ್ಯಕರ್ತರ ,ಮತದಾರರ ಬೇಡಿಕೆಯನ್ನು ಪ್ರಾಮಾಣಿಕವಾಗಿ ಈಡೇರಿಸುವ ಕೆಲಸ ಮಾಡುತ್ತೇನೆ, ನಿರಂತರವಾಗಿ ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರಕ್ಕೆ ಶಕ್ತಿ ಮೀರಿ ಪ್ರಯತ್ನ ಮಾಡುತ್ತೇನೆ ಎಂದು ಅವರು ತಿಳಿಸಿದರು. Advertisement ಮುಂದಿನ ಚುನಾವಣೆಯಲ್ಲಿ ಗೆಲುವು ಸಾಧಿಸಲು ಬೇಕಾಗುವ ಮಾನಸಿಕ ಶಕ್ತಿಯನ್ನು ಕಾರ್ಯಕರ್ತರು ಪ್ರದರ್ಶನ ಮಾಡಬೇಕು ಎಂದು ತಿಳಿಸಿದರು. ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಮಾತನಾಡಿ, ಶಾಸಕನಾಗಿ ಯಾವ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಬಹುದು ಎಂಬುದಕ್ಕೆ ರಾಜ್ಯದಲ್ಲಿ ರಾಜೇಶ್ ನಾಯ್ಕ್ ಅವರು ಮಾದರಿಯಾಗಿದ್ದಾರೆ.ಮುಂದಿನ 30 ದಿನಗಳು ಚುನಾವಣಾ ಕಾರ್ಯಕ್ಕೆ ಅತ್ಯಂತ ಪ್ರಾಮುಖ್ಯತೆ ಪಡೆದಿದ್ದು, ಕಾರ್ಯಕರ್ತರು ಅವಿರತವಾಗಿ ಪಕ್ಷದ…
ಬಂಟ್ವಾಳ: ಸಜೀಪ ಮಾಗಣೆಗೊಳಪಟ್ಟ ಮಿತ್ತಮಜಲು ಕ್ಷೇತ್ರದ ಬಿಸು ಜಾತ್ರೆ ಪ್ರಯುಕ್ತಶನಿವಾರದಂದು ಪೂರ್ವಸಂಪ್ರದಾಯದಂತೆ ಕೋಳಿಕುಂಟ ನೆರವೇರಿತು. ಈ ಸಂದರ್ಭ ಸಜೀಪ ಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್, ಪಾಲೆ ಮಂಟಪ ಸಂಸಾರ, ಗಡಿ ಪ್ರಧಾನರಾದ ಕೋಚುಭಂಡಾರಿ ಯಾನೆ ಮುಂಡಪ್ಪ ಶೆಟ್ಟಿ, ಅನುಪ್ ಆಳ್ವ, ದೇವಿಪ್ರಸಾದ್ ಪೂಂಜ, ಶಿವರಾಮ ಭಂಡಾರಿ, ಬಿಜಂದಾರ್ ಗುತ್ತು ಯಶೋಧರ ರೈ, ಎಸ್.ಶ್ರೀಕಾಂತ ಶೆಟ್ಟಿ, ಸಾನದ ಮನೆಯ ಕೋಚು ಪೂಜಾರಿ ಯಾನೆ ಶಂಕರ ಪೂಜಾರಿ, ಕುಂಞ ಪೂಜಾರಿ ಯಾನೆ ದಯಾನಂದ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು. ಮಿತ್ತಮಜಲು ಕ್ಷೇತ್ರದ ಬಿಸು ಜಾತ್ರೆಯ ಪ್ರಯುಕ್ತ ಎ. 12ರಿಂದ ಎ.14ರವರೆಗೆ ಮೂರು ದಿನಗಳ ಚೆಂಡು ನಡೆಯಲಿದೆ, ಎ.14ರಂದು ಶುಕ್ರವಾರ ರಾತ್ರಿ ಒಲಸರಿ ನಡೆದು ದೈವದ ಮೆಚ್ಚಿ, ಎ.15ರಂದು ರಾತ್ರಿ 10ಕ್ಕೆ ಕೆರೆನೇಮ, ಎ. 16ರಂದು ಬೆಳಿಗ್ಗೆ ಗಂಟೆ 9ಕ್ಕೆ ಕೆರೆನೇಮ ಬಳಿಕ ಉಡುಕು ಬಲಿ ಹಾಗೂ ಮಧ್ಯಾಹ್ನ 1ರಿಂದ ಅನ್ನಸಂತರ್ಪಣೆ ನಡೆಯಲಿದೆ. ಎ. 7ರಂದು ಪರಿವಾರ ದೈವದ ನೇಮೋತ್ಸವದ ಬಳಿಕ ಭಂಡಾರ ಇಳಿಯಲಿದೆ.
ಬಂಟ್ವಾಳ: ಇಲ್ಲಿನ ಕೊಡಂಗೆ ನಿವಾಸಿ ಸದಾಶಿವ ಆಚಾರ್ಯ (77) ಅವರು ಶುಕ್ರವಾರ ತಡರಾತ್ರಿ ಬಿ.ಸಿ.ರೋಡಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನಿಧನರಾದರು.ಮೃತರು ಪತ್ನಿ 4ಗಂಡು ಹಾಗೂ 5ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಪುತ್ತೂರಿನ ಸಂಬಂಧಿಯ ಮನೆಯಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸ್ಸು ಮನೆಗೆ ಬರುತ್ತಿದ್ದ ವೇಳೆ ಅವರು ಪ್ರಯಾಣಿಸುತ್ತಿದ್ದ ಕಾರು ಬಿ.ಸಿ.ರೋಡಿನ ಪದ್ಮ ಪೆಟ್ರೋಲ್ ಪಂಪ್ ಬಳಿ ಆಕಸ್ಮಿಕವಾಗಿ ಸ್ಕಿಡ್ ಆಗಿ ಬಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರಿಗೆ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಮಂಗಳೂರಿನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು. ಕುತ್ತಿಗೆ ಭಾಗಕ್ಕೆ ಗಂಭೀರ ಗಾಯವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇವರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪುತ್ರ, ಮೊಮ್ಮಗ ಸಹಿತ ಇತರ 3 ಮಂದಿ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಮೃತರು ಮರದ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಬಂಟ್ವಾಳ: ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದ್ದು, ಬಂಟ್ವಾಳ ಕ್ಷೇತ್ರದಲ್ಲಿಯೂ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಬೇಕು,ಹಾಗಾಗಿ ಕ್ಷೇತ್ರದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮತದಾರರಿಗೆ ಕಾರ್ಯಕರ್ತರು ತಿಳಿಸ ಬೇಕು ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ಕಲಾಯಿ ಪ್ರವೀಣ್ ನಾಯಕ್ ಅವರ ಮನೆಯಲ್ಲಿ ನಡೆದ ಕಾವಳಮೂಡೂರು ಶಕ್ತಿ ಕೇಂದ್ರದ ಪ್ರಮುಖ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.ಸುಳ್ಳು ಭರವಸೆಗಳ ಮೂಲಕ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಮುಂದಾಗುತ್ತಿದ್ದು, ಜನರು ಎಚ್ಚರಿಕೆಯಿಂದ ಸುಳ್ಳು ಮಾತಿಗೆ ಮರುಳಾಗದೆ ದೇಶದ ಹಿತ ಕಾಯುವ ಬಿಜೆಪಿಗೆ ಅಧಿಕಾರ ನೀಡಬೇಕು ಎಂದು ತಿಳಿಸಿದರು.ವಿರೋಧ ಪಕ್ಷದ ಆಡಳಿತ ಅವಧಿಯಲ್ಲಿ ಎರಡು ವರ್ಷಗಳ ಕಾಲ ಶಾಸಕನಾಗಿ ಬಳಿಕ ಕೊರೊನಾ ಸಂದರ್ಭದಲ್ಲಿ ಕಷ್ಟಕರ ಪರಿಸ್ಥಿತಿಯ ಬಳಿಕ ಸಿಕ್ಕಿದ ಎರಡು ವರ್ಷಗಳಲ್ಲಿ ಎಣಿಸದ ರೀತಿಯಲ್ಲಿ ಕ್ಷೇತ್ರದ ಜನತೆಯ ಆಶ್ರೀರ್ವಾದದ ಮೂಲಕ ಅಭಿವೃದ್ಧಿ ಮಾಡಿದ್ದೇನೆ ಎಂದರು.ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ ಮಾತನಾಡಿ, ಬಂಟ್ವಾಳ ಕ್ಷೇತ್ರದಲ್ಲಿ ಇನ್ನಷ್ಟು ಧಾರ್ಮಿಕ ಕ್ಷೇತ್ರಗಳ ಸಹಿತ ಸರ್ವ ರೀತಿಯ ಅಭಿವೃದ್ಧಿಗೆ…
ಬಂಟ್ವಾಳ: ದೇವರ ಆಶೀರ್ವಾದ, ಮತದಾರರು, ಕಾರ್ಯಕರ್ತರು ನೀಡಿದ ಸಹಕಾರದಿಂದ ಬಂಟ್ವಾಳದಲ್ಲಿ ಅಭೂತಪೂರ್ವ ಅಭಿವೃದ್ಧಿ ಸಾಧಿಸಲು ಸಾಧ್ಯವಾಯಿತು ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಿಳಿಸಿದರು.ಸರಪಾಡಿ ಶಕ್ತಿ ಕೇಂದ್ರದಲ್ಲಿ ನಡೆದ ಪ್ರಥಮ ಬಿಜೆಪಿ ಪ್ರಮುಖ ಕಾರ್ಯಕರ್ತರ ಚುನಾವಣಾ ಸಭೆಯಲ್ಲಿ ಮಾತನಾಡಿದರು. ಮತದಾರರು ನೀಡಿದ ಪ್ರತಿಯೊಂದು ಮತಕ್ಕೆ ಯಾವುದೇ ಚ್ಯುತಿ ಬಾರದಂತೆ ಕಳೆದ ಐದು ಪೂರೈಸಿದ್ದೇನೆ. ಅಭಿವೃದ್ಧಿ ಜೊತೆಗೆ ಶಾಂತಿಯ ಬಂಟ್ವಾಳವಾಗಿ ಮಾಡಲು ಅವಕಾಶ ನೀಡಿದ ತಾಲೂಕಿನ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸಿದ ಅವರು ಮುಂದಿನ ಅವಧಿಯಲ್ಲಿ ಮತ್ತೆ ಶಾಂತಿಯ ಬಂಟ್ವಾಳವಾಗಿ ಉಳಿಯಲು ಬಿಜೆಪಿ ಅಧಿಕಾರಕ್ಕೆ ಬರಬೇಕು, ಅದಕ್ಕಾಗಿ ಕಾರ್ಯಕರ್ತರು ಜತೆಯಾಗಿ ಕೆಲಸ ಮಾಡಿ ಎಂದುಕರೆ ನೀಡಿದರು. ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ ಮಾತನಾಡಿ ಕಳೆದ ಐದು ವರ್ಷಗಳಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಪ್ರತಿ ಮನೆಗೆ ತಲುಪಿಸುವ ಕೆಲಸ ಕಾರ್ಯಕರ್ತರು ಮಾಡಬೇಕು. ಶಾಸಕ ರಾಜೇಶ್ ನಾಕ್ ಅವರ ವ್ಯಕ್ತಿತ್ವವನ್ನು ಹಾಗೂ ಮಾನವೀಯ ಗುಣಗಳ ಬಗ್ಗೆ ಮತದಾರರಿಗೆ ತಿಳಿಸುವ ಅಗತ್ಯವಿದೆ. ಗೊಂದಲದ ಗೂಡಾಗಿದ್ದ ಬಂಟ್ವಾಳವನ್ನು…
ಬಂಟ್ವಾಳ: ಜಿಲ್ಲೆಯ ಕಾರಣಿಕ ದೈವ ಕ್ಷೇತ್ರ ಸಜೀಪಮೂಡ ಗ್ರಾಮದ ಪಣೋಲಿಬೈಲುವಿನಲ್ಲಿ ಎ. 8ರಿಂದ ಎ. 17ರವರೆಗೆ ಅಗೇಲು ಹಾಗೂ ಕೋಲ ಸೇವೆ ಇರುವುದಿಲ್ಲ. ಸಜೀಪಮಾಗಣೆಯ ಮಿತ್ತಮಜಲು ಕ್ಷೇತ್ರದ ವಾರ್ಷಿಕ ವಿಷು ಜಾತ್ರೆಯ ಪ್ರಯುಕ್ತ ಈ ದಿನದಲ್ಲಿ ಅಗೇಲು ಹಾಗೂ ಕೋಲ ಸೇವೆ ಇರುವುದಿಲ್ಲ, ಎ. 18ರಿಂದ ಸೇವೆಗಳು ಎಂದಿನಂತೆ ಮುಂದುವರೆಯುವುದು ಎಂದು ಪಣೋಲಿಬೈಲು ದೈವಸ್ಥಾನದ ಪ್ರಕಟಣೆ ತಿಳಿಸಿದೆ. —
ಪಾಣೆಮಂಗಳೂರು ಮತ್ತು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಘಟಕಗಳ ನೇತೃತ್ವದಲ್ಲಿ ಐಕ್ಯತಾ ಸಮಾವೇಶ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಭಾನುವಾರ ಏಪ್ರಿಲ್ 9ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ.ಈ ವಿಷಯವನ್ನು ಪುರಸಭಾ ಸದಸ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜನಾರ್ದನ ಚಂಡ್ತಿಮಾರ್ ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಶುಕ್ರವಾರ ಕರೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ ಅವರು ದಿಕ್ಸೂಚಿ ಭಾಷಣ ಮಾಡಲಿದ್ದು, ಕಾರ್ಯಕ್ರಮವನ್ನು ವಿಧಾನಪರಿಷತ್ತು ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಮಾಜಿ ಸಚಿವ ಬಿ.ರಮಾನಾಥ ರೈ ವಹಿಸಲಿದ್ದಾರೆ ಎಂದರು.ಭವಿಷ್ಯತ್ತಿನ ಬಂಟ್ವಾಳಕ್ಕಾಗಿ ಈ ಸಮಾವೇಶವನ್ನು ಏರ್ಪಡಿಸಲಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರಕಾರಗಳು ಪರಿಶಿಷ್ಟರ ಬದುಕಲ್ಲಿ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದರು. ರಾಜ್ಯದ ಬಿಜೆಪಿ ಸರಕಾರದಿಂದ ಪರಿಶಿಷ್ಟ ಸಮುದಾಯದ ಜನಸಾಮಾನ್ಯರಿಗೆ, ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದ್ದು, ಮೀಸಲಾತಿ ಎಂಬುದು ಪರಿಶಿಷ್ಟರ ಭಿಕ್ಷೆಯಲ್ಲ, ಅದು ಹಕ್ಕು ಎಂಬ ನೆಲೆಯಲ್ಲಿ ಈ ಸಮಾವೇಶ ಮಾಡುತ್ತಿದ್ದೇವೆ. ರಾಜ್ಯ ಸರಕಾರ ಜಾರಿಗೆ…
ಬಂಟ್ಚಾಳ: ತಾಲೂಕಿನಾದ್ಯಂತ ಮನೆಮಾತಾಗಿರುವ ಪ್ರತಿಷ್ಠಿತ ಭದ್ರ ಗ್ಯಾಸ್ ಏಜೆನ್ಸಿ ಸಂಸ್ಥೆಯ ವಿವಿಧ ಹುದ್ದೆಗಳಿಗೆ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.ಸಂಸ್ಥೆಯ ನೂತನ ಮಳಿಗೆಯೊಂದು ಬಂಟ್ಚಾಳದಲ್ಲಿ ಆರಂಭಗೊಳ್ಳಲಿದ್ದು ಉದ್ಯೋಗಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದಾಗಿದೆ.ಸೇಲ್ಸ್ ಎಕ್ಸಿಕ್ಯುಟಿವ್ (ಪುರುಷರು)-5, ಸೇಲ್ಸ್ ಎಕ್ಸಿಕ್ಯುಟಿವ್ (ಮಹಿಳೆಯರು)-5, ಅಕೌಂಟೆಂಟ್-1, ತ್ರಿಚಕ್ರ ವಾಹನ ಚಾಲಕರು-2, ಹುದ್ದೆಗಳಿದ್ದು ಆಸಕ್ತರು ಭದ್ರ ಹೋಂ ಅಪ್ಲೈಯೆನ್ಸಸ್, ಅಗ್ನಿಶಾಮಕ ಠಾಣೆಯ ಮುಂಭಾಗ, ಬಸ್ತಿಪಡ್ಪು, ಬಂಟ್ವಾಳ ಇಲ್ಲಿಗೆ ಮುಖತಃ ಅರ್ಜಿ ಸಲ್ಲಿಸ ಬಹುದಾಗಿದೆ.ಎ.10 ಅರ್ಜಿ ಸಲ್ಲಿಸಲು ಕೊನೆಯ ದಿನ. ಸೇಲ್ಸ್ ಎಕ್ಸಿಕ್ಯುಟಿವ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಸೂಪರ್ ಮಾರ್ಕೆಟ್ ಅಥವಾ ಮಾರ್ಕೆಟಿಂಗ್ ಕ್ಷೆತ್ರದಲ್ಲಿ ಅನುಭವ ಹೊಂದಿದವರಿಗೆ ಪ್ರಥಮ ಆದ್ಯತೆ, ಬಂಟ್ವಾಳ ತಾಲೂಕಿನ ಉದ್ಯೋಗಾಕ್ಷಿಗಳಿಗೆ ಮೊದಲ ಪ್ರಾಶಸ್ತ್ಯ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಬಂಟ್ವಾಳ: ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಕಟೀಲು ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಬಯಲಾಟ ಸಮಿತಿ ಇದರ ಆಶ್ರಯದಲ್ಲಿ ಯಕ್ಷಗಾನ ಬಯಲಾಟದ ಪ್ರಯುಕ್ತ ಪ್ರಥಮ ವರ್ಷದ ಶ್ರೀ ಕ್ಷೇತ್ರ ಕಟೀಲಿಗೆ ಅಮ್ಮನಡೆ ನಮ್ಮ ನಡೆ ಪಾದಾಯಾತ್ರೆಯು ನಡೆಯಲಿದೆ.ಎ.8ರಂದು ಶನಿವಾರ ಸಂಜೆ 5.30ಕ್ಕೆ ಪುಂಚೋಡಿ ನಾಗಬನದಿಂದ ಪಾದಯಾತ್ರೆ ಆರಂಭಗೊಳ್ಳಲಿದ್ದು ಮುಂದಿನ 5ವರ್ಷದವರೆಗ ಪ್ರತೀವರ್ಷ ಪಾದಯಾತ್ರೆ ನಡೆಯಲಿದೆ ಎಂದು ಸೇವಾ ಸಮಿತಿಯ ಅಧ್ಯಕ್ಷ ಸುದರ್ಶನ ಜೈನ್ ಪಂಜಿಕಲ್ಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಬಂಟ್ವಾಳ: ವಿಧಾನ ಸಭಾ ಚುನಾವಣೆ 2023 ಕರ್ತವ್ಯಕ್ಕೆ ನಿಯೋಜಿಸಿರುವ 205-ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆ ಅಧಿಕಾರಿ (ಪ್ರಿಸೆಡಂಗ್ ಆಫೀಸರ್) ಮತ್ತು ಸಹಾಯಕ ಮತಗಟ್ಟೆ ಅಧಿಕಾರಿ (ಅಸಿಸ್ಟೆಂಟ್ ಪ್ರಿಸೈಡಿಂಗ್ ಆಫೀಸರ್) ಗಳಿಗೆ ಎ.9 ರಂದು ಬಿ.ಮೂಡಾ ಗ್ರಾಮದ ಮೊಡಂಕಾಪು ಇನ್ಸೆಂಟ್ ಜೀಸಸ್ ಆಂಗ್ಲ ಮತ್ತು ಕನ್ನಡ ಮಾಧ್ಯಮ ಶಾಲೆಯಲ್ಲಿ ತರಬೇತಿಗೆ ಹಾಜರಾಗಲು ತಿಳಿಸಲಾಗಿತ್ತು. ಆದರೆ ಪದವಿ ಪೂರ್ವ ಪರೀಕ್ಷೆಯ ಮೌಲ್ಯಮಾಪನ ಹಾಗೂ ಎಸ್.ಎಸ್.ಎಲ್.ಸಿ. ಪರೀಕ್ಷೆಗಳು ನಡೆಯುತ್ತಿರುವುದರಿಂದ ಹಲವಾರು ಮತಗಟ್ಟೆ ಅಧಿಕಾರಿಗಳಿಗೆ ತರಬೇತಿಗೆ ಹಾಜರಾಗಲು ಅಸಾಧ್ಯವಾಗಿರುತ್ತದೆ ಎಂದು ತಿಳಿದುಬಂದಿರುವುದರಿಂದ ಈಗಾಗಲೇ ನಿಗದಿಪಡಿಸಲಾದ ತರಬೇತಿಯನ್ನು ಎ.16 ಭಾನುವಾರ ಬೆಳಗ್ಗೆ 9 ಗಂಟೆಗೆ ಮುಂದೂಡಲಾಗಿರುತ್ತದೆ. ತರಬೇತಿಗೆ ನಿಯೋಜನೆಗೊಂಡ ಎಲ್ಲರೂ ಈಗಾಗಲೇ ತಿಳಿಸಿರುವ ತರಬೇತಿ ಕೇಂದ್ರದಲ್ಲಿ ಕಡ್ಡಾಯವಾಗಿ ತರಬೇತಿಗೆ ಹಾಜರಾಗಬೇಕು ಎಂದು ಚುನಾವಣಾಧಿಕಾರಿ ಅಭಿದ್ ಗದ್ಯಾಲ್ ತಿಳಿಸಿದ್ದಾರೆ.








