Author: admin

ಬಂಟ್ವಾಳ: ಬ್ಯಾಂಕ್ ಆಫ್ ಬರೋಡ ಮುಲ್ಕಿ ಶಾಖೆಯ ಸೀನಿಯರ್ ಮ್ಯಾನೇಜರ್ ಪ್ರಣಾಮ್ ಕುಮಾರ್ ಚೀಪ್ ಮ್ಯಾನೇಜರ್ ಆಗಿ ಬಡ್ತಿಗೊಂಡಿದ್ದಾರೆ. ವಿಜಯ ಬ್ಯಾಂಕ್ ಸೋಮರ ಪೇಟೆ ಬ್ರಾಂಚ್ ನಲ್ಲಿ ಸಹಾಯಕ ಪ್ರಬಂಧಕ ಹುದ್ದೆಯಲ್ಲಿ ವೃತ್ತಿಜೀವನ ಆರಂಭಿಸಿದ ಬಳಿಕ ಮಡಿಕೇರಿ ಬ್ರಾಂಚ್ ಗೆ ವರ್ಗಾವಣೆಗೊಂಡು ಅಲ್ಲಿ ಕರ್ತವ್ಯ ನಿರ್ವಹಿಸಿ ಭಡ್ತಿ ಪಡೆದು ಬಂಟ್ವಾಳ ತಾಲೂಕಿನ ಸರಪಾಡಿ ವಿಜಯ ಬ್ಯಾಂಕಿನ ಬ್ರಾಂಚ್ ಮೆನೇಜರ್ ಆಗಿ ಅಧಿಕಾರ ಸ್ವೀಕರಿಸಿದರು. ಬಳಿಕ ಕಲ್ಲಡ್ಕ ವಿಜಯ ಬ್ಯಾಂಕಿನ ಮ್ಯಾನೇಜರ್ ಆಗಿ ವರ್ಗಾವಣೆಗೊಂಡರು ಅದೇ ಸಂದರ್ಭದಲ್ಲಿ ಕೇಂದ್ರ ಸರಕಾರದ ಆದೇಶದಂತೆ ವಿಜಯ ಬ್ಯಾಂಕ್ , ಬ್ಯಾಂಕ್ ಆಫ್ ಬರೋಡ ಜೊತೆ ಲೀನವಾಯಿತ್ತು ಇವರ ಕಾರ್ಯದಕ್ಷತೆಯನ್ನು ಪರಿಗಣಿಸಿದ ಬ್ಯಾಂಕ್ ಆಫ್ ಬರೋಡ ಸೀನಿಯರ್ ಮ್ಯಾನೇಜರ್ ಹುದ್ದೆಗೆ ಬಡ್ತಿ ನೀಡಿ ಕಲ್ಲಡ್ಕ ಬ್ಯಾಂಕಿನಲ್ಲಿ ಸೀನಿಯರ್ ಮ್ಯಾನೇಜರ್ ಆಗಿ ಕರ್ತವ್ಯದಲ್ಲಿ ಮುಂದುವರಿಯಲು ಆದೇಶಿಸಿತು. ಬಳಿಕ ಮಂಗಳೂರು ತಾಲೂಕಿನ ಮುಲ್ಕಿ ಬ್ಯಾಂಕ್ ಆಫ್ ಬರೋಡ ಶಾಖೆಗೆ ಸೀನಿಯರ್ ಮ್ಯಾನೇಜರ್ ಆಗಿ ವರ್ಗಾವಣೆಗೊಂಡರು ಪ್ರಣಾಮ್ ಕುಮಾರ್ ರವರ ಬ್ಯಾಂಕಿನ…

Read More

ಪುತ್ತೂರು: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಕಬಕ ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಪುತ್ತೂರು ಘಟಕ ಇವರ ಸಂಯೋಜನೆಯಲ್ಲಿ ಹಾಗೂ ಮಿತ್ರಂಪಾಡಿ ಜಯರಾಮ್ ರೈ ಅವರ ಮಹಾಪೋಷಕತ್ವದಲ್ಲಿ ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಎಂಬ ಘೋಷವಾಕ್ಯದಲ್ಲಿ ನಡೆಯುವ ಗ್ರಾಮ ಗ್ರಾಮದಲ್ಲೂ ಸಾಹಿತ್ಯ ಸಂಭ್ರಮದ ಐದನೇ ಸರಣಿ ಕಾರ್ಯಕ್ರಮವು ಕಬಕ ಗ್ರಾಮದ ಗೌಡ ಸಮುದಾಯಭವನ ಮುರದಲ್ಲಿ ನಡೆಯಿತು. ಸ್ಥಳೀಯ ಸಾಧಕರಿಗೆ ಸನ್ಮಾನ:ಸಾಧಕರ ಅಭಿನಂದನಾ ಕಾರ್ಯಕ್ರಮದಲ್ಲಿ ಶಾಸನ ಅಧ್ಯಯನಕಾರರಾದ ಶ್ರೀ ಉಮಾನಾಥ್ ಶೆಣೈ, ಸಾಹಿತಿ ಶಿಕ್ಷಕಿ ಶಾಂತಾ ಪುತ್ತೂರು, ಸಂಗೀತ ಕಲಾವಿದರಾದ ಮಿಥುನ್ ರಾಜ್ ವಿದ್ಯಾಪುರ, ಡಾ.ಶ್ರೀಶಭಟ್ ಸ್ಥಾಪಕಾಧ್ಯಕ್ಷರು ಆಕಾಂಕ್ಷಾ ಚಾರಿಟೇಬಲ್ ಟ್ರಸ್ಟ್ (ರಿ), ಶಿಕ್ಷಣ ಕ್ಷೇತ್ರದ ಸಾಧನೆಗಾಗಿ ಶ್ರೀಮತಿ ಪ್ರೇಮಲತಾ ಎಂ,ಶ್ರೀಮತಿ ಸುಲೋಚನಾ ಕೆ ರವರನ್ನು ಸ್ಥಳೀಯ ಸಾಧಕರ ನೆಲೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರಾದ ಪುತ್ತೂರು ಉಮೇಶ್ ನಾಯಕ್ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ…

Read More

ಬಂಟ್ವಾಳ: ಜಿಲ್ಲೆಯಲ್ಲಿ ಹಿಂದೂ ಸಂಘಟನೆಗಾಗಿ ಜೀವನ ಮೀಸಲಿಟ್ಟ ಯುವ ನಾಯಕ, ಶ್ರೀ ನಾರಾಯಣ ಗುರು ವಿಚಾರ ವೇದಿಕೆ ರಾಜ್ಯ ಘಟಕ ಅಧ್ಯಕ್ಷ ಸತ್ಯಜಿತ್ ಸುರತ್ಕಲ್ ಇವರಿಗೆ ಶುಲ್ಕ ರಹಿತ ಭದ್ರತಾ ಅಂಗರಕ್ಷಕ (ಗನ್ ಮೆನ್) ಸೌಲಭ್ಯ ಮತ್ತೆ ನೀಡಬೇಕು ಎಂದು ಬಂಟ್ವಾಳ ತಾಲೂಕು ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಆಗ್ರಹಿಸಿದೆ.ಇಲ್ಲಿನ ಬಿ.ಸಿ.ರೋಡು ಆಡಳಿತ ಸೌಧದಲ್ಲಿ ಬಂಟ್ವಾಳ ತಾಲೂಕು ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಅಧ್ಯಕ್ಷ ನವೀನ್ ಕೋಟ್ಯಾನ್ ನೇತೃತ್ವದ ನಿಯೋಗ ಬುಧವಾರ ತೆರಳಿ ಉಪ ತಹಶೀಲ್ದಾರ್ ನರೇಂದ್ರನಾಥ್ ಇವರ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಜಿಲ್ಲೆಯಲ್ಲಿ ಕೆಲವೊಂದು ಮತೀಯ ಮೂಲಭೂತವಾದಿಗಳಿಂದ ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಸತ್ಯಜಿತ್ ಸುರತ್ಕಲ್ ಇವರಿಗೆ ಕಳೆದ ೧೬ವರ್ಷಗಳಿಂದ ಸರ್ಕಾರ ಶುಲ್ಕ ರಹಿತ ಅಂಗರಕ್ಷಕ (ಗನ್ ಮೆನ್) ಸೌಲಭ್ಯ ನೀಡಿತ್ತು. ಇದೀಗ ಚುನಾವಣೆ ನೆಪದಲ್ಲಿ ಏಕಾಯೇಕಿ ಈ ಸೌಲಭ್ಯ ವಾಪಾಸು ಪಡೆದು ಶುಲ್ಕ ಪಾವತಿಸಲು ಸೂಚಿಸಿರುವುದು ಖಂಡನೀಯ. ಈ ಆದೇಶ ಕೂಡಲೇ ರದ್ದುಗೊಳಿಸಿ, ಶುಲ್ಕ…

Read More

ಬಂಟ್ವಾಳ: ಜಿಲ್ಲೆಯ ಪ್ರಸಿದ್ದ ದೇವಸ್ಥಾನ ವಾಗಿರುವ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 108 ತೆಂಗಿನ ಕಾಯಿ ಗಣಯಾಗ ಹಾಗೂ ಮೂಡಪ್ಪ ಸೇವೆ ಮಂಗಳವಾರ ರಾತ್ರಿ ವಿಜ್ರಂಭಣೆಯಿಂದ ನಡೆಯಿತು. ಬಂಟ್ವಾಳದ ಉದ್ಯಮಿ ನಾಗೇಶ್ ಸಾಲ್ಯಾನ್ ಹಾಗೂ ಪಲ್ಲವಿ ಎನ್. ಸಾಲ್ಯಾನ್ ಇವರು ಸೇವಾರ್ಥವಾಗಿ 108 ತೆಂಗಿನಕಾಯಿಯ ಗಣಯಾಗ, ಮೂಡಪ್ಪ ಸೇವೆ ಹಾಗೂ ರಂಗ ಪೂಜೆಯನ್ನು ನೆರವೇರಿಸಿದರು. ಈ ಸಂದರ್ಭ ಶ್ರೀ ದೇವರನ್ನು ಹೂವುಗಳಿಂದ‌ ವಿಶೇಷವಾಗಿ ಅಲಂಕರಿಸಲಾಗಿತ್ತು. ಅಪಾರ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ದೇವರ ದರ್ಶನ ಪಡೆದರು.

Read More

ಬಂಟ್ವಾಳ: ಕೇಂದ್ರ ಸರಕಾರದ ನಿಕ್ಷಯ ಮಿತ್ರ ಯೋಜನೆಯಡಿ ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನ ವತಿಯಿಂದ ಕ್ಷಯ ರೋಗಿಗಳಿಗೆ ಆಹಾರ ಧವಸ ಧಾನ್ಯ ವಿತರಣ ಕಾರ್ಯಕ್ರಮ ಬುಧವಾರ ಸೇವಾಂಜಲಿ ಸಭಾಗೃಹದಲ್ಲಿ ನಡೆಯಿತು.ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿಯ ವಿಧಿ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ. ಮಹಾಬಲೇಶ್ವರ ಶೆಟ್ಟಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾದಾಗ ಕ್ಷಯ ರೋಗ ಉಲ್ಭಣವಾಗುತ್ತದೆ. ಪೌಷ್ಠಿಕ ಆಹಾರಗಳು, ಧವಸ ಧಾನ್ಯಗಳನ್ನು ಸೇವೆಸುವ ಮೂಲಕ ರೋಗ ನಿಯಂತ್ರಣ ಮಾಡಿಕೊಳ್ಳಬಹುದಾಗಿದೆ ಎಂದರು. ಕ್ಷಯ ಗುಣವಾಗುವ ಕಾಯಿಲೆಯಾಗಿದ್ದು ರೋಗಿಗಳು ಯಾಔಉದೇ ಆತಂಕ ಪಡದೆ ಕೋರ್ಸ್ ಮುಗಿಯುವರೆಗೆ ಪ್ರತಿದಿನ ಮಾತ್ರೆಯನ್ನು ಸೇವಿಸಬೇಕು, ಧೂಮಪಾನ, ಮಧ್ಯಪಾನದಂತಹ ವ್ಯಸನಗಳ ದಾಸರಾದಾಗ ಮಾತ್ರ ರೋಗ ಉಲ್ಭಣಿಸುತ್ತದೆ ಎಂದು ತಿಳಿಸಿದರು. ಧೂಳು ಮೊದಲಾದ ಮಾಲಿನ್ಯದಿಂದ ಕ್ಷಯ ರೋಗಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಸರ್ಕಾರ ರೋಗ ನಿರ್ಮೂಲನೆಗಾಗಿ ಪಣ ತೊಟ್ಟಿದ್ದು ೨೦೨೫ರವೇಳೆಗೆ ದೇಶವನ್ನು ಕ್ಷಯ ಮುಕ್ತ ಭಾರತವನ್ನಾಗಿ ಮಾಡುವ ಸಂಕಲ್ಪ ತೊಟ್ಟಿದೆ ಎಂದರು.ನಿವೃತ್ತ ಪ್ರಾಧ್ಯಪಕ ಪ್ರೊ. ಅನಂತ ಪದ್ಮನಾಭ…

Read More

ಬಂಟ್ವಾಳ : ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಇಂದು ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಮಹಾವೀರ ಜಯಂತಿ ಆಚರಿಸಲಾಯಿತು.ತಹಶೀಲ್ದಾರ್ ಎಸ್.ಬಿ ಕೂಡಲಗಿ ಅವರು ದೀಪ ಪ್ರಜ್ವಲಿಸಿ ಸರ್ವಧರ್ಮ ಸಮಭಾವ ಇರುವ ನಮ್ಮ ದೇಶದಲ್ಲಿ ಅಹಿಂಸೆಯ ಮೂಲಕ ಸಮನ್ವಯತೆಯಿಂದ ಬಾಳ ಬಹುದಾಗಿದೆ ಎಂದರು.ಇದೇ ಸಂದರ್ಭದಲ್ಲಿ ಬಂಟ್ವಾಳ ಜೈನ್ ಮಿಲನ್ ಅಧ್ಯಕ್ಷ ದೀಪಕ್ ಕುಮಾರ್ ಅವರು ಮಾತನಾಡಿ ಬದುಕು, ಬದುಕಲು ಬಿಡು ಎಂಬ ಸಂದೇಶವನ್ನು ವಿಶ್ವಕ್ಕೆ ಸಾರಿದ ಭಗವಾನ್ ಮಹಾವೀರರ ಸಂದೇಶಗಳು ಪ್ರಸ್ತುತ. ಅಹಿಂಸೆಯಿಂದ ಸುಖ , ತ್ಯಾಗದಿಂದ ಶಾಂತಿ ಈ ಸಂದೇಶವು ಎಂದಿಗೂ ಸತ್ಯವಾಗಿರುತ್ತದೆ ಇದನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಭಾರತೀಯ ಜೈನ್ ಮಿಲನ್ ಮಂಗಳೂರು ವಲಯ ಕಾರ್ಯದರ್ಶಿ ಸುಭಾಷ್ ಚಂದ್ರ ಜೈನ್, ವಿಜಯ ಕುಮಾರಿ ಇಂದ್ರ, ಸನ್ಮತಿ ಇಂದ್ರ, ಗೀತಾ ಜಿನಚಂದ್ರ,ಚಂದನಾ ಬ್ರಿಜೇಶ್ ಬಾಳ್ತಿಲ, ಹೇಮಂತ್ ಜೈನ್, ಜಿನೇಂದ್ರ ಜೈನ್,ಅಜಿತ್ ಕುಮಾರ್, ರಾಜೇಂದ್ರ ಜೈನ್, ಪ್ರವೀಣ್ ಕುಮಾರ್, ಸುರೇಶ್ ಜೈನ್,…

Read More

ಬಂಟ್ವಾಳ: ಕೆಲಸ ಕೊಡಿಸುವುದಾಗಿ ಹೇಳಿ ಸುಮಾರು 6 ಲಕ್ಷ ರೂ ವಂಚನೆ ನಡೆಸಿದ ಪ್ರಕರಣವೊಂದು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಕಳ್ಳಿಗೆ ಗ್ರಾಮದ ಮಹಿಳೆಯೊಬ್ಬರು ಈ ಕುರಿತು ದೂರು ನೀಡಿದ್ದಾರೆ. ಮಂಗಳೂರಿನ ಸುಧೀರ್ ರಾವ್ ಎಂಬ ವ್ಯಕ್ತಿ ಮೋಸ ಮಾಡಿದ್ದಾಗಿ ಅವರು ದೂರಿನಲ್ಲಿ ತಿಳಿಸಿದ್ದಾರೆ.ದೂರು ನೀಡಿದ ಮಹಿಳೆಯ ಮಕ್ಕಳಿಗೆ ಬಲ್ಲೇರಿಯಾದಲ್ಲಿ ಕೆಲಸ ಕೊಡಿಸುವುದಾಗಿ ಬಿ.ಸಿ.ರೋಡ್ ನಲ್ಲಿ 2,83,800ರೂ ನಗದು ಮತ್ತು ಗೂಗಲ್ ಪೇ ಮೂಲಕ ವಿವಿಧ ದಿನಗಳಲ್ಲಿ ಹಣವನ್ನು ತನ್ನ ಅಕೌಂಟಿಗೆ ಹಾಕಿಸಿಕೊಂಡಿದ್ದಾನೆ. ಬಳಿಕ ದೂರು ನೀಡಿದ ಮಹಿಳೆಯ ಮಕ್ಕಳನ್ನು ಮುಂಬಯಿಗೆ ಬರಲು ಹೇಳಿ ಅಲ್ಲಿ ಮಕ್ಕಳಿಂದ ರೂ.15,600 ಹಣವನ್ನು ಪಡೆದು ಬಲ್ಲೆರಿಯಾದಲ್ಲಿ ಚಳಿಯಿರುವುದರಿಂದ ಜಾಕೆಟ್ ತೆಗೆದುಕೊಂಡು ಬರುತ್ತೇನೆಂದು ಹೇಳಿ ಹೋದವನು ವಾಪಾಸು ಬರದೇ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿರುತ್ತಾನೆ. ಸುಧೀರ್ ರಾವ್ ಎಂಬಾತನು ಒಟ್ಟು ರೂ.6,30,000 ಹಣವನ್ನು ಕೆಲಸ ಕೊಡಿಸುವುದಾಗಿ ಪಡೆದುಕೊಂಡು ಮೋಸ ಮಾಡಿರುವುದಾಗಿದೆ ಎಂದವರು ದೂರಿನಲ್ಲಿ ತಿಳಿಸಿದ್ದಾರೆ.

Read More

ಬಂಟ್ವಾಳ: ಜೇಸಿ ಜೋಡುಮಾರ್ಗ ನೇತ್ರಾವತಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಬಿ.ಸಿ.ರೋಡಿನ ಕನ್ನಡ ಭವನದಲ್ಲಿ ಚಿಣ್ಣರ ಚಿಲಿಪಿಲಿ ಮಕ್ಕಳ ಬೇಸಗೆ ಶಿಬಿರ ಆರಂಭಗೊಂಡಿತು.ರೋಟರಿ ಜಿಲ್ಲಾ ಸಹಾಯಕ ಗವರ್ನರ್ ಮಂಜುನಾಥ ಆಚಾರ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜೇಸಿ ಇಂಥ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮಕ್ಕಳ ಮನೋವಿಕಾಸಕ್ಕೆ ಪೂರಕವಾದ ಕೆಲಸ ಮಾಡುತ್ತಿದೆ ಎಂದರು.ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಸಾಪ ಗೌರವ ಪ್ರಧಾನ ಕಾರ್ಯದರ್ಶಿ ವಿ.ಸು.ಭಟ್ ಶುಭ ಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಜೇಸಿ ಅಧ್ಯಕ್ಷೆ ಗಾಯತ್ರಿ ಲೋಕೇಶ್, ಕಾರ್ಯಕ್ರಮ ಆಯೋಜನೆಯ ಉದ್ದೇಶ ವಿವರಿಸಿ, ಮೊಬೈಲ್ ನೋಡುತ್ತಲೇ ಕುಳಿತುಕೊಳ್ಳುವ ಮಕ್ಕಳು ಇಂಥ ಕಾರ್ಯಕ್ರಮಗಳಿಂದ ಹೊರಜಗತ್ತಿನ ಸಂಪರ್ಕ ಪಡೆಯಲು ಸುಲಭವಾಗುತ್ತದೆ ಎಂದರು.ಕಾರ್ಯಕ್ರಮ ಸಂಯೋಜಕಿ ದಿಶಾ ಆಚಾರ್ಯ, ಜೇಸಿ ಕಾರ್ಯದರ್ಶಿ ರಮ್ಯಾ ವಿನಾಯಕ ಉಪಸ್ಥಿತರಿದ್ದರು. ಪೂರ್ವಾಧ್ಯಕ್ಷ ಬಿ. ರಾಮಚಂದ್ರ ರಾವ್ ಸ್ವಾಗತಿಸಿದರು. ಮಹೇಶ್ ಕುಲಾಲ್ ಅವರು ನೃತ್ಯ ತರಬೇತಿ ನಡೆಸಿಕೊಟ್ಟರು. ಐದು ದಿನಗಳ ಕಾರ್ಯಕ್ರಮದಲ್ಲಿ ಚಿತ್ರಕಲೆ, ಕ್ರಾಫ್ಟ್, ಕ್ಲೇ ಆರ್ಟ್ ಮತ್ತಿತರ ತರಬೇತಿ ನೀಡಲಾಗುತ್ತದೆ.

Read More

ಬಂಟ್ವಾಳ: ರಾಜ್ಯ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಬಂಟ್ವಾಳ ಕ್ಷೇತ್ರಕ್ಕೆ ಸಂಬಂಧಿಸಿ ಚುನಾವಣಾಧಿಕಾರಿ ಕಚೇರಿಯಲ್ಲಿ ಕಂಟ್ರೋಲ್ ರೂಮ್ ತೆರೆಯಲಾಗಿದೆ. ಇದು ದಿನದ ಇಪ್ಪತ್ತನಾಲ್ಕು ತಾಸು ಕಾರ್ಯನಿರ್ವಹಿಸುತ್ತದೆ. ಕಚೇರಿ ದೂರವಾಣಿ ಸಂಖ್ಯೆ 08255-232500 ಆಗಿದ್ದು, ಸಾರ್ವಜನಿಕರಿಗೆ ಲಭ್ಯವಿರುತ್ತದೆ ಎಂದು ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More