Author: admin
ಬಂಟ್ವಾಳ. ಲೊರೆಟ್ಟೋ ಮಾತಾ ಚರ್ಚ್ನಲ್ಲಿ ಗರಿಗಳ ಭಾನುವಾರವನ್ನು ಭಕ್ತಿ, ಶ್ರದ್ಧೆಯಿಂದ ಆಚರಿಸಲಾಯಿತು. ಲೊರೆಟ್ಟೊ ಶಾಲಾ ವಠಾರದಲ್ಲಿ ಆರಂಭಗೊಂಡ ಪ್ರಾರ್ಥನಾ ವಿಧಿಯ ಮೆರವಣಿಗೆಯಲ್ಲಿ ನೂರಾರು ಭಕ್ತಾದಿಗಳು ಪಾಲ್ಗೊಂಡರು. ಚರ್ಚ್ ಧರ್ಮಗುರುಗಳಾದ ವಂ. ಫ್ರಾನ್ಸಿಸ್ ಕ್ರಾಸ್ತಾ ಪ್ರಾರ್ಥನಾ ವಿಧಿ ನೆರವೇರಿಸಿದರು. ಪ್ರಧಾನ ಧರ್ಮಗುರುಗಳಾಗಿ ವಂ. ಜೈಸನ್ ಮೊನಿಸ್ ರವರು ಪವಿತ್ರ ಬಲಿ ಪೂಜೆಯನ್ನು ಭಕ್ತಾದಿಗಳೊಂದಿಗೆ ಅರ್ಪಿಸಿದರು. ಚರ್ಚ್ ಪಾಲನಾ ಮಂಡಳಿ ಮೇಲುಸ್ತುವಾರಿ ವಹಿಸಿತ್ತು. ಮೂರು ದಿನಗಳ ಧ್ಯಾನಕೂಟವನ್ನು ಸೋಮವಾರದಿಂದ ಬುಧವಾರ ತನಕ ಸಂಜೆ ೪ ರಿಂದ ೮ ವರೆಗೆ ಶಿವಮೊಗ್ಗ ಧರ್ಮ ಪ್ರಾಂತ್ಯದ ವಂದನಿಯ ರೋಮನ್ ಪಿಂಟೊ ರವರು ನಡೆಸಿಕೊಡಲಿದ್ದಾರೆ.
ಬಂಟ್ವಾಳ: ದಕ್ಷಿಣ ಕನ್ನಡ ಗ್ಯಾರೇಜ್ ಮಾಲಕರ ಸಂಘ ಮಂಗಳೂರು ಇದರ ಬಂಟ್ವಾಳ ವಲಯದ ವಾರ್ಷಿಕ ಮಹಾಸಭೆ ಹಾಗೂ ನೂತನ ಜಿಲ್ಲಾ ಅಧ್ಯಕ್ಷರ ಭೇಟಿ ಕಾರ್ಯಕ್ರಮ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಬಜಾರ್ ಸಮೂಹ ಸಂಸ್ಥೆಗಳ ಆಡಳಿತ ಪಾಲುದಾರ ಸುಧಾಕರ್ ಆಚಾರ್ಯ ಉದ್ಘಾಟಿಸಿದರು. ಅವರು ಮಾತನಾಡಿ ನಾವು ಶಕ್ತಿಯುತರಾದಾಗ ಸಂಘಟನೆಯು ಬಲಯುತವಾಗಿರುತ್ತದೆ. ಸಂಘಟನೆಯಲ್ಲಿ ಇರುವ ಜೊತೆಗೆ ಸಮಾಜದ ಕಾರ್ಯದಲ್ಲೂ ತೊಡಗಿಸಿಕೊಳ್ಳಬೇಕಾಗಿದೆ ಎಂದರು. ಮುಖ್ಯ ಅತಿಥಿ ದ.ಕ. ಜಿಲ್ಲಾ ಗ್ಯಾರೇಜು ಮಾಲಕರ ಸಂಘದ ಚೇರ್ಮನ್ ಪುಂಡಲೀಕ ಸುವರ್ಣ ಮಾತನಾಡಿ ಎಲ್ಲಾ ವಲಯದ ಸದಸ್ಯರು ಒಗ್ಗಟ್ಟಾಗಿ ಸಂಘಟಿತರಾಗಿದ್ದಾಗ ಸಂಸ್ಥೆ ಬೆಳೆಯಲು ಸಾಧ್ಯವಿದೆ. ಬಂಟ್ವಾಳ ವಲಯ ಅತ್ಯುತ್ತಮ ಕಾರ್ಯಗಳನ್ನು ನಿರ್ವಹಿಸಿಕೊಂಡು ಬರುತ್ತಿದ್ದು ಮುಂದೆಯೂ ಇದೇ ರೀತಿ ಮುಂದುವರಿಯಲಿ ಎಂದು ಆಶಿಸಿದರು. ಬಂಟ್ವಾಳ ವಲಯದ ಅಧ್ಯಕ್ಷ ಜಗದೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ನಿಕಟಪೂರ್ವ ಜಿಲ್ಲಾಧ್ಯಕ್ಷ ದಿನೇಶ್ ಕುಮಾರ್, ಬಂಟ್ವಾಳ ವಲಯದ ನಿಕಟಪೂರ್ವಾಧ್ಯಕ್ಷ ಅಣ್ಣು ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಬೆಂಕಿ ಅವಘಡಕ್ಕೊಳಕ್ಕಾಗಿ ನಷ್ಟಕ್ಕೀಡಾದ ಕಿರಣ್ ರಾಜ್ ಅವರಿಗೆ ಸಹಾಯಧನ…
ಬಂಟ್ವಾಳ: ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ 11ನೇ ಸಾಲೆತ್ತೂರು ಶಾಖೆ ಸಾಲೆತ್ತೂರಿನ ರಥನ್ ಕಾಂಪ್ಲೆಕ್ಸ್ನಲ್ಲಿ ಭಾನುವಾರ ಶುಭಾರಂಭಗೊಂಡಿತು.ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ನೂತನ ಶಾಖೆಯನ್ನು ಉದ್ಘಾಟಿಸಿದರು. ಅವರು ಮಾತನಾಡಿ ಮೂರ್ತೆದಾರಿಕೆ ಕಡಿಮೆಯಾಗುತ್ತ ಬರುತ್ತಿದ್ದಂತೆಯೇ ಮೂರ್ತೆದಾರರ ಸಹಕಾರಿ ಸಂಘವನ್ನು ಸ್ಥಾಪನೆ ಮಾಡುವ ಮೂಲಕ ಬ್ಯಾಂಕಿಂಗ್ ಕ್ಷೇತ್ರಕ್ಕೆ ಕಾಲಿಟ್ಟ ಪರಿಣಾಮ ಇಂದು ಸಜೀಪಮುನ್ನೂರು ಮೂರ್ತೆದಾರರ ಸಹಕಾರಿ ಸಂಘದಂತಹ ಸಂಸ್ಥೆಗಳು ಉತ್ತಮ ಅರ್ಥಿಕ ಸಹಕಾರಿ ಸಂಘಗಳಾಗಿ ಮೂಡಿ ಬರಲು ಸಾಧ್ಯವಾಘಿದೆ. ರಾಷ್ಟ್ರೀಕೃತ ಬ್ಯಾಂಕುಗಳಿಗೆ ಕಡಿಮೆಯಿಲ್ಲದ ರೀತಿಯಲ್ಲಿ, ಪೈಪೋಟಿಯಲ್ಲಿ ಸಹಕಾರಿ ಸಂಘಗಳು ಸೇವೆ ನೀಡುತ್ತಿವೆ, ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಸಿಬ್ಬಂದಿಗಳ ಭಾಷಾ ಸಮಸ್ಯೆ, ನಿಯಮಿತ ಸಮಯದ ಸೇವೆಯಿಂದಾಗಿ ಇಂದು ಗ್ರಾಹಕರು ಸಹಕಾರಿ ಸಂಘಗಳತ್ತ ಮುಖ ಮಾಡಿದ್ದಾರೆ ಎಂದು ತಿಳಿಸಿದರು. ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ೩೦ಕ್ಕಿಂತಲೂ ಅಧಿಕ ಮಹಿಳೆಯರಿಗೆ ಉದ್ಯೋಗ ನೀಡಿ ಮಹಿಳಾ ಸ್ವಾವಲಂಬನೆಗೆ ಶಕ್ತಿ ತುಂಬಿದೆ, ೨೫ ಶಾಖೆಗಳನ್ನು ಹೊಂದುವ ಹಾಗೂ ಸ್ವಂತ ಕಟ್ಟಡ ನಿರ್ಮಾಣದ ಕನಸು…
ಬಂಟ್ವಾಳ: ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭಗೊಂಡಿದ್ದು ತಾಲೂಕಿನಲ್ಲಿ ಮೊದಲ ದಿನದ ಎಸ್ಎಸ್ಎಲ್ಸಿ ಪರೀಕ್ಷೆ ಶುಕ್ರವಾರ ಯಶಸ್ವಿಯಾಗಿ ನೇರವೇರಿದೆ. ವಿದ್ಯಾರ್ಥಿಗಳು ಸುಗಮವಾಗಿ ಪರೀಕ್ಷೆ ಬರೆಯಲು ಶಿಕ್ಷಣ ವ್ಯವಸ್ಥೆ ಎಲ್ಲಾ ರೀತಿಯ ವ್ಯವಸ್ಥೆ ಕಲ್ಪಿಸಿದ್ದು ಯಾವುದೇ ರೀತಿಯ ಅಡತಡೆ, ತೊಂದರೆಗಳಿಲ್ಲದೆ ಪರೀಕ್ಷೆ ಸಾಂಗವಾಗಿ ನಡೆದಿದೆ. 128 ಪುನರಾವರ್ತಿತ ವಿದ್ಯಾರ್ಥಿಗಳೂ ಸೇರಿದಂತೆ ತಾಲೂಕಿನಲ್ಲಿ 5494 ವಿದ್ಯಾರ್ಥಿಗಳು ಹಾಜರಾಗಬೇಕಿತ್ತು. ಆದರೆ 5453 ವಿದ್ಯಾರ್ಥಿಗಳು ಹಾಜರಾಗಿ ಮೊದಲ ದಿನದ ಪರೀಕ್ಷೆಗೆ 41 ಮಂದಿ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. —
ಬಂಟ್ವಾಳ: ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು ಎಲ್ಲರೂ ಖಡ್ಡಾಯವಾಗಿ ಹಾಗೂ ಕಟ್ಟುನಿಟ್ಟಾಗಿ ನೀತಿ ಸಂಹಿತೆಯನ್ನು ಪಾಲಿಸಬೇಕು. ನೀತಿ ಸಂಹಿತೆಯನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ೨೦೫-ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ನಿಯುಕ್ತಿಗೊಂಡಿರುವ ಚುನಾವಣಾಧಿಕಾರಿ ಅಭಿದ್ ಗಡ್ಯಾಲ್ ಹೇಳಿದರು.ಬಂಟ್ವಾಳ ತಾಲೂಕು ಆಡಳಿತ ಸೌಧದ ಚುನಾವನಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ಕರೆದ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದರು. ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು ೨,೨೨,೯೦೧ ಮತದಾರರಿದ್ದು ಈ ಪೈಕಿ ೧,೦೯,೭೧೫ ಪುರುಷ ಹಾಗೂ ೧,೧೩,೧೮೬ ಮಹಿಳಾ ಮತದಾರರಿದ್ದಾರೆ. ಇಷ್ಟು ಮತದಾರರಿಗೆ ೨೪೯ ಮತಗಟ್ಟೆಗಳನ್ನು ಸಿದ್ದಮಾಡಿಕೊಂಡಿದ್ದು ಈ ಪೈಕಿ ೨೧೩ ಮತಗಟ್ಟೆಗಳು ಸಾಮಾನ್ಯ ಮತಗಟ್ಟೆಗಳಾಗಿದ್ದು ೩೬ ಸೂಕ್ಷ್ಮ ಮತಗಟ್ಟೆಗಳಾಗಿವೆ ಎಂದು ತಿಳಿಸಿದರು. ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಎಲ್ಲಾ ಸಿಬ್ಬಂದಿಗಳಿಗೆ ತರಬೇತಿಯನ್ನು ನೀಡಲಾಗಿದ್ದು ಅಧಿಕಾರಿಗಳ ತಂಡವನ್ನು ರಚಿಸಿಕೊಳ್ಳಲಾಗಿದೆ, ರಾಜಕೀಯ ಸಭೆಗಳನ್ನು ನಡೆಸಲು ಕಡ್ಡಾಯವಾಗಿ ಚುನಾವಣಾಧಿಕಾರಿ ಕಚೇರಿಯಿಂದ ಅನುಮತಿ ಪಡೆದುಕೊಳ್ಳಬೇಕು. ಅಂತಹ ಕಾರ್ಯಕ್ರಮಗಳಿಗೆ ಸುವಿಧಾ ಏಕಗವಾಕ್ಷಿ ವ್ಯವಸ್ಥೆಯ ಮೂಲಕ ಅನುಮತಿ ನೀಡಲಾಗುವುದು. ಮದುವೆ ಮೊದಲಾದ ಖಾಸಗಿ,…
ಸೇವಾಂಜಲಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆಯಲ್ಲಿ ಪ್ರತೀ ಮಂಗಳವಾರ ಕಣ್ಣು-ದಂತ- ವೈದ್ಯಕೀಯ ಶಿಬಿರ ನಡೆಯುತ್ತಿದ್ದು 710 ನೇ ಶಿಬಿರವನ್ನು ಬಂಟ್ವಾಳ ಶಿಕ್ಷಣಾಧಿಕಾರಿ ಕಚೇರಿಯ ಅಧಿಕಾರಿ ಹರ್ಷೇಂದ್ರ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ. ಕೃಷ್ಣ ಕುಮಾರ್ ಪೂಂಜ, ಮನೋಹರ ಅರ್ಕುಳ, ಪ್ರಶಾಂತ್ ಕುಮಾರ್ ತುಂಬೆ, ಉಮಾ ಚಂದ್ರಶೇಖರ್, ಬಿ.ನಾರಾಯಣ ಮೇರಮಜಲು ಮೊದಲಾದವರು ಉಪಸ್ಥಿತರಿದ್ದರು. Promotion
ಬಂಟ್ವಾಳ: ಸಜೀಪಪಡು ಗ್ರಾಮದ ಸೇನರಬೆಟ್ಟು ನಿವಾಸಿ ವಿವಾಹಿ ಮಹಿಳೆಯೊಬ್ಬರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಳೆದ ಫೆಬ್ರವರಿ ೧೪ರಂದು ನಡೆದಿದ್ದು ಮಹಿಳೆಯ ಸಾವಿನ ಬಗ್ಗೆ ಆಕೆಯ ಪತಿ ಸಂಶಯ ವ್ಯಕ್ತಪಡಿಸಿ, ಆತ್ಮಹತ್ಯೆಗೆ ಪ್ರೇರಣೆ ನೀಡಿದ ವ್ಯಕ್ತಿಯ ವಿರುದ್ದ ನಿಷ್ಪಕ್ಷಪಾತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿಯವರಿಗೆ ಮನವಿಯ ಮೂಲಕ ಆಗ್ರಹಿಸಿದ್ದಾರೆ.ಇಲ್ಲಿನ ನಿವಾಸಿ ಸತೀಶ್ ಪಿ. ಎಂಬವರ ಪತ್ನಿ ಬೀನಾ ಸಿ. ಎಂಬವರು ಕಳೆದ ಫೆಬ್ರವರಿ ತಿಂಗಳ ೧೪ರಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆ ನಡೆದ ಸಂದರ್ಭ ಮಹಿಳೆಯ ಕಿವಿಯಲ್ಲಿ ಇಯರ್ ಪೋನ್ ಇದ್ದು ಆಕೆಯ ಮೊಬೈಲ್ ಪೋನ್ ಕಾಲಿನ ಕೆಳಗಡೆ ಬಿದ್ದಕೊಂಡಿದ್ದುದರಿಂದ ಆತ್ಮಹತ್ಯೆಯು ವ್ಯವಸ್ಥಿತ ಸಂಚು ಎಂಬ ಸಂಶಯ ವ್ಯಕ್ತವಾಗಿದ್ದು ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಲಾಗಿದೆ. ಮೃತ ಮಹಿಳೆಯ ಪತಿಯು ಮಂಗಳೂರಿನಲ್ಲಿ ಕೆಲಸದಲ್ಲಿದ್ದು ವಾರಕ್ಕೊಮ್ಮೆ ಮನೆಗೆ ಬಂದು ಹೋಗುತ್ತಿದ್ದರು, ಈ ಸಂದರ್ಭ ಅವಿವಾಹಿತ ಯುವಕನೋರ್ವನ ಪರಿಚಯವಾಗಿ ಆತನೊಂದಿಗೆ ಸಲುಗೆಯಿದ್ದ ಇದ್ದಿರುವುದು ತಿಳಿದು…
ಶ್ರೀ ಕ್ಷೇತ್ರ ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನೂತನ ಶಿಲಾಮಯ ಗರ್ಭಗುಡಿ, ತೀರ್ಥಮಂಟಪ ಮತ್ತು ಸುತ್ತುಪೌಳಿಯ ಶಿಲಾನ್ಯಾಸ, ವಿಜ್ಞಾಪನ ಪತ್ರ ಬಿಡುಗಡೆ ಬಂಟ್ವಾಳ: ನಾವು ಮಾಡುವ ಕಾರ್ಯಗಳಿಗೆ ಯಶಸ್ಸು ಸಿಗಲು ದೇವರ ಅನುಗ್ರಹ ಬೇಕು ಅಂತೆಯೇ ದೇವಸ್ಥಾನದ ಜೀಣೋದ್ಧಾರ ಕಾರ್ಯಗಳು ನಡೆಯಲು ದೇವರ ಅನುಗ್ರಹ ಬೇಕು, ದೇವರ ಅನುಗ್ರಹದ ಜೊತೆಗೆ ಸಮಾಜದ ಎಲ್ಲರ ಕೊಡುವಿಕೆಯಲ್ಲಿ ದೇವಸ್ಥಾನ ಜೀಣೋದ್ಧಾರ ಕಾರ್ಯ ಸಾಂಗವಾಗಿ ನೆರವೇರಲಿ ಎಂದು ಉಡುಪಿ ಅಧೋಕ್ಷಜ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ಶ್ರೀ ಕ್ಷೇತ್ರ ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನೂತನ ಶಿಲಾಮಯ ಗರ್ಭಗುಡಿ, ತೀರ್ಥಮಂಟಪ ಮತ್ತು ಸುತ್ತುಪೌಳಿಯ ಶಿಲಾನ್ಯಾಸ ನೆರವೇರಿಸಿ ಆಶೀರ್ವಚನ ನೀಡಿದರು. ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರಿ ದೇವಳದ ಅನುವಂಶಿಕ ಅರ್ಚಕ ಕಮಲಾದೇವಿ ಪ್ರಸಾದ ಅಸ್ರಣ್ಣರು ವಿಜ್ಞಾಪನ ಪತ್ರ ಬಿಡುಗಡೆಗೊಳಿಸಿ ಆಶೀರ್ವಚನ ನೀಡಿ ಮಹಾಲಿಂಗೇಶ್ವರ ದೇವರು ರಾಯಿಯ ಸಂಪತ್ತು. ದೇವರು ಕೊಡುವಾಗ ಒಳ್ಳೆಯದನ್ನು ಅನುಗ್ರಹಿಸುತ್ತಾನೆ. ಕೆಟ್ಟದಕ್ಕೆ ಯಾವ ದೇವರು ಅನುಗ್ರಹಿಸುವುದಿಲ್ಲ. ಸಂಪತ್ತಿಗೆ ಹರಿವನ್ನು ಕೊಟ್ಟಾಗ ನೆಮ್ಮದಿ…
ಸರಕಾರವನ್ನು ಖಾಸಗಿ ವ್ಯಕ್ತಿಗಳು ನಿಯಂತ್ರಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ: ಅರವಿಂದ ಚೊಕ್ಕಾಡಿ ಬಂಟ್ವಾಳ: ನಮ್ಮ ಅಭಿವೃದ್ಧಿಯ ಪರಿಕಲ್ಪನೆಯಲ್ಲಿ ಸಮಸ್ಯೆ ಇದೆ. ಅಭಿವೃದ್ದಿಯ ಬಗ್ಗೆ ನಮ್ಮ ಗ್ರಹಿಕೆಯಲ್ಲಿ ಸಮಸ್ಯೆ ಇದೆ, ಆರೋಗ್ಯ, ಶಿಕ್ಷಣ, ಆಹಾರ ವ್ಯವಸ್ಥೆ ಆಗದೆ ಬೇರೆ ಅಭಿವೃದ್ಧಿಗೆ ಅರ್ಥವಿಲ್ಲ ಎಂದು ಚಿಂತಕ ಅರವಿಂದ ಚೊಕ್ಕಾಡಿ ಹೇಳಿದರು.ಸಿಟಿಜನ್ಸ್ ಫಾರಮ್ ಆಶ್ರಯದಲ್ಲಿ ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ನಡೆದ ರಾಜಕೀಯ ರಹಿತ ಜನ ಸಂವಾದದಲ್ಲಿ ಪ್ರಜಾಪ್ರಭುತ್ವದಲ್ಲಿ ಜನರ ಮತ್ತು ಜನಪ್ರತಿನಿಧಿಗಳ ಕರ್ತವ್ಯ ವಿಚಾರದ ಮಂಡಿಸಿ ಮಾತನಾಡಿದರು.ಜನರ ಒಂದು ಭಾಗವೇ ಜನಪ್ರತಿನಿಧಿಗಳು. ಜನಪ್ರತಿನಿಧಿಗಳು ಜನಪರವಾಗಿರಬೇಕಾದರೆ ಜನರು ಜನಪ್ರತಿನಿಧಿಗಳ ಪರವಾಗಿರಬೇಕು.ಜನರು ಜನಪ್ರತಿನಿಧಿಗಳಲ್ಲಿ ಹಣ ಕೇಳುವುದನ್ನು ನಿಲ್ಲಿಸಬೇಕು ಎಂದು ತಿಳಿಸಿದ ಅವರು ಸರಕಾರವನ್ನು ಖಾಸಗಿ ವ್ಯಕ್ತಿಗಳು ಅಥವಾ ಸಂಸ್ಥೆಗಳು ನಿಯಂತ್ರಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದರು.ಮಾಜಿ ಸಚಿವ ಬಿ. ರಮಾನಾಥ ರೈ ಕಾರ್ಯಕ್ರಮ ಉದ್ಘಾಟಿಸಿ ಶುಭಕೋರಿದರು.ವಿಧಾನ ಪರಿಷತ್ ಮಾಜಿ ಸದಸ್ಯ ಅಣ್ಣ ವಿನಯ ಚಂದ್ರ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಜನಪರವಾಗಿ ಧ್ವನಿ ಎತ್ತಬಲ್ಲವರನ್ನು ಶಾಸಕರನ್ನಾಗಿ ಆಯ್ಕೆ ಮಾಡುವ…
https://youtu.be/rLQXdexnq10 ಮಡಿವಾಳಪಡ್ಪು ಗುಡ್ಡದಲ್ಲಿ ಬೆಂಕಿ, ಸುತ್ತಲೂ ವ್ಯಾಪಿಸಿದ ಕಪ್ಪು ಧೂಮ ಬಂಟ್ವಾಳ: ಸಜೀಪಮುನ್ನೂರು ಗ್ರಾಮದ ಮಡಿವಾಳಪಡ್ಪು ಎಂಬಲ್ಲಿ ಒಣಗಿದ ಮುಳಿಹುಲ್ಲಿನ ಗುಡ್ಡದಲ್ಲಿ ಭಾನುವಾತ ಸಂಜೆ ಬೆಂಕಿ ಕಾಣಿಕೊಂಡು ಸುತ್ತಲೂ ವ್ಯಾಪಿಸಿ ಆತಂಕದ ಸ್ಥಿತಿ ನಿರ್ಮಾಣಗೊಂಡಿತು. ಮಡಿವಾಳಪಡ್ಪು ನದಿ ತೀರದಲಿದ್ದು ಬೆಂಕಿಯ ಕಪ್ಪು ಹೊಗೆ ನದಿಯ ಇನ್ನೊಂದು ಪಾರ್ಶ್ವದಲ್ಲಿರುವ ಬಿ.ಸಿ.ರೋಡು, ಕೈಕುಂಜೆವರೆಗೂ ಕಾಣಿಸುತ್ತಿತ್ತು. ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿದರು.








