Author: admin
ಎನ್. ಕೋಟ್ಯಪ್ಪ ಸಾಲ್ಯಾನ್ ನಿಧನಬಂಟ್ವಾಳ: ಮಾರ್ನಬೈಲು ನಿವಾಸಿ ಎನ್. ಕೋಟ್ಯಪ್ಪ ಸಾಲ್ಯಾನ್(91) ಅವರು ಅಲ್ಪಕಾಲದ ಅಸೌಖ್ಯದಿಂದ ಶನಿವಾರ ರಾತ್ರಿ ಸ್ವಗ್ರಹದಲ್ಲಿ ನಿಧನರಾದರು. ಮಾರ್ನಬೈಲು ನಾಗನವಳಚ್ಚಿಲ್ನ ಶ್ರೀ ದುರ್ಗಾಪರಮೇಶ್ವರೀ ಸೇವಾ ಸಮಿತಿಯ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು ಇತ್ತೀಚೆಗೆ ನಡೆದ 50ನೇ ವರ್ಷಾಚರಣೆ ಸಮಿತಿಯ ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮೃತರು 5ಗಂಡು ಹಾಗೂ 3 ಮಂದಿ ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಭಾನುವಾರ ಪಾಣೆಮಂಗಳೂರಿನ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ಕಾರ್ಯ ನಡೆಯಿತು. Promotion
ಬಂಟ್ವಾಳ: ಶಾಂತಿ ಸಾಮರಸ್ಯದ ಬಂಟ್ವಾಳ ನಿರ್ಮಾಣ ನನ್ನ ಮೊದಲ ಆದ್ಯತೆಯಾಗಿದೆ. ಶಾಸಕರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.ಅವರು ಕಾವಳಮೂಡೂರು ಗ್ರಾಮದಲ್ಲಿ ರೂ.೮.೪೦ ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಬಳಿಕ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಕಾರ್ಯಕರ್ತರ ಮೇಲೆ ನಡೆಯುವ ದಬ್ಬಾಳಿಕೆ, ಸುಳ್ಳು ಕೇಸು ದಾಖಲು, ದೊಂಬಿಯ ರಾಜಕಾರಣವನ್ನು ಕೊನೆಗಾಣಿಸಬೇಕು ಎಂಬ ಕನಸು, ಆಸೆಗೆ ಕ್ಷೇತ್ರದ ಜನರು ಸಹಕಾರ ನೀಡಿದರು, ಹಾಗಾಗಿ ಕಳೆದ ಐದು ವರ್ಷಗಳಿಂದ ಶಾಂತಿಯ ನವ ಬಂಟ್ವಾಳ ನಿರ್ಮಾಣವಾಯಿತು ಎಂದರು.ಮತ ನೀಡಿ ಶಾಸಕನಾಗಿ ಆಯ್ಕೆ ಮಾಡಿದ ಕ್ಷೇತ್ರದ ಮತದಾರರಿಗೆ ಪ್ರಾಮಾಣಿಕವಾಗಿ ನ್ಯಾಯ ಒದಗಿಸುವ ಕೆಲಸ ಮಾಡಿದ ಆತ್ಮ ತೃಪ್ತಿ ಇದೆ ಎಂದ ಅವರು ಜಗತ್ತು ಮೆಚ್ಚಿದ ನಾಯಕನ ಜೊತೆಗೆ ನಾವು ಇದ್ದೇವೆ ಎಂಬುದೇ ಖುಷಿಯ ವಿಚಾರ. ವೈಯಕ್ತಿಕ ವಿಚಾರದಲ್ಲಿ ನಾನು ಈವರೆಗೆ ರಾಜಕೀಯ ಮಾಡಿಲ್ಲ. ಪಕ್ಷದ ನೀಡಿದ ಜವಾಬ್ದಾರಿಯನ್ನು ನಿಷ್ಠೆಯಿಂದ ಮಾಡಿದ್ದೇನೆ. ಆದರೆ ಕಳೆದ ಐದು ವರ್ಷಗಳಲ್ಲಿ ಜನತೆ ನೀಡಿದ ಪ್ರೀತಿಗೆ ನಾನು ಚಿರ ಋಣಿಯಾಗಿದ್ದೇನೆ ಎಂದು ತಿಳಿಸಿದರು.…
ಬಂಟ್ವಾಳ: ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಹಿನ್ನಲೆಯಲ್ಲಿ ರಾಜಕೀಯ ಪಕ್ಷಗಳು ತಯಾರಿಯನ್ನು ಆರಂಭಿಸಿದೆ. ಇತ್ತ ಚುನಾವಣೆಯ ಬಗ್ಗೆ ಜನರಲ್ಲಿ ಜಾಗೃತಿಯನ್ನು ಮೂಡಿಸಲು ದ.ಕ. ಜಿಲ್ಲಾಡಳಿತವೂ ಕಾಯೋನ್ಮುಖವಾಗಿದ್ದು ಆಯ್ದ ಮತಗಟ್ಟೆಗಳಲ್ಲಿ(ಶಾಲೆಗಳಲ್ಲಿ) ಬಣ್ಣದ ಚಿತ್ರಗಳನ್ನು ರಚಿಸಿ ಮತದಾರರನ್ನು ಮತಗಟ್ಟೆಗೆ ಸೆಳೆಯಲು ಹೊಸ ಪ್ರಯತ್ನ ನಡೆಸಿದೆ. ಕರಾವಳಿಯ ಜಾನಪದ ಕಲೆಗಳಾದ ಯಕ್ಷಗಾನ, ಕಂಬಳ ಸೇರಿದಂತೆ ಪರಂಪರೆ ಮತ್ತು ಸಂಸ್ಕೃತಿ, ಗೋಗ್ರೀನ್, ನೀಲ ತರಂಗ, ಯುವ, ಸಖಿ, ವಿಕಲಚೇತನ ಈ ಎಂಟು ಪರಿಕಲ್ಪನೆಯಡಿ ಮತಗಟ್ಟೆ ಕೇಂದ್ರಳಾಗಿರುವ ಶಾಲೆಗಳನ್ನು ಬಣ್ಣದ ಚಿತ್ರಗಳಿಂದ ಅಲಂಕರಿಸುವ ಕಾರ್ಯ ನಡೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು 100 ಮತಗಟ್ಟೆಗಳನ್ನು ಚಿತ್ರಗಳಿಂದ ಅಲಂಕರಿಸುವ ಯೋಜನೆ ರೂಪಿಸಿರುವುದಾಗಿ ದ.ಕ. ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯದರ್ಶಿ ಡಾ. ಕುಮಾರ್ ತಿಳಿಸಿದ್ದಾರೆ. ಬಂಟ್ವಾಳ ತಾಲೂಕಿನಲ್ಲಿ 13 ಶಾಲೆಗಳು:ಬಂಟ್ವಾಳ ತಾಲೂಕಿನ 13 ಶಾಲೆಗಳಲ್ಲಿನ ಮತಗಟ್ಟೆಗಳಲ್ಲಿ ಬಣ್ಣದ ಚಿತ್ರಗಳನ್ನು ಚಿತ್ರಕಲಾ ಶಿಕ್ಷಕರಿಂದ ಪಡಿಮೂಡಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ತಾಲೂಕಿನ ಕೆದ್ದಳಿಕ ಸ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ…
ಕೊಲೆಗಡುಕರನ್ನು ವೈಭವೀಕರಿಸುವವರಿಂದ ನೈತಿಕತೆಯ ಪಾಠ ಅಗತ್ಯವಿಲ್ಲ: ರಮಾನಾಥ ರೈ ಬಂಟ್ವಾಳ: ನ್ಯಾಯಾಂಗ ಪ್ರಾಮಾಣಿಕವಾಗಿ ವರ್ತಿಸಿದರೆ ಬಿಜೆಪಿಯ ಶೇ.75 ಸಂಸದರು ಜೈಲಲ್ಲಿರುತ್ತಾರೆ ಎಂದು ಕಾಂಗ್ರೆಸ್ ಮುಖಂಡ ಎಂ. ಜಿ. ಹೆಗಡೆ ಹೇಳಿದರು.ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ 14 ದಿನಗಳ ಕಾಲ ನಡೆಯುತ್ತಿರುವ ಬಂಟ್ವಾಳ ಪ್ರಜಾಧ್ವನಿ ಯಾತ್ರೆಯ ಅಂಗವಾಗಿ ರಾಯಿಯಲ್ಲಿ ನಡೆದ ಸಾರ್ವಜನಿಕ ಸಭಾ ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣ ಮಾಡಿದರು ರಾಹುಲ್ ಗಾಂಧಿಗೆ ಜೈಲು ಶಿಕ್ಷೆಯಾಗಿರುವುದನ್ನಿ ಉದ್ದೇಶಿಸಿ ಮಾತನಾಡಿದ ಅವರುಸಿದ್ದರಾಮಯ್ಯರನ್ನು ಮುಗಿಸಿಬಿಡಿ ಎಂದವರ ಮೇಲೆ ಯಾವುದೇ ಕೇಸ್ ದಾಖಲಿಸಿಲ್ಲ, ಪ್ರಶ್ನೆ ಮಾಡಿದವರನ್ನು ಹೊಸಕಿ ಹಾಕುವ ಪ್ರವೃತ್ತಿ ಬಿಜೆಪಿಯಿಂದ ನಡೆಯುತ್ತಿದೆ ಎಂದರು. ಕೊಲೆಗಡುಕರನ್ನು ವೈಭವೀಕರಿಸುವವರಿಂದ ನೈತಿಕತೆಯ ಪಾಠ ಅಗತ್ಯವಿಲ್ಲ: ರಮಾನಾಥ ರೈ ಭಾವನಾತ್ಮಕ ವಾಗಿ ಜನರನ್ನು ಹಾದಿ ತಪ್ಪಿಸುವ ಕಾರ್ಯ ಬಿಜೆಪಿ ಮಾಡುತ್ತಿತ್ತು. ಈಗ ಅದೇ ಹಿನ್ನಡೆಯಾಗುತ್ತಿದೆ. ಈಗ ಎಲ್ಲರಿಗೂ ಜ್ಞಾನೋದಯವಾಗಿದೆ ಎಂದರು. ಬಿಜೆಪಿಗೆ ಅಭಿವೃದ್ಧಿಯ ಕತೆ ಬೇಡ. ಇಡಿ, ಸಿಡಿ, ಬೀಡಿ ಸೂತ್ರದಲ್ಲಿ ಬಿಜೆಪಿ ನಡೆಯುತ್ತಿದೆ ಎಂದು ಲೇವಡಿ ಮಾಡಿದ ಅವರು…
ಪ್ರಗತಿ ಬಂಧು ಸಂಘಗಳಿಗೆ ಕೃಷಿ ಸಲಕರಣೆ ವಿತರಣೆ ಹಾಗೂ ಬಿ.ಸಿ.ರೋಡು ವಲಯ ಮಟ್ಟದ ಸಾಧನ ಸಮಾವೇಶ ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಬಂಟ್ವಾಳ, ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಬಿ.ಸಿ.ರೋಡು ವಲಯ ಇವರ ಸಹಯೋಗದೊಂದಿಗೆ ಪ್ರಗತಿ ಬಂಧು ಸಂಘಗಳಿಗೆ ಕೃಷಿ ಸಲಕರಣೆ ವಿತರಣೆ ಹಾಗೂ ಬಿ.ಸಿ.ರೋಡು ವಲಯ ಮಟ್ಟದ ಸಾಧನ ಸಮಾವೇಶ ಕಾರ್ಯಕ್ರಮ ಬಂಟ್ವಾಳದ ಶ್ರೀ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಜರುಗಿತು.ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಮಾತೃಶ್ರೀಯವರ ದೂರದೃಷ್ಟಿ ಯೋಜನೆಯಿಂದ ಇಂದು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮೂಲಕ ಜನರು ಸ್ವಾಭಿಮಾನದ ಬದುಕು ಸಾಗಿಸಲು ಸಾಧ್ಯವಾಗಿದೆ ಎಂದರು. ಕರೋನಾ ಸಂದರ್ಭದಲ್ಲಿ ಜನರ ಮಾನ, ಪ್ರಾಣ ರಕ್ಷಣೆಯಾಗಿರುವುದು ಕೃಷಿಯಿಂದ. ದೇಶದ ಆರ್ಥಿಕತೆ ಉಳಿದಿರುವುದು ಕೃಷಿಯಿಂದ ಎಂದು ತಿಳಿಸಿದರು. ಯಾಂತ್ರಿಕ ಬದುಕಿಗೆ ಮಾರು ಹೋಗುವ ಈ ಕಾಲಘಟ್ಟದಲ್ಲಿ ಶ್ರಮಜೀವಿಗಳಾಗಿ ತಮ್ಮ…
ಬಂಟ್ವಾಳ: ಬಂಟ್ವಾಳ ಕ್ಷೇತ್ರದ ಜನತೆಯ ಆರೋಗ್ಯ ವಿಚಾರದಲ್ಲಿ ವಿಶೇಷ ಗಮನಹರಿಸಿ ತಾಲೂಕು ಸರಕಾರಿ ಆಸ್ಪತ್ರೆಗೆ ಡಯಾಲಿಸಿಸ್ ಘಟಕ,ಆಕ್ಸಿಜನ್ ಘಟಕ ಹಾಗೂ ಐಸಿಯು ಘಟಕ ಒದಗಿಸಿದ್ದು, ಪುಂಜಾಲಕಟ್ಟೆ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವ ಕಾಮಗಾರಿಯೂ ಈಗಾಗಲೇ ಪ್ರಾರಂಭಗೊಂಡಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಿಳಿಸಿದರು. ಸಜೀಪ ಮುನ್ನೂರು ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಜೀಪ ಭಾಗದಲ್ಲಿ ಸಾಕಷ್ಟು ಮಂದಿ ಪಕ್ಷವನ್ನು ಕಟ್ಟಿ ಗಟ್ಟಿಗೊಳಿಸುವ ಕಾರ್ಯ ಮಾಡಿದ ಹಿರಿಯರಿಗೆ ನಾವು ಸದಾ ಚಿರ ಋಣಿಯಾಗಬೇಕಿದ್ದು, ಅವರ ಮಾರ್ಗದರ್ಶನ ದಲ್ಲಿ ಕಾರ್ಯಕರ್ತರು ಮುನ್ನೆಡೆದರೆ ಬಿಜೆಪಿ ಬಲಿಷ್ಠ ವಾಗಿ ಬೆಳೆಯಲಿದೆ.ಕಳೆದ ನಾಲ್ಕು ವರೆ ವರ್ಷಗಳಲ್ಲಿ ಶಾಸಕನಾಗಿ ಕ್ಷೇತ್ರದ ಪ್ರತಿ ಗ್ರಾಮ ಗಳ ಅಭಿವೃದ್ಧಿ ಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದು, ಸಾವಿರದ ಐನೂರ ಎಂಟು ರಸ್ತೆಗಳು ಈತನಕ ಅಭಿವೃದ್ಧಿ ಯಾಗಿದೆ.ಶಾಸಕನಾಗಿರುವ ಕೊನೆಯ ಕ್ಷಣದವರೆಗೂ ಅಷ್ಟು ಅನುದಾನಗಳನ್ನು ತಂದು ,ಶಾಸಕತ್ವದ ಮೊದಲ ಅವಧಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿದ ತೃಪ್ತಿ ಇದೆ ಎಂದರು. ವಲಯ ಕಾಂಗ್ರೇಸ್ ಅಧ್ಯಕ್ಷ ಸತೀಶ್…
ರಾಜಕೀಯ ಅಭಿವೃದ್ಧಿ ಯ ಆಟ ಆಗಬೇಕೆ ಹೊರತು ದ್ವೇಷ, ಅಸಹನೆಯ ಆಟ ಆಗಬಾರದು- ಎಂ.ಜಿ. ಹೆಗ್ಡೆ ಬಂಟ್ವಾಳ: ರಾಜಕೀಯ ಆಟದಲ್ಲಿ ದ್ವೇಷ ಅಸಹನೆಯಿಂದ ದೇಶ ಕಟ್ಟಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಮುಖಂಡ ಎಂ.ಜಿ. ಹೆಗ್ಡೆ ಹೇಳಿದರು.ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ 14 ದಿನಗಳ ಕಾಲ ನಡೆಯುತ್ತಿರುವ ಬಂಟ್ವಾಳ ಪ್ರಜಾಧ್ವನಿ ಯಾತ್ರೆಯ ಅಂಗವಾಗಿ ನಡೆದ ಸಾರ್ವಜನಿಕ ಸಭಾ ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣ ಮಾಡಿದರು.ಟೀಕೆಯನ್ನು, ಪ್ರಶ್ನೆಯನ್ನು ಆರೋಗ್ಯಪೂರ್ಣವಾಗಿ ಸ್ವೀಕರಿಸದೇ ಇರುವುದೇ ಫ್ಯಾಸಿಸಂ. ಇಂತಹ ವರ್ತನೆಯ ಬಿಜೆಪಿಗೆ ಮುಳುವಾಗುತ್ತಿದೆ. ಪ್ರಜಾಪ್ರಭುತ್ವ ದ ಸೌಂದರ್ಯ ಇರುವುದೇ ಜನರು ಪ್ರಶ್ನೆ ಕೇಳುವುದರಲ್ಲಿ.ರಸ್ತೆ ಸರಿಯಿಲ್ಲ ಎಂದವರ ಮೇಲೆ ಕೇಸು ಹಾಕಲಾಗುತ್ತಿದೆ ಎಂದರು.ರಾಜಕೀಯ ಅಭಿವೃದ್ಧಿ ಯ ಆಟ ಆಗಬೇಕೆ ಹೊರತು ದ್ವೇಷ, ಅಸಹನೆಯ ಆಟ ಆಗಬಾರದು. ದ್ವೇಷದ ರಾಜಕಾರಣದಿಂದ ನಮ್ಮ ದೇಶದ ರಾಜಕಾರಣದ ಮೌಲ್ಯ ಶಿಥಿಲವಾಗುತ್ತಿದೆ, ಚುನಾವಣೆ ದೇಶದೊಳಗಿನ ಆಟ.ಆಟದಲ್ಲಿ ಆಟಗಾರರನ್ನು ಗೆಲ್ಲಿಸುವ ಜವಾಬ್ದಾರಿ ದೇಶದ ನಾಗರಿಕರದ್ದು. ಆ ಆಟದಲ್ಲಿ ಗಲಾಟೆ ಮಾಡಿಕೊಂಡು ಆಸ್ಪತ್ರೆ, ಮಸಣ ಸೇರುವುದು ಸರಿಯೇ?…
ಕುಕ್ಕಿಪ್ಪಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಬಂಟ್ವಾಳ: ಪಕ್ಷ ನೀಡಿದ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸಿಕೊಂಡು ಬಂದಿದ್ದೇನೆ. ಕ್ಷೇತ್ರ ವ್ಯಾಪ್ತಿಯಲ್ಲಿ ನನ್ನ ಶಕ್ತಿ ಮೀರಿ ಕೆಲಸ ನಿರ್ವಹಿಸಿದ ತೃಪ್ತಿ ನನಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಹೇಳಿದರು.ಅವರು ಕುಕ್ಕಿಪ್ಪಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದರು. ತಾ.ಪಂ. ಮಾಜಿ ಸದಸ್ಯ ಪ್ರಭಾಕರ ಪ್ರಭು ಮಾತನಾಡಿ ಮತದಾರ ಪಟ್ಟಿಗೆ ಯುವ ಮತದಾರರನ್ನು ಸೇರಿಸಿ ಮತ್ತೊಮ್ಮೆ ರಾಜೇಶ್ ನಾಯ್ಕ್ ಅವರನ್ನು ಶಾಸಕರನ್ನಾಗಿ ಆಯ್ಕೆ ಮಾಡಬೇಕು. ಅವರು ಶಾಸಕನಾಗಿ ನಿಷ್ಠೆ ಪ್ರಾಮಾಣಿಕತೆಯಿಂದ ಕೆಲಸ ನಿರ್ವಹಿಸಿದ್ದಾರೆ. ಎಂದರು. Promotion ಈ ಸಂದರ್ಭ ಶಾಸಕರು ಕುಕ್ಕಿಪ್ಪಾಡಿ ಗ್ರಾ.ಪಂ. ವ್ಯಾಪ್ತಿಯ ಕುಂಡದ ಬೆಟ್ಟು ದೇವಸ ರಸ್ತೆ ಕಾಂಕ್ರೀಟ್, ಮಾಡಮೆ ಕಲ್ಕೂರಿ ರಸ್ತೆ ಮರುಡಾಮಾರೀಕರಣ, ಕೋರ್ಯಾರು ದೇವಸ್ಥಾನ ರಸ್ತೆ ಕಾಂಕ್ರೀಟ್, ಸಿದ್ದಕಟ್ಟೆ ಚರ್ಚ್ ಅಂಗನವಾಡಿ , ದೇವಸ ಕಲ್ಲಬೆಟ್ಟು ರಸ್ತೆ ಮರು ಕಾಂಕ್ರೀಟ್, ನೇಲ್ಯಕುಮೇರು ಹಲಾಯಿ ರಸ್ತೆ ಕಾಂಕ್ರೀಟ್, ಉಮ್ಮೊಟ್ಟು ಸ್ಮಶಾನ, ಮಾವಿನ ಕಟ್ಟೆ ಕೆಂತಲೆ, ಮಾವಿನಕಟ್ಟೆ…
ಬಿ.ರಮಾನಾಥ ರೈ ಅಭಿಮಾನಿ ಬಳಗದಿಂದ ಪದವಿಶ್ರೀಗೆ ಗೌರವಾರ್ಪಣೆ ಬಂಟ್ವಾಳ: ಬಿ.ರಮಾನಾಥ ರೈ ಅಭಿಮಾನಿ ಬಳಗ ಇದರ ವತಿಯಿಂದ ಮಂಗಳೂರು ವಿಶ್ವ ವಿದ್ಯಾನಿಲಯದ ೨೩ನೇಸಾಲಿನಲ್ಲಿ ನಡೆದ ಎಂ.ಎಸ್ಸಿ ಇನ್ ಸೈಬರ್ ಸೆಕ್ಯುರಿಟಿ ಸ್ನಾತಕೋತ್ತರ ಪರೀಕ್ಷೆಯಲ್ಲಿ ಪ್ರಥಮ ರ್ಯಾಂಕ್ ಪಡೆದ ಪದವಿಶ್ರೀ ಅವರನ್ನು ಮಾಜಿ ಸಚಿವ ಬಿ.ರಮಾನಾಥರೈ ಸನ್ಮಾನಿಸಿದರು. ಜಿ.ಪಂ. ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಪುರಸಭಾ ಸದಸ್ಯ ಲೋಲಾಕ್ಷ ಶೆಟ್ಟಿ, ಬೂಡಾ ಮಾಜಿ ಅಧ್ಯಕ್ಷ ಸದಾಶಿವ ಬಂಗೇರಾ, ನ್ಯಾಯವಾದಿ ಚಂದ್ರಶೇಖರ ಪೂಜಾರಿ, ಜೋಸ್ಪಿನ್ ಡಿಸೋಜ, ದಯಾನಂದ, ಶಿವಪ್ರಸಾದ ಆಳ್ವ, ಸುರೇಶ್ ಶೆಟ್ಟಿ, ಸತೀಶ್ ಶೆಟ್ಟಿ, ಶೈಲೇಶ್ ಶೆಟ್ಟಿ, ಶಿವಾನಂದ, ಜಯರಾಮ ಶೆಟ್ಟಿ, ಆನಂದ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. Promotion
ಪುಂಜಾಲಕಟ್ಟೆಯಲ್ಲಿ ಅಮೃತ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಿಲಾನ್ಯಾಸ ಸಮಾರಂಭ ಬಂಟ್ವಾಳ: ಆರೋಗ್ಯ ಕ್ಷೇತ್ರದ ಅಮೂಲಾಗ್ರ ಬದಲಾವಣೆಯ ದೃಷ್ಟಿಯಿಂದ ಕೋವಿಡ್ ಬಳಿಕ ಗ್ರಾಮೀಣ ಭಾಗಗಳಲ್ಲೂ ಗುಣಮಟ್ಟದ ಆರೋಗ್ಯ ಕೇಂದ್ರಗಳ ಅನುಷ್ಠಾನಕ್ಕೆ ಒತ್ತು ನೀಡಲಾಗುತ್ತಿದ್ದು, ಪ್ರಧಾನಿಗಳ ಆಶಯದಂತೆ ಪ್ರತಿ ಜಿಲ್ಲೆಗಳಲ್ಲೂ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಯೋಜನೆ ರೂಪಿಸಲಾಗುತ್ತಿದೆ ಎಂದು ದ.ಕ.ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು.ಅವರು ಪುಂಜಾಲಕಟ್ಟೆಯಲ್ಲಿ ರಾಜ್ಯ ಆರೋಗ್ಯ ಇಲಾಖೆಯ ವತಿಯಿಂದ ೧೨.೪೪ ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಪುಂಜಾಲಕಟ್ಟೆ ಅಮೃತ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.ಜಗತ್ತಿನಲ್ಲೇ ಅದ್ಬುತ ಯೋಜನೆಯಾಗಿ ಪ್ರಧಾನಿಗಳು ಆಯುಷ್ಮಾನ್ ಭವ, ಜನೌಷಧಿ ಕೇಂದ್ರ, ಆಸ್ಪತ್ರೆಯನ್ನು ಮೇಲ್ದರ್ಜೆ ಕಾರ್ಯ ವೇಗವಾಗಿ ನಡೆಯುತ್ತಿದ್ದು, ಡಬಲ್ ಇಂಜಿನ್ ಸರಕಾರ ಹೆಚ್ಚಿನ ಅನುದಾನ ನೀಡುವ ಕಾರ್ಯ ಮಾಡುತ್ತಿದೆ. ಸಿಎಂ ಬೊಮ್ಮಾಯಿ ಅವರ ಸರಕಾರ ಹಳ್ಳಿ ಹಳ್ಳಿಗಳಲ್ಲೂ ನಮ್ಮ ಕ್ಲಿನಿಕ್ ತೆರೆಯುವ ಕಾರ್ಯ ನಡೆಯುತ್ತಿದೆ. ಆಕ್ಸಿಜನ್, ವೆಂಟಿಲೇಟರ್, ವೈದ್ಯರ ನೇಮಕ, ಎಲ್ಲಾ ಕೊರತೆ ನೀಗಿಸುವ ಕಾರ್ಯ ಮಾಡಲಾಗುತ್ತಿದೆ.ಪುಂಜಾಲಕಟ್ಟೆಯಲ್ಲಿ ಖಾಸಗಿ ಆಸ್ಪತ್ರೆಗಿಂತಲೂ ಉತ್ತಮ…








