Author: admin
ಬಂಟ್ವಾಳ ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಎಸ್ಪಿಯಿಂದ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ ಬಂಟ್ವಾಳ: ತಾಲೂಕು ಕಚೇರಿಯಲ್ಲಿ ಕಡತಗಳು ಕಾಣೆಯಾಗುತ್ತಿರುವುದು ಏಕೆ ಎಂದು ಲೋಕಾಯುಕ್ತ ಎಸ್ಪಿ ಸೈಮನ್ ಗರಂ ಆದ ಘಟನೆ ಮಂಗಳವಾರ ಬಂಟ್ವಾಳ ತಾಲೂಕಿನಲ್ಲಿ ಕರೆದ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ನಡೆಯಿತು.ಎಸ್ಪಿ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳು ನಡೆಸಿದ ಕಾರ್ಯಕ್ರಮದಲ್ಲಿ ಸುಮಾರು ಹದಿನೈದರಷ್ಟು ಮಂದಿ ತಮ್ಮ ದೂರು, ದುಮ್ಮಾನ ಸಲ್ಲಿಸಿದರು. ಈ ಸಂದರ್ಭ ಕರೋಪಾಡಿ ಗ್ರಾಮದ ವಿಕ್ಟರ್ ವೇಗಸ್ ಎಂಬವರು ದೂರು ನೀಡಿ, ತನ್ನ ಕಡತಗಳ ಕುರಿತು ತಾಲೂಕು ಕಚೇರಿಯಲ್ಲಿ ಕೇಳಿದರೆ, ತನಗೆ ಸೂಕ್ತ ಮಾರ್ಗದರ್ಶನ ದೊರಕುತ್ತಿಲ್ಲ, ಪ್ರತಿ ಬಾರಿಯೂ ಕಡತ ಇಲ್ಲ ಎಂದು ಹೇಳುತ್ತಿದ್ದಾರೆ ಎಂದು ಅಳಲು ತೋಡಿಕೊಂಡರು. ಈ ಸಂದರ್ಭ ಗರಂ ಆದ ಲೋಕಾಯುಕ್ತ ಎಸ್ಪಿ ಸೈಮನ್, ಸಂಬಂಧಪಟ್ಟ ವಿಷಯ ನಿರ್ವಾಹಕ ವಿಷುಕುಮಾರ್ ಅವರನ್ನು ಕರೆಸಿ, ಇಂಥ ಸನ್ನಿವೇಶ ನಿರ್ಮಾಣ ಏಕಾಗುತ್ತಿದೆ, ತಾಲೂಕು ಕಚೇರಿಯಲ್ಲಿ ಕಡತಗಳು ಕಾಣೆಯಾಗುತ್ತಿವೆ ಎಂದರೆ ಏನರ್ಥ ಎಂದು ಪ್ರಶ್ನಿಸಿದರು.ಈ ಸಂದರ್ಭ ಸ್ಥಳದಲ್ಲಿ ಉಪಸ್ಥಿತರಿದ್ದ…
ಕಾರ್ಮಿಕ ವಿರೋಧಿ ಬಿ.ಜೆ.ಪಿ ಸರಕಾರವನ್ನು ಸೋಲಿಸಿ-ಕಾಮ್ರೇಡ್ ಪಿ.ಪಿ.ಅಪ್ಪಣ್ಣ ಬಂಟ್ವಾಳ : ಅಖಿಲ ಭಾರತ ಕಾರ್ಮಿಕ ಸಂಘಟನೆಗಳ ಕೇಂದ್ರೀಯ ಸಮಿತಿ (ಎ.ಐ.ಸಿ.ಸಿ.ಟಿ.ಯು) ದ.ಕ ಜಿಲ್ಲಾ ಸಮಾವೇಶ ಬಿ.ಸಿ.ರೋಡಿ ನಲ್ಲಿ ನಡೆಯಿತು.ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಎ.ಐ.ಸಿ.ಸಿ.ಟಿ.ಯು ರಾಜ್ಯ ಪ್ರಧಾನ ಕಾರ್ಯದರ್ಶಿ ಕಾಮ್ರೇಡ್ ಪಿ.ಪಿ.ಅಪ್ಪಣ್ಣ ಮಾತನಾಡಿ ಎ.ಐ.ಸಿ.ಸಿ.ಟಿ.ಯು ಸಂಘಟನೆ ಒಂದು ಕೇಂದ್ರ ಕಾರ್ಮಿಕ ಸಂಘಟನೆಯಾಗಿದ್ದು ಕಾರ್ಮಿಕರ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಟ ನಡೆಸುತ್ತಿದ್ದು , ಹಲವಾರು ಚಳುವಳಿಗಳನ್ನು ನಡೆಸುವುದರ ಮೂಲಕ ಕಾರ್ಮಿಕರಿಗೆ ನ್ಯಾಯ ದೊರಕಿಸಲು ಸಾದ್ಯವಾಗಿದೆ ಎಂದು ತಿಳಿಸಿದರು. ಕೊರೋಣ ಸಂದರ್ಭದಲ್ಲಿ ನ್ಯಾಯಾಲಯದಲ್ಲಿ ಕಾನೂನು ಹೋರಾಟವನ್ನು ಮಾಡುವ ಮೂಲಕ ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಲು ಹೋರಾಟ ಮಾಡಿದ ಏಕೈಕ ಕಾರ್ಮಿಕ ಸಂಘಟನೆ ಎ.ಐ.ಸಿ.ಸಿ.ಟಿ.ಯು ಎಂದು ತಿಳಿಸಿದರು. ರಾಜ್ಯ ಸರಕಾರವು ಅಕ್ಷರ ದಾಸೋಹ, ಆಶಾ,ಅಂಗನವಾಡಿ ಮುಂತಾದ ನೌಕರರನ್ನು ಇನ್ನೂ ನೌಕರರೆಂದು ಪರಿಗಣಿದೆ ಸಮಾಜ ಸೇವಕರು ಎಂದು ಬಿಂಬಿಸಿ ಸೌಲಭ್ಯ ದಿಂದ ವಂಚಿಸುತ್ತಿದೆ ಎಂದರು. ಇಂದು ಕಾರ್ಮಿಕ ವರ್ಗ ಅತ್ಯಂತ ಸಂಕಷ್ಟದ ಪರಿಸ್ಥಿತಿ ಯಲ್ಲಿ ಇದ್ದು ನಮ್ಮನ್ನಾಳುತ್ತಿರುವ ಕೇಂದ್ರ ಮತ್ತು ರಾಜ್ಯದ…
ಬಂಟ್ವಾಳ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕ್ಷೇತ್ರದ ವಿವಿದೆಡೆಯಲ್ಲಿ ಸಣ್ಣ ನೀರಾವರಿ ಇಲಾಖೆಯ ವತಿಯಿಂದ 22.29 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾದ ಎಂಟು ಸೇತುವೆ ಸಹಿತ ಕಿಂಡಿ ಅಣೆಕಟ್ಟುಗಳ ಉದ್ಘಾಟನೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಭಾನುವಾರ ನೆರವೇರಿಸಿದರು.ಈ ಸಂದರ್ಭ ಮಾತನಾಡಿದ ಶಾಸಕರು ಬಂಟ್ವಾಳ ಕ್ಷೇತ್ರದಲ್ಲಿಯು 266 ಕೋ.ರೂ.ವೆಚ್ಚದಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣ ಮಾಡಲಾಗಿದೆ ಎಂದರು.ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ರೈತರ ಆದಾಯವನ್ನು ದ್ವಿಗುಣ ಮಾಡುವ ನಿಟ್ಟಿನಲ್ಲಿ ಚೆಕ್ ಡ್ಯಾಮ್ ಗಳ ನಿರ್ಮಿಸಿ ನೀರನ್ನು ಉಳಿಸುವ ಪ್ರಯತ್ನ ಮಾಡಲಾಗುತ್ತಿದೆ. ಇದರಿಂದ ಅಂರ್ತಜಲವು ವೃದ್ಧಿಯಾಗಿ ಕೃಷಿ ಭೂಮಿ, ಕುಡಿಯುವ ನೀರಿಗೂ ಅನುಕೂಲವಾಗಲಿದೆ ಎಂದು ತಿಳಿಸಿದರು.ಮಾಣಿ ಗ್ರಾಮದ ಅರ್ಬಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು, ಸಜಿಪಮೂಡ ಕಲ್ಲಕುಮೇರುವಿನಲ್ಲಿ, ವಿಟ್ಲಪಡ್ನೂರು ಗ್ರಾಮದ ಮೂರ್ಗಜೆಯಲ್ಲಿ, ಕೊಳ್ನಾಡು ಗ್ರಾಮದ ಕಟ್ಟತ್ತಿಲಮಠದಲ್ಲಿ, ಮಣಿನಾಲ್ಕೂರು ಗ್ರಾಮದ ಬಾರೆತ್ಯಾರುವಿನಲ್ಲಿ, ಅಜ್ಜಿಬೆಟ್ಟು ಗ್ರಾಮದ ಕಳಸಡ್ಕದಲ್ಲಿ ಕರೋಪಾಡಿಯ ದೇವಸ್ಯದಲ್ಲಿ, ರಾಯಿ ಗ್ರಾಮದ ಮಿಯಾಳಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಗೊಂಡಿದ್ದು, ಇವುಗಳ…
ಮೇ ತಿಂಗಳಿನಲ್ಲಿ ಜಕ್ರಿಬೆಟ್ಟು ಡ್ಯಾಂ ಕಾಮಗಾರಿ ಪೂರ್ಣ ನಿರೀಕ್ಷೆ : ಶಾಸಕ ರಾಜೇಶ್ ನಾಯ್ಕ್ ಬಂಟ್ವಾಳ: ಜಕ್ರಿಬೆಟ್ಟುವಿನ ನಿರ್ಮಾಣಗೊಳ್ಳುತ್ತಿರುವ ಸೇತುವೆ ಸಹಿತ ಡ್ಯಾಂನ ಕಾಮಗಾರಿ ಅತ್ಯಂತ ತ್ವರಿತಗತಿಯಲ್ಲಿ ಸಾಗುತ್ತಿದ್ದು ಮುಂದಿನ ಮೇ ತಿಂಗಳಿಗೆ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ಶಾಸಕ ರಾಜೇಶ್ ನಾಕ್ ಹೇಳಿದರು.ಅವರು ಬಂಟ್ವಾಳದ ಜಕ್ರಿಬೆಟ್ಟುವಿನ 135 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಸೇತುವೆ ಸಹಿತ ಅಣೆಕಟ್ಟು( ಬ್ರಿಡ್ಜ್ ಕಂ ಬ್ಯಾರೇಜ್)ವಿನ ಕಾಮಗಾರಿ ವೀಕ್ಷಿಸಿ ಪ್ರಗತಿ ಪರಿಶೀಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಕಳೆದ ನವೆಂಬರ್ 18ರಂದು ಸಣ್ಣನೀರಾವರಿ ಇಲಾಖೆಯ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದ್ದರು. ಮುಂದಿನ ವರ್ಷಕ್ಕೆ ಈ ಡ್ಯಾಂನ ಸಂಪೂರ್ಣ ಪ್ರಯೋಜನ ಈ ಭಾಗದ ಜನರಿಗೆ ಸಿಗಲಿದೆ, ಈ ಬಾರಿ ಬಿಸಿಲಿನ ತಾಪಕ್ಕೆ ನೀರಿನ ಅಭಾವ ಉಂಟಾಗುವ ಆತಂಕ ಇದೆ. ಈ ಡ್ಯಾಂ ನಿರ್ಮಾಣಗೊಂಡ ಬಳಿಕ ನೀರಿಗಾಗಿ ಪರಿತಪಿಸುವ ಸಂಕಷ್ಟ ದೂರವಾಗಲಿದೆ ಎಂದು ತಿಳಿಸಿದರು.ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಶಿವಪ್ರಸನ್ನ…
ಬಂಟ್ವಾಳ: ಸರೋಶ್ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಎಡ್ಮಿನಿಸ್ಟ್ರೇಶನ್ ನಿಟ್ಟೆ ಕ್ಯಾಂಪ್ಸ್ ನ ವಿದ್ಯಾರ್ಥಿ ಅರ್ವಿನ್ ಸುವಾರಿಸ್ ಮಂಗಳೂರು ವಿಶ್ವವಿದ್ಯಾನಿಲಯ 2021 22 ನೇ ಸಾಲಿನ ಬ್ಯಾಚುಲರ್ ಆಫ್ ಹೋಟೆಲ್ ಮ್ಯಾನೇಜ್ ಮೆಂಟ್ (ಬಿ.ಎಚ್.ಎಮ್) ಪದವಿಯಲ್ಲಿ ಎರಡನೇ ರ್ಯಾಂಕ್ ಪಡೆದಿದ್ದಾರೆ. ಇವರು ಕಲ್ಲಡ್ಕ ಅಮ್ಟೂರಿನ ಎಡ್ವಿನ್ ಸುವಾರಿಸ್ ಮತ್ತು ಅನಿತಾ ಸುವಾರಿಸ್ ದಂಪತಿಯ ಪುತ್ರರಾಗಿದ್ದಾರೆ. Advertisement promotion
ಪಿಲಾತಬೆಟ್ಟು ಗ್ರಾ.ಪಂ: ತಹಶೀಲ್ದಾರರ ಗ್ರಾಮವಾಸ್ತವ್ಯ ಕಾರ್ಯಕ್ರಮ ಬಂಟ್ವಾಳ : ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ ಎಂಬ ಕಾರ್ಯಕ್ರಮದನ್ವಯ ಬಂಟ್ವಾಳ ತಾಲೂಕು ತಹಶೀಲ್ದಾರರ ಗ್ರಾಮವಾಸ್ತವ್ಯ ಕಾರ್ಯಕ್ರಮ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾ.ಪಂ.ವ್ಯಾಪ್ತಿಯ ಪುಂಜಾಲಕಟ್ಟೆ ಬಂಗ್ಲೆ ಮೈದಾನದ ಒಳಾಂಗಣ ಕ್ರೀಡಾಂಗಣದಲ್ಲಿ ಶನಿವಾರ ನಡೆಯಿತು.ಬಂಟ್ವಾಳ ತಹಶೀಲ್ದಾರ್ ಸತೀಶ ಕೂಡಲಿಗಿ ಅವರು ಮಾತನಾಡಿ, ಸರಕಾರದ ವತಿಯಿಂದ ಗ್ರಾಮೀಣ ಜನತೆಯ ಸಮಸ್ಯೆಗಳ ಬಗ್ಗೆ ಅರಿತು ಸ್ಥಳದಲ್ಲಿ ಪರಿಹಾರ ಕಲ್ಪಿಸಲು ಗ್ರಾಮ ಭೇಟಿ ಅಭಿಯಾನ ನಡೆಸಲಾಗುತ್ತಿದ್ದು, ಗ್ರಾಮಸ್ಥರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು. Advertisement ಪಿಲಾತಬೆಟ್ಟು ಗ್ರಾ.ಪಂ.ಅಧ್ಯಕ್ಷೆ ಹರ್ಷಿಣಿ ಪುಷ್ಪಾನಂದ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸರಕಾರ ಗ್ರಾಮ ವಾಸ್ತವ್ಯದಂತಹ ಕಾರ್ಯಕ್ರಮವನ್ನು ಆಯೋಜಿಸಿರುವುದು ಅಭಿನಂದನೀಯ. ಪಿಲಾತಬೆಟ್ಟು ಗ್ರಾಮಸ್ಥರ ಹಲವಾರು ಸಮಸ್ಯೆಗಳಿಗೆ ಇಲ್ಲಿ ಕಾನೂನು ಚೌಕಟ್ಟಿನಲ್ಲಿ ಪರಿಹರಿಸಲು ಸಹಕಾರಿಯಾಗಿದೆ ಎಂದರು. ಗ್ರೇಡ್ ೨ ತಹಶೀಲ್ದಾರ್ ದಯಾನಂದ, ಗ್ರಾ.ಪಂ.ಉಪಾಧ್ಯಕ್ಷ ಲಕ್ಷ್ಮೀ ನಾರಾಯಣ ಹೆಗ್ಡೆ, ಪಿಡಿಒ ಯಮುನಪ್ಪ ಕೊರವರ ವೇದಿಕೆಯಲ್ಲಿದ್ದರು. ಈ ಸಂದರ್ಭದಲ್ಲಿ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ಪ್ರಮಾಣಪತ್ರ ವಿತರಿಸಲಾಯಿತು.ತಾಲೂಕು ಆರೋಗ್ಯಾಧಿಕಾರಿ ಡಾ.…
ಬಂಟ್ವಾಳ: ಜಿಲ್ಲೆಯ ಕಾರಣಿಕದ ದೈವ ಕ್ಷೇತ್ರ ಸಜೀಪಮೂಡ ಗ್ರಾಮದ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಮಾ.21 ರಂದು ಮಂಗಳವಾರ ಅಮಾವಾಸ್ಯೆ ಇರುವುದರಿಂದ ಅಗೇಲು ಸೇವೆ ಮತ್ತು ಕೋಲ ಸೇವೆ ಇರುವುದಿಲ್ಲ ಎಂದು ದೈವಸ್ಥಾನದ ಪ್ರಕಟಣೆ ತಿಳಿಸಿದೆ. Advertisement Promotion
ಮಂಜದಗೋಳಿ ಗಡುವಾಡು ಸ್ಥಳದಲ್ಲಿ ಶ್ರೀನಾಲ್ಕೈತ್ತಾಯ ದೈವದ ಕಟ್ಟೆ ಲೋಕಾರ್ಪಣೆ ಬಂಟ್ವಾಳ: ಸಜೀಪ ಮಾಗಣೆ ಮಂಜದಗೋಳಿ ಗಡುವಾಡು ಸ್ಥಳದಲ್ಲಿ ನೂತನವಾಗಿ ವಾಸ್ತು ಪ್ರಕಾರ ನಿರ್ಮಾಣ ಗೊಂಡ ಶ್ರೀನಾಲ್ಕೈತ್ತಾಯ ದೈವದ ಕಟ್ಟೆ ಲೋಕಾರ್ಪಣೆ ಶುಕ್ರವಾರ ಸಜೀಪ ಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್ ಅವರ ಧಾರ್ಮಿಕ ವಿಧಿ ವಿಧಾನ ದೊಂದಿಗೆ ಸಂಪನ್ನ ಗೊಂಡಿತು. ಗಡಿ ಪ್ರಧಾನರಾದ ಗಣೇಶ್ ನಾಯ್ಕ್ ಯಾನೆ ಉಗ್ಗ ಶೆಟ್ಟಿ, ದೇವಿ ಪ್ರಸಾದ್ ಪೂಂಜ ಕೋಚು ಪೂಜಾರಿ ಯಾನೆ ಶಂಕರ ಪೂಜಾರಿ, ಕುಂಛ ಪೂಜಾರಿ, ವೆಂಕಪ್ಪ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು. Advertisement Promotion
ಅಡೆಪಿಲದಲ್ಲಿ ಶ್ರೀಧರ್ಮರಸು ವೈದ್ಯನಾಥ ಜುಮಾದಿ ಬಂಟ ದೈವಗಳ ನೇಮೋತ್ಸವ ಬಂಟ್ವಾಳ: ಶಂಭೂರು ಗ್ರಾಮದ ಅಡೆಪಿಲ ಶ್ರೀಧರ್ಮರಸು ವೈದ್ಯನಾಥ ಜುಮಾದಿ ಬಂಟ ದೈವಗಳ ವಾರ್ಷಿಕ ಮೂರು ದಿನಗಳ ನೇಮೋತ್ಸವವು ಊರ, ಪರವೂರ ಜನರ ಕೂಡುವಿಕೆ ಹಾಗೂ ಗ್ರಾಮದ ಮನೆತನಗಳ ಮತ್ತು ಅಡೆಪಿಲ ಭಂಡಾರದ ಮನೆಯ ವಾರೀಸು ಕುಟುಂಬಸ್ಥರ ಉಪಸ್ಥಿತಿಯೊಂದಿಗೆ ವಿದ್ಯುಕ್ತವಾಗಿ ಸಂಪನ್ನಗೊಂಡಿತು. Advertisement ಮೊದಲ ದಿನದಂದು ಶ್ರೀ ವೈದ್ಯನಾಥ ಜುಮಾದಿ ದೈವಗಳ ಕಿರುವಾಲು ವೈದ್ಯನಾಥ ಭಂಡಾರದ ಮನೆಯಿಂದ ಹೊರಟು ಅಡೆಪಿಲ ಶ್ರೀ ಧರ್ಮರಸು ಅಲಂಗಾರ ಮಾಡದಲ್ಲಿ ನೆಮೋತ್ಸವ ನಡೆಯಿತು. ಎರಡು ಮತ್ತು ಮೂರನೇ ದಿನ ಅಡೆಪಿಲ ದಿಂಡಿಕೆರೆ ಜೋಡುಸ್ಥಾನದಲ್ಲಿ ಶ್ರೀವೈದ್ಯನಾಥ ಮತ್ತು ಜುಮಾದಿ ದೈವಗಳಿಗೆ ನೇಮೋತ್ಸವ ನಡೆಯಿತು. ಈ ಸಂದರ್ಭದಲ್ಲಿ ದೈವದ ಪ್ರಧಾನ ಅರ್ಚಕ, ಜಗನ್ನಾಥ ಪೂಜಾರಿ, ಶೇಖರ ಕೋಟ್ಯಾನ್, ಸೀತರಾಮ ಪೂಜಾರಿ, ಒಂದನೇ ಮನೆಯ ಹಿರಿಯರಾದ ವಿಶ್ವನಾಥ ಇರಂತಬೆಟ್ಟು, ಗುತ್ತಿನ ಮನೆಯವರು, ಅಡೆಪಿಲ ಭಂಡಾರದ ಮನೆಯ ಹಿರಿಯರಾದ ಜನಾರ್ಧನ ಧರ್ಮಸ್ಥಳ, ಹಿಮಕರ ಪೂಜಾರಿ, ಭಂಡಾರದ ಮನೆ ಟ್ರಸ್ಟ್ ಅಧ್ಯಕ್ಷೆ ಮೀನ ಭಗವಾನ್…
ಕುಲಶೇಖರ ಶ್ರೀ ವೀರ ನಾರಾಯಣ ದೇವಸ್ಥಾನ ಬ್ರಹ್ಮಕಲಶೋತ್ಸವದ ಸಮಾಲೋಚನಾ ಸಭೆ ಮಂಗಳೂರು : ಇತಿಹಾಸ ಪ್ರಸಿದ್ದ ಮಂಗಳೂರಿನ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ಸಮಗ್ರ ಜೀರ್ಣೋದ್ಧಾರಗೊಂಡು ಮೇ 14ರಿಂದ 24ರ ವರೆಗೆ ನಡೆಯಲಿರುವ ಬ್ರಹ್ಮ ಕಲಶೋತ್ಸವದ ಸಮಾಲೋಚನಾ ಸಭೆ ಕ್ಷೇತ್ರದ ಸಭಾಂಗಣದಲ್ಲಿ ನಡೆಯಿತು,ಸಭೆಯಲ್ಲಿ ಬ್ರಹ್ಮ ಕಲಶೋತ್ಸವದ ಅಧ್ಯಕ್ಷರಾಗಿ ಪ್ರೇಮಾನಂದ ಕುಲಾಲ್ ಆಯ್ಕ ಮಾಡಲಾಯಿತು ಅಧ್ಯಕ್ಷತೆಯನ್ನು ವಹಿಸಿದ್ದ. ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್ ಮಾತನಾಡಿ ದೇವಸ್ಥಾನ ಜೀರ್ಣೋದ್ಧಾರಗೊಂಡಾಗ ಗ್ರಾಮ ಅಭಿವೃದ್ಧಿಯಾಗುತ್ತದೆ, ಸಮಾಜ ಬಲಿಷ್ಠ ಕೊಳ್ಳುತ್ತದೆ ,ದೇವಸ್ಥಾನ ಧಾರ್ಮಿಕ ಕೇಂದ್ರವಾಗದೆ ಸಾಮಾಜಿಕ ಶೈಕ್ಷಣಿಕ ಸೇವಾಕಾರಿಗಳ ಕೇಂದ್ರವಾಗಲಿದೆ , ವೀರನಾರಾಯಣ ಕ್ಷೇತ್ರ ಹಿಂದು ಸಮಾಜದ ಪವಿತ್ರ ಕ್ಷೇತ್ರವಾಗಲಿದೆ ಎಂದು ನುಡಿದರು. ವೀರನಾರಾಯಣ ದೇವಸ್ಥಾನದ ಆಡಳಿತ ಮೊಕ್ತೇಸರ ಪುರುಷೋತ್ತಮ ಕುಲಾಲ್ ಕಲ್ಪಾವಿ ಜೀರ್ಣೋದ್ಧಾರದ ಪ್ರಕ್ರಿಯೆಗೆಗಳ ಬಗ್ಗೆ ಮತ್ತು ಸಮಿತಿಯ ಪದಾಧಿಕಾರಿಗಳ ಸದಸ್ಯರ ಯಾದಿಯನ್ನು ವಾಚಿಸಿದರು.ವಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಎ. ದಾಮೋದರ್ ಪ್ರಾಸ್ತಾವಿಕ ಮಾತುಗಳಾಡಿದರು, Advertisement ವೇದಿಕೆಯಲ್ಲಿ ದೇವಸ್ಥಾನದ…








