Author: admin
ಬಂಟ್ವಾಳ: ತಾಲೂಕಿನ ಕನ್ಯಾನ ಗ್ರಾಮದಲ್ಲಿ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಆತ್ಮಿಕಾ ಕುಟುಂಬಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಬಂಟ್ವಾಳ ಬಿಜೆಪಿ ಕ್ಷೇಮ ನಿಧಿಯಿಂದ ಪುನರ್ ವಸತಿಗಾಗಿ ರೂ.2.50 ಲಕ್ಷ ನಗದು ಹಣವನ್ನು ಬಂಟ್ವಾಳ ನಿರೀಕ್ಷಣಾ ಮಂದಿರದಲ್ಲಿ ಬುಧವಾರ ಹಸ್ತಾಂತರ ಮಾಡಲಾಯಿತು. ಕಳೆದ ಆರು ತಿಂಗಳ ಹಿಂದೆ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿನಿಯಾಗಿದ್ದ ಆತ್ಮಿಕಾ ಳ ಶವ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ಕಂಡು ಬಂದರೂ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ ಭಜರಂಗದಳ ಕಾರ್ಯಕರ್ತರು ಪೋಲೀಸರಿಗೆ ದೂರು ನೀಡಿ ಪ್ರಕರಣ ದಾಖಲಾಗಿತ್ತು .ಘಟನೆಯ ಹಿನ್ನೆಲೆಯಲ್ಲಿ ಪೊಲೀಸರು ಇಲ್ಲಿನ ನಿವಾಸಿ ಶಾಹುಲ್ ಹಮೀದ್ ಎಂಬಾತನನ್ನು ಬಂಧಿಸಿ ಕಾನೂನು ಕ್ರಮ ಕೈಗೊಂಡಿದ್ದರು.ಶಾಸಕರಿಗೆ ಅಭಿನಂದನೆ: ಮುರಳಿಕೃಷ್ಣ ಹಸಂತಡ್ಕಅತ್ಮಿಕಾಳನ್ನು ಕಳಕೊಂಡ ಬಡ ಕುಟುಂಬಕ್ಕೆ ನೆರವಾಗಿರುವ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ಕಾಳಜಿಗೆ ಭಜರಂಗದಳದ ಮುಖಂಡ ಮುರಳಿಕೃಷ್ಣ ಹಸಂತಡ್ಕ ಅಭಿನಂದನೆ ಸಲ್ಲಿಸಿದ್ದಾರೆ. Promotion ಈ ಕುರಿತು ಮಾಧ್ಯಮದವ ಜೊತೆ ಮಾತನಾಡಿದ ಅವರು, ಮುಸ್ಲಿಂ…
ಬಂಟ್ವಾಳ: ರಾಜ್ಯದಲ್ಲಿರುವ ದರಿದ್ರ ಸರಕಾರವನ್ನು ಮನೆಗೆ ಕಳುಹಿಸ ಬೇಕಾದರೆ ಜನರು ನೂರು ಶೇಕಡ ಮತದಾನ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೆ. ಅಬ್ದುಲ್ ಜಬ್ಬಾರ್ ಹೇಳಿದರು.ಬಂಟ್ವಾಳ ಪ್ರಜಾಧ್ವನಿ ಯಾತ್ರೆಯ ಅಂಗವಾಗಿ ಸರಪಾಡಿ ಗ್ರಾಮದ ಮಾವಿನಕಟ್ಟೆಯಲ್ಲಿ ಮಂಗಳವಾರ ಸಂಜೆ ನಡೆದ 4 ನೇ ದಿನದ ಸಭಾಕಾರ್ಯಕ್ರಮದಲ್ಲಿ ಮಾತನಾಡಿದರು. ಸರ್ಕಾರಿ ಸ್ವಾಮ್ಯದ ಎಲ್ಲ ಸಂಸ್ಥೆಗಳನ್ನು ಮಾರಿದ ಕೇಂದ್ರ ಸರಕಾರ ಈಗ ಎಲೈಸಿಗೂ ಕೈ ಹಾಕಿದೆ. ಸಣ್ಣ ಸಣ್ಣ ಪಕ್ಷಗಳನ್ನು ಖರೀದಿ ಮಾಡಿ, ಕಾಂಗ್ರೆಸ್ ಗೆ ಬರುವ ಮತವನ್ನು ಹೇಗೆ ತಮ್ಮ ಪಕ್ಷಕ್ಕೆ ಸೆಳೆಯಬಹುದು ಎನ್ನುವ ಹುನ್ನಾರದಲ್ಲಿ ಬಿಜೆಪಿ ತೊಡಗಿಸಿಕೊಂಡಿದೆ ಎಂದು ಆರೋಪಿಸಿದರು. ಸುಳ್ಳು ಭರವಸೆ ನಮ್ಮಲ್ಲಿ ಇಲ್ಲ. ಹೇಳಿದ ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ತಿಳಿಸಿದರು.ಮಾಜಿ ಸಚಿವ ಬಿ. ರಮಾನಾಥ ರೈ ಮಾತನಾಡಿ ಪ್ರತೀ ಪಂಚಾಯತಿಗೆ ತೆರಳಿ ಜನರನ್ನು, ಕಾರ್ಯಕರ್ತರನ್ನು ಭೇಟಿ ಮಾಡುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು. ಹಂತ ಹಂತವಾಗಿ ಪಕ್ಷದ ಜವಾಬ್ದಾರಿ…
ಬಂಟ್ವಾಳ: ತಾಲೂಕಿನ ಕಾವಳ ಮೂಡೂರು ಗ್ರಾಮದ ಕಾರಿಂಜೇಶ್ವರ ಸನ್ನಿಧಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆಗೆ ನಿಷೇಧ ಮಾಡುವಂತೆ ಸರಕಾರದ ಗಣಿ ಇಲಾಖೆಯ ಅಧೀನ ಕಾರ್ಯದರ್ಶಿ ಸುಮಾ ಎಸ್. ಆದೇಶ ಹೊರಡಿಸಿದ್ದಾರೆ.ಕಾರಿಂಜ ದೇವಾಲಯದ ಸುತ್ತಮುತ್ತ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದುದರಿಂದ ದೇವಸ್ಥಾನಕ್ಕೆ ಹಾನಿಯಾಗುತ್ತಿದೆ ಎಂಬ ದೂರು ಕೇಳಿ ಬಂದಿದ್ದು ಇದರ ವಿರುದ್ಧ ಪ್ರತಿಭಟನೆ, ಹೋರಾಟಗಳು ನಡೆದಿತ್ತು. ಆದ್ದರಿಂದ ಕಾವಳಮೂಡೂರು ಗ್ರಾಮ ವ್ಯಾಪ್ತಿಯ ಶ್ರೀ ಕಾರಿಂಜೇಶ್ವರ ದೇವಸ್ಥಾನದ ೦೨ ಕಿಲೋ ಮೀಟರ್ ಸುತ್ತಳತೆಯ ಪ್ರದೇಶವನ್ನು ಧಾರ್ಮಿಕ ಚಟುವಟಿಕೆಗಳ ಉದ್ದೇಶಕ್ಕಾಗಿ ಕಾಯ್ದಿರಿಸಿ, ಸದರಿ ಸ್ಥಳದ ೦೨ ಕಿಲೋ ಮೀಟರ್ ಸುತ್ತಳತೆ ವ್ಯಾಪ್ತಿಯಲ್ಲಿ, ಎಲ್ಲಾ ರೀತಿಯ ಗಣಿಗಾರಿಕೆ ಮತ್ತು ಕಲ್ಲುಪುಡಿ (ಕ್ರಷರ್) ಚಟುವಟಿಕೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನಿಷೇಧಿಸಿರುವುದಾಗಿ ಆದೇಶ ಪತ್ರದಲ್ಲಿ ತಿಳಿಸಲಾಗಿದೆ. Promotion
ಬಂಟ್ವಾಳ: ಕಳೆದ ನಾಲ್ಕುವರೆ ವರ್ಷಗಳಲ್ಲಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರವನ್ನು ಶಾಂತಿಯುತ ಬಂಟ್ವಾಳವಾಗಿ ಪರಿವರ್ತಿಸಿರುವ ತೃಪ್ತಿ ನನಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು ಅವರು ತಿಳಿಸಿದರು.ಅವರು ಕರೋಪಾಡಿ ಗ್ರಾ.ಪಂ. ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದರು. ಕರೋಪಾಡಿ ಗ್ರಾಮದಲ್ಲಿ ೧೩ ಕೋಟಿಗೂ ಅಧಿಕ ವೆಚ್ಚದ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ನಡೆಸಲಾಗಿದೆ, ಕ್ಷೇತ್ರ ವ್ಯಾಪ್ತಿಯಲ್ಲಿ ೨ ಸಾವಿರ ಕೋಟಿಗೂ ಹೆಚ್ಚು ಅನುದಾನಗಳ ಮೂಲಕ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಕೊಡುಗೆ ನೀಡಿದ್ದೇನೆ ಎಂದು ಅವರು ತಿಳಿಸಿದರು.ನಮ್ಮ ಅವಧಿಯಲ್ಲಿ ಮಾಡಿರುವ ಅಭಿವೃದ್ಧಿ ಯೋಜನೆಗಳ ಪ್ರತಿಯೊಂದು ಸಹಿತ ದಾಖಲೆ ನಮ್ಮಲ್ಲಿದೆ, ಚುನಾವಣೆ ಸನ್ನಿಹಿತವಾಗುತ್ತಿದ್ದಂತೆ ಮತದಾರರಲ್ಲಿ, ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಸುವ ಕಾರ್ಯ ಕೆಲವರಿಂದ ನಡೆಯುತ್ತಿದ್ದು, ಈ ಕುರಿತು ಎಚ್ಚರ ವಹಿಸುವಂತೆ ಅವರು ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವದಿಂದ ಇಡೀ ಜಗತ್ತು ದೇಶದತ್ತ ನೋಡುತ್ತಿದೆ. ಇತ್ತೀಚಿಗೆ ನಡೆದ ಸರ್ವೇಯಲ್ಲೂ ಪ್ರಧಾನಿ ಮೋದಿಯವರು ನಂ.೧ ಸ್ಥಾನದಲ್ಲಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹಲವಾರು ಜನಪರವಾದ…
ಬಂಟ್ವಾಳ: ಸಮೃದ್ಧಿ ಚಾರಿ ಟೇಬಲ್ ಟ್ರಸ್ಟ್ ಜೋಡು ಮಾರ್ಗ, ಬಂಟ್ವಾಳ ಆಶ್ರಯದಲ್ಲಿ ಮೂಡೂರು ಫ್ರೆಂಡ್ಸ್ ಕಾವಳಕಟ್ಟೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾವಳಮೂಡೂರು ಹಾಗೂ ಯೆನಪೊಯ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ದೇರಳಕಟ್ಟೆ ಸಹಭಾಗಿತ್ವದೊಂದಿಗೆ ಕಾವಳಕಟ್ಟೆ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಸಮುದಾಯ ಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವು ನಡೆಯಿತು. ಜಿಲ್ಲಾ ಪಂಚಾಯತ್ ಸದಸ್ಯ ಬಿ. ಪದ್ಮಶೇಖರ್ ಜೈನ್, ಕಿಸಾನ್ ಘಟಕದ ಅಧ್ಯಕ್ಷ ಸದಾನಂದ ಶೆಟ್ಟಿ, ಸಮೃದ್ಧಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಕೆ.ರಮೇಶ ನಾಯಕ್ ರಾಯಿ, ಟ್ರಸ್ಟಿನ ಸದಸ್ಯರಾದ ಇಬ್ರಾಹಿಂ ನವಾಜ್, ಬಿ.ಆರ್. ಅಂಚನ್, ಪ್ರಮುಖರಾದ ಪ್ರಮೋದ್ ಕುಮಾರ್, ವಸಂತ ಶೆಟ್ಟಿ, ಸತೀಶ್ ಪೂಜಾರಿ ಪಡಂತರ ಬೆಟ್ಟು, ದೂಮಪ್ಪ ಪರವ ಮೊದಲಾದವರಿದ್ದರು.ಅರ್ಹ ಫಲಾನುಭವಿಗಳಿಗೆ ಉಚಿತ ಔಷಧಿ ಮತ್ತು ಕನ್ನಡಕ ವಿತರಿಸಲಾಯಿತು. Promotion
ಬೆಂಗಳೂರು: ಇಲ್ಲಿನ ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕೆನರಾ ಅಸೋಸಿಯೇಷನ್ ಇದರ 13ನೇ ವಾರ್ಷಿಕೋತ್ಸವ ಅಮೃತಮಯ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು.ಕ ಮುಖ್ಯ ಅತಿಥಿ ತುಳು ಲಿಪಿ ತಜ್ಞಸತೀಶ್ ಆಗ್ಪಲ ಮಾತನಾಡಿ ಕಾಲಕ್ರಮೇಣ ವಿನಾಶದ ಅಂಚಿಗೆ ಸರಿಯುತಿರುವ ತುಳು ಭಾಷೆಯನ್ನು ಉಳಿಸಿ ಬೆಳೆಸುವಲ್ಲಿ ಬೆಂಗಳೂರಿನಲ್ಲಿ ನೆಲೆಸಿರುವ ತುಳುವರ ಜವಾಬ್ದಾರಿ ಹಾಗೂ ಪ್ರಾಮುಖ್ಯತೆಯನ್ನು ತಿಳಿಸಿದರು. ತುಳು ಭಾಷೆ ಹಾಗೂ ತುಳುವರ ಸಂಘಟನೆಗಾಗಿ ಕೆನರಾ ಅಸೋಸಿಯೇಷನ್ ಕೊಡುಗೆಯನ್ನು ಅವರು ಶ್ಲಾಘಿಸಿದರು. ಈ ಸಂದರ್ಭ ಅಸೋಸಿಯೇಷನ್ ವತಿಯಿಂದ ಸತೀಶ್ ಆಗ್ಪಲರವರನ್ನು ಸನ್ಮಾನಿಸಲಾಯಿತು.ಶೈಕ್ಷಣಿಕ ಹಾಗೂ ಇತರ ಕ್ಷೇತ್ರದಲ್ಲಿನ ಸಾಧಕರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಉಪಾಧ್ಯಕ್ಷ ಶೀನಪ್ಪ ಗೌಡ ನೆರವೇರಿಸಿದರು.ಆಟಿಡೊಂಜಿ ಕೂಟ ಹಾಗೂ ವಾರ್ಷಿಕ ಕ್ರೀಡಾಕೂಟದಲ್ಲಿ ನಡೆದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಅಸೋಸಿಯೇಷನಿನ ಸದಸ್ಯರು ಮತ್ತು ಮಕ್ಕಳು ನೀಡಿದ ವಿವಿಧ ರೀತಿಯ ಸಾಂಸ್ಟ್ರಿತಿಕ ಕಾರ್ಯಕ್ರಮಗಳು ಸಮಾರಂಭಕ್ಕೆ ವಿಶೇಷ ಮೆರಗು ನೀಡಿತು.ಅಸೋಸಿಯೇಷನಿನ ಕಾರ್ಯದರ್ಶಿ ಎಂ.ವಿಜಯ್ ಕುಲಾಲ್ ಸ್ವಾಗತಿಸಿದರು. ಅಧ್ಯಕ್ಷ ಸತೀಶ್ ಸುವರ್ಣ ಸಂಘ ಪ್ರಸ್ತುತ ಸಾಲಿನಲ್ಲಿ ಕೈಕೊಂಡ ಸಾಂಸ್ಕೃತಿಕ ಮತ್ತು ಸಮಾಜಮುಖಿ ಕಾರ್ಯಕ್ರಮಗಳ…
ಬಂಟ್ವಾಳ: ನವೋದಯ ಮಿತ್ರ ಕಲಾ ವೃಂದ ಹಾಗೂ ನೇತ್ರಾವತಿ ಮಾತೃ ಮಂಡಳಿ ನೆತ್ತರಕೆರೆ ಇದರ ೩೬ನೇ ವಾರ್ಷಿಕೋತ್ಸವ ಸಮಿತಿಯ ಅಧ್ಯಕ್ಷರಾಗಿ ಪತ್ರಕರ್ತ ಸಂತೋಷ್ ಕುಲಾಲ್ ನೆತ್ತರಕೆರೆ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ಸುರೇಶ್ ಕುಲಾಲ್, ದಾಮೋದರ್ ಬೆರ್ವ, ಗೀತಾ ರವೀಂದ್ರ ನೆತ್ತರಕೆರೆಕಾರ್ಯದರ್ಶಿಯಾಗಿ ದೀಕ್ಷಿತ್ ನೆತ್ತರಕೆರೆ, ಕೋಶಾಧಿಕಾರಿಯಾಗಿ ಶೇಖರ್ ಕೋಡಿ, ನೆತ್ತರ ಕೆರೆ, ಜೊತೆ ಕಾರ್ಯದರ್ಶಿಯಾಗಿ ರಂಜಿತ್ ನೆತ್ತರಕೆರೆ, ದೀಕ್ಷಿತಾ ದಿನೇಶ್, ಕ್ರೀಡಾ ಕಾರ್ಯದರ್ಶಿಯಾಗಿ ಪುನೀತ್ ನೆತ್ತರಕೆರೆ, ಚಾಂದಿನಿ ಸತೀಶ್ ಆಯ್ಕೆಯಾದರು. Promotion
ದಡ್ಡಲಕಾಡು ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆ ಬಂಟ್ವಾಳ: ಸರಕಾರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ದಡ್ಡಲಕಾಡು ಕೆನರಾ ರೊಬೇಕೊ ಇವರ ವತಿಯಿಂದ ಆಯ್ದ ೩೦ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಿಸಲಾಯಿತು.. ಕೆನರಾ ರೊಬೆಕೊ ವಲಯ ಮುಖ್ಯಸ್ಥ ಮುರಳೀಧರ ಜಿ ಶೆಣೈ ಹಾಗೂ ಸೀನಿಯರ್ ಕಸ್ಟಮರ್ ಸರ್ವಿಸ್ ರಾಜೇಶ್ ಕೊಯಿಲ ಇವರು ಉಚಿತ ಸೈಕಲನ್ನು ವಿತರಣೆ ಮಾಡಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಇನ್ನೂ ಹೆಚ್ಚು ಸೈಕಲನ್ನು ನೀಡುವುದಾಗಿ ಭರವಸೆ ನೀಡಿ, ಶಾಲೆಯ ಶೈಕ್ಷಣಿಕ ಗುಣಮಟ್ಟ ಹಾಗೂ ಶ್ರೀ ದುರ್ಗಾಚಾರಿಟೇಬಲ್ ಟ್ರಸ್ಟ್ ನ ಸೇವೆಯನ್ನು ಶ್ಲಾಘಿಸಿದರು. ಪ್ರೌಢ ಶಾಲಾ ವಿಭಾಗದ ಎಸ್.ಡಿ.ಎಂ.ಸಿ ಅಧ್ಯಕ್ಷ ಪುರುಷೋತ್ತಮ ಅಂಚನ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕ ರಮಾನಂದ, ಪ್ರಾಥಮಿಕ ಶಾಲಾ ವಿಭಾಗದ ಎಸ್.ಡಿ.ಎಂ.ಸಿ ಅಧ್ಯಕ್ಷ ಶೇಖರ್ ಅಂಚನ್, ಟ್ರಸ್ಟ್ ಸದಸ್ಯರಾದ ರಾಮಚಂದ್ರ ಕರೆಂಕಿ, ಪ್ರಾಥಮಿಕ ವಿಭಾಗದ ಮುಖ್ಯಸ್ಥ ಮೌರಿಸ್ ಡಿಸೋಜಾ ಉಪಸ್ಥಿತರಿದ್ದರು. Promotion
ಬಂಟ್ವಾಳ: ಯುವಕ ವೃಂದ ಮಂಚಿ ಕಟ್ಟೆ ಇದರ ಬೆಳ್ಳಿಹಬ್ಬ ಸಂಭ್ರಮದ ಪ್ರಯುಕ್ತ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಯುವಕ ವೃಂದದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಭಾನುವಾರ ವಿಜ್ರಂಭಣೆಯಿಂದ ನಡೆಯಿತು. ಮಂಚಿಕಟ್ಟೆಯಲ್ಲಿ ನಿರ್ಮಾಣಗೊಂಡ ಸಂಘದ ನೂತನ ಕಟ್ಟಡವನ್ನು ಡಾ. ಎಂ. ಗೋಪಾಲ ಆಚಾರ್ ಮಂಚಿ ಹಾಗೂ ಮಿತ್ತಾಳ ರಘುನಾಥ ಆಚಾರ್ ಉದ್ಘಾಟಿಸಿದರು. ಬಂಟ್ವಾಳ ಶಾಸಕ ರಾಜೇಶ್ ನಾಕ್ ಅವರು ಭೇಟಿ ನೀಡಿ ಶುಭ ಹಾರೈಸಿದರು. ಮೋಂತಿಮಾರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಆಡಳಿತ ಮೋಕ್ತೇಸರ ಸತೀಶ್ಚಂದ್ರ ಎಸ್.ಆರ್. ಮತ್ತಿತರ ಗಣ್ಯರು ದೀಪ ಪ್ರಜ್ವಲಿಸಿದರು.ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಸತೀಶ್ಚಂದ್ರ ಎಸ್.ಆರ್. ಮಾತನಾಡಿ ನಮ್ಮ ದೇಶದಲ್ಲಿ ಶೇ.೫೦ ಕ್ಕಿಂತ ಹೆಚ್ಚು ಯುವಕರಿದ್ದಾರೆ. ಇಂದು ದೇಶ ಸಾಧನೆಯ ಹಾದಿಯಲ್ಲಿ ಮುಂದುವರಿಯಲು ಯುವಕರು ಕಾರಣ ಎಂದರು. ಪ್ರಕೃತಿಯನ್ನು ಆರಾಧಿಸುವ ಮರ ಗಿಡಗಳಲ್ಲೂ ಆಧ್ಯಾತ್ಮಿಕತೆಯನ್ನು ಕಾಣುವ ಜಗತ್ತಿನ ಏಕೈಕ ದೇಶ ಭಾರತ ಎಂದು ತಿಳಿಸಿದ ಅವರು ಯುವಕರು ಸಾಮಾಜಿಕ ಜವಾಬ್ದಾರಿ ಯಿಂದ ಜೀವಿಸಿದಾಗ ಸಮಾಜದ ಅಭಿವೃದ್ದಿಯಾಗುತ್ತದೆ. ಎಂದು…
ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತದೆ, ಮುಂದಿನ ಅವಧಿಯಲ್ಲೂ ಜನತೆಯ ಪ್ರತಿಯೊಂದು ಕೆಲಸಗಳನ್ನು ಮಾಡಲು ಶಕ್ತವಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.ಅವರು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಬಿಜೆಪಿ ಬಂಟ್ವಾಳ ಮಂಡಲದ ಪೇಜ್ ಪ್ರಮುಖರ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ನಾಲ್ಕುವರೆ ವರ್ಷಗಳಲ್ಲಿ 2 ಸಾವಿರ ಕೋಟಿ ರೂಪಾಯಿಗಳ ಅಭಿವೃದ್ಧಿ ಯೋಜನೆಗಳನ್ನು ಮಾಡಿದ್ದು ಎಲ್ಲವೂ ಪಾರದರ್ಶಕವಾಗಿದೆ ಎಂದ ಅವರು ದಿನಕ್ಕೆ ಒಂದರಂತೆ 1504 ರಸ್ತೆಗಳನ್ನು ಮಾಡಲಾಗಿದೆ. ವಿದ್ಯೆ ಮತ್ತು ಆರೋಗ್ಯ ರಕ್ಷಣೆ ಪ್ರಧಾನಿ ನರೇಂದ್ರ ಮೋದಿಯವರ ಕನಸಾಗಿದ್ದು, ಬಹಳಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕ್ಷೇತ್ರದಲ್ಲಿ ಒಟ್ಟು ೪೮ ಕೋಟಿಗೂ ಮಿಕ್ಕಿದ ಹಣ ವಿವಿಧ ಯೋಜನೆ ಯಲ್ಲಿ ಕೃಷಿಕರ ಖಾತೆಗೆ ಬಂದಿದೆ. ಒಂದು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವಿದ್ಯಾ ನಿಧಿ ಫಲಾನುಭವಿಗಳಾಗಿದ್ದಾರೆ. ಪ್ರತಿಯೊಬ್ಬ ಬಿಪಿಎಲ್ ಕಾರ್ಡ್ ದಾರ ಮಹಿಳೆಯರ ಬ್ಯಾಂಕ್ ಖಾತೆಗೆ ಎಪ್ರಿಲ್ ನಿಂದ ತಲಾ ಒಂದು ಸಾವಿರದಂತೆ ಹಣ ನೀಡುವ ಘೋಷಣೆಯನ್ನು…








