Author: admin
ಬಂಟ್ವಾಳ: ಬಿ.ಸಿ. ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಕರ್ನಾಟಕ ಗಮಕ ಕಲಾ ಪರಿಷತ್ಗಳ ಜಂಟಿ ಆಶ್ರಯದಲ್ಲಿ ನಡೆದ ಬಂಟ್ವಾಳ ತಾಲೂಕು ದ್ವಿತೀಯ ಗಮಕ ಸಮ್ಮೇಳನವನ್ನು ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರುಉದ್ಘಾಟಿಸಿದರು.ಅವರು ಮಾತನಾಡಿ ಸರಕಾರದ ಪ್ರೊತ್ಸಾಹ ಗಮಕ ಕಲೆಗೂ ಬೇಕಾಗಿದೆ. ಚಿಕ್ಕ ಮಕ್ಕಳಲ್ಲಿ ಗಮಕ ಅಭ್ಯಾಸ ಮಾಡಿಸಬೇಕು. ಗಮಕ ಸಮ್ಮೆಳನಗಳಲ್ಲಿ ಯುವಕರ ಭಾಗವಹಿಸುವಿಕೆ ಅಗತ್ಯ ಎಂದರು. ಕರ್ನಾಟಕ ರಾಜ್ಯ ಗಮಕ ಕಲಾ ಪರಿಷತ್ ಅಧ್ಯಕ್ಷೆ ಗಂಗಮ್ಮ ಕೇಶವಮೂರ್ತಿ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಇಂದಿನ ಕಾರ್ಯಕ್ರಮ ಮನ ಮುಟ್ಟಿದೆ. ಹೃದಯ ತಟ್ಟಿದೆ. ಗಮಕ ಇತರ ಭಾಷೆಗಳಿಗೂ ಮುಟ್ಟ ಬೇಕು. ಅದಕ್ಕಾಗಿ ಯೋಜನೆ ರೂಪಿಸಬೇಕಾಗಿದೆ ಎಂದರು. ಬಂಟ್ವಾಳ ತಾಲೂಕು ದ್ವಿತೀಯ ಗಮಕ ಸಮ್ಮೇಳನದ ಸರ್ವಾಧ್ಯಕ್ಷೆ ಡಾ. ವಾರಿಜ ನಿರ್ಬೈಲು ಅವರು ಮಾತನಾಡಿ ಗಮಕ ಕಲೆಯ ಸೇವೆ ಸಲ್ಲಿಸುವ ಮೂಲಕ ಅದರ ಋಣ ತೀರಿಸುವ ಕೆಲಸ ಮಾಡುತ್ತಿದ್ದೇನೆ. ಗಮಕವು ಸಾಹಿತ್ಯ ಸಂಗೀತ ಸಾಂಸ್ಕೃತಿಕ ಕಲಾ ಪ್ರಕಾರ ಎಂದರು.ಗಮಕ ಕಲಾ ಪರಿಷತ್ತು…
ಬಂಟ್ವಾಳ: ನನ್ನ ಅಧಿಕಾರವಧಿಯಲ್ಲಿ ಬಂಟ್ವಾಳ ಕ್ಷೇತ್ರದಲ್ಲಿ ಶಾಂತಿ ನೆಲೆಸಿತ್ತು, ಆದರೆ ಧರ್ಮಾಧರಿತ ಹತ್ಯೆ ನಡೆಸಿ ಅಪಪ್ರಚಾರ ಮಾಡಲಾಗಿತ್ತು. ಕೊಲೆ ಆರೊಪಿಗಳು ಯಾರೂ ಕಾಂಗ್ರೆಸ್ ಕಾರ್ಯಕರ್ತರಲ್ಲ, ಇಲ್ಲಿನ ಅಶಾಂತಿಗೆ ಮತೀಯವಾದ ಪಕ್ಷಗಳೇ ಕಾರಣ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು.ಬಂಟ್ವಾಳ ಪ್ರಜಾಧ್ವನಿ ರಥಯಾತ್ರೆಯ ಪ್ರಯುಕ್ತ ಬಡಕಬೈಲು ಜಂಕ್ಷನ್ ನಲ್ಲಿ ಶುಕ್ರವಾರ ಸಂಜೆ ನಡೆದ ಮೊದಲ ದಿನದ ಸಮಾರೋಪ ಸಭೆಯಲ್ಲಿ ಅವರು ಮಾತನಾಡಿದರು.ರಾಜಕೀಯ ಲಾಭಕ್ಕಾಗಿ ನೀಚ ಕೆಲಸ ಮಾಡುವವರಿದ್ದಾರೆ, ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 5 ಸಾವಿರ ಕೋಟಿಯ ಕೆಲಸ ಮಾಡಿದ್ದಾನೆ, ಅದರ ಲೆಕ್ಕ ಕೇಳುತ್ತಾರೆ, ಮೊದಲು 2 ಸಾವಿರ ಕೋಟಿಯ ಲೆಕ್ಕವನ್ನು ಕೊಡಲಿ ಎಂದು ಸವಾಲು ಹಾಕಿದರು. ಸುಳ್ಳು ಆರೋಪ ಮಾಡಿದವರಿಗೆ, ಅಪಪ್ರಚಾರ ಮಾಡಿದವರಿಗೆ ತಕ್ಕ ಶಿಕ್ಷೆಯಾಗಬೇಕು, ನಾನು ತಪ್ಪು ಮಾಡಿಲ್ಲ, ಯಾವುದೇ ಆಮಿಷಾ ಆಕಾಂಕ್ಷೆಗಳಿಗೆ ಬಲಿಯಾಗದೆ ಪ್ರಾಮಾಣಿಕತೆಯಿಂದ ಬದುಕುತ್ತುದ್ದೇನ ಎಂದರು.ವಿಧಾನಪರಿಷತ್ತ್ ಸದಸ್ಯ ಮಂಜುನಾಥ ಭಂಡಾರಿ ಪ್ರಧಾನ ಭಾಷಣ ಮಾಡಿ ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ ಈ ಮೂರು ಕೊಡುಗೆಯನ್ನು ಕಾಂಗ್ರೇಸ್…
ಬಂಟ್ವಾಳ: ಇಲ್ಲಿನ ಪುರಸಭೆಯ ನೂತನ ಮುಖ್ಯಾಧಿಕಾರಿಯಾಗಿ ಲೀನಾ ಬ್ರಿಟ್ಟೋ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿಂದೆ ಮುಖ್ಯಾಧಿಕಾರಿಯಾಗಿ ಕರ್ತವ್ಯದ್ದಲ್ಲಿದ್ದ ಎಂ. ಆರ್. ಸ್ವಾಮಿ ಅವರು ಪುತ್ತೂರು ನಗರ ಸಭೆ ರೆವೆನ್ಯೂ ಆಫೀಸರ್ ಆಗಿ ವರ್ಗಾವಣೆಗೊಂಡಿದ್ದು ತೆರವಾದ ಸ್ಥಾನಕ್ಕೆ ಲೀನಾ ಬ್ರಿಟ್ಟೋ ಆಗಮಿಸಿದ್ದಾರೆ.ಈ ಹಿಂದೆ ಎರಡು ಬಾರಿ ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಅನುಭವ ಹೊಂದಿರುವ ಇವರ ಅವಧಿಯಲ್ಲಿ ವಿವಾದದ ಕೇಂದ್ರ ಬಿಂದುವಾಗಿ ಹಲವು ವರ್ಷಗಳಿಂದ ನಿಷ್ಪ್ರಯೋಜಕವಾಗಿದ್ದ ಕಂಚಿನಡ್ಕಪದವು ತ್ಯಾಜ್ಯ ಸಂಸ್ಕರಣ ಘಟಕದಲ್ಲಿ ತ್ಯಾಜ್ಯ ವಿಲೇವಾರಿಗೆ ಕ್ರಮ ಕೈಗೊಳ್ಳಲಾಗಿತ್ತು. ತರಕಾರಿ ತ್ಯಾಜ್ಯ ಸಹಿತ ಹಸಿ ಕಸಗಳನ್ನು ಬಂಟ್ವಾಳ ಪುರಸಭೆಯ ಹಿಂಭಾಗದಲ್ಲಿ ಗೊಬ್ಬರವನ್ನಾಗಿ ಪರಿವರ್ತಿಸುವ ಘಟಕವನ್ನು, ಎರೆಹುಳ ಗೊಬ್ಬರ ಘಟಕವನ್ನು ಆರಂಭಿಸಿ ತ್ಯಾಜ್ಯ ಸಮಸ್ಯೆಗೆ ಮುಕ್ತಿ ನೀಡಿದ್ದರು. ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸುವ ಹಿನ್ನಲೆಯಲ್ಲಿ ಸಿಸಿ ಕ್ಯಾಮರ ಅಳವಡಿಸುವ ಬಗ್ಗೆ ದಿಟ್ಟ ನಿರ್ಧಾರ ಕೈಗೊಂಡು ಯೋಜನೆ ಅನುಷ್ಠಾನಗೊಳಿಸಲಾಗಿತ್ತು. ಅದೇ ಸಂದರ್ಭದಲ್ಲಿ ಅವರು ಮಂಗಳೂರು ಮಹಾನಗರ ಪಾಲಿಕೆಗೆ ವರ್ಗಾವಣೆಗೊಂಡಿದ್ದರು. ಇದೀಗ ಪದೋನ್ನತಿಗೊಂಡು…
ಬಂಟ್ವಾಳ: ಯುವಕ ವೃಂದ ಮಂಚಿ ಕಟ್ಟೆ ಇದರ ಬೆಳ್ಳಿಹಬ್ಬ ಸಂಭ್ರಮದ ಪ್ರಯುಕ್ತ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಯುವಕ ವೃಂದದ ನೂತನ ಕಟ್ಟಡ ಉದ್ಘಾಟನ ಸಮಾರಂಭ ಮಾ. 12ರಂದು ನಡೆಯಲಿದೆ.ಬೆಳಿಗ್ಗೆ 6ಗಂಟೆಗೆ ನೂತನ ಕಟ್ಟಡದಲ್ಲಿ ಗಣಹೋಮ ನಡೆಯಲಿದೆ. ಬಳಿಕ ಮಂಚಿಕಟ್ಟೆಯ ಅಶ್ವಥ ಕಟ್ಟೆಯಲ್ಲಿ ವಿವಿಧ ಭಜನಾ ತಂಡಗಳಿಂದ ಭಜನಾ ಸಂಕೀರ್ತನೆ ನಡೆಯಲಿದೆ. ಮಿತ್ತಾಳ ಶ್ರೀ ರಾಘವ ಆಚಾರ್ ದೀಪಪ್ರಜ್ವಲಿಸುವರು, ಬೆಳಿಗ್ಗೆ 10 ರಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಪ್ರಾರಂಭಗೊಳ್ಳಲಿದೆ, 12.30ಕ್ಕೆ ಭಜನಾ ಮಂಗಲೋತ್ಸವ, ಮಹಾಮಂಗಳರಾತಿ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ೬ರಿಂದ ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. Space for paid Promotion ಸಂಜೆ 7 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು ಶಾಸಕ ರಾಜೇಶ್ ನಾಯ್ಕ್ ಅಧ್ಯಕ್ಷತೆ ವಹಿಸಲಿದ್ದಾರೆ. ಡಾ. ಎಂ. ಗೋಪಾಲ ಆಚಾರ್ ಮಂಚಿ ಹಾಗೂ ಮಿತ್ತಾಳ ರಘುನಾಥ ಆಚಾರ್ ಮಂಚಿ, ನೂತನ ಕಟ್ಟಡ ಉದ್ಘಾಟಿಸಲಿದ್ದಾರೆ. ಮೋಂತಿಮಾರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಆಡಳಿತ ಮೋಕ್ತೇಸರ…
ಬಂಟ್ವಾಳ: ಕ್ಷೇತ್ರದಲ್ಲಿ ಶಾಂತಿ, ನೆಮ್ಮದಿಯೊಂದಿಗೆ ಅಭಿವೃದ್ಧಿ ಕಾರ್ಯಗಳನ್ನು ನಡೆಸಿದ ತೃಪ್ತಿ ತನಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.ಶುಕ್ರವಾರ ಪಂಜಿಕಲ್ಲು ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸ ನೆರವೇರಿಸಿದ ಬಳಿಕ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು. ಈ ಸಂದರ್ಭ ಮಾತನಾಡಿದ ಪಂಜಿಕಲ್ಲು ಗ್ರಾಪಂ ಅಧ್ಯಕ್ಷ ಸಂಜೀವ ಪೂಜಾರಿ, ರಾಜೇಶ್ ನಾಯ್ಕ್ ಶಾಸಕರಾದ ಬಳಿಕ ೧೪ ಕೋಟಿ ರೂ.ಗೂ ಮಿಕ್ಕಿ ಅನುದಾನ ಪಂಜಿಕಲ್ಲಿಗೆ ಬಂದಿದೆ. ಸೇತುವೆ ಸಹಿತ ಕಿಂಡಿ ಅಣೆಕಟ್ಟು, ರಸ್ತೆಗಳು ಇದರಲ್ಲಿ ಸೇರಿವೆ ವಸತಿ ರಹಿತರ ಸಮಸ್ಯೆಗಳೂ ಈಡೇರಿವೆ ಎಂದರು. Promotion ಬಿಜೆಪಿ ಕ್ಷೇತ್ರ ಕೋಶಾಧಿಕಾರಿ ಪ್ರಕಾಶ್ ಅಂಚನ್ ಮಾತನಾಡಿ, ಪಕ್ಷದ ಗೆಲುವಿಗೆ ಶ್ರಮಿಸಲು ಕರೆ ನೀಡಿದರು. ಗ್ರಾಪಂ ಉಪಾಧ್ಯಕ್ಷೆ ಜಯಶ್ರೀ ಪಟ್ರಾಡಿ, ಸದಸ್ಯರಾದ ಹರೀಶ್ ಪೂಜಾರಿ ತಾಕೋಡೆ, ಬಾಲಕೃಷ್ಣ ಪೂಜಾರಿ, ಮೋಹನ್ ದಾಸ್ , ಪೂವಪ್ಪ ಮೆಂಡನ್, ಚಿತ್ರಾಕ್ಷಿ, ರೂಪ, ನಳಿನಿ, ಚಂದ್ರಾವತಿ ಶೆಟ್ಟಿ, ಶೋಭಾ, ಗೋಪಾಲ ಕುಲಾಲ್ ಮಜಲೊಡಿ, ಚಿದಾನಂದ ಕುಲಾಲ್, ಸುಜಾತ, ಪಂಜಿಕಲ್ಲು…
ಬಂಟ್ವಾಳ : ಕೂರಿಯಾಳ ಸಮಾಜ ಸೇವಾ ಸಂಘ ಇದರ 5ನೇ ವರ್ಷದ ವಾರ್ಷಿಕೋತ್ಸವವು ಶನಿವಾರ ಕೂರಿಯಾಳ ಮೇಗಿನಕೆರೆ ದೊಂಪದ ಬಲಿ ಕ್ಷೇತ್ರದಲ್ಲಿ ಸಂಜೆ ನಡೆಯಲಿದೆ.ಮುಖ್ಯ ಅತಿಥಿಗಳಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ , ಮಾಜಿ ಸಚಿವ ಬಿ.ರಮಾನಾಥ ರೈ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ, ಪ್ರಗತಿಪರ ಕೃಷಿಕ ರಘುನಾಥ ಪಯ್ಯಡೆ, ಪ್ರಗತಿಪರ ಕೃಷಿಕ ಪ್ರಸನ್ನ ಭಂಡಾರಿ ಬಳ್ಳಿ, ನಿವೃತ್ತ ಮುಖ್ಯ ಶಿಕ್ಷಕಿ ಸಿಪ್ರಿಯನ್ ಡಿಸೋಜ ಭಾಗವಹಿಸಲಿದ್ದಾರೆ. Space for paid advertisement ಸಭಾ ಕಾರ್ಯಕ್ರಮದ ಮೊದಲು ಶ್ರೀ ತುಳಸಿ ಕಲಾ ತಂಡದ ಕಲಾವಿದರಿಂದ ಹಾಸ್ಯ ಪ್ರಹಸನ ಮತ್ತು ಸಭಾ ಕಾರ್ಯಕ್ರಮದ ನಂತರ ವಿಠಲ ನಾಯಕ್ ಕಲ್ಲಡ್ಕ ಇವರಿಂದ ಗೀತಾ ಸಾಹಿತ್ಯ ಸಂಭ್ರಮ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಗುರು ಸಮಾಜ ಸೇವಾ ಸಂಘದ ಅಧ್ಯಕ್ಷ ರಾಘವ ಪೂಜಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಂಟ್ವಾಳ: ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರವ್ಯಾಪ್ತಿಯಲ್ಲಿ 14 ದಿನಗಳ ಕಾಲ ನಡೆಯಲಿರುವ ಬಂಟ್ವಾಳ ಪ್ರಜಾಧ್ವನಿ ಯಾತ್ರೆಗೆ ಪೊಳಲಿ ಸಮೀಪದ ಪುಂಚಮೆಯಲ್ಲಿ ಶುಕ್ರವಾರ ಬೆಳಿಗ್ಗೆ ಅದ್ಧೂರಿಯ ಚಾಲನೆ ನಿಡಲಾಯಿತು. ಬಂಟ್ವಾಳ ವೆಂಕಟರಮಣ ದೇವಸ್ಥಾನ, ಅಗ್ರಹಾರ ಚರ್ಚ್, ಬಂಟ್ವಾಳ ಕೆಳಗಿನ ಪೇಟೆ ಜುಮಾ ಮಸೀದಿ ಸಹಿತ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಪೂಜೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಪುಂಚಮೆ ಬಳಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಪಾರಿವಾಳಗಳನ್ನು ಹಾರಿ ಬಿಡುವ ಮೂಲಕ ಯಾತ್ರೆಗೆ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು ಬಿಜೆಪಿ ಸರ್ಕಾರ ಪ್ರತಿ ಹಂತದಲ್ಲೂ ಭ್ರಷ್ಟಾಚಾರವನ್ನು ವಿಜೃಂಭಿಸಲು ಅವಕಾಶ ನೀಡಿದ್ದು, ಬೆಲೆ ಏರಿಕೆಯಿಂದ ಜನರು ಜೀವನ ಮಾಡಲು ಅಸಾಧ್ಯ ಎನ್ನುವ ಸ್ಥಿತಿ ಎದುರಾಗಿದೆ, ಜನರನ್ನು ವ್ಯವಸ್ಥಿತವಾಗಿ ಮೋಸ ಮಾಡುವ ಕೆಲಸ ಬಿಜೆಪಿಯಿಂದ ನಡೆಯುತ್ತಿದ್ದು, ಬಿಜೆಪಿ ಸುಳ್ಳಿನ ಸರಕಾರ ಎಂದವರು ಆರೋಪಿಸಿದರು. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಅಭಿವೃದ್ಧಿಗಾಗಿ ಕಾಮಗಾರಿ ನಡೆಯುತ್ತಿತ್ತು,…
ಬಂಟ್ವಾಳ: ತಾಲೂಕು ಕಚೇರಿ ಮುಂಭಾಗ 400ಕೆವಿ ವಿದ್ಯುತ್ ಮಾರ್ಗ ವಿರೋಧಿಸಿ ರೈತಸಂಘ ಆಯೋಜಿಸಿದ್ದ ಪ್ರತಿಭಟನೆಗೆ ಬಂದ ವೇಳೆ ಬಿ.ಸಿ.ರೋಡಿನ ರೋಟರಿ ಕ್ಲಬ್ ಲಯನ್ಸ್ ಭವನದ ಬಳಿ ನಿಲ್ಲಿಸಿದ್ದ ಆಟೊವನ್ನೇ ಕಳವು ಮಾಡಿದ ಘಟನೆ ನಡೆದಿದೆ.ಈ ಕುರಿತು ವಿಟ್ಲದ ಯೋಗೀಶ್ ಕುಮಾರ್ ಎಂಬವರು ಬಂಟ್ವಾಳ ನಗರ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಬೆಳಗ್ಗೆ 10.30ರ ವೇಳೆ ಬಿ ಸಿ ರೋಡಿನ ಲಯನ್ಸ್ ಕ್ಲಬ್ ಭವನದ ಹತ್ತಿರ ತಮ್ಮ ಅಟೋ ರಿಕ್ಷಾವನ್ನು ನಿಲ್ಲಿಸಿ, ರೈತರ ಪ್ರತಿಭಟನೆಗೆ ತೆರಳಿದ್ದಾರೆ. ಪ್ರತಿಭಟನೆ ಮುಗಿದ ನಂತರ ಮಧ್ಯಾಹ್ನ 3.00 ಗಂಟೆಗೆ ಪುನಃ ಅಲ್ಲಿಗೆ ಹೋಗಿ ನೋಡಲಾಗಿ ಅಟೋ ರಿಕ್ಷಾ ನಿಲ್ಲಿಸಿದಲ್ಲಿ ಇರದೇ ಇದ್ದು, ಅಲ್ಲೆ ಸುತ್ತ ಮುತ್ತ ಹುಡುಕಲಾಗಿ ಸಿಗದೇ ಇದ್ದು ಯಾರೋ ಕಳ್ಳರು ಅಟೋ ರಿಕ್ಷಾ ಕಳವು ಮಾಡಿಕೊಂಡು ಹೋಗಿದ್ದಾಗಿ ಸಂಶಯಿಸಲಾಗಿದೆ. promotion
ಬಂಟ್ವಾಳ: ಅನಂತಾಡಿ ಗ್ರಾ.ಪಂ.ಬಿಜೆಪಿಯ ಬಲಿಷ್ಠ ಶಕ್ತಿಕೇಂದ್ರವಾಗಿದ್ದು, ಅದಕ್ಕೆ ಪೂರಕವಾಗಿ ಹೆಚ್ಚಿನ ಅನುದಾನಗಳ ಮೂಲಕ ಅಭಿವೃದ್ಧಿ ಕಾರ್ಯಗಳು ಅನುಷ್ಠಾನಗೊಂಡಿದೆ. ಜತೆಗೆ ಕೋಟ್ಯಂತರ ರೂಪಾಯಿ ಅನುದಾನ ನೇರವಾಗಿ ಫಲಾನುಭವಿಗಳ ಖಾತೆಗೆ ಬಂದಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಹೇಳಿದರು. ಅವರು ಅನಂತಾಡಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಸುಮಾರು ೧.೫೦ ಕೋ.ರೂ.ಗಳ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ- ಶಿಲಾನ್ಯಾಸ ನೆರವೇರಿಸಿ ಬಳಿಕ ಮಂದಿರದಲ್ಲಿ ನಡೆದ ಮಾತನಾಡಿದರು. ಯಾವುದೇ ಚುನಾವಣೆಯನ್ನು ಅತಿಯಾದ ಆತ್ಮವಿಶ್ವಾಸದಿಂದ ಕೊಂಚ ಲೈಟಾಗಿ ಪರಿಗಣಿಸಿದರೂ, ದೊಡ್ಡ ಹೊಡೆತ ಸಿಗುತ್ತದೆ. ಅಭಿವೃದ್ಧಿಯ ಜತೆಗೆ ಪಕ್ಷ ಸಂಘಟನೆಯ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ. ನಮ್ಮ ಅಭ್ಯರ್ಥಿ ಸೋತಾಗ ಎಷ್ಟು ಹಿನ್ನಡೆಯಾಗುತ್ತದೆ ವಿಮರ್ಶೆ ಮಾಡಬೇಕು.ವೇದಿಕೆಯಲ್ಲಿ ಅನಂತಾಡಿ ಗ್ರಾ.ಪಂ.ಅಧ್ಯಕ್ಷ ಗಣೇಶ್ ಪೂಜಾರಿ, ನೆಟ್ಲಮುಡ್ನೂರು ಗ್ರಾ.ಪಂ.ಅಧ್ಯಕ್ಷ ಸತೀಶ್ ಪೂಜಾರಿ, ಉಪಾಧ್ಯಕ್ಷೆ ಶಕೀಲ ಕೃಷ್ಣ ಪೂಜಾರಿ, ಸದಸ್ಯೆ ಸುಜಾತ, ನೇರಳಕಟ್ಟೆ ಸಿಎ ಬ್ಯಾಂಕ್ ಅಧ್ಯಕ್ಷೆ ಪುಷ್ಪರಾಜ್ ಚೌಟ, ಉಪಾಧ್ಯಕ್ಷ ತನಿಯಪ್ಪ ಗೌಡ, ಮಹಾಶಕ್ತಿ ಕೇಂದ್ರದ ಅಧ್ಯಕ್ಷೆ ಸನತ್ ಕುಮಾರ್ ರೈ, ತಾ.ಪಂ.ಮಾಜಿ ಸದಸ್ಯೆ ಗೀತಾ…
ಬಂಟ್ವಾಳ: ಜೆಸಿಐ ಬಂಟ್ವಾಳದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಬಂಟ್ವಾಳದ ವಾಸುದೇವ ಟವರ್ಸ್ನಲ್ಲಿರುವ ಕಿಯೋನಿಕ್ಸ್ ಸೆಂಟರ್ನಲ್ಲಿ ಆಚರಿಸಲಾಯಿತು. ಜೆಸಿಐ ಬಂಟ್ವಾಳದ ಅಧ್ಯಕ್ಷ ರಾಜೇಂದ್ರ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕಿಯೋನಿಕ್ಸ್ ಸೆಂಟರ್ನ ಗೀತಾ ಜೆ. ಜೈನ್ ಭಾಗವಹಿಸಿದ್ದರು. ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಭಾರತಿ ವಸಂತ್ ಹಾಗೂ ಉದ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪವಿತ್ರ ಸುರೇಶ್ ಅವರನ್ನು ಸನ್ಮಾನಿಸಲಾಯಿತು. ಮಹಿಳಾ ಕಾನೂನು ಮತ್ತು ಹಕ್ಕುಗಳ ಬಗ್ಗೆ ವಕೀಲೆ ಶೈಲಜಾ ರಾಜೇಶ್ ತರಬೇತಿ ನೀಡಿದರು. ವೇದಿಕೆಯಲ್ಲಿ ಜೆಸಿಐ ಬಂಟ್ವಾಳದ ಉಪಾಧ್ಯಕ್ಷ ಕಿಶೋರ್ ಕುಮಾರ್ ಆಚಾರ್ಯ, ಕಾರ್ಯದರ್ಶಿ ರಶ್ಮಿ ಶೆಟ್ಟಿ, ಕಾರ್ಯಕ್ರಮ ಸಂಯೋಜಕಿ ವಿಮಲ ಶ್ರೀನಿವಾಸ್, ಪೂರ್ವಾಧ್ಯಕ್ಷರಾಧ ಯತೀಶ್ ಕರ್ಕೆರಾ, ಸದಾನಂದ ಬಂಗೇರಾ, ಸಂತೋಷ್ ಜೈನ್ ಸದಸ್ಯ ಉಮೇಶ್ ಪೂಜಾರಿ ಉಪಸ್ಥಿತರಿದ್ದರು. Promotion








