Author: admin
https://youtu.be/ov5MjhmXUvI ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನ ವತಿಯಿಂದ ಕ್ಷಯ ರೋಗಿಗಳಿಗೆ ಆಹಾರ ಧವಸ ಧಾನ್ಯ ವಿತರಣ ಕಾರ್ಯಕ್ರಮ ಬಂಟ್ವಾಳ: ಕೇಂದ್ರ ಸರಕಾರದ ನಿಕ್ಷಯ ಮಿತ್ರ ಯೋಜನೆಯಡಿ ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನ ವತಿಯಿಂದ ಕ್ಷಯ ರೋಗಿಗಳಿಗೆ ಆಹಾರ ಧವಸ ಧಾನ್ಯ ವಿತರಣ ಕಾರ್ಯಕ್ರಮ ಸೋಮವಾರ ಸೇವಾಂಜಲಿ ಸಭಾಗೃಹದಲ್ಲಿ ನಡೆಯಿತು.ರೋಟರಿ ಕ್ಲಬ್ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಕ್ಷಯ ರೋಗ ನಿವಾರಣೆಗೆ ಔಷಧಿಯಷ್ಟೇ ಪೌಷ್ಟಿಕಾಹಾರ ಸೇವೆನೆಯೂ ಮುಖ್ಯ. ಆದ್ದರಿಂದ ಸೇವಾಂಜಲಿ ಪ್ರತಿಷ್ಠಾನವು ತಾಲೂಕಿನ ಕ್ಷಯ ರೋಗಿಗಳನ್ನು ಗುರುತಿಸಿ ದೊಡ್ಡಮಟ್ಟದಲ್ಲಿ ಆಹಾರ ಧವಸ ಧಾನ್ಯ ವಿತರಿಸುವ ಕಾರ್ಯ ಹಮ್ಮಿಕೊಂಡಿದೆ ಎಂದರು. ಕಣ್ಣಿಗೆ ಕಾಣದ ದೇವರಿಗೆ ಪೂಜೆ, ಖರ್ಚು ಮಾಡುವ ಬದಲು ಸಂಕಷ್ಟದಲ್ಲಿರುವವರಿಗೆ, ನೊಂದವರಿಗೆ ಅಪೇಕ್ಷಿಸಿದನ್ನು ನೀಡುವ ಮೂಲಕ ದೇವರನ್ನು ಕಾಣುವುದು ಶ್ರೇಷ್ಟ ಗುಣ.ಇಂತಹ ಮಹಾನ್ ಕಾರ್ಯವನ್ನು ಸೇವಾಂಜಲಿ ಪ್ರತಿಷ್ಠಾನ ನಿರಂತರವಾಗಿ ಮಾಡಿಕೊಂಡು ಬರುತ್ತಿದೆ ಎಂದರು.ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ಮಾತನಾಡಿ ಆಶಾಕಾರ್ಯಕರ್ತರು ತಾಯಿಯ ಸ್ಥಾನದಲ್ಲಿ ನಿಂತು…
ಬಂಟ್ವಾಳ : ಬದ್ರಿಯಾ ಜುಮಾ ಮಸೀದಿ ಹಾಗೂ ಬದ್ರಿಯಾ ಯಂಗ್ ಮೆನ್ಸ್ ಇರ್ವತ್ತೂರು ಪದವು ಇದರ ಆಶ್ರಯದಲ್ಲಿ ಅಂತರ್ ರಾಜ್ಯ ಮಟ್ಟದ ದಫ್ ಸ್ಪರ್ಧಾ ಕಾರ್ಯಕ್ರಮವು ಮಾರ್ಚ್ 11 ರಂದು ಮಗ್ರಿಬ್ ಬಳಿಕ ಇಲ್ಲಿನ ತಾಜುಲ್ ಉಲಮಾ-ಶಂಸುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಮಸೀದಿ ಅಧ್ಯಕ್ಷ ಎಸ್.ಪಿ. ಮುಹಮ್ಮದ್ ರಫೀಕ್ ಅಧ್ಯಕ್ಷತೆ ವಹಿಸಲಿದ್ದು, ಖತೀಬ್ ಉಮರ್ ಮದನಿ ಉದ್ಘಾಟಿಸುವರು. ದ.ಕ. ಮತ್ತು ಉಡುಪಿ ಜಿಲ್ಲಾ ದಫ್ ಎಸೋಸಿಯೇಶನ್ ಅಧ್ಯಕ್ಷ ಅಬ್ದುಲ್ ಲತೀಫ್ ನೇರಳಕಟ್ಟೆ, ಸದಸ್ಯರಾದ ಹಂಝ ಬಸ್ತಿಕೋಡಿ, ಇಬ್ರಾಹಿಂ ಕೈಲಾರ್, ಪ್ರಮುಖರಾದ ರಫೀಕ್ ಮದನಿ, ಸಿದ್ದೀಕ್ ಸಖಾಫಿ, ಹಾಜಿ ಯೂಸುಫ್ ಮೂರ್ಜೆ, ಪಿ ಕೆ ಇದ್ದಿನಬ್ಬ ಇರ್ವತ್ತೂರುಪದವು, ಅಬ್ದುಲ್ ಲತೀಫ್ ಕಲಾಬಾಗಿಲು, ಅಬೂಬಕ್ಕರ್ ಟಿ.ಎಸ್.ಎನ್, ಸಾಗರ್ ಮುಹಮ್ಮದ್ ಮದ್ದಡ್ಕ, ರಹ್ಮತುಲ್ಲಾ ಸಾಹೇಬ್, ಅಬ್ದುಲ್ ರಝಾಕ್ ಮಾವಿನಕಟ್ಟೆ, ಅಬ್ದುಲ್ ರಶೀದ್ ನೇರಳಕಟ್ಟೆ, ಅಬ್ದುಲ್ ನಝೀರ್ ಸಾಹೇಬ್, ಮೂಸಾ ನೈನಾಡ್, ಪಿ.ಎಚ್. ಇಸ್ಮಾಯಿಲ್ ಝಕೀರ್, ಶೇಖ್ ರಹ್ಮತುಲ್ಲಾ ಕಲಾಬಾಗಿಲು, ಮೊಯಿದಿನ್ ಕಟ್ಟದಪಡ್ಪು, ಮುಹಮ್ಮದ್ ರಫೀಕ್, ಮುಹಮ್ಮದ್…
ಬಂಟ್ವಾಳ: ಕೂಟದಲ್ಲಿ ಭಾಗವಹಿಸಿದ ಕೋಣಗಳುಕನೆಹಲಗೆ: 4 ಜೊತೆಅಡ್ಡಹಲಗೆ: 7 ಜೊತೆಹಗ್ಗ ಹಿರಿಯ: 21 ಜೊತೆನೇಗಿಲು ಹಿರಿಯ: 27 ಜೊತೆಹಗ್ಗ ಕಿರಿಯ: 25 ಜೊತೆನೇಗಿಲು ಕಿರಿಯ: 105 ಜೊತೆಒಟ್ಟು ಕೋಣಗಳ ಸಂಖ್ಯೆ: 189 ಜೊತೆಕನೆಹಲಗೆ ವಿಭಾಗದಲ್ಲಿ ಪ್ರಥಮ ಬೇಲಾಡಿ ಬಾವ ಅಶೋಕ್ ಶೆಟ್ಟಿ, ಹಲಗೆ ಮುಟ್ಟಿದವರು ತೆಕ್ಕಟ್ಟೆ ಸುಧೀರ್ ದೇವಾಡಿಗದ್ವಿತೀಯ ಅಲ್ಲಿಪಾದೆ ಕೆಳಗಿನಮನೆ ವಿನ್ಸೆಂಟ್ ಪಿಂಟೋಹಲಗೆ ಮುಟ್ಟಿದವರು ಬೈಂದೂರು ಮಹೇಶ್ ಪೂಜಾರಿಅಡ್ಡ ಹಲಗೆಯಲ್ಲಿ ಪ್ರಥಮ ಅಲ್ಲಿಪಾದೆ ಕೆಳಗಿನಮನೆ ವಿನ್ಸೆಂಟ್ ಪಿಂಟೋ, ಹಲಗೆ ಮುಟ್ಟಿದವರು ಸಾವ್ಯ ಗಂಗಯ್ಯ ಪೂಜಾರಿ,ದ್ವಿತೀಯ ಮಾನೆಲ್ ಪುರಲ್ದಪ್ಪೆ ಮಣ್ಣ್ ದ ಜೋಕುಲ್ ಜವನೆರ್ ಹಲಗೆ ಮುಟ್ಟಿದವರು ಬೈಂದೂರು ಹೊಸಕೋಟೆ ಮಹೇಶ್ ಪೂಜಾರಿ ಹಗ್ಗ ಹಿರಿಯ ವಿಭಾಗದಲ್ಲಿ ಪ್ರಥಮ ನಂದಳಿಕೆ ಶ್ರೀಕಾಂತ್ ಭಟ್ “ಬಿ”, ಓಡಿಸಿದವರು ಬಂಬ್ರಾಣ ಬೈಲು ವಂದಿತ್ ಶೆಟ್ಟಿ, ದ್ವಿತೀಯ ಕೊಳಚ್ಚೂರು ಕೊಂಡೆಟ್ಟು ಸುಕುಮಾರ್ ಶೆಟ್ಟಿ “ಬಿ” ಓಡಿಸಿದವರು ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ, ಹಗ್ಗ ಕಿರಿಯ ವಿಭಾಗದಲ್ಲಿ ಪ್ರಥಮ ಕಾವಲು ಕಟ್ಟೆ ಕರಂಬಾರು ಬೆಟ್ಟು ಹರೀಶ್ ದಾಸ್ಓಡಿಸಿದವರು:…
ಬೆಂಗಳೂರಿನಲ್ಲಿ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಸ್ನೇಹ ಸಂಗಮ ಕಾರ್ಯಕ್ರಮ ಬಂಟ್ವಾಳ: ಚುನಾವಣೆಯಲ್ಲಿ ಮತ ಹಾಕಿದ ಮತದಾರರು ನೀಡಿದ ಅವಕಾಶದ ಫಲವಾಗಿ ಬಂಟ್ವಾಳ ಕ್ಷೇತ್ರದಲ್ಲಿ ಕೆಲಸ ಮಾಡಲು ಸಾಧ್ಯವಾಗಿದ್ದು, ಶಾಸಕತನದ ಅವಧಿಯಲ್ಲಿ ತನ್ನ ಜವಾಬ್ದಾರಿ ನಿರ್ವಹಿಸಿದ ತೃಪ್ತಿ ಇದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಹೇಳಿದರು.ಅವರು ಬೆಂಗಳೂರಿನ ಜಯಮಹಲ್ ಪ್ಯಾಲೇಸ್ ನಲ್ಲಿ ಬೆಂಗಳೂರಿನಲ್ಲಿ ನೆಲೆಸಿರುವ ಬಂಟ್ವಾಳದ ಬಂಧುಗಳಿಗೆ ಆಯೋಜಿಸಿರುವ ಸ್ನೇಹ ಸಂಗಮ ಕಾರ್ಯಕ್ರಮದಲ್ಲಿ ಮಾತನಾಡಿದರು. ಮೊದಲ ಚುನಾವಣೆಯಲ್ಲಿ ವಿರೋಧಿಗಳು ಸಾಕಷ್ಟು ಟೀಕೆ ಮಾಡಿದ್ದು, ಹರಕೆಯ ಕುರಿಯನ್ನು ಬಂಟ್ವಾಳದಲ್ಲಿ ನಿಲ್ಲಿಸಿದ್ದಾರೆ ಎಂದು ಗೇಲಿ ಮಾಡಿದರು. ಆದರೆ ೨೦೧೮ರ ಚುನಾವಣೆಯಲ್ಲಿ ಬಿಜೆಪಿ ಕಾರ್ಯಕರ್ತರು ಅದಕ್ಕೆ ತಕ್ಕ ಉತ್ತರ ನೀಡುವ ಕಾರ್ಯ ಮಾಡಿದರು. ಶಾಂತಿಯ ಬಂಟ್ವಾಳ ನಿರ್ಮಾಣ ಮಾಡಿದ ತೃಪ್ತಿ ಇದ್ದು, ಜನರ ನೀಡಿದ ಪ್ರೀತಿಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಬಿಜೆಪಿಯ ಪಕ್ಷವನ್ನು ಇನ್ನಷ್ಟು ಗಟ್ಟಿ ಮಾಡುವ ಕಾರ್ಯವನ್ನು ಜತೆಯಾಗಿ ಮಾಡೋಣ. ಈ ಪ್ರೀತಿ ವಿಶ್ವಾಸವನ್ನು ಹೀಗೇ ಇರಿಸೋಣ ಎಂದರು.ಸಮಾರಂಭವನ್ನು ಮಾಜಿ ಶಾಸಕ…
ಬಂಟ್ವಾಳ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಇಂದು ಆದಿತ್ಯವಾರ ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿಆಚರಣೆಯನ್ನು ಆಚರಿಸಲಾಯಿತು.ಚುನಾವಣೆ ಶಾಖೆಯ ವಿಷಯ ನಿರ್ವಾಹಕ ನಾರಾಯಣ ಗೌಡಅವರು ದೀಪ ಬೆಳಗಿಸಿಶಾಂತಿ, ಸಹಬಾಳ್ವೆ ಮತ್ತು ಸಮಾನತೆಯ ಮಹತ್ವವನ್ನು ರೇಣುಕಾಚಾರ್ಯರು ಬಹಳಷ್ಟು ಹಿಂದೆಯೇ ಅರಿತಿದ್ದರು.ಭೇಧ ಭಾವಗಳನ್ನು ತೊಡೆದು ಹಾಕಿ ಸಮಾಜದಲ್ಲಿ ಸಮಾನತೆಯನ್ನು ಸಾರಿದ ರೇಣುಕಾಚಾರ್ಯರರ ತತ್ವಗಳನ್ನು ಪಾಲಿಸಿದರೆ ಶಾಂತಿ ನೆಲೆಸುತ್ತದೆ ಎಂದರು. ಈ ಸಂದರ್ಭದಲ್ಲಿ ತಾಲೂಕು ಕಚೇರಿ ಸಿಬ್ಬಂದಿಗಳು,ಗ್ರಾಮ ಆಡಳಿತ ಆಧಿಕಾರಿಗಳು,ಗ್ರಾಮ ಸಹಾಯಕರು ಉಪಸ್ಥಿತರಿದ್ದರು.ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್ಸ್ವಾಗತಿಸಿ ವಂದಿಸಿದರು. promotion
ಬಂಟ್ವಾಳ: ಕಂಬಳ ಹಾಗೂ ಯಕ್ಷಗಾನ ನಮ್ಮ ಜಿಲ್ಲೆಯ ಜಾನಪದ ಕ್ಷೇತ್ರದ ಕಣ್ಣುಗಳು ಅದನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ವಿಧಾನಸಭೆಯ ವಿರೋದ ಪಕ್ಷದ ಉಪನಾಯಕ ಯು.ಟಿ.ಖಾದರ್ ಹೇಳಿದರು. ಮಾಝಿ ಸಚಿವ ಬಿ. ರಮನಾಥ ರೈ ಗೌರವಾಧ್ಯಕ್ಷತೆಯಲ್ಲಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಾಜಿ ಸದಸ್ಯ ಪಿಯೂಸ್ ಎಲ್.ರೋಡ್ರಿಗಸ್ ಅವರ ಅಧ್ಯಕ್ಷತೆಯಲ್ಲಿ ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಕೂಡಿಬೈಲುವಿಲ್ಲಿ ಬಂಟ್ವಾಳ ಕಂಬಳ ಹೆಸರಿನಲ್ಲಿ ನಡೆಯುತ್ತಿರುವ 12ನೇ ವರ್ಷದ ಮೂಡೂರು ಪಡೂರು ಜೊಡುಕರೆ ಬಯಲು ಕಂಬಳದ ಪ್ರಯುಕ್ಯ ಶನಿವಾರ ಸಂಜೆ ನಡೆದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮೂಡೂರು ಪಡೂರು ಕಂಬಳ ಆಯೋಜಿಸುವ ಮೂಲಕ ತುಳುನಾಡಿನ ಕಂಬಳ ಸಂಸ್ಕೃತಿಯನ್ನು ಯುವಕರಿಗೆ ಪರಿಚಯಿಸುವ ಕಾರ್ಯ ಬಿ. ರಮನಾಥ ರೈ ಅವರಿಂದ ಆಗುತ್ತಿದೆ, ಕಂಬಳ ಕ್ರೀಡೆಯನ್ನು ನಿಲ್ಲಿಸುವಂತೆ ಸರ್ವೋಚ್ಛ ನ್ಯಾಯಾಲಯ ಆದೇಶ ನೀಡಿದಾಗ ಅಂದು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಬಿ. ರಮಾನಾಥ ರೈ ಹಾಗೂ ಶಾಸಕರು ಸರ್ಕಾರದ ಮೂಲಕ ನ್ಯಾಯಲಯಕ್ಕೆ ಮನವರಿಕೆ ಮಾಡಿ ಕಂಬಳ ಪುನಾರಂಭಗೊಳ್ಳಲು…
ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಕೆ ಎಂ ಸಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ 121ನೇ ರಕ್ತದಾನ ಶಿಬಿರ ಭಾನುವಾರ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ನಡೆಯಿತು. ಫರಂಗಿಪೇಟೆ ಸೇವಾಂಜಲಿಯಲ್ಲಿ 121 ನೇ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ರೋಟರಿ ಜಿಲ್ಲಾ ಗವರ್ನರ್ ಎನ್. ಪ್ರಕಾಶ್ ಕಾರಂತ್ ಉದ್ಘಾಟಿಸಿದರು. ಅವರು ಮಾತನಾಡಿ ದೇವರ ಈ ಸಾಮ್ರಾಜ್ಯದಲ್ಲಿ ದೀನ, ದುರ್ಬಲರ ಸೇವೆ ಮಾಡುವುದೇ ನಾವು ದೇವರಿಗೆ ಸಲ್ಲಿಸುವ ತೆರಿಗೆಯಾಗಿದೆ. ಸೇವಾಂಜಲಿ ಸಂಸ್ಥೆ ಈ ಭಾಗದಲ್ಲಿ ಮುಂಚೂಣಿಯಲ್ಲಿ ನಿಂತು ಜನರ ಪರಮೋಚ್ಛ ಸೇವೆ ಮಾಡುತ್ತಿದೆ ಎಂದು ತಿಳಿಸಿದರು. ನಿರಂತರ ರಕ್ತದಾನ ಶಿಬಿರ ಆಯೋಜಿಸುವ ಮೂಲಕ ಪ್ರೇರೆಪಣೆ ನೀಡುವ ಕಾರ್ಯ ಕೃಷ್ಣ ಕುಮಾರ್ ಪೂಂಜ ಅವರ ಮೂಲಕ ನಡೆಯುತ್ತಿದೆ, ಇಂದು ಹೊಸ ಆವಿಷ್ಕಾರದ ಮೂಲಕ ಒಂದು ಯುನಿಟ್ ರಕ್ತದಾನ ಮಾಡುವುದರಿಂದ 4 ಮಂದಿಯ ಜೀವ ಉಳಿಸಬಹುದಾಗಿದೆ ಎಂದರು.ಮೊಡಮಕಾಪು ದೀಪಿಕಾ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಮಹಾಬಲೇಶ್ವರ ಹೆಬ್ಬಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ರಕ್ತದಾನ ಶಿಬಿರ…
ಬಂಟ್ವಾಳ: ರೈತರ ವಿರೋಧದ ನಡುವೆಯೂ ಕೃಷಿ ಭೂಮಿಯನ್ನು ನಾಶಪಡಿಸಿ, ರೈತರ ಹಿತಾಸಕ್ತಿ ಕಾಪಾಡದೆ ಉಡುಪಿ – ಕಾಸರಗೋಡು 400 ಕೆವಿ ವಿದ್ಯುತ್ ಪ್ರಸರಣ ಮಾರ್ಗ ಹಾದುಹೋಗಲು ಶತಾಯ ಗತಯ ಪ್ರಯತ್ನ ಪಡುತ್ತಿರುವ ಕಂಪೆನಿ ಹಾಗೂ ಜಿಲ್ಲಾಡಳಿತದ ವಿರುದ್ಧ ಮಾ. 8ರಂದು ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ನೇತೃತ್ವದಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರ ಮುಂದಾಳತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಉಡುಪಿ ಕಾಸರಗೋಡು 400 ಕೆ.ವಿ. ವಿದ್ಯುತ್ಪ್ರಸರಣ ಮಾರ್ಗ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ರಾಜೀವ ಗೌಡ ಕೋಚೋಡಿ ತಿಳಿಸಿದರು. ಬಿ.ಸಿ.ರೋಡಿನ ಪ್ರೆಸ್ಕ್ಲಬ್ನಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಅವರು ಮಾಹಿತಿ ನೀಡಿ ದ.ಕ. ಜಿಲ್ಲೆಯಲ್ಲಿ 400 ಕೆ.ವಿ. ಮಾರ್ಗ ಹಾದು ಹೋಗುವ ದಾರಿಯ ಮಾಹಿತಿಯನ್ನು ನೀಡದೆ ಸ್ಯಾಟಲೈಟ್ ಹಾಗೂ ಹೆಲಿಕಾಪ್ಟರ್ ಬಳಸಿ ಸರ್ವೆ ಕಾರ್ಯವನ್ನು ಕಂಪೆನಿ ಮಾಡಿದ್ದು ಜಿಲ್ಲಾಧಿಕಾರಿಗಳು ಒಪ್ಪಿಗೆ ನೀಡಲು ಮುಂದಾಗಿದ್ದಾರೆ. ಜಿಲ್ಲೆಯಲ್ಲಿ ಭೂಸುಧಾರಣೆ ಕಾಯ್ದೆ ಮೂಲಕ ರೈತರಿಗೆ ಸಿಕ್ಕ…
ಬಂಟ್ವಾಳ: ತಾಲೂಕಿನ ತುಂಬೆ ಗ್ರಾಮದಲ್ಲಿರುವ ಮಂಗಳೂರಿಗೆ ನೀರು ಸರಬರಾಜಾಗುವ ಶುದೀಕರಣ ಘಟಕದಿಂದ ಹೊರಚೆಲ್ಲುವ ಕಲ್ಮಶ ನೀರು ಹರಿದು ಸ್ಥಳೀಯ ರೈತರಾದ ದಿಲೀಪ್ ರೈ, ಸಂಜೀವ ಪೂಜಾರಿ, ಶೇಖರ್ ಪೂಜಾರಿ ಎಂಬವರ ಕೃಷಿ ನಾಶವಾಗಿದ್ದು ಈ ಬಗ್ಗೆ ಮಂಗಳೂರು ಮಹಾನಗರ ಪಾಲಿಕೆ ಹಾಗೂ ದ.ಕ. ಜಿಲ್ಲಾಧಿಕಾರಿಯವರಿಗೆ ಮನವಿ ಮಾಡಿಕೊಂಡರೂ ಪ್ರಯೋಜನವಾಗದೇ ಇದ್ದಾಗ ೨೦೧೫ರಲ್ಲಿ ಕರ್ನಾಟಕ ಉಚ್ಛನ್ಯಾಯಾಲಯದಲ್ಲಿ ದಾವೆ ಹೂಡಿದ ಪರಿಣಾಮ ಬಳಿಕ ಪರಿಹಾರ ಘೋಷಣೆಯಾಯಿತು. ಅದೇ ಸಂದರ್ಭ ನ್ಯಾಯಾಲಯವು ಭೂಮಿಯನ್ನು ಯಥಾಸ್ಥಿತಿಗೆ ತರುವಂತೆ ಆದೇಶಿಸಿದ್ದರೂ ಮಂಗಳೂರು ಮಹಾನಗರ ಪಾಲಿಕೆ ಆದೇಶ ಪಾಲನೆ ಮಾಡದೆ ನ್ಯಾಯಾಂಗ ನಿಂದನೆ ಮಾಡಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ರಾಜ್ಯ ಕಾರ್ಯದರ್ಶಿ ಮನೋಹರ ಶೆಟ್ಟಿ ನಡಿಕಂಬಳಗುತ್ತು ಆರೋಪಿಸಿದರು. ಈ ಬಗ್ಗೆ ರಾಜ್ಯ ಉಚ್ಛನ್ಯಾಯಾಲಯಕ್ಕೆ ಮತ್ತೊಂದು ಅಪೀಲು ಸಲ್ಲಿಸಲಾಗಿದೆ ಎಂದು ಸುದಿಗೋಷ್ಟಿಯಲ್ಲಿ ತಿಳಿಸಿದರು. ತುಂಬೆಯ ಸಂತ್ರಸ್ತ ರೈತರಿಗೆ ಪರಿಹಾರ ನೀಡಲು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಆಗ್ರಹ ತುಂಬೆ ವೆಂಟೆಡ್ ಡ್ಯಾಂನಿಂದ ಹೊರ…
https://youtu.be/wV74isvO_iI ನಾವೂರಿನ ಕೂಡಿಬೈಲುವಿನಲ್ಲಿ ಬಂಟ್ವಾಳ ಕಂಬಳ (ಮೂಡೂರು-ಪಡೂರು)ಕ್ಕೆ ಅದ್ಧೂರಿ ಚಾಲನೆ ಬಂಟ್ವಾಳ: ತಾಲೂಕಿನ ನಾವೂರು ಗ್ರಾಮದ ಕೂಡಿಬೈಲುವಿಲ್ಲಿ ಬಂಟ್ವಾಳ ಕಂಬಳ ಹೆಸರಿನಲ್ಲಿ ನಡೆಯುತ್ತಿರುವ 12ನೇ ವರ್ಷದ ಮೂಡೂರು ಪಡೂರು ಜೊಡುಕರೆ ಬಯಲು ಕಂಬಳಕ್ಕೆ ಮಾಜಿ ಸಚಿವ, ಕಂಬಳ ಸಮಿತಿಯ ಗೌರವಾಧ್ಯಕ್ಷ ಬಿ.ರಮಾನಾಥ ರೈ ಶನಿವಾರ ಬೆಳಿಗ್ಗೆ ಅದ್ದೂರಿಯ ಚಾಲನೆ ನೀಡಿದರು.ಬಳಿಕ ನಡೆದ ಸಭಾಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಯಾವುದೇ ಸಾಮಾಜಿಕ ಕಾರ್ಯಕ್ರಮ ಎಲ್ಲಾ ವರ್ಗದ ಜನರನ್ನು ಕೈ ಬೀಸಿ ಕರೆಯುವಂತಿರಬೇಕು, ಆ ನಿಟ್ಟಿನಲ್ಲಿ ಮೂಡುರು ಪಡೂರು ಕಂಬಳ ಎಲ್ಲಾ ವರ್ಗದ ಜನರನ್ನು ಸೇರಿಸಿಕೊಂಡು ನಡೆಯುತ್ತಿರುವುದು ಗಮನಾರ್ಹ. ಕೂಡಿಬೈಲಿನಲ್ಲಿ ಕೂಡಿ ಬಾಳುವ ಎನ್ನುವ ಸಂದೇಶವನ್ನು ನೀಡುವ ಮೂಲಕ ಈ ಕಂಬಳ ನಡೆಯುತ್ತಿದೆ ಎಂದರು. ಅಲ್ಲಿಪಾದೆ ಸಂತ ಅಂಥೋನಿ ಚರ್ಚ್ ಧರ್ಮಗುರು ವಂದನೀಯ ಫೆಡ್ರಿಕ್ ಮೊಂತೆರೋ ಅವರು ದೀಪ ಪ್ರಜ್ವಲಿಸಿ ಆಶೀರ್ವಚನ ನೀಡಿ ಜಾತಿ ಧರ್ಮದ ಚೌಕಟ್ಟನ್ನು ಮೀರಿ ಎಲ್ಲಾ ಸಮುದಾಯದ ಜನರು ಬರುವ ಕಂಬಳ ಮೂಡುರು ಪಡೂರು ಕಂಬಳ. ಕಂಬಳ ಸಮಿತಿ…








