Author: admin

https://youtu.be/NsXpxiugEpk ಸಿದ್ದಕಟ್ಟೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಬಂಟ್ವಾಳ: ಸಮೃದ್ಧಿ ಚಾರಿಟೇಬಲ್ ಟ್ರಸ್ಟ್ ಜೋಡುಮಾರ್ಗ, ಸಾರ್ವಜನಿಕ ಶ್ರೀ ಶಾರದೋತ್ಸವ ಆಚರಣಾ ಸಮಿತಿ ಸಿದ್ದಕಟ್ಟೆ, ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಸಿದ್ದಕಟ್ಟೆ ಹಾಗೂ ಜಸ್ಟೀಸ್ ಕೆ.ಎಸ್. ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ಇವರ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಸಿದ್ದಕಟ್ಟೆಯ ಹರ್ಷಾಲಿ ಸಭಾಂಗಣದಲ್ಲಿ ಭಾನುವಾರ ನಡೆಯಿತು.ಟ್ರಸ್ಟ್ ಅಧ್ಯಕ್ಷ ರಮೇಶ್ ನಾಯಕ್ ರಾಯಿ ಕಾರ್ಯಕ್ರಮದ‌ ಅಧ್ಯಕ್ಷತೆ ವಹಿಸಿ ಮಾತನಾಡಿ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಮಾರ್ಗದರ್ಶನದಂತೆ ಸಮೃದ್ಧಿ ಚಾರಿಟೇಬಲ್ ಟ್ರಸ್ಟ್ ಆರಂಭಗೊಂಡಿದ್ದು ಬಡವರಿಗೆ ಅನುಕೂಲವಾಗುವ ಉದ್ದೇಶದಿಂದ ಉಚಿತ ಆರೋಗ್ಯ ಶಿಬಿರದಂತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ.‌ಇದರ ಜೊತೆಗೆ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸ, ಸಾಧಕರಿಗೆ ಗೌರವ, ಎಲೆಮರೆ ಕಾಯಿಯಂತಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹ ನೀಡುವ ಕಾರ್ಯವನ್ನು ಟ್ರಸ್ಟ್ ಮಾಡಿಕೊಂಡು ಬರುತ್ತಿದೆ ಎಂದರು. ಜಸ್ಟೀಸ್ ಕೆ.ಎಸ್. ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ಇಲ್ಲಿನ‌ ವೈದ್ಯ ವಿವೇಕ್ ಎಸ್. ಶಿಬಿರವನ್ನು ಉದ್ಘಾಟಿಸಿ ಮಾತನಾಡಿ ಎಲ್ಲರೂ ಶಿಬಿರದ ಪ್ರಯೋಜನ…

Read More

ಬಂಟ್ವಾಳ: ತಾಲೂಕಿನ ಪುದು ಗ್ರಾಮ ಪಂಚಾಯತ್ ಗೆ ಶನಿವಾರ ಶಾಂತಯತವಾಗಿ ಮತದಾನ ನಡೆದಿದ್ದು ಶೇ. 73.7 ಶೇ. ರಷ್ಟು ಮತದಾನವಾಗಿದೆ ಎಂದು ಚುನಾವಣಾ ಶಾಖೆಯ ಉಪತಹಸೀಲ್ದಾರ್ ನವೀನ್ ಬೆಂಜನಪದವು ತಿಳಿಸಿದ್ದಾರೆ.ಪುದು ಗ್ರಾ.ಪಂ.ನಲ್ಲಿ ಒಟ್ಟು 11,164 ಮತದಾರರ ಪೈಕಿ 8,228 ಮಂದಿ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ ,ಇದರಲ್ಲಿ 5730 ಗಂಡಸರ ಪೈಕಿ 4060 ಹಾಗೂ 5534 ಮಹಿಳೆಯರ ಪೈಕಿ 4168 ಮಂದಿ ಮತ ಚಲಾಯಿಸಿದ್ದಾರೆ.ಬೆಳಿಗ್ಗೆಯಿಂದಲೇ ಬಿರುಸಿನಿಂದ ಮತದಾನ ನಡೆದಿದ್ದು, ಕೆಲ ಮತಗಟ್ಟೆಯಲ್ಲಿ ಮತದಾರ ತಾಸುಗಟ್ಟಲೇ ಸರತಿ‌ ನಿಲ್ಲುವ ಸನ್ನಿವೇಶ ಉಂಟಾಯಿತು.ಜನಸಂಖ್ಯೆಗನುಗುಣವಾಗಿ‌ ಹೆಚ್ಚುವರಿ ಮತಗಟ್ಟೆ ತೆರೆಯದಿರುವುದರಿಂದ ಮತದಾರ ಸಾಲುಗಟ್ಟಿ ನಿಲ್ಲಬೇಕಾಯಿತು. 34 ಸ್ಥಾನಗಳನ್ನು ಹೊಂದಿರುವ ಪುದು ಗ್ರಾ.ಪಂ. ಗೆ ಒಟ್ಟು 99 ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.ಈ ಬಾರಿ ಬ್ಯಾಲೆಟ್ ಪೇಪರ್ ಮೂಲಕವೇ ಮತದಾನ ನಡೆದಿದೆ.ವಿವಿಧ ಕಾರಣಗಳಿಂದ ತೆರವಾಗಿದ್ದ ಅನಂತಾಡಿ ಮತ್ತು ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಉಪಚುನಾವಣೆಯಲ್ಲಿ ಕ್ರಮವಾಗಿ 79.7ಶೇ.ಹಾಗೂ 73 ಶೇ.ಮತದಾನ ನಡೆದಿದ್ದು, ಇಲ್ಲಿಯೂ ಶಾಂತಿಯುತವಾಗಿ ಮತದಾನ ನಡೆದಿದೆ.ಯಾವುದೇ ಅಹಿತಕರ ಘಟನೆಗೆ ಅವಕಾಶವಿಲ್ಲದೆ…

Read More

ಬಂಟ್ವಾಳ : ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಮತ್ತುದ.ಕ.ಜಿಲ್ಲಾ ಮೂರ್ತೆದಾರರ ಮಹಾಮಂಡಲ ಬಿ.ಸಿ.ರೋಡ್ , ಹಾಗೂಶ್ರೀ ಗುರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮೆಲ್ಕಾರ್ ಇದರ ಸಿಬಂದಿಗಳಿಗೆ ಸಹಕಾರಿ ಕಾನೂನು, ವ್ಯವಹಾರ ಮಾಹಿತಿ ಕಾರ್ಯಾಗಾರವು ಫೆ 25 ರಂದು ಮೆಲ್ಕಾರ್ ಬಿರ್ವ ಸೆಂಟರ್ ಮಿನಿ ಆರ್ಚಿಡ್ ಹಾಲ್ನಲ್ಲಿ ನಡೆಯಿತು.ಮೂರ್ತೆದಾರರ ಮಹಾ ಮಂಡಲ .ಮತ್ತು ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು. ನಿರ್ದೇಶಕರಾದ ಆಶೋಕ್ ಪೂಜಾರಿ, ಆಶಿಶ್ ವಾಮದಪದವು, ಸುಜಾತಾ, ವಾಣಿ ವಸಂತ , ಅರುಣ್ ಕುಮಾರ್ ಉಪಸ್ಥಿತರಿದ್ದರು.ಪುತ್ತೂರು ವಿಭಾಗ ಸಹಕಾರಿ ಸಂಘಗಳ ಸಹಾಯಕ ನಿಬಂದಕಿ ತ್ರಿವೇಣಿ ರಾವ್, ಜಿಲ್ಲಾ ಕೇ೦ದ್ರ ಸಹಕಾರಿ ಬ್ಯಾಂಕ್ ನಿವೃತ್ತ ಡಿಜಿಎಂಲೀಲಾ ರಾಮ್, ಹಿರಿಯ ನ್ಯಾಯವಾದಿ ಅಶ್ವನಿ ಕುಮಾರ್ ರೈ ವಿವಿಧ ಮಾಹಿತಿ ನೀಡಿದರು.ಮೂರ್ತೆದಾರರ ಸೇವಾ ಸಹಕಾರಿ ಸಂಘದ ಸಿಇಒ ಮಮತಾ ಜಿ ಚೇಳೂರು, ಶ್ರೀ ಗುರು ಕ್ರೆಡಿಟ್ ಸಿಇಒ ಪ್ರವೀಣ್ ಉಪಸ್ಥಿತರಿದ್ದರು.ಶ್ರೀಗುರು ಸೊಸೈಟಿ ಉಪಾಧ್ಯಕ್ಷ .…

Read More

ಬಂಟ್ವಾಳ: ಸ್ವಾತಂತ್ರ್ಯ ಹೋರಾಟಗಾರ ಡಾ. ಅಮ್ಮೆಂಬಳ ಬಾಳಪ್ಪನವರಿಗೆ ಸಮಾಜದ ಮೇಲೆ ಇದ್ದ ಪ್ರೀತಿ, ಅವರು ಸಮಾಜವನ್ನು ತಿದ್ದು ತೀಡಿದ ರೀತಿ ನಮಗೆ ಆದರ್ಶ ಎಂದು ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು. https://youtu.be/-V0OK0cm37Y ಸ್ವಾತಂತ್ರ್ಯ ಯೋಧ ಡಾ. ಅಮ್ಮೆಂಬಳ ಬಾಳಪ್ಪ ಜನ್ಮಶತಾಬ್ದಿ ಸಮಾರಂಭ ಸ್ವಾತಂತ್ರ್ಯ ಯೋಧ ಡಾ. ಅಮ್ಮೆಂಬಳ ಬಾಳಪ್ಪ ಜನ್ಮಶತಾಬ್ದಿ ಆಚರಣಾ ಸಮಿತಿ ವತಿಯಿಂದ ಶನಿವಾರ ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆದ ಸ್ವಾತಂತ್ರ್ಯ ಯೋಧ ಡಾ. ಅಮ್ಮೆಂಬಳ ಬಾಳಪ್ಪ ಜನ್ಮಶತಾಬ್ದಿ ಸಮಾರಂಭವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ಸಮಾಜ ಸೇವಾ ಸಹಕಾರಿ ಸಂಘ ಇಂದು ಅದೆಷ್ಟೋ ಜನರಿಗೆ ಉದ್ಯೋಗ ನೀಡಿ ಬಡವರಿಗೆ ಪ್ರಯೋಜನವಾಗಿದ್ದರೆ ಅದರ ಹಿಂದೆ ಡಾ. ಅಮ್ಮೆಂಬಳ ಬಾಳಪ್ಪರ ಚಿಂತನೆ ಇದ್ದು ಇಂದು ಮಂಥನವಾಗುತ್ತಿದೆ. ಮುಂದಿನ ಪೀಳಿಗೆಯ ಮಕ್ಕಳಿಗೆ ಅವರ ಸಾಧನೆ ತತ್ವಾದರ್ಶದ ಬಗ್ಗೆ ಅಭಿರುಚಿ ಮೂಡಿಸುವ ಕಾರ್ಯ ಪ್ರತಿ ಮನೆ ಮನೆಯಲ್ಲೂ ಆಗಬೇಕಾಗಿದೆ ಎಂದರು.ಶಾಸಕ ರಾಜೇಶ್ ನಾಯ್ಕ್ ಬಾಳಪಥ ಎನ್ನುವ ಡಾ. ಅಮ್ಮೆಂಬಳ ಬಾಳಪ್ಪರ…

Read More

ಬಂಟ್ವಾಳ: ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರವನ್ನುನ ಆಗ್ರಹಿಸಿ ಮಾ. 1 ರಿಂದ ನಡೆಯುವ ಅನಿರ್ಧಿಷ್ಠಾವಧಿ ಮುಷ್ಕರದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಬಂಟ್ವಾಳ ಶಾಖೆಯು ಬೆಂಬಲ ವ್ಯಕ್ತಪಡಿಸಿರುವುದಾಗಿ ಸಂಘದ ಅಧ್ಯಕ್ಷ ಉಮನಾಥ ರೈ ಮೇರಾವು ತಿಳಿಸಿದರು. https://youtu.be/AzFnLcUoiOY ರಾಜ್ಯ ಸರ್ಕಾರಿ ನೌಕರರ ಸಂಘದ ಅನಿರ್ಧಿಷ್ಠಾವಧಿ ಮುಷ್ಕರಕ್ಕೆ ಬಂಟ್ವಾಳ ಶಾಖೆಯ ಬೆಂಬಲ ಬಿ.ಸಿ.ರೋಡಿನ ಪ್ರೆಸ್‌ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಅವರು ಈ ಬಗ್ಗೆ ಮಾಹಿತಿ ನೀಡಿ ಫೆ.21ರಂದು ಜರುಗಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಜಿಲ್ಲೆ ತಾಲ್ಲೂಕು ಯೋಜನೆ ಶಾಖೆಗಳ ಚುನಾಯಿತ ಪ್ರತಿನಿಧಿಗಳ ಹಾಗೂ ವೃಂದ ಸಂಘಗಳ ಅಧ್ಯಕ್ಷರು ಪದಾಧಿಕಾರಿಗಳ ತುರ್ತು ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ-ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿಯ ಯೋಜನೆಯನ್ನು ಜಾರಿಗೊಳಿಸುವಂತೆ ಸರ್ಕಾರಕ್ಕೆ ಆಗ್ರಹಪಡಿಸಿ ರಾಜ್ಯದ ಸಮಸ್ತ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಮಾ. 1 ರಿಂದ ಅನಿರ್ಧಿಷ್ಟಾವಧಿ…

Read More

ಬಂಟ್ವಾಳ: ಸಮೃದ್ಧಿ ಚಾರಿಟೇಬಲ್ ಟ್ರಸ್ಟ್ ಜೋಡುಮಾರ್ಗ, ಸಾರ್ವಜನಿಕ ಶ್ರೀ ಶಾರದೋತ್ಸವ ಆಚರಣಾ ಸಮಿತಿ ಸಿದ್ದಕಟ್ಟೆ, ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಸಿದ್ದಕಟ್ಟೆ ಹಾಗೂ ಜಸ್ಟೀಸ್ ಕೆ.ಎಸ್. ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ಇವರ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಫೆ.26ರಂದು ಭಾನುವಾರ ಬೆಳಿಗ್ಗೆ 9ರಿಂದ ಸಿದ್ದಕಟ್ಟೆಯ ಹರ್ಷಾಲಿ ಸಭಾಂಗಣದಲ್ಲಿ ನಡೆಯಲಿದೆ. ಸಾಮಾನ್ಯ ರೋಗ ತಪಾಸಣೆ, ಎಲುಪಬು ಮತ್ತು ಕೀಲು, ಧರ್ಮ ಚಿಕಿತ್ಸೆ, ಉಚಿತ ಇಸಿಜಿ, ಕಿವಿ ಮೂಗು ಗಂಟಲು ವಿಭಾಗ, ರಕ್ತದೊತ್ತಡ ಸಕ್ಕರೆ ರೋಗ ಪರೀಕ್ಷೆ ಸ್ತ್ರೀ ರೋಗಳ ಬಗ್ಗೆ ತಪಾಸಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. Advertisement

Read More

ಬಂಟ್ವಾಳ: ಸ್ವಾತಂತ್ರ್ಯ ಯೋಧ ಡಾ| ಅಮ್ಮೆಂಬಳ ಬಾಳಪ್ಪ ಸ್ಮಾರಕ ಸೇವಾ ಪ್ರತಿಷ್ಠಾನ ಮತ್ತು ಜನ್ಮ ಶತಾಬ್ದಿ ಆಚರಣೆ ಸಮಿತಿ ವತಿಯಿಂದ ಡಾ| ಅಮ್ಮೆಂಬಳ ಬಾಳಪ್ಪರ ಜನ್ಮಶತಾಬ್ದಿ ಸಂಭ್ರಮ ಫೆ. 25ರಂದು ಬೆಳಗ್ಗೆ 10ರಿಂದ ಬಿ.ಸಿ.ರೋಡ್‌ನ ಸ್ಪರ್ಶಾ ಕಲಾ ಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಸಮಿತಿ ಗೌರವಾಧ್ಯಕ್ಷ ಡಿ. ಚಂದಪ್ಪ ಮೂಲ್ಯ ಉಪ್ಪಿನಂಗಡಿ ತಿಳಿಸಿದರು. ಗುರುವಾರ ಬಿ.ಸಿ.ರೋಡಿನ ಪ್ರೆಸ್‌ಕ್ಲಬ್‌ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಾ. ಬಾಳಪ್ಪನವರು ಸ್ವಾತಂತ್ರ್ಯ ಹೋರಾಟಗಾರ, ಸಮಾಜವಾದಿ, ಭೂ ನ್ಯಾಯ ಮಂಡಳಿ ನೇತಾರ, ಶಿಕ್ಷಕ, ಪತ್ರಕರ್ತ, ಆಯುರ್ವೇದ ವೈದ್ಯ, ಸಹಕಾರಿ ಬ್ಯಾಂಕ್ ಸ್ಥಾಪಕಾಧ್ಯಕ್ಷರಾಗಿ ತಮ್ಮನ್ನು ಗುರುತಿಸಿಕೊಂಡಿದ್ದರು. ಮಾಜಿ ಕೇಂದ್ರ ಸಚಿವ ಜಾರ್ಜ್ ಫೆರ್ನಾಂಡೀಸ್ ಅವರ ರಾಜಕೀಯ ಗುರುವಾಗಿದ್ದ ಅವರು ಗಾಂಧಿವಾದಿಯಾಗಿ ತುಳು ಸಿರಿ ಎನ್ನುವ ತುಳು ಭಾಷೆಯ ಮೊದಲ ಪತ್ರಿಕೆ, ಮಿತ್ರ ಎನ್ನುವ ಕನ್ನಡ ಪತ್ರಿಕೆಯನ್ನು ಪ್ರಾರಂಭಿಸಿ ಪತ್ರಿಕಾ ಕ್ಷೇತ್ರದಲ್ಲೂ ಮಿಂಚಿದ್ದರು. ಎಷ್ಟೇ ಎತ್ತರಕ್ಕೇರಿದರೂ ಹಮ್ಮು ಬಿಮ್ಮುಗಳಿಲ್ಲದೆ ಬಾಳಿದ್ದು ಇವರ ಶ್ರೇಷ್ಠತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದರು.ಫೆ. 25ರಂದು ಬೆಳಗ್ಗೆ 9…

Read More

ಬಂಟ್ವಾಳ: ಜೀರ್ಣೋದ್ಧಾರ ಹಂತದಲ್ಲಿರುವ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಪ್ರಧಾನ ಗರ್ಭಗುಡಿಯ ಮೇಲ್ಛಾವಣಿಗೆ ಮರದ ಹೊದಿಕೆಯ ಮುಹೂರ್ತ ಕಾರ್ಯಕ್ರಮ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನೆರವೇರಿತು.ಕ್ಷೇತ್ರದ ಪ್ರಧಾನ ಅರ್ಚಕ ಶಂಕರನಾರಾಯಣ ಹೊಳ್ಳ ಹಾಗೂ ಪುರೋಹಿತ ವಿಜಯಕೃಷ್ಣ ಐತಾಳ್ ಅವರು ಧಾರ್ಮಿಕ ವಿಽ ವಿಧಾನ ನೆರವೇರಿಸಿದರು. ಅರ್ಚಕ ಜಯರಾಮ ಕಾರಂತ ಸಹಕರಿಸಿದರು. ಬಳಿಕ ದಾರುಶಿಲ್ಪಿ ಹರೀಶ್ ಆಚಾರ್ಯ ಬೋಳಿಯಾರು ಅವರಿಗೆ ಪ್ರಸಾದ ನೀಡಿ ಬಳಿಕ ಮರದ ಹೊದಿಕೆಯ ಕಾರ್ಯ ಪ್ರಾರಂಭಿಸಲಾಯಿತು. ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ, ಪ್ರಮುಖರಾದ ವಿಠಲ್ ಎಂ. ಆರುಮುಡಿ, ಉಮೇಶ್ ಆಳ್ವ ಕೊಟ್ಟುಂಜ, ಕುಸುಮಾಕರ ಶೆಟ್ಟಿ ಕುರ್ಯಾಳ, ರಾಧಾಕೃಷ್ಣ ರೈ ಕೊಟ್ಟುಂಜ, ಪುರುಷೋತ್ತಮ ಪೂಜಾರಿ ಮಜಲು, ಗಿರಿಧರ್ ನಾಯ್ಕ್ ಎಸ್, ಪ್ರಕಾಶ್ಚಂದ್ರ ಆಳ್ವ, ದಯಾವತಿ ಮಠದಬೆಟ್ಟು, ಕೊರಗಪ್ಪ ಗೌಡ ಪಠಣ, ಸುರೇಂದ್ರ ಪೈ ಸರಪಾಡಿ, ರಾಹುಲ್ ಕೋಟ್ಯಾನ್, ಚೇತನ್ ಬಜ, ಕಿಶನ್ ಸರಪಾಡಿ, ನಾರಾಯಣ ದೇವಾಡಿಗ ಹೊಳ್ಳರಗುತ್ತು, ಯೋಗೀಶ್ ಗೌಡ ನೀರೊಲ್ಬೆ, ಗಿರೀಶ್ ನಾಯ್ಕ್ ನೀರಪಲ್ಕೆ, ಆನಂದ ಶೆಟ್ಟಿ…

Read More

ಬಂಟ್ವಾಳ: ಬಿ.ಸಿ.ರೋಡಿನ ಸಂಚಯಗಿರಿಯಲ್ಲಿರುವ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಮತ್ತು ತುಳು ಬದುಕು ವಸ್ತು ಸಂಗ್ರಹಾಲಯದ 30ರ ನೆನಪು ವಿಚಾರ ಸಂಕಿರಣ – ಅರಿವು ಯಾನ ಮಾಲಿಕೆ ಕೃತಿ ಬಿಡುಗಡೆ-ತಜ್ಞ ಸಂವಾದ ಕಾರ್ಯಕ್ರಮ ಗುರುವಾರ ಬಿ.ಸಿ.ರೋಡಿನ ಸಂಚಯಗಿರಿಯಲ್ಲಿರುವ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದಲ್ಲಿ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ. ಹೇಮಾವತಿ ವಿ. ಹೆಗ್ಗಡೆ ಅವರು ವಿಚಾರ ಸಂಕಿರಣವನ್ನು ಉದ್ಘಾಟನೆಗೈದು ಕೃತಿಕಾರರಾದ ಡಾ. ಪಿ.ಎನ್. ನರಸಿಂಹ ಮೂರ್ತಿ ಅವರ ಅಳುಪರು-ಕರಾವಳಿ ಕರ್ನಾಟಕದ ಒಂದು ಪ್ರಾಚೀನ ಅರಸು ಮನೆತನ ಮತ್ತು ಐಗಳ್ ಎಂಬ ದ.ಕ.ಇತಿಹಾಸದ ದಂತಕಥೆ ಎಂಬ ಎರಡು ಕೃತಿಗಳ ಬಿಡುಗಡೆಗೊಳಿಸಿದರು.ಬಳಿಕ ಮಾತನಾಡಿದ ಡಾ.ಹೇಮಾವತಿ ವಿ.ಹೆಗ್ಗಡೆ ಅವರು ಕೃಷಿಯ ಬಗ್ಗೆ ಆಳ- ಅರಿವು ತಿಳಿಯದವರಿಂದ ನಷ್ಟವುಂಟಾಗುತ್ತಿದೆ. ವಿದ್ಯಾವಂತರು ಕೃಷಿಗೆ ಬಂದರೆ ಕೃಷಿಯಲ್ಲಿ ಅಭಿವೃದ್ಧಿಯೊಂದಿಗೆ ಆದಾಯ ಪಡೆಯಲು ಸಾಧ್ಯವಿದೆ. ಕೃಷಿ ಸಂಸ್ಕೃತಿ ನಾಶವಾಗಿರುವುದರಿಂದ ಹಿಂದಿನ ತಲೆಮಾರಿನ ವಸ್ತುಗಳು ಮ್ಯೂಸಿಯಂ ವಸ್ತುಗಳಾಗಿವೆ. ದಿನಬಳಕೆ ವಸ್ತುಗಳು ಪ್ಲಾಸ್ಟಿಕ್ ಆಗಿ ಬಳಯಾಗುತ್ತಿದೆ .ಅವಿಭಕ್ತ ಕುಟುಂಬದ ಕಲ್ಪನೆಯನ್ನು…

Read More

ಬಂಟ್ವಾಳ: ನಾವೂರು ಗ್ರಾಮ ಪಂಚಾಯತಿಯಲ್ಲಿ ಆಗುತ್ತಿರುವ ಅವ್ಯವಸ್ಥೆಯ ವಿರುದ್ಧ ಬಿಜೆಪಿ ವತಿಯಿಂದ ಗುರುವಾರ ಬೆಳಿಗ್ಗೆ ಪ್ರತಿಭಟನೆ ನಡೆಯಿತು. 9/11, ಕಟ್ಟಡ ಪರವಾನಿಗೆ , ನಿರಾಕ್ಷೇಪಣಾ ಪತ್ರ, ಕಾಲುದಾರಿ ಸಮಸ್ಯೆ , ಪಂಚಾಯತಿ ರಸ್ತೆ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರಿಗೆ ತೊಂದರೆಯಾಗುತ್ತಿದ್ದು ಈ ಬಗ್ಗೆ ಗ್ರಾಮ ಪಂಚಾಯತಿ ಆಡಳಿತ ಮಂಡಳಿ ಹಾಗೂ ಗ್ರಾಮ ಸಭೆಯಲ್ಲಿ ಉನ್ನತ ಅಧಿಕಾರಿಗಳಿಗೆ ಹಲವು ಬಾರಿ ದೂರು ಸಲ್ಲಿಸಿದರೂ ಸ್ಪಂದಿಸದ ಕಾರಣ ಪ್ರತಿಭಟನೆ ನಡೆಸುವುದಾಗಿ ಪ್ರತಿಭಟನಕಾರರು ತಿಳಿಸಿದರು.ಕುಡಿಯುವ ನೀರಿನ ಪೈಪ್ ದುರಸ್ತಿ ಹಾಗೂ ಪಂಪು ಕೆಟ್ಟು ಹೋದಾಗ ದೂರು ನೀಡಿದರೆ ವಾರ್ಡಿನ ಸದಸ್ಯರು ಸರಿ ಮಾಡುತ್ತಾರೆ ಎಂದು ಸಮಜಾಯಿಷಿಕೆ ನೀಡುತ್ತಾರೆ, ಸರಕಾರಿ ಜಾಗದಲ್ಲಿ ನಿವೇಶನ ಮಂಜೂರಾಗಿ ಮನೆ ಮಾಡಿ ವಾಸವಿರುವ ಮನೆಗಳಿಗೆ ಹೋಗುವ ರಸ್ತೆಯನ್ನು ಪಂಚಾಯತ್ ರಸ್ತೆ ಎಂದು ನಮೂದು ಮಾಡುತ್ತಿಲ್ಲ, ಕರ್ನಾಟಕ ಸರಕಾರ ಗ್ರಾಮ ಒನ್ ಕಾರ್ಯಕ್ರಮ ನೀಡಿ ಗ್ರಾಮ ಪಂಚಾಯತ್‌ನಲ್ಲಿ ಎಲ್ಲಾ ಸವಲತ್ತು ಸಿಗುವಂತೆ ಮಾಡಿದರೂ, ನಾವೂರು ಪಂಚಾಯತ್‌ನಲ್ಲಿ ಇದು ಆಗುತ್ತಿಲ್ಲ, ಮನೆ…

Read More