Author: admin

ಬಂಟ್ವಾಳ: ದೇವಸ್ಥಾನಗಳಿಗೆ ಭೇಟಿ ನೀಡಿದಾಗ ಮಾನಸಿಕ ಹಾಗೂ ದೈಹಿಕ ದೃಢತೆ ಹೆಚ್ಚಾಗುವುದರೊಂದಿಗೆ ನಮ್ಮಲ್ಲಿ ಧನಾತ್ಮಕ ಚಿಂತನೆಗೆ ಪ್ರೇರಣೆ ನೀಡುತ್ತದೆ. ಎಂದು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳು ಹೇಳಿದರು.ಅವರು ಬಿ.ಸಿ.ರೋಡಿನ ಶ್ರೀ ಚಂಡಿಕಾಪರಮೇಶ್ವರೀ ದೇವಸ್ಥಾನದ ಬ್ರಹ್ಮಕಲಶ ಮಹೋತ್ಸವದ ಪ್ರಯುಕ್ತ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದರು. ಲಕ್ಷ್ಮಿ ಸರಸ್ವತಿ, ಶಕ್ತಿಯನ್ನು ನೀಡುವ ಜಗದಂಬಿಕೆಯನ್ನು ಆರಾಧಿಸುವುದು ಧಾರ್ಮಿಕ ಕರ್ತವ್ಯ, ಜಡ ವಸ್ತುಗಳಲ್ಲಿ ಚೈತನ್ಯ ನೀಡುವವಳು ಜಗದಂಬಿಕೆ ಎಂದರು. 64 ಕ್ಷೇತ್ರ ಕಲೆಗಳನ್ನು ಕ್ರೋಡಿಕರಿಸಿ ವ್ಯಕ್ತಿತ್ವವನ್ನು ರೂಪಿಸಲು ದೇವಸ್ಥಾನಗಳು ಬೇಕು. ವಿಚಾರಗಳನ್ನು ಆಚಾರದಲ್ಲಿ ಅನುಷ್ಠಾನ ಮಾಡಿಕೊಳ್ಳಬೇಕು ಎಂದರು.ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ ಈ ಭಾಗಕ್ಕೆ ಚೇತನ ಕೊಡುವ ಕಾರ್ಯ ಬ್ರಹ್ಮಕಲಶೋತ್ಸದ ಮೂಲಕ ಆಗಿದೆ. ಊರ ಸಮಸ್ತ ಭಕ್ತಾಭಿಮಾನಿಗಳಲ್ಲಿ ಪ್ರಸನ್ನತೆ ಮೂಡಿಸುವ ಕಾರ್ಯಕ್ರಮ ನಡೆದಿದೆ ಎಂದರು.ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಲೋಕನಾಥ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ಉಪವಿಭಾಗದ ಎಎಸ್ಪಿ ಪ್ರತಾಪ್ ಸಿಂಗ್ ಥೋರಾಟ್, ಜೀರ್ಣೋದ್ಧಾರ ಹಾಗೂ…

Read More

ಪತ್ರಕರ್ತ ಜಯಾನಂದ ಪೆರಾಜೆ ಬಂಟ್ವಾಳ: ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಲಿ ಇವರು ಕೊಡಮಾಡುವ ರಾಜ್ಯ ಮಟ್ಟದ ಪತ್ರಕರ್ತ ಸೌರಭ ಪ್ರಶಸ್ತಿ 2023 ಪ್ರಶಸ್ತಿಗೆ ಹಿರಿಯ ಪತ್ರಕರ್ತ ಜಯಾನಂದ ಪೆರಾಜೆ ಆಯ್ಕೆಯಾಗಿರುತ್ತಾರೆಂದು ಬರಹಗಾರರ ಸಂಘದ ರಾಜ್ಯಾಧ್ಯಕ್ಷ ಮಧು ನಾಯ್ಕ್ ಹೂವಿನಹಡಗಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಜಯಾನಂದ ಪೆರಾಜೆಯವರು 1986 ರಲ್ಲಿ ಸುದ್ದಿ ಬಿಡುಗಡೆ ವಾರ ಪತ್ರಿಕೆ ಬಂಟ್ವಾಳದಲ್ಲಿ ವರದಿಗಾರರಾಗಿ ಕಾರ್ಯಾರಂಭಿಸಿ ಬಳಿಕ ಹೊಸದಿಗಂತ, ಮುಂಗಾರು, ಸಂಯುಕ್ತಕರ್ನಾಟಕ ಕನ್ನಡ ಪ್ರಭ ದಿನಪತ್ರಿಕೆಗಳಲ್ಲಿ ಸುದೀರ್ಘ ಕಾಲ ಬಂಟ್ವಾಳ ತಾಲೂಕು ವರದಿಗಾರರಾಗಿ ಸೇವೆಸಲ್ಲಿಸಿದ್ದಾರೆ. ವಿವಿಧ ಪತ್ರಿಕೆಗಳಲ್ಲಿ ಅಂಕಣಕಾರರಾಗಿ, ಕವಿ, ಸಾಹಿತಿಯಾಗಿ ಲೇಖನಗಳನ್ನು ಪ್ರಕಟಿಸಿರುತ್ತಾರೆ. ಹೊಸದಿಗಂತಪತ್ರಿಕೆಯ ವರದಿಗಾರರಾಗಿ ಇರುವ ಇವರು ಪ್ರಸ್ತುತ ಮಧುಪ್ರಪಂಚ ತ್ರೈಮಾಸಿಕ ಪತ್ರಿಕೆಯ ಸಂಪಾದಕರಾಗಿರುತ್ತಾರೆ. ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಮತ್ತು ಬರಹಗಾರರ ವೇದಿಕೆಯ ಜಿಲ್ಲಾಧ್ಯಕ್ಷರಾಗಿರುತ್ತಾರೆ.ಫೆ.26ರಂದು ವಿಜಯಪುರದ ಹಂಪಿಯಲ್ಲಿ ನಡೆಯುವ ರಾಜ್ಯ ಸಮ್ಮೇಳನ ಮತ್ತು ಸಾವಿರ ಗೋಷ್ಠಿಯ ಸಂಭ್ರಮ ಕಾಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು. ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ವಿಜಯನಗರ ಜಿಲ್ಲಾ ಘಟಕದ ಸಹಯೋಗದೊಂದಿಗೆ ನಡೆಯುವ…

Read More

ಬಂಟ್ವಾಳ: ಫೆ.22 ರಿಂದ ಫೆ. 28ರವರೆಗೆ ಬಿ.ಸಿ.ರೋಡಿನ ಶ್ರೀ ಚಂಡಿಕಾಪರಮೇಶ್ವರಿ ದೇವಿ ದೇವಸ್ಥಾನದದಲ್ಲಿ ನಡೆಯಲಿರುವ ಅಷ್ಟಬಂಧ, ಬ್ರಹ್ಮಕಲಶಾಭಿಷೇಕ ಮತ್ತು ಜಾತ್ರಾ ಮಹೋತ್ಸವ ಕಾರ್ಯಕ್ರಮಕ್ಕೆ ಬುಧವಾರ ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ ಮೂಲಕ ಚಾಲನೆ ಸಿಕ್ಕಿತು. ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದ ಹೊರೆಕಾಣಿಕೆ ಸಂಗ್ರಹಣಾ ಕೇಂದ್ರ ಬಳಿ ಗಣ್ಯರ ಸಮಕ್ಷಮದಲ್ಲಿ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಲಾಯಿತು. ಚೆಂಡೆ, ಗೊಂಬೆ ಕುಣಿತ, ಕೀಲು ಕುದರೆ ಕುಣಿತ ಮೆರವಣಿಗೆಗೆ ವಿಶೇಷ ಮೆರುಗು ನೀಡಿತು. ರಾಷ್ಟ್ರೀಯ ಹೆದ್ದಾರಿ ಮೂಲಕ ಕೈಕಂಬಕ್ಕೆ ಹೋಗಿ, ಕೈಕಂಬದ ಸಂಗ್ರಹಣ ಕೇಂದ್ರದ ಬಳಿ ಹಸಿರು ಹೊರೆಕಾಣಿಕೆಯನ್ನು ಸೇರಿಸಿಕೊಂಡು ಮತ್ತೆ ವಾಪಸ್ಸು ದೇವಸ್ಥಾನದತ್ತ ಮೆರವಣಿಗೆ ಸಾಗಿ ಬಂತು. ಹೊರೆ ಕಾಣಿಕೆ ಹೊತ್ತ ವಾಹನಗಳು ಮೆರವಣಿಗೆಯ ಸರತಿಯಲ್ಲಿ ಸಾಗಿ ಸಂಭ್ರಮದ ಬ್ರಹ್ಮಕಲಶೋತ್ಸವಕ್ಕೆ ಮುನ್ನುಡಿ ಬರೆಯಿತು.ಬ್ರಹ್ಮಕಲಶೋತ್ಸವ ಹಾಗೂ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರಾದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಮಾಜಿ ಸಚಿವ ಬಿ.ರಮಾನಾಥ ರೈ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಜೀರ್ಣೊದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಾಕೇಶ್…

Read More

ಬಂಟ್ವಾಳ:ಬಿ.ಸಿ.ರೋಡಿನ ಸಂಚಯಗಿರಿಯಲ್ಲಿರುವ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಮತ್ತು ತುಳು ಬದುಕು ವಸ್ತು ಸಂಗ್ರಹಾಲಯದ 30 ರ ನೆನಪು ವಿಚಾರ ಸಂಕಿರಣ ಮತ್ತು ಅರಿವು ಯಾನ ಮಾಲಿಕೆಯ ಕೃತಿ ಬಿಡುಗಡೆ ಫೆ.23 ರಂದು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದಲ್ಲಿ ನಡೆಯಲಿದೆ ಎಂದು ಕೇಂದ್ರದ ಅಧ್ಯಕ್ಷ ಡಾ. ತುಕಾರಾಮ್ ಪೂಜಾರಿ ತಿಳಿಸಿದ್ದಾರೆ. ಡಾ. ಹೇಮಾವತಿ ವಿ. ಹೆಗ್ಗಡೆ ಅವರು ವಿಚಾರ ಸಂಕಿರಣದ ಉದ್ಘಾಟನೆ ಮತ್ತು ಕೃತಿಗಳ ಬಿಡುಗಡೆಗೊಳಿಸುವರು.ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಉದ್ಯಮಿ ಮೂಡಂಬೈಲು ರವಿ ಶೆಟ್ಟಿ ಅತಿಥಿಯಾಗಿ ಭಾಗವಹಿಸಲಿದ್ದು,ಡಾ.ಪಿ.ಎನ್. ನರಸಿಂಹಮೂರ್ತಿಪ್ರೊ. ಕೆ. ಶಂಕರ ಭಟ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಬಳಿಕ ಗೋಷ್ಠಿಗಳು ನಡೆಯಲಿದ್ದು,ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಚೀನ ಇತಿಹಾಸ’ ನೂರರ ನೆನಪು ಎಂಬ ವಿಷಯದ ಬಗ್ಗೆ ಉಡುಪಿ ಎಂಜಿಎಂ ಕಾಲೇಜಿನ ವಿಶ್ರಾಂತ ಇತಿಹಾಸ ಪ್ರಾಧ್ಯಾಪಕರಾದ ಡಾ. ಮಾಲತಿ ಮೂರ್ತಿ ಹಾಗೂ ಆಳುಪರು ಕರಾವಳಿ ಕರ್ನಾಟಕದ ಒಂದು ಪ್ರಾಚೀನ ಅರಸು ಮನೆತನ ಎಂಬ ವಿಷಯದ ಬಗ್ಗೆ…

Read More

ಬಂಟ್ವಾಳ: ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಸೋಮವಾರ ತಾಲೂಕು ಮಟ್ಟದ ಸರ್ವಜ್ಞ ಜಯಂತಿ ಆಚರಣೆ ನಡೆಯಿತು. ಬಂಟ್ವಾಳ ತಾಲೂಕು ಆಡಳಿತದಿಂದ ತ್ರಿಪದಿ ಕವಿ ಸರ್ವಜ್ಞ ಜಯಂತಿ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಸರ್ವಜ್ಞ ಮಹರ್ಷಿ ಕುರಿತು ಮಾತನಾಡಿದ ನ್ಯಾಯವಾದಿ ಸುರೇಶ್ ಕುಲಾಲ್ ನಾವೂರು, ಸಾಮಾಜಿಕ ಪಿಡುಗುಗಳನ್ನು ಹೋಗಲಾಡಿಸಿ, ಸಮಾಜ ಸುಧಾರಣೆಯನ್ನು ತ್ರಿಪದಿಗಳ ಮೂಲಕ ಮಾಡಿದ ಸರ್ವಜ್ಞನ ಕುರಿತು ಎಲ್ಲರೂ ತಿಳಿದುಕೊಳ್ಳಬೇಕಾದ ಅಗತ್ಯವಿದ್ದು, ಸಾಮಾಜಿಕ ಅಸಮಾನತೆಗಳನ್ನು ಹೋಗಲಾಡಿಸುವ ಸಂದೇಶಗಳು ವಚನಗಳಲ್ಲಿವೆ ಎಂದರು.ಅಧ್ಯಕ್ಷತೆಯನ್ನು ಬಂಟ್ವಾಳ ತಹಸೀಲ್ದಾರ್ ಕೆ.ಎಸ್.ದಯಾನಂದ ವಹಿಸಿ, ಕಾರ್ಯಕ್ರಮಕ್ಕೆ ಶುಭ ಕೋರಿದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಈ ಸಂದರ್ಭ ಮಾತನಾಡಿ, ಸರ್ವಜ್ಞರಂಥ ದಾರ್ಶನಿಕರ ಜಯಂತಿ ಆಚರಣೆಗಳನ್ನು ಮಾಡುವ ಸಂದರ್ಭ ಸಮಾಜದ ಎಲ್ಲರ ಪಾಲ್ಗೊಳ್ಳುವಿಕೆ ಅಗತ್ಯವಾಗಿದ್ದು, ಇದನ್ನು ದೊಡ್ಡ ಮಟ್ಟದಲ್ಲಿ ಮಾಡಬೇಕು ಎಂದರು.ಕುಲಾಲ ಹಿರಿಯ ನಾಗರಿಕ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಶೇಷಪ್ಪ ಮೂಲ್ಯ ಮಾತನಾಡಿ, ಮಹಾತ್ಮರ ಜಯಂತಿ ಆಚರಣೆಗಳು ಸಮುದಾಯಕ್ಕಷ್ಟೇ ಅಲ್ಲ, ಎಲ್ಲ ವರ್ಗದ ಜನರೂ ಪಾಲ್ಗೊಳ್ಳುವಂತಾಗಬೇಕು ಎಂದರು.ಬಂಟ್ವಾಳ ತಾಲೂಕು ಕುಲಾಲ…

Read More

ಬಂಟ್ವಾಳ: ದೇಶದ ಭವಿಷ್ಯ ಶಾಲೆಯ ನಾಲ್ಕು ಕೋಣೆಯ ಮಧ್ಯೆ ನಿರ್ಧಾರ ವಾಗುತ್ತದೆ. ಸರಕಾರಿ ಶಾಲೆಗೆ ಸಹಕಾರ ನೀಡಿ ಅಲ್ಲಿ ಕಲಿಯುವ ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಭವಿಷ್ಯಕ್ಕೆ ಪೂರಕವಾದ ವ್ಯವಸ್ಥೆಯನ್ನು ಕಲ್ಪಿಸುವುದು ನಮ್ಮ ಕರ್ತವ್ಯ ಎಂದು ರೋಟರಿ ಜಿಲ್ಲಾ ಗವರ್ನರ್ ಎನ್. ಪ್ರಕಾಶ್ ಕಾರಂತ್ ಹೇಳಿದರು. https://youtu.be/52isV2tU8x8 ರೋಟರಿ ಕ್ಲಬ್ ಬಂಟ್ವಾಳದ ವತಿಯಿಂದ ಶೇರಾ ಹಾಗೂ ಕಾರ್ಲ ಸರ್ಕಾರಿ ಶಾಲೆಗೆ ಕಂಪ್ಯೂಟರ್ ಕೊಡುಗೆ ರೋಟರಿ ಕ್ಲಬ್ ಬಂಟ್ವಾಳದ ವತಿಯಿಂದ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಶೇರಾ ಹಾಗೂ ಪೆರ್ನೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಕಾರ್ಲ ಇಲ್ಲಿಗೆ ಕೊಡುಗೆಯಾಗಿ ನೀಡಲಾದ ಕಂಪ್ಯೂಟರ್ ಉದ್ಘಾಟಿಸಿ ಮಾತನಾಡಿದರು. ರೋಟರಿ ಕ್ಲಬ್ ಬಂಟ್ವಾಳ ಗ್ರಾಮೀಣ ಭಾಗದ ಶಾಲೆಗೆ ಸವಲತ್ತು ನೀಡಿರುವುದು ಸಂತೃಪ್ತಿ ನೀಡಿದೆ, ಶಾಲೆಗೆ ನೀಡಲಾದ ಈ ಕೊಡುಗೆಯನ್ನು ಸುಸ್ಥಿಯಲಿಟ್ಟುಕೊಳ್ಳಬೇಕು ಎಂದು ಅವರು ತಿಳಿಸಿದರು.ಸಹಾಯಕ ಗವರ್ನರ್ ಮಂಜುನಾಥ ಆಚಾರ್ಯ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಸರ್ಕಾರಿ ಶಾಲೆಯಲ್ಲಿ ಕಲಿಯುವ ವಿದ್ಯಾರ್ಥಿಗಳು ಭಾಗ್ಯವಂತರು. ಪರಿಣಿತ ಶಿಕ್ಷಕರಿಂದ ಶಿಕ್ಷಣ ಪಡೆಯುವ…

Read More

ಬಂಟ್ವಾಳ: ಶ್ರೀ ತಿರುಮಲ ವೆಂಕಟ್ರಮಣ ಸ್ವಾಮಿ ದೇವಸ್ಥಾನ ಬಂಟ್ವಾಳ ಇಲ್ಲಿನ ಕಾಲಾವಧಿ ಬ್ರಹ್ಮ ರಥೋತ್ಸವ ಕಾರ್ಯಕ್ರಮವು ಫೆ.22 ರಿಂದ ಫೆ. 27 ರವರೆಗೆ ಜರುಗಲಿದ್ದು ಭಕ್ತಾದಿಗಳಿಗೆ ವಾಹನ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಮಂಗಳೂರು, ಪುತ್ತೂರು, ಉಪ್ಪಿನಂಗಡಿ ಕಡೆಯಿಂದ ಬರುವವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಹಿಂಬದಿಯ ಜಾಗದಲ್ಲಿ ಹಾಗೂ ದೇವಳದ ಸಮೀಪ ಇರುವ ಎಸ್.ವಿ. ಎಸ್ ದೇವಳದ ವಿದ್ಯಾ ಸಂಸ್ಥೆಯ ವಠಾರದಲ್ಲಿ ನಿಲ್ಲಿಸಬೇಕು. ಮೂಡಬಿದರೆ , ಕಾರ್ಕಳ, ಕಡೆಯಿಂದ ಬರುವ ವಾಹನಗಳು ಬೈಪಾಸ್ ಜಂಕ್ಷನ್ ನಿಂದ ಬಂಟ್ವಾಳ ಪೇಟೆ ರಸ್ತೆಯಲ್ಲಿ ದೇವರಕಟ್ಟೆಯ ಬಸ್ ನಿಲ್ದಾಣದಲ್ಲಿ ವಾಹನವನ್ನು ನಿಲ್ಲಿಸ ಬೇಕು. ಪುಂಜಾಲ ಕಟ್ಟೆ, ಗುರುವಾಯನಕೆರೆ, ಬೆಳ್ತಂಗಡಿ ಉಜಿರೆ ಕಡೆಯಿಂದ ಬರುವ ಭಕ್ತಾದಿಗಳು ಜಕ್ರಿಬೆಟ್ಟಿನಿಂದ ಬಂಟ್ವಾಳ ಪೇಟೆಯ ತ್ಯಾಗರಾಜ ರಸ್ತೆಯಲ್ಲಿ ಸರಸ್ವತಿ ನರ್ಸಿಂಗ್ ಹೋಂ ಇದರ ಎದುರುಗಡೆ ಇರುವ ವಿಶಾಲ ಮೈದಾನ ದಲ್ಲಿ ನಿಲ್ಲಿಸಲು ತಿಳಿಸಲಾಗಿದೆ.ಬ್ರಹ್ಮ ರಥೋತ್ಸವದ ಹಿನ್ನಲೆಯಲ್ಲಿ ಈ ದಿನಗಳಲ್ಲಿ ಬಂಟ್ವಾಳ ಪೋಸ್ಟ್ ಆಫೀಸ್‌ನಿಂದ ಪೂರ್ಣಿಮಾ ಸ್ಟೋರ್ ವರೆಗೆ ರಸ್ತೆಯ ಎರಡೂ ಬದಿಯಲ್ಲಿ ವಾಹನವನ್ನು…

Read More

ಬಂಟ್ವಾಳ: ಇಲ್ಲಿನ ಪುದು ಗ್ರಾಮದ ದತ್ತ ನಗರ ನಿವಾಸಿ ದೇವಕಿ (80) ಅವರು ಅಲ್ಪಕಾಲದ ಅಸೌಖ್ಯದಿಂದ ಭಾನುವಾರ ನಿಧನರಾದರು.ಪುದು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗಣೇಶ್ ಸಹಿತ 4 ಗಂಡು,‌2 ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. Advertisement

Read More

ಬಂಟ್ವಾಳ: ಕಾಲಿನ ಸಮಸ್ಯೆಯಿಂದ ಬಳಲುತ್ತಿದ್ದ ಬಂಟ್ವಾಳ ತಾಲೂಕಿನ ಶಂಭೂರಿನ ಹರೀಶ್ ಕುಲಾಲ್ ಎಂಬವರ ಮಗ ತನೀಷ್ ನ ಎರಡೂ ಕಾಲುಗಳಿಗೆ ಕ್ಯಾಲೀಪರ್ ಅಳವಡಿಸಲು ಜೆಸಿಐ ಬಂಟ್ವಾಳದ ವತಿಯಿಂದ ರೂ.14 ಸಾವಿರ ಆರ್ಥಿಕ ಸಹಕಾರ ಹಸ್ತಾಂತರಿಸಲಾಯಿತು. ಜೆಸಿಐ ಬಂಟ್ವಾಳದ ವತಿಯಿಂದ ಆರ್ಥಿಕ ನೆರವು ಹಸ್ತಾಂತರ ಈ ಸಂದರ್ಭ ಜೆಸಿಐ ಬಂಟ್ವಾಳದ ಅಧ್ಯಕ್ಷ ರಾಜೇಂದ್ರ ಕೆ., ಉಪಾಧ್ಯಕ್ಷ ಕಿಶೋರ್ ಆಚಾರ್ಯ, ಕೋಶಾಧಿಕಾರಿ ಶ್ರೀನಿವಾಸ ಅರ್ಬಿಗುಡ್ಡೆ, ಪೂರ್ವಾಧ್ಯಕ್ಷ ಸುರೇಶ್ ಕುಮಾರ್ ನಾವೂರು, ಸದಸ್ಯರಾದ ಶಿವರಾಮ ಮರ್ತಾಜೆ, ನಾಗೇಶ್ ಸಜೀಪ ಉಪಸ್ಥಿತರಿದ್ದರು. advertisement

Read More

ಬಂಟ್ವಾಳ: ಸಜೀಪಮೂಡ ಗ್ರಾಮದ ಈಶ್ವರ ಮಂಗಳ ಶ್ರೀ ಸದಾಶಿವ ದೇವಸ್ಥಾನದಲ್ಲಿ ಶ್ರೀ ಮಹಾಶಿವರಾತ್ರಿ ಪ್ರಯುಕ್ತ ಶ್ರೀ ದೇವರಿಗೆ ಫಲ ಪಂಚಾಮೃತ ಅಭಿಷೇಕ, ರುದ್ರ ಸೂಕ್ತ ಅಭಿಷೇಕ ಪೂಜೆ, ಪ್ರಸನ್ನ ಪೂಜೆ ಮಹಾಮಂಗಳಾರತಿ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ, ಅಂದಾಡಿ ಸೀತಾರಾಮ ಗಟ್ಟಿ ಪ್ರಾಯೋಜಕತ್ವದಲ್ಲಿ ವಿಶ್ವ ಭಾರತಿ ಯಕ್ಷ ಸಂಜೀವಿನಿ ಮುಡಿಪು ಇವರಿಂದ ವಾಲಿಮೋಕ್ಷ ಯಕ್ಷಗಾನ ತಾಳಮದ್ದಳೆ ನಡೆಯಿತು. ಯಕ್ಷಗಾನ ಕಲಾವಿದ ಕೆ.ಗೋವಿಂದ ಭಟ್ ಪದ್ಯಾಣ ಶಂಕರನಾರಾಯಣ ಭಟ್, ರಾಮ ಹೊಳ್ಳ, ವಿದ್ಯಾ ಐತಾಳ್, ಗುಂಡ್ಯಡ್ಕ ಈಶ್ವರ ಭಟ್, ಪ್ರಶಾಂತ್ ಹೊಳ್ಳ, ಕುಶಲ ಮುಡಿಪು ಮೊದಲಾದವರು ಭಾಗವಹಿಸಿದ್ದರು. ಸಜೀಪ ಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದೇವಿ ಪ್ರಸಾದ್ ಪೂಂಜಾ, ನಂದಾವರ ಕ್ಷೇತ್ರ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಅರವಿಂದ ಭಟ್ ಪದ್ಯಾಣ, ಮುಗಳಿಯ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯಶಂಕರ ಬಾಸ್ರೀತಾಯ, ಕೆ.ಸದಾನಂದ ಶೆಟ್ಟಿ, ರವಿಚಂದ್ರ, ಬಾಲಕೃಷ್ಣ,…

Read More