Author: admin

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು 5 ಲಕ್ಷ ರೂ. ಮೊತ್ತದ ಆರ್ಥಿಕ ಸಹಾಯಧನದ ಡಿ.ಡಿ.ಯನ್ನು ಹಸ್ತಾಂತರಿಸಿದರು. ಬಂಟ್ವಾಳ: ತಾಲೂಕಿನ ಕುಡಂಬೆಟ್ಟು ಗ್ರಾಮದ ಉರುಡಾಯಿ ಶ್ರೀ ಮುಖ್ಯ ಪ್ರಾಣ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು 5 ಲಕ್ಷ ರೂ. ಮೊತ್ತದ ಆರ್ಥಿಕ ಸಹಾಯಧನದ ಡಿ.ಡಿ.ಯನ್ನು ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಜೀರ್ಣೊದ್ಧಾರ ಸಮಿತಿ ಅಧ್ಯಕ್ಷ ಅಮ್ಮು ರೈ ಹರ್ಕಾಡಿ, ಪ್ರ.ಕಾರ್ಯದರ್ಶಿ ಅನಂತರಾಮ ನಾಯಕ್, ಕೋಶಾಧಿಕಾರಿ ಜಯರಾಮ ಕುಲಾಲ್, ಪ್ರಮುಖರಾದ ಮಾಣಿಕ್ಯರಾಜ್ ಜೈನ್, ಲೋಕಯ್ಯ ಪೂಜಾರಿ, ರವೀಂದ್ರ ಕುಲಾಲ್, ಶ್ರೀನಾಥ್ ಬೆಂಗಳೂರು ಅವರು ಉಪಸ್ಥಿತರಿದ್ದರು.

Read More

ಬಂಟ್ವಾಳ: ಊರಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಶಂಭೂರಿನಿಂದ ದಾವಣಗೆರೆಗೆ ಹೋದ ವ್ಯಕ್ತಿ ಊರಿಗೆ ತೆರಳದೆ ನಾಪತ್ತೆಯಾದ ಬಗ್ಗೆ ವರದಿಯಾಗಿದೆ.ದಾವಣಗೆರೆ ಮೂಲದ ಜಗಳೂರು ಹುಚ್ಚಂಗಿಪುರ ನಿವಾಸಿ ಕೂಲಿ ಕಾರ್ಮಿಕ ಯಲ್ಲಪ್ಪ (31) ನಾಪತ್ತೆಯಾದ ವ್ಯಕ್ತಿ.ಶಂಭೂರು ಗ್ರಾಮದ ಅಡೆಪಿಲ ಎಂಬಲ್ಲಿ ತೋಟದ ಕೆಲಸ ಮಾಡುತ್ತಿದ್ದ ಇವರು ಮನೆಯವರ ನೆನಪಾಗಿ ಊರಿಗೆ ಹೋಗಿ ಬರುತ್ತೇನೆ ಎಂದು ಬಿ.ಸಿ.ರೋಡಿನಿಂದ ಬಸ್ ನಲ್ಲಿ ತೆರಳಿದವರು ದಾವಣಗೆರೆಗೆ ಹೋಗದೆ, ವಾಪಸು ಬಾರದೆ ನಾಪತ್ತೆಯಾದ ಬಗ್ಗೆ ಸಹೋದರ ತಿಮ್ಮೇಶ್ ಅವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಾಪತ್ತೆಯಾದ ವ್ಯಕ್ತಿ

Read More

ಬಂಟ್ವಾಳ: ಬಿ.ಸಿ.ರೋಡಿನ ಹೃದಯ ಭಾಗದಲ್ಲಿರುವ ಶ್ರೀಚಂಡಿಕಾಪರಮೇಶ್ವರಿ ದೇವಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ, ಜಾತ್ರೋತ್ಸವ ಕಾರ್ಯಕ್ರಮಗಳು ಫೆ.22ರಿಂದ 28ರವರೆಗೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಾಕೇಶ್ ಮಲ್ಲಿ ದೇವಸ್ಥಾನದಲ್ಲಿ ಸೋಮವಾರ ಸಂಜೆ ಕರೆದ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಬಿ.ಸಿ.ರೋಡಿನ ಹೃದಯ ಭಾಗದಲ್ಲಿರುವ ಶ್ರೀಚಂಡಿಕಾಪರಮೇಶ್ವರಿ ದೇವಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ, ಜಾತ್ರೋತ್ಸವ ಕಾರ್ಯಕ್ರಮಗಳು ಫೆ.22ರಿಂದ 28ರವರೆಗೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಾಕೇಶ್ ಮಲ್ಲಿ ದೇವಸ್ಥಾನದಲ್ಲಿ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಬಿ.ರಾಮಚಂದ್ರ ರಾವ್ ಮಾಹಿತಿ ನೀಡಿ, ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಫೆ.22ರಂದು ಮಧ್ಯಾಹ್ನ 2 ಗಂಟೆಗೆ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿನ ಸಂಗ್ರಹಣಾ ಕೇಂದ್ರದಿಂದ ಹೊರೆಕಾಣಿಕೆ ಮರೆವಣಿಗೆ ಆರಂಭಗೊಂಡು ಕೈಕಂಬದ ಸಂಗ್ರಹಣ ಕೇಂದ್ರದವರೆಗೆ ಸಾಗಿ ಕ್ಷೇತ್ರಕ್ಕೆ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ ಬರಲಿದೆ. ಅದೇ ದಿನ ಸಂಜೆ 7.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿದೆ. ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳು…

Read More

ಬಂಟ್ವಾಳ: ದಿ.ಬೊಂಡಾಲ ರಾಮಣ್ಣ ಶೆಟ್ಟರ ಹೆಸರಿನಲ್ಲಿ ನೀಡಲಾಗುವ ಬೊಂಡಾಲ ಪ್ರಶಸ್ತಿಗೆ ಕಟೀಲು ಮೇಳದ ಭಾಗವತ, ಪುಂಡಿಕಾಯಿ ಗೋಪಾಲಕೃಷ್ಣ ಭಟ್ ಆಯ್ಕೆಯಾಗಿದ್ದಾರೆ. ಭಾಗವತ ಪುಂಡಿಕಾಯಿ ಗೋಪಾಲಕೃಷ್ಣ ಭಟ್ ಬೊಂಡಾಲ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಟೀಲು ಮೇಳದಲ್ಲಿ ಸೇವೆಸಲ್ಲಿಸಿದ ಕಲಾವಿದರಿಗಾಗಿ ಉದ್ಯಮಿ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಅವರು ನೀಡುತ್ತಿರುವ ವಾರ್ಷಿಕ ಪ್ರಶಸ್ತಿಗೆ ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಮಾಜಿ ಸದಸ್ಯ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಸಂಚಾಲಕರಾಗಿರುವ ಆಯ್ಕೆಸಮಿತಿ 2022-23 ನೇ ಸಾಲಿಗೆ ಪುಂಡಿಕಾಯಿ ಅವರ ಹೆಸರನ್ನು ಸೂಚಿಸಿದೆ. ಪ್ರಶಸ್ತಿಯು ರೂ. 10ಸಾವಿರ ನಗದು, ಶಾಲು, ಸ್ಮರಣಿಕೆ, ಪ್ರಶಸ್ತಿ ಫಲಕಗಳನ್ನು ಒಳಗೊಂಡಿದೆ.ಬಲಿಪ ಪರಂಪರೆಯ ಪ್ರಮುಖ ಕೊಂಡಿಯಾಗಿರುವ ಭಾಗವತ ಪುಂಡಿಕಾಯಿ ಗೋಪಾಲಕೃಷ್ಣ ಭಟ್ ಜನಿಸಿದ್ದು 1973 ಮೇ 14ರಂದು; ತಂದೆ ಗೋವಿಂದ ಭಟ್, ತಾಯಿ ಭವಾನಿ. ಅಡ್ಯನಡ್ಕದಲ್ಲಿ ತಮ್ಮ ಪ್ರಾಥಮಿಕ ಮತ್ತು ಪ್ರೌಢ ವಿದ್ಯಾಭ್ಯಾಸ ಪೂರೈಸಿ ವಿಟ್ಲ ಜೂನಿಯರ್ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣ ಪಡೆದರು. ಬಳಿಕ ಮೂಡಬಿದ್ರೆ ಮಹಾವೀರ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡಿದರು.ಯಕ್ಷಗಾನದ…

Read More

ಆರೋಪಿ ಬಂಟ್ವಾಳ: ಇಲ್ಲಿನ ಗ್ರಾಮಾಂತರ ಠಾಣೆಯಲ್ಲಿ ಆರೋಪಿಯಾದಗಿದ್ದ ಅಫ್ರೀದಿ ಸಜೀಪನಡು ಗ್ರಾಮದ ಮಿತ್ತಪಡ್ಪು ಮನೆ ನಿವಾಸಿ ಆಫ್ರಿದಿ ಎಂಬಾತನಿಗೆ ವಾರೆಂಟ್ ಜಾರಿಯಾಗಿದ್ದರೂ ಸುಮಾರು 2 ವರ್ಷಗಳಿಂದ ನ್ಯಾಯಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ. ಸೋಮವಾರ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

Read More

ಬಂಟ್ವಾಳ: ಹಲವು ವೈಶಿಷ್ಠ್ಯತೆಯೊಂದಿಗೆ ಸುಮಾರು ಐದು ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಸಂತ ಅಂತೋನಿಯವರ ನವೀಕೃತ ಚರ್ಚ್ ಕಟ್ಟಡ ಹಾಗೂ ನೂತನ ಗುರು ನಿವಾಸದ ಉದ್ಘಾಟನಾ ಸಮಾರಂಭ ಸೋಮವಾರ ಸಂಭ್ರಮದಿಂದ ನಡೆಯಿತು. https://youtu.be/XqoJuztqLpw ಅಲ್ಲಿಪಾದೆ ಸಂತ ಅಂತೋನಿಯವರ ನವೀಕೃತ ಚರ್ಚ್ ಕಟ್ಟಡ ಹಾಗೂ ನೂತನ ಗುರು ನಿವಾಸದ ಉದ್ಘಾಟನಾ ಸಮಾರಂಭ ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯ ದ ಧರ್ಮಾಧ್ಯಕ್ಷರಾದ ಡಾ.ಪೀಟರ್ ಪಾವ್ಲ್ ಸಲ್ದಾನ್ಹಾ ಅವರು ನೂತನ ಚರ್ಚ್ ಕಟ್ಟಡ ಹಾಗೂ ನೂತನ ಗುರು ನಿವಾಸವನ್ನು ಉದ್ಘಾಟಿಸಿ ಬಳಿಕ ನಡೆದ ಸಭಾಕಾರ್ಯಕ್ರಮದಲ್ಲಿ ಅವರು ಆಶೀರ್ವಚನಗೈದು ಜನರ ಸಹಕಾರ, ತ್ಯಾಗದ ಪ್ರತೀಕವಾಗಿ ಚರ್ಚ್‌ನ ಧರ್ಮಗುರುಗಳಾದ ಫೆಡ್ರಿಕ್ ಮೊಂತೆರೋ ಅವರ ಕನಸಿ ನೂತನ ಚರ್ಚ್ ಕಟ್ಟಡ ಸುಂದರವಾಗಿ ನಿರ್ಮಾಣಗೊಂಡಿರುವುದು ಅತೀವ ಸಂತಸ ತಂದಿದೆ. ಇದಕ್ಕೆ ಸಹಕರಿಸಿದವರೆಲ್ಲರು ಅಭಿನಂದನಾರ್ಹರು ಎಂದು ಹೇಳಿದರು.ಮುಖ್ಯ ಅತಿಥಿಯಾಗಿದ್ದ ಮಾಜಿ ಸಚಿವ ರಮಾನಾಥ ರೈ ಅವರು ಮಾತನಾಡಿ, ಸುಂದರ ಚರ್ಚ್ ರೂಪುಗೊಳ್ಳುವಲ್ಲಿ ಫಾ.ಪೆಡ್ರಿಕ್ ಅವರ ಕಾರ್ಯ ಅಭಿನಂದನೀಯವಾಗಿದೆ. ಅಲ್ಲಿಪಾದೆ ಭಾಗದ ಅಭಿವೃದ್ಧಿಯಲ್ಲಿ ಚರ್ಚ್‌ನ…

Read More

ಬಂಟ್ವಾಳ: ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ 10 ನೇ ಕಾವಳಮುಡೂರು – ಎನ್. ಸಿ.ರೋಡು ಶಾಖೆ ಕಾವಳಮೂಡೂರು ಗ್ರಾಮದ ಎನ್.ಸಿ. ರೋಡಿನಲ್ಲಿರುವ ತೌಹೀದ್ ಕಾಂಪ್ಲೆಕ್ಸ್‌ನಲ್ಲಿ ಶುಭಾರಂಭಗೊಂಡಿತು. https://youtu.be/ms0tyvT48ss ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ 10ನೇ ಕಾವಳಮುಡೂರು – ಎನ್.ಸಿ.ರೋಡು ಶಾಖೆ ಉದ್ಘಾಟನೆ ನೂತನ ಶಾಖೆಯನ್ನು ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ ಉದ್ಘಾಟಿಸಿದರು. ಅವರು ಮಾತನಾಡಿ ಗ್ರಾಮೀಣ ಭಾಗದಲ್ಲಿ ಜನರಿಗೆ ಆರ್ಥಿಕ ವ್ಯವಹಾರವನ್ನು ಒದಗಿಸುವ ಕಾರ್ಯವನ್ನು ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಮಾಡಿಕೊಂಡು ಬರುತ್ತಿದೆ. ಇಂದು ಈ ಸಹಕಾರಿ ಸಂಘ ಕೇವಲ ಮೂರ್ತೆದಾರರಿಗೆ ಮಾತ್ರ ಸೀಮಿತವಾಗಿ ಉಳಿಯದೇ ಸಮಾಜದ ಎಲ್ಲಾ ವರ್ಗದ ಜನರು ಆರ್ಥಿಕ ವ್ಯವಹಾರ ಮಾಡುವ ನಿಟ್ಟಿನಲ್ಲಿ ಮುಂದುವರಿಯುತ್ತಿದೆ ಎಂದರು. ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ಸಂಘದ ಆಡಳಿತ ಮಂಡಳಿ ಮಹಿಳೆಯರಿಗೆ ಉದ್ಯೋಗ ಒದಗಿಸಿ ಕೊಡುತ್ತಿರುವುದು ವಿಶೇಷ. ಗ್ರಾಹಕರೇ ಸಂಘದ ಶಕ್ತಿಯಾಗಿದ್ದು ಗ್ರಾಹಕರ ಕಷ್ಟದ ಸಂದರ್ಭದಲ್ಲಿ ಆರ್ಥಿಕ ಚೈತನ್ಯವನ್ನು ನೀಡುವ ಕಾರ್ಯವನ್ನು ಸಜೀಪಮುನ್ನೂರು…

Read More

ಬಂಟ್ವಾಳ: ನಾವೂರು ಗ್ರಾಮದ ಶ್ರೀ ಸುಬ್ರಾಯ ವಿಷ್ಣುಮೂರ್ತಿ ನಾವೂರೇಶ್ವರ ದೇವಸ್ಥಾನದಲ್ಲಿ ಶ್ರೀ ಸುಬ್ರಾಯ ವಿಷ್ಣುಮೂರ್ತಿ ನಾವೂರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ವಿಜ್ರಂಭಣೆಯಿಂದ ನಡೆಯಿತು. https://youtu.be/Tucyu_qgaCo ನಾವೂರು ಶ್ರೀ ಸುಬ್ರಾಯ ವಿಷ್ಣುಮೂರ್ತಿ ನಾವೂರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವದ ವೀಡಿಯೋ ನೋಡಲು ಕ್ಲಿಕ್ ಮಾಡಿ ಕ್ಷೇತ್ರದ ತಂತ್ರಿಗಳಾದ ಶ್ರೀ ಶ್ರೀಪಾದ ಪಾಂಗಣ್ಣಾಯರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆದಿದ್ದು ಶನಿವಾರ ಸಂಜೆ ದೇವತಾ ಪ್ರಾರ್ಥನೆಯೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡು ದುರ್ಗಾ ನಮಸ್ಕಾರ ಪೂಜೆ, ಮಹಾಪೂಜೆ, ಉತ್ಸವ ಬಲಿ, ವಸಂತಕಟ್ಟೆ ಪೂಜೆ, ಪ್ರಸಾದ ವಿತರಣೆ ಅನ್ನಸಂರ್ಪಣೆ ಜರುಗಿತು.ಅಪಾರ ಸಂಖ್ಯೆಯಲ್ಲಿ ಭಕ್ತರು ಈ ಎಲ್ಲಾ ಪೂಜಾ ಕಾರ್ಯಗಳಲ್ಲಿ ಭಾಗಿಯಾಗಿ ದೇವರ ಪ್ರಸಾದ ಸ್ವೀಕರಿಸಿದರು. ಭಾನುವಾರ ಪ್ರಾತಃಕಾಲದಿಂದ ೧೨ ಕಾಯಿ ಗಣಪತಿ ಹೋಮ, ನವಕಲಶ ಪ್ರಧಾನ ಹೋಮ, ಕಲಶಾಭಿಷೇಕ, ಮಹಾಪೂಜೆ, ದರ್ಶನ ಬಲಿ ಉತ್ಸವ, ವಸಂತ ಕಟ್ಟೆ ಪೂಜೆ, ಬಟ್ಟಲು ಕಾಣಿಕೆ ಪ್ರಸಾದ, ಪಿಲಿಚಾಮುಂಡಿ ದೈವಕ್ಕೆ ಬಿಂಬ ಸಮರ್ಪಣೆ, ಪಂಚ ಪರ್ವ, ಪ್ರಸನ್ನ ಪೂಜೆ, ಪ್ರಸಾದ ವಿತರಣೆ ಅನ್ನಸಂತರ್ಪಣೆ ಹಾಗೂ…

Read More

ಬಂಟ್ವಾಳ: ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಡಿಪು ಶಾಖೆಯು ಸಂಘದ ಸ್ವಂತ ಕಟ್ಟಡ ಮುಡಿಪು ಜಂಕ್ಷನ್ ನಲ್ಲಿರುವ ಶಂಕರಿ ಕಾಂಪ್ಲೆಕ್ಸ್‌ನ ಒಂದನೇ ಮಹಡಿಗೆ ಸ್ಥಳಾಂತರಗೊಂಡು ಉದ್ಘಾಟನೆ ಹಾಗೂ 2022-23 ನೇ ಸಾಲಿನ ಡಾ.ಅಮ್ಮೆಂಬಳ ಬಾಳಪ್ಪ ಪ್ರಶಸ್ತಿ ಪ್ರಧಾನ ಸಮಾರಂಭ ಭಾನುವಾರ ನಡೆಯಿತು.ಶ್ರೀದಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರು ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿ, ಆಶೀರ್ವಚನ ನೀಡುತ್ತಾ, ಸಹಕಾರಿ ಕ್ಷೇತ್ರದಲ್ಲಿ ಸಮಾಜಸೇವಾ ಸಹಕಾರಿ ಬ್ಯಾಂಕ್ ನ ಕಾರ್ಯವ್ಯಾಪ್ತಿ ವಿಶಾಲವಾಗಿದ್ದು, ಸಮಾಜಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಾ ಬಂದಿದೆ. ಮುಡಿಪುವಿನಲ್ಲಿ ಸ್ವಂತ ಕಟ್ಟಡಕ್ಕೆ ಸ್ಥಳಾಂತರಗೊಂಡ ಬ್ಯಾಂಕ್ ಇನ್ನಷ್ಟು ಬೆಳವಣಿಗೆಯೊಂದಿಗೆ ಮುನ್ನಡೆಯಲಿ ಎಂದರು.ಶಾಸಕರಾದ ಯು.ಟಿ.ಖಾದರ್ ಅವರು ಕಾರ್ಯಕ್ರಮ ಉದ್ಘಾಟಿಸಿ, ಇದೇ ವೇಳೆ ದೈವದ ಮೂಲ್ಯಣ್ಣ ಬಾಲಕೃಷ್ಣ ಸಾಲ್ಯಾನ್ ಅವರಿಗೆ 2022-23 ನೇ ಸಾಲಿನ ಡಾ.ಅಮ್ಮೆಂಬಳ ಬಾಳಪ್ಪ ಪ್ರಶಸ್ತಿ ಪ್ರಧಾನಗೈದು ಶುಭ ಹಾರೈಸಿದರು.ದ.ಕ‌.ಬಿಜೆಪಿ ಉಪಾಧ್ಯಕ್ಷರಾದ ಸಂತೋಷ್ ಕುಮಾರ್ ಬೋಳಿಯಾರ್ ಭದ್ರತಾ ಕೊಠಡಿಯನ್ನು ಉದ್ಘಾಟಿಸಿ ಶುಭ ಕೋರಿದರು.ಸಮಾಜ ಸೇವಾ ಸಹಕಾರಿ ಸಂಘ…

Read More

https://youtu.be/z_TyxoIhWkc ಅಲ್ಲಿಪಾದೆ ಸಂತ ಅಂತೋನಿಯವರ ದೇವಾಲಯಕ್ಕೆ ಸರ್ವಧರ್ಮೀಯರ ಹೊರೆಕಾಣಿಕೆ ಮೆರವಣಿಗೆ ಬಂಟ್ವಾಳ: ಅಲ್ಲಿಪಾದೆ ಸಂತ ಅಂತೋನಿಯವರ ದೇವಾಲಯದಲ್ಲಿ ನವೀಕೃತ ಚರ್ಚ್ ಹಾಗೂ ನೂತನ ಗುರುನಿವಾಸದ ಉದ್ಘಾಟನೆ ಪ್ರಯುಕ್ತ ಪೂರ್ವಭಾವಿಯಾಗಿ ಭಾನುವಾರ ಸಂಜೆ ಮೊಡಂಕಾಪು ಚರ್ಚ್ ವಠಾರದಿಂದ ಸರ್ವಧರ್ಮೀಯರ ಹೊರೆಕಾಣಿಕೆ ಮೆರವಣಿಗೆ ವಿಜ್ರಂಭಣೆಯಿಂದ ನಡೆಯಿತು. ಅಗ್ರಾರ್ ಚರ್ಚ್ ಧರ್ಮಗುರು ವಂ.ಫಾ.ಪೀಟರ್ ಡಿಸೋಜ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಂಟ್ವಾಳ ವಲಯ ಪ್ರಧಾನ ಧರ್ಮಗುರು ಅತಿ ವಂದನೀಯ ಫಾಧರ್ ವಲೇರಿಯನ್ ಡಿಸೋಜ ಮುಖ್ಯ ಅತಿಥಿಗಳಾಗಿ ಮೆರವಣಿಗೆಗೆ ಚಾಲನೆ ನೀಡಿದರು. ಈ ಸಂದರ್ಭ ಸೂರಿಕುಮೇರು ಚರ್ಚ್ ಧರ್ಮಗುರು ವಂದನೀಯ ಫಾದರ್ ಗ್ರೆಗರಿ ಪಿರೇರ, ಲೊರೆಟ್ಟೊ ಚರ್ಚ್ ಧರ್ಮಗುರು ವಂ.ಫಾ.ಫ್ರಾನ್ಸಿಸ್ ಕ್ರಾಸ್ತಾ, ಅಮ್ಟೂರ್ ಚರ್ಚ್ ಧರ್ಮಗುರು ವಂ.ಫಾ.ಆಲ್ವಿನ್ ಡಿಕುನ್ಹ, ಪಿಡಬ್ಲ್ಯುಪಿಎನ್ ನಿರ್ದೇಶಕ ವಂ.ಫಾ.ರೂಪೇಶ್ ತಾವ್ರೊ, ಸಹಾಯಕ ಧರ್ಮಗುರು ವಂದನೀಯ ಫಾಧರ್ ರಾಹುಲ್ ರಾಹುಲ್ ಡೆಕ್ಸ್ಟರ್ ಡಿಸೋಜ, ಅಲ್ಲಿಪಾದೆ ಧರ್ಮಗುರು ವಂ.ಫಾ. ಫ್ರೆಡ್ರಿಕ್ ಮೊಂತೇರೊ, ಸುಪೀರಿಯರ್ ಕ್ಲೂನಿ ಕಾನ್ವೆಂಟ್ ವಂದನೀಯ ಭಗಿನಿ ನರ್ಸಿಜಾ ಸಿಕ್ವೇರಾ, ಮಾಜಿ ಸಚಿವ ಬಿ ರಮಾನಾಥ…

Read More