Author: admin
ಬಂಟ್ವಾಳ: ಜೆಸಿಐ ಬಂಟ್ವಾಳದ ವತಿಯಿಂದ ಕೇಂದ್ರ ಸರ್ಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಬಂಟ್ವಾಳ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬುಧವಾರ ಕ್ಷಯ ರೋಗಿಗಳಿಗೆ ಪೌಷ್ಠಿಕ ಆಹಾರದ ಕಿಟ್ ಹಸ್ತಾಂತರಿಸಲಾಯಿತು. ಈ ಸಂದರ್ಭ ಜೆಸಿಐ ಬಂಟ್ವಾಳದ ಅಧ್ಯಕ್ಷ ರಾಜೇಂದ್ರ ಕೆ., ನಿಕಟಪೂರ್ವಾಧ್ಯಕ್ಷ ರೋಷನ್ ರೈ, ಉಪಾಧ್ಯಕ್ಷ ಕಿಶೋರ್ ಆಚಾರ್ಯ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಶ್ವಿನಿ ಬಾಲಕೃಷ್ಣ ಹಾಜರಿದ್ದರು.
.ಬಂಟ್ವಾಳ: ಬೊಳ್ಳಾಯಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ 10 ನೇ ಕಾವಳಮೂಡೂರು ಶಾಖೆಯು ಕಾವಳಮೂಡೂರು ಗ್ರಾಮದ ಎನ್.ಸಿ. ರೋಡಿನಲ್ಲಿರುವ ತೌಹೀದ್ ಕಾಂಪ್ಲೆಕ್ಸ್ ನಲ್ಲಿ ಫೆ.12ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಶುಭಾರಂಭಗೊಳ್ಳಲಿದೆ. ಈಗಾಗಲೇ ತಾಲೂಕಿನ ವಿವಿಧ ಭಾಗಗಳಲ್ಲಿ ಸಂಘದ ಒಂಭತ್ತು ಶಾಖೆಗಳು ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಇದೀಗ ಗ್ರಾಹಕರ ಅನುಕೂಲಕ್ಕಾಗಿ ಸಂಪೂರ್ಣ ಗಣಕೀಕೃತಗೊಂಡ, ಮೂರ್ತೆದಾರರ ಸಾಲ, ಆಭರಣ ಸಾಲ, ವಾಹನ ಸಾಲ, ಗೃಹಸಾಲ, ವ್ಯಾಪಾರ ಸಾಲ, ಮಹಿಳೆಯರಿಗೆ ತ್ವರಿತ ಸಾಲ, ಕೃಷಿಯೇತರ ಸಾಲ, ಸ್ವ-ಸಹಾಯ ಸಾಲ ಸೌಲಭ್ಯಗಳೊಂದಿಗೆ ನೂತನ ಶಾಖೆ ಆರಂಭಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಕುಚ್ಚಿಗುಡ್ಡೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಅವರು ಮಂಜೂರುಗೊಳಿಸಿದ ದೇಣಿಗೆ ಚೆಕ್ಕನ್ನು ವಗ್ಗ ವಲಯ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮೇಲ್ವಿಚಾರಕಿ ಸುಜಾತ ಪಿ. ಮತ್ತು ಸೇವಾ ನಿರತೆ ರೇಖಾ ಕಾಡಬೆಟ್ಟು ಹಸ್ತಾಂತರಿಸಿದರು. ಬಂಟ್ವಾಳ: ಕಾಡಬೆಟ್ಟು ಗ್ರಾಮ ಪಿಲಿಂಗಾಲು ಶ್ರೀ ಗಾಯತ್ರಿದೇವಿ ದೇವಸ್ಥಾನಕ್ಕೆ ರೂ .1 ಲಕ್ಷ ಮೊತ್ತದ ದೇಣಿಗೆ ಚೆಕ್ ಭಾನುವಾರ ಸಂಜೆ ಹಸ್ತಾಂತರಿಸಲಾಯಿತು. ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಅವರು ಮಂಜೂರುಗೊಳಿಸಿದ ದೇಣಿಗೆ ಚೆಕ್ಕನ್ನು ವಗ್ಗ ವಲಯ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮೇಲ್ವಿಚಾರಕಿ ಸುಜಾತ ಪಿ. ಮತ್ತು ಸೇವಾ ನಿರತೆ ರೇಖಾ ಕಾಡಬೆಟ್ಟು ಹಸ್ತಾಂತರಿಸಿದರು. ದೇವಳದ ಆಡಳಿತ ಧರ್ಮದರ್ಶಿ ಕೆ.ಎಸ್.ಪಂಡಿತ್, ಅರ್ಚಕ ಶ್ರೀಪತಿ ಉಡುಪ ಕೆಳಮಂಗಲ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಮೋಹನ್ ಕೆ.ಶ್ರೀಯಾನ್ ರಾಯಿ, ಪ್ರಮುಖರಾದ ಪುರುಷೋತ್ತಮ ಬಂಗೇರ ನಾಟಿ, ಅಭಿಷೇಕ್ ಗಾಣಿಗ, ಹರೀಶ್ ಪಿಲಿಂಗಾಲು, ಡೊಂಬಯ ಸಪಲ್ಯ ಮತ್ತಿತರರು ಇದ್ದರು.
ಬಂಟ್ವಾಳ: ಇಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ದೂರದೃಷ್ಟಿಯ ಯೋಜನೆಯಾದ ಸ್ಕಿಲ್ ಇಂಡಿಯಾ ಮೂಲಕ ನವಪೀಳಿಗೆಗೆ ವೃತ್ತಿಸಂಬಂಧ ಕೋರ್ಸ್ ಗಳನ್ನು ಮಾಡಲು ಪ್ರೇರೇಪಣೆ ನೀಡಲಾಗುತ್ತಿದೆ. ಇದರ ಸದುಪಯೋಗ ಪಡೆಯಿರಿ ಎಂದು ವಿದ್ಯಾರ್ಥಿಗಳಿಗೆ ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಸಲಹೆ ನೀಡಿದರು. ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಬುಧವಾರ ಭೇಟಿ ನೀಡಿದ ಅವರು ಕೇಂದ್ರದ ಸ್ಥಾಪಕ ಹಾಗೂ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರ ಚಿಂತನೆಗಳ ಮೂಲಕ ಸಂಸ್ಕಾರಯುತವಾದ ಶಿಕ್ಷಣ ವ್ಯವಸ್ಥೆಯನ್ನು ನೀಡಲಾಗುತ್ತಿದೆ ಎಂದು ಶ್ಲಾಘಿಸಿದರು. ಶೈಕ್ಷಣಿಕವಾಗಿಯಷ್ಟೇ ಅಲ್ಲ, ಸಂಸ್ಕಾರಯುತವಾಗಿ ಬೆಳೆಯಲು ಹಾಗೂ ರಾಷ್ಟ್ರೀಯ ವಿಚಾರಧಾರೆಯುಳ್ಳ ನಾಗರಿಕರಾಗಿ ರೂಪುಗೊಳ್ಳಲು ನವಭಾರತ ನಿರ್ಮಾಣಕ್ಕೆ ವಿದ್ಯಾರ್ಥಿಗಳನ್ನು ತಯಾರು ಮಾಡುವ ಕಾರ್ಯ ಇಂದು ಆಗಬೇಕಾಗಿದೆ ಎಂದರು. ಇದಕ್ಕೂ ಮೊದಲು ವಿದ್ಯಾಕೇಂದ್ರದ ವಿವಿಧ ಚಟುವಟಿಕೆಗಳನ್ನು ಗಮನಿಸಿದ ಡಾ.ಪ್ರಮೋದ್ ಸಾವಂತ್, ಬಳಿಕ ಪಿಯು ವಿದ್ಯಾರ್ಥಿಗಳ ದೀಪಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಸಂದರ್ಭ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ…
ಮಂಗಳೂರು: ಕೋಟಿ ಚೆನ್ನಯ ಸೇವಾ ಬ್ರಿಗೇಡ್ ಮಂಗಳೂರು ಆಶ್ರಯದಲ್ಲಿ ಕಾರ್ಪೊರೇಟರ್ ಕಿರಣ್ ಕುಮಾರ್ ಕೋಡಿಕಲ್ ಸಾರಥ್ಯದಲ್ಲಿ ಫೆ.19ರಂದು ಮಧ್ಯಾಹ್ನ 3ರಿಂದ ಬಂಗ್ರಕೂಳೂರು ಗೋಲ್ಡ್ಫಿಂಚ್ ಮೈದಾನದಲ್ಲಿ 8+2 ಜನರ ಪುರುಷರ ಹಾಗೂ ಮಹಿಳೆಯರ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಹಾಗೂ ಉತ್ತರ ಕನ್ನಡ ಜಿಲ್ಲಾ ವ್ಯಾಪ್ತಿಯ ಲೆವೆಲ್ ಮಾದರಿಯ ಹಗ್ಗಜಗ್ಗಾಟ ಸ್ಪರ್ಧೆ ಕೋಟಿ ಚೆನ್ನಯ ಟ್ರೋಫಿ -2023 ಹಮ್ಮಿಕೊಳ್ಳಲಾಗಿದೆ. ಪುರುಷರ ವಿಭಾಗದಲ್ಲಿ ಪ್ರಥಮ 30,000 ರೂ. ನಗದು ಹಾಗೂ ಟ್ರೋಫಿ, ದ್ವಿತೀಯ 20,000 ರೂ. ನಗದು ಹಾಗೂ ಟ್ರೋಫಿ, ತೃತೀಯ 10,000 ರೂ. ನಗದು ಹಾಗೂ ಟ್ರೋಫಿ, ಚತುರ್ಥ 5,000 ರೂ. ನಗದು ಹಾಗೂ ಟ್ರೋಫಿ ನೀಡಲಾಗುವುದು. ಮಹಿಳೆಯರ ವಿಭಾಗದಲ್ಲಿ 20,000 ರೂ. ನಗದು ಹಾಗೂ ಟ್ರೋಫಿ, ದ್ವಿತೀಯ 15,000 ರೂ. ನಗದು ಹಾಗೂ ಟ್ರೋಫಿ, ತೃತೀಯ 10,000 ರೂ. ನಗದು ಹಾಗೂ ಟ್ರೋಫಿ, ಚತುರ್ಥ 5,000 ರೂ. ನಗದು ಹಾಗೂ ಟ್ರೋಫಿ ಬಹುಮಾನ ನೀಡಲಾಗುವುದು. ಭಾಗವಹಿಸುವ ತಂಡಗಳಿಗೆ ಉಚಿತ ಪ್ರವೇಶ. ಎಲ್ಲ…
ಬಂಟ್ವಾಳ: ಮುಂದಿನ ಮಾರ್ಚ್ ತಿಂಗಳ ಅಂತ್ಯದವರೆಗೆ ಬೇಕಾಕುವಷ್ಟು ನೀರಿನ ಲಭ್ಯತೆ ತುಂಬೆ ವೆಂಟ್ಡ್ ಡ್ಯಾಂನಲ್ಲಿದ್ದು ಜನರು ನೀರನ್ನು ಅನಾವಶ್ಯಕ ವ್ಯಯ ಮಾಡದೇ ಸದ್ಬಳಕೆ ಮಾಡುವಂತೆ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಜಯಾನಂದ ಅಂಚನ್ ತಿಳಿಸಿದರು. ತುಂಬೆ ವೆಂಟೆಡ್ ಡ್ಯಾಂನಲ್ಲಿ ಬುಧವಾರ ಗಂಗಾಪೂಜೆ ನೆರವೇರಿಸಿ ಬಳಿಕ ನೇತ್ರಾವತಿ ನದಿಗೆ ಭಾಗಿನ ಅರ್ಪಿಸಿ ಮಾತನಾಡಿದರು. ವಾಹನ ತೊಳೆಯಲು, ಕಟ್ಟಡ ನಿರ್ಮಾಣ ಕಾಮಗಾರಿ ಮೊದಲಾದ ಕೆಲಸಗಳಿಗೆ ಅನಾವಶ್ಯಕವಾಗಿ ನೀರನ್ನು ಬಳಸುವುದನ್ನು ತಡೆಯುವುದರಿಂದ ನೀರಿನ ದುಂದುವೆಚ್ಚವನ್ನು ತಪ್ಪಿಸಬಹುದು, ಕಳೆದ ನಾಲ್ಕು ವರ್ಷಗಳ ಬೇಸಿಗೆಯಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಕಂಡು ಬಂದಿರಲಿಲ್ಲ. ಈ ಬಾರಿಯೂ ನೀರಿನ ಅಭಾವ ಬರುವುದಿಲ್ಲ ಎನ್ನುವ ನಿರೀಕ್ಷೆ ಇದೆ ಎಂದು ತಿಳಿಸಿದರು. ಪಾಲಿಕೆ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ ಮಾತನಾಡಿ ಬೇಸಿಗೆ ಪೂರ್ತಿ ನದಿಗೆ ಒಳಹರಿವು ಬರಲಿ, ಸಮಯಕ್ಕೆ ಸರಿಯಾಗಿ ಹಿಂಗಾರು ಮಳೆ ಬಂದು ಡ್ಯಾಂ ತುಂಬಿ ಹರಿಯಲಿ, ನೇತ್ರಾವತಿ ನದಿ ನೀರನ್ನು ಅವಲಂಬಿಸಿರುವಂತಹ ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯ ಜನರು…
ಬಂಟ್ವಾಳ: ಜ್ಞಾನ ಮತ್ತು ಮನನ ಮಾಡುವ ಗ್ರಹಿಕಾ ಅನುಭವ ಜೊತೆಯಾದಾಗ ಪಠ್ಯ ಚಟುವಟಿಕೆಗಳು ಅರ್ಥವಾಗುವುದು. ಹೀಗಾದಾಗ ನಾವು ಕಷ್ಟ ಎಂದು ಭಾವಿಸಿದ ಪರೀಕ್ಷೆಯ ಸವಾಲು ಸರಳವಾಗುತ್ತದೆ ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಎಂ.ಪಿ. ಹೇಳಿದರು. ಅವರು ಮಂಗಳವಾರ ಬಂಟ್ವಾಳ ಘಟಕ ಜಮೀಯತುಲ್ ಫಲಾಹ್ ಹಾಗೂ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸಹಯೋಗದಲ್ಲಿ ಬಿ.ಸಿ.ರೋಡ್ ಲಯನ್ಸ್ ಸೇವಾ ಮಂದಿರದಲ್ಲಿ ಒಂದು ದಿನದ ಎಸ್ಸೆಸ್ಸೆಲ್ಸಿ ಪರೀಕ್ಷಾ ಸಿದ್ಧತಾ ಕಾರ್ಯಾಗಾರ-2023 ವನ್ನು ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ ಜಮೀಯತುಲ್ ಫಲಾಹ್ ಅಧ್ಯಕ್ಷ ರಶೀದ್ ವಿಟ್ಲ ಮಾತನಾಡಿ ಶಿಸ್ತು ಮತ್ತು ಸಂಯಮದಿಂದ ಉತ್ತಮ ವಿದ್ಯಾರ್ಥಿಗಳಾಗಿ ಸಮಾಜದಲ್ಲಿ ಗುರುತಿಸುವಂತಿರಬೇಕು ಎಂದು ಹೇಳಿದರು. ಕೋಶಾಧಿಕಾರಿ ಎಂ.ಎಚ್. ಇಕ್ಬಾಲ್, ಪೂರ್ವಾಧ್ಯಕ್ಷ ಪಿ. ಮಹಮ್ಮದ್, ಸುಲೈಮಾನ್ ಸೂರಿಕುಮೇರು, ಸದಸ್ಯ ಅಬ್ಬಾಸಲಿ ಬೋಳಂತೂರು, ಅರ್ಷದ್ ಸರವು, ಆಶಿಕ್ ಕುಕ್ಕಾಜೆ, ಕೆ.ಎಸ್. ಮಹಮ್ಮದ್ ಮೊದಲಾದವರು ಉಪಸ್ಥಿತರಿದ್ಥರು. ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಯಾಕೂಬು ನಡ, ವಿಜ್ಞಾನ ಶಿಕ್ಷಕ ರೋಶನ್ ಅಲೆಕ್ಸಾಂಡರ್ ಪಿಂಟೋ, ರಾಜ್ಯ ಪ್ರಶಸ್ತಿ ಪುರಸ್ಕೃತ…
ಬಂಟ್ವಾಳ: ಕಾಡಬೆಟ್ಟು ಗ್ರಾಮದ ಪಿಲಿಂಗಾಲು ಶ್ರೀ ಗಾಯತ್ರಿ ದೇವಸ್ಥಾನದಲ್ಲಿ ಫೆ.8 ರಿಂದ ಫೆ. 10ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಎಂ. ತುಂಗಪ್ಪ ಬಂಗೇರ ತಿಳಿಸಿದರು. https://youtu.be/j8dwtoiUAmg ಪಿಲಿಂಗಾಲು ಶ್ರೀ ಗಾಯತ್ರಿ ದೇವಸ್ಥಾನ ಬ್ರಹ್ಮಕಲಶೋತ್ಸವದಸುದ್ದಿಗೋಷ್ಟಿ ಫೆ. 8ರಂದು ಬೆಳಿಗ್ಗೆ 8ಗಂಟೆಯಿಂದ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಳ್ಳಲಿದೆ. ಸಂಜೆ 3 ಗಂಟೆಗೆ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ. ಶಾಸಕ ರಾಜೇಶ್ ನಾಯ್ಕ್ ಹೊರೆಕಾಣಿಕೆ ಮೆರವಣಿಗೆ ಉದ್ಘಾಟಿಸಲಿದ್ದಾರೆ, ಕಾರಿಂಜ ಕ್ಷೇತ್ರದ ಮಾಜಿ ಆಡಳಿತ ಮೊಕ್ತೇಸರ ಪಿ. ಜಿನರಾಜ ಆರಿಗ ಗೌರವ ಉಪಸ್ಥಿತರಿರುವವರು. ರಾತ್ರಿ 7.30ಕ್ಕೆ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಬಳಿಕ ಪರಿಮಳ ಕಾಲನಿ ನಾಟಕ ನಡೆಯಲಿದೆ. ಫೆ. 9 ರಂದು ಬೆಳಿಗ್ಗೆ 9.28ಕ್ಕೆ ಮೀನ ಲಗ್ನದಲ್ಲಿ ಮಹಾಗಣಪತಿ ಪ್ರತಿಷ್ಠೆ, ಶ್ರೀ ರಾಘವೇಂದ್ರ ಗುರುಗಳ ಬಿಂಬ ಪ್ರತಿಷ್ಠಾಪನೆ, ಪರಿವಾರ ದೈವಗಳ ಪ್ರತಿಷ್ಠೆ, ಪ್ರತಿಷ್ಠಾ ಕಲಶ, ಬ್ರಹ್ಮಕಲಶಕ್ಕೆ ಮಂಟಪ ಸಂಸ್ಕಾರ, ಆಶ್ಲೇಷ ಬಲಿ, ನಾಗತಂಬಿಲ ನಡೆಯಲಿದೆ. ಬೆಳಿಗ್ಗೆ 11 ಗಂಟೆಗೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು…
https://youtu.be/1tUKGXGGtgk ಬಂಟ್ವಾಳ: ಅಲ್ಲಿಪಾದೆ ಸಂತ ಅಂತೋನಿಯವರ ದೇವಾಲಯದಲ್ಲಿ ನವೀಕೃತ ಚರ್ಚ್ ಹಾಗೂ ನೂತನ ಗುರುನಿವಾಸದ ಉದ್ಘಾಟನೆ ಫೆ.13ರಂದು ಬೆಳಗ್ಗೆ 9.30ಕ್ಕೆ ನಡೆಯಲಿದೆ ಎಂದು ಚರ್ಚ್ ನ ಧರ್ಮಗುರುಗಳಾದ ವಂ.ಫಾ.ಫ್ರೆಡ್ರಿಕ್ ಮೊಂತೇರೋ ಹೇಳಿದರು.ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯ ಧರ್ಮಾಧ್ಯಕ್ಷ ಅತಿವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ ಉದ್ಘಾಟನೆ ನೆರವೇರಿಸಿ, ಆಶೀರ್ವಚನ ನೀಡುವರು. ಗೌರವ ಅತಿಥಿಗಳಾಗಿ ಕ್ಯಾಲಿಕಟ್ ಧರ್ಮಪ್ರಾಂತ್ಯದ ಶ್ರೇಷ್ಠ ಧರ್ಮಗುರುಗಳಾದ ಅತಿವಂದನೀಯ ಮೊನ್ಸಿಂಜೊರ್ ಡಾ. ಜೆನ್ಸನ್ ಪುತ್ತನ್ ವಿತ್ತಿಲ್, ಬಂಟ್ವಾಳ ವಲಯ ಪ್ರಧಾನ ಧರ್ಮಗುರುಗಳಾದ ಅತಿ ವಂದನೀಯ ಫಾ. ವಲೇರಿಯನ್ ಡಿಸೋಜ, ಸಿಸ್ಟರ್ಸ್ ಆಫ್ ಸೈಂಟ್ ಜೋಸೆಫ್ ಕ್ಲೂನಿ ಪ್ರೊವಿನ್ಶಿಯಲ್ ಸುಪೀರಿಯರ್ ಆಗಿರುವ ಅತಿ ವಂದನೀಯ ಧರ್ಮಭಗಿನಿ ಅನ್ನೀಸ್ ಕಲ್ಲರಕಲ್, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮಾಜಿ ಸಚಿವ ಬಿ.ರಮಾನಾಥ ರೈ, ವಿಧಾನಪರಿಷತ್ತು ಸದಸ್ಯ ಕೆ.ಹರೀಶ್ ಕುಮಾರ್, ಅಲ್ಲಿಪಾದೆ ಕ್ಲೂನಿ ಕಾನ್ವೆಂಟ್ ಸುಪೀರಿಯರ್ ವಂ.ಧರ್ಮಭಗಿನಿ ನರ್ಸಿಜಾ ಸಿಕ್ವೆರಾ ಭಾಗವಹಿಸುವರು ಎಂದರು. ಉದ್ಘಾಟನೆಗೆ…
ಬಂಟ್ವಾಳ: ನಾವೂರು ಗ್ರಾಮದ ಶ್ರೀ ಸುಬ್ರಾಯ ವಿಷ್ಣುಮೂರ್ತಿ ನಾವೂರೇಶ್ವರ ದೇವಸ್ಥಾನದಲ್ಲಿ ಶ್ರೀ ಸುಬ್ರಾಯ ವಿಷ್ಣುಮೂರ್ತಿ ನಾವೂರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ವ್ಯಾಘ್ರ ಚಾಮುಂಡಿ ದೈವದ ನೇಮೋತ್ಸವವು ಫೆ.11 ಮತ್ತು ಫೆ.12ರಂದು ನಡೆಯಲಿದೆ.ಕ್ಷೇತ್ರದ ತಂತ್ರಿಗಳಾದ ಶ್ರೀ ಶ್ರೀಪಾದ ಪಾಂಗಣ್ಣಾಯರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು ಫೆ. 11ರಂದು ಶನಿವಾರ ಸಂಜೆ 5.30ಕ್ಕೆ ದೇವತಾ ಪ್ರಾರ್ಥನೆಯೊಂದಿಗೆ ಆರಂಭಗೊಂಡು ದುರ್ಗಾ ನಮಸ್ಕಾರ ಪೂಜೆ, ಮಹಾಪೂಜೆ, ಉತ್ಸವ ಬಲಿ, ವಸಂತಕಟ್ಟೆ ಪೂಜೆ, ಪ್ರಸಾದ ವಿತರಣೆ ಅನ್ನಸಂರ್ಪಣೆ ನಡೆಯಲಿದೆ. ಫೆ.12ರಂದು ಪ್ರಾತಃ ಘಂಟೆ 8 ರಿಂದ 12 ಕಾಯಿ ಗಣಪತಿ ಹೋಮ, ನವಕಲಶ ಪ್ರಧಾನ ಹೋಮ, ಕಲಶಾಭಿಷೇಕ, ಮಹಾಪೂಜೆ, ದರ್ಶನ ಬಲಿ ಉತ್ಸವ, ವಸಂತ ಕಟ್ಟೆ ಪೂಜೆ, ಬಟ್ಟಲು ಕಾಣಿಕೆ ಪ್ರಸಾದ, ಪಿಲಿಚಾಮುಂಡಿ ದೈವಕ್ಕೆ ಬಿಂಬ ಸಮರ್ಪಣೆ, ಪಂಚ ಪರ್ವ, ಪ್ರಸನ್ನ ಪೂಜೆ, ಪ್ರಸಾದ ವಿತರಣೆ ಅನ್ನಸಂತರ್ಪಣೆ ಹಾಗೂ ಸಂಜೆ ಶ್ರೀ ದುರ್ಗಾಂಬಾ ಭಜನಾ ಮಂದಿರ ಮಂಡಾಡಿ ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಸಂಜೆ 6.30 ರಿಂದ…








