Author: admin

ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಕೇಂದ್ರ ಸರ್ಕಾರದ ನಿಕ್ಷಯ ಮಿತ್ರ ಯೋಜನೆಯಡಿ ಕ್ಷಯ ರೋಗಿಗಳಿಗೆ ಆಹಾರ ಧಾನ್ಯ ವಿತರಣಾ ಕಾರ್ಯಕ್ರಮ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ನಡೆಯಿತು. https://youtu.be/Y3CBWdezipo ಸೇವಾಂಜಲಿಯಲ್ಲಿ ಕ್ಷಯ ರೋಗಿಗಳಿಗೆ ಆಹಾರ ಧಾನ್ಯ ವಿತರಣಾ ಕಾರ್ಯಕ್ರಮದ ವಿಡೀಯೋ ತುಣುಕು ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು ಆಹಾರ ಧಾನ್ಯ ಕಿಟ್ ವಿತರಿಸಿ ಮಾತನಾಡಿ ನಿಕ್ಷಯ ಮಿತ್ರ ಯೋಜನೆ ಪ್ರಧಾನಿ ನರೇಂದ್ರ ಮೋದಿಯವರ ವಿಶಿಷ್ಟ ಕಲ್ಪನೆಯಾಗಿದ್ದು ಭಾರತದೇಶವನ್ನು ಕ್ಷಯ ಮುಕ್ತ ರಾಷ್ಟ್ರವನ್ನಾಗಿ ಮಾಡಬೇಕೆನ್ನುವ ಉದ್ದೇಶದಿಂದ ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಪೌಷ್ಠಿಕ ಆಹಾರ ಕ್ಷಯರೋಗಿಗಳಿಗೆ ಅತ್ಯಂತ ಅವಶ್ಯಕವಾಗಿ ಬೇಕಾಗಿದ್ದು ಸರಿಯಾದ ಪೌಷ್ಠಿಕ ಆಹಾರವನ್ನು ಸರಿಯಾದ ಸಮಯಕ್ಕೆ ಸೇವಿಸಿದ್ದಲ್ಲಿ ರೋಗದಿಂದ ಗುಣಮುಖರಾಗಲು ಸಾಧ್ಯವಿದೆ. ಕೇಂದ್ರ ಸರ್ಕಾರ ಸ್ಥಳೀಯ ಸೇವಾ ಸಂಸ್ಥೆಗಳ ಮೂಲಕ ಈ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುತ್ತಿದ್ದು ಈ ಭಾಗದಲ್ಲಿ ಸೇವಾಂಜಲಿ ಪ್ರತಿಷ್ಠಾನ ಈ ಕಾರ್ಯವನ್ನು ಮಾಡಿಕೊಂಡು ಬರುತ್ತಿದೆ. ಕೃಷ್ಣ ಕುಮಾರ್ ಪೂಂಜ ಅವರು ಹಲವಾರು ವರ್ಷಗಳಿಂದ ಇಂತಹ ಸೇವಾ ಕಾರ್ಯವನ್ನು…

Read More

ಬಂಟ್ವಾಳ: ಮೆಲ್ಕಾರಿನ ಶ್ರೀ ಗುರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ 6ನೇ ಶಾಖೆಯು ರವಿವಾರ ವಿಟ್ಲ ಅರಮನೆ ರಸ್ತೆಯ ರಸ್ಕಿನ್ಹಾ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿತು. ಕಚೇರಿಯನ್ನು ಉದ್ಘಾಟಿಸಿದ ಪುತ್ತೂರು ಶಾಸಕ ಸಂಜೀವ ಮಠಂದೂರು ಮಾತನಾಡಿ, ಸಹಕಾರಿ ಸಂಘಗಳು ಶ್ರದ್ಧೆ, ಆರ್ಥಿಕ ಶಿಸ್ತು, ಪ್ರಾಮಾಣಿಕತೆಯ ಮೂಲಕ ನಮ್ಮ ಜಿಲ್ಲೆಗೆ ಸಹಕಾರಿ ಕಾಶಿ ಎಂಬ ಗೌರವವನ್ನು ತಂದುಕೊಟ್ಟಿದೆ. ಪ್ರತಿ ಸಂಘಗಳ ಆಡಳಿಕ ಮಂಡಳಿ, ಸಿಬಂದಿಯ ನಿಷ್ಠೆ ರಾಷ್ಟ್ರೀಕೃತ ಬ್ಯಾಂಕಿಗೆ ಕಡಿಮೆ ಇಲ್ಲದ ರೀತಿಯಲ್ಲಿ ಬೆಳೆಯಲು ಕಾರಣವಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಕೆ.ಹರಿಕೃಷ್ಣ ಬಂಟ್ವಾಳ್ ಮಾತನಾಡಿ, ನಾರಾಯಣ ಗುರುಗಳ ಸ್ಮರಣೆಯಲ್ಲಿ ಅವರ ಚಿಂತನೆಗೆ ಪೂರಕವಾಗಿ ಈ ಸಹಕಾರಿಯು ಪ್ರಾರಂಭಗೊಂಡಿದ್ದು, ಕಳೆದ ಸಾಲಿನಲ್ಲಿ 65 ಕೋ.ರೂ.ವ್ಯವಹಾರ ನಡೆಸಿ 21.88 ಲಕ್ಷ ರೂ. ಲಾಭಗಳಿಸಿದೆ. 100 ಸ್ವಸಹಾಯ ಗುಂಪುಗಳ ಮೂಲಕ ಸದಸ್ಯರಿಗೆ ನೆರವಾಗುತ್ತಿದ್ದು, ಮಹಿಳೆಯರಿಗೆ ವಿಶೇಷವಾಗಿ ವೈಯಕ್ತಿಕ ಸಾಲ ಯೋಜನೆ ಕಲ್ಪಿಸಲಾಗಿದೆ. ಗ್ರಾಹಕರೇ ದೇವರೆಂಬ ಕಲ್ಪನೆಯಲ್ಲಿ ಸೊಸೈಟಿ ವ್ಯವಹರಿಸುತ್ತಾ ಬಂದಿದೆ ಎಂದರು.ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಮೊಕ್ತೇಸರ ವಿಟ್ಲ…

Read More

ಬಂಟ್ವಾಳ ಪುಂಜಾಲಕಟ್ಟೆ ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ಹಾಗೂ ಶ್ರೀ ಮುರುಘೇಂದ್ರ ವನಿತಾ ಸಮಾಜ ಇದರ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು ಇದರ ಸಹಕಾರದಲ್ಲಿ ರಂಗಭೂಮಿ ಕಲಾವಿದರಾಗಿದ್ದ ದಿ.ಲಕ್ಷ್ಮಣ ಶೆಟ್ಟಿಗಾರ್,ದಿ.ಶ್ರೀಧರ್ ಕೆ.ವಿ., ದಿ.ರಘುರಾಮ ಶೆಟ್ಟಿ ಅವರ ಸ್ಮರಣಾರ್ಥ ಫೆ.೪ರಿಂದ ಫೆ.೧೧ರವರೆಗೆ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ನಡೆಯುವ ದ.ಕ.,ಉಡುಪಿ ಹಾಗೂ ಕಾಸರಗೋಡು ಜಿಲ್ಲಾ ಮಟ್ಟದ ತುಳು ನಾಟಕ ಸ್ಪರ್ಧೆಗೆ ಶನಿವಾರ ರಾತ್ರಿ ಚಾಲನೆ ನೀಡಲಾಯಿತು. Advertisement ಪ್ರಗತಿಪರ ಕೃಷಿಕ ಉದಯಕುಮಾರ್ ಜೈನ್ ಕಟ್ಟೆಮನೆ ಅವರು ನಾಟಕ ಸ್ಪರ್ಧೆಯನ್ನು ಉದ್ಘಾಟಿಸಿ ಶುಭಹಾರೈಸಿದರು. ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಾಜಮುಖಿ ಕಾರ್ಯಗಳೊಂದಿಗೆ ನಾಟಕ ಸ್ಪರ್ಧೆಯನ್ನು ಆಯೋಜಿಸಿದ ಮಿತ್ರ ಮಂಡಳಿ ಕಾರ್ಯ ಅಭಿನಂದನೀಯ ಎಂದರು. ಮಾಜಿ ಸಚಿವ ಬಿ.ರಮಾನಾಥ ರೈ ಅವರು ದಿ. ಕೆ.ವಿ.ಶ್ರೀಧರ್ ರಂಗವೇದಿಕೆಯನ್ನುಉದ್ಘಾಟಿಸಿ ಮಾತನಾಡಿ,ಮನುಷ್ಯ ಕ್ರಿಯಾಶೀಲನಾಗಿದ್ದುಕೊಂಡು ಕಾರ್ಯನಿರ್ವಹಿಸಬೇಕು. ಈ ನಿಟ್ಟಿನಲ್ಲಿ ಮಿತ್ರಮಂಡಳಿ ಹಾಗೂ ವನಿತಾ ಸಮಾಜ ಸಾಮಾಜಿಕ ಹಾಗೂ ಜನಪರವಾಗಿ ಉತ್ತಮವಾಗಿ ಕೆಲಸ ಮಾಡುತ್ತಿದೆ…

Read More

ಬಂಟ್ವಾಳ: ಸ್ವಾತಂತ್ರ್ಯ ಯೋಧ ಡಾ. ಅಮ್ಮೆಂಬಳ ಬಾಳಪ್ಪ ಅವರ ಜನ್ಮಶತಾಬ್ದಿ ಆಚರಣೆಯ ಪೂರ್ವಭಾವಿ ಸಭೆ ಬಿ.ಸಿ.ರೋಡಿನಲ್ಲಿ ಶನಿವಾರ ಸಂಜೆ ನಡೆಯಿತು.ಡಾ. ಸೋಮಸುಂದರ್ ರಾವ್ ಅವರ ಮನೆಯಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ. ತುಕರಾಂ ಪೂಜಾರಿ ವಹಿಸಿ ಸಲಹೆ ಸೂಚನೆಗಳನ್ನು ನೀಡಿದರು. ನಿವೃತ್ತ ಬಿಎಸ್ ಎಫ್ ಕಮಾಂಡೆಂಟ್ಸ್ ಚಂದಪ್ಪ ಮೂಲ್ಯ, ದ.ಕ. ಜಿಲ್ಲಾ ಮೂಲ್ಯರ ಯಾನೇ ಕುಲಾಲ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್, ಪುಂಡರಿಕಾಕ್ಷ, ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜಾ, ಬಂಟ್ಚಾಳ ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷ ನಾರಾಯಣ ಸಿ. ಪೆರ್ನೆ, ಸಮಾಜ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸುರೇಶ್ ಕುಲಾಲ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಭೋಜ ಮೂಲ್ಯ, ಪ್ರಮುಖರಾದ ದಯಾನಂದ ಬೆಳ್ಳೂರು, ಮಚ್ಚೇಂದ್ರ ಸಾಲ್ಯಾನ್, ಜಲಜಾಕ್ಷಿ ಕುಲಾಲ್, ಸುರೇಶ್ ಕುಮಾರ್ ನಾವೂರು, ಶ್ರೀನಿವಾಸ ದೈಪಲ ಮತ್ತಿತರರು ಉಪಸ್ಥಿತರಿದ್ದರು.ದಾಮೋದರ್ ಬಿ.ಎಂ. ಕಾರ್ಯಕ್ರಮ ನಿರೂಪಿಸಿದರು. ಉಮೇಶ್ ಪಿ.ಕೆ. ವಂದಿಸಿದರು

Read More

ಬಂಟ್ವಾಳ : ಅವಧಿ ಮುಗಿದ ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತಿಗೆ ಚುನಾವಣೆ ಹಾಗೂ ವಿವಿಧ ಕಾರಣದಿಂದಾಗಿ ತೆರವಾದ ಎರಡು ಗ್ರಾಮಪಂಚಾಯತಿಗಳ ತಲಾ ಒಂದು ಸ್ಥಾನಕ್ಕೆ ಉಪಚುನಾವಣೆ ಫೆ.25 ರಂದು ನಡೆಯಲಿದೆ.ಪ್ರಮುಖವಾಗಿ ಬಂಟ್ವಾಳ ತಾಲೂಕಿನ ಮಂಗಳೂರು ವಿಧಾನ ಸಭಾ ಕ್ಷೇತ್ರಕ್ಕೊಳಪಟ್ಟ ಪುದು ಗ್ರಾಮ ಪಂಚಾಯತಿ 34 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಇದರ ಜೊತೆಗೆ ತಾಲೂಕಿನ ಅನಂತಾಡಿ ಹಾಗೂ ನೆಟ್ಲಮುಡ್ನೂರು ಗ್ರಾಮ ಪಂಚಾಯತಿಗಳಲ್ಲಿ ತೆರವಾದ ತಲಾ ಒಂದೊಂದು ಸ್ಥಾನಗಳಿಗೆ ಉಪ ಚುನಾವಣೆಯು ಅದೇ ದಿನ ನಡೆಯಲಿದೆ. Advertisement ಫೆ.14ನಾಮಪತ್ರ ಸಲ್ಲಿಕೆಗೆ ಕೊನೆದಿನ:ಫೆ.8 ಬುಧವಾರ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಫೆ.14 ಕೊನೆ ದಿನವಾಗಿದೆ. ಫೆ.15 ನಾಮಪತ್ರದ ಪರಿಶೀಲನೆ ಡೆಯುವುದು. ಫೆ.17 ನಾಮಪತ್ರ ವಾಪಾಸ್ ಪಡೆಯಲು ಕೊನೆದಿನವಾಗಿದೆ. ಫೆ.25 ರಂದು ಶನಿವಾರ ಚುನಾವಣೆ ನಡೆಯಲಿದ್ದು, ಅಗತ್ಯ ಬಿದ್ದರೆ ಫೆ. 27 ಮರುಮತದಾನ ನಡೆಯಲಿದೆ. ಫೆ.28ರಂದು ಮತ ಎಣಿಕೆ ನಡೆಯುವುದು.ಪುದು ಗ್ರಾ.ಪಂ.ವ್ಯಾಪ್ತಿಯಲ್ಲಿ 10 ವಾರ್ಡ್ ಗಳನ್ನೊಳಗೊಂಡಿದ್ದು, ಒಟ್ಟು 34 ಸದಸ್ಯ ಬಲವನ್ನು ಹೊಂದಿದೆ. ಈಗಾಗಲೇ ಪ್ರಕಟಿತ ಮೀಸಲಾತಿಗನುಗಣವಾಗಿ…

Read More

ಬಂಟ್ವಾಳ: ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಸಂಭ್ರಮದಲ್ಲಿರುವ ಶ್ರೀ ನಂದಾವರ ದೇವಸ್ಥಾನಕ್ಕೆ ದೇವಾಡಿಗ ಸಮಾಜ ಶ್ರೀ ನಂದಾವರ ದೇವಸ್ಥಾನ ರಥ ಸಮರ್ಪಣಾ ಸಮಿತಿ ನೂತನ ರಥವನ್ನು ಸಮರ್ಪಿಸಿದ್ದು ಶುಕ್ರವಾರ ರಾತ್ರಿ ಮೊದಲ ರಥೋತ್ಸವ ನಡೆಯಿತು. ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ರಥೋತ್ಸವ ಕಣ್ತುಂಬಿಕೊಂಡರು. https://youtu.be/2ogTs77uY-s ದೇವಾಡಿಗ ಸಮಾಜದಿಂದ ನಂದಾವರ ಕ್ಷೇತ್ರಕ್ಕೆ ಅರ್ಪಣೆಯಾದ ನೂತನ ರಥದಲ್ಲಿ ಮೊದಲ ರಥೋತ್ಸವ ಹೇಗಿತ್ತು? ಲಿಂಕ್ಕ್ಲಕ್ ಮಾಡಿ ಬಾನಂಗಳದಲ್ಲಿ ಬಣ್ಣ ಬಣ್ಣ ಚಿತ್ತಾರದ ಸುಡುಮದ್ದು ಪ್ರದರ್ಶನ ರಥೋತ್ಸವಕ್ಕೆ ವಿಶೇಷ ಮೆರುಗು ನೀಡಿತು. ಫೆ. 5 ರಿಂದ ಕ್ಷೇತ್ರದ ವರ್ಷಾವಧಿ ಜಾತ್ರಾಮಹೋತ್ಸವ ನಡೆಯಲಿದ್ದು ಫೆ. 8 ರಂದು ಶ್ರೀ ದೇವರಿಗೆ ಮತ್ತೊಮ್ಮೆ ಮಹಾರಥೋತ್ಸವ ನಡೆಯಲಿದೆ.

Read More

ಬಂಟ್ವಾಳ: ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಪಾಂಗಲ್ಪಾಡಿ ಶ್ರೀವಿಷ್ಣುಮೂರ್ತಿ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಹಾಗೂ ವರ್ಷಾವಧಿ ಜಾತ್ರೆಯು ವಿವಿಧ ವೈದಿಕ,ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಫೆ.6ರಿಂದ ಫೆ.8ರವರೆಗೆ ನಡೆಯಲಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ರಾಮಕೃಷ್ಣ ಎಸ್.ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.ಫೆ.6 ರಂದು ಬೆಳಗ್ಗೆ ತೋರಣ ಮುಹೂರ್ತ, ಶ್ರೀ ಸತ್ಯನಾರಾಯಣ ಪೂಜೆ, ಸಂಜೆ ಪಡು ಸವಾರಿ, ಕಟ್ಟೆ ಪೂಜೆ, ನಾಟ್ಯ ವೈಭವ, ಯಕ್ಷಗಾನ ಶಿವ ಪಂಚಾಕ್ಷರಿ ಮಹಿಮೆ ಪ್ರದರ್ಶನ ನಡೆಯಲಿದೆ.ಫೆ.7ರಂದು ದರ್ಶನೋತ್ಸವ, ಸಂಜೆ ಮೂಡು ಸವಾರಿ, ದೇವರ ಉತ್ಸವ, ಪರಿಮಳ ಕಾಲೊನಿ ತುಳು ನಾಟಕ ಪ್ರದರ್ಶನವಿದೆ. ಫೆ.8 ರಂದು ದಿವ್ಯ ದರ್ಶನ, ತುಲಾಭಾರ ಸೇವೆ, ರಾತ್ರಿ ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು ಅವರ ಅಧ್ಯಕ್ಷತೆಯಲ್ಲಿ ನಡೆಯುವ ಧಾರ್ಮಿಕ ಸಭೆಯಲ್ಲಿ ಉದ್ಯಮಿ ಯಾದವ ಕೋಟ್ಯಾನ್ ಪೆರ್ಮುದೆ ಅವರಿಗೆ ವಿಷ್ಣುಪ್ರಸಾದ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಬಳಿಕ ದೈವ-ದೇವರು ಭೇಟಿ, ಗಗ್ಗರ ಸೇವೆ, ಮಹಿಳಾ ಮಂಡಳಿ ಸದಸ್ಯೆಯರಿಂದ ತುಳು ನಾಟಕ ಒರ‍್ಯೊರಿ ಒಂಜೊಂಜಿ ತರ ಪ್ರದರ್ಶನವಿದೆ.ಫೆ.9ರಂದು ಸಂಪ್ರೋಕ್ಷಣೆ,…

Read More

ಬಂಟ್ವಾಳ: ಸನಾತನ ಹಿಂದೂ ಧರ್ಮಕ್ಕೆ ದೇವಸ್ಥಾನ, ಮಠ, ಭಜನಾಮಂದಿರ, ಗೋಶಾಲೆಗಳು ರಕ್ಷಣೆಯ ಕೋಟೆಗಳು. ಇವು ಭದ್ರವಾಗಿದ್ದರೆ ನಮ್ಮ ಧರ್ಮವು ಭದ್ರವಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ಶ್ರದ್ಧಾಕೇಂದ್ರಗಳ ಬಗ್ಗೆ ಜನರಲ್ಲಿ ಆಸ್ಥೆ ಬರುತ್ತಿರುವುದು ಸುದೈವ ಎಂದು ಹೊಸನಗರ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ದೇವಸ್ಥಾನದಲ್ಲಿ ಶುಕ್ರವಾರ ನಡೆದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಅಭಿನಂದನಾ ಸಭೆಯಲ್ಲಿ ಆಶೀರ್ವಚನ ನೀಡಿದರು.ಧರ್ಮ ಎಂಬುದು ದೇವಸ್ಥಾನ, ಮಠ, ಮಂದಿರಗಳಿಗಷ್ಟೇ ಸೀಮಿತವಾಗಿರಬಾರದು, ಮನೆಯೊಳಗೂ ಆಚರಣೆಯಾಗಬೇಕು. ದೇವರ ಪ್ರಸಾದದ ಜೊತೆಗೆ ಧರ್ಮವನ್ನು ಮನೆಗೆ ಕೊಂಡು ಹೋಗಿ ಮನೆ ಧರ್ಮಸ್ಥಾನವಾಗಬೇಕು ಎಂದರು. ಇಲ್ಲಿ ಶಂಕರ- ನಾರಾಯಣರು ಒಂದೇ ಬಿಂಬದಲ್ಲಿರುವಾಗ ನಾವ್ಯಾಕೇ ಒಂದೇ ಆಗಬಾರದು ಎಂದ ಶ್ರೀಗಳು ಬ್ರಹ್ಮಕಲಶ ಮೂಲಕ ನಾವು ಒಗ್ಗಟ್ಟಿನ ಪಾಠ ಕಲಿತು ನಮ್ಮ ಸಂಸ್ಕೃತಿ, ನಮ್ಮ ಧರ್ಮ ರಕ್ಷಣೆಯ ಕಾರ್ಯ ಮಾಡೋಣ ಎಂದರು.ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಮಾತನಾಡಿ ಜಗತ್ತು ವಿನಾಶದ ಕಡೆಗೆ ಹೋಗದಂತೆ ಬದುಕು ಹಸನಾಗಲು ಹಿಂದು…

Read More

ಬಂಟ್ವಾಳ: ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬ ಕ್ಷೇತ್ರದಲ್ಲಿ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಶುಕ್ರವಾರ ಬೆಳಿಗ್ಗೆ 9.18 ರ ಮೀನ ಲಗ್ನ ಸುಮುಹೂರ್ತದಲ್ಲಿ ನಡೆಯಿತು.ಬೆಳಿಗ್ಗೆ ಗಣಪತಿ ಹೋಮ ನಡೆದು ಶ್ರೀ ವಿನಾಯಕ, ಶ್ರೀ ಶಂಕರನಾರಾಯಣ, ಶ್ರೀ ದುರ್ಗಾಂಬಾ ಸಾನಿಧ್ಯದಲ್ಲಿ ಅಷ್ಟಬಂಧ ಲೇಪನ ನಡೆದು ಶಿಖರ ಪ್ರತಿಷ್ಠೆ, ಪರಿಕಲಶಾಭಿಷೇಕ ಹಾಗೂ ಬ್ರಹ್ಮಕಲಶಾಭಿಷೇಕ ನಡೆಯಿತು. https://youtu.be/QCR1acW5BN4 ಮಧ್ಯಾಹ್ನ ರಥಕ್ಕೆ ಕಲಶಾಭಿಷೇಕ, ಮಹಾಪೂಜೆ, ಪಲ್ಲಪೂಜೆ, ಪ್ರಸಾದ ವಿತರಣೆ, ಮಹಾ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ, ಶಾಸಕ ರಾಜೇಶ್ ನಾಯ್ಜ್, ಅಧ್ಯಕ್ಷ ಸಂತೋಷ್ ಶೆಟ್ಟಿ ದಲಂದಿಲ, ಕಾರ್ಯಧ್ಯಕ್ಷ ಕೆ. ವಿಶ್ವನಾಥ ಆಳ್ವ ಕಾಂತಾಡಿಗುತ್ತು, ಅಭಿವೃದ್ಧಿ ಸಮಿತಿ ಅಧ್ಯಕ್ಷ ಶಶಿರಾಜ ರಾವ್ ನೂಯಿ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಅರವಿಂದ ಭಟ್,ಕಾರ್ಯನಿರ್ವಾಹಣಾಧಿಕಾರಿ ಜಯಮ್ಮ ಪಿ., ಉದ್ಯಮಿ ವಿನಯ್ ಸಿಂಗ್, ಪ್ರಧಾನ ಅರ್ಚಕ ಮಹೇಶ್ ಭಟ್, ಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್, ಮಾಜಿ ಶಾಸಕ ರುಕ್ಮಯ ಪೂಜಾರಿ, ವ್ಯವಸ್ಥಾಪನ ಸಮಿತಿ…

Read More

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಅಪರಿಚಿತ ಶವ ಶುಕ್ರವಾರ ಬೆಳಿಗ್ಗೆ ಪತ್ತೆಯಾಗಿದೆ. ಇಲ್ಲಿನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಬಳಿ ರಾಷ್ಟ್ರೀಯ ಹೆದ್ದಾರಿ ಪಕ್ಕ ಮಧ್ಯ ವಯಸ್ಸಿನ ಗಂಡಸಿನ ಮೃತದೇಹ ಕಂಡು ಬಂದಿದ್ದು, ಕಪ್ಪು ಮೈ ಬಣ್ಣ, ಪಂಚೆ ತೊಟ್ಟ ಸ್ಥಿತಿಯಲ್ಲಿ ರಸ್ತೆ ಬದಿ ಶವ ಬಿದ್ದುಕೊಂಡಿದೆ. ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…

Read More