Author: admin
ಬಂಟ್ವಾಳ: 41 ಗ್ರಾಮದಲ್ಲಿ ಗ್ರಾಮ ವಿಕಾಸ ಪಾದಯಾತ್ರೆ ಸಾಗಿ ಬಂದಿದ್ದು ಜನರ ಪ್ರೀತಿ, ವಿಶ್ವಾಸವನ್ನು ಗಮನಿಸಿದಾಗ ಇಲ್ಲಿ ರಾಹುಲ್ ಗಾಂಧಿಯಾದಿಯಾಗಿ ಯಾರೇ ಕಾಂಗ್ರೆಸ್ ನಾಯಕರು ಬಂದು ಚುನಾವಣೆಯಲ್ಲಿ ಸ್ಪರ್ಧಿಸಿದರೂ ಬಂಟ್ವಾಳದಲ್ಲಿ ರಾಜೇಶ್ ನಾಯ್ಕ್ ಗೆಲುವು ಸಾಧಿಸುತ್ತಾರೆ ಎಂದು ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಹೇಳಿದರು.ಅವರು ಬಂಟ್ವಾಳ ಬಿಜೆಪಿ ವತಿಯಿಂದ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರ ನೇತೃತ್ವದಲ್ಲಿ ನಡೆದ ಗ್ರಾಮ ವಿಕಾಸ ಯಾತ್ರೆ- ಗ್ರಾಮದೆಡೆಗೆ ಶಾಸಕರ ನಡಿಗೆಯ 9ನೇ ದಿನದ ಪಾದಯಾತ್ರೆಯು ಸಮಾರೋಪವಾಗಿ ಸಂಗಬೆಟ್ಟು ಗ್ರಾಮದ ಗ್ರಾಮ ಸಿದ್ದಕಟ್ಟೆಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.ಕಾಂಗ್ರೆಸ್ ನ ಗ್ಯಾರೆಂಟಿ, ವಾರಂಟಿ ಮುಗಿದಿದೆ. ಇನ್ನೆಂಥ ಗ್ಯಾರೆಂಟಿ ಇದೆ ನಿಮಗೆ ಎಂದು ಪ್ರಶ್ನಿಸಿದ ಅವರು ನಕಲಿ ಗಾಂಧಿಗಳಿಂದ ದೇಶಕ್ಕೆ ಮೋಸ ಆಗಿದೆ ಎಂದು ಟೀಕಿಸಿದರು. ಈ ದೇಶದಲ್ಲಿ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ. ಶಿವಕುಮಾರ್ ಅವರ ಗರೀಭಿ ಹಠಾವೋ ಆಗಿದೆ. ರಾಜೇಶ್ ನಾಯ್ಕ್ ಶಾಸಕರು ಆದ ಬಳಿಕ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಆಗಿದೆ ಎಂದು…
ಬಂಟ್ವಾಳ: ಇಲ್ಲಿಗೆ ಬೈಪಾಸ್ ನಿತ್ಯಾನಂದ ನಗರದಲ್ಲಿ ವಿನೂತನ ಶೈಲಿಯಲ್ಲಿ ನಿರ್ಮಾಣಗೊಂಡಿರುವ ಶ್ರೀ ಸದ್ಗುರು ನಿತ್ಯಾನಂದ, ಗೋವಿಂದ ಸ್ವಾಮಿ ಮಂದಿರದ ಲೋಕಾರ್ಪಣೆ ಹಾಗೂ ಉಚಿತ ಸಾಮೂಹಿಕ ವಿವಾಹ ಸಮಾರಂಭದ ಪ್ರಯುಕ್ತ ಹಸಿರುವಾಣಿ ಹೊರೆಕಾಣಿಕೆ ಹಾಗೂ ಶ್ರೀ ನಿತ್ಯಾನಂದ ಸ್ವಾಮಿ ಮತ್ತು ಶ್ರೀಗೋವಿಂದ ಸ್ವಾಮಿಗಳ ಪಂಚಲೋಹದ ವಿಗ್ರಹಗಳ ವೈಭವಪೂರ್ಣವಾದ ಮೆರವಣಿಗೆ ಭಾನುವಾರ ಮಧ್ಯಾಹ್ನ ನಡೆಯಿತು.ಬಿ.ಸಿ.ರೋಡಿನ ಶ್ರೀ ರಕ್ತೇಶ್ವರೀ ದೇವಸ್ಥಾನದ ವಠಾರದಿಂದ ಹೊರಟ ಶ್ರೀ ಗುರುದ್ವಯರ ವಿಗ್ರಹ ಮತ್ತು ಹಸಿರುವಾಣಿ ಮೆರವಣಿಗೆಯು ಬಂಟ್ವಾಳ ರಥಬೀದಿ,ಮಾರ್ಕೆಟ್ ರಸ್ತೆಯಾಗಿ , ಜಕ್ರಿಬೆಟ್ಟು,ಬೈಪಾಸ್ ರಸ್ತೆಯ ಮೂಲಕ ನಿತ್ಯಾನಂದನಗರದಲ್ಲಿರುವ ಮಂದಿರದಲ್ಲಿ ಸಂಪನ್ನಗೊಂಡಿತು.ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರು ಮೆರವಣಿಗೆಗೆ ಚಾಲನೆ ನೀಡಿದರು. ಕಾಂಞಗಾಂಡ್ ನಿತ್ಯಾನಂದ ಆಶ್ರಮದ ಶ್ರೀ ಗಣಪತಿ ಸ್ವಾಮೀಜಿ, ಹಿಮಾಚಲ ಪ್ರದೇಶದ ಮಹಾಂತ್ ವಿದ್ಯಾನಂದ ಸರಸ್ವತಿ ಸ್ವಾಮೀಜಿ,ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಮಂದಿರದ ಆಡಳಿತ ಸಮಿತಿ ಅಧ್ಯಕ್ಷ ದಿನೇಶ್ ಭಂಡಾರಿ,ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಹರೀಶ್ ಶೆಟ್ಟಿ, ಗೌರವಾಧ್ಯಕ್ಷ ಸುರೇಶ್ ಕುಲಾಲ್, ಪುರಸಭಾ ಸದಸ್ಯರಾದ ಗೋವಿಂದಪ್ರಭು,ಗಂಗಾಧರ ಪೂಜಾರಿ,ದೇವಕಿ, ಸಮಿತಿ…
ಬಂಟ್ವಾಳ: ತಲೆಬತಗ್ಗಿಸಿ ಮತ ಕೇಳುವ ಪರಿಸ್ಥಿತಿ ಬಿಜೆಪಿಯ ಅಭ್ಯರ್ಥಿಗಳಿಗೆ ಬಂದಿಲ್ಲ ಎನ್ನುವುದೇ ಬಿಜೆಪಿ ಕಾರ್ಯಕರ್ತರ ಹೆಮ್ಮೆ. ಚುನಾವಣೆಯ ಯುದ್ದಕ್ಕೆ ನಾವೆಲ್ಲ ಪಕ್ಷದ ಸೈನಿಕರಂತೆ ಸಿದ್ದರಾಗಬೇಕು ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.ಅವರು ಬಂಟ್ವಾಳ ಬಿಜೆಪಿ ವತಿಯಿಂದ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರ ನೇತೃತ್ವದಲ್ಲಿ ನಡೆದ ಗ್ರಾಮ ವಿಕಾಸ ಯಾತ್ರೆ- ಗ್ರಾಮದೆಡೆಗೆ ಶಾಸಕರ ನಡಿಗೆಯ 8ನೇ ದಿನದ ಪಾದಯಾತ್ರೆಯ ಸಮಾರೋಪವಾಗಿ ಪಿಲಾತಬೆಟ್ಟು ಗ್ರಾಮದ ಶ್ರೀ ಬ್ರಹ್ಮಬೈದರ್ಕಳ ಗರಡಿ ಬಳಿನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.ಕೇಂದ್ರ ಹಾಗೂ ರಾಜ್ಯದಲ್ಲಿ ಬಹುಮತ ಪಡೆದ ಕಾಗ್ರೆಸ್ ಸರಕಾರ ಅಧಿಕಾರದಲ್ಲಿ ಇದ್ದಾಗ ಅವರಿಗೆ ಯಾಕೆ ಅನುದಾನ ತರಲು ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಗೆ ಅಭಿವೃದ್ಧಿ ಬಗ್ಗೆ ಚಿಂತನೆ ಇಲ್ಲ, ಮುಖ್ಯಮಂತ್ರಿ ಆದವರ ಕ್ಷೇತ್ರವೂ ಅಭಿವೃದ್ಧಿ ಆಗಿಲ್ಲ ಎಂದು ಟೀಕಿಸಿದರು. ಬಿಜೆಪಿ ಶಾಸಕರು ಬಹುಮತ ಪಡೆದು ಅಧಿಕಾರಕ್ಕೆ ಬಂದು 5 ವರ್ಷ ದ ಪೂರ್ಣ ಅವಕಾಶ ಸಿಕ್ಕಲ್ಲಿ ನಮ್ಮ ಊರಿನ ಅಭಿವೃದ್ಧಿ ಹೇಗಾಗ ಬಹುದು ಊಹಿಸಿ…
ಬಂಟ್ವಾಳ: ಇಲ್ಲಿನ ವಗ್ಗ ರಾಷ್ಟ್ರೀಯ ಹೆದ್ದಾರಿ ಸಮೀಪದ ಕಾಡಬೆಟ್ಟು ಗ್ರಾಮ ಪಿಲಿಂಗಾಲು ಎಂಬಲ್ಲಿ ರೂ 1 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡ ಶ್ರೀ ಗಾಯತ್ರಿ ದೇವಿ ದೇವಸ್ಥಾನಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈ ಶುಕ್ರವಾರ ಭೇಟಿ ನೀಡಿ ಜೀರ್ಣೋದ್ಧಾರ ಕಾಮಗಾರಿ ವೀಕ್ಷಿಸಿದರು. ಫೆ.8ರಿಂದ 10ರತನಕ ನಡೆಯುವ ಬ್ರಹ್ಮಕಲಶೋತ್ಸವಕ್ಕೆ ನೆರವು ನೀಡುವುದಾಗಿ ಅವರು ತಿಳಿಸಿದರು.ಕ್ಷೇತ್ರದ ಆಡಳಿತ ಧರ್ಮದರ್ಶಿ ಕೆ.ಎಸ್.ಪಂಡಿತ್ ಮಾತನಾಡಿ, ಕಳೆದ 2006ರಲ್ಲಿ ಕೇವಲ ಗರ್ಭಗುಡಿ ನಿರ್ಮಿಸಿ ದೇವರ ವಿಗ್ರಹ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ ನಡೆದಿದೆ. ಇದೀಗ ಸುತ್ತುಗೋಪುರ ನಿರ್ಮಾಣ ಸಹಿತ ಗಣಪತಿ ಗುಡಿ, ಗುರು ರಾಘವೇಂದ್ರ ಸ್ವಾಮಿ ಗುಡಿ ಮತ್ತು ಪರಿವಾರ ದೈವಗಳಿಗೆ ಗುಡಿ ನಿರ್ಮಾಣಗೊಂಡಿದೆ ಎಂದರು.ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಜನಿ ಬಾಬು ಕುಲಾಲ್ ಮಾತನಾಡಿ, ಗ್ರಾಮ ಪಂಚಾಯಿತಿ ವತಿಯಿಂದ ಸುಸಜ್ಜಿತ ಶೌಚಾಲಯ ನಿರ್ಮಾಣಗೊಳ್ಳುತ್ತಿದೆ ಎಂದರು.ಬ್ರಹ್ಮಕಲಶೋತ್ಸವ ಸ್ವಾಗತ ಸಮಿತಿ ಅಧ್ಯಕ್ಷ ಬಿ.ಪದ್ಮಶೇಖರ ಜೈನ್, ಹೊರೆಕಾಣಿಕೆ ಸಮಿತಿ ಅಧ್ಯಕ್ಷ ವೀರೇಂದ್ರ ಅಮೀನ್, ಪ್ರಮುಖರಾದ ಬೇಬಿ ಕುಂದರ್, ಕರ್ಣ ಚಂದ್ರಶೇಖರ್, ಪ್ರಭಾಕರ ಪೂಜಾರಿ, ಅಭಿಷೇಕ್ ಗಾಣಿಗ…
ಬಂಟ್ವಾಳ: ಜನರಿಂದ ಆಯ್ಕೆಯಾದ ಜನಪ್ರತಿನಿಧಿಯೊಬ್ಬ ತನ್ನ ಅಭಿವೃದ್ದಿಯ ರಿಪೋರ್ಟ್ ಕಾರ್ಡ್ ನೊಂದಿಗೆ ಜನರ ಬಳಿ ಹೋದ ರಾಜ್ಯದ ಏಕೈಕ ಶಾಸಕ ರಾಜೇಶ್ ನಾಯ್ಕ್. ಇದೊಂದು ಐತಿಹಾಸಿಕ ಕಾರ್ಯಕ್ರಮ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಅವರು ಬಂಟ್ವಾಳ ಬಿಜೆಪಿ ವತಿಯಿಂದ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರ ನೇತೃತ್ವದಲ್ಲಿ ನಡೆದ ಗ್ರಾಮವಿಕಾಸ ಯಾತ್ರೆ- ಗ್ರಾಮದೆಡೆಗೆ ಶಾಸಕರ ನಡಿಗೆಯ 7ನೇ ದಿನದ ಪಾದಯಾತ್ರೆಯ ಸಮಾರೋಪವಾಗಿ ಸರಪಾಡಿ ಗ್ರಾಮದ ಶ್ರೀ ಶರಭೇಶ್ವರ ದೇವಸ್ಥಾನದ ವಠಾರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.ಅಭಿವೃದ್ಧಿಯೊಂದಿಗೆ ಶಕ್ತಿ ಶಾಲಿಯಾದ ದೇಶ ಕಟ್ಟುವ ಪ್ರಯತ್ನ ನಡೆಯುತ್ತಿದೆ. ಹಿಂದೆ ಅರ್ಜಿ ಹಾಕದೆ ಯಾವುದೇ ಯೋಜನೆ ಭಾರತದಲ್ಲಿ ಸಿಗುತ್ತಿರಲಿಲ್ಲ. ಆದರೆ ಅರ್ಜಿ ಹಾಕದೆ ಕಿಸಾನ್ ಸಮ್ಮಾನ್ ಯೋಜನೆ ಮೂಲಕ 10 ಸಾವಿರ ರೂಪಾಯಿ ಹಣ ರೈತರ ಖಾತೆಗೆ ಬಂದಿದೆ. ಈ ಮೂಲಕ ಕೇಂದ್ರ ಹಾಗೂ ರಾಜ್ಯ ಸರಕಾರ ರೈತ ಪರವಾಗಿ ಕೆಲಸ ಮಾಡಿದೆ ಎಂದರು.ಕರ್ನಾಟಕದ…
ಬಂಟ್ವಾಳ: ದೇಶಕ್ಕೆ ಭ್ರಷ್ಠಾಚಾರದ ಕೊಡುಗೆಯನ್ನು ನೀಡಿದ ಕಾಂಗ್ರೆಸಿಗರು. ಭಾರತ್ ಜೋಡೋ, ನಾ ನಾಯಕಿ ಕಾರ್ಯಕ್ರಮವನ್ನು ಆಯೋಜಸಿತ್ತಿರುವುದು ನಾಚಿಗೇಡು ಎಂದು ಮಾಜಿ ಶಾಸಕ ರುಕ್ಮಯ ಪೂಜಾರಿ ಹೇಳಿದರು.ಅವರು ಬಂಟ್ವಾಳ ಬಿಜೆಪಿ ವತಿಯಿಂದ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರ ನೇತೃತ್ವದಲ್ಲಿ ನಡೆದ ಗ್ರಾಮವಿಕಾಸ ಯಾತ್ರೆ- ಗ್ರಾಮದೆಡೆಗೆ ಶಾಸಕರ ನಡಿಗೆಯ 6ನೇ ದಿನದ ಪಾದಯಾತ್ರೆಯ ಸಮಾರೋಪವಾಗಿ ಬಾಳ್ತಿಲ ಗ್ರಾಮದ ನೀರಪಾದೆ ಶ್ರೀ ಕುಂದಾಯ ರಕ್ತೇಶ್ವರೀ ಮಹಮ್ಮಾಯಿ ದೇವಸ್ಥಾನದ ವಠಾರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.ಅಲ್ಪಸಂಖ್ಯಾತರನ್ನು ತುಷ್ಠೀಕರಣ ಮಾಡುವುದು ಜಾತ್ಯತೀತಯೇ? ಎಂದು ಪ್ರಶ್ನಿಸಿದ ಅವರುಬಿಜೆಪಿ ಸರ್ಕಾರದ ಸಾಧನೆ ಸಣ್ಣದೇನಲ್ಲ. ಆದರೆ ಕಾಂಗ್ರೆಸ್ಸಿಗರು ಅಪ್ರಚಾರ ಮಾಡಿತ್ತಿದ್ದಾರೆ. ಈ ಬಗ್ಗೆ ಬಿಜೆಪಿ ಕಾರ್ಯಕರ್ತರು ಎಚ್ಚೆತ್ತುಕೊಳ್ಳಬೇಕು ಎಂದರು.ಜನರಿಗೆ ಸಮಸ್ಯೆ ಬಂದಾಗ ತಕ್ಷಣ ಸ್ಪಂದಿಸುವ ಕಾರ್ಯವನ್ನು ರಾಜೇಶ್ ನಾಯ್ಕ್ ಮಾಡುತ್ತಿದ್ದಾರೆ.ವೈಯಕ್ತಿಕ ಅಸಮಾಧಾನವನ್ನೇ ಮುಂದಿಟ್ಟುಕೊಂಡು ಬೇರೆ ಪಕ್ಷಗಳು ಅಧಿಕಾರಕ್ಕೆ ಬಂದರೆ ನಾವು ಬದುಕಲು ಸಾಧ್ಯವಿಲ್ಲ. ಅದನ್ನು ನಾವು ಅರ್ಥೈಸಿಕೊಂಡು ಪಕ್ಷಕ್ಕಾಗಿ ದುಡಿಯಬೇಕಾಗಿದೆ ಎಂದರು.ಶಾಸಕ ರಾಜೇಶ್ ನಾಯ್ಕ್ ಮಾತನಾಡಿ ಕ್ಷೇತ್ರದ ಅಭಿವೃದ್ದಿ ಕಾರ್ಯಗಳು ನಮ್ಮ…
ಬಂಟ್ವಾಳ: ನಾಗರಿಕ ಕ್ರಿಯಾ ಸಮಿತಿ ಸಂಚಯಗಿರಿ ಇದರ ೨೦೨೩-೨೪ ನೇ ಸಾಲಿನ ಅಧ್ಯಕ್ಷರಾಗಿ ಸುರೇಶ ಬಂಗೇರ ಪುನರಾಯ್ಕೆ ಯಾಗಿದ್ದಾರೆ. ಭಾನುವಾರ ಸಂಚಯಗಿರಿಯ ನರಸಿಂಹರಾಜ ಹೊಳ್ಳ ಇವರ ಮನೆಯಲ್ಲಿ ನಡೆದ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು. ಉಪಾಧ್ಯಕ್ಷರಾಗಿ ಪ್ರಿಯಲತಾ ಕಾರ್ಯದರ್ಶಿಯಾಗಿ ಶಿವನಾಯ್ಕ್ ಕೋಶಾಧಿಕಾರಿಯಾಗಿ ಎ.ದಾಮೋದರ್, ಕ್ರೀಡಾ ಕಾರ್ಯದರ್ಶಿಯಾಗಿ ಪುರಂದರ ಶೆಟ್ಟಿ, ಗೌರವಾಧ್ಯಕ್ಷರಾಗಿ ನರಸಿಂಹರಾಜ ಹೊಳ್ಳ ಆಯ್ಕೆಯಾಗಿದ್ದಾರೆ> ಈ ಸಂದರ್ಭ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.
ಬಂಟ್ವಾಳ: ಅಭಿವೃದ್ದಿ ಕಾರ್ಯದ ಸ್ಪಷ್ಟತೆ ಇಲ್ಲದೆ ತುಷ್ಟೀಕರಣದ ರಾಜಕಾರಣದ ಮೂಲಕ ಸಮಾಜದಲ್ಲಿ ಗೊಂದಲ, ಸಮಸ್ಯೆ ಉಂಟು ಮಾಡಿದ ಕಾಂಗ್ರೆಸ್ ಜಾತಿ, ಧರ್ಮ ಆಧಾರದಲ್ಲಿ ಸಮಾಜವನ್ನು ಇಬ್ಬಾಗ ಮಾಡಿ ತಮ್ಮಸ್ವಾರ್ಥಕ್ಕಾಗಿ ದೇಶದ ಹಿತವನ್ನು ಕಡೆಗಣಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಹೇಳಿದರು. ಅವರು ಬಂಟ್ವಾಳ ಬಿಜೆಪಿ ವತಿಯಿಂದ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರ ನೇತೃತ್ವದಲ್ಲಿ ನಡೆದ ಗ್ರಾಮವಿಕಾಸ ಯಾತ್ರೆ- ಗ್ರಾಮದೆಡೆಗೆ ಶಾಸಕರ ನಡಿಗೆಯ 5ನೇ ದಿನದ ಪಾದಯಾತ್ರೆಯ ಸಮಾರೋಪವಾಗಿ ಗೋಳ್ತಮಜಲು ಗ್ರಾಮದ ಕಲ್ಲಡ್ಕ ಶ್ರೀರಾಮ ಮಂದಿರದ ಮಾಧವ ಸಭಾಂಗಣದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು. ಕೋವಿಡ್, ಅತಿವೃಷ್ಟಿ ಅನಾವೃಷ್ಟಿ ಯಿಂದ ದೇಶ ಸಮಸ್ಯೆಯನ್ನು ಎದುರುಸಿದರೂ , ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸಶಕ್ತ ರಾಷ್ಟ್ರವಾಗಿ ಇಡೀ ವಿಶ್ವಕ್ಕೆ ನಾಯಕತ್ವ ಕೊಡುವ ಮೂಲಕ ದೇಶದ ಐಕ್ಯತೆ, ಸಮಗ್ರತೆಯ ನ್ನು ಕಾಪಾಡಿದೆ ಎಂದು ತಿಳಿಸಿದರು. ಬಿಜೆಪಿ ಪಕ್ಷ ಒಳ್ಳೆಯ ನಾಯಕತ್ವ, ಒಳ್ಳೆಯ ಸರಕಾರ ನೀಡಿದೆ ಎಂದು ತಿಳಿಸಿದರು.ಪ್ರತಿಭೆ ಆಧಾರಿತವಾಗಿ ಪ್ರತಿಯೊಬ್ಬರಿಗೆ…
ಬಂಟ್ವಾಳ: ಪ್ರೌಢಾವಸ್ಥೆಗೆ ಬಂದ ಮಕ್ಕಳೊಂದಿಗೆ ನಾವು ಸ್ನೇಹಿತರಂತೆ ವರ್ತಿಸಬೇಕು, ಮಕ್ಕಳು ಏನೇ ಸಮಸ್ಯೆಯಿದ್ದರೆ ನಮ್ಮ ಜೊತೆ ಹಂಚಿ ಕೊಳ್ಳುವಂತಹ ಆತ್ಮೀಯತೆಯನ್ನು ಪೋಷಕರು ಬೆಳೆಸಿಕೊಳ್ಳಬೇಕು ಎಂದು ವೇಣೂರು ಪೊಲೀಸ್ ಠಾಣೆಯ ಎಸೈ ಸೌಮ್ಯ ಜೆ. ಹೇಳಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಇದರ ಆಶ್ರಯದಲ್ಲಿ, ಬಂಟ್ವಾಳದ ಶ್ರೀ ಮಂಜುನಾಥ ಕಲ್ಯಾಣ ಮಂಟಪದಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ನಡೆಯುವ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ಪರಿಸರದಲ್ಲಿ ಪೋಕ್ಸೊದಂತಹ ಪ್ರಕರಣಗಳು ನಡೆದಾಗ ಪೊಲೀಸರಿಗೆ ಮಾಹಿತಿ ನೀಡಿಲು ಪೋಷಕರು ಹಿಂಜರಿಯ ಬಾರದು. ಮನೆಯಲ್ಲಿರುವ ಬಂಗಾರ, ಹಣ ಮೊದಲಾದ ಅಮೂಲ್ಯ ವಸ್ತುಗಳು ಬಗ್ಗೆ ನಿಗಾ ವಹಿಸಬೇಕು, ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಮಕ್ಕಳಿಗೆ ವಾಹನ ನೀಡಬಾರದು ಮೊದಲಾದ ಸಲಹೆಗಳನ್ನು ನೀಡಿದರು.ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಪಕಿ ಡಾ. ಮೇರಿ ಎಂ.ಜೆ. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಸಂಸಾರ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ಯೋಜನೆಯ ಪ್ರಾದೇಶಿಕ…
ಬಂಟ್ವಾಳ: ಅಧಿಕಾರ ಶಾಶ್ವತವಲ್ಲ. ಆದರೆ ಶಾಸಕನಾಗಿ ಅಧಿಕಾರದಲ್ಲಿರುವ ವರೆಗೆ ಪ್ರಾಮಾಣಿಕವಾಗಿ ಜನರ ಸೇವೆ ಮಾಡುತ್ತೇನೆ. ನಾನು ಸಿದ್ದಾಂತ ರಾಜಕೀಯ ಮಾಡುತ್ತೇನೆಯೇ ವಿನಃ ದ್ವೇಷದ ರಾಜಕಾರಣ ನನ್ನಲ್ಲಿಲ್ಲ.ಎಂದು ಶಾಸಕ ರಾಜೇಶ್ ನಾಯ್ಕ್ ಹೇಳಿದರು.ಪೆರಾಜೆ ಗ್ರಾಮದ ಗುಡ್ಡ ಚಾಮುಂಡೇಶ್ವರೀ ದೈವಸ್ಥಾನದ ವಠಾರದಲ್ಲಿ ನಡೆದ ಗ್ರಾಮ ವಿಕಾಸ ಪಾದಯಾತ್ರೆಯ 4 ನೇ ದಿನದ ಸಾರ್ವಜನಿಕ ಸಭೆಯಲ್ಲಿ ಅವರು ಪ.ಪರಿಚಯವೇ ಇಲ್ಲದ ಕ್ಷೇತ್ರದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತ ಸಂದರ್ಭದಲ್ಲೂ 65 ಸಾವಿರ ಮಂದಿ ನನಗೆ ಮತ ನೀಡಿದ್ದು ವಿಶೇಷವಾಗಿತ್ತು. ಬಳಿಕ ನಿರಂತರವಾಗಿ ಕೆಲಸ ಮಾಡಿದ ಪರಿಣಾಮ ಮತ್ತೆ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಲು ಸಾಧ್ಯವಾಯಿತು. ಅಭಿವೃದ್ಧಿ ಕೆಲಸದ ಮೂಲಕ ಮತವಾಗಿ ಪರಿವರ್ತನೆ ಮಾಡುವ ಕಾರ್ಯ ಆಗ ಬೇಕಿದೆ ಎಂದರು. ಇಂದು ಅಭಿವೃದ್ಧಿ ಕಾರ್ಯಗಳ ಬಗ್ಗೆ ಸುಳ್ಳು ಮಾಹಿತಿ ನೀಡಲು ಸಾಧ್ಯವಿಲ್ಲ. ಜನರು ಬುದ್ದಿವಂತರಿದ್ದಾರೆ. ಶಾಸಕನಾಗಿ ನಾನು ನನ್ನ ಕರ್ತವ್ಯವನ್ನು ಮಾಡಿದ್ದೇನೆ. ಜನರು ಪ್ರೀತಿ, ವಿಶ್ವಾಸವನ್ನು ನೀಡಿದ್ದಾರೆ. ಅಭಿವೃದ್ದಿ ಕಾರ್ಯ ಮಾಡಿದಾಗ ಮಾತ್ರವಲ್ಲ, ನಾನು ಸೋತಾಗಲೂ ಇಲ್ಲಿನ ಜನರು…








