Author: admin

ಬಂಟ್ವಾಳ: ಇತಿಹಾಸ ಪ್ರಸಿದ್ಧ ಕಾರಿಂಜೇಶ್ವರ ದೇವಾಲಯವನ್ನು ಸೂಕ್ಷ್ಮ ವಲಯವನ್ನಾಗಿ ಘೋಷಣೆ ಮಾಡುವ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಜೊತೆ ಮಾತುಕತೆ ನಡೆಸಿದ್ದು, ಜಿಲ್ಲಾಧಿಕಾರಿ ವರದಿ ಬಳಿಕ ಸರಕಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಉಸ್ತವಾರಿ ಸಚಿವ ಸುನಿಲ್ ಕುಮಾರ್ ಕಾರ್ಕಳ ತಿಳಿಸಿದರು.ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಜೊತೆಗೆ ಕಾರಿಂಜೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿದ ಬಳಿಕ ಪತ್ರ ಕರ್ತರ ಜೊತೆ ಮಾತನಾಡಿದರು. ಅಕ್ರಮ ಕಲ್ಲು ಗಣಿಗಾರಿಕೆಯಿಂದ ಸಾನಿಧ್ಯಕ್ಕೆ ಅಪಾಯ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರು ಹಾಗೂ ಭಕ್ತರು ಮತ್ತು ಸಂಘಟನೆಯರ ಈ ಬಗ್ಗೆ ಸ್ಥಳೀಯ ಶಾಸಕ ಹಾಗೂ ನನ್ನ ಗಮನ ಕ್ಕೆ ತಂದಿದ್ದರು. ಈ ಹಿನ್ನೆಲೆ ಯಲ್ಲಿ ಈಗಾಗಲೇ ಸಾಕಷ್ಟು ಸುತ್ತಿನ ಮಾತುಕತೆಗಳನ್ನು ನಡೆಸಲಾಗಿದ್ದು, ಧಾರ್ಮಿಕ ಸೂಕ್ಮ ಪ್ರದೇಶ ಘೋಷಣೆ ಯ ನಿರ್ಧಾರ ಕ್ಕೆ ಬರಲಾಗಿದೆ ಎಂದು ಅವರು ತಿಳಿಸಿದರು.ಕಾರಿಂಜ ಕ್ಷೇತ್ರವನ್ನು ಪ್ರವಾಸೋದ್ಯಮ ಇಲಾಖೆಯ ಮೂಲಕ ಅಭಿವೃದ್ಧಿ ಪಡಿಸಿ ಪ್ರವಾಸಿ ತಾಣವಾಗಿ ಮಾರ್ಪಾಡು ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್…

Read More

ಬಂಟ್ವಾಳ: ಶಿವಮೊಗ್ಗದಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಪ್ರತಿಭಾಕಾರಂಜಿ ಮತ್ತು ಕಲೋತ್ಸವದ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಪಡೆದ ಶಾಲೆ ಹಾಗೂ ಊರಿಗೆ ಕೀರ್ತಿ ತಂದ ಬಂಟ್ವಾಳ ಎಸ್.ವಿ.ಎಸ್.ದೇವಳ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ ವತಿಯಿಂದ ಮಂಗಳವಾರ ಬಂಟ್ವಾಳ ಪೇಟೆಯಲ್ಲಿ ಸಂಭ್ರಮದ ಮೆರವಣಿಗೆ ನಡೆಸಿ ಅಭಿನಂದಿಸಲಾಯಿತು. ವಿದ್ಯಾರ್ಥಿಗಳಾದ ವೈಷ್ಣವಿ ಜಿ, ಆಯಿಶಾತುಲ್ ಅಸೀಬಾ, ಸಿ.ಪ್ರತೀಕ್ಷಾಪೈ, ಧನ್ಯತಾ ಬಾಳಿಗಾ, ರಿಕ್ ಪೋವೆಲ್ ಡಿಸೋಜಾ, ಗಗನ್ ಪಿ. ಅಮೀನ್ ಅವರು ಕವ್ವಾಲಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಹಾಗೂ ಶ್ರೀನಿಧಿ ಪಿ.ಎಸ್. ಸಾಮಾನ್ಯ ಕನ್ನಡ ಭಾಷಣದಲ್ಲಿ ಸಮಾಧಾನಕರ ಬಹುಮಾನವನ್ನು ಪಡೆದಿರುತ್ತಾರೆ. ಶಾಲಾ ವಿದ್ಯಾರ್ಥಿಗಳ ವಾದ್ಯಗೋಷ್ಠಿ ಮೆರವಣಿಗೆಗೆ ವಿಶೇಷ ಮೆರಗು ನೀಡಿತು. ಶಾಲೆಯ ಎಲ್ಲಾ ವಿದ್ಯಾರ್ಥಿಗಳು,ಶಿಕ್ಷಕ-ಶಿಕ್ಷಕಿಯರು ಹಾಗೂ ಆಡಳಿತ ಸಮಿತಿ ಸದಸ್ಯರು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು. ಶಾಲಾ ವಠಾರದಿಂದ ಹೊರಟ ಮೆರವಣಿಗೆ ಬಂಟ್ವಾಳ ರಥಬೀದಿ, ಬಡ್ಡಕಟ್ಟೆಯವರೆಗೆ ಸಾಗಿ ಅಲ್ಲಿಂದ ವಾಪಾಸ್ ಬಂದು ತ್ಯಾಗರಾಜ ರಸ್ತೆಯ ಮೂಲಕ ತೆರಳಿ ಶಾಲೆಯಲ್ಲಿ ಸಂಪನ್ನಗೊಂಡಿತು. ಬಳಿಕ ಬಹುಮಾನ ವಿಜೇತ ವಿದ್ಯಾರ್ಥಿಗಳನ್ನು…

Read More

ಬಂಟ್ವಾಳ: ಶ್ರೀರಾಮ್ ಟ್ರಾನ್ಸ್‌ಪೋರ್ಟ್ ಫೈನಾನ್ಸ್ ಕಂಪೆನಿ ಲಿಮಿಟೆಡ್ ಇದರ ಬಂಟ್ವಾಳ ಶಾಖಾ ವತಿಯಿಂದ ಬಂಟ್ವಾಳ ತಾಲೂಕಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಧಿ ವಿತರಣಾ ಕಾರ್ಯಕ್ರಮ ಜನವರಿ ೧೨ ರಂದು ಗುರುವಾರ ಬೆಳಿಗ್ಗೆ ೧೦ ಗಂಟೆಗೆ ಬಿ.ಸಿ.ರೋಡಿನ ಹೋಟೆಲ್ ರಂಗೋಲಿ ಸಭಾಂಗಣದಲ್ಲಿ ನಡೆಯಲಿದೆ. ಕಂಪೆನಿಯ ಝೋನಲ್ ಬಿಝಿನೆಸ್ ಹೆಡ್ ಶರಶ್ಚಂದ್ರ ಭಟ್ ಕಾಕುಂಜೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಬಂಟ್ವಾಳ ಶಾಸಕ ಯು. ರಾಜೇಶ್ ನಾಕ್ ವಿದ್ಯಾರ್ಥಿ ನಿಧಿ ವಿತರಣೆ ಮಾಡುವರು. ಮುಖ್ಯ ಅತಿಥಿಗಳಾಗಿ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ಅಶೋಕ್ ಶೆಟ್ಟಿ ಸರಪಾಡಿ, ಹಿರಿಯ ಸಾಹಿತಿ ನೇಮು ಪೂಜಾರಿ, ನಿವೃತ್ತ ಅಧ್ಯಾಪಕ ನಾರಾಯಣ ನಾಯ್ಕ, ಪೊಲೀಸ್ ಅಧಿಕಾರಿ ಪರಮೇಶ್ವರ, ನ್ಯಾಯವಾದಿಗಳಾದ ಪ್ರಸಾದ್ ಕುಮಾರ್ ರೈ, ಉಮೇಶ್ ಕುಮಾರ್ ವೈ, ಬಂಟ್ವಾಳ ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಆಚಾರ್ಯ, ಸಂಸ್ಥೆಯ ಝೋನಲ್ ರಿಕವರಿ ಹೆಡ್ ನಾಗರಾಜ ಬಿ, ಸ್ಟೇಟ್ ಹೆಡ್ ಸದಾಶಿವ, ರೀಜನಲ್ ಬಿಝಿನೆಸ್ ಹೆಡ್ ಚೇತನ್ ಅರಸ್, ರೀಜನಲ್…

Read More

ಮಂಗಳೂರು: ಹಿರಿಯ ಸಾಹಿತಿ, ಲೇಖಕಿ ಡಾ.ಸಾರಾ ಅಬೂಬಕರ್(87) ಮಂಗಳವಾರ ಮಧ್ಯಾಹ್ನ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ನಾಲ್ವರು ಪುತ್ರರು ಹಾಗೂ ಅಪಾರ ಬಂಧುಬಳಗ, ಅಭಿಮಾನಿಗಳನ್ನು ಅಗಲಿದ್ದಾರೆ. ಮೂಲತಃ ಕಾಸರಗೋಡಿನ ಚಂದ್ರಗಿರಿ ತೀರದವರಾದ ಸಾರಾ ವಿವಾಹವಾದ ಬಳಿಕ ಮಂಗಳೂರಿನ ಹ್ಯಾಟ್ ಹಿಲ್ ಬಳಿ ವಾಸವಾಗಿದ್ದರು. ‘ಚಂದ್ರಗಿರಿ ತೀರದಲ್ಲಿ‌’ ಕಾದಂಬರಿಯ ಮೂಲಕ ಪ್ರಸಿದ್ಧಿಗೆ ಬಂದಿದ್ದ ಸಾರಾ ಅಬೂಬಕರ್ ಅನೇಕ ಕೃತಿಗಳನ್ನು ರಚಿಸಿ ಖ್ಯಾತರಾಗಿದ್ದರು. ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಮಂಗಳವಾರ ರಾತ್ರಿ ‌8 ಗಂಟೆ ಸುಮಾರಿಗೆ ಮಂಗಳೂರಿನ ಬಂದರ್ ಝೀನತ್ ಬಕ್ಷ್ ಮಸೀದಿ ಆವರಣದ ದಫನ ಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮಹಿಳಾ ಧ್ವನಿಯಾಗಿದ್ದ ಸಾರಾ ಅಬೂಬಕರ್ ಅವರು 1936ರ ಜೂನ್ 30ರಂದು ಕಾಸರಗೋಡಿನ ಚಂದ್ರಗಿರಿ ತೀರದ ಗ್ರಾಮವೊಂದರಲ್ಲಿ ಜನಿಸಿದರು. ನ್ಯಾಯವಾದಿ ಪಿ.ಅಹ್ಮದ್ ಮತ್ತು ಜೈನಾಬಿ ದಂಪತಿಯ ಪುತ್ರಿಯಾಗಿರುವ ಅವರು ಹುಟ್ಟೂರಲ್ಲೇ ಪ್ರಾಥಮಿಕ ವಿದ್ಯಾಭ್ಯಾಸ ಮಾಡಿದ್ದರು. ಕಾಸರಗೋಡಿನಲ್ಲಿ ಹೈಸ್ಕೂಲ್ ಪೂರೈಸಿದ ಸಾರಾ ತನ್ನ ಅಜ್ಜಿ ಹೇಳುತ್ತಿದ್ದ ಕಥೆಗಳಿಂದಾಗಿ ಅವರು ಎಳೆಯದರಲ್ಲೇ…

Read More

ಬಂಟ್ವಾಳ: ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ,ಬಂಟ್ವಾಳ ಇದರ 15 ನೇಉಪ್ಪಿನಂಗಡಿ ಶಾಖೆಯು ಬ್ಯಾಂಕ್ ರಸ್ತೆಯಲ್ಲಿರುವ ಕೋಟೆ ಕೆಂಪಿನಮಜಲು “ಗೌರಿಕಾಂಪ್ಲೆಕ್ಸ್‌” ನ ಒಂದನೇ ಮಹಡಿಯಲ್ಲಿ ಜನವರಿ‌14 ರಂದು ಶುಭಾರಂಭಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಸುರೇಶ್ ಕುಲಾಲ್‌ತಿಳಿಸಿದ್ದಾರೆ. ಸೋಮವಾರ‌ ಬಂಟ್ವಾಳ ಬೈಪಾಸ್ ನಲ್ಲಿರುವ ಸಂಘದ ಕೇಂದ್ರ ಕಚೇರಿಯಲ್ಲಿ‌ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ‌ ನೀಡಿದ ಅವರು,ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರು ದೀಪ ಪ್ರಜ್ವಲನಗೈದು ಆಶೀರ್ವಚನ ನೀಡಲಿದ್ದಾರೆ. ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ನೂತನ ಶಾಖೆಯನ್ನು ಉದ್ಘಾಟಿಸುವರು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರು ಭದ್ರತಾಕೊಠಡಿ,ಮಾಜಿ ಸಚಿವ ರಮಾನಾಥ ರೈ ಅವರು ಕಂಪ್ಯೂಟರ್,ಮೈಸೂರು ಸಹಕಾರ ಸಂಘಗಳ ಜಂಟಿ ನಿಬಂಧಕರಾದ ಡಾ.ಜಿ.ಉಮೇಶ್ ಸೇಪ್ ಲಾಕರನ್ನು ಉದ್ಘಾಟಿಸುವರು, ಮಂಗಳೂರು ಸಹಕಾರ ಸಂಘಗಳ ಉಪನಿಬಂಧಕರಾದ ಎಚ್.ಎನ್.ರಮೇಶ್ ಠೇವಣಿಪತ್ರ ಬಿಡುಗಡೆಗೊಳಿಸಲಿದ್ದಾರೆ. ಸ್ಥಳೀಯ ಗಣ್ಯರು ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದರು.ಸ್ವಾತಂತ್ರ್ಯ ಯೋಧ ದಿ.ಡಾ.ಅಮ್ಮೆಂಬಳ ಬಾಳಪ್ಪ ಹಾಗೂ ಸಹಕಾರಿ ಧುರೀಣ ಹೂವಯ್ಯ ಮೂಲ್ಯ ಅವರ ಸಾರಥ್ಯದಲ್ಲಿ 131…

Read More

ಬಂಟ್ವಾಳ: ಇಲ್ಲಿನ ಶ್ರೀಲಕ್ಷ್ಮೀ ನರಸಿಂಹ ಪೈ ವಿದ್ಯಾಲಯ ಪಾಣೆಮಂಗಳೂರು ಇಲ್ಲಿನ ವಿದ್ಯಾರ್ಥಿನಿ ಪಂಚಮಿ ಕೆ. ಶಿವಮೊಗ್ಗದ ಡಿ.ವಿ.ಎಸ್. ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿಯ ಜನಪದ ಗೀತೆ ಗಾಯನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾಳೆ. ಡಾ. ಕಿರಣ ಕೆ. ಯು ಮತ್ತು ಡಾ.ಪ್ರಮೀಳಾ ಕೆ. ದಂಪತಿಗಳ ಪುತ್ರಿಯಾಗಿರುವ ಪಂಚಮಿ ಕೆ. ತನ್ನ ಆರನೇ ವಯಸ್ಸಿನಿಂದಲೇ ಗುರುಗಳಾದ ವಿದುಷಿ ಮಂಜುಳಾ ಜಿ.ರಾವ್ ಇವರಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತವನ್ನು ಅಭ್ಯಾಸ ಮಾಡುತ್ತಿದ್ದಾಳೆ. ಚಿತ್ರಕಲೆ, ನೃತ್ಯ ಹಾಗೂ ಕ್ರೀಡಾ ಕ್ಷೇತ್ರದಲ್ಲಿಯೂ ಪ್ರತಿಭಾನ್ವಿತೆ. 2017-18 ರ ಕ್ಲಸ್ಟರ್ ಹಾಗೂ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭಕ್ತಿಗೀತೆ ಗಾಯನ ವಿಭಾಗದಲ್ಲಿ ಪ್ರಥಮ, ಜಿಲ್ಲಾ ಮಟ್ಟದಲ್ಲಿ ತೃತೀಯ ಸ್ಥಾನ ೨೦೧೯-೨೦ ರ ಕ್ಲಸ್ಟರ್ ಪ್ರತಿಭಾ ಕಾರಂಜಿಯ ಭಕ್ತಿಗೀತೆ ಗಾಯನ ವಿಭಾಗದಲ್ಲಿ ದ್ವಿತೀಯ ಸ್ಥಾನ, ಪ್ರತಿಭಾ ಕಾರಂಜಿಯ ಜನಪದ ಗೀತೆ ವಿಭಾಗದಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಳು.

Read More

ಬಂಟ್ವಾಳ: ಸ್ವಾತಂತ್ರ್ಯಯೋಧ ಡಾ. ಅಮ್ಮೆಂಬಳ ಬಾಳಪ್ಪ ಜನ್ಮಶತಾಬ್ದಿ ಸಮಾರಂಭದ ಪೂರ್ವಭಾವಿ ಸಭೆ ಬಿ.ಸಿ.ರೋಡಿನ ಸಂಚಯಗಿರಿಯ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದಲ್ಲಿ ರವಿವಾರ ನಡೆಯಿತು. ಸ್ವಾತಂತ್ರ್ಯಯೋಧ ಡಾ. ಅಮ್ಮೆಂಬಳ ಬಾಳಪ್ಪ ಸ್ಮಾರಕ ಸೇವಾ ಪ್ರತಿಷ್ಠಾನ, ಬಂಟ್ವಾಳ ಇದರ ಅಧ್ಯಕ್ಷ, ಹಿರಿಯ ಪತ್ರಕರ್ತ ಅಮ್ಮೆಂಬಳ ಆನಂದ ಡಾ. ಅಮ್ಮೆಂಬಳ ಬಾಳಪ್ಪ ಜನ್ಮಶತಾಬ್ದಿ ಸಮಾರಂಭದ ರೂಪುರೇಷೆಯ ಬಗ್ಗೆ ಮಾಹಿತಿ ನೀಡಿದರು.ಸಭೆಯಲ್ಲಿ ಡಾ. ಅಮ್ಮೆಂಬಳ ಬಾಳಪ್ಪ ಜನ್ಮ ಶತಾಬ್ದಿ ಸಮಾರಂಭಕ್ಕೆ ಅತಿಥಿ ಗಣ್ಯರನ್ನು ಆಹ್ವಾನಿಸುವುದು, ದೇಶಭಕ್ತಿಗೀತೆ ಸ್ಪರ್ಧೆ ಆಯೋಜನೆ, ಅಮ್ಮೆಂಬಳ ಬಾಳಪ್ಪರ ಸಂಸ್ಮರಣಾರ್ಥ ಸಂಚಿಕೆ ಬಿಡುಗಡೆ, ಸಾಧಕರಿಗೆ ಸನ್ಮಾನ ಮುಂತಾದ ವಿಷಯಗಳ ಬಗ್ಗೆ ಸಮಾಲೋಚನೆ ನಡೆಯಿತು. ಶತಾಬ್ದಿ ಸಮಾರಂಭವನ್ನು ಸಂಪೂರ್ಣ ಯಶಸ್ವಿ ಗೊಳಿಸುವುದಕ್ಕಾಗಿ ವಿವಿಧ ಸಮಿತಿಗಳನ್ನು ರಚಿಸಲಾಯಿತು.ಡಾ. ಅಮ್ಮೆಂಬಳ ಬಾಳಪ್ಪ ಜನ್ಮಶತಾಬ್ದಿ ಸಮಾರಂಭ ಸಮಿತಿಗೆ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಮುಖ್ಯಸ್ಥ ಪ್ರೊ. ತುಕಾರಾಮ ಪೂಜಾರಿ ಅವರನ್ನು ಅಧ್ಯಕ್ಷರನ್ನಾಗಿ, ಪುಂಡರೀಕಾಕ್ಷ ಯು. ಕೈರಂಗಳ ಅವರನ್ನು ಪ್ರಧಾನ ಕಾರ್ಯದರ್ಶಿಯನ್ನಾಗಿ, ಉಮೇಶ್ ಪಿ.ಕೆ. ನಾಗನ ವಳಚ್ಚಿಲು ಅವರನ್ನು…

Read More

ಬಂಟ್ವಾಳ: ಅಂತರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆ ಪ್ರಾಂತ್ಯ೯ ಇದರ ವಲಯ1,2,3 ಇದರ ಅಂತರ್ ವಲಯ ಮಟ್ಟದ ಕ್ರಿಕೆಟ್ ಪಂದ್ಯಾವಳಿ ಬಂಟ್ವಾಳದ ಎಸ್‌ವಿಎಸ್ ದೇವಳ ಶಾಲೆಯ ಮೈದಾನದಲ್ಲಿ ನಡೆಯಿತು. ಪ್ರಾಂತ್ಯ 9 ರ ಪ್ರಾಂತೀಯ ಅಧ್ಯಕ್ಷ ಲಕ್ಷ್ಮಣ್ ಕುಲಾಲ್ ಅಗ್ರಬೈಲು ಮಾತನಾಡಿ ಮುಂದಿನ ದಿನಗಳಲ್ಲಿ ನಡೆಯುವ ಕ್ರೀಡಾಕೂಟಕ್ಕೆ ಅರ್ಹ ಆಟಗಾರರನ್ನು ಆಯ್ಕೆ ಮಾಡಿ ಸಮರ್ಥವಾದ ಒಂದೇ ತಂಡವನ್ನು ರಚಿಸುವ ಉದ್ದೇಶದಿಂದ ಅಂತರ್ ವಲಯ ಮಟ್ಟದ ಕ್ರಿಕೆಟ್‌ಪಂದ್ಯಾಟವನ್ನು ಆಯೋಜಿಸಲಾಗಿದೆ ಎಂದರು.ಕ್ರೀಡಾಕೂಟವನ್ನು ಲಯನ್ಸ್ ಕ್ಲಬ್ ಬಂಟ್ವಾಳದ ಸ್ಥಾಪಕ ಸದಸ್ಯ ಡಾ. ಎಂ. ಶ್ಯಾಂ ಭಟ್ ಉದ್ಘಾಟಿಸಿ ಶುಭ ಕೋರಿದರು.ಮುಖ್ಯ ಅತಿಥಿ ಬಂಟ್ವಾಳ ಶ್ರೀ ತಿರುಮಲ ವೆಂಕಟರಂನ ಸ್ವಾಮೀ ದೇವಸ್ಥಾನದ ಆಡಳಿತ ಮೋಕ್ತೇಸರ ಅಶೋಕ್ ಶೆಣೈ ಮಾತನಾಡಿ ಕ್ರಿಕೆಟ್ ಆಟದಿಂದ ದೇಹ ಹಾಗೂ ಮನಸ್ಸು ಸಂತುಷ್ಟಗೊಳ್ಳುತ್ತದೆ. ಈ ಮೂಲಕ ಉತ್ತಮ ಆರೋಗ್ಯವನ್ನು ಪಡೆದು ಸಮಾಜದಲ್ಲಿ ಉತ್ತಮ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಿದೆ ಎಂದರು. ಈ ಸಂದರ್ಭ ಆಟಗಾರರ ಜರ್ಸಿಯನ್ನು ಬಿಡುಗಡೆಗೊಳಿಸಿ ಮೂರು ವಲಯಗಳ ತಂಡದ ನಾಯಕರಿಗೆ ಹಸ್ತಾಂತರಿಸಲಾಯಿತು. ವೇದಿಕೆಯಲ್ಲಿ…

Read More

ಬಂಟ್ವಾಳ: ಕಾವಳಮೂಡೂರು ಹಾಗೂ ದೇವಶ್ಯಮೂಡೂರು ಗ್ರಾಮದ ಜನತೆಗೆ ಉತ್ತಮ ಸೇವೆ ನೀಡುತ್ತಾ, ಅಬಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿರುವ ಕಾವಳಮೂಡೂರು ವ್ಯವಸಾಯ ಸೇವಾ ಸಹಕಾರ ಸಂಘದ ಹೆಸರಿಗೆ ಕಳಂಕ ತರುವ ಉದ್ದೇಶದಿಂದ ಕೆಲವು ಸ್ಥಾಪಿತ ಹಿತಾಸಕ್ತಿಗಳು ಅಪಪ್ರಚಾರ ನಡೆಸುತ್ತಿದ್ದು,ಸಂಘದ ಹಿಂದಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಓರ್ವ ಸಿಬ್ಬಂದಿ ಮತ್ತು ಸಾಲಗಾರ ಸದಸ್ಯರ ನಡುವಿನ ಸಾಲದ ವ್ಯವಹಾರಕ್ಕೂ ಸಂಘದ ಆಡಳಿತ ಸಮಿತಿಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಅಧ್ಯಕ್ಷ ಪದ್ಮಶೇಖರಜೈನ್ ನೇತೃತ್ವದ ಆಡಳಿತ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.ಜನರನ್ನು ಹಾದಿ ತಪ್ಪಿಸುವ ಉದ್ದೇಶದಿಂದ ಸಂಘದ ಆಡಳಿತ ಮಂಡಳಿಯ ವಿರುದ್ದ ಕೆಲ ಸ್ಥಾಪಿತ ಹಿತಾಸಕ್ತಿಗಳು ಅಪಪ್ರಚಾರ ಮಾಡುತ್ತಿದ್ದು,ಹಿಂದಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೇಶವ ಕೋಟ್ಯಾನ್ ಹಾಗೂ ಓರ್ವ ಸಿಬ್ಬಂದಿ ಕೆಲವು ಸದಸ್ಯರ ಹೆಸರಿನಲ್ಲಿ ಸಾಲವನ್ನು ಪಡೆದಿರುವ ಕುರಿತು ಮೇಲಾಧಿಕಾರಿಗಳಿಂದ ಶಾಸನಾತ್ಮಕವಾದ ತನಿಖೆಯು ನಡೆಯುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.ಹಿಂದಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಆ ಸಾಲಗಳನ್ನು ಸದಸ್ಯರಿಂದ ಬಂದ ಸಾಲದ ಅರ್ಜಿ ಹಾಗೂ ದಾಖಲೆಗಳನ್ನು ಆಡಳಿತ ಸಮಿತಿ ಸಭೆಗೆ ಹಾಜರುಪಡಿಸಿ ಶಿಫಾರಸ್ಸು ಮಾಡಿದ…

Read More

ಬಂಟ್ವಾಳ: ಸಜೀಪಮೂಡ ಸರ್ಕಾರಿ ಪದವಿ ಪೂರ್ವ ಕಾಲೇಜು ಇಲ್ಲಿನ ಪ್ರೌಢಶಾಲಾ ವಿಭಾಗದಲ್ಲಿ ಕಲಿಕಾ ಚೇತರಿಕೆ ಕಾರ್ಯಗಾರ ಶುಕ್ರವಾರ ನಡೆಯಿತು.ಶಾಲಾಭಿವೃದ್ಧಿ ಸಮಿತಿ ಕಾರ್ಯಧ್ಯಕ್ಷ ಜಯಪ್ರಕಾಶ್ ಪೆರ್ವ ಕಾರ್ಯಕ್ರಮ ಉದ್ಘಾಟಿಸಿದರು. ಶಿಕ್ಷಣ ಸಂಯೋಜಕಿಯರಾದ , ಸುಧಾ, ಸುಜಾತ, ಪ್ರತಿಮಾ, ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಜೋಯಲ್ ಲೋಬೋ, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯಕ್ಕೆ ಸಂಬಂಧಿಸಿದ ಸಂಪನ್ಮೂಲ ವ್ಯಕ್ತಿಗಳಾದ, ವೆಂಕಟ್ರಮಣ ಆಚಾರ್, ಲಕ್ಷ್ಮಣ್, ಶರತ್ ಚೌಟ, ರಂಜಿತ, ಪುಷ್ಪಲತಾ, ಸುಬ್ರಹ್ಮಣ್ಯ ಪ್ರಕಾಶ್, ಪ್ರವೀಣ ವೇದಿಕೆಯಲ್ಲಿ ಉಪಸ್ಥಿತರಿದ್ದರು.ತಾಲೂಕಿನ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಭೋದಿಸುವ ಸುಮಾರು 124 ಮಂದಿ ಶಿಕ್ಷಕರು ಭಾಗವಹಿಸಿದ್ದರು. ಉಪಪ್ರಾಂಶುಪಾಲೆ ಜಯಾಲಕ್ಷ್ಮೀ ಪಿ.ಎನ್. ಸ್ವಾಗತಿಸಿದರು. ಸಹಶಿಕ್ಷಕರಾದ ಸುಲೋಚನಾ ವಂದಿಸಿದರು, ಬಾಲಕೃಷ್ಣ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Read More