Author: admin
ತುಂಬೆ: ಇಲ್ಲಿನ ಗುಲಾಬಿ ಶೆಟ್ಟಿ ಎಜುಕೇಷನ್ಲ್ ಮತ್ತು ಸರ್ವೀಸ್ ಟ್ರಸ್ಟ್ ಆಶ್ರಯದಲ್ಲಿ ನಡೆಯುತ್ತಿರುವ ದಿವೀಶ್ ಪ್ರಿ ಪ್ರೈಮರಿ ಸ್ಕೂಲ್ ತುಂಬೆ, ಇದರ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ವಿಜ್ರಂಭಣೆಯಿಂದ ನಡೆಯಿತು.ಇಂಗ್ಲೀಷ್ ವಿಝಾರ್ಡ್ ಫೌಂಡೇಶನ್ ಇದರ ಜಿಲ್ಲಾ ಸಂಯೋಜಕ ಪ್ರದೀಪ್ ಪೈ ದೀಪ ಪ್ರಜ್ವಲಿಸಿದರು. ಟ್ರಸ್ಟ್ ಅಧ್ಯಕ್ಷ ಚಂದ್ರಪ್ರಕಾಶ್ ಶೆಟ್ಟಿ, ಟ್ರಸ್ಟಿ ಸುಕನ್ಯಾ ಎನ್.ಶೆಟ್ಟಿ, ಶಾಲಾ ಸಂಚಾಲಕಿ ಉಷಾ ಚಂದ್ರಪ್ರಕಾಶ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾಸಂಸ್ಥೆಯ ಶಿಕ್ಷಕಿಯರಾದ ಸ್ವಾತಿಶ್ರೀ, ಉಷಾ, ರುಬೀನಾ ಸಹಕರಿಸಿದರು. ವಾರ್ಷಿಕೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ ನಡೆಯಿತು.
ಬಂಟ್ವಾಳ: ಸಜೀಪ ಮಾಗಣೆಯ ಶ್ರೀ ಉಳ್ಳಾಲ್ತಿ ಅಮ್ಮನವರ ವಾರ್ಚಿಕ ಪುದ್ದರ್ ಮೆಚ್ಚಿ ಜಾತ್ರೆಯ ಪ್ರಯುಕ್ತ ಜ.9ರಿಂದ ಜ.16ರವರೆಗೆ ಶ್ರೀ ಕ್ಷೇತ್ರ ಪಣೋಲಿಬೈಲು ಕಲ್ಲುರ್ಟಿ ದೈವಸ್ಥಾನದಲ್ಲಿ ಅಗೆಲು ಸೇವೆ ಹಾಗೂ ಕೋಲ ಸೇವೆ ಇರುವುದಿಲ್ಲ. ಜ.17ರಿಂದ ಎಂದಿನಂತೆ ಸೇವೆಗಳು ಮುಂದುವರಿಯಲಿದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.
ಬಂಟ್ವಾಳ: ಲಯನ್ಸ್ ಕ್ಲಬ್ ಬಂಟ್ವಾಳದ ವತಿಯಿಂದ ಬಿ.ಸಿ.ರೋಡ್ ನಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ತಂಗುದಾಣವೊಂದನ್ನು ನಿರ್ಮಿಸಲಾಗಿದ್ದು, ಅದನ್ನು ಶುಕ್ರವಾರ ಸಂಜೆ ಲಯನ್ಸ್ ಜಿಲ್ಲೆ 317 ಡಿ ಗವರ್ನರ್ ಎಸ್. ಸಂಜಿತ್ ಶೆಟ್ಟಿ ಅವರು ತಮ್ಮ ಅಧಿಕೃತ ಭೇಟಿ ವೇಳೆ ಉದ್ಘಾಟಿಸಿದರು.ಈ ಸಂದರ್ಭ ಮಾತನಾಡಿದ ಅವರು, ಲಯನ್ಸ್ ಕ್ಲಬ್ ತನ್ನ ಸಮಾಜಸೇವಾ ಚಟುವಟಿಕೆಗಳ ಮೂಲಕ ಜನರ ಅಗತ್ಯಗಳನ್ನು ಪೂರೈಸುವ ಕೆಲಸ ಮಾಡುತ್ತಿದ್ದು, ಬಿ.ಸಿ.ರೋಡ್ ನಲ್ಲಿ ಬಸ್ ಗೆ ಕಾಯುವ ಜನರ ಬವಣೆಯನ್ನು ಗಮನಿಸಿ ತಂಗುದಾಣವನ್ನು ನಿರ್ಮಿಸಿದ್ದು ಶ್ಲಾಘನೀಯ ಎಂದರು.ಈ ಸಂದರ್ಭ ಗವರ್ನರ್ ಅವರ ಪತ್ನಿ ಪ್ರಗತಿ ಶೆಟ್ಟಿ, ಲಯನ್ಸ್ ಮಲ್ಟಿಪಲ್ ಕೌನ್ಸಿಲ್ ಚೇರ್ ಪರ್ಸನ್ ವಸಂತ್ ಕುಮಾರ್ ಶೆಟ್ಟಿ, ಜಿಲ್ಲಾ ಸಂಯೋಜಕ ಶ್ರೀನಿವಾಸ ಪೂಜಾರಿ ಮೇಲ್ಕಾರ್, ಜಿಲ್ಲಾ ಕ್ಯಾಬಿನೆಟ್ ಸದಸ್ಯ ಧೀರಜ್ ಹೆಬ್ರಿ, ಪ್ರಾಂತ್ಯಾಧ್ಯಕ್ಷ ಲಕ್ಷ್ಮಣ್ ಕುಲಾಲ್ ಅಗ್ರಬೈಲ್, ವಲಯಾಧ್ಯಕ್ಷ ರಮಾನಂದ ನೂಜಿಪ್ಪಾಡಿ, ಜಿಲ್ಲಾ ಸಂಪುಟ ಸದಸ್ಯ ಜಗದೀಶ ಯಡಪಡಿತ್ತಾಯ, ಬಂಟ್ವಾಳ ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಆಚಾರ್, ಕಾರ್ಯದರ್ಶಿ ಬಿ.ಶಿವಾನಂದ ಬಾಳಿಗಾ, ಕೋಶಾಧಿಕಾರಿ…
ಬಂಟ್ವಾಳ: ಪಂಜಿಕಲ್ಲು ಗ್ರಾ.ಪಂ.ವ್ಯಾಪ್ತಿಯಲ್ಲಿ ಅನುಷ್ಠಾನಕ್ಕೆ ಮುಂದಾಗಿರುವ ಡಾಮಾರು ತಯಾರಿ ಘಟಕದ ವಿರುದ್ಧ ಹೋರಾಟ ಸಮಿತಿಯ ಪ್ರತಿಭಟನೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಮಾಲತಿ ಅವರ ಕುರಿತು ಗ್ರಾ.ಪಂ.ಅಧ್ಯಕ್ಷರು ಸಾಮಾನ್ಯ ಸಭೆಯಲ್ಲಿ ದೌರ್ಜನ್ಯ ನಡೆಸಿದ್ದಾರೆ ಆರೋಪಿಸಿ ಶುಕ್ರವಾರ ಪಂಜಿಕಲ್ಲು ಗ್ರಾ.ಪಂ.ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.ಪ್ರತಿಭಟನೆಯನ್ನುದ್ದೇಶಿಸಿ ದ.ಕ.ಜಿಲ್ಲಾ ಕಾಂಗ್ರೆಸ್ ಸಹಕಾರಿ ಘಟಕದ ಸಂಚಾಲಕ ಸುದರ್ಶನ್ ಜೈನ್ ಮಾತನಾಡಿ, ಪಂಜಿಕಲ್ಲಿನಲ್ಲಿ ಡಾಮಾರು ಘಟಕ ಅನುಷ್ಠಾನವಾದರೆ ಸ್ಥಳೀಯ ಮನೆಗಳಿಗೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಪ್ರತಿಭಟನೆಯಲ್ಲಿ ಸದಸ್ಯೆ ಮಾಲತಿ ಅವರನ್ನು ಪಾಲ್ಗೊಂಡಿದ್ದರು. ಹಿಂದಿನ ಪಿಡಿಒ ಅವರೇ ಘಟಕಕ್ಕೆ ಅನುಮತಿ ನೀಡಿದ್ದು, ಸಾಮಾನ್ಯ ಸಭೆಯಲ್ಲಿ ಚರ್ಚಿಸದೆ ನಿರ್ಣಯವನ್ನು ತಿದ್ದಲಾಗಿದೆ. ಇದರ ಹಿಂದೆ ಲಕ್ಷಾಂತರ ರೂಪಾಯಿ ಹಣದ ವ್ಯವಹಾರ ನಡೆದಿರುವ ಮಾಹಿತಿಯೂ ಇದೆ.ಸದಸ್ಯೆಯನ್ನು ಗ್ರಾ.ಪಂ.ಅಧ್ಯಕ್ಷರು ನಿಂದಿಸಿರುವ ಕುರಿತು ಈಗಾಗಲೇ ಪೊಲೀಸ್ ಸೇರಿದಂತೆ ಸಂಬಂಧಪಟ್ಟವರಿಗೆ ದೂರು ನೀಡಲಾಗಿದ್ದು, ಘಟಕವನ್ನು ನಿಲ್ಲಿಸದೇ ಇದ್ದರೆ ದೊಡ್ಡ ಮಟ್ಟದ ಹೋರಾಟ ನಡೆಸಲಿದ್ದೇವೆ. ಪಂಜಿಕಲ್ಲು ಗ್ರಾ.ಪಂ.ನಲ್ಲಿ ಬಿಜೆಪಿಯವರಿಗೆ ಮಾತ್ರ ಸೌಲಭ್ಯಗಳು ಸಿಗುತ್ತಿದ್ದು, ಭ್ರಷ್ಟಾಚಾರ ತುಂಬಿ ಹೋಗಿದೆ ಎಂದು ಆರೋಪಿಸಿದರು.ಬಂಟ್ವಾಳ…
ಬಂಟ್ವಾಳ: ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ರಿ., ಉಜಿರೆ ಇದರ ರಜತಪರ್ವ- ಶತಕ ತಾಳಮದ್ದಳೆ ಸಪ್ತಾಹ ಸರಣಿಗೆ ಬಿ.ಸಿ.ರೋಡಿನ ಹೋಟೆಲ್ ರಂಗೋಲಿ ಸಭಾಂಗಣದಲ್ಲಿ ಬುಧವಾರ ಸಂಜೆ ಚಾಲನೆ ನೀಡಲಾಯಿತು. ಬಿ. ಸಿ. ರೋಡಿನ ಹೋಟೆಲ್ ರಂಗೋಲಿ ಇದರ ಆಶ್ರಯದಲ್ಲಿ ಯಕ್ಷಸಂಜೀವಿನಿ ಟ್ರಸ್ಟ್ ರಿ.ಮುಡಿಪು ಸಹಕಾರದೊಂದಿಗೆ ನಡೆಯುವ ತಾಳಮದ್ದಳೆ ಸಪ್ತಾಹಕ್ಕೆ ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷರಾದ ಬಿ.ಗಣೇಶಾನಂದ ಸೋಮಯಾಜಿ ದೀಪ ಬೆಳಗಿಸಿ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು, ಯಕ್ಷಗಾನ ತಾಳಮದ್ದಳೆ ಸಹಿತ ಕಲಾಪ್ರಕಾರಗಳು ಇಂದು ನವಮಾಧ್ಯಮಗಳಲ್ಲಿ ಸಾಕಷ್ಟು ದೊರಕುತ್ತಿದ್ದರೂ ನೇರವಾಗಿ ಅದನ್ನು ವೀಕ್ಷಿಸುವುದರಿಂದ ರಸಾನುಭವ ಸಾಧ್ಯವಾಗುತ್ತದೆ ಎಂದರು. ಹಿರಿಯ ಕಲಾವಿದರೂ ವಿಮರ್ಶಕರೂ ಆದ ಡಾ. ಎಂ.ಪ್ರಭಾಕರ ಜೋಷಿ, ಪ್ರಮುಖರಾದ ಭುಜಬಲಿ ಧರ್ಮಸ್ಥಳ, ಹಿರಿಯ ಯಕ್ಷಗಾನ ಕಲಾವಿದ ಕೆ.ಗೋವಿಂದ ಭಟ್, ಉದ್ಯಮಿ ಸದಾನಂದ ಶೆಟ್ಟಿ ರಂಗೋಲಿ ಮತ್ತು ಸಂಜೀವ ಶೆಟ್ಟಿ ಉಪಸ್ಥಿತರಿದ್ದರು. ಪ್ರತಿಷ್ಠಾನದ ಸಂಚಾಲಕ ಉಜಿರೆ ಅಶೋಕ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿಶ್ವಭಾರತಿ ಟ್ರಸ್ಟ್ ನ ಪ್ರಶಾಂತ್ ಹೊಳ್ಳ…
ಬಂಟ್ವಾಳ: ಬಂಟ್ವಾಳ ಬಿಜೆಪಿ ವತಿಯಿಂದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ನೇತೃತ್ವದಲ್ಲಿ ಜ. 14ರಿಂದ 26ರ ವರೆಗೆ ಬಂಟ್ವಾಳ ವಿಧಾನಸಭಾ ಕ್ಷೇತ್ರದಾದ್ಯಂತ ನಡೆಯಲಿರುವ ಗ್ರಾಮ ವಿಕಾಸ ಯಾತ್ರೆ, ಗ್ರಾಮದೆಡೆಗೆ ಶಾಸಕರ ನಡಿಗೆ ಪಾದಯಾತ್ರೆಯ ಸಮಾಲೋಚನಾ ಸಭೆ ಬಿ.ಸಿ.ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ನಡೆಯಿತು.ಸಭೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಕ್ ಅವರು ಮಾತನಾಡಿ, ಬಂಟ್ವಾಳ ಕ್ಷೇತ್ರದಲ್ಲಿ ನಡೆಯುವ 3ನೇ ಪಾದಯಾತ್ರೆ ಇದಾಗಿದ್ದು, ಈ ಹಿಂದೆ ಶಾಸಕನಾಗುವ ಮೊದಲು 2ಪಾದಯಾತ್ರೆಗಳನ್ನು ನಡೆಸಿ ಕ್ಷೇತ್ರದ ಪ್ರತಿ ಗ್ರಾಮಗಳ ಜನತೆಯ ನಾಡಿಮಿಡಿತವನ್ನು ಅರಿತು ಅದಕ್ಕೆ ಪೂರಕವಾಗಿ ಕಳೆದ ನಾಲ್ಕೂವರೆ ವರ್ಷಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸಲಾಗಿದೆ.ಈ ಬಾರಿ 13 ದಿನಗಳ ಪಾದಯಾತ್ರೆ ನಡೆಸಲಿದ್ದು, ಮುಖ್ಯವಾಗಿ ಪ್ರತಿದಿನ ಕ್ಷೇತ್ರದ ಒಂದು ದೇವಸ್ಥಾನದಿಂದ ಮತ್ತೊಂದು ದೇವಸ್ಥಾನವನ್ನು ಸಂಪರ್ಕಿಸಲಿದ್ದು, ಪ್ರತಿದಿನ ಸಂಜೆ ಸಮಾರೋಪ ಕಾರ್ಯಕ್ರಮ ನಡೆಸಲಿದ್ದೇವೆ. ಜ. 14ರಂದು ಮಧ್ಯಾಹ್ನ 2ಕ್ಕೆ ಪೊಳಲಿ ದೇವಸ್ಥಾನದಿಂದ ಪಾದಯಾತ್ರೆ ಆರಂಭಗೊಂಡು, ಜ. 26ರಂದು ಬಿ.ಸಿ.ರೋಡಿನಲ್ಲಿ ಸಮಾರೋಪ ನಡೆಯಲಿದ್ದು, ಉಳಿದಂತೆ ಪ್ರತಿದಿನ ಬೆಳಗ್ಗೆ 8ಕ್ಕೆ ಪಾದಯಾತ್ರೆ ಆರಂಭಗೊಳ್ಳಲಿದೆ.…
ಬಂಟ್ವಾಳ: ತಾಲೂಕಿನ ಅಮ್ಟಾಡಿ ಗ್ರಾಮದ ಕೆಂಪುಗುಡ್ಡೆ ಶ್ರೀ ಬ್ರಹ್ಮ ಮುಗೇರ್ಕಳ ಕೊರಗತನಿಯ ಮತ್ತು ಪರಿವಾರ ದೈವಗಳ ದೈವಸ್ಥಾನದ ಪುನರ್ ನವೀಕರಣಕ್ಕೆ ಶಿಲಾನ್ಯಾಸ ಹಾಗೂ ವಿಜ್ಞಾಪನಾ ಪತ್ರದ ಬಿಡುಗಡೆ ಸಮಾರಂಭ ಕ್ಷೇತ್ರದ ವಠಾರದಲ್ಲಿ ಬುಧವಾರ ನಡೆಯಿತು.ಶ್ರೀಧಾಮ ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರು ದೈವಸ್ಥಾನದ ಪುನರ್ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ ನೆರವೇರಿಸಿ ಬಳಿಕ ನಡೆದ ಧಾರ್ಮಿಕ ಸಭೆಯಲ್ಲಿ ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸಿದರು.ನಂತರ ಆಶೀರ್ವಚನಗೈದ ಮಾಣಿಲ ಶ್ರೀಗಳು ತುಳುನಾಡಿನಲ್ಲಿ ಅನಾದಿಕಾಲದಲ್ಲಿ ದೈವರಾಧನೆಗಳು ಅತ್ಯಂತ ಶೃದ್ದಾ ಭಕ್ತಿಯಿಂದ ಮತ್ತು ಪ್ರಭಾವಯುತವಾಗಿ ನಡೆಯುತ್ತಿದ್ದು ಸತ್ಯದ ಮಹಿಮೆಗೆ ಕೊರತೆ ಇರಲಿಲ್ಲ,ವಿದ್ಯೆಯ ಜೊತೆಗೆ ಅನುಭವದ ಪಾಂಡಿತ್ಯವು ಇದ್ದಾಗ ಕೆಲ ದೋಷ ಪರಿಹರಿಸಲು ಸಾಧ್ಯವಾಗುತ್ತದೆ ಎಂದು ನುಡಿದರು. ದೈವಸ್ಥಾನದ ನಿರ್ಮಾಣ ಕಾರ್ಯದಲ್ಲಿ ಆರಂಭ ಶೂರರಾಗದೆ ಎಲ್ಲರು ಒಗ್ಗಟ್ಟಿನಲ್ಲಿ ಕೆಲಸ ಮಾಡಿದಾಗ ಯಶಸ್ಸು ಸಿಗುವುದು ಎಂದ ಶ್ರೀಗಳು ಭಗವಂತನ ಸಾಮ್ರಾಜ್ಯದಲ್ಲಿ ಜಾತಿ,ಮತ,ಬೇಧ ಮರೆತು ಎಲ್ಲರು ಸಾಮರಸ್ಯದಿಂದ ಬದುಕಿದಾಗ ದೇಶ ಸುಭದ್ರವಾಗಿರಲು ಸಾಧ್ಯ ಎಂದರು. ಸಭಾಧ್ಯಕ್ಷತೆ ವಹಿಸಿದ್ದ ಕಿಯೋನಿಕ್ಸ್ ನಿಗಮದ ಅಧ್ಯಕ್ಷ ಹರಿಕೃಷ್ಣ…
ಬಂಟ್ವಾಳ: ಅಮ್ಮ ಸ್ವೀಟ್ಸ್ ಸೇವಾ ಟ್ರಸ್ಟ್ ಬೋಳಂಗಡಿ ಇದರ ಆಶ್ರಯದಲ್ಲಿ ಅಮ್ಮ ಚೇತೋಹಾರ ಎನ್ನುವ ವಿಶೇಷ ಕಾರ್ಯಕ್ರಮ ಭಾನುವಾರ ಬೋಳಂಗಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ನಡೆಯಿತು.ಎಂ.ಎನ್.ಕುಮಾರ್ ಮೆಲ್ಕಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ನಗರ ಪೊಲೀಸ್ ಠಾಣೆಯ ಎಎಸೈ ಜಿನ್ನಪ್ಪ ಗೌಡ ಕಾರ್ಯಕ್ರಮ ಉದ್ಘಾಟಿಸಿದರು. ಶಿಕ್ಷಣ ಇಲಾಖೆಯ ಸಂಪನ್ಮೂಲ ವ್ಯಕ್ತಿ ಸುರೇಖ ಯಳವಾರ, ಪ್ರಕಾಶ್ ಎಂ., ಜನಾರ್ದನ ಕುಲಾಲ್ ಬೊಂಡಾಲ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಬೊಂಡಾಲ ಶಾಲೆಯಲ್ಲಿ ಕೈಗೊಂಡ ಅಭಿವೃದ್ಧಿ ಚಟುವಟಿಕೆಗಳಿಗಾಗಿ ಶಿಕ್ಷಕಿ ರೇಖಾ ಸಿ. ಎಚ್. ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ವಿಶೇಷ ಚೇತನ ಮಕ್ಕಳಿಗೆ ಸಹಾಯಧನ ಹಾಗೂ ಫಲಾನುಭವಿಗಳಿಗೆ ಗಾಲಿ ಕುರ್ಚಿಯನ್ನು ವಿತರಿಸಲಾಯಿತು.ಪುರಸಭೆ ಮಾಜಿ ಸದಸ್ಯೆ ವಸಂತಿ ಗಂಗಾಧರ ಸ್ವಾಗತಿಸಿ, ಎಂ.ಎಚ್. ಮುಸ್ತಾಪ ಪ್ರಾಸ್ತವಿಕ ಮಾತುಗಳನ್ನಾಡಿದರು. ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಸಲೀಂ ಬೋಳಂಗಡಿ ವಂದಿಸಿದರು. ಮನೋಜ್ ವಾಮಂಜೂರು ಕಾರ್ಯಕ್ರಮ ನಿರೂಪಿಸಿದರು. ಅಮ್ಮಾ ಸ್ವೀಟ್ಸ್ ಸೇವಾ ಟ್ರಸ್ಟ್ ಸಂಸ್ಥೆಯ ಜನಾರ್ದನ ಅವರು ತನ್ನ ಸಹಪಾಠಿಗಳೊಂದಿಗೆ ತನ್ನ ದುಡಿಮೆಯ…
ಬಂಟ್ವಾಳ: ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಕಾರದೊಂದಿಗೆ ಜೆಸಿಐ ಬಂಟ್ವಾಳ ಪ್ರತೀ ವರ್ಷವೂ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ತಾಲೂಕಿನ ವಿವಿಧೆಡೆಗಳಲ್ಲಿ ನಡೆಸಿಕೊಂಡು ಬರುತ್ತಿದ್ದು ಉಚಿತವಾಗಿ ನೀಡುವ ಆರೋಗ್ಯ ಸೇವೆಯ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು. ಕಾಲಕಾಲಕ್ಕೆ ನಮ್ಮ ಆರೋಗ್ಯವನ್ನು ತಪಾಸಣೆ ಮಾಡಿಸಿಕೊಳ್ಳುವುದರಿಂದ ರೋಗ ಮುಕ್ತವಾದ ಜೀವನ ನಡೆಸಲು ಸಾಧ್ಯವಿದೆ ಎಂದು ಜೆಸಿಐ ಬಂಟ್ವಾಳದ ಅಧ್ಯಕ್ಷ ರಾಜೇಂದ್ರ ಕೆ. ಹೇಳಿದರು.ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಬಂಟ್ವಾಳ, ಜೆಸಿಐ ಬಂಟ್ವಾಳ, ಎ.ಜೆ. ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಂಗಳೂರು ಇದರ ಸಹಯೋಗದಲ್ಲಿ ಬಂಟ್ವಾಳದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಉಚಿತ ವೈದ್ಯಕೀಯ ತಪಾಸಣಾ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮವನ್ನು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಸೇಸಪ್ಪ ಕೋಟ್ಯಾನ್ ಉದ್ಘಾಟಿಸಿದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಹಿನ್ನಲೆಯಲ್ಲಿ ಅವರನ್ನು ಸನ್ಮಾನಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಡಾ. ಪ್ರಕಾಶ್ಚಂದ್ರ ಬಿ. ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಗರ…
ಬಂಟ್ವಾಳ: ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ಕ್ಷೇತ್ರದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಬಗ್ಗೆ ಸಜೀಪನಡು ಮತ್ತು ಸಜೀಪಪಡು ಗ್ರಾಮಗಳ ಭಕ್ತರ ಪೂರ್ವಭಾವಿ ಸಮಾಲೋಚನಾ ಸಭೆಯು ಸಜೀಪನಡು ಶ್ರೀ ಷಣ್ಮುಖಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯಿತು. ಮಾಗಣೆ ತಂತ್ರಿಗಳಾದ ಎಂ. ಸುಬ್ರಹ್ಮಣ್ಯ ಭಟ್ ದೇವಳದ ಅಭಿವೃದ್ಧಿ, ಬ್ರಹ್ಮಕಲಶೋತ್ಸವದದಲ್ಲಿ ಎಲ್ಲರ ಅಳಿಲ ಸೇವೆಯೊಂದಿಗೆ ನಡೆಸಬೇಕಾಗಿದೆ. ಅದಕ್ಕಾಗಿ ನಮ್ಮೆಲ್ಲರ ಸೌಭಾಗ್ಯ ಎನ್ನುವ ನಿಟ್ಟಿನಲ್ಲಿ ಸಹಭಾಗಿಗಳಾಗೋಣ ಎಂದು ಶುಭ ಹಾರೈಸಿದರು.ಅಭಿವೃದ್ಧಿ ಸಮಿತಿ ಸದಸ್ಯ ದಾಮೋದರ ಬಿ.ಎಂ. ಪ್ರಸ್ತಾವನೆ ಮಾಡುತ್ತಾ, ಮನೆ ಮನೆಗಳಿಗೆ ಆಮಂತ್ರಣ ಪತ್ರ ವಿತರಣೆ ಕಾರ್ಯ ಶೀಘ್ರವಾಗಿ ನಡೆಯಬೇಕಿದ್ದು, ಎಲ್ಲರೂ ಸಹಕರಿಸುವಂತೆಯೂ, ಎಲ್ಲಾ ಮನೆಗಳಿಗೆ ಬ್ರಹ್ಮಕಲಶೋತ್ಸವದ ಆಮಂತ್ರಣ ನೀಡಿಕೆಯ ಕ್ರಮವನ್ನು ವಿವರಿಸಿದರು.ವ್ಯವಸ್ಥಾಪನಾ ಸಮಿತಿ ಸದಸ್ಯರೂ, ಹೊರೆಕಾಣಿಕೆ ಸಮಿತಿ ಸಂಚಾಲಕರಾದ ಯಶವಂತ ದೇರಾಜೆಗುತ್ತು ಮಾತನಾಡಿ ಸಜೀಪಮಾಗಣೆಯ ಎಲ್ಲಾ ಭಕ್ತರು ಆಮಂತ್ರಣ ಪತ್ರಿಕೆ ಎಲ್ಲಾ ಮನೆಗಳಿಗೆ ತಲುಪಿಸುವ ಜೊತೆಗೆ ಪ್ರತಿಯೊಂದು ಮಠ ಮಂದಿರಗಳಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ಮಾಡುವಂತಹ ಕಾರ್ಯಗಳಿಗೆ ಈಗಿಂದಲೇ ಸನ್ನದ್ಧರಾಗಬೇಕಿದೆ ಎಂದರು.ಅಧ್ಯಕ್ಷತೆಯನ್ನು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಅರವಿಂದ ಭಟ್…








