Author: admin
ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ, ದ.ಕ. ಕೃಷಿ ಅಭಿವೃದ್ಧಿ ಸಹಕಾರಿ ಸಂಘ ಮಂಗಳೂರು, ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘ ಇದರ ಆಶ್ರಯದಲ್ಲಿ ಜ ಕೆ.ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಇವರಿಂದ ಕಣ್ಣು, ದಂತ, ವೈದ್ಯಕೀಯ ಶಿಬಿರ ಹಾಗೂ ಕೇಂದ್ರ ಸರ್ಕಾರದ ನಿಕ್ಷಯ ಮಿತ್ರ ಯೋಜನೆಯಡಿ ಕ್ಷಯ ರೋಗಿಗಳಿಗೆ ಆಹಾರ ಧಾನ್ಯ ವಿತರಣಾ ಕಾರ್ಯಕ್ರಮ ಮಂಗಳವಾರ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ನಡೆಯಿತು. ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿಮುಖ್ಯ ಅತಿಥಿ ಮೇರಮಜಲು ಗ್ರಾ.ಪಂ. ಅಧ್ಯಕ್ಷೆ ಜಯಶ್ರೀ ಕರ್ಕೆರಾ ಮಾತನಾಡಿಮಂಗಳೂರಿನ ಅಂಬಾ ಭವಾನಿ ಭಜನಾ ಮಂದಿರದ ಅಧ್ಯಕ್ಷ ಸೀತಾರಾಮ ಎ., ದ.ಕ. ಕೃಷಿ ಅಭಿವೃದ್ಧಿ ಸಹಕಾರಿ ಸಂಘ ಮಂಗಳೂರು ಇದರ ಕಾರ್ಯನಿರ್ವಾಹಣಾಧಿಕಾರಿ ಪ್ರೇಮರಾಜ್ ಭಂಡಾರಿ, ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘ ಇದರ ಕಾರ್ಯ ನಿರ್ವಾಹಣಾಧಿಕಾರಿ ಧರ್ಮಪಾಲ್ ಭಂಡಾರಿ, ತಾ.ಪಂ. ಮಾಜಿ ಸದಸ್ಯ ಗಣೇಶ್ ಸುವರ್ಣ ತುಂಬೆ, ರೋಟರಿ ಕ್ಲಬ್ ಫರಂಗಿಪೇಟೆ…
ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಟೌನ್ ವತಿಯಿಂದ ಸಾಧಕರಿಗೆ ಸನ್ಮಾನ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ ಹಾಗೂ ಹೊಸವರ್ಷಾಚರಣೆ ಕಾರ್ಯಕ್ರಮ ಶನಿವಾರ ರಾತ್ರಿ ಬಿ.ಸಿ ರೋಡಿನ ಕುಲಾಲ ಭವನದಲ್ಲಿ ನಡೆಯಿತು. ರಾಜ್ಯಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು, ಯಕ್ಷಗಾನ ಕಲಾವಿದ ಸರಪಾಡಿ ಅಶೋಕ ಶೆಟ್ಟಿ ,ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು, ಪತ್ರಕರ್ತ ವೆಂಕಟೇಶ್ ಬಂಟ್ವಾಳ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು. ಚಿತ್ರ ಕಲಾವಿದ ಮನೋಜ್ ಕನಪ್ಪ್ಪಾಡಿ ಮತ್ತು ಹೆಣ್ಣು,ಗಂಡು ಸ್ವರದಲ್ಲಿ ಏಕ ಕಾಲದಲ್ಲಿ ಹಾಡುವ ಕಲಾವಿದ ರಾಜೇಶ್ ಸಜೀಪ ರವರನ್ನು ಸನ್ಮಾನಿಸಲಾಯಿತು. ರೋಟರಿ ಕ್ಲಬ್ ಅಧ್ಯಕ್ಷರಾದ ಚಿತ್ತರಂಜನ್ ಶೆಟ್ಟಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.ರೋಟರಿ ಜಿಲ್ಲಾ ಪ್ರಕಾಶ್ ಕಾರಂತ್, ಉಪ ಗವರ್ನರ್ ಮಂಜುನಾಥ್ ಆಚಾರ್ಯ ಅವರನ್ನು ಕ್ಲಬ್ ವತಿಯಿಂದ ಗೌರವಿಸಲಾಯಿತು. ಇದೇ ವೇಳೆ ೨೦೨೪-೨೫ನೆ ಸಾಲಿನ ನೂತನ ಅಧ್ಯಕ್ಷರಾಗಿ ಕಿಶೋರ್ ಕುಮಾರ್ ಸರ್ವಾನುಮತದ ಆಯ್ಕೆಯನ್ನು ಪ್ರಕಟಿಸಲಾಯಿತು, ಕಾರ್ಯದರ್ಶಿ ಉಮೇಶ್ ಆರ್ ಮೂಲ್ಯ ಅವರು ತಿಂಗಳ ವರದಿ ವಾಚಿಸಿ, ವಂದಿಸಿದರು ಬಳಿಕ ರೋಟರಿ ಅನೆಟ್ಸ್…
ಬಂಟ್ವಾಳ: ಕ್ಷೇತ್ರದ ಜನರ ಪ್ರೀತಿ, ವಿಶ್ವಾಸವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ, ವ್ಯಕ್ತಿಗಿಂತ ಪಕ್ಷ ಮುಖ್ಯ, ಪಕ್ಷವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ತೊಡಗಿಸಿಕೊಂಡಿದ್ದು, ಮುಂದಿನ ದಿನದಲ್ಲಿ ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸುವುದು ನಿಶ್ಚಿತ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪಾಡಿ ಅವರು ವಿಶ್ವಾಸ ವ್ಯಕ್ತಪಡಿಸಿದರು.ಭಾನುವಾರ ಸಂಜೆ ಕಡೇಶ್ವಾಲ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ೫.೫೦ ಕೋ.ರೂ.ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿ ಬಳಿಕ ಪೆರ್ಲಾಪು ವಠಾರದಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು. ೨೦ ಕೋಟಿ ಸದಸ್ಯರನ್ನು ಹೊಂದಿರುವ ಜಗತ್ತಿನ ಅತೀ ದೊಡ್ಡ ಪಕ್ಷ ಬಿಜೆಪಿಯಾಗಿದ್ದು ಅಭಿವೃದ್ಧಿ ನಿರಂತರವಾಗಿ ನಡೆಯುವ ಕಾರ್ಯವಾಗಿದೆ, ವಯಕ್ತಿಕ ವರ್ಚಸ್ಸಿಗಾಗಿ ಯಾವತ್ತು ಕೆಲಸ ಮಾಡಿಲ್ಲ, ಪಕ್ಷದ ಸಂಘಟನೆಯ ದೆಸೆಯಲ್ಲಿ ಮುಂದಿನ ದಿನಗಳಲ್ಲೂ ಕೆಲಸ ಮಾಡುವುದಾಗಿ ಶಾಸಕ ರಾಜೇಶ್ ನಾಕ್ ಹೇಳಿದರು.ಕಳೆದ ಐದೂವರೆ ವರ್ಷದ ಅವಧಿಯಲ್ಲಿ ಕಡೇಶ್ವಾಲ್ಯ ಗ್ರಾ.ಪಂ.ವ್ತಾಪ್ತಿಯಲ್ಲಿ ೧೦ ಕೋ.ರೂ.ವಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನಕ್ಕೆ ತರಲಾಗಿದೆ…
ಬಂಟ್ವಾಳ: ನಾಗರಿಕ ಕ್ರಿಯಾ ಸಮಿತಿ ಸಂಚಯಗಿರಿ ಇದರ ವಾರ್ಷಿಕ ಸಹಮಿಲನ ಕಾರ್ಯಕ್ರಮ ಸಂಚಯಗಿರಿಯಲ್ಲಿ ಭಾನುವಾರ ಸಂಜೆ ನಡೆಯಿತು. ಸ್ಥಳೀಯ ಹಿರಿಯ ನಾಗರಿಕ, ಪರಿಸರವಾದಿ ಎ. ದಾಮೋದರ ದೀಪ ಪ್ರಜ್ವಲಿಸಿದರು. ಅವರು ಮಾತನಾಡಿ ಸಂಚಯಗಿರಿ ಪ್ರದೇಶ ಇಂದು ಕೇವಲ ಬಂಟ್ವಾಳಕ್ಕೆ ಮಾತ್ರ ಪರಿಚಿತವಾಗಿ ಉಳಿದಿಲ್ಲ. ಇಲ್ಲಿನ ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರದ ಮೂಲಕ ದೇಶ ವಿದೇಶಗಳಲ್ಲೂ ಪರಿಚಿತವಾಗಿರುವುದು ನಮಗೆಲ್ಲರಿಗೂ ಹೆಮ್ಮೆಯ ವಿಚಾರ ಎಂದರು.ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ರಮಾಶಂಕರ್ ಮಾತನಾಡಿ ಸಂಚಯ ಎಂದರೆ ಸಂಗ್ರಹ, ಸಂಗ್ರಹವಾದಾಗ ಒಗ್ಗಟ್ಟಾಗುತ್ತದೆ. ಒಗ್ಗಟ್ಟು ಐಕ್ಯತೆ ಇರಬೇಕಾದರೆ ಸಹಯೋಗವೂ ಬೇಕು ಎಂದು ತಿಳಿಸಿದರು. ನಾಗರಿಕ ಕ್ರಿಯಾ ಸಮಿತಿಯ ಅಧ್ಯಕ್ಷ ಸುರೇಶ್ ಬಂಗೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಚಯಗಿರಿ ಬಡವಾಣೆಯ ನಾಗರಿಕರು ಹೃದಯವಂತರು. ನಾಗರಿಕ ಕ್ರಿಯಾ ಸಮಿತಿಯ ಮೂಲಕ ಯಾವುದೇ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಾಗ ಸಹಕಾರ ಹಾಗೂ ಪ್ರೋತ್ಸಾಹವನ್ನು ನೀಡುತ್ತಾರೆ ಎಂದರು.ಕಾರ್ಯಕ್ರಮದಲ್ಲಿ ಪೊಳಲಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ರಾಧಕೃಷ್ಣ ಭಟ್ ಅವರನ್ನು ಸನ್ಮಾನಿಸಲಾಯಿತು. ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ…
ಬಂಟ್ವಾಳ: ಅಡಿಕೆ ಬೆಳೆ ಹಾಗೂ ಬೆಳೆಗಾರರ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಸದನದಲ್ಲಿ ಹಗುರವಾಗಿ ಮಾತನಾಡಿದರೂ ಖಂಡನೆ ವ್ಯಕ್ತಪಡಿಸದೆ ಮೌನವಾಗಿರುವ ಕರಾವಳಿಯ ಶಾಸಕರು ರಾಜೀನಾಮೆ ನೀಡಿ ಮನೆಗೆ ಹೋಗುವುದು ಸೂಕ್ತ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಿಸಾನ್ ಕಾಂಗ್ರೆಸ್ ಸಮಿತಿಯಿಂದ ಶನಿವಾರ ಬಿ.ಸಿ.ರೋಡಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಭೂ ಮಸೂದೆ ಬಳಿಕ ಕರಾವಳಿಯಲ್ಲಿ ಅಡಿಕೆ ಬೆಳೆಗಾರರ ಸಂಖ್ಯೆ ಹೆಚ್ಚಾಗಿದ್ದು, ಅಡಿಕೆ ಬೆಳೆಗಾರರು ನಿರಂತರ ಒಂದಿಲ್ಲ ಒಂದು ಸಂಕಷ್ಟವನ್ನು ಎದುರಿಸುತ್ತಾ ಬಂದಿದ್ದಾರೆ. ಪ್ರತಿ ಸಂಕಷ್ಟದ ಸಮಯದಲ್ಲಿ ಕಾಂಗ್ರೆಸ್ ಸರಕಾರ ಅಡಿಕೆ ಬೆಳೆಗಾರರಿಗೆ ನೆರವು ನೀಡುತ್ತಾ ಬಂದಿದೆ. ಹೀಗಾಗಿ ಈ ಬೆಳೆ ಇಂದಿಗೂ ಉತ್ತಮ ರೀತಿಯಲ್ಲಿ ಮುಂದುವರಿದಿದೆ ಎಂದರು. ರಾಜ ವ್ಯಾಪಾರಿ ಆದರೆ ಪ್ರಜೆಗಳು ಬಿಕಾರಿ ಆಗಲಿದ್ದಾರೆ. ಅದನ್ನು ಇಂದು ನಾವು ದೇಶದಲ್ಲಿ ಕಾಣುತ್ತಿದ್ದೇವೆ. ಮಾರ್ವಾಡಿಗಳಿಗೆ ನೆರವಾಗಲು ದೇಶದ ರೈತರನ್ನು ಬಲಿ ಕೊಡುವ ಕೆಲಸವನ್ನು ಕೇಂದ್ರ, ರಾಜ್ಯದ ಬಿಜೆಪಿ ಸರಕಾರ ಮಾಡುತ್ತಿದೆ. ಇಡೀ…
ಬಂಟ್ವಾಳ: ತುಂಬೆ ಗ್ರಾ.ಪಂ ಬಂಟ್ವಾಳ ಇದರ ಆಶ್ರಯದಲ್ಲಿ ಪ್ರಕೃತಿ ಸಂಜೀವಿನಿ ಒಕ್ಕೂಟ ತುಂಬೆ ಇದರ ಸಹಕಾರದೊಂದಿಗೆ ಬಟ್ಟೆ ಕೈ ಚೀಲಗಳ ಬಿಡುಗಡೆ ಸಮಾರಂಭ ತುಂಬೆ ಗ್ರಾಮ ಪಂಚಾಯತಿ ಸಭಾಂಗಣಲ್ಲಿ ನಡೆಯಿತು. ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯ ರೆ.ಫಾ. ಸಿಲ್ವೆಸ್ಟರ್ ವಿನ್ಸೆಂಟ್ ಲೋಬೋ ಕಾರ್ಯಕ್ರಮ ಉದ್ಘಾಟಿಸಿದರು. ಅವರು ಮಾತನಾಡಿ ಇದೊಂದು ಅತ್ಯುತ್ತಮವಾದ ಕಾರ್ಯಕ್ರಮ. ನಾವು ನಮ್ಮ ದೈನಂದಿನ ಜೀವನದಲ್ಲಿ ಬಟ್ಟೆ ಕೈ ಚೀಲ ಉಪಯೋಗಿಸಬೇಕು ಎನ್ನುವ ದೃಢನಿರ್ಧಾರವನ್ನು ಪ್ರತಿಯೊಬ್ಬರು ಮಾಡಿಕೊಳ್ಳಬೇಕು ಎಂದು ತಿಳಿಸಿದರು. ಪ್ಲಾಸ್ಟಿಕ್ ಬಳಕೆಯಿಂದ ಪರಿಸರಕ್ಕೆ ಹಾನಿಯುಂಟಾಗಿದೆ. ಪಂಚಾಯತಿ ಹಮ್ಮಿಕೊಂಡ ಈ ಕಾರ್ಯಕ್ಕೆ ನಾವೆಲ್ಲರೂ ಸಹಕಾರ ನೀಡಬೇಕು ಎಂದರು. ಬಳಿಕ ಕೈ ಚೀಲಗಳನ್ನು ಬಿಡುಗಡೆಗೊಳಿಸಲಾಯಿತು. ತುಂಬೆ ಗ್ರಾಮ ಪಂಚಾಯತಿ ಅಧ್ಯಕ್ಷ ಪ್ರವೀಣ್ ಬಿ. ತುಂಬೆ ಪ್ರಾಸ್ತವಿಕವಾಗಿ ಮಾತನಾಡಿ ಪ್ಲಾಸ್ಟಿಕ್ ಬಳಕೆಯಿಂದ ನಮ್ಮ ಪರಿಸರ ಹಾಳಾಗಿದೆ. ಬಳಸಿದ ಪ್ಲಾಸ್ಟಿಕ್ ಚೀಲಗಳನ್ನು ರಸ್ತೆ ಬದಿ ಎಸೆದು ಹೋಗುತ್ತಿರುವುದನ್ನು ನಾವು ಕಾಣುತ್ತಿದ್ದೇವೆ. ಪ್ಲಾಸ್ಟಿಕ್ ಚೀಲ ನಮ್ಮ ಕೈಗೆ ಸಿಗಬಾರದು ಎನ್ನುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ,…
ಬಂಟ್ವಾಳ: ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ಅಮೃತ ಮಹೋತ್ಸವ ಪ್ರಯುಕ್ತ ನೂತನವಾಗಿ ನಿರ್ಮಾಣಗೊಂಡ ವೀರ ಸಾವರ್ಕರ್ ವಾಣಿಜ್ಯ ಸಂಕೀರ್ಣ, ನೇತಾಜಿ ಬಹು ಉಪಯೋಗಿ ಸೇವಾ ಕೇಂದ್ರ, ಬೆಳ್ಳಿಪ್ಪಾಡಿ ಕೃಷ್ಣ ರೈ ರೈತ ಸಭಾಂಗಣ, ನವೀಕೃತ ಕಚೇರಿಯ ಲೋಕಾರ್ಪಣೆ ಕಾರ್ಯಕ್ರಮ ಶನಿವಾರ ನಡೆಯಿತು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಅವರು ಅಮೃತ ಮಹೋತ್ಸವ ಹಾಗೂ ವೀರ ಸಾವರ್ಕರ್ ವಾಣಿಜ್ಯ ಸಂಕೀರ್ಣವನ್ನು ಉದ್ಘಾಟಿಸಿ ಮಾತನಾಡಿ, ದೇಶ ಭಕ್ತ ಮಹಾಪುರುಷರಾದ ವೀರ ಸಾವರ್ಕರ್ ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸ್ಮರಣೆ ಮಾಡಿದ ಸಂಘದ ಕಾರ್ಯ ಪ್ರಶಂಸನೀಯ ಎಂದು ಹೇಳಿದರು.ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು ಅವರು ನೇತಾಜಿ ಸುಭಾಷ್ ಚಂದ್ರ ಬೋಸ್ ಬಹುಪಯೋಗಿ ಸೇವಾ ಕೇಂದ್ರವನ್ನು ಉದ್ಘಾಟಸಿ ಮಾತನಾಡಿ,ಪ್ರಧಾನಿ ಮೋದಿ ಅವರು ರೈತ ಪರ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದಾರೆ ಎಂದ ಅವರು ಅಡಿಕೆ ಬೆಳೆಯ ಬಗ್ಗೆ ಗೃಹಸಚಿವರು ಸ್ಪಷ್ಟ ಸಲಹೆ ನೀಡಿದ್ದು, ಕರಾವಳಿಯ ಅಡಿಕೆ ಬೆಳೆಗಾರರು ಆತಂಕ…
ಬಂಟ್ವಾಳ: ಇತಿಹಾಸ ಪ್ರಸಿದ್ಧ ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ ನಂದಾವರ ದೇವಸ್ಥಾನದ ಸಭಾಂಗಣದಲ್ಲಿ ಗುರುವಾರ ಸಂಜೆ ನಡೆಯಿತು.ಸಜೀಪ ಮಾಗಣೆ ತಂತ್ರಿ. ಎಂ. ಸುಬ್ರಹ್ಮಣ್ಯ ಭಟ್ ಮಾತನಾಡಿ ದೇವರ ಸೇವೆ ಮಾಡುವ ಅವಕಾಶ ನಮಗೆ ಒದಗಿ ಬಂದಿದೆ. ಈ ಸಂದರ್ಭದಲ್ಲಿ ನಾವೆಲ್ಲರೂ ಜೊತೆಗೂಡಿ ಈ ಪುಣ್ಯ ಕಾರ್ಯದಲ್ಲಿ ಭಾಗಿಗಳಗೋಣ ಎಂದು ತಿಳಿಸಿದರು.ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಜಿ.ಶೆಟ್ಟಿ ದಲಂದಿಲ, ಕಾರ್ಯಧ್ಯಕ್ಷ ಕೆ. ವಿಶ್ವನಾಥ ಆಳ್ವ ಕಾಂತಾಡಿಗುತ್ತು, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಅರವಿಂದ ಭಟ್ ಪದ್ಯಾಣ,ಪ್ರಧಾನ ಅರ್ಚಕ ವೇ.ಮೂ.ಮಹೇಶ್ ಭಟ್, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ರಾಮ್ ಪ್ರಸಾದ್ ಪೂಂಜ ಬರಂಗರೆ, ದೇವಾಡಿಗ ಸಮಾಜ ಶ್ರೀ ನಂದಾವರ ದೇವಸ್ಥಾನ ರಥ ಸಮರ್ಪಣ ಸಮಿತಿ ಅಧ್ಯಕ್ಷ ರಾಮದಾಸ್ ಬಂಟ್ವಾಳ, ಸ್ವಾಗತ ಸಮಿತಿ ಸದಸ್ಯ ಮುಳ್ಳುಂಜ ವೆಂಕಟೇಶ್ವರ ಭಟ್ಟ ಹಾಗೂ ವಿವಿಧ ಉಪ ಸಮಿತಿಯ ಸಂಚಾಲಕರು, ಸದಸ್ಯರು ಉಪಸ್ಥಿತರಿದ್ದರು.ಅಭಿವೃದ್ಧಿ ಸಮಿತಿ ಸದಸ್ಯ ದಾಮೋದರ ಬಿ.ಎಂ. ಕಾರ್ಯಕ್ರಮ ನಿರೂಪಿಸಿದರು. ಬ್ರಹ್ಮಕಲಶೋತ್ಸವ ಸಮಿತಿ…
ಬಂಟ್ವಾಳ: ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಾಲೆತ್ತೂರು ವಲಯ – ಮಂಚಿ ಒಕ್ಕೂಟದ ವತಿಯಿಂದ ಮಂಗಳವಾರ ಸರಕಾರಿ ಪ್ರೌಢಶಾಲೆ ಮಂಚಿ – ಕೊಳ್ನಾಡು ಇಲ್ಲಿ ಶಾಲಾವರಣವನ್ನು ಸ್ವಚ್ಛತೆಗೊಳಿಸುವ ಕಾರ್ಯ ನಡೆಸಲಾಯಿತು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ದಿವಾಕರ ನಾಯಕ್ ಕುಂಟೂರು, ಒಕ್ಕೂಟದ ಸೇವಾ ನಿರತೆ ಚಂಚಲಾಕ್ಷಿ, ಶಾಲಾ ಪ್ರಭಾಕರ ಮುಖ್ಯಶಿಕ್ಷಕಿ ವಿಜಯಲಕ್ಷ್ಮಿ ಕಟೀಲು ಉಪಸ್ಥಿತರಿದ್ದರು. 50 ಜನ ಒಕ್ಕೂಟದ ಸದಸ್ಯರು ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾದರು.








