Author: admin
ಬಂಟ್ವಾಳ: ರಾರಾಸಂ ಫೌಂಡೇಶನ್ ಬಂಟ್ವಾಳ ಇದರ ವತಿಯಿಂದ 15 ನೇ ವರ್ಷದ ಸಾಂಸ್ಕೃತಿಕ ಕಲರವ ರಾರಾಸಂಭ್ರಮ ಡಿ.25 ರಂದು ಗುರುವಾರ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಮಾಜಿ ಸಚಿವ ಬಿ. ರಮಾನಾಥ ರೈ ಕಾರ್ಯಕ್ರಮ ಉದ್ಘಾಟಿಸುವರು, ಅತಿಥಿಗಳಾಗಿ ಲೋಕಾಯುಕ್ತ ನ್ಯಾಯವಾದಿ ರವೀಂದ್ರ ಮುನ್ನಿಪ್ಪಾಡಿ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವಪ್ಪ ಕುಲಾಲ್ ಪಂಜಿಕಲ್ಲು, ನಿವೃತ್ತ ಮುಖ್ಯ ಶಿಕ್ಷಕ ಸಂಜೀವ ಎಚ್. ಪೆರಾಜೆ, ಯುವವಾಹಿನಿ ಮಾಜಿ ಅಧ್ಯಕ್ಷ ರಾಜೇಶ್ ಸುವರ್ಣ, ಜೆಸಿಐ ಮಡಂತ್ಯಾರಿನ ಅಧ್ಯಕ್ಷೆ ಸಾಯಿಸುಮ ಭಾಗವಹಿಸುವರು. ಸಂಜೆ 4 ಕ್ಕೆ ಸಮಾರೋಪ ನಡೆಯಲಿದ್ದು ಬಂ.ತಾ. ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಆರ್. ನಾಯಕ್ ಅಧ್ಯಕ್ಷತೆ ವಹಿಸುವರು, ಅತಿಥಿಗಳಾಗಿ ಕೆನರಾ ಬ್ಯಾಂಕಿನ ಸೀನಿಯರ್ ಮ್ಯಾನೇಜರ್ ಪುರಂದರ ಎ., ಲಯನ್ಸ್ ಪೂರ್ವಾಧ್ಯಕ್ಷ ಜಯಂತ ಶೆಟ್ಟಿ, ಬಂಟ್ವಾಳ ಲಯನ್ಸ್ ಕ್ಲಬ್ ಅಧ್ಯಕ್ಷ ಎಂ. ರೋಹಿತಾಶ್ವ, ಸಿವಿಲ್ ಗುತ್ತಿಗೆದಾರ ಗಣೇಶ್ ಕಾಮಾಜೆ, ಸುಧೀರ್ ಕುಲಾಲ್, ಜೆಸಿಐ ಬಂಟ್ವಾಳ ದ ಅಧ್ಯಕ್ಷ ಕಿಶೋರ್…
ಬಂಟ್ವಾಳ: ಪುದು,ಕೊಡ್ಮಾಣ್,ಕಳ್ಳಿಗೆ, ತುಂಬೆ, ಅರ್ಕುಳ ಮತ್ತು ಮೇರಮಜಲು ಗ್ರಾಮಗಳನ್ನು ಕೇಂದ್ರವಾಗಿಟ್ಟುಕೊಂಡು ಕಳೆದ 48ದಿನಗಳಿಂದ ಪ್ರತಿ ಮನೆ ಮನಗಳಲ್ಲಿ ಸಾಮೂಹಿಕ ರಾಮ ಮಂತ್ರ ಪಠನದೊಂದಿಗೆ ಆರಂಭಗೊಂಡ ಶ್ರೀ ರಾಮ ನಾಮ ತಾರಕ ಜಪ ಯಜ್ಞ ಭಾನುವಾರ ವೇದಮೂರ್ತಿ ಕಶೆಕೊಡಿ ಸೂರ್ಯ ನಾರಾಯಣ ಭಟ್ ನೇತೃತ್ವದಲ್ಲಿ ಯಜ್ಞ ಆರಂಭಗೊಂಡು ಆಗಮಿಸಿದ ಎಲ್ಲಾ ರಾಮ ಭಕ್ತರು 10 ಕುಂಡಗಳಲ್ಲಿ ಕುಟುಂಬ ಸಮೇತರಾಗಿ ಭಕ್ತಿ ಭಾವದಿಂದ ಹವಿಸ್ಸು ಅರ್ಪಿಸುವ ಮೂಲಕ ಪೂರ್ಣಾಹುತಿಗೊಂಡು ಮಂಗಳಾರತಿಯೊಂದಿಗೆ ಯಾಗ ಸಂಪನ್ನಗೊಂಡಿತು. ಬೆಳಿಗ್ಗೆ 6ಗಂಟೆಗೆ ಯಾಗ ಸ್ಥಳದಲ್ಲಿ ಗಣಪತಿ ಹೋಮ ನಡೆದು ಬಳಿಕ ಧ್ವಜಾರೋಹಣ ಹಾಗೂ ಗೋ ಪೂಜೆಯನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ ಪ್ರಭಾಕರ ಭಟ್ ಕಲ್ಲಡ್ಕ ನೆರವೇರಿಸಿದರು. ಬಳಿಕ ನಡೆದ ಸುಧರ್ಮ ಸಭೆಯಲ್ಲಿ ಅಖಿಲ ಭಾರತ ಗ್ರಾಮ ವಿಕಾಸ ಟೋಳಿ ಸದಸ್ಯ ರಮೇಶ್ ಹೊಸು ತಮ್ಮ ದಿಕ್ಸೂಚಿ ಭಾಷಣ ಮಾಡಿ, ಹೋಮ, ಹವನ,ಪೂಜೆಯನ್ನು ನಮ್ಮಸಮಾಜದಲ್ಲಿ ವ್ಯಕ್ತಿಗತ ಸಾಧನೆಗಾಗಿ ಮಾಡುವ ಸಂಪ್ರದಾಯವಿದೆ, ಆದರೆ ಇಲ್ಲಿ ರಾಮ ತಾರಕ ಯಜ್ಞದ…
ಬಂಟ್ವಾಳ: ಕೊಳ್ನಾಡು ಗ್ರಾಮದ ಸೆರ್ಕಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಗುರುವಾರ ನಡೆಯಿತು. ಮಧ್ಯಾಹ್ನ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಜಿ.ಪಂ.ಮಾಜಿ ಸದಸ್ಯ ಎಂ.ಎಸ್. ಮಹಮ್ಮದ್ ಉದ್ಘಾಟಿಸಿದರು. ಸರ್ಕಾರಿ ಶಾಲೆಗಳಿಗೆ ಸರಕಾರದಿಂದ ವಿಶೇಷ ಸವಲತ್ತುಗಳು ದೊರೆಯುತ್ತಿದ್ದು ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ಸರಕಾರಿ ಶಾಲೆಗೆ ಸೇರಿಸ ಬೇಕೆಂದರು. ಕೊಳ್ನಾಡು ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಅಸ್ಮಾ ಹಸೈನಾರ್ ಅಧ್ಯಕ್ಷತೆ ವಹಿಸಿದ್ದರು. ಶಾಲೆಯಿಂದ ವರ್ಗಾವಣೆಗೊಂಡ ಶಿಕ್ಷಕಿ ಕೀರ್ತಿ. ಕೆ ಮತ್ತು ನಿವೃತ್ತಿ ಹೊಂದಿದ ಅಕ್ಷರ ದಾಸೋಹದ ಮುಖ್ಯ ಅಡುಗೆಯವರಾದ ಜಾನಕಿಯವರನ್ನು ಸನ್ಮಾನಿಸಲಾಯಿತು. ಕಲಿಕೆಯಲ್ಲಿ ಮತ್ತು ಆಟೋಟ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ, ಆಟೋಟ ಸ್ಪರ್ಧೆಯಲ್ಲಿ ವಿಜೇತರಾದ ಪೋಷಕರಿಗೆ ಮತ್ತು ಹಿರಿಯ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಪಂಚಾಯತಿ ಅಧ್ಯಕ್ಷ ಉಪಾಧ್ಯಕ್ಷರ ಒಕ್ಕೂಟದ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು, ಪಂಚಾಯತಿ ಸದಸ್ಯರಾದ ನೆಬಿಸ, ಜಯಂತಿ, ಅಬ್ದುಲ್ ರಝಾಕ್ ಸಿ.ಎಚ್., ಪಿಡಬ್ಲ್ಯುಡಿ ಗುತ್ತಿಗೆದಾರ ಬಾಲಕೃಷ್ಣ ಸೆರ್ಕಳ, ಅಶ್ರಫ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್…
ಬಂಟ್ವಾಳ: ಮಂಗಳೂರಿನ ಶಕ್ತಿನಗರದ ನಾಲ್ಯಪದವು ಪಿ.ಎಂ.ಶ್ರೀ. ಕುವೆಂಪು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕೆ ಸ್ಪರ್ಧೆಗಳ ಆಶುಭಾಷಣ ಸ್ಪರ್ಧೆಯಲ್ಲಿ ಸಿದ್ದಕಟ್ಟೆಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಹಶಿಕ್ಷಕ ಮಹೇಶ್ ಕುಮಾರ್ ವಿ ಕರ್ಕೇರ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ತರಬೇತಿ ನೀಡಿದ ವಿದ್ಯಾರ್ಥಿನಿ ಕಳೆದ ಮೂರು ವರ್ಷಗಳಲ್ಲಿ ಸತತ 4 ಬಾರಿ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿರುತ್ತಾರೆ.
ಬಂಟ್ವಾಳ: ಇಲ್ಲಿನ ಸರಕಾರಿ ಪಾಲಿಟೆಕ್ನಿಕ್ನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಸಜೀಪಮೂಡ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಡಿ.18ರಿಂದ ಡಿ.24ರವರೆಗೆ ನಡೆಯಲಿದ್ದು ಗುರುವಾರ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಜಿಪಿಟಿ ಪ್ರಾಂಶುಪಾಲ ನರಸಿಂಹ ಭಟ್ ಎಚ್. ಅಧ್ಯಕ್ಷತೆ ವಹಿಸಿದ್ದರು. ಸಜಿಪ ಮೂಡ ಗ್ರಾಮ ಪಂಚಾಯತಿ ಅಧ್ಯಕ್ಷೆ ಶೋಭಾ ಶೆಟ್ಟಿ ಶಿಬಿರ ಉದ್ಘಾಟಿಸಿ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳನ್ನು ಸಮಾಜದಲ್ಲಿ ಉತ್ತಮ ಸ್ಥಾನಕ್ಕೆ ತಲುಪಿಸುವ ದಿಶೆಯಲ್ಲಿ ನಿರಂತರವಾಗಿ ಶ್ರಮಿಸುತ್ತಿದೆ, ಇಂತಹ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸ ಸಾಧ್ಯವಾಗುತ್ತದೆ ಹಾಗೂ ಭವಿಷ್ಯದಲ್ಲಿ ಉತ್ತಮ ನಾಗರಿಕರಾಗಿ ರೂಪುಗೊಳ್ಳಲು ನೆರವಾಗುತ್ತದೆ ಎಂದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿ ಸದಸ್ಯ ವಿಶ್ವನಾಥ ಬೆಲ್ಚಡ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜಯ ಪ್ರಕಾಶ್ ಪೆರ್ವ, ಪದವಿಪೂರ್ವ ವಿಭಾಗದ ಪ್ರಾಂಶುಪಾಲೆ ಡಾ. ಜೈರಾಬಿ, ಪ್ರೌಢಶಾಲೆಯ ಉಪಾಪ್ರಾಂಶುಪಾಲೆ ಜ್ಯೋತಿ ಕುಮಾರಿ, ಜಿಪಿಟಿ ಯಾಂತ್ರಿಕ ವಿಭಾಗದ ವಿಭಾಗಾಧಿಕಾರಿ ಭಾಗವನ್ ಪ್ರಸಾದ್, ಕಾಮಗಾರಿ ವಿಭಾಗದ ವಿಭಾಗಾಧಿಕಾರಿ ಮೋಹನ್ ರಾಜ್ ಜಿ.ಎಸ್., ಕಂಪ್ಯೂಟರ್…
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಇದರ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಸರಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಟ್ಯೂಷನ್ ತರಗತಿ ಆರಂಭಿಸಲಾಯಿತು. ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕ ಭಾಸ್ಕರ್ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಪ್ರಾಸ್ತವಿಕವಾಗಿ ಮಾತನಾಡಿದರು. ಜನಜಾಗೃತಿ ವೇದಿಕೆ ವಲಯಾಧ್ಯಕ್ಷ ಪುರುಷೋತ್ತಮ್ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ವಿನೋಲ ಸಿಲಿಯ ಪಿಂಟೋ,. ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಧನಂಜಯ ಶೆಟ್ಟಿ, ಗಿರಿಧರ್ ನಾಯಕ್, ಒಕ್ಕೂಟ ಅಧ್ಯಕ್ಷ ಗಿರೀಶ್, ಶಿಕ್ಷಕರಾದ ಆದಮ್. ಜಾನವಿಕಾಸ ಸಮನ್ವಯಧಿಕಾರಿ ಸವಿತಾ, ಸೇವಾಪ್ರತಿನಿಧಿ ಮೋಹಿನಿ, ಶುಭ, ಟ್ಯೂಷನ್ ಶಿಕ್ಷಕಿ ಅಶ್ವಿತ ಹಾಗೂ ಶಾಲೆಯ ಶಿಕ್ಷಕರು, ಒಕ್ಕೂಟ ಸದಸ್ಯರು, ಮತ್ತು ಮಕ್ಕಳು ಉಪಸ್ಥಿತರಿದ್ದರು.
ಬಂಟ್ವಾಳ: ಕೂಡಿಬೈಲು ಬಸದಿಯಲ್ಲಿ ನಡೆದ. ಜೈನ್ಮಿಲನ್ ಐದನೇ ಮಾಸಿಕ ಸಭೆಯಲ್ಲಿ ಜೈನ್ ಮಿಲನ್ ಬಂಟ್ವಾಳ ಮತ್ತು ಕೂಡಿಬೈಲು ಬಸದಿ ಹಾಗೂ ಪಾಣಂತಬೈಲು ಬಸದಿಯ ಆಡಳಿತ ಸಮಿತಿಯ ಸಹಯೋಗದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು ಜೈನ್ಮಿಲನ್ ಬಂಟ್ವಾಳದ ಅಧ್ಯಕ್ಷ ರಾಜೇಂದ್ರ ಜೈನ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೂಡಿಬೈಲು ಬಸದಿ ಆಡಳಿತ ಸಮಿತಿಯ ಗೌರವಾಧ್ಯಕ್ಷ, ಮಾಜಿ ಸಚಿವ ಕೆ. ಅಭಯ ಚಂದ್ರ ಜೈನ್, ಎಕ್ಸೆಲ್ ಪದವಿಪೂರ್ವ ಕಾಲೇಜಿನ ನಿರ್ದೇಶಕ ಸುಮಂತ್ ಕುಮಾರ್ ಜೈನ್, ಎಸ್ಡಿಎಂ ಕಾಲೇಜಿನ ನಿವೃತ್ತ ಪ್ರಾಧ್ಯಪಕ ಎ. ಅರ್ಕಕೀರ್ತಿ ಹೆಗ್ಡೆ ಭಾಗವಹಿಸಿದ್ದರು. ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಸರಣ ಸಂಸ್ಥೆಯ ಅಧ್ಯಕ್ಷೆ ಲಾವಣ್ಯ ಬಲ್ಲಾಳ್, ನಿವೃತ್ತ ಉಪಪ್ರಾಂಶುಪಾಲ ಉದಯಕುಮಾರ್ ಬಿ.ಮಧ್ವ, ನಿವೃತ್ತ ಶಿಕ್ಷಕಿ ರಾಜಮ್ಮ ಪದ್ಮಶೇಖರ್, ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಆದಿರಾಜ್ ಕೆ. ಜೈನ್, ನಿವೃತ್ತ ಅಂಚೆ ಪಾಲಕ ಬಾಲಚಂದ್ರ ಜೈನ್, ಎಸ್ಡಿಎಂ ದಂತ ಕಾಲೇಜಿನ ನಿವೃತ್ತ ಮೇಲ್ವಿಚಾರಕ ಯುವರಾಜ್ ಜೈನ್ ಅವರನ್ನು ಸನ್ಮಾನಿಸಲಾಯಿತು. ಭಾರತೀಯ…
ಬಂಟ್ವಾಳ: ಸರಕಾರಿ ಪದವಿ ಪೂರ್ವ ಕಾಲೇಜು ವಾಮದಪದವು ಇಲ್ಲಿನ ಪ್ರೌಢಶಾಲಾ ವಿಭಾಗದ ಕೊಠಡಿಯೊಂದು ಆರ್ಟ್ ಗ್ಯಾಲರಿಯಾಗಿ ಪರಿವರ್ತನೆಯಾಗಿದೆ. ಈ ಕೊಠಡಿಯೊಳಗೆ ಪ್ರವೇಶೀಸುತ್ತಿದ್ದಂತೆಯೇ ನೂರಾರು ಬಣ್ಣದ ಚಿತ್ರಗಳು, ವ್ಯಕ್ತಿ ಚಿತ್ರಗಳು, ಗಣ್ಯರ ಮೂರ್ತಿಗಳು, ಮುಖವಾಡ, ಗೂಡುದೀಪ ಸಹಿತ ವಿವಿಧ ಬಗೆಯ ಕಲಾಕೃತಿಗಳು ನಮ್ಮ ಗಮನ ಸೆಳೆಯುತ್ತದೆ. ಕಳೆದ 23 ವರ್ಷಗಳಿಂದ ಈ ಶಾಲೆಯ ವಿದ್ಯಾರ್ಥಿಗಳು ರಚಿಸಿದ ನೂರಾರು ಚಿತ್ರಕಲೆಗಳು ಇಲ್ಲಿವೆ. ಶಾಲೆಯ ಚಿತ್ರಕಲಾ ಶಿಕ್ಷಕ ಮುರಳೀಕೃಷ್ಣ ರಾವ್ ಕೆ.ಇದರ ಹಿಂದಿರುವ ಪ್ರೇರಕ ಶಕ್ತಿ. ಮುರಳಿಕೃಷ್ಣ ರಾವ್ ಅವರು 23 ವರ್ಷಗಳಿಂದ ವಾಮದಪದವು ಸರಕಾರಿ ಪ್ರೌಢಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿದ್ಯಾರ್ಥಿಗಳಲ್ಲಿ ಚಿತ್ರಕಲೆಯ ಬಗ್ಗೆ ಆಸಕ್ತಿ ಮೂಡಿಸಿ ಅವರಿಗೆ ಮಾರ್ಗದರ್ಶನ ಮಾಡಿದ ಪರಿಣಾಮ ಇಂದು ಗ್ರಾಮೀಣ ಭಾಗದ ಅನೇಕ ವಿದ್ಯಾರ್ಥಿಗಳು ಕಲಾಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗಿದೆ. ಗುರುಗಳ ಮಾರ್ಗದರ್ಶನದಲ್ಲಿ ಶಾಲಾ ವಿದ್ಯಾರ್ಥಿಗಳು ಚಿತ್ರಿಸಿದ ಒಂದೊಂದು ಚಿತ್ರಗಳು ಪರಿಣಿತ ಕಲಾವಿದರನ್ನು ಮೀರಿಸುವಂತಿದೆ. ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ, ನಾಲ್ವಡಿ ಕೃಷ್ಣರಾಜ ಒಡೆಯರ್, ರತನ್ ಟಾಟ ಮತ್ತಿತರ…
ಬಂಟ್ವಾಳ: ತುಳುನಾಡಿನಲ್ಲಿ ದಿನ ಬಳಕೆಯ ವಸ್ತುಗಳಾಗಿ ಜನಮಾನಸದಲ್ಲಿ ಬೆರೆತು ಪ್ರಸುತ ಪ್ಲಾಸ್ಟಿಕ್, ಸ್ಟೀಲ್, ವಸ್ತುಗಳ ಭರಾಟೆಯಿಂದಾಗಿ ತೆರೆಮರೆಗೆ ಸರಿದಿರುವ ಹಿರಿಯರ ಕಾಲದ ಹಳೆಯ ವಸ್ತುಗಳ ಪ್ರದರ್ಶನವನ್ನು ಬಂಟ್ವಾಳ ತಾಲೂಕಿನ ಫರ್ಲಾ ವೆಲಂಕಣಿ ಆರೋಗ್ಯಮಾತಾ ಚರ್ಚಿನಲ್ಲಿ ಹಮ್ಮಿಕೊಳ್ಳಾಗಿದ್ದು, ತುಳುನಾಡಿನ ಜನರ ಬದುಕನ್ನು ಅನಾವರಣಗೊಳಿಸಿತು. ವಸ್ತು ಪ್ರದರ್ಶನವನ್ನು ವೀಕ್ಷಿಸಿದ ಯುವ ಸಮುದಾಯಕ್ಕೆ ತಮ್ಮ ಹಿರಿಯರ ಜೀವನವನ್ನು ನೆನೆಪಿಸಿದರೆ, ಹಿರಿಯರಿಗೆ ತಮ್ಮ ಬಾಲ್ಯ ದಿನಗಳನ್ನು ಮೆಲುಕು ಹಾಕುವಂತೆ ಮಾಡಿತು. ಫರ್ಲಾ ವೆಲಂಕಣಿ ಆರೋಗ್ಯಮಾತಾ ದೇವಾಲಯದ ವತಿಯಿಂದ ಚರ್ಚಿನ 9 ವಾರ್ಡ್ ಗಳಲ್ಲಿರುವ ಸದಸ್ಯರಿಗೆ ನಮ್ಮ ಹಿರಿಯರು ದಿನೋಪಯೋಗಿ ವಸ್ತುಗಳಾಗಿ ಬಳಸಿದ ಪರಿಕರಗಳನ್ನು ಸಂಗ್ರಹಿಸಿ, ಚರ್ಚಿನ ಸಭಾಂಗಣದಲ್ಲಿ ಪ್ರರ್ದಶನಕ್ಕಿಡುವ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. 9 ವಾರ್ಡ್ ಗಳ ಮನೆಯಿಂದ ನೂರಾರು ಹಳೆಯ ವಸ್ತುಗಳು ಸಂಗ್ರಹಗೊಂಡವು. ಅವುಗಳನ್ನು ಚರ್ಚ್ ಸಭಾಂಗಣದಲ್ಲಿ ಸುಂದರವಾಗಿ ಜೋಡಿಸಿಟ್ಟು, ಪ್ರತೀ ವಸ್ತುಗಳ ಹೆಸರು, ಅದರ ಉಪಯೋಗದ ಬಗ್ಗೆ ಮಾಹಿತಿಯನ್ನು ನೀಡಲಾಯಿತು. ಮಣ್ಣಿನಿಂದ ತಯಾರಿಸಿದ ಹಾಗೂ ಹಿತ್ತಾಳೆಯ ಅಡಿಗೆ ಮನೆಯ ಪರಿಕರಗಳು, ಕೃಷಿ ಬಳಕೆಯ ಸಾಮಾಗ್ರಿಗಳು, ವೃತ್ತಿ…
ಬಂಟ್ವಾಳ: ರಾಜಕೀಯ ರಹಿತವಾದ ಸಹಕಾರಿ ಕ್ಷೇತ್ರ ದ.ಕ.ದಲ್ಲಿದೆ. ರಾಜಕೀಯ ರಹಿತವಾಗಿ ಜನರ ಸೇವೆ ಮಾಡಲು ಸಹಕಾರಿ ಕ್ಷೇತ್ರದಲ್ಲಿ ಸಾಧ್ಯವಿದ್ದು ಎಲ್ಲರೂ ಜೊತೆಯಾಗಿ ಕೆಲಸ ಮಾಡೋಣವೆಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್ . ರಾಜೇಂದ್ರ ಕುಮಾರ್ ಹೇಳಿದರು. ಸಹಕಾರ ರತ್ನ ಟಿ.ಬಿ. ರಾಜರಾಂ ಭಟ್ ಅಭಿನಂದನಾ ಸಮಿತಿ ವತಿಯಿಂದ ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ಶನಿವಾರ ನಡೆದ ಟಿ.ಬಿ. ರಾಜರಾಮ ಭಟ್ ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಕ್ಷಾತೀತವಾಗಿ ಸಹಕಾರಿ ರತ್ನ ಪ್ರಶಸ್ತಿ ನೀಡಿದರೆ ಅದಕ್ಕೆ ಬೆಲೆ ಬರುತ್ತದೆ. ಈ ಭಾರಿ 10 ಮಂದಿಗೆ ಜಿಲ್ಲೆಯಲ್ಲಿ ಸಹಕಾರ ರತ್ನ ಪ್ರಶಸ್ತಿ ಬಂದಿದೆ. ಇವರಿಗೆ ಎಲ್ಲಾ ಸಹಕಾರಿಗಳು ಗೌರವಿಸಿದಾಗ ಪ್ರಶಸ್ತಿಯ ಗೌರವವೂ ಹೆಚ್ಚುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಮಾತನಾಡಿ ದ.ಕ. ಜಿಲ್ಲೆಯಲ್ಲಿ ಬ್ಯಾಂಕಿಂಗ್ ವ್ಯವಸ್ಥೆ ಜನರಿಗೆ ರಕ್ತಗತವಾಗಿದೆ. ದೇಶಕ್ಕೆ 4 ರಾಷ್ಟ್ರೀಕೃತ ಬ್ಯಾಂಕ್ ಗಳನ್ನು ನೀಡಿದ ಹೆಗ್ಗಳಿಕೆ ದ.ಕ.ಜಿಲ್ಲೆಗಿದೆ ಎಂದರು. ಮಾಜಿ…








