Author: admin

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬಂಟ್ವಾಳ ಇದರ ಯಶಸ್ವಿ ಜ್ಞಾನ ವಿಕಾಸ ಕೇಂದ್ರದ ವತಿಯಿಂದ ಪೌಷ್ಟಿಕ ಆಹಾರ ಕಾರ್ಯಕ್ರಮ ಹಳೇಗೇಟು ನಿತ್ಯಾನಂದ ಭಜನಾ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನ ಜಾಗ್ರತಿ ವೇದಿಕೆ ಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಉದ್ಘಾಟಿಸಿದರು. ಜ್ಞಾನ ವಿಕಾಸ ಕಾರ್ಯಕ್ರಮದಿಂದ ಅನೇಕ ಮಂದಿ ಮಹಿಳೆಯರು ಸ್ವಾವಲಂಬಿಯಾಗಿ ಜೀವನ ಮಾಡುತಿದ್ದಾರೆ. ಹೇಮಾವತಿ ಹೆಗ್ಗಡೆಯವರ ಜ್ಞಾನ ವಿಕಾಸ ಕಾರ್ಯಕ್ರಮದಿಂದ ಇಂದು ಮಹಿಳೆ ಎಲ್ಲಾ ಕ್ಷೇತ್ರದಲ್ಲಿ ಗುರುತಿಸುವಂತೆ ಆಗಿದೆ ಎಂದರು. ಕಾರ್ಯಕ್ರಮದಲ್ಲಿ ಮಹಿಳಾ ಸಾಂತ್ವನ ಕೇಂದ್ರದ ಆಪ್ತ ಸಮಾಲೋಚಕಿ ವಿದ್ಯಾ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು. ತಾಲೂಕು ಯೋಜನಧಿಕಾರಿ ಜಯಾನಂದ, ಜನಜಾಗೃತಿ ಸದಸ್ಯರಾದ ಸದಾನಂದ ನಾವೂರು, ಪ್ರವೀಣ್. ಕಾಡಬೆಟ್ಟು, ವಲಯ ಮೇಲ್ವಿಚಾರಕ ರಾಜೇಶ್, ಜ್ಞಾನ ವಿಕಾಸ ಸಮನ್ವಯಧಿಕಾರಿ ಸವಿತಾ, ಸೇವಾಪ್ರತಿನಿಧಿ ವಿಜಯ, ಹಾಗೂ ವಲಯದ ಸೇವಾಪ್ರತಿನಿಧಿಗಳು. ಜ್ಞಾನ ವಿಕಾಸ ಸದಸ್ಯರು ಉಪಸ್ಥಿತರಿದ್ದರು. Advertisement

Read More

ಬಂಟ್ವಾಳ ತಾಲೂಕಿನ ಗೋವಿಂತೋಟದಲ್ಲಿರುವ ರಾಧ ಸುರಭಿ ಗೋಮಂದಿರದಲ್ಲಿ 12 ಬಗೆಯ ಗಿಡಮೂಲಿಕೆಗಳು , ಗೋವಿನ ಹಾಲಿನ ಅರ್ಕ ಮತ್ತಿತರ ಉತ್ಪನ್ನಗಳನ್ನು ಸೇರಿಸಿ ತಯಾರಿಸಿದ “ಕುಕುಬಾ ” ಹೆಸರಿನ ಆರೋಗ್ಯ ವರ್ಧಿತ ತಂಪು ಪಾನಿಯವನ್ನು ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿ ಸನ್ನಿಧಿಯಲ್ಲಿ ಮಾರುಕಟ್ಟೆಗೆ ಬಿಡುಗಡೆಗೊಳಿಸಲಾಯಿತು. ಶ್ರೀ ಸಿದ್ಧರೂಡ ಮಿಷನ್ ನ ಅಧ್ಯಕ್ಷ ಡಾ. ಆರೂಢ ಭಾರತೀ ಸ್ವಾಮೀಜಿ ತಂಪು ಪಾನೀಯ ಬಿಡುಗಡೆಗೊಳಿಸಿದದರು. ಸುಳ್ಯ ಮರ್ಕಂಜದ ಅನ್ನಪೂರ್ಣೇಶ್ವರೀ ಕ್ಷೇತ್ರ ಯೋಗೀಶ್ವರ ಸಿದ್ಧ ಮಠದ ಧರ್ಮದರ್ಶಿ ರಾಜೇಶ್ ನಾಥ್ ಜಿ ಮಾತನಾಡಿ ಗೋಶಾಲೆಗಳನ್ನು ನಿರ್ಮಾಣ ಮಾಡಿ ಆ ಮೂಲಕ ಗೋವುಗಳನ್ನು ಸಂರಕ್ಷಣೆ ಮಾಡಿ, ದೇಶಾದ್ಯಂತ ಗೋವಿನ ಬಗ್ಗೆ ಜಾಗೃತಿ ಮೂಡಿಸುತ್ತಿರುವ ರಾಧ ಸುರಭೀ ಗೋ ಮಂದಿರದ ವತಿಯಿಂದ ಜನರ ಆರೋಗ್ಯ ವರ್ಧನೆ ಮಾಡುವ ಪಾನೀಯ ಬಿಡುಗಡೆಗೊಂಡಿರುವುದು ಅಭಿನಂದನೀಯ ಎಂದರು. ರಾಧ ಸುರಭಿ ಗೋ ಮಂದಿರದ ಅಧ್ಯಕ್ಷ ಭಕ್ತಿ ಭುಷಣ್ ಜಿ ಮಾತನಾಡಿ ಇಂದು ಮಾರುಕಟ್ಟೆಯಲ್ಲಿರುವ ರಾಸಾಯನಿಕ ಮಿಶ್ರಿತ ಪಾನಿಯಗಳನ್ನು ಸೇವಿಸಿ ರೋಗ ರುಜಿನವನ್ನು ಆಹ್ವಾನಿಸಿಕೊಳ್ಳುತ್ತಾರೆ. ಅದಕ್ಕೆ…

Read More

ಬಂಟ್ವಾಳ: ಕಳೆದ 35 ವರ್ಷಗಳಿಂದ ವಿವಿಧ ಕ್ಷೇತ್ರಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡಿದ್ದ ಸೃಜನಶೀಲ ವ್ಯಕ್ತಿತ್ವದ ಪ್ರತಿಭಾವಂತ ಗೋಪಾಲ ಅಂಚನ್ ಅವರದು ಈಗ ಅನಾರೋಗ್ಯದ ಬದುಕು. ತನ್ನ ಸ್ವಂತ ಬದುಕನ್ನು ಲೆಕ್ಕಿಸದೇ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕ್ರತಿಕ ಹಾಗೂ ಸಾಹಿತ್ಯಿಕ ಸೇವೆಗಳಿಗಾಗಿಯೇ ಜೀವನವನ್ನು ಮುಡಿಪಾಗಿಟ್ಟ ಇವರು ಇದೀಗ ಅನಾರೋಗ್ಯ ಮತ್ತು ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದಾರೆ. ಗೋಪಾಲ ಅಂಚನ್ ಅವರು ಯಾವುದೇ ಸಂಸ್ಥೆಯಲ್ಲಿ ಮಾಸಿಕ ವೇತನಕ್ಕೆಂದು ದುಡಿಯದೆ ತನ್ನ ಸೇವೆಗಾಗಿ ಕೆಲವು ಸಂಸ್ಥೆಗಳು ಕೊಟ್ಟ ಗೌರವಧನವನ್ನಷ್ಟೇ ಸ್ವೀಕರಿಸಿ ಬದುಕು ನಡೆಸುತ್ತಾ ಜೀವನದುದ್ದಕ್ಕೂ ಆರ್ಥಿಕ ಸಂಕಷ್ಟವನ್ನು ಅನುಭವಿಸಿದವರು. ಇದೀಗ ಕಳೆದ ಮೂರುವರೆ ವರ್ಷಗಳಿಂದ ಎರಡು ಕಿಡ್ನಿಗಳು ಸರಿಯಾಗಿ ಕಾರ್ಯನಿರ್ವಹಿಸದೇ ಇರುವುದು ಮತ್ತು ಹೊಟ್ಟೆಗೆ ಸಂಬಂಧಿಸಿದ ಕೆಲವು ಕಾಯಿಲೆಗಳಿಂದ ಇವರ ಅನಾರೋಗ್ಯ ತೀವ್ರಗೊಂಡಿದ್ದು ಮೂರೂವರೆ ವರ್ಷದಿಂದ ಯಾವುದೇ ಉದ್ಯೋಗ ಮಾಡಲಾಗದ ಸ್ಥಿತಿ ನಿರ್ಮಾಣವಾಗಿದೆ. ಇದುವರೆಗೆ ಐದಾರು ಅಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆದಿದ್ದು ಚಿಕಿತ್ಸೆಗಾಗಿ 6 ಲಕ್ಷಕ್ಕೂ ಹೆಚ್ಚು ರೂಪಾಯಿ ಸಾಲ ಮಾಡಿ ವಿನಿಯೋಗಿಸಲಾಗಿದೆ. ವೃದ್ಧಾಪ್ಯದಲ್ಲಿರುವ ತಂದೆ,ತಾಯಿ, ಹೆಂಡತಿ ಮತ್ತು…

Read More

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೊಜನೆಯ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಸೌಭಾಗ್ಯ ಮತ್ತು ಶ್ರೀದುರ್ಗಾ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಬೆಂಜನಪದವು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ಯೋಜನಾಧಿಕಾರಿ ಜಯಾನಂದ ಕಾರ್ಯಕ್ರಮವನ್ನು ಉದ್ಘಾಟಿಸಿ ಜ್ಞಾನವಿಕಾಸದ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಮಹಿಳಾ ಸಾಂತ್ವನ ಕೇಂದ್ರದ ಸಮಾಲೋಚಕಿ ದ್ರಾಕ್ಷಿಯಿನಿ, ಒಕ್ಕೂಟ ನಿಕಟಪೂರ್ವ ಅಧ್ಯಕ್ಷ ಉಮೇಶ್, ಜಯಂತ್, ವಲಯ ಅಧ್ಯಕ್ಷ ಜನಾರ್ಧನ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಾಮನ ಆಚಾರಿ, ಬ್ರಹ್ಮರಕೂಟ್ಲು ಒಕ್ಕೂಟದ ಅಧ್ಯಕ್ಷೆ ಗೀತಾ, ಮೇಲ್ವಿಚಾರಕರಾದ ರೂಪ, ಗಿರೀಶ್, ಜ್ಞಾನ ವಿಕಾಸ ಸಮನ್ವಯಧಿಕಾರಿ ಸವಿತಾ, ಸೇವಾಪ್ರತಿನಿಧಿ ರತ್ನ, ಭವ್ಯ ಹಾಗೂ ಕೇಂದ್ರದ ಸದಸ್ಯರು ಹಾಗೂ ಶೌರ್ಯ ಘಟಕದ ಸದಸ್ಯರು ಉಪಸ್ಥಿತರಿದ್ದರು.

Read More

ಬಂಟ್ವಾಳ: ಇಲ್ಲಿನ ಕಳ್ಳಿಗೆ ಗ್ರಾಮದ ನೆತ್ತರಕೆರೆ ದ.ಕ. ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಭಾನುವಾರ ನಡೆದಿದ್ದು ೪ನೇ ತರಗತಿಯ ವಿದ್ಯಾರ್ಥಿನಿ ಹಿಮಾನಿ ಪ್ರಸ್ತುತ ಪಡಿಸಿದ ಕೂಪಿಕಾ ಸಮಾತೋಲನ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು. ಸೋಡಾ ಬಾಟಲಿಗಳ ಮೇಲೆ ಮೂರು ಅಂತಸ್ತಿನಲ್ಲಿ ಮರದ ಕುರ್ಚಿಯನ್ನಿಟ್ಟು ಅದರ ಮೇಲೆ ಬಾಲಕಿ ಯೋಗಾಸನಗೈಯ್ಯುವ ಸಾಹಸ ಪ್ರದರ್ಶನ ವಿಶೇಷ ಗಮನ ಸೆಳೆಯಿತು. ವಿದ್ಯಾರ್ಥಿಗಳು ಮೈ ನವಿರೇಳಿಸುವ ಬೆಂಕಿ ಸಾಹಸ ಸಹಿತ ವಿವಿಧ ಶಾರೀರಿಕ ಪ್ರದರ್ಶನಗಳನ್ನು ಈ ಸಂದರ್ಭ ನಡೆಸಿಕೊಟ್ಟರು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ದಾಮೋದರ ನೆತ್ತರಕೆರೆ, ಶಾಲಾ ಮುಖ್ಯೋಪಾಧ್ಯಾಯಿನಿ ಸಿಲ್ವಿಯಾ ಬ್ರೇಗ್ಸ್, ಎಸ್‌ಡಿಎಂಸಿ ಸದಸ್ಯರು, ಪೋಷಕರು, ಶಿಕ್ಷಕ ವೃಂದದವರು ಈ ಸಂದರ್ಭ ಉಪಸ್ಥಿತರಿದ್ದರು.

Read More

ಬಂಟ್ವಾಳ: ಭಾಷೆ ಹುಟ್ಟುವ ಮೊದಲೇ ಚಿತ್ರಕಲೆ ಹುಟ್ಟಿದೆ. ನಾಗರೀಕತೆಯ ಪ್ರಾರಂಭದ ಹಂತದಲ್ಲಿ, ಶಿಲಾಯುಗದ ಕಾಲದಲ್ಲಿ ಚಿತ್ರಕಲೆಯ ಮೂಲಕ ಅಭಿಪ್ರಾಯವನ್ನು ಅಭಿವ್ಯಕ್ತಿಗೊಳಿಸುತ್ತಿದ್ದರು ಎಂದು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ. ತುಕರಾಂ ಪೂಜಾರಿ ಹೇಳಿದರು. ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಏರ್ಯ ಆಳ್ವ ಫೌಂಡೇಶನ್ ಮೊಡಂಕಾಪು ಇದರ ಸಹಯೋಗದೊಂದಿಗೆ ಏರ್ಯ ಲಕ್ಷ್ಮೀ ನಾರಾಯಣ ಆಳ್ವರ ಶತಮಾನೋತ್ಸವ ದ ಪ್ರಯುಕ್ತ ಫರಂಗಿಪೇಟೆಯ ಸೇವಾಂಜಲಿ ಸಭಾಗ್ರಹದಲ್ಲಿ ನಡೆದ 3ನೇ ವರ್ಷದ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ವರ್ಣಾಂಜಲಿಯನ್ನು ಉದ್ಘಾಟಿಸಿ ಮಾತನಾಡಿದರು. ಪರಿಸರ ಸಂರಕ್ಷಣೆ ನಮ್ಮೆಲರ ಜವಾಬ್ದಾರಿಯಾಗಬೇಕು ಎಂದ ಅವರು ಏರ್ಯ ಲಕ್ಷ್ಮೀ ನಾರಾಯಣ ಆಳ್ವರು ಸರಸ್ವತಿಯ ಆರಾಧಕರು, ನಡೆದಾಡುವ ಜ್ಞಾನ ಭಂಡಾರವಾಗಿದ್ದರು ಎಂದರು. ನಿವೃತ್ತ ಚಿತ್ರಕಲಾ ಶಿಕ್ಷಕ ಎಚ್.ಎನ್.ಹೆಬ್ಬಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಸೇವಾಂಜಲಿ ಪ್ರತಿಷ್ಠಾನದ ಮೂಲಕ ಚಿತ್ರಕಲೆ, ಸಂಗೀತ, ಭರತನಾಟ್ಯ, ಭಜನೆ ಮೊದಲಾದ ತರಬೇತಿ ನಡೆಯುತ್ತಿದ್ದು ಈ ಭಾಗದ ವಿದ್ಯಾರ್ಥಿಗಳು ಅದರ ಪ್ರಯೋಜನ ಪಡೆಯುತ್ತಿದ್ದಾರೆ ಎಂದರು. ವೇದಿಕೆಯಲ್ಲಿ ಸೇವಾಂಜಲಿಯ…

Read More

ಬಂಟ್ವಾಳ: ಮನುಷ್ಯನ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿದ್ದಾಗ ರೋಗಗಳು ನಿಯಂತ್ರಣವಾಗುತ್ತದೆ. ರೋಗನಿರೋಧಕ ಶಕ್ತಿ ಹೆಚ್ಚಾಗಬೇಕಾದರೆ ಪೌಷ್ಠಿಕಾಂಶದ ಆಹಾರ ಸೇವನೆ ಅಗತ್ಯ. ಕ್ಷಯ ರೋಗ ಕೆಮ್ಮು, ಕಫ ಮಾತ್ರವಲ್ಲದೆ ದೇಹದ ಯಾವ ಭಾಗಕ್ಕೂ ಬಾಧಿಸುವ ಸಾಧ್ಯತೆ ಇದೆ. ಪ್ರಸ್ತುತ ರೋಗಿಗಳ ಸಂಖ್ಯೆ ಕಡಿಮೆಯಾಗಿದೆ, ಆದರೆ ಕ್ಷಯ ರೋಗ ಸಂಪೂರ್ಣ ನಿರ್ಮೂಲನವಾಗಿಲ್ಲ ಎಂದು ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್ ಭಂಡಾರಿ ಹೇಳಿದರು. ಕೇಂದ್ರ ಸರಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ಸೇವಾಂಜಲಿ ಪ್ರತಿಷ್ಠಾನದ ಆಶ್ರಯದಲ್ಲಿ ನಡೆದ ಕ್ಷಯರೋಗಿಗಳಿಗೆ ಆಹಾರ ದವಸ ಧಾನ್ಯ ವಿತರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಜಿ.ಪಂ. ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಮಾತನಾಡಿ ಕ್ಷಯ ರೋಗ ಪೀಡಿತರನ್ನು ಗುರುತಿಸಿ ಅವರ ರೋಗ ಗುಣಮುಖವಾಗಲು ಉಚಿತವಾಗಿ ಪೌಷ್ಟಿಕಾಹಾರ ನೀಡುವ ಸೇವಾಂಜಲಿಯ ಕಾರ್ಯ ದೇವರು ಮೆಚ್ಚುವ ಕೆಲಸ ಎಂದರು. ಕ್ಷಯ ರೋಗೀಗಳು ದೃತಿಗೆಡದೆ ರೋಗಗುಣಮುಖವಾಗುವ ನಿಟ್ಟಿನಲ್ಲಿ ಸಕಾಲದಲ್ಲಿ ಔಷಧಿಯೊಂದಿಗೆ ಪೌಷ್ಟಿಕಾಹಾರ ಸೇವಿಸುವಂತೆ ತಿಳಿಸಿದರು. ಸೇವಾಂಜಲಿ…

Read More

ಬಂಟ್ವಾಳ: ಇತ್ತೀಚೆಗೆ ನಿಧನರಾದ ಬಂಟ್ವಾಳ ತಾ.ಪಂ. ಮಾಜಿ ಸದಸ್ಯ, ರಾಜಕೀಯ, ಸಾಮಾಜಿಕ, ಧಾರ್ಮಿಕ ಮುಂದಾಳು ಸೋಮಪ್ಪ ಕೋಟ್ಯಾನ್ ಅವರ ಸಂತಾಪ ಸಭೆ ತುಂಬೆಯ ಶ್ರೀ ಶಾರದಾ ಸಭಾಭವನದಲ್ಲಿ ನಡೆಯಿತು. ಸೋಮಪ್ಪ ಕೋಟ್ಯಾನ್ ಅವರ ಪುತ್ರರಾದ ಸಂತೋಷ್ ಕುಮಾರ್ ಹಾಗೂ ಸಂಪತ್ ಕುಮಾರ್ ಅವರು ದೀಪಪ್ರಜ್ವಲಿಸಿದರು. ಬಳಿಕ ಗಣ್ಯರು ಸೋಮಪ್ಪ ಕೋಟ್ಯಾನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ನುಡಿನಮನ ಸಲ್ಲಿಸಿ ಸೋಮಪ್ಪ ಕೋಟ್ಯಾನ್ ಅವರು ಈ ಊರಿನ ಅಭಿವೃದ್ಧಿಯ ಬಗ್ಗೆ ಚಿಂತಿಸಿದವರು. ಊರಿನ ಅಭಿವೃದ್ಧಿಗಾಗಿ ಅನುದಾನಕ್ಕೆ ಜನಪ್ರತಿನಿಧಿಗಳಲ್ಲಿ ಬೇಡಿಕೆಯನ್ನು ಇಡುತ್ತಿದ್ದರು.‌ ಅವರ ಉತ್ತಮ ಗುಣಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದು ತಿಳಿಸಿದರು. ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಮಾತನಾಡಿ ಸೋಮಪ್ಪ ಕೋಟ್ಯಾನ್ ಕಲಾವಿದರಾಗಿ ನಾಟಕದಲ್ಲಿ ಅಭಿನಯಿಸಿದ್ದರು. ಅವರ ಸಾವು ಸಮಾಜಕ್ಕೆ ತುಂಬಲಾರದ ನಷ್ಟ ಎಂದರು. ಜಿ.ಪಂ. ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ನುಡಿನಮನ ಸಲ್ಲಿಸಿ ಸೋಮಪ್ಪ ಕೋಟ್ಯಾನ್ ವ್ಯಕ್ತಿಗತವಾಗಿ ಆತ್ಮೀಯರಾಗಿದ್ದರು. ಊರಿನ ಎಲ್ಲಾ…

Read More

ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಏರ್ಯ ಆಳ್ವ ಫೌಂಡೇಷನ್ ಮೊಡಂಕಾಪು ಇದರ ಸಹಯೋಗದೊಂದಿಗೆ ಏರ್ಯ ಲಕ್ಷ್ಮೀ ನಾರಾಯಣ ಆಳ್ವರ ಶತಮಾನೋತ್ಸವದ ಪ್ರಯುಕ್ತ ೩ನೇ ವರ್ಷದ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆ ವರ್ಣಾಂಜಲಿ ಡಿ.7ರಂದು ಭಾನುವಾರ ಬೆಳಿಗ್ಗೆ 9.30ರಿಂದ ಫರಂಗಿಪೇಟೆಯ ಸೇವಾಂಜಲಿ ಸಭಾಗೃಹದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ. ತುಕರಾಂ ಪೂಜಾರಿ ಉದ್ಘಾಟಿಸುವರು, ನಿವೃತ್ತ ಚಿತ್ರಕಲಾ ಶಿಕ್ಷಕ ಎಚ್.ಎನ್. ಹೆಬ್ಬಾರ್ ಅಧ್ಯಕ್ಷತೆ ವಹಿಸುವರು. ಮಧ್ಯಾಹ್ನ 2.30ಕ್ಕೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದ್ದು ಚಿತ್ರ ಕಲಾವಿದ ದಿನೆಶ್ ಹೊಳ್ಳ ಉಪಸ್ಥಿತರಿರುವರು. 4ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಚಿತ್ರ ಬಿಡಿಸಲು ಐಚ್ಛಿಕ ವಿಷಯ ನೀಡಲಾಗಿದ್ದು 5ರಿಂದ 7ನೇ ತರಗತಿ ವಿದ್ಯಾರ್ಥಿಗಳಿಗೆ ಹಳ್ಳಿ ವ್ಯಾಪಾರ, 8ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ ವಿಷಯ ನೀಡಲಾಗಿದೆ. ಭಾಗವಹಿಸುವ ವಿದ್ಯಾರ್ಥಿಗಳು ಅಂದು ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ಶಾಲಾ ಗುರುತಿನ ಚೀಟಿಯೊಂದಿಗೆ ಹಾಜರಿರಬೇಕು, ಡ್ರಾಯಿಂಗ್ ಪೇಪರ್ ಹೊರತುಪಡಿಸಿ ಇತರ ಪರಿಕರಗಳನ್ನು ವಿದ್ಯಾರ್ಥಿಗಳೇ…

Read More

ಬಂಟ್ವಾಳ: ಇಲ್ಲಿನ ಕಾಂಜಿರಕೋಡಿ ಜ್ಞಾನ ದೀಪ ಜ್ಞಾವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ಭಾನುವಾರ ನಡೆಯಿತು. ಸರಕಾರಿ ಶಾಲೆಯ ನಿವೃತ್ತ ಶಿಕ್ಷಕಿ ಪ್ರೆಸಿಲ್ಲಾ ಕಾರ್ಯಕ್ರಮ ಉದ್ಘಾಟಿಸಿದರು. ಅವರು ಮಾತನಾಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಕಾರ್ಯಕ್ರಮದಲ್ಲಿ ವಲಯಾಧ್ಯಕ್ಷ ಮನೋಹರ್ ನೇರಂಬೋಳು, ವಲಯದ ಮೇಲ್ವಿಚಾರಕ ರಾಜೇಶ್ ಉಪಸ್ಥಿತರಿದ್ದರು. ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ವಿವಿಧ ಆಟೋಟ ಸ್ಪರ್ಧೆ ನಡೆಸಿ ಬಹುಮಾನ ವಿತರಿಸಲಾಯಿತು. ಬಳಿಕ ಕೇಂದ್ರದ ಸದಸ್ಯರಿಂದ, ಪಾರ್‍ದಾನ, ಕುಣಿತ ಭಜನೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Read More