Author: admin

ಬಂಟ್ವಾಳ: 2025-26 ನೇ ರೋಟರಿ ವರ್ಷದಲ್ಲಿ ಅಧ್ಯಕ್ಷ ರೊ. ಬಸ್ತಿ ಮಾಧವ ಶೆಣೈ ಅವರ ನೇತೃತ್ವದಲ್ಲಿ ದೊಡ್ಡ ಕ್ಲಬ್ ವಿಭಾಗದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಕ್ಕಾಗಿ ರೋಟರಿ ಕ್ಲಬ್ ಬಂಟ್ವಾಳಕ್ಕೆ ರೋಟರಿ ಜಿಲ್ಲೆಯ ಅತ್ಯುನ್ನತ “ಡೈಮಂಡ್ ಪ್ಲಸ್” ಪ್ರಶಸ್ತಿ ಲಭಿಸಿದೆ. ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಜಿಲ್ಲಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ರೋಟರಿ ಪ್ರಭಾವವನ್ನು ಹೆಚ್ಚಿಸಿದ್ದಕ್ಕಾಗಿ, ವ್ಯಾಪ್ತಿಯನ್ನು ವಿಸ್ತರಿಸಿದ್ದಕ್ಕಾಗಿ, ಸದಸ್ಯರ ಪಾಲ್ಗೊಳ್ಳುವಿಕೆಯನ್ನು ಉತ್ತಮಗೊಳಿಸಿದ್ದಕ್ಕಾಗಿ ಮತ್ತು ಹೊಂದಿಕೊಳ್ಳುವ ಸಾಮರ್ಥ್ಯವನ್ನು ಹೆಚ್ಚಿಸಿದ್ದಕ್ಕಾಗಿ ಈ ಪ್ರಶಸ್ತಿಯನ್ನು ಪರಿಗಣಿಸಲಾಗಿದೆ. ಜಿಲ್ಲಾ ಗವರ್ನರ್ ರೊ. ರಾಮಕೃಷ್ಣ ಪಿ.ಕೆ. ನಿಯೋಜಿತ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್, 2027 -28 ರ ನಾಮ ನಿರ್ದೇಶಿತ ಜಿಲ್ಲಾ ಗವರ್ನರ್ ಯಶಸ್ವಿ ಸೋಮಶೇಖರ್, ಪೂರ್ವ ಜಿಲ್ಲಾ ಗವರ್ನರ್ ವಿಕ್ರಮ್ ದತ್ತ ಮತ್ತು ಅಸಿಸ್ಟೆಂಟ್ ಜಿಲ್ಲಾ ಗವರ್ನರ್ ಜಯಕುಮಾರ್ ಶೆಟ್ಟಿ ಉಪಸ್ಥಿತಿಯಲ್ಲಿ ಕ್ಲಬ್ ಅಧ್ಯಕ್ಷ ರೊ. ಬಸ್ತಿ ಮಾಧವ ಶೆಣೈ ಪ್ರಶಸ್ತಿಯನ್ನು ಹಸ್ಥಾತರಿಸಿದರು. ಈ ಸಂಧರ್ಭದಲ್ಲಿ ಕಾರ್ಯದರ್ಶಿ ರೊ. ಮೊಹಮ್ಮದ್ ಯಾಸೀರ್*, ಖಜಾಂಚಿ ರೊ.…

Read More

ಬಂಟ್ವಾಳ: ಕುರ್ನಾಡು ಮಿತ್ತಕೋಡಿ ನಿವಾಸಿ ಭೋಜ ಬಿ. ರವರು ಅಲ್ಪಕಾಲದ ಅನಾರೋಗ್ಯದಿಂದ ಇಂದು ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ದೈವಾಧೀನರಾದರು. ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅವರು ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಸಂಘದ ಹಿರಿಯ ಸದಸ್ಯರು ಹಾಗೂ ಮಾಜಿ ಪದಾಧಿಕಾರಿ. ಮುಡಿಪು ಕುಲಾಲ ಸಂಘದ ಮಾಜಿ ಅಧ್ಯಕ್ಷರು, ಬಂಟ್ವಾಳ ಯುವಜನ  ವ್ಯಾಯಾಮ ಶಾಲೆಯ ಪದಾಧಿಕಾರಿಯಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಮೃತರ ಅಂತಿಮ ದರ್ಶನವು ಕುರ್ನಾಡು ಮೃತರ ಸ್ವಗ್ರಹದಲ್ಲಿ ಸಂಜೆ 5.30 ಗೆ ಗಂಟೆಗೆ ಮತ್ತು ಬಡ್ದಕಟ್ಟೆ ಸ್ಮಶಾನದಲ್ಲಿ ಮೃತರ ಅಂತ್ಯ ಕ್ರಿಯೆಯು ಸುಮಾರು 7.00 ಗಂಟೆಗೆ ನಡೆಯಲಿದೆ. ಎಂದು ಕುಟುಂಬ ಮೂಲಗಳು ತಿಳಿಸಿದೆ.

Read More

ಬಂಟ್ವಾಳ: ಕಳೆದ 2001ನೇ ಇಸವಿಯಿಂದ ವಿದ್ಯುತನ್ನು ಖಾಸಗಿಕರಣಗೊಳಿಸಲು ಸರಕಾರ ಹೊರಟಿದೆ.ಆಗ ಕ.ರಾ ರೈತ ಸಂಘ ಹಸಿರುಸೇನೆ ತೀವ್ರವಾಗಿ ಪ್ರತಿಭಟಿಸಿ ಸರಕಾರದ ಈ ಷಡ್ಯಂತ್ರವನ್ನು ವಿಫಲಗೊಳಿಸಿದೆ. ರಾಜ್ಯದಾದ್ಯಂತ ಪಂಪ್ ಸೆಟ್ ಮೀಟರ್ ಗಳನ್ನು ಕಿತ್ತು ಇಲಾಖೆ ಕಛೇರಿಗಳ ಮುಂದೆ ಪ್ರತಿಭಟಿಸಿದ ಕಾರಣ ಅಂದು ಸರಕಾರ ಕಾರ್ಯವನ್ನು ಕೈಬಿಟ್ಟಿತ್ತು. ಈಗ ರಾಜ್ಯ ಸರಕಾರ ಟಾಟಾ ಕಂಪೆನಿಯೊಂದಿಗೆ ಒಪ್ಪಂದ ಮಾಡಿಕೊಂಡು ವಿದ್ಯುತ್ ಸಂಸ್ಥೆಯನ್ನು ಖಾಸಗಿ ಕಂಪೆನಿಗೆ ನೀಡಿ ಕೃಷಿ ಪಂಪ್ ಸೆಟ್ಗೆ ಸ್ಮಾರ್ಟ್ ಮೀಟರ್ ಅಳವಡಿಸಿ ದುಬಾರಿ ಹಣ ವಸೂಲಿ ಮಾಡಲು ಮುಂದಾಗಿದೆ. ರಾಜ್ಯಾದ್ಯಂತ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಹೊರತುಪಡಿಸಿ ಕ.ರಾ ರೈತ ಸಂಘ ಹಸಿರುಸೇನೆಯ ರಾಜ್ಯಧ್ಯಕ್ಷರಾದ ಕೋಡಿಹಳ್ಳಿ ಚಂದ್ರಶೇಖರ್ ಇವರ ನೇತೃತ್ವದಲ್ಲಿ ಉಗ್ರ ಪ್ರತಿಭಟನೆ ನಡೆಯುತ್ತಿದೆ. ಈ ಹೋರಾಟಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ರೈತರು ಈ ಯೋಜನೆಯನ್ನು ಉಗ್ರವಾಗಿ ಖಂಡಿಸಿ ಪ್ರತಿಭಟನೆ ನಡೆಸುವುದಲ್ಲದೆ ಉಭಯ ಜಿಲ್ಲೆಯ ಶಾಸಕರು ರಾಜಕೀಯ ರಹಿತವಾಗಿ ಈ ಹೋರಾಟದಲ್ಲಿ ಸಕ್ರೀಯವಾಗಿ ಭಾಗವಹಿಸಿ ಈ ಪ್ರಯತ್ನವನ್ನು ತಡೆಯಲು ಮುಂದೆ…

Read More

ಬಂಟ್ವಾಳ: ಮದುವೆ ಸೀರೆ ಸಹಿತ ವೈವಿಧ್ಯಮಯ ವಸ್ತ್ರಗಳ ಮೂಲಕ ಮನೆಮಾತಾದ ಹೆಸರಾಂತ ಮಳಿಗೆ ಬಂಟ್ವಾಳದ ಬೈಪಾಸ್‌ನಲ್ಲಿರುವ ಪ್ರತಿಷ್ಠಿತ ಅಂಚನ್‌ ಸಿಲ್ಕ್ಸ್ ವಸ್ತ್ರ ಮಳಿಗೆಯಲ್ಲಿ ಬಹು ಸಂಭ್ರಮದ ಅಂಚನೋತ್ಸವದ ಹಿನ್ನೆಲೆಯಲ್ಲಿ ಆಯೋಜಿಸಲಾಗಿರುವ ಕೈಮಗ್ಗ ಸೀರೆಗಳ ಬೃಹತ್ ಮಾರಾಟ ಮೇಳಕ್ಕೆ ಯೋಗ ದಿನವಾದ ರವಿವಾರ ಚಾಲನೆ ನೀಡಲಾಯಿತು. ಸಂಸದ ಕ್ಯಾ|ಬ್ರಿಜೇಶ್ ಚೌಟ ಅವರು ಚಾಲನೆ ನೀಡಿ ಮಾತನಾಡಿ “ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪದಂತೆ ವೋಕಲ್ ಫಾರ್ ಲೋಕಲ್ ಎಂಬ ಪರಿಕಲ್ಪನೆಯಲ್ಲಿ ಖಾದಿ ಉದ್ಯಮಕ್ಕೆ ವಿಶೇಷ ಪ್ರೋತ್ಸಾಹ ನೀಡಬೇಕಾಗಿದೆ. ಈ ನಿಟ್ಟಿನಲ್ಲಿ ಪ್ರಕಾಶ್ ಅಂಚನ್, ಶೇಖರ್ ಅಂಚನ್ ಹಾಗೂ ಪುರುಷೋತ್ತಮ ಅಂಚನ್ ಅವರ ಸಮರ್ಥ ನೇತೃತ್ವದ ಅಂಚನ್ ಸಿಲ್ಕ್ಸ್ ಕೈಮಗ್ಗ ಸೀರೆಗಳ ಅಭೂತಪೂರ್ವ ಮಾರಾಟಕ್ಕೆ ಮುನ್ನುಡಿ ಬರೆದಿರುವುದು ಶ್ಲಾಘನೀಯ” ಎಂದರು. ಅಂಚನ್‌ ಸಿಲ್ಕ್ಸ್ ವಸ್ತ್ರ ಮಳಿಗೆಯಲ್ಲಿ ನೂತನವಾಗಿ ತೆರೆಯಲಾಗಿರುವ ವೋಲ್ ಸೇಲ್ ಕೌಂಟರ್ ಅನ್ನು ಶಾಸಕ ರಾಜೇಶ್ ನಾಯ್ಕ್ ಅವರು ಉದ್ಘಾಟಿಸಿದರು. “ಅಂಚನ್‌ ಸಿಲ್ಕ್ಸ್ ವಸ್ತ್ರ ಮಳಿಗೆ ಬಂಟ್ವಾಳಕ್ಕೆ ಹೆಮ್ಮೆಯ ಮಳಿಗೆಯಾಗಿದೆ. ಕೈಮಗ್ಗಕ್ಕೆ ಪ್ರೋತ್ಸಾಹ…

Read More

ಬಂಟ್ವಾಳ: ಇತ್ತೀಚೆಗೆ ನಿಧನ ಹೊಂದಿದ ಹಿರಿಯ ಪತ್ರಕರ್ತ, ನಿವೃತ್ತ ಪ್ರಾಂಶುಪಾಲ ಪ್ರೊ.ಬಾಲಕೃಷ್ಣ ಗಟ್ಟಿ ಅವರ ಶ್ರದ್ಧಾಂಜಲಿ ಸಭೆ, ನುಡಿನಮನ ಕಾರ್ಯಕ್ರಮ ಬಂಟ್ವಾಳ ಸ್ಪರ್ಶ ಕಲಾ ಮಂದಿರದಲ್ಲಿ ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶುಕ್ರವಾರ ಸಂಜೆ ನಡೆಯಿತು. ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಪ್ರೊ. ತುಕಾರಾಮ ಪೂಜಾರಿ ನುಡಿನಮನ ಸಲ್ಲಿಸಿ ತಾನು ಎಸ್.ವಿ.ಎಸ್. ಕಾಲೇಜಿನಲ್ಲಿ ಸೇರ್ಪಡೆಯಾಗಲು ಪ್ರೊ.ಗಟ್ಟಿಯವರೇ ಕಾರಣ ಎಂದು ಅವರೊಂದಿಗಿನ ಒಡನಾಟವನ್ನು ಸ್ಮರಿಸಿಕೊಂಡರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಎನ್.ಪುಷ್ಪರಾಜ್ ಮಾತನಾಡಿ ಮಾರ್ಗದರ್ಶನ ನೀಡಿದ್ದನ್ನು ಸ್ಮರಿಸಿದರು. ಹಿರಿಯ ಪತ್ರಕರ್ತ ಜಯಾನಂದ ಪೆರಾಜೆ ಮಾತನಾಡಿ ತಾಲೂಕು ಪತ್ರಕರ್ತರ ಸಂಘದ ಸ್ಥಾಪನೆಯ ಕುರಿತು ಮಾತನಾಡಿದರು. ಹಿರಿಯ ಪತ್ರಕರ್ತ ವೆಂಕಟೇಶ ಬಂಟ್ವಾಳ ಅವರು ಗಟ್ಟಿಯ ರೊಂದಿಗೆ ವೃತ್ತಿಜೀವನವನ್ನು ನೆನಪಿಸಿಕೊಂಡರು. ಎಸ್.ವಿ.ಎಸ್. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ಪಾಂಡುರಂಗ ನಾಯಕ್ ಮಾತನಾಡಿ, ಪ್ರೊ.ಗಟ್ಟಿಯವರು ತನ್ನ ವೃತ್ತಿಗೆ ಮಾರ್ಗದರ್ಶಕರಾಗಿ ಇದ್ದುದನ್ನು ಸ್ಮರಿಸಿ, ಕಾಲೇಜಿನಲ್ಲಿ ಶಿಸ್ತನ್ನು ತಂದವರು, ಉತ್ತಮ ಆಡಳಿತಾಧಿಕಾರಿ ಆಗಿದ್ದರು ಎಂದರು. ಬಾಲಕೃಷ್ಣ…

Read More

ಬಂಟ್ವಾಳ: ಸೆಕ್ಯೂರ್ ಇನ್ಸೂರೆನ್ಸ್ ಕನ್ಸಲ್ಟೆನ್ಸಿ ಹಾಗೂ ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನ ವತಿಯಿಂದ ಕೆಎಂಸಿ ಆಸ್ಪತ್ರೆ ಸಹಯೋಗದೊಂದಿಗೆ 136 ನೇ ರಕ್ತದಾನ ಶಿಬಿರ ಬಿ.ಸಿ ರೋಡಿನ ಶ್ರೀ ರಕ್ತೇಶ್ವರೀ ಸನ್ನಿಧಿ ಸಮೀಪದ ಆರ್.ಕಾಂಪ್ಲೆಕ್ಸ್ ನ 2 ನೇ ಮಹಡಿಯಲ್ಲಿ ರವಿವಾರ ನಡೆಯಿತು. ಶಾಸಕ ರಾಜೇಶ್ ನಾಯ್ಕ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರಕ್ತದಾನ ಶ್ರೇಷ್ಠ ದಾನ. ಅ ಮೂಲಕ ಜೀವ ರಕ್ಷಣೆಯ ಮಹಾನ್ ಕಾರ್ಯ ಈಡೇರಲು ಸಾಧ್ಯ ಎಂದು ಹೇಳಿದ ಅವರು ಸೆಕ್ಯೂರ್ ಇನ್ಸೂರೆನ್ಸ್ ಕನ್ಸಲ್ಟೆನ್ಸಿ ಹಾಗೂ ಸೇವಾಂಜಲಿಯ ಕಾರ್ಯ ಮಾದರಿ ಎಂದು ಶ್ಲಾಘಿಸಿದರು. ಮೊಡಂಕಾಪು ಚರ್ಚ್ ನ ಧರ್ಮಗುರು ವಂ.ಫಾ. ವಿಕ್ಟರ್ ಡಿಸೋಜ, ಅಮ್ಟಾಡಿ ಗ್ರಾ.ಪಂ. ನ ನಿಕಟಪೂರ್ವಾಧ್ಯಕ್ಷ ವಿಜಯ್ ಕುಮಾರ್, ಸೆಕ್ಯೂರ್ ಇನ್ಸೂರೆನ್ಸ್ ಕನ್ಸಲ್ಟೆನ್ಸಿ ಮಾಲಕ ಪ್ರಶಾಂತ್ ಫ್ರಾಂಕ್, ಜೆಸಿಂತ ಜ್ಯೋತಿ ಡಿಸೋಜ ಮುಂತಾದವರು ಉಪಸ್ಥಿತರಿದ್ದರು. ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ.ಕೃಷ್ಣಕುಮಾರ್ ಪೂಂಜ ಮಾತನಾಡಿ ಕಳೆದ ಕೆಲವು ವರ್ಷದಿಂದ ರಕ್ತದಾನ ದ ಮಹಾನ್ ಕಾರ್ಯ ಸಾಕಾರವಾಗುತ್ತಿದೆ. ಈ ಮೂಲಕ…

Read More

ಬಂಟ್ವಾಳ: ಸೆಕ್ಯೂರ್ ಇನ್ಸುರೆನ್ಸ್ ಕನ್ಸಲ್ಟೆನ್ಸಿ ಹಾಗೂ ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಕೆಎಂಸಿ ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ 136ನೇ ರಕ್ತದಾನ ಶಿಬಿರ ಜೂ.14ರಂದು ಭಾನುವಾರ ಬಿ.ಸಿ.ರೋಡಿನ‌ ರಕ್ತೇಶ್ವರೀ ದೇವಸ್ಥಾನದ ಬಳಿ ಇರುವ ಆರ್. ಕಾಂಪ್ಲೆಕ್ಸ್ ನ ಎರಡನೇ ಮಹಡಿಯಲ್ಲಿ ನಡೆಯಲಿದೆ. ಶಾಸಕ ರಾಜೇಶ್ ನಾಯ್ಕ್, ತಹಶೀಲ್ದಾರ್ ಜಿ.ಮಂಜುನಾಥ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಎಂದು ಸೆಕ್ಯೂರ್ ಇನ್ಸೂರೆನ್ಸ್ ಕನ್ಸಲೆನ್ಸಿಯ ಸಂಸ್ಥಾಪಕ ಪ್ರಶಾಂತ್ ಫ್ರಾಂಕ್ ಹಾಗೂ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ.ಕೃಷ್ಣ ಕುಮಾರ್ ಪೂಂಜ ಪ್ರಕಟನೆಯಲ್ಲಿ ತಿಳಿಸಿದ್ದಾರೆ

Read More

ಬಂಟ್ವಾಳ: ಸನಾತನ ಹಿಂದೂ ಧರ್ಮದ ಪರಿಪಾಲನೆ, ರಾಷ್ಟೀಯ ವಿಚಾರ ಧಾರೆಯ ಮೂಲಕ, ರಾಷ್ಟ್ರಿಯ ಸ್ವಯಂ ಸೇವಕ ಸಂಘದ ಮಾರ್ಗದರ್ಶನದ ಅನುಸರಣೆಯ ಮೂಲಕ ಹಿಂದೂ ರಾಷ್ಟ್ರಭಾರತದಲ್ಲಿ ಅಧಿಕಾರದ ಜವಾಬ್ದಾರಿ ಪಡೆದ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದಲ್ಲಿ ಅತೀ ಸುಧೀರ್ಘ ಅವಧಿಯಲ್ಲಿ ಪ್ರಧಾನಿಯಾಗಿ ಯಶಸ್ವಿ ಆಡಳಿತ ನಡೆಸಿ, ದೇಶ ಅಲ್ಲದೇ ಪ್ರಪಂಚದಲ್ಲಿಯೇ ಅತ್ತ್ಯುನುತ ನಾಯಕರಾಗಿ ಹೊರಹೊಮ್ಮಿ ಸರ್ವರಿಗೂ ಸಮಪಾಲು ಎಂಬ ಕಲ್ಪನೆಯಂತೆ ಅಧಿಕಾರ ನಡೆಸಿ ಲೋಕ ನಾಯಕರಾಗಿರುವ ಮೋದಿಜಿ ಯವರಿಗೆ ಇನ್ನಷ್ಟು ಧೀರ್ಘವದಿ ಅಧಿಕಾರ ನಡೆಸಲು ಶಕ್ತಿನೀಡುವರೊಂದಿಗೆ ಜಗತ್ತಿನ ಮಹಾನ್ ಶಕ್ತಿಯಾಗಿ ಮೋದಿಜೀ ಬೆಳಗಳಿ ಹಾಗೂ ಹಾಗೂ ಆಯುರಾರೋಗ್ಯ ವರ್ಧನೆಗಾಗಿ, ಮೋದಿಜಿಗೆ ಬರುವ ಎಲ್ಲಾ ವಿಘ್ನಗಳಿಗೆ ಪರಿಹಾರ ಪ್ರಾಪ್ತಿಯಾಗಬೇಕು ಎಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಬಿಜೆಪಿ ಕಾರ್ಯಕರ್ತರ ಪರವಾಗಿ ಸಾಮೂಹಿಕ ಪ್ರಾರ್ಥನೆ ಮಾಡಿದರು. ದೇವಸ್ಥಾನದ ಅರ್ಚಕ ಜಗದೀಶ್ ಶೆಟ್ಟಿ ಮಾವಿನಕಟ್ಟೆ ಪೂಜೆ ನೆರೆವೇರಿಸಿ ಮೋದಿಜೀ ಯವರಿಗೆ ಶುಭ ಹಾರೈಸಿದರು. ಈ ಐತಿಹಾಸಿಕ ಪ್ರಗತಿ ಹಿನ್ನೆಲೆಯಲ್ಲಿ ಕುಕ್ಕಿಪಾಡಿ…

Read More

ಬಂಟ್ವಾಳ: ರಾತ್ರಿ ವೇಳೆ ತೀವ್ರ ಎದೆನೋವು ಹಾಗೂ ಹೊಟ್ಟೆನೋವು ಕಾಣಿಸಿಕೊಂಡು ಅಸ್ವಸ್ಥಗೊಂಡಿದ್ದ ವ್ಯಕ್ತಿಯನ್ನು ರಾತ್ರಿ ವೇಳೆ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ನೆರವು ಒದಗಿಸಿ ಜೀವ ಉಳಿಸಿದ ಘಟನೆ ಬಿ.ಸಿ.ರೋಡಿನ ಗೂಡಿನ ಬಳಿಯಲ್ಲಿ ಮಂಗಳವಾರ ನಡೆದಿದೆ. ಗೂಡಿನಬಳಿ ನಿವಾಸಿ ಅಶ್ರಫ್ ಅವರಿಗೆ ತೀವ್ರ ಎದೆನೋವು ಹಾಗೂ ಹೊಟ್ಟೆನೋವು ಕಾಣಿಸಿಕೊಂಡು ಅಸ್ವಸ್ಥತೆ ಉಂಟಾಗಿತ್ತು. ಈ ಸಂದರ್ಭ ಅವರ ಮನೆಯಿಂದ ಜೋರಾಗಿ ಬಾಗಿಲು ಬಡಿಯುವ ಹಾಗೂ ಆಕ್ರಂದನದ ಶಬ್ದ ಕೇಳಿಬಂದ ಹಿನ್ನೆಲೆಯಲ್ಲಿ ಗಸ್ತು ತಿರುಗುತ್ತಿದ್ದ ಬಂಟ್ವಾಳ ನಗರ ಠಾಣೆಯ ನೈಟ್ ಬೀಟ್ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿದರು. ಸ್ಥಳಕ್ಕೆ ತಲುಪಿದಾಗ ಅಶ್ರಫ್ ಅವರಿಗೆ ಲಘು ಹೃದಯಾಘಾತ ಸಂಭವಿಸಿರುವುದು ಗಮನಕ್ಕೆ ಬಂದಿದ್ದು, ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಸಿಬ್ಬಂದಿ ಕೂಡಲೇ ಪ್ರಥಮ ಚಿಕಿತ್ಸೆ ನೀಡಿ ಸಿಪಿಆರ್ ನೆರವು ಒದಗಿಸಿದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಬಂಟ್ವಾಳ ನಗರ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ವಿನೋದ್ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿ ಜಯಗಣೇಶ್ ಅವರ ಸಮಯಪ್ರಜ್ಞೆ, ತುರ್ತು ಸ್ಪಂದನೆ…

Read More

ಬಂಟ್ವಾಳ: 2026-27ನೇ ಸಾಲಿನ ವಿವಿಧ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿ ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಸಮುದಾಯ ಭವನದ ಮೇಲಂತಸ್ತಿನ ಕಟ್ಟಡ ನಿರ್ಮಾಣಕ್ಕೆ ರಾಜ್ಯ ಸರಕಾರದಿಂದ 1 ಕೋಟಿ ರೂಪಾಯಿ ಅನುದಾನ ಮಂಜೂರಾಗಿದೆ. ಬಂಟ್ವಾಳ ತಾಲೂಕು‌ ಕುಲಾಲ ಸುಧಾರಕ ಸಂಘ ಹಾಗೂ ಮೇಲಂತಸ್ತಿನ ಕಟ್ಟಡ ನಿರ್ಮಾಣ ಸಮಿತಿ‌ ವತಿಯಿಂದ‌ ಬಿ.ಮೂಡ ಗ್ರಾಮದ‌ ಬಿ.ಸಿ.ರೋಡಿನ ಪೊಸಳ್ಳಿಯಲ್ಲಿ ಸಮುದಾಯ ಭವನದ ಮೇಲ್ತಂತಸ್ತಿನ ಕಾಮಗಾರಿ ನಡೆಯುತ್ತಿದ್ದು ಮಾಜಿ ಸಚಿವ ಬಿ.ರಮಾನಾಥ ರೈಯವರ ಶಿಫಾರಸ್ಸಿನ ಮೇರೆಗೆ, ಮೇಲಂತಸ್ತಿನ ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ, ಮಂಗಳೂರು ವಿವಿ ಸಿಂಡಿಕೇಟ್ ಪ್ರಾಧಿಕಾರದ ಸದಸ್ಯ ಸುರೇಶ್ ಕುಮಾರ್ ನಾವೂರು ಅವರ ವಿಶೇಷ ಪ್ರಯತ್ನ ಹಾಗೂ ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಮುಖಂಡರ ಸಹಕಾರದಲ್ಲಿ ಅನುದಾನಕ್ಕೆ ಬೇಡಿಕೆ ಸಲ್ಲಿಸಲಾಗಿದ್ದು ತಕ್ಷಣ ಸ್ಪಂದಿಸಿರುವ ಮುಖ್ಯಮಂತ್ರಿಗಳು ಈ‌ ವಿಶೇಷ ಅನುದಾನ ಮಂಜೂರಾಗಿರುವುದಾಗಿ ತಿಳಿದು ಬಂದಿದೆ. ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಸಮುದಾಯ ಭವನದ ಮೇಲಂತಸ್ತಿನ ಕಟ್ಟಡ ನಿರ್ಮಾಣಕ್ಕೆ ಅನುದಾನ ಒದಗಿಸಿದ ನಿಕಟಪೂರ್ವ ಮುಖ್ಯಮಂತ್ರಿ…

Read More