Author: admin

ಬಂಟ್ವಾಳ: ವಿದುಷಿ ವಿದ್ಯಾ ಮನೋಜ್ ನಿರ್ದೇಶನದ, ಕಲ್ಲಡ್ಕದ ಕಲಾನಿಕೇತನ ಡ್ಯಾನ್ಸ್ ಫೌಂಡೇಶನ್, ಭರತನಾಟ್ಯ ಸಂಸ್ಥೆಯ 25ನೇ ವರ್ಷದ ಅಂಗವಾಗಿ ರಜತ ಕಲಾಯಾನ ಸರಣಿ ಕಾರ್ಯಕ್ರಮದ ಪ್ರಯುಕ್ತ ನ. 28, 29, 30ರಂದು ಭಾವಾಭಿವ್ಯಕ್ತಿ ಕಾರ್ಯಕ್ರಮ ಕಲ್ಲಡ್ಕದ ಕಲಾನಿಕೇತನದಲ್ಲಿ ಆರಂಭಗೊಂಡಿದ್ದು ಶುಕ್ರವಾರ ಸಂಜೆ ನಡೆದ ಖ್ಯಾತ ನೃತ್ಯ ಗುರುಗಳಾದ ವಿದುಷಿ ಶೀಲ ಚಂದ್ರಶೇಖರ್ ಹಾಗೂ ದೀಪ್ತಿ ರಾಧಕೃಷ್ಣ ಅವರ ಭರತನಾಟ್ಯ ಕಾರ್ಯಕ್ರಮ ಸಂಸ್ಥೆಯ ವಿದ್ಯಾರ್ಥಿಗಳನ್ನು ಹಾಗೂ ನೆರೆದ ಪ್ರೇಕ್ಷಕ ವರ್ಗವನ್ನು ಮಂತ್ರ ಮುಗ್ದಗೊಳಿಸಿತು. ಭಾನುಮತಿ ನೃತ್ಯ ಕಲಾಮಂದಿರಂ ಇದರ ನಿರ್ದೇಶಕಿ ಮತ್ತು ಜೈನ್ (ಡಿಮ್ಡ್ ಟು ಬಿ) ಯೂನಿವರ್ಸಿಟಿ ಬೆಂಗಳೂರು ಇದರ ಅತಿಥಿ ಉಪನ್ಯಾಸಕರಾಗಿರುವ ಗುರು ವಿದುಷಿ ಶೀಲಾ ಚಂದ್ರಶೇಖರ್ ಹಾಗೂ ಭಾನುಮತಿ ನೃತ್ಯ ಕಲಾಮಂದಿರಂ ಶಿಷ್ಯೆ ಹಾಗೂ ಜೈನ್ (ಡಿಮ್ಡ್ ಟು ಬಿ) ಯೂನಿವರ್ಸಿಟಿ ಬೆಂಗಳೂರು ಇಲ್ಲಿನ ಸಂಶೋಧಕಿ ಮತ್ತು ಉಪನ್ಯಾಸಕರಾಗಿರುವ ದೀಪ್ತಿ ರಾಧಾಕೃಷ್ಣ ಇವರಿಂದ‌ ಭರತನಾಟ್ಯ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದ್ದು ಮೊದಲ ದಿನ ಇಬ್ಬರ ಭರತನಾಟ್ಯ ಕಾರ್ಯಕ್ರಮ ನಡೆಯಿತು. ಖ್ಯಾತ ನೃತ್ಯ…

Read More

ಬಂಟ್ವಾಳ: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಇದರ ಆಶ್ರಯದಲ್ಲಿ ನ.27 ಮತ್ತು 28 ರಂದು ಶಿವಮೊಗ್ಗದಲ್ಲಿ ನಡೆದ ಪದವಿ ಪೂರ್ವ ವಿದ್ಯಾರ್ಥಿಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಕಲ್ಲಡ್ಕ ಶ್ರೀ ರಾಮ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯೂಸಿ ವಿದ್ಯಾರ್ಥಿ ಬೆನಝೀರ್ ಲಿಂಗ್ ದೋದ್ ಬಾಕ್ಸಿಂಗ್ ನಲ್ಲಿ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ ಗೆದ್ದುಕೊಂಡು ಜಿಲ್ಲೆಗೆ ಕೀರ್ತಿ ತಂದಿದ್ದಾನೆ. ಈತ ರಾಜೇಶ್ ಬ್ರಹ್ಮರಕೂಟ್ಲು ಅವರಿಂದ ಮಾರ್ಷಲ್ ಆರ್ಟ್ ತರಬೇತಿ ಪಡೆಯುತ್ತಿದ್ದಾನೆ. ರಾಜೇಶ್ ಬ್ರಹ್ಮರಕೂಟ್ಲು ಅವರು ನೆತ್ತರಕೆರೆ ಸರಕಾರಿ ಶಾಲೆಯಲ್ಲಿ ಕರಾಟೆ, ಜೂಡೋ, ಕಲರಿ, ಸಿಲಂಬಂ, ಬಾಕ್ಸಿಂಗ್, ಸ್ಕೇಟಿಂಗ್ ಮೊದಲಾದ ಮಾರ್ಷಲ್ ಆರ್ಟ್ ತರಬೇತಿಯನ್ನು ವಿದ್ಯಾರ್ಥಿಗಳಿಗೆ ನೀಡುತ್ತಿದ್ದಾರೆ. ಬೆನಝೀರ್ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಜೂಡೋ ಸ್ಪರ್ಧೆಯಲ್ಲೂ ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾನೆ

Read More

ಬಂಟ್ವಾಳ: ಸಮುದಾಯದ ಆರೋಗ್ಯಕ್ಕಾಗಿ ಅನೇಕ ಕಾರ್ಯಕ್ರಮಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ ಮಾಡಿದೆ. ನಮ್ಮ ಆಹಾರ ಪದ್ದತಿ, ಜೀವನ ಶೈಲಿಯಿಂದಾಗಿ ಕಾನ್ಸರ್‌ನಂತಹ ಮಾರಕ ರೋಗಳು ಬಾಧಿಸುತ್ತವೆ, ದುಶ್ಚಟಗಳಿಂದ ಆರೋಗ್ಯ ಸಮಸ್ಯೆ ಕಾಣುತ್ತವೆ. ಉತ್ತಮವಾದ ಜೀವನ ಶೈಲಿಯನ್ನು ರೂಢಿಸಿಕೊಂಡಾಗ ಆರೋಗ್ಯದಿಂದ ಇರಲು ಸಾಧ್ಯವಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ದ.ಕ. ಜಿಲ್ಲಾ ನಿರ್ದೇಶಕ ದಿನೇಶ್ ಡಿ. ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಇದರ ವಗ್ಗ ವಲಯದ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ವಾಮದಪದವು, ಜ| ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಇದರ ಸಹಯೋಗದೊಂದಿಗೆ ವಾಮದಪದವು ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ನಡೆದ ಆರೋಗ್ಯ ಉಚಿತ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಜಯರಾಮ್ ಅಧ್ಯಕ್ಷತೆ ವಹಿಸಿ ಮಾತನಾಡಿ ನಾವು ಎಲ್ಲವನ್ನೂ ಪ್ರಕೃತಿಯಿಂದ ಪಡೆದುಕೊಳ್ಳುತ್ತೇವೆ, ಆತ್ಮಶಕ್ತಿ ಮತ್ತು ಚೈತನ್ಯ ದೇವರ ಸ್ವರೂಪವಾಗಿರುತ್ತದೆ. ನಮ್ಮ ಆಹಾರ ವಿಹಾರ ಉತ್ತಮವಾಗಿದ್ದಾಗ ಆರೋಗ್ಯವೂ…

Read More

ಬಂಟ್ವಾಳ: ಇಲ್ಲಿನ ತಾಲೂಕು ಪಂಚಾಯತಿ ಮಾಜಿ ಸದಸ್ಯ, ತುಂಬೆ ನಿವಾಸಿ ಸೋಮಪ್ಪ ಕೋಟ್ಯಾನ್ ತುಂಬೆ ಅವರು ಅಲ್ಪಕಾಲದ ಅಸೌಖ್ಯದಿಂದ ಗುರುವಾರ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಒರ್ವ ಪುತ್ರಿಯನ್ನು ಅಗಲಿದ್ದಾರೆ. ತುಂಬೆ ಗ್ರಾಮ ಪಂಚಾಯತಿ ಸದಸ್ಯರಾಗಿ, ಬಂಟ್ವಾಳ ತಾಲೂಕು ಪಂಚಾಯತಿ ಸದಸ್ಯರಾಗಿ, ಭಾರತೀಯ ಜನತಾ ಪಾರ್ಟಿಯ ಮಂಗಳೂರು ಮಂಡಲದ ಪ್ರಮುಖರಾಗಿ ಕಾರ್ಯನಿರ್ವಹಿಸಿದ್ದರು. ತುಂಬೆ ಶ್ರೀ ಶಾರದಾ ಸೇವಾ ಪ್ರತಿಷ್ಠಾನದ ಸ್ಥಾಪಕ ಕೋಶಾಧಿಕಾರಿಯಾಗಿ ಆಯ್ಕೆಗೊಂಡು ನಿರಂತರ ೨೫ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ

Read More

ಪುತ್ತೂರು. ಇಲ್ಲಿನ ಭಾರತ್ ಸಿನೆಮಾಸ್ ನಲ್ಲಿ ಬುಧವಾರ ಮಧ್ಯಾಹ್ನ ರೂಪೇಶ್ ಶೆಟ್ಟಿ ನಿರ್ದೇಶಿಸಿ ನಾಯಕ‌ ನಟನಾಗಿ ಅಭಿನಯಿಸಿರುವ ತುಳು ಚಿತ್ರ ‘ಜೈ’ ಯ ವಿಶೇಷ ಪ್ರದರ್ಶನ ನಡೆಯಿತು. ಮಂಗಳೂರಿನ ಎಂ.ಜಿ. ಮೋಟರ್ಸ್ ಪ್ರಾಯೋಜಕತ್ವದಲ್ಲಿ ಬಂಟ್ವಾಳ, ವಿಟ್ಲ, ಬೆಳ್ತಂಗಡಿ, ಪುತ್ತೂರು, ಸುಳ್ಯ, ಕಡಬ ಹಾಗೂ ಮಡಿಕೇರಿ ಸೇರಿದಂತೆ ವಿವಿಧ ಪ್ರದೇಶಗಳಿಂದ ಆಗಮಿಸಿದ್ದ ಮಾಧ್ಯಮ ಮತ್ತು ಪತ್ರಿಕಾ ಪ್ರತಿನಿಧಿಗಳು ಹಾಗೂ ಅವರ ಕುಟುಂಬ ವರ್ಗದವರಿಗಾಗಿ ಈ ವಿಶೇಷ ಪ್ರದರ್ಶನ ಆಯೋಜಿಸಲಾಗಿತ್ತು. ಪತ್ರಕರ್ತರ ಸೇವೆಯನ್ನು ಗೌರವಿಸುವ ಉದ್ದೇಶದಿಂದ, ಮಾಧ್ಯಮ ಪ್ರತಿನಿಧಿಗಳು ಹಾಗೂ ಅವರ ಕುಟುಂಬ ಸದಸ್ಯರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದ್ದು, ಚಿತ್ರ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ಮುಖ್ಯ ಅತಿಥಿಗಳಾಗಿ ಅಜಯ್ ಪುರುಷೋತ್ತಮ್ ಶೆಟ್ಟಿ ಹಾಗೂ ‘ಜೈ’ ಚಿತ್ರದ ನಾಯಕ ನಟ ರೂಪೇಶ್ ಶೆಟ್ಟಿ ಉಪಸ್ಥಿತರಿದ್ದರು. ಸಿನಿಮಾ ತಂಡ ಹಾಗೂ ಪ್ರಾಯೋಜಕರು ಪತ್ರಿಕಾ ವಲಯದ ಬೆಂಬಲಕ್ಕೆ ಕೃತಜ್ಞತೆ ವ್ಯಕ್ತಪಡಿಸಿದರು.

Read More

ಬಂಟ್ವಾಳ: ಪಾಣೆಮಂಗಳೂರಿನ ನೇತ್ರಾವತಿ ನದಿಗೆ ಹಾರಿ ಮಹೊಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡಿದ್ಸಾರೆ. ಮಹಿಳೆ ಸೀರೆ ಉಟ್ಟುಕೊಂಡಿದ್ದು ಗುರುತು ಪತ್ತೆಯಾಗಿಲ್ಲ. ಸ್ಥಳೀಯ ಈಜುಗಾರರು ದೋಣಿಯ ಮೂಲಕ ಮಹಿಳೆಯ ಮೃತದೇಹವನ್ನು ನದಿಯ ಬದಿಗೆ ತಂದಿಟ್ಟಿದ್ದಾರೆ. ಮಹಿಳೆಯ ಜೊತೆಗೆ ಪುರಷರೋರ್ವರು ನದಿಗೆ ಹಾರಿರುವುದಾಗಿ ಸ್ಥಳೀಯರು ತಿಳಿಸಿದ್ದು ಹುಡುಕಾಟ ನಡೆಯುತ್ತಿದೆ.

Read More

ಬಂಟ್ವಾಳ: ಇಲ್ಲಿನ ಮೊಡಂಕಾಪು ಚೆನ್ನರಪಾಲು ಎಂಬಲ್ಲಿ ಮಂಗಳವಾರ ರಾತ್ರಿ ನಡೆದ ಶ್ರೀ ದೇವಿ ಮಹಾತ್ಮೆ ಯಕ್ಷಗಾನದ ವೇಳೆ ದೇವಿಯ ಶಿರದಲ್ಲಿ ಹಕ್ಕಿಯಿಂದು ಕುಳಿತು ಅಚ್ಚರಿ ಮೂಡಿಸಿದೆ. ಇಲ್ಲಿನ ಡೊಂಬಯ್ಯ ಕುಲಾಲ್ ಸಹೋದರರು ವತಿಯಿಂದ‌ ಕಟೀಲು 6ನೇ ಮೇಳದ ಯಕ್ಷಗಾನ ನಡೆದಿತ್ತು. ರಾತ್ರಿ 11 ಗಂಟೆಯ ವೇಳೆಗೆ ಶ್ರೀ ದೇವಿ ಕದಂಬ ವನದಲ್ಲಿ ಉಯ್ಯಾಲೆಯಲ್ಲಿ ತೂಗಾಡುವ ಸಂದರ್ಭ ಎಲ್ಲಿಂದಲೋ ಹಾರಿ ಬಂದ ಹಕ್ಕಿಯೊಂದು ಶ್ರೀ ದೇವಿ ವೇಷಧಾರಿಯ ಮಡಿಲಲ್ಲಿ ಕುಳಿತು ಅಚ್ಚರಿ ಮೂಡಿಸಿತು. ಬಳಿಕ ಅಲ್ಲಿಂದ ನಿಧಾನವಾಗಿ ಮೇಲೆರುತ್ತಾ ಶಿರದಲ್ಲಿ ಕುಳಿತಿದ್ದರೂ ಶ್ರೀ ದೇವಿ ಪಾತ್ರದಾರಿ ನಗು ನಗುತ್ತಲೆ ಹಕ್ಕಿಯ ಚಲನೆಯನ್ನು ಗಮನಿಸುತ್ತಿದ್ದರು. ಇತ್ತ ಯಕ್ಷಗಾನ ನೋಡಲು ಬಂದ ಪ್ರೇಕ್ಷಕರು ಕೂಡ ದೇವಿಯ ಶಿರ ದಲ್ಲಿ ನಿರ್ಭಯವಾಗಿ ಕುಳಿತಿರುವ ಹಕ್ಕಿಯನ್ನು ನೋಡಿ ಸಂಭ್ರಮ ಪಟ್ಟರು.

Read More

ಬಂಟ್ವಾಳ: ಜಿಲ್ಲೆಯ ಪ್ರಸಿದ್ದ ಕಾರಣಿಕ ದೈವಸ್ಥಾನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ವರ್ಷಾವಧಿ ಕೋಲವು ನ.25ರಂದು ಮಂಗಳವಾರ ರಾತ್ರಿ 12 ಗಂಟೆಗೆ ನಡೆಯಲಿದೆ. ನ.24ರಂದು ಸೋಮವಾರ ಸಂಜೆ 5.10ಕ್ಕೆ ಕೊಪ್ಪರಿಗೆ ಮುಹೂರ್ತ ನಡೆಯಲಿದೆ. 5.15ಕ್ಕೆ ದೀಪೋಜ್ವಲನೆಗೊಂಡು ಕುಣಿತ ಭಜನೆ, ರಾತ್ರಿ 7.30ಕ್ಕೆ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ನ.25ರಂದು ಮಂಗಳವಾರ ಬೆಳಿಗ್ಗೆ ಗಂಟೆ 8ರಿಂದ ನವಕ ಕಲಶ ಪ್ರದಾನ ಮತ್ತು 12 ತೆಂಗಿನಕಾಯಿ ಗಣಹೋಮ, ಬೆಳಿಗ್ಗೆ 10ರಿಂದ ನಾಗತಂಬಿಲ, 12.30ಕ್ಕೆ ಸಾರ್ವಜನಿಕ ಅನ್ನಸಂತರ್ಪಣೆ, ಅಪರಾಹ್ನ 2.30ರಿಂದ ಭಜನಾ ಸಂಕೀರ್ತನೆ ನಡೆಯಲಿದೆ. ಸಂಜೆ 6.45ಕ್ಕೆ ಪಣೋಲಿಬೈಲು ಶ್ರೀ ಕೃಷ್ಣ ಮಂದಿರದಿಂದ ಶ್ರೀ ಕ್ಷೇತ್ರಕ್ಕೆ ಮೆರವಣಿಗೆ ಆಗಮಿಸಲಿದೆ. 7 ರಿಂದ ವಿವಿಧ ಸಾಂಸ್ಕೃತಿಕ ವೈವಿಧ್ಯ, 7.45ಕ್ಕೆ ಸಂಗೀತ ಗಾನ ಸಂಭ್ರಮ 9.15ಕ್ಕೆ ಹಾಸ್ಯ ನಾಟಕ ನಡೆಯಲಿದೆ. ರಾತ್ರಿ 10ಕ್ಕೆ ಭಂಡಾರದ ಮನೆಯಿಂದ ದೈವಗಳ ಭಂಡಾರ ಬಂದು 12ಕ್ಕೆ ವರ್ಷಾವಧಿ ಕೋಲ ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೈವದ ಸಿರಿಮುಡಿ ಗಂಧ ಪ್ರಸಾದವನ್ನು ಸ್ವೀಕರಿಸುವಂತೆ…

Read More

ಬಂಟ್ವಾಳ: ಮಡಕ್ಕಿಲ ಬಂಜನ್ ಕುಟುಂಬದ ವಾರ್ಷಿಕ ಪರ್ವ ಸೇವೆ ಕುಟುಂಬದ ಮೂಲ ಮನೆಯಲ್ಲಿ ತನಿಯಪ್ಪ ಮೂಲ್ಯ ಅವರ ಉಪಸ್ಥಿತಿಯಲ್ಲಿ ಸಮಿತಿ ಅಧ್ಯಕ್ಷ ಸುರೇಶ್ ಬಂಗೇರ ಹಾಗೂ ಕುಟುಂಬ ಸದಸ್ಯರ ಭಾಗವಹಿಸುವಿಕೆಯಿಂದಿಗೆ ನಡೆಯಿತು. ಬೆಳಿಗ್ಗೆ ಗಣ ಹೋಮ, ದೈವದ ಮುಡಿಪು ಕಟ್ಟುವ ಮೂಲಕ ದೇವತಾ ಕಾರ್ಯ ಜರಗಿತು. ಕುಟುಂಬದ ಸದಸ್ಯರಾದ ಅನಿಲ್ ಕುಮಾರ್ ಮತ್ತು ತನುಜ ಅವರ ಪುತ್ರಿ ಅಪೂರ್ವ ದಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾದ ಹಿನ್ನಲೆಯಲ್ಲಿ ಅವರನ್ನು ಸನ್ಮಾನಿಸಲಾಯಿತು. 100 ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕವನ್ನು ಕುಟುಂಬದ ಕ್ಷೇಮ ನಿಧಿಯಿಂದ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಡಕ್ಕಿಲ ಕುಟುಂಬದ ಗೌರವ ಅಧ್ಯಕ್ಷ ತನಿಯಪ್ಪ ಮೂಲ್ಯ, ಅಧ್ಯಕ್ಷ ಸುರೇಶ್ ಬಂಗೇರ ಸಂಚಯಗಿರಿ ಉಪಾಧ್ಯಕ್ಷ ಬಾಲಕೃಷ್ಣ ರೇಷ್ಮೆರೋಡ್, ದಿನೇಶ್ ಬರ್ಕಾಜೆ, ಕೋಶಾಧಿಕಾರಿ ಗುರುಪ್ರಸಾದ್,ಜೊತೆ ಕಾರ್ಯದರ್ಶಿ ಸದಾನಂದ ಬ್ರಾಹ್ಮರಿ, ಪ್ರವೀಣ್ ಬಳ್ಳಮಂಜ, ವಾಸು ಮೂಲ್ಯ ಬಳ್ಳಮಂಜ ಉಪಸ್ಥಿತರಿದ್ದರು. ಸತೀಶ್ ಬಂಗೇರ ಕಾರ್ಯಕ್ರಮ ನಿರೂಪಿಸಿದರು.

Read More

ಬಂಟ್ವಾಳ: ವಿದ್ಯಾಸಂಸ್ಥೆಗಳು ದೇವ ಮಂದಿರವಿದ್ದಂತೆ. ಮನಸ್ಸು ಶುದ್ದವಾಗಿದ್ದಾಗ ದಿನದ ಕೆಲಸಕಾರ್ಯಗಳು ನಮಗೆ ಅನುಕೂಲಕರವಾಗಿರುತ್ತದೆ. ವಿದ್ಯಾರ್ಥಿಗಳಲ್ಲಿ ಜ್ಞಾನದ ಹಸಿವು ಇರಬೇಕು, ತಾಳ್ಮೆ ಇದ್ದಾಗ ಸಾಧಕರಾಗಲು ಸಾಧ್ಯವಿದೆ ಎಂದು ಬಿ. ಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಅಭಿವೃದ್ದಿ ಸಮಿತಿ ಉಪಾಧ್ಯಕ್ಷೆ ರಜನಿ ಚಿಕ್ಕಯ ಮಠ ಹೇಳಿದರು. ಮಂಗಳವಾರ ಕಾಲೇಜಿನಲ್ಲಿ ನಡೆದ ವಾರ್ಷಿಕ ಪ್ರತಿಭಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪುರಸಭೆ ಸದಸ್ಯೆ ಝೀನತ್ ಫಿರೋಜ್, ಪುತ್ತೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಯಶೋಧಾ ಭಾಗವಹಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಯೂಸುಫ್ ವಿಟ್ಲ ಸ್ವಾಗತಿಸಿದರು, ಉಪಾನ್ಯಾಸಕ ಇರ್ಷಾದ್ ವಂದಿಸಿದರು. ಉಪನ್ಯಾಸಕಿ ಹೇಮಾ ಕಾರ್ಯಕ್ರಮ ನಿರೂಪಿಸಿದರು.

Read More