Author: admin

ಬಂಟ್ವಾಳ: ಧರ್ಮದರ್ಶಿ ಹರಿಕೃಷ್ಣ ಪುನರೂರು ಹಾಗೂ ಶ್ರೀ ಬೆಳ್ಳಿಪ್ಪಾಡಿ ರಮಾನಾಥ ರೈ ಅಭಿನಂದನಾ ಸಮಿತಿ ವತಿಯಿಂದ ಧರ್ಮದರ್ಶಿ ಹರಿಕೃಷ್ಣ ಪುನರೂರು ಹಾಗೂ ಶ್ರೀ ಬೆಳ್ಳಿಪ್ಪಾಡಿ ರಮಾನಾಥ ರೈಯವರಿಗೆ ಅಭಿನಂದನಾ ಸಮಾರಂಭ ಮಂಗಳವಾರ ಬಿ.ಸಿ.ರೋಡಿನ ಸ್ಪರ್ಶಾಕಲಾ ಮಂದಿರದಲ್ಲಿ ನಡೆಯಿತು. ಎಡನೀರು ಮಠದ ಶಂಕರಾಚಾರ್ಯ, ತೋಟಕಾಚಾರ್ಯ ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಮಹಾಸ್ವಾಮಿ ಕಾರ್ಯಕ್ರಮದಲ್ಲಿ ದೀಪಪ್ರಜ್ವಲನೆಗೈದು ಆಶೀರ್ವಚನ ನೀಡಿದರು. ಹರಿಕೃಷ್ಣ ಪುನರೂರು ಹಾಗೂ ರಮಾನಾಥ ರೈ ಇಬ್ಬರೂ ಸಮಾಜದ ಸೇವೆಯಲ್ಲಿ ತೊಡಗಿಸಿಕೊಂಡವರು. ಧಾರ್ಮಿಕ ನೆಲೆಗಟ್ಟಿನಲ್ಲಿ ಬದುಕಿದ ಈರ್ವರು, ಜಾತ್ಯಾತೀತವಾಗಿ, ಪಕ್ಷತೀತವಾಗಿ ಅಭಿನಂದಿಸಲ್ಪಟ್ಟಿರುವುದು ಸಂತೋಷ ನೀಡಿದೆ. ಸಮಾಜವನ್ನು ಒಂದುಗೂಡಿಸುವುದು ಧರ್ಮ, ಅವರು ನೀಡಿದ ಸೇವೆ ಇಂದು ಅವರ ಮೇಲಿನ ಅಭಿಮಾನದಿಂದ ಜನರನ್ನು ಇಲ್ಲಿ ಒಂದುಗೂಡಿಸಿದೆ ಎಂದರು. ಅಭಿನಂದನೆ ಸ್ವೀಕರಿಸಿದ ಮಾಜಿ ಸಚಿವ ಬಿ. ರಮಾನಾಥ ರೈ ಮಾತನಾಡಿ ಸಾರ್ವಜನಿಕ ಬದುಕು ಸೇವೆಗಾಗಿ ಇರುವುದು. ಅವಕಾಶ ಸಿಕ್ಕಾಗ ಪ್ರಾಮಾಣಿಕವಾಗಿ ಸೇವೆ ಮಾಡುವುದು ನಮ್ಮ ಕರ್ತವ್ಯ. ಜಾತಿ ಧರ್ಮ ಮೀರಿ ಮನುಷ್ಯರಾಗಿ ಬಾಳಬೇಕೆನ್ನುವ ಆಶಯದೊಂದಿಗೆ ಭೇದ ರಹಿತವಾಗಿ ಬದುಕಿಕೊಂಡು…

Read More

ಬಂಟ್ವಾಳ: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಮಂಗಳೂರು ಇದರ ಆಶ್ರಯದಲ್ಲಿ ಸಂತ ಜೋಸೆಫರ ಪದವಿ ಪೂರ್ವ ಕಾಲೇಜು ಬಜ್ಪೆ ಇದರ ಸಹಕಾರದೊಂದಿಗೆ ಸೋಮವಾರ ನಡೆದ ಪದವಿ ಪೂರ್ವ ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಕಲ್ಲಡ್ಕ ಶ್ರೀ ರಾಮ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯೂಸಿ ವಿದ್ಯಾರ್ಥಿ ಬೆನಝೀರ್ ಲಿಂಗ್ ದೋದ್ ಬಾಕ್ಸಿಂಗ್ ನಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಗೆದ್ದುಕೊಂಡಿದ್ದಾನೆ. ಈತ ರಾಜೇಶ್ ಬ್ರಹ್ಮರಕೂಟ್ಲು ಅವರಿಂದ ಮಾರ್ಷಲ್ ಆರ್ಟ್ ತರಬೇತಿ ಪಡೆಯುತ್ತಿದ್ದಾನೆ. ರಾಜೇಶ್ ಬ್ರಹ್ಮರಕೂಟ್ಲು ಅವರು ನೆತ್ತರಕೆರೆ ಸರಕಾರಿ ಶಾಲೆಯಲ್ಲಿ ಕರಾಟೆ, ಜೂಡೋ, ಕಲರಿ, ಸಿಲಂಬಂ, ಬಾಕ್ಸಿಂಗ್, ಸ್ಕೇಟಿಂಗ್ ಮೊದಲಾದ ಮಾರ್ಷಲ್ ಆರ್ಟ್ ತರಬೇತಿಯನ್ನು ವಿದ್ಯಾರ್ಥಿಗಳಿಗೆ ನೀಡುತ್ತಿದ್ದಾರೆ. ಬೆನಝೀರ್ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಜೂಡೋ ಸ್ಪರ್ಧೆಯಲ್ಲೂ ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾನೆ

Read More

ಬಂಟ್ವಾಳ: ಬಿ.ಸಿ. ರೋಡ್ ಬಳಿ ನಾರಾಯಣಗುರು ವೃತ್ತಕ್ಕೆ ಇನೋವಾ ಕಾರುಡಿಕ್ಕಿಯಾಗಿ ಮೂವರ ದಾರುಣವಾಗಿ ಸಾವಿಗೀಡಾಗಿದ್ದಾರೆ. ನಿನ್ನೆ ಬೆಳಗಿನ ಜಾವ ಘಟನೆ ನಡೆದಿದ್ದು ಬೆಂಗಳೂರಿನಿಂದ ಉಡುಪಿಯ ಕಡೆಗೆ ತೆರಳುವಾಗ ಈ ದುರ್ಘಟನೆ ನಡೆದಿದೆ. ಬೆಂಗಳೂರು ನಿವಾಸಿಗಳಾದ ರವಿ (64), ನಂಜಮ್ಮ (75), ರಮ್ಯಾ(23) ಎಂಬವರುಗಳು ಮೃತಪಟ್ಟವರು. ಗಾಯಾಳುಗಳಾದ ಸುಶೀಲ, ಕೀರ್ತಿ ಕುಮಾರ್, ಕಿರಣ್, ಬಿಂದು, ಪ್ರಶಾಂತ್ ಹಾಗೂ ಚಾಲಕ ಸುಬ್ರಹ್ಮಣ್ಯ ಸೇರಿದಂತೆ ಉಳಿದ 6 ಜನರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬಂಟ್ವಾಳ: ದ.ಕ. ಜಿಲ್ಲಾ ಆಟೋ ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘಗಳ ಒಕ್ಕೂಟ ಇದರ ಬಂಟ್ವಾಳ ತಾಲೂಕು ಘಟಕದ ಪ್ರಥಮ ಮಹಾಸಭೆಯು ನ.18ರಂದು ಮಂಗಳವಾರ ಬೆಳಿಗ್ಗೆ 9.30ಕ್ಕೆ ಬಿ.ಸಿ.ರೋಡಿನ ಲಯನ್ಸ್ ಸೇವಾಮಂದಿರದಲ್ಲಿ ನಡೆಯಲಿದೆ. ಮಂಗಳೂರು ಘಟಕದ ಅಧ್ಯಕ್ಷ ಭರತ್ ಕುಮಾರ್ ಮಂಗಳೂರು ಅಧ್ಯಕ್ಷತೆ ವಹಿಸುವರು, ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು ಉದ್ಘಾಟಿಸುವರು, ಮುಖ್ಯ ಅತಿಥಿಗಳಾಗಿ ಹೆಚ್ಚವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮರಡ್ಡಿ, ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಚರಣ್ ಕೆ. ವಕೀಲ ಕೆ. ರಮೇಶ್ ಉಪಾಧ್ಯಾಯ, ಉದ್ಯಮಿ ಸುನೀಲ್ ಬಿ., ಮಂಗಳೂರು ಘಟಕದ ಗೌರವಾಧ್ಯಕ್ಷ ಅಶೋಕ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಲೋಕೇಶ್ ಶೆಟ್ಟಿ, ಬಂಟ್ವಾಳ ತಾಲೂಕು ರಿಕ್ಷಾ ಚಾಲಕ ಮಾಲಕ ಸಂಘದ ಮಾಜಿ ಅಧ್ಯಕ್ಷ ವಿಶ್ವನಾಥ ಚೆಂಡ್ತಿಮಾರ್ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ

Read More

ಬಂಟ್ವಾಳ : ಸರ್ಕಾರಿ ಶಾಲೆ ಬೆಳವಣಿಗೆಯಲ್ಲಿ ಪೋಷಕರ ಹಾಗೂ ಸಮುದಾಯದ ಪಾತ್ರ ಬಹಳ ಮುಖ್ಯ ಎಂದು ಜೆಸಿಐ ತರಬೇತುದಾರ ಸಂದೀಪ್ ಸಾಲ್ಯಾನ್ ಹೇಳಿದರು. ಅವರು ಶುಕ್ರವಾರ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಇಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಅದ್ದೂರಿಯಾಗಿ ನಡೆದ ಪೋಷಕರ ಹಾಗೂ ಶಿಕ್ಷಕರ ಮಹಾಸಭೆ -2025 ರಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶಿಕ್ಷಕರ ಹಾಗೂ ಪೋಷಕರನ್ನು ಉದ್ದೇಶಿಸಿ ಮಾತನಾಡಿದರು. ಮಕ್ಕಳು ಶಿಕ್ಷಕರ ಜೊತೆ ದಿನದಲ್ಲಿ ಕೇವಲ ಏಳು ಗಂಟೆ ಮಾತ್ರ ಇದ್ದು ಹೆಚ್ಚಿನ ಸಮಯ ಪೋಷಕರ ಜೊತೆ ಇರುವುದರಿಂದ ಮಕ್ಕಳನ್ನು ಉತ್ತಮ ಪ್ರಜೆಯಾಗಿ ರೂಪಿಸುವಲ್ಲಿ ಪೋಷಕರ ಪಾಲು ಬಹುದೊಡ್ಡದು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರವಿ ಅಂಚನ್ ವಹಿಸಿದ್ದರು.ಈ ಸಂದರ್ಭದಲ್ಲಿ ಮಕ್ಕಳಿಗೆ ಮಕ್ಕಳ ದಿನಾಚರಣೆ ಪ್ರಯುಕ್ತ ಮಾಡಿದ ವಿವಿಧ ಸ್ಪರ್ಧೆಯ ಬಹುಮಾನ ವಿತರಿಸಲಾಯಿತು. ವೇದಿಕೆಯಲ್ಲಿ ಶಾಲಾ ಸಮಿತಿಯ ಉಪಾಧ್ಯಕ್ಷೆ ಲಕ್ಷ್ಮಿ ಪ್ರಕಾಶ್, ತಾಯಂದಿರ ಸಮಿತಿಯ ಉಪಾಧ್ಯಕ್ಷ ರೇಖಾ,ಮಾಧ್ಯಮ ಮಿತ್ರ ಚಿನ್ನಾ ಕಲ್ಲಡ್ಕ…

Read More

ಬಂಟ್ವಾಳ: ಸಮಾನ ಮನಸ್ಕರು ಸೇರಿ ಸಮಾಜದ ಅಶಕ್ತರಿಗೆ ನೆರವಾಗುವ ಉದ್ದೇಶದಿಂದ ಕರುನಾಡು ಚಾರಿಟೇಬಲ್ ಟ್ರಸ್ಟ್ (ರಿ.) ಕರ್ನಾಟಕ ಎಂಬ ನೂತನ ಸಂಸ್ಥೆಯನ್ನು ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಉದ್ಘಾಟಿಸಲಾಗಿದ್ದು ನೂತನ ಟ್ರಸ್ಟ್ ನ ಸ್ಥಾಪಕ ಅಧ್ಯಕ್ಷರಾಗಿ ವಿಶ್ವನಾಥ್ ಪಿ ಅರಳ ಇವರನ್ನು ಆಯ್ಕೆ ಮಾಡಲಾಗಿದೆ. ಉಪಾಧ್ಯಕ್ಷರಾಗಿ ಭವ್ಯಶ್ರೀ ಅಂಚನ್ ಕುಪ್ಪೆಪದವು, ಕಾರ್ಯದರ್ಶಿಯಾಗಿ ಕುಶನಾಂದ ಹಾಗೂ ಕೋಶಾಧಿಕಾರಿಯಾಗಿ ವಸಂತ ಮುದಿಮರ, ಟ್ರಸ್ಟ್ ನ ಗೌರವ ಅಧ್ಯಕ್ಷರಾಗಿ ಚಂದು ಕೋಟ್ಯಾನ್ ಕುಪ್ಪೆಪದವು ಇವರನ್ನು ಆಯ್ಕೆ ಮಾಡಲಾಗಿದೆ. ಈ ಸಂದರ್ಭ ಟ್ರಸ್ಟ್ ನ ಎಲ್ಲಾ ಸೇವಾ ಮಾಣಿಕ್ಯರು ಈ ಹಾಜರಿದ್ದರು.

Read More

ಬಂಟ್ವಾಳ: ಸರಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ, ಕರ್ನಾಟಕ ಒಲಿಂಪಿಕ್ಸ್ ಸಂಸ್ಥೆ ವತಿಯಿಂದ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕ 4ನೇ ಮಿನಿ ಕ್ರೀಡಾಕೂಟದಲ್ಲಿ ಕೊಡ್ಮಾಣ್ ಸರಕಾರಿ ಶಾಲೆಯ ವಿದ್ಯಾರ್ಥಿ ನಿ ಅನುಶ್ರೀ ಜೂಡೋ (44 ಕೆಜಿ ವಿಭಾಗ) ಪಂದ್ಯಾಟದಲ್ಲಿ ತೃತೀಯ ಸ್ಥಾನಿಯಾಗಿ ಕಂಚಿನ ಪದಕ ಗೆದ್ದಕೊಂಡಿದ್ದಾರೆ. ನ.2 ರಿಂದ ನ.9 ರವರೆಗೆ 4ನೇ ಮಿನಿ ಕ್ರೀಡಾಕೂಟ ನಡೆಯಲಿದ್ದು ಬಂಟ್ಚಾಳ ತಾಲೂಕಿನ ಗ್ರಾಮೀಣ ಭಾಗದ ಪ್ರತಿಭೆಯ ಈ ಸಾಧನೆ ಹೆಮ್ಮೆ ತಂದಿದೆ. ನೆತ್ತರಕೆರೆ ಸರಕಾರಿ ಶಾಲೆಯಲ್ಲಿ ಮಾರ್ಷಲ್ ಆರ್ಟ್ ತರಬೇತುದಾರರಾದ ಅಸ್ಮಿತಾ ರೈ ಹಾಗೂ ಹಂಸಿಕಾ ಅವರಿಂದ ಅನುಶ್ರೀ ತರಬೇತಿ ಪಡೆದಿದ್ದಾರೆ. ನೆತ್ತರಕೆರೆ ಶಾಲೆಯಲ್ಲಿ ಸ್ಥಳೀಯ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಮಾರ್ಷಲ್ ಆರ್ಟ್ ಗಳಾದ ಕರಾಟೆ, ಜೂಡೋ, ಕಳಾರಿ ಪೈಟ್ ಮತ್ತಿತರ ಯುದ್ದ ಕೌಶಲ್ಯ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದೆ. ವಿದ್ಯಾರ್ಥಿನಿಯ ಈ ಸಾಧನೆಗೆ ನೆತ್ತರಕೆರೆ ಶಾಲೆಯ ದಾಮೋದರ್ ನೆತ್ತರಕೆರೆ ಹಾಗೂ ಸಂತೋಷ್ ನೆತ್ತರಕೆರೆ ಹಾಗೂ ಕೊಡ್ಮಾಣ್…

Read More

ಬಂಟ್ವಾಳ: ಕುಡ್ಲ ಕುಲಾಲೆರ್ ಚಾರಿಟೇಬಲ್ ಸೇವಾ ಟ್ರಸ್ಟ್ ಮಂಗಳೂರು ನೂತನ ಸಂಸ್ಥೆ ಅಸ್ತಿತ್ವಕ್ಕೆ ಬಂದಿದ್ದು, ಬಂಟ್ವಾಳ ನಗರಯೋಜನಾ ಪಾಧ್ರಿಕಾರದ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ ಬಂಟ್ವಾಳ ಅವರು ಸ್ಥಾಪಕಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮೆಸ್ಕಾಂನ ನಿವೃತ್ತ ಎಂ.ಡಿ.ಮಂಜಪ್ಪ ಬಿಜೈ, ಮನಪಾ ಮಾಜಿ ಉಪಮೇಯರ್ ರಾಜೇಂದ್ರ ಕುಮಾರ್, ಪ್ರದಾನ ಕಾರ್ಯದರ್ಶಿಯಾಗಿ ನಿವೃತ್ತ ಮುಖ್ಯೋಪಾಧ್ಯಾಯ ಟಿ.ಸೇಸಪ್ಪ ಮೂಲ್ಯ, ಕೋಶಾಧಿಕಾರಿಯಾಗಿ ನಿವೃತ್ತ ಆದಾಯ ತೆರಿಗೆ ಅಧಿಕಾರಿ ವಿಶ್ವನಾಥ ಕುದಾಯಿಆಯ್ಕೆಗೊಂಡಿದ್ದಾರೆ. ಉಳಿದಂತೆ ಟ್ರಸ್ಟಿಗಳಾಗಿ ಪೃಥ್ವಿರಾಜ್ ಆರ್.ಕೆ. ಎಡಪದವು, ಸೋಮಯ್ಯ ಹನೈನಡೆ ಬೆಳ್ತಂಗಡಿ, ಸುಂದರ ಬಂಗೇರ ಆದ್ಯಪಾಡಿ, ಗಿರೀಶ್ ಎಂ.ಪಿ ಕುತ್ತಾರ್ ಮಂಗಳೂರು, ಚಂದ್ರಹಾಸ ಪಲ್ಲಿಪಾಡಿ, ಭಾಸ್ಕರ ಎಂ. ಪೆರುವಾಯಿ ಪುತ್ತೂರು, ದೇವಪ್ಪ ಕುಲಾಲ್ ಪಂಜಿಕಲ್ಲು, ರಮೇಶ್ ಬಾಳೆಹಿತ್ತು ಬೆಂಗಳೂರು, ಉಮೇಶ್ ಕೆ. ಬೆಂಗಳೂರು, ದಯಾನಂದ ಬಂಟ್ವಾಳ್, ಬಾಸ್ಕರ್ ಅಜೆಕಳ ಅವರು ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಟ್ರಸ್ಟ್‌ನ ಮೊದಲ ಸಭೆ ಮಂಗಳೂರಿನ ಹೊಟೇಲ್ ವುಡ್ ಲ್ಯಾಂಡ್‌ನಲ್ಲಿ ನಡೆದಿದ್ದು, ಕುಲಾಲ ಯುವಕ- ಯುವತಿಯರಿಗೆ ಮುಂದಿನ ಭವಿಷ್ಯಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ವಿವಿಧ…

Read More

ಬಂಟ್ವಾಳ: ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ನವೆಂಬರ್ ೯ ರಂದು ಬೆಳಗ್ಗೆ ಗಂಟೆ ೯ ರಿಂದ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಗುರುವಂದನಾ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ನಡೆಯಲಿದೆ ಎಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಬಂಟ್ವಾಳ ತಾಲೂಕಿನ ಬಿಲ್ಲವ ಸಮುದಾಯದ ಸರಕಾರಿ ಹಾಗೂ ಸರಕಾರೇತರ ಪ್ರಾಥಮಿಕ, ಪ್ರೌಢಶಾಲಾ, ಪದವಿಪೂರ್ವ ಕಾಲೇಜು, ಪದವಿ ಕಾಲೇಜು, ಸ್ನಾತಕೋತ್ತರ, ತಾಂತ್ರಿಕ, ವೈದ್ಯಕೀಯ ವಿಭಾಗದ ಒಟ್ಟು ೨೨೫ ಬೋಧಕ-ಬೋಧಕಿಯರಿಗೆ ಬಿಲ್ಲವ ಗುರುವಂದನಾ ಗೌರವಾಭಿನಂದನೆ ಹಾಗೂ ಜಿಲ್ಲಾ, ರಾಜ್ಯ ರಾಷ್ಟ್ರ ಮಟ್ಟದ ಸಾಧಕ ಗುರುಗಳಿಗೆ ಬಿಲ್ಲವ ಗುರುವಂದನಾ ಪುರಸ್ಕಾರ ಪ್ರದಾನ ಮಾಡಲಾಗುವುದು. ಬಂಟ್ವಾಳ ತಾಲೂಕಿನ ಸ್ನಾತಕೋತ್ತರ, ತಾಂತ್ರಿಕ, ವೈದ್ಯಕೀಯದ ಅರ್ಹ ೧೦೦ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಸುಮಾರು ೫ ಲಕ್ಷ ಮೊತ್ತದ ವಿದ್ಯಾರ್ಥಿ ವೇತನ ವಿತರಣೆ ನಡೆಯಲಿದೆ ಎಂದು ಮಾಹಿತಿ ನೀಡಿದರು. ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಮಾತನಾಡಿ ಮಂಗಳೂರಿನ ಡಯಟ್ ಸೆಂಟರ್‌ನ…

Read More

ಬಂಟ್ವಾಳ: ನಮ್ಮ ಆಹಾರ ಪದ್ದತಿ, ಜೀವನಶೈಲಿ ಹಾಗೂ ಪರಿಸರ ಮಾಲಿನ್ಯದಿಂದ ರೋಗಗಳು ಹೆಚ್ಚಾಗುತ್ತಿದೆ . ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸುವುದು ನಮ್ಮ ಆದ್ಯತೆಯಾಗಬೇಕು ಎಂದು ಬಂಟ್ವಾಳ ತಹಶೀಲ್ದಾರ್ ಜಿ.ಮಂಜುನಾಥ್ ಹೇಳಿದರು. ಕೇಂದ್ರ ಸರಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನದ ಆಶ್ರಯದಲ್ಲಿ ಬುಧವಾರ ಸೇವಾಂಜಲಿ ಸಭಾಗ್ರಹದಲ್ಲಿ ಕ್ಷಯ ರೋಗಿಗಳಿಗೆ ಅಹಾರ ದವಸಧಾನ್ಯದ ಕಿಟ್ ವಿತರಿಸಿ ಮಾತನಾಡಿದರು. ಕ್ಷಯ ಗುಣಮುಖವಾಗುವ ಕಾಯಿಲೆಯಾಗಿದ್ದು ಸಮಯಕ್ಕೆ ಸರಿಯಾದ ಔಷಧೋಪಚಾರ ಮಾಡಬೇಕು ಎಂದ ಅವರು ಸೇವಾಂಜಲಿಯ ಸೇವಾ ಕಾರ್ಯವನ್ನು ಶ್ಲಾಘಿಸಿದರು. ಸೇವಾಂಜಲಿ ಆರೋಗ್ಯ ಕೇಂದ್ರದ ವೈದ್ಯ ಡಾ. ಚೇತನ್ ಮಾತನಾಡಿ ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇದ್ದ ವ್ಯಕ್ತಿಗಳು ಸುಲಭವಾಗಿ ಕ್ಷಯ ರೋಗಕ್ಕೆ ತುತ್ತಾಗುತ್ತಾರೆ. ಎರಡು ವಾರಕ್ಕಿಂತ ಹೆಚ್ಚು ಸಮಯ ಕೆಮ್ಮು ಇದ್ದು ದೇಹದ ತೂಕ ಕಡಿಮೆಯದಾಗ ವೈದ್ಯರಿಂದ ತಕ್ಷಣ ಚಿಕಿತ್ಸೆ ಪಡೆಯಬೇಕು ಎಂದರು. ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಮುಖರಾದ ಆನಂದ ಆಳ್ವ ಟ್ರಸ್ಟಿ ಸುರೇಶ್…

Read More