Author: admin
ಬಂಟ್ವಾಳ: ಸಮಾನ ಮನಸ್ಕರು ಸೇರಿ ಸಮಾಜದ ಅಶಕ್ತರಿಗೆ ನೆರವಾಗುವ ದೃಷ್ಟಿಯನ್ನು ಇಟ್ಟುಕೊಂಡು ಕರುನಾಡು ಚಾರಿಟೇಬಲ್ ಟ್ರಸ್ಟ್ ಕರ್ನಾಟಕ ಎಂಬ ಸಂಸ್ಥೆಯನ್ನು ಸ್ಥಾಪಿಸಿದ್ದು ಕಾರಿಂಜದ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಟ್ರಸ್ಟ್ ನ ಉದ್ಘಾಟನೆ ಮತ್ತು ಲಾಂಛನವನ್ನು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕ ಅಧ್ಯಕ್ಷ ಬಿ. ಅರ್ಜುನ್ ಭಂಡಾರ್ಕರ್ ಉಪಸ್ಥಿಯಲ್ಲಿ ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ (ರಿ.)ಮಡವು ಇದರ ಅಧ್ಯಕ್ಷ ತ ಸಚಿನ್ ಸುವರ್ಣ, ಕಾರಿಂಜೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವೀರೇಂದ್ರ ಅಮೀನ್, , ಕಾವಳಮೂಡುರು ಗ್ರಾಮ ಪಂಚಾಯತ್ ಅಧ್ಯಕ್ಷ ಅಜಿತ್ ಶೆಟ್ಟಿ ಕಾರಿಂಜ ಹಾಗೂ ಟ್ರಸ್ಟ್ ನ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಮತ್ತು ಕಾರಿಂಜೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಬಂಟ್ವಾಳ: ಬಿಲ್ಲವ ಸೇವಾ ಸಮಿತಿ ಬೊಳ್ಳಾಯಿ ಇದರ ವತಯಿಂದ ತನ್ನ ಎರಡು ಕಿಡ್ನಿ ವೈಪಲ್ಯದಿಂದ ಬಳಲುತ್ತಿರುವ ಗಣೇಶ್ ಪೂಜಾರಿ ಪಟ್ಟುಗುಡ್ಡೆ ಇವರಿಗೆ ಆಹಾರ ಕಿಟ್ಟ್ ಮತ್ತು 10 ಸಾವಿರ ರೂಪಾಯಿಯ ಆರ್ಥಿಕ ನೆರವಿನ ಚೆಕ್ಕನ್ನು ಸೇವಾ ಸಮಿತಿ ಅಧ್ಯಕ್ಷ ಪುರುಷೋತ್ತಮ ಪೂಜಾರಿ ಕೋಮಾಲಿ ಪಡೀಲ್ ಅವರ ನೇತ್ರತ್ವದಲ್ಲಿ ನೀಡಲಾಯಿತು. ಗೌರವ ಸಲಹೆಗಾರರಾದ ಮೋಹನ್ ದಾಸ್ ಪೂಜಾರಿ ಬೊಳ್ಳಾಯಿ ಕಾರ್ಯದರ್ಶಿ ನಾಗೇಶ್ ಪೂಜಾರಿ. ಉಪಾಧ್ಯಕ್ಷ ಮಹೇಶ್ ಪಟ್ಟುಗುಡ್ಡೆ, ಪ್ರಮುಖರಾದ ನಾರಾಯಣ ಪೂಜಾರಿ ಪಟ್ಟುಗುಡ್ಡೆ, ಶೀನಪೂಜಾರಿ, ಪದ್ಮಪ್ಪ ಪೂಜಾರಿ, ರಾಮಚಂದ್ರ ಪೂಜಾರಿ ಮೊದಲಾದವರು ಭಾಗವಹಿಸಿದ್ದರು.
ಬಂಟ್ವಾಳ : ಮೂಡನಡುಗೋಡು ಕಾರ್ಯಕ್ಷೇತ್ರದ ನವ ದೀಪ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಕಾರ್ಯಕ್ರಮ ಭಾನುವಾರ ನಡೆಯಿತು. ಒಕ್ಕೂಟದ ಅಧ್ಯಕ್ಷ ಭಾಸ್ಕರ್ ಕುಲಾಲ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಕರೆಂಕಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ವಿಠಲ ಪೂಜಾರಿ, ಪ್ರಮುಖರಾದ ಧರ್ಣಪ್ಪ, ವಲಯದ ಮೇಲ್ವಿಚಾರಕ ರಾಜೇಶ್, ಜ್ಞಾನವಿಕಾಸ ಸಮನ್ವಯಾಧಿಕಾರಿ ಸವಿತಾ, ಸೇವಾ ಪ್ರತಿನಿಧಿ ಪ್ರಪ್ಪುಲ್ಲ ಹಾಗೂ ಜ್ಞಾನವಿಕಾಸ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು. ಮಹಿಳಾ ಸಾಂತ್ವನ ಕೇಂದ್ರದ ಆಪ್ತ ಸಮಾಲೋಚಕಿ ಹಾಗೂ ಕೇಂದ್ರದ ಸದಸ್ಯರು ಪೌಷ್ಟಿಕ ಆಹಾರವನ್ನು ಸಿದ್ಧಪಡಿಸಿದ್ದರು.
ಬಂಟ್ವಾಳ: ಇಲ್ಲಿನ ಬಿ. ಮೂಡ ಗ್ರಾಮದ ಅಜ್ಜಿಬೆಟ್ಟು ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಶಿಬಿರ ಕಾರ್ಯಕ್ರಮ ನಡೆಯಿತು. ವಕೀಲೆ ಆಶಾಮಣಿ ಡಿ. ರೈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಪೌಷ್ಠಿಕ ಆಹಾರ ಸೇವನೆ ನಮ್ಮ ದೇಹದ ಆರೋಗ್ಯಕ್ಕೆ ಅತ್ಯಂತ ಅವಶ್ಯಕವಾಗಿದೆ. ಹಿಂದಿನ ಕಾಲದಲ್ಲಿ ಬಡತನವಿದ್ದರೂ ಮನೆ ಪರಿಸರದಲ್ಲೇ ಸಿಗುತ್ತಿದ್ದ ಸೊಪ್ಪು ತರಕಾರಿಗಳನ್ನು ಬಳಸಿ ಪೌಷ್ಟಿಕ ಆಹಾರಗಳನ್ನು ಸೇವೆನೆ ಮಾಡುತ್ತಿದ್ದುದರಿಂದ ನಮ್ಮ ಹಿರಿಯರು ಉತ್ತಮ ಆರೋಗ್ಯವನ್ನು ಹೊಂದಿದ್ದರು ಎಂದು ತಿಳಿಸಿದರು. ಜೆಸಿಐ ವಲಯ ತರಬೇತುದಾರ ಸಂದೀಪ್ ಸಾಲ್ಯಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಜ್ಞಾನ ವಿಕಾಸ ಕೇಂದ್ರದ ಸಮನ್ವಯಧಿಕಾರಿ ಸವಿತಾ ಪ್ರಾಸ್ತವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕ ಗಿರೀಶ್, ಒಕ್ಕೂಟದ ಅಧ್ಯಕ್ಷೆ ಸಂಧ್ಯಾ ಹೆಗ್ಡೆ, ಸೇವಾ ಪ್ರತಿನಿಧಿ ವನಜಾಕ್ಷಿ ಹಾಗೂ ಜ್ಞಾನವಿಕಾಸದ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು. ಸದಸ್ಯರು ತಾವು ಮನೆಯಲ್ಲಿ ತಯಾರಿಸಿ ತಂದ ವಿವಿಧ ಬಗೆಯ ಪೌಷ್ಠಿಕ ಆಹಾರದ ಸಹಭೋಜನ ನಡೆಯಿತು. ಸ್ಪರ್ಧೆಯಲ್ಲಿ ಭಾಗವಹಿಸಿದವರಿಗೆ ಬಹುಮಾನ ವಿತರಿಸಲಾಯಿತು.
ಬಂಟ್ವಾಳ: ನಾಗರಿಕ ಕ್ರಿಯಾ ಸಮಿತಿ ಸಂಚಯಗಿರಿ ಇದರ ಆಶ್ರಯದಲ್ಲಿ ಅಭಿಮಾನಿಗಳಿಂದ ಪರಿಸರವಾದಿ, ಸ್ವಚ್ಚತಾ ರಾಯಭಾರಿ ಹಿರಿಯರಾದ ಎ. ದಾಮೋದರ ಅವರ ಜನ್ಮದಿನದ ಸಂಭ್ರಮ ದಾಮೋದರ ಸತಾಭಿಷೇಕ ಕಾರ್ಯಕ್ರಮ ಸಂಚಯಗಿರಿಯ ಡಾ. ಎನ್. ನರಸಿಂಹ ಹೊಳ್ಳ ಕಲಾ ವೇದಿಕೆಯಲ್ಲಿ ನಡೆಯಿತು. ದೀಪಿಕಾ ಪ್ರೌಢಶಾಲೆಯ ನಿವೃತ್ತ ಶಿಕ್ಷಕ ಮಹಾಬಲೇಶ್ವರ ಹೆಬ್ವಾರ್ ಅಭಿನಂದನಾ ಭಾಷಣ ಮಾಡಿ ಕೈಕಂಬ ಜನರಿಗೆ ದಿಕ್ಕುಗಳನ್ನು ಸೂಚಿಸುತ್ತದೆ. ಆದರೆ ಇಂತಹ ಸರಿಯಾದ ಕೆಲಸಗಳನ್ನು ಮಾಡಿ ಎನ್ನುವ ದಿಕ್ಕನ್ನು ಸೂಚಿಸುವ ದಿಕ್ಸೂಚಿಯಾಗಿದ್ದವರು ದಾಮೋದರ್ ಎಂದು ತಿಳಿಸಿದರು. ಬಳಿಕ ದಾಮೋದರ್ ಅವರನ್ನು ಅಭಿಮಾನಿಗಳ ವತಿಯಿಂದ ಗೌರವಿಸಲಾಯಿತು. ಹಿರಿಯ ಆರೋಗ್ಯ ಸಹಾಯಕ ರತ್ನಪ್ರಸಾದ್ ಪಿ. ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಪರಿಸರವನ್ನು ಸ್ಬಚ್ಚವಾಗಿಟ್ಟುಕೊಳ್ಳುವುದರ ಜೊತೆಗೆ ಯುವ ಸಮುದಾಯಕ್ಕೆ ಮಾದರಿ ಜೀವನ ನಡೆಸಿದವರು ದಾಮೋದರ್. ನಮಗೂ ಅವರ ಆದರ್ಶ ಪ್ರೇರಣೆಯಾಗಿದೆ ಎಂದರು. ನಾಗರಿಕ ಕ್ರಿಯಾ ಸಮಿತಿಯ ಅಧ್ಯಕ್ಷ ಸುರೇಶ್ ಬಂಗೇರ ಅಧ್ಯಕ್ಷತೆ ವಹಿಸಿ ಮಾತನಾಡಿ ದಾಮೋದರ್ ಅವರು ಆರೋಗ್ಯಯುತಾಗಿ ನೂರ್ಕಾಲ ಬಾಳಲಿ ಎಂದು ಶುಭ ಹಾರೈಸಿದರು.…
ಬಂಟ್ವಾಳ: ಕಲೆಯೆಂಬುದು ದೇವರ ವರ. ಕಲೆ ಸಾಂಸ್ಕೃತಿಕವಾಗಿ ಊರನ್ನು ಬೆಳಗುತ್ತದೆ. ಶಿಕ್ಷಣದ ಜೊತೆಗೆ ವಿವಿಧ ಕಲೆಗಳಲ್ಲಿ ತೊಡಗಿಸಿಕೊಂಡಾಗ ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತಿಯನ್ನು ಪಡೆಯಲು ಸಾಧ್ಯವಿದೆ ಎಂದು ಪುತ್ತೂರು ವಿಶ್ವ ಕಲಾನಿಕೇತನ ಆರ್ಟ್ ಆಂಡ್ ಕಲ್ಚರಲ್ ಇನ್ಸ್ಟಿಟ್ಯೂಷನ್ ಇಲ್ಲಿನ ನೃತ್ಯಗುರು ಕರ್ನಾಟಕ ಕಲಾಶ್ರೀ ಪುರಸ್ಕೃತೆ ವಿದುಷಿ ನಯನ ವಿ.ರೈ ಕುದ್ಕಾಡಿ ಹೇಳಿದರು. ಶ್ರೀದೇವಿ ನೃತ್ಯಾರಾಧನಾ ಕಲಾ ಕೇಂದ್ರ ಪುತ್ತೂರು ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಸಹಕಾರದೊಂದಿಗೆ ಶನಿವಾರ ಸಂಜೆ ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ನಡೆದ ನೃತ್ಯಧಾರಾ ಮತ್ತು ಯಕ್ಷಗಾನ ಹಾಸ್ಯ ಕಲಾವಿದ ಕೀರ್ತಿಶೇಷ ರಸಿಕರತ್ನ ನಯನಕುಮಾರ್ ಸ್ಮರಣಾರ್ಥ ಕಲಾನಯನ ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭರತನಾಟ್ಯ ಕಲೆಗೆ ಅವಕಾಶಗಳೊಂದಿಗೆ ಪ್ರೋತ್ಸಾಹಗಳು ದೊರಕುತ್ತಿದ್ದು, ಸಾಂಸ್ಕೃತಿಕವಾಗಿ ನಮ್ಮ ಬೆಳವಣಿಗೆಗೆ ಇದು ಪೂರಕವಾಗಿದೆ. ಈ ನಿಟ್ಟಿನಲ್ಲಿ ಶ್ರೀದೇವಿ ನೃತ್ಯಾರಾಧನಾ ಕಲಾಕೇಂದ್ರ ಉತ್ತಮ ಕೆಲಸವನ್ನು ಮಾಡುತ್ತಿದೆ ಎಂದು ಶುಭ ಹಾರೈಸಿದರು. ಕಲಾನಯನ ಪ್ರಶಸ್ತಿಯನ್ನು ಸಂಶೋಧಕ, ವಿಶ್ರಾಂತ ಪ್ರಾಧ್ಯಾಪಕ ಡಾ. ವೈ.ಉಮಾನಾಥ ಶೆಣೈ…
ಬಂಟ್ವಾಳ: ಬಿ.ಸಿ.ರೋಡಿನ ಶ್ರೀ ಚಂಡಿಕಾಪರಮೇಶ್ವರಿ ದೇವಸ್ಥಾನದ ಶ್ರೀ ರಾಮ ಭಕ್ತಾಂಜನೇಯ ಮಂದಿರ ಇಲ್ಲಿ ಚೆಕ್ ಮೇಟ್ ಚೆಸ್ ತರಗತಿ ಶನಿವಾರ ಪ್ರಾರಂಭಗೊಂಡಿತು. ಶ್ರೀ ಚಂಡಿಕಾ ಪರಮೇಶ್ವರಿ ದೇವಸ್ಥಾನ ಟ್ರಸ್ಟ್ ನಾ ಅಧ್ಯಕ್ಷ ಲೋಕನಾಥ ಶೆಟ್ಟಿ ಚೆಸ್ ತರಗತಿ ಉದ್ಘಾಟಿಸಿದರು. ಚೆಸ್ ತರಬೇತುದಾರರಾದ ವಜ್ರಾಕ್ಷಿ, ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.
ಬಂಟ್ವಾಳ: ಶ್ರೀ ದೇವಿ ನೃತ್ಯಾರಾಧನಾ ಕಲಾ ಕೇಂದ್ರ ಪುತ್ತೂರು ಅರ್ಪಿಸುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ನೃತ್ಯಧಾರಾ ಮತ್ತು ಖ್ಯಾತ ಯಕ್ಷಗಾನ ಕಲಾವಿದ ಕೀರ್ತಿಶೇಷ ರಸಿಕರತ್ನ ನಯನ ಕುಮಾರ್ ಸ್ಮರಣಾರ್ಥ ನೀಡುವ ಕಲಾನಯನ ಪ್ರಶಸ್ತಿ ಪ್ರದಾನ ಸಮಾರಂಭ ನ.1ರಂದು ಶನಿವಾರ ಸಂಜೆ 3.30ರಿಂದ ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ನಡೆಯಲಿದೆ. ಸಂಜೆ 3.30ಕ್ಕೆ ದೀಪ ಪ್ರಜ್ವಲನೆ ನಡೆಯಲಿದೆ. 4 ಗಂಟೆಗೆ ನೃತ್ಯಧಾರ, 6ಕ್ಕೆ ಸಭಾಕಲಾಪ ನಡೆಯಲಿದೆ. ಪುತ್ತೂರಿನ ವಿಶ್ವ ಕಲಾನಿಕೇತನ ಆರ್ಟ್ಸ್ ಆಂಡ್ ಕಲ್ಚರಲ್ ಇನ್ಸ್ಟಿಟ್ಯೂಷನ್ ಇಲ್ಲಿನ ನೃತ್ಯ ಗುರು ವಿದೂಷಿ ನಯನ ವಿ. ರೈ ಕುದ್ಕಾಡಿ ಅಧ್ಯಕ್ಷತೆ ವಹಿಸುವರು, ಮುಖ್ಯ ಅತಿಥಿಗಳಾಗಿ ಮಂಗಳೂರು ಸಂಸದ ಬೃಜೇಶ್ ಚೌಟ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಬಂಟ್ವಾಳ ಶ್ರೀ ತಿರುಮಲಕ ವೆಂಕಟರಮಣ ಸ್ವಾಮೀ ದೇವಸ್ಥಾನದ ಅಧ್ಯಕ್ಷ ಅಶೋಕ್ ಶೆಣೈ ಭಾಗವಹಿಸುವರು. ವಿಶ್ರಾಂತ ಇತಿಹಾಸ ಪ್ರಾಧ್ಯಾಪಕ ಡಾ. ವೈ ಉಮಾನಾಥ ಶೆಣೈ ಅವರಿಗೆ ಕಲಾನಯನ ಪ್ರಶಸ್ತಿ ನೀಡಿ ಗೌರವಿಸಲಾಗುವುದು,…
ಬಂಟ್ವಾಳ: ಮೆಲ್ಕಾರ್ ಫ್ಲೈ ಓವರ್ನ ಮೇಲೆ ಕಾರೊಂದು ರಸ್ತೆ ವಿಭಾಜಕ್ಕಕೆ ಡಿಕ್ಕಿಯಾಗಿ ಉರುಳಿ ಬಿದ್ದು ಯುವಕ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಮೃತರನ್ನು ಕಡಬ ತಾಲೂಕಿನ ಕುದ್ಮಾರು ಗ್ರಾಮದ ನೂಜೋಲ್ತಡ್ಕ ನಿವಾಸಿ ಕರುಣಾಕರ ಗೌಡ ಹಾಗೂ ರೇವತಿ ದಂಪತಿ ಪುತ್ರ ಕಾರ್ತಿಕ್ ಗೌಡ (೨೩) ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಮೂರು ಮಂದಿ ಪ್ರಯಾಣಿಸುತ್ತಿದ್ದು ಪಾಣೆಮಂಗಳೂರು ಸಮೀಪದ ಮೆಲ್ಕಾರ್ ಫ್ಲೈ ಓವರ್ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಾಜಕಕ್ಕೆ ಡಿಕ್ಕಿಯಾಗಿದೆ. ಬಳಿಕ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಕಾರ್ತಿಕ್ ಹಾಗೂ ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದರು. ತಕ್ಷಣ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಕಾರ್ತಿಕ್ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಇನ್ನಿಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರ್ತಿಕ್ ಮಂಗಳೂರಿನಲ್ಲಿ ಉದ್ಯೋಗದ ಸಂದರ್ಶನಕ್ಕೆ ತೆರಳಿದ್ದು ಸಂದರ್ಶನ ಮುಗಿಸಿ ಉದ್ಯೋಗಕ್ಕೆ ಆಯ್ಕೆಯಾಗಿ ಸ್ನೇಹಿತರ ಜೊತೆ ವಾಪಾಸ್ಸು ಬರುತ್ತಿರುವಾಗ ಈ ದುರ್ಘಟನೆ ನಡೆದಿದೆ.
ಬಂಟ್ವಾಳ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಶೋಸಿಯೇಷನ್ ಬಂಟ್ವಾಳ ವಲಯ ರಜತ ಸಂಭ್ರಮದ ಪ್ರಯುಕ್ತ ತಾಲೂಕಿನ ಪೊಟೊಗ್ರಾಫ್ಸ್ ಸದಸ್ಯರಿಗೆ ಆಯೋಜಿಸಿದ ದಸರಾ ಸಂಭ್ರಮ ಫೋಟೋ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ದಯಾನಂದ್ ಬಂಟ್ವಾಳ್, ದ್ವಿತೀಯ ನವೀನ್, ತೃತೀಯ ದೀಪಕ್ ನಾಯಕ್ ಗೆದ್ದುಕೊಂಡಿದ್ದಾರೆ.








