Author: admin
ಬಂಟ್ವಾಳ: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಇದರ ಆಶ್ರಯದಲ್ಲಿ ಅ.26 ರಿಂದ 27 ರವೆರೆಗೆ ಬೆಂಗಳೂರಿನಲ್ಲಿ ನಡೆದ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕ್ರೀಡಾಕೂಟ 2025-26ರಲ್ಲಿ ಕಲ್ಲಡ್ಕ ಶ್ರೀ ರಾಮ ವಿದ್ಯಾಕೇಂದ್ರದ ದ್ವಿತೀಯ ಪಿಯೂಸಿ ವಿದ್ಯಾರ್ಥಿ ಬೆವಜೆರ್ ಲಿಂಗ್ ದೋದ್ ಜೂಡೋ ಸ್ಪರ್ಧೆಯಲ್ಲಿ ತೃತೀಯ ಸ್ಥಾನಿಯಾಗಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಮೂಲತ ಮೇಘಾಲಯದ ನಿವಾಸಿಯಾಗಿರುವ ಬೆವಜೆರ್ ಲಿಂಗ್ ದೋದ್, ಟೀನಾ ಲಿಂಗ್ ದೋದ್ ಅವರ ಪುತ್ರ. ರಾಜೇಶ್ ಬ್ರಹ್ಮರಕೂಟ್ಲು ಅವರಿಂದ ಮಾರ್ಷಲ್ ಆರ್ಟ್ ತರಬೇತಿ ಪಡೆಯುತ್ತಿದ್ದಾನೆ.
ಬಂಟ್ವಾಳ: ಬಿ.ಸಿ.ರೋಡಿನ ಕೈಕಂಬದ ಸರಕಾರಿ ಕ್ವಾರ್ಟರ್ಸ್ ರಸ್ತೆಯಲ್ಲಿರುವ ಶ್ರೀ ಲಕ್ಷ್ಮೀ ಜ್ಯುವೆಲ್ಲರ್ಸ್ ನಲ್ಲಿ ಶ್ರೀ ಲಕ್ಷ್ಮೀ ಪೂಜೆ ವಿಜ್ರಂಭಣೆಯಿಂದ ನಡೆಯಿತು. ಮಂಗಳವಾರ ಬೆಳಿಗ್ಗೆ ಶ್ರೀ ಲಕ್ಷ್ಮೀ ಪೂಜೆ ನೆರವೇರಿದ್ದು ಸಂಸ್ಥೆಯ ಮಾಲಕ ಕಿಶೋರ್ ಕುಮಾರ್ ಆಚಾರ್ಯ, ಅವರ ಕುಟುಂಬ ಬಳಗ, ಹಿತೈಷಿಗಳು ಹಾಗೂ ಗ್ರಾಹಕರು ಈ ಸಂದರ್ಭ ಉಪಸ್ಥಿತರಿದ್ದು ಶುಭ ಹಾರೈಸಿದರು. ಶ್ರೀ ಲಕ್ಷ್ಮೀ ಜ್ಯುವೆಲ್ಲರ್ಸ್ ನಲ್ಲಿ ನವ ನವೀನ ಶೈಲಿಯ ಹಾಲ್ ಮಾರ್ಕ್ ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ತಯಾರಿಸಿ ಕೊಡಲಾಗುವುದು. ಗ್ರಾಹಕರ ಮನಕ್ಕೊಪ್ಪುವ ಚಿನ್ನಾಭರಣ ಹಾಗೂ ಬೆಳ್ಳಿಯ ಸಾಮಾಗ್ರಿಗಳು ಇಲ್ಲಿ ಲಭ್ಯವಿದ್ದು ಕಳೆದ 27 ವರ್ಷಗಳಿಂದ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುತ್ತಾ ಬರುತ್ತಿದೆ. 25 ವರ್ಷಗಳಿಂದ ಶ್ರೀ ಲಕ್ಷ್ಮೀ ಗೋಲ್ಡ್ ಗಿಫ್ಟ್ ಸ್ಕೀಂ ಮೂಲಕ ಪರಿಶುದ್ಧತೆಯ 916 ಹಾಲ್ ಮಾರ್ಕ್ ಚಿನ್ನಾಭರಣಗಳನ್ನು ತಯಾರಿಸಿ ಗ್ರಾಹಕರ ವಿಶ್ವಾಸಕ್ಕೆ ಪಾತ್ರವಾಗಿದೆ.
ಬಂಟ್ವಾಳ: ತುಳುನಾಡಿನ ಶೈಲಿಯ ತಿಂಡಿ ತಿನಿಸುಗಳಿಗೆ ಜನಪ್ರಿಯತೆಯನ್ನು ಪಡೆದುಕೊಂಡಿರುವ ಬಂಟ್ವಾಳ ತಾಲೂಕಿನ ಕೈಕಂಬದ ಪೊಳಲಿ ದ್ವಾರದ ಬಳಿಯಿರುವ ರಾಜಶ್ರೀ ಗ್ರಾಂಡ್ಯೂರ್ ನಲ್ಲಿರುವ ಸಾಯಿಲೀಲಾ ಶುದ್ದ ಸಸ್ಯಹಾರಿ ಹೋಟೇಲ್ ನಲ್ಲಿ ಶ್ರೀ ಲಕ್ಷ್ಮೀ ಪೂಜೆ ವಿಜೃಂಭಣೆಯಿಂದ ನಡೆಯಿತು. ಸಂಜೆ ಅರ್ಚಕ ವೃಂದದ ಪೌರೋಹಿತ್ಯದಲ್ಲಿ ಶ್ರೀ ಲಕ್ಷ್ಮೀ ಪೂಜೆ ನೆರೆವೇರಿದ್ದು ಹೊಟೇಲ್ ಮಾಲಕ ಸದಾನಂದ ಬಂಗೇರ, ಅವರ ಕುಟುಂಬ ವರ್ಗ, ಗ್ರಾಹಕರು, ಹಿತೈಷಿಗಳು ಉಪಸ್ಥಿತರಿದ್ದು ಪ್ರಸಾದ ಸ್ವೀಕರಿಸಿದರು. ಬಳಿಕ ಖ್ಯಾತ ಗಾಯಕ ಕೆ.ಜೆ. ಏಸುದಾಸ್ ಅವರ ಶಿಷ್ಯ ವೆಂಕಟಕೃಷ್ಣ ಬಳಗದಿಂದ ನಡೆದ ಭಾವ ಭಕ್ತಿಗಾನ ವೈಭವ ನೆರೆದ ಪ್ರೇಕ್ಷಕರ ಮನ ಸೂರೆಗೊಳಿಸಿತು. ಸದಾನಂದ ಬಂಗೇರ ಅವರ ಮಾಲಕತ್ವದ ಹೊಟೇಲ್ ಸಾಯಿಲೀಲಾ ತುಳು ಚಿತ್ರನಟ ಭೋಜರಾಜ್ ವಾಮಂಜೂರು ಅವರಿಂದ ಉದ್ಘಾಟನೆಗೊಂಡು ಯಶಸ್ವಿ ಎಂಟು ವರ್ಷಗಳನ್ನು ಪೂರೈಸಿ ಮುನ್ನಡೆಯುತ್ತಿದ್ದು ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿದೆ. ತುಳುನಾಡು ಶೈಲಿಯ ಮನೆ ತಿಂಡಿಗಳು ಇಲ್ಲಿನ ವಿಶೇಷತೆಯಾಗಿದ್ದು ಊರ ಪರವೂರ ಗ್ರಾಹಕರು ವಿಶೇಷ ತಿಂಡಿ, ತಿನಿಸು ಖಾದ್ಯಗಳನ್ನು ಸವಿಯಲು ಇಲ್ಲಿಗೆ ಆಗಮಿಸುತ್ತಾರೆ. ತುಳುನಾಡಿನ…
ಬಂಟ್ವಾಳ: ಸಾಧನೆ ಮಾಡುವ ಮನಸಿದ್ದರೆ ಪ್ರಕೃತಿಯೇ ನಮಗೆ ಬೆಂಬಲವಾಗಿ ನಿಲ್ಲುತ್ತದೆ. ಸಮಸ್ಯೆಯನ್ನು ಮೀರಿ ನಿಲ್ಲುತ್ತೇವೆ ಎನ್ನವ ಛಲ ಇದ್ದಾಗ ಸಾಧನೆ ಮಾಡಲು ಸಾಧ್ಯ ಎಂದು ಸಹಕಾರ ಸಂಘಗಳ ಜಂಟಿ ನಿಬಂಧಕಿ ಯಶಸ್ವಿನಿ ಶೆಟ್ಟಿ ಹೇಳಿದರು. ಬಂಟರ ಸಂಘ ಬಂಟ್ವಾಳ ತಾಲೂಕು ಇದರ ವತಿಯಂದ ಅಲ್ ಕಾರ್ಗೋ ಲಾಜಿಸ್ಟಿಕ್ ಮುಂಬೈ ಇದರ ಅಧ್ಯಕ್ಷ ಡಾ. ಶಶಿಕಿರಣ್ ಶೆಟ್ಟಿ ಇವರ ಸಹಕಾರದೊಂದಿಗೆ ರಾಮಲ್ ಕಟ್ಟೆಯ ಬಂಟವಾಳ ಬಂಟರ ಭವನದಲ್ಲಿ ನಡೆದ ಶಿಕ್ಷಣ ಮತ್ತು ಸಾಮಾಜಿಕ ಕಲ್ಯಾಣ ಕಾರ್ಯಕ್ರಮ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಮಾಹಿತಿ ಕೊರತೆಯಿಂದಾಗಿ ನಾಗರಿಕ ಸೇವೆಯತ್ತ ಯುವ ಸಮುದಾಯ ಬರುತ್ತಿಲ್ಲ. ಇಚ್ಚಾಶಕ್ತಿ, ಅವಿರತ ಶ್ರಮ ಇದ್ಸಾಗ ಇಂತಹ ಸರಕಾರಿ ಸೇವೆಗಳಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಬಂಟರ ಸಂಘದ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಗಾರ ಹಮ್ಮಿಕೊಳ್ಳುವಂತೆ ಸಲಹೆ ನೀಡಿದರು. ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಉಪ ಕುಲಪತಿ ವಿಶಾಲ್ ಹೆಗ್ಡೆ ಮಾತನಾಡಿ ನಿರಂತರ ಪ್ರಯತ್ನ ಇಲ್ಲದೆ ಯಾವುದೇ ಸಾಧನೆ ಮಾಡಲು…
ಬಂಟ್ವಾಳ: ಹದಿಹರೆಯ ಎನ್ನುವುದು ಕಾಲಘಟ್ಟ. ಮಕ್ಕಳ ಈ ಸಂಕ್ರಮಣ ಕಾಲವನ್ನು ನಿಭಾಸುವುದು ಪೋಷಕರಿಗೆ ಸವಾಲಿನ ಕೆಲಸ. ಹದಿಹರೆಯದ ವಯಸ್ಸಿನಲ್ಲಿ ಮಕ್ಕಳಲ್ಲಾಗುವ ಬದಲಾವಣೆಯನ್ನು ಅರ್ಥಮಾಡಿಕೊಂಡು ಅವರ ಸಾಗುವ ದಾರಿಯನ್ನು ಪೋಷಕರು ಅವಲೋಕಿಸುತ್ತಿರಬೇಕು ಎಂದು ಮನೋವೈದ್ಯ ಡಾ. ರವೀಶ್ ತುಂಗ ಹೇಳಿದರು. ರೋಟರಿ ಕ್ಲಬ್ ಫರಂಗಿಪೇಟೆ ಇದರ ಆಶ್ರಯದಲ್ಲಿ ಅರ್ಕುಳ ಫರಂಗಿಪೇಟೆಯ ಶ್ರೀರಾಮ ವಿದ್ಯಾ ಸಂಸ್ಥೆ ಮತ್ತು ದೇರಳಕಟ್ಟೆ ಯೆನಪೋಯ ಫಿಸಿಯೋಥೆರಪಿ ಕಾಲೇಜಿನ ಎನ್ಎಸ್ಎಸ್ ಘಟಕದ ಸಹಯೋಗದೊಂದಿಗೆ ಫರಂಗಿಪೇಟೆಯ ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ಶುಕ್ರವಾರ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ನಡೆದ ಹದಿಹರೆಯ ಎತ್ತ ಸಾಗುತ್ತಿದೆ? ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ಗಾಂಜ, ಮದ್ಯಪಾನದಂತೆ ಮೊಬೈಲ್ ಕೂಡ ಒಂದು ವ್ಯಸನವಾಗಿದೆ. ನಮ್ಮ ಅನುಕೂಲತೆಗಾಗಿ ಇರುವ ಮೊಬೈಲ್ ಇಂದು ಬದುಕನ್ನೇ ಕಸಿಯುತ್ತಿದೆ. ಆದ್ದರಿಂದ ಮೊಬೈಲ್ ಜೀವನ ಅಲ್ಲ. ಮೊಬೈಲ್ ಇಲ್ಲದೆ ಬದಕಲು ಸಾಧ್ಯವಿದೆ ಎಂದ ಅವರು ಇಂದು ಕುಟುಂಬ ಜೀವನ ಬದಲಾಗಿ ಮಕ್ಕಳಿಗೆ ಮಾರ್ಗದರ್ಶನದ ಕೊರತೆ ಎದುರಾಗುತ್ತಿದೆ ಎಂದು ತಿಳಿಸಿದರು. ಯೇನಪೋಯ ಫಿಸಿಯೋಥೆರಪಿ…
ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಟೌನ್ ಆಶ್ರಯದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಮೂಡುನಡುಗೋಡು ಗ್ರಾಮದ ದಡ್ಡಲಕಾಡು ಸರಕಾರಿ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆಯಿತು. ರೋಟರಿ ಜಿಲ್ಲಾ ಸಹಾಯಕ ಗವರ್ನರ್ ಡಾ. ಜಯಕುಮಾರ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಭಾರತದಲ್ಲಿ ಸಾಂಕ್ರಮಿಕವಲ್ಲದ ರೋಗಗಳಿಂದ ಸಾಯುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸಾಮಾನ್ಯ ರೋಗಗಳನ್ನು ಆರಂಭಿಕ ಹಂತದಲ್ಲಿಯೇ ಪತ್ತೆ ಹಚ್ಷಲು ಸಾಧ್ಯವಾದರೆ ರೋಗ ನಿರ್ಮಾಲನ ಮಾಡಲು ಸಾಧ್ಯವಿದೆ. ಆ ನಿಟ್ಟಿನಲ್ಲಿ ಇಂತಹ ಆರೋಗ್ಯ ಶಿಬಿರಗಳು ಅತ್ಯಂತ ಮಹತ್ವವಾಗಿದೆ ಎಂದರು. ರೋಗ ಬರುವ ಮೊದಲೇ ಅದನ್ನು ಪತ್ತೆ ಹಚ್ಚಿ ಚಿಕಿತ್ಸೆ ಪಡೆಯುವುದು ಉತ್ತಮ ಎಂದು ತಿಳಿಸಿದರು. ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಅಂಚನ್ ಮಾತನಾಡಿ ಆರೋಗ್ಯ ಮತ್ತು ಶಿಕ್ಷಣ ಸಿಕ್ಕಾಗ ಪ್ರತಿಯೊಬ್ಬ ವ್ಯಕ್ತಿಯೂ ಸಮಾಜದಲ್ಲಿ ನೆಮ್ಮದಿಯಿಂದ ಬದುಕಲು ಸಾಧ್ಯ. ಇಂತಹ ಶಿಬರಗಳನ್ನು ಸದುಪಯೋಗ ಪಡಿಸಿಕೊಂಡು ಆರೋಗ್ಯವನ್ನು ಉತ್ತಮ ಪಡಿಸಿಕೊಳ್ಳುವಂತೆ ತಿಳಿಸಿದರು. ಪ್ರಜ್ಞಾ ಸಲಹಾ ಕೇಂದ್ರದ ಪ್ರಾಂಶುಪಾಲೆ ವಿಜಯ ಶುಭ…
ಬಂಟ್ವಾಳ: ಜಾತಿ ಗಣತಿ ಕಾರ್ಯಕ್ಕೆ ತೆರಳಿದ್ದ ಶಿಕ್ಷಕರೋರ್ವರು ಜೇನು ನೊಣದ ದಾಳಿಗೆ ಒಳಗಾಗಿ ಗಂಭೀರ ಗಾಯಗೊಂಡ ಘಟನೆ ಸಜೀಪಮುನ್ನೂರು ಗ್ರಾಮದ ಆಲಾಡಿ ಬಳಿ ಶನಿವಾರ ನಡೆದಿದೆ. ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿಜ್ಞಾನ ಶಿಕ್ಷಕ ವೆಂಕಟರಮಣ ಆಚಾರ್ ಜೇನು ನೊಣದ ದಾಳಿಗೊಳಗಾಗಿದ್ದು ಚೇತರಿಸಿಕೊಂಡಿದ್ದಾರೆ. ಶಿಕ್ಷಣ ವೆಂಕಟರಮಣ ಆಚಾರ್ ಅವರು ಸಜೀಪಮುನ್ನೂರು ಗ್ರಾಮದ ಆಲಾಡಿ, ಶಾರಾದನಗರದ ಬಳಿ ಗಣತಿ ಕಾರ್ಯಕ್ಕೆ ತೆರಳಿದ್ದ ವೇಳೆ ಅಲ್ಲಿನ ಪಿಲಿಚಂಡಿ ದೈವಸ್ಥಾನದ ರಸ್ತೆ ಬಳಿಯ ಗುಳಿಗ ಸ್ಥಾನದ ಬಳಿ ದ್ವಿಚಕ್ರ ವಾಹನ ನಿಲ್ಲಿಸಿ ನಿಂತಿದ್ದ ವೇಳೆ ಏಕಾಏಕಿ ಜೇನು ನೊಣಗಳು ದಾಳಿ ಮಾಡಿದೆ. ತಲೆ, ಕೈಗೆ ನೊಣಗಳು ಕಚ್ಚಿದಾಗ ಸ್ಥಳೀಯ ಮನೆಯೊಂದಕ್ಕೆ ಓಡಿ ಹೋದ ವೆಂಕಟರಮಣ ಆಚಾರ್ ಅವರು ೨೦ ನಿಮಿಷಗಳ ಕಾಲ ಮನೆಯಲ್ಲಿ ಸುಧಾರಿಸಿ, ಗಾಯಗಳಿಗೆ ಅರಶಿನ ಹಚ್ಚಿಕೊಂಡು ಇನ್ನೇನು ನೊಣಗಳು ಹೋಯಿತೆಂದು ವಾಪಸ್ಸು ತನ್ನ ವಾಹನದತ್ತ ಬಂದಾಗ ಮತ್ತೆ ಜೇನು ನೊಣಗಳ ಹಿಂಡು ದಾಳಿ ನಡೆಸಿ ತಲೆ, ಕಿವಿ, ಕುತ್ತಿಗೆಗೆ…
ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಟೌನ್ ಆಶ್ರಯದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಅ.12 ರಂದು ಭಾನುವಾರ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಮೂಡುನಡುಗೋಡು ಗ್ರಾಮದ ದಡ್ಡಲಕಾಡು ಸರಕಾರಿ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆಯಲಿದೆ. ಅಲ್ಕಾರ್ಗೋ ಲಾಜಿಸ್ಟಿಕ್ ಮಂಗಳೂರು, ಪ್ರಜ್ಞಾ ಸಲಹಾ ಕೇಂದ್ರ ಕಂಕನಾಡಿ ಮಂಗಳೂರು, ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್, ದಡ್ಡಲಕಾಡು, ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಶನ್ (ರಿ.) ಬಂಟ್ವಾಳ ಕ್ಷೇತ್ರ ಸಮಿತಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ.) ಬಂಟ್ವಾಳ ವಲಯ ಹಾಗೂ ಸರಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ, ದಡ್ಡಲಕಾಡು, ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ದಿ ಕೇಂದ್ರ ಯೇನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ ದೇರಳಕಟ್ಟೆ ಶಿಬಿರಕ್ಕೆ ಸಹಯೋಗ ನೀಡಲಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷ ವಚನ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಂಟ್ವಾಳ: ತುಂಬೆಯ ಶ್ರೀ ಶಾರದಾ ಸೇವಾ ಪ್ರತಿಷ್ಠಾನ ಹಾಗೂ ಶ್ರೀ ಶಾರದಾ ರಜತ ಮಹೋತ್ಸವ ಸಮಿತಿ ಇದರ ಆಶ್ರಯದಲ್ಲಿ ತುಂಬೆಯ ರಾಮಲ್ ಕಟ್ಟೆಯಲ್ಲಿ ನಿರ್ಮಾಣಗೊಂಡ ನೂತನ ಶ್ರೀಶಾರದಾ ಸಭಾಭವನ ಹಾಗೂ ಆ ಬಳಿಕ ಎರಡು ದಿನಗಳ ಕಾಲ ನಡೆದ ಶ್ರೀ ಶಾರದೋತ್ಸವದ ಬಗ್ಗೆ ಅವಲೋಕನ ಸಭೆ ಭಾನುವಾರ ಶ್ರೀ ಶಾರದಾ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಶ್ರೀ ಶಾರದಾ ಪ್ರತಿಷ್ಠಾನದ ಅಧ್ಯಕ್ಷ ಗಣೇಶ್ ಸುವರ್ಣ ತುಂಬೆ, ಶ್ರೀ ಶಾರದಾ ರಜತ ಮಹೋತ್ಸವ ಸಮಿತಿ ಅಧ್ಯಕ್ಷ ರಾಘವ ಸುವರ್ಣ ಪೇರ್ಲಬೈಲು, ಪ್ರಧಾನ ಸಂಚಾಲಕ ತಾರಾನಾಥ ಕೊಟ್ಟಾರಿ ತೇವು, ಪೊಳಲಿ ಗಿರಿ ಪ್ರಕಾಶ್ ತಂತ್ರಿ ಸಮಿತಿ ಪ್ರಮುಖರಾದ ಶೋಭಾ ಮೈಂದನ್ ರಾಮಚಂದ್ರ ಸುವರ್ಣ, ವಿನೋದ್ ಬೊಳ್ಳಾರಿ ದಿವಾಕರ ಪೇರ್ಲಬೈಲು ಉಪಸ್ಥಿತರಿದ್ದರು. ಗ್ರಾಮಸ್ಥರು ಹಾಗೂ ಭಕ್ತಾದಿಗಳು ಭಾಗವಹಿಸಿ ಅನಿಸಿಕೆ ವ್ಯಕ್ತ ಪಡಿಸಿದರು. ಸಂತೋಷ್ ಕೋಟ್ಯಾನ್ ತುಂಬೆ ಕಾರ್ಯಕ್ರಮ ನಿರೂಪಿಸಿದರು.
ಬಂಟ್ವಾಳ: ಸೇವಾಂಜಲಿ ಸಂಸ್ಥೆಯ ಸೇವಾ ಕಾರ್ಯದ ಹಿಂದೆ ಉತ್ಕೃಷ್ಟವಾದ ದೃಷ್ಟಿಕೋನವಿದೆ. ಇಂತಹ ಪ್ರತಿಷ್ಠಾನಗಳಿಗೆ ಸಮಾಜ ಚಿರ ಋಣಿಯಾಗಿರಬೇಕು ಎಂದು ಮಂಗಳೂರು ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿ ಹೇಳಿದರು. ಅವರು ಕೇಂದ್ರ ಸರಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನದ ವತಿಯಿಂದ ಸೇವಾಂಜಲಿ ಸಭಾಗೃಹದಲ್ಲಿ ಕ್ಷಯ ರೋಗಿಗಳಿಗೆ ಪೌಷ್ಟಿಕ ಆಹಾರದ ಕಿಟ್ ವಿತರಿಸಿ ಮಾತನಾಡಿದರು. ಕ್ಷಯ ಗುಣವಾಗುವ ರೋಗ. ಸರಿಯಾದ ಔಷಧೋಪಚಾರ ಹಾಗೂ ಪೌಷ್ಟಿಕಾಹಾರ ಸೇವನೆಯಿಂದ ರೋಗ ಗುಣಪಡಿಸಲು ಸಾಧ್ಯವಿದೆ ಎಂದರು. ಲಯನ್ಸ್ ಜಿಲ್ಲಾ ಮಾಜಿ ಗವರ್ನರ್ ವಸಂತ್ ಕುಮಾರ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಸೇವಾಂಜಲಿಯ ಕಾರ್ಯ ಅಪೂರ್ವವಾದುದು, ಕೃಷ್ಣ ಕುಮಾರ್ ಪೂಂಜ ಅವರ ನೇತೃತ್ವದಲ್ಲಿ ಸೇವಾಂಜಲಿ ಅತ್ಯುತ್ತಮ ಕಾರ್ಯ ಮಾಡುತ್ತಿದೆ ಎಂದು ತಿಳಿಸಿದರು. ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜ ಪ್ರಾಸ್ತವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಸಂತೋಷ್ ತುಪ್ಪೆಕಲ್ಲು, ಸೇವಾಂಜಲಿ ಟ್ರಸ್ಟಿ ನಾರಾಯಣ ಬಡ್ಡೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಸಂಶೋಧನಾ ವಿದ್ಯಾರ್ಥಿಗಳಾದ ಡಾ.ಮಹಮ್ಮದ್…








