Author: admin

ಬಂಟ್ವಾಳ: ದಕ್ಷಿಣ ಕನ್ನಡ ಕ್ಯಾಟರಿಂಗ್ ಮಾಲಕರ ಸಂಘ ಮಂಗಳೂರು ಇದರ ಬಂಟ್ವಾಳ ವಲಯದ ನೂತನ ಅಧ್ಯಕ್ಷರಾಗಿ ವಲೇರಿಯನ್ ಲೋಬೋ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಸದಾನಂದ ಬಿ. ಬಂಗೇರ, ಕೊಶಾಧಿಕಾರಿಯಾಗಿ ಸಿಲ್ವೆಸ್ಟರ್ ಲಸ್ರಾದೋ, ಸಂಘಟನಾ ಕಾರ್ಯದರ್ಶಿಯಾಗಿ ಆ್ಯಂಟನಿ ಸಿಕ್ವೇರಾ ಆಯ್ಕೆಯಾಗಿದ್ದಾರೆ. ಸೆ.9 ರಂದು ಪದಗ್ರಹಣ: ನೂತನ ಸಾಲಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಸೆ.9 ರಂದು ಮಂಗಳವಾರ ಸಂಜೆ 6.30ಕ್ಕೆ ಬಿ.ಸಿ.ರೋಡಿನ ಹೊಟೇಲ್ ರಂಗೋಲಿ ಸಭಾಂಗಣದಲ್ಲಿ ನಡೆಯಲಿದೆ. ದಕ್ಷಿಣ ಕನ್ನಡ ಕ್ಯಾಟರಿಂಗ್ ಮಾಲಕರ ಸಂಘ ಬಂಟ್ವಾಳ ವಲಯದ ಅಧ್ಯಕ್ಷ ನಾರಾಯಣ ಸುವರ್ಣ ಅಧ್ಯಕ್ಷತೆ ವಹಿಸುವರು, ಮುಖ್ಯ ಅತಿಥಿಗಳಾಗಿ ಉದ್ಯಮಿ ರೊ. ಸತೀಶ್ ಬೋಳಾರ್, ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ರಿಚ್ಚರ್ಡ್ ಡಿಕೋಸ್ತ, ದ.ಕ. ಕ್ಯಾಟರಿಂಗ್ ಮಾಲಕರ ಸಂಘದ ಅಧ್ಯಕ್ಷ ರಾಜೇಶ್ ಕೊಂಚಾಡಿ, ಹೊಟೇಲ್ ಉದ್ಯಮಿ ಸದಾನಂದ ಡಿ.ಶೆಟ್ಟಿ ಭಾಗವಹಿಸುವರು

Read More

ಬಂಟ್ವಾಳ: ಮಾನವೀಯತೆಗಿಂತ ಮಿಗಿಲಾದ ಧರ್ಮ ಮತ್ತೊಂದಿಲ್ಲ. ಮಾನವೀಯತೆಗೆ ಪೂರಕವಾದ ಕಾರ್ಯವನ್ನು ಸೇವಾಂಜಲಿ ಸಂಸ್ಥೆ ನಡೆಸಿಕೊಂಡು ಬರುತ್ತಿದೆ ಎಂದು ರೋಟರಿ ಕ್ಲಬ್ ಪೂರ್ವ ಜಿಲ್ಲಾ ಗವರ್ನರ್ ಎನ್. ಪ್ರಕಾಶ್ ಕಾರಂತ್ ತಿಳಿಸಿದರು. ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಕೆಎಂಸಿ ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ ಫರಂಗಿಪೇಟೆಯ ಸೇವಾಂಜಲಿ ಸಭಾಗೃಹದಲ್ಲಿ ನಡೆದ 132ನೇ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಕ್ತಕ್ಕೆ ರಕ್ತವೇ ಪರ್ಯಯವಾಗಿದ್ದು ರಕ್ತದಾನ ಅತ್ಯಂತ ಪುಣ್ಯದ ಕಾರ್ಯವಾಗಿದೆ. ನಾವು ದಾನವಾಗಿ ನೀಡುವ 1 ಯುನಿಟ್ ರಕ್ತ ನಾಲ್ಕು ಮಂದಿಯ ಪ್ರಾಣ ಉಳಿಸುತ್ತದೆ ಎಂದರು. ಕೃಷ್ಣಕುಮಾರ್ ಪೂಂಜ ಅವರ ನೇತೃತ್ವದಲ್ಲಿ ಸೇವಾಂಜಲಿ ಸಂಸ್ಥೆ ಹಮ್ಮಿಕೊಳ್ಳುವ ರಕ್ತದಾನ ಶಿಬಿರದಲ್ಲಿ ಸಂಗ್ರಹಣೆಯ ಉದ್ದೇಶವಿಲ್ಲ, ಬದಲಿಗೆ ವಿವಿಧ ಆಸ್ಪತ್ರೆಗಳ ರಕ್ತನಿಧಿಗೆ ಅವಶ್ಯಕತೆಗನುಗುಣವಾಗಿ ರಕ್ತದಾನ ಶಿಬಿರ ನಡೆಸಲಾಗುತ್ತಿದೆ. ಇದು ಜನರಿಗೆ ಅರಿವು ಮೂಡಿಸುವುದರ ಜೊತೆಗೆ ಇತರ ಸಂಘ ಸಂಸ್ಥೆಗಳಿಗೂ ಪ್ರೇರಣೆ ನೀಡುವ ಕಾರ್ಯ ಎಂದು ತಿಳಿಸಿದರು. ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ. ಕೃಷ್ಣಕುಮಾರ್ ಪೂಂಜ ಪ್ರಾಸ್ತಾವಿಕ…

Read More

ಸಜೀಪ: ಇಲ್ಲಿನ ಸಜೀಪಮುನ್ನೂರು ಗ್ರಾಮದ ಮರ್ತಾಜೆ ಶ್ರೀ ಮಲರಾಯ ಗ್ರಾಮ ಸಮಿತಿ ವತಿಯಿಂದ‌ ಮರ್ತಾಜೆದ ಮಣ್ಣ್ ಡ್ ಕೆಸರ್ದ ಗೊಬ್ಬು ಕಾರ್ಯಕ್ರಮ‌ ಸೆ.7 ರಂದು ಭಾನುವಾರ ಬೆಳಿಗ್ಗೆ 8.30 ರಿಂದ ಮರ್ತಾಜೆಯ ಮಲರಾಯ ದೈವಸ್ಥಾನದ ವಠಾರದಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ ಸಜೀಪ ಮುನ್ನೂರಿನ ತಂತ್ರಿ ಸೂರ್ಯನಾರಾಯಣ ಭಟ್ ಉದ್ಘಾಟಿಸುವರು, ಮಲರಾಯ ಗ್ರಾಮ ಸಮಿತಿ ಅಧ್ಯಕ್ಷ ರಘುನಾಥ ಕುಲಾಲ್ ಅಧ್ಯಕ್ಷತೆ ವಹಿಸುವರು, ಆಳ್ವರ ಪಾಲು ಗಡಿಪ್ರಧಾನರಾದ ದುಗ್ಗಪ್ಪ ಶೆಟ್ಟಿ ಯಾನೆ ಗಂಗಾಧರ್ ಭಂಡಾರಿ ಕೆಸರು ಗದ್ದೆ ಉದ್ಘಾಟಿಸುವರು. ವಿವಿಧ ಕ್ಷೇತ್ರಗಳ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಬಳಿಕ ಕೆಸರು ಗದ್ದೆಯಲ್ಲಿ ವಿವಿಧ ಕ್ರೀಡಾಕೂಟಗಳು ನಡೆಯಲಿದೆ. ಸಂಜೆ ಸಮಾರೋಪ ಸಮಾರಂಭ ನಡೆಯಲಿದ್ದು ಬಹುಮಾನ ವಿತರಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಮೂರ್ತೆದಾರರ ಸಹಕಾರಿ ಮಹಾಮಂಡಲ ನಿಯಮಿತ ಬಿ.ಸಿ.ರೋಡ್ ಇದರ ಕೇಂದ್ರ ಕಚೇರಿ ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ತಾಲೂಕು ಕೃಷಿಕ ಸಮಾಜದ ಕೃಷಿ ಕಚೇರಿ ಕಟ್ಟಡಕ್ಕೆ ಸ್ಥಳಾಂತರಗೊಂಡಿದ್ದು, ಶುಕ್ರವಾರ ಉದ್ಘಾಟನಾ ಸಮಾರಂಭ ನಡೆಯಿತು. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್.ರಾಜೇಂದ್ರ ಕುಮಾರ್ ನೂತನ ಕೇಂದ್ರ ಕಚೇರಿ ಉದ್ಘಾಟಿಸಿದರು. ಅವರು ಮಾತನಾಡಿ, ನಷ್ಟದಲ್ಲಿದ್ದ ಸಂಸ್ಥೆ ಇಂದು 13 ಲಕ್ಷ ರೂ. ಲಾಭಕ್ಕೆ ಬರಲು ಅಧ್ಯಕ್ಷ ಕೆ. ಸಂಜೀವ ಪೂಜಾರಿ ಅವರ ಪರಿಶ್ರಮ ಕಾರಣವಾಗಿದ್ದು, ಈ ಸಂಸ್ಥೆ ಸ್ವಂತ ಕಟ್ಟಡವನ್ನು ಹೊಂದಬೇಕಾಗಿದೆ. ಅದಕ್ಕೆ ಸಹಕಾರವನ್ನು ನೀಡುತ್ತೇವೆ, ಕಚೇರಿ ಪೀಠೋಪಕರಣಕ್ಕೆ ಎರಡು ಲಕ್ಷ ರೂ. ಗಳ ಆರ್ಥಿಕ ಸಹಕಾರ ನೀಡುವುದಾಗಿ ತಿಳಿಸಿದರು. ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ವಿಶೇಷ ಅಭ್ಯಾಗತರಾಗಿ ಭಾಗವಹಿಸಿ ಮಾತನಾಡಿ ಸಮಾಜದ ಅಭಿವೃದ್ಧಿಗೆ ಮೂರ್ತೆದಾರರ ಕೊಡುಗೆ ಅಪಾರವಾಗಿದ್ದು, ಹಿರಿಯರ ದೂರದೃಷ್ಟಿ ಫಲವಾಗಿ ಮುನ್ನಡೆದಿದೆ. ಹೊಸ ಕಟ್ಟಡ ನಿರ್ಮಾಣಕ್ಕೆ ನಿವೇಶನ ಗುರುತಿಸಿದರೆ, ಕಂದಾಯ ಸಚಿವರು ಹಾಗೂ ಮುಖ್ಯಮಂತ್ರಿ ಜೊತೆ ಮಾತನಾಡಿ ಸಹಕರಿಸುವುದಾಗಿ…

Read More

ಪಣಜಿ:ಶ್ರೀ ನಾರಾಯಣ ಗುರು ಚಾರಿಟೇಬಲ್ ಟ್ರಸ್ಟ್ ಗೋವಾ ಮತ್ತು ಬಿಲ್ಲವರ ಎಸೋಸಿಯೇಷನ್ ಗೋವಾ ಇದರ ಆಶ್ರಯದಲ್ಲಿ ಸಾಮೂಹಿಕ ಸತ್ಯ ನಾರಾಯಣ ಪೂಜೆ ಹಾಗೂ ಶ್ರೀ ನಾರಾಯಣ ಗುರು ಜಯಂತಿ ಸೆ.7 ರಂದು ಬೆಳಿಗ್ಗೆ 9ರಿಂದ ಗೋವಾ ಪಣಜಿಯ ಶ್ರೀ ಮಹಾಲಕ್ಷ್ಮೀ ದೇವಾಲಯದ ಸಭಾಂಗಣದಲ್ಲಿ ನಡೆಯಲಿದ್ದು ತುಳುನಾಡಿನ ಬಂಧುಗಳು ಈ. ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಜಂಟಿ ಸಂಘಟನೆ ಪ್ರಕಟಣೆಯಲ್ಲಿ ತಿಳಿಸಿದೆ.

Read More

ಬಂಟ್ವಾಳ: ದ.ಕ. ಜಿಲ್ಲಾ ಮೂರ್ತೆದಾರರ ಸಹಕಾರಿ ಮಹಾಮಂಡಲ ಇದರ ನೂತನ ಸ್ಥಳಾಂತರಿತ ಕೇಂದ್ರ ಕಚೇರಿಯು ಸೆ.೫ರಂದು ಶುಕ್ರವಾರ ಬಿ.ಸಿ.ರೋಡಿನ ಕೃಷಿಕ ಸಮಾಜದ ಕಟ್ಟಡದಲ್ಲಿ ಬೆಳಿಗ್ಗೆ 10.30ಕ್ಕೆ ಉದ್ಘಾಟನೆಗೊಳ್ಳಲಿದೆ. ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ನೂತನ ಕೇಂದ್ರ ಕಚೇರಿ ಉದ್ಘಾಟಿಸುವರು. ದ.ಕ. ಜಿಲ್ಲಾ ಮೂರ್ತೆದಾರರ ಸಹಕಾರಿ ಮಹಾಮಂಡಲದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಅಧ್ಯಕ್ಷತೆ ವಹಿಸುವರು. ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಭದ್ರತಾ ಕೋಶ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮಾಜಿ ಸಚಿವ ಬಿ.ರಮಾನಾಥ ರೈ, ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ, ದ.ಕ.ಜಿಲ್ಲಾ ಸಹಕಾರ ಸಂಗಗಳ ಉಪನಿಬಂಧಕ ಎಚ್.ಎನ್. ರಮೇಶ್, ಬಂಟ್ವಾಳ ಪುರಸಭೆಯ ಅಧ್ಯಕ್ಷ ವಾಸುಪೂಜಾರಿ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ…

Read More

ಬಂಟ್ವಾಳ: ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳವು 2024-25 ನೇ ಸಾಲಿನಲ್ಲಿ ಸಾಧಿಸಿದ ಸರ್ವತೋಮುಖ ಅಭಿವೃಧಿಗಾಗಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಮಹಾಸಭೆಯಲ್ಲಿ ಸಾಧಾನ ಪುರಸ್ಕಾರ ಪ್ರಶಸ್ತಿ ಸ್ವೀಕರಿತು. ಸಮಾಜ ಸೇವಾ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ ದಾಖಲೆಯ 1158.43 ಕೋಟಿ ವ್ಯವಹಾರ ನಡೆಸಿ 5.04 ಕೋಟಿ ಲಾಭ ಗಳಿಸಿರುತ್ತದೆ. ಸಂಘದ ದುಡಿಯುವ ಬಂಡವಾಳವು 259.66 ಕೋಟಿ ಆಗಿರುತ್ತದೆ ಮತ್ತು ಆಡಿಟ್ ವರ್ಗಿಕರಣದಲ್ಲಿ ಸತತ ‘ಎ’ ಶ್ರೇಣಿಯನ್ನು ಪಡೆದಿರುತ್ತದೆ. ಸಂಘವು ಸಾಧಿಸಿದ ಈ ಎಲ್ಲಾ ಸಾಧನೆಯನ್ನು ಗುರುತಿಸಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರು ಸತತ ನಾಲ್ಕನೇ ಬಾರಿ ಸಾಧಾನ ಪುರಸ್ಕಾರ ನೀಡಿ ಗೌರವಿಸಿದರು. ಸಂಘದ ಅಧ್ಯಕ್ಷ ಸುರೇಶ್ ಕುಲಾಲ್, ಪ್ರಧಾನ ವ್ಯವಸ್ಥಾಪಕ ಭೋಜ ಮೂಲ್ಯ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಡಾ. ಎಮ್.ಎನ್. ರಾಜೇಂದ್ರ ಕುಮಾರ್ ಅವರಿಂದ ಪ್ರಶಸ್ತಿ ಸ್ವಿಕರಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಜನಾರ್ದನ ಬೊಂಡಾಲ,…

Read More

ಬಂಟ್ವಾಳ: ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ 2024-2025ನೇ ಸಾಲಿನ ಸಾಧನಾ ಶ್ರೇಷ್ಠ ಪ್ರಶಸ್ತಿಯನ್ನು ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ ಎನ್ ರಾಜೇಂದ್ರ ಕುಮಾರ್ ನೀಡಿ ಗೌರವಿಸಿದರು. ಸಂಘದ ಅಧ್ಯಕ್ಷ ಕೆ.ಸಂಜೀವ ಪೂಜಾರಿ ಹಾಗೂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮಮತಾ ಜಿ. ಸ್ವೀಕರಿಸಿದರು. ನಿರ್ದೇಶಕರಾದ ಅರುಣ್ ಕುಮಾರ್ ಎಂ. ಆಶೀಶ್ ಪೂಜಾರಿ, ಕೆ.ಸುಜಾತಾ ಎಂ. ಹಾಗೂ ಎಜಿಎಂ ಶಿಲ್ಪಾ ಬಿ. ಹಾಗೂ ಶಾಖಾ ವ್ಯವಸ್ಥಾಪಕಿ ಅಶ್ವಿನಿ ಕಿರಣ್ ಹಾಗೂ ಮನೀಶಾ ಹಾಗೂ ಮಹಾಮಂಡಲದ ಸಿ ಇ ಒ ಕಿಶೋರ್ ಉಪಸ್ಥಿತರಿದ್ದರು. ಸಹಕಾರ ಸಂಘಗಳ ಉಪನಿಬಂಧಕ ಹೆಚ್ ಎನ್ ರಮೇಶ್,ಡಿ ಸಿ ಸಿ ಬ್ಯಾಂಕಿನ ನಿರ್ದೇಶಕರಾದ ಶಶಿಕುಮಾರ್ ರೈ, ಭಾಸ್ಕರ್ ಎಸ್ ಕೋಟ್ಯಾನ್, ಸದಾಶಿವ ಉಳ್ಳಾಲ,ಎಸ್ ಎನ್ ಮನ್ಮಥ,ಅಶೋಕ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು

Read More

ಬಂಟ್ವಾಳ: ಸೌತ್ ಕೆನರಾ ಫೋಟೊಗ್ರಾಫರ್ ಅಸೋಸಿಯೇಶನ್(ರಿ) ಇದರ ಬಂಟ್ವಾಳ ವಲಯದ ರಜತ ಸಂಭ್ರಮದ ಪ್ರಯುಕ್ತ ಬಂಟ್ವಾಳ ತಾಲೂಕಿನ ಮಕ್ಕಳಿಗೆ ಆನ್ ಲೈನ್ ಚಿತ್ರ ಬಿಡಿಸುವ ಸ್ಪರ್ಧೆ ( 8 ರಿಂದ 10 ನೇ ತರಗತಿಯ ಮಕ್ಕಳಿಗೆ ) ಆಯೋಜಿಸಲಾಗಿದೆ. ಚಿತ್ರದ ವಿಷಯ ಚೌತಿಯ ಸಂಭ್ರಮವಾಗಿದ್ದು ತಾವು ಬಿಡಿಸಿದ ಚಿತ್ರವನ್ನು ಸೆ.3 ಬುಧವಾರದೊಳಗಾಗಿ 9741480614 ಈ ನಂಬರಿನ ವಾಟ್ಸಫ್ ಮೂಲಕ ಕಳುಹಿಸಲು ಕೋರಲಾಗಿದೆ. ಸೂಚನೆಗಳು : *ಎ4 ಅಳತೆಯ ಕಾಗದದ ಮೇಲೆ ಚಿತ್ರ ಬಿಡಿಸಿ ಕಳುಹಿಸುವುದು. * ಚಿತ್ರದ ಕೆಳಗೆ ಮೊಬೈಲ್ ಸಂಖ್ಯೆಯನ್ನು ನಮೂದಿಸುವುದು. * ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನವಿರುವುದು. * ವಿಜೇತರಿಗೆ ಗೌರವ ಧನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು. * ಸಂಘಟಕರ ತೀರ್ಮಾನವೇ ಅಂತಿಮ. * ವಿಜೇತರಾದ ಮಕ್ಕಳು ಸಮಾರಂಭದ ದಿನ ತಾವು ಬಿಡಿಸಿದ ಚಿತ್ರವನ್ನು ಸಂಘಟಕರ ಸಮಕ್ಷಮದಲ್ಲಿ ಮತ್ತೊಮ್ಮೆ ಬಿಡಿಸಬೇಕು. * ವಿಜೇತರಾದ ಮಕ್ಕಳಿಗೆ 05-09-2025 ರಂದು ನಡೆಯುವ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ…

Read More

ಬಂಟ್ವಾಳ: ಇಲ್ಲಿನ ಶ್ರೀ ಇರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಶ್ರಾವಣ ಮಾಸದ ತಾಳಮದ್ದಲೆ ಸೇವೆ ಒಂದು ತಿಂಗಳ ಪರ್ಯಂತ ನಡೆಯಿತು. ಭಾನುವಾರ ದೇವಳದಲ್ಲಿ ಹಿರಿಯ ಅರ್ಥಧಾರಿ ಸಾಹಿತಿ ಪ್ರೋ. ಎಂ.ಎಲ್. ಸಾಮಗ, ಹವ್ಯಾಸಿ ಭಾಗವತ ಶ್ರೀಧರ ಪೂಜಾರಿ ಬಂಟ್ವಾಳ ಅವರನ್ನು ಸನ್ಮಾನಿಸಲಾಯಿತು. ದೇವಳದ ಆಡಳಿತ ಮೋಕ್ತೇಸರ ಅಶೋಕ್ ಶೆಣೈ ಅಧ್ಯಕ್ಷತೆ ವಹಿಸಿ ಮಾತನಾಡಿ ಕಾರ್ಯಕ್ರಮಕ್ಕೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಮುರಳೀಧರ ನೇರಂಕಿ ಸ್ವಾಗತಿಸಿದರು. ನಾಗೇಂದ್ರ ಪೈ ವರದಿ ವಾಚಿಸಿದರು. ದೇವದಾಸ ಅರ್ಕುಳ ಹಾಗೂ ವಾಮನ ಪಾಣೆಮಂಗಳೂರು ಸನ್ಮಾನ ಪತ್ರ ವಾಚಿಸಿದರು. ಪಿ. ವಸಂತ ಪ್ರಭು ವಂದಿಸಿದರು. ಸಂಕಪ್ಪ ಶೆಟ್ಟಿ ಸಂಚಯಗಿರಿ ಕಾರ್ಯಕ್ರಮ ನಿರ್ವಹಿಸಿದರು. ಬಳಿಕ ಸೀತಾ ಪರಿತ್ಯಾಗ ಮತ್ತು ಗಂಗಾ ಸಾರಥ್ಯ ತಾಳಮದ್ದಲೆ ನಡೆಯಿತು.

Read More