Author: admin
ಬಂಟ್ವಾಳ: ಸಾಹಿತ್ಯ, ಸಂಸ್ಕತಿ, ಸಂಘಟನೆ, ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ಆಳ್ವರ ಬರೆದದ್ದು ಕಡಿಮೆ ಓದಿದ್ದು ಹೆಚ್ಚು. ಅವರು ಭಾವನಾತ್ಮಕ ಜೀವಿ, ಕವಿ ಹೃದಯಿ. ಅವರ ಬಗ್ಹೆ ಬರೆದಿರುವ ಪುಸ್ತಕ ದ ತೋರಣ ಹಾಗೂ ಹೂರಣ ಅದ್ಭುತವಾಗಿದೆ ಎಂದು ಎಂದು ಜಾನಪದ ವಿದ್ವಾಂಸ, ವಿಶ್ರಾಂತ ಕುಲಪತಿ ಪ್ರೊ.ಬಿ.ಎ.ವಿವೇಕ್ ರೈ ಹೇಳಿದರು. ಏರ್ಯ ಲಕ್ಷ್ಮೀನಾರಾಯಣ ಆಳ್ವ ಶತಮಾನೋತ್ಸವ ಪ್ರಯುಕ್ತ ಬಂಟ್ವಾಳದ ಅಮ್ಟಾಡಿಯ ಏರ್ಯಬೀಡಿನಲ್ಲಿ ಡಾ.ನಾ. ದಾಮೋದರ ಶೆಟ್ಟಿ ಸಂಪಾದಿತ ಏರ್ಯ ಸಾಹಿತ್ಯ ಮರುಚಿಂತನ ಕೃತಿ ಅನಾವರಣಗೊಳಿಸಿ ಅವರು ಮಾತನಾಡಿದರು. ಏರ್ಯ ಲಕ್ಷ್ಮೀ ನಾರಾಯಣ ಆಳ್ವ ಅವರ ಪತ್ನಿ. ಆನಂದಿ ಎಲ್.ಆಳ್ವ ಕಾರ್ಯಕ್ರಮ ಉದ್ಘಾಟಿಸಿದರು.ನಾಡೋಜ ಪ್ರೊ.ಹಂಪ ನಾಗರಾಜಯ್ಯ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸಾಹಿತಿಗಳಾದ ಡಾ. ಕೆ. ಚಿನ್ನಪ್ಪ ಗೌಡ ಹಾಗೂ ಡಾ. ನಾ. ದಾಮೋದರ ಶೆಟ್ಟಿಯವರಿಗೆ ಏರ್ಯ ಡಾ. ಲಕ್ಷ್ಮೀನಾರಾಯಣ ಆಳ್ವ ಶತಮಾನೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಏರ್ಯಬಾಲಕೃಷ್ಣ ಹೆಗ್ಡೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಮರ್ ಟೀಕೆ ಸ್ವಾಗತಿಸಿದರು, ಆರ್. ನರಸಿಂಹ ಮೂರ್ತಿ ವಂದಿಸಿದರು.ಮೈಮ್ ರಾಮ್…
ಬಂಟ್ವಾಳ: ಭಾರೀ ಮಳೆಯ ಹಿನ್ನೆಲೆಯಲ್ಲಿ ಆ. 28 ಗುರುವಾರದಂದು ಬಂಟ್ವಾಳ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಸರಕಾರಿ, ಖಾಸಗಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಕಾಲೇಜಿಗೆ ರಜೆ ನೀಡಿ ಬಂಟ್ವಾಳ ತಹಶಿಲ್ದಾರ್ ಆದೇಶ ಹೊರಡಿಸಿದ್ದಾರೆ.
ಬಂಟ್ವಾಳ: ಮಂಚಿ ವಲಯ ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟ ಗುರುವಾರ ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶಾಲಾ ಎಸ್ ಡಿಎಂಸಿ ಕಾರ್ಯಧ್ಯಕ್ಷ ಜಯಪ್ರಕಾಶ್ ಪೆರ್ವ ಉದ್ಘಾಟಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸದಸ್ಯರಾದ ಸೀತಾರಾಮ ಅಗೋಳಿಬೆಟ್ಟು ಹಾಗೂ ಶಾಲಾ ಹಿರಿಯ ವಿದ್ಯಾರ್ಥಿ ಸಂದೀಪ್ ಸಾಲ್ಯಾನ್ ಶುಭ ಹಾರೈಸಿದರು. ಪಂಚಾಯತಿ ಸದಸ್ಯ ವಿಶ್ವನಾಥ ಬೆಳ್ಚಾಡ, ಎಸ್ಡಿಎಂಸಿ ಸದಸ್ಯರಾದ ದಾಮೋದರ ಮಡಿವಾಳ ಪಡ್ಪು, ನಳಿನಾಕ್ಷಿ, ಆಯುಷ್ ವೈದ್ಯಾಧಿಕಾರಿ ಡಾ.ಮಣಿಕರ್ಣಿಕಾ, ಪೋಷಕರಾದ ಸಂಜೀವ ಪೂಜಾರಿ , ಅಶೋಕ , ಚಂದ್ರಶೇಖರ, ಸಿಆರ್ ಪಿ ಇಂದಿರಾ ವಲಯ ನೋಡಲ್ ರಫೀಕ್, ರಾಘವೇಂದ್ರ ಉಪಸ್ಥಿತರಿದ್ದರು. ಶಾಲಾ ಉಪಪ್ರಾಂಶುಪಾಲೆ ಜ್ಯೋತಿ ಕುಮಾರಿ ಸ್ವಾಗತಿಸಿದರು,ಶಿಕ್ಷಕಿ ಮೋಕ್ಷಿತಾ ವಂದಿಸಿದರು, ಸಹಶಿಕ್ಷಕ ಬಾಲಕೃಷ್ಣ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಬಂಟ್ವಾಳ: ಸಿದ್ದಕಟ್ಟೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದಲ್ಲಿ ಸದಸ್ಯರಾಗಿ ಬೆಳೆಸಾಲ ಪಡೆದು ಮೃತರಾದ ಸದಸ್ಯರಿಗೆ ಆರ್ಥಿಕ ಸಹಾಯ ನೀಡುವ ಉದ್ದೇಶದಿಂದ ರೈತ ಕಲ್ಯಾಣ ನಿಧಿ ಯೋಜನೆಯಡಿಯಲ್ಲಿ ಮರಣ ಹೊಂದಿದ ಕುಟುಂಬದ ನಾಮಿನಿ 22 ಸದಸ್ಯರುಗಳಿಗೆ ತಲಾ ರೂ.10 ಸಾವಿರದಂತೆ ರೂ.2.20 ಲಕ್ಷ ರೈತ ಕಲ್ಯಾಣ ನಿಧಿಯನ್ನು ಇತ್ತೀಚಿಗೆ ಸಂಘದ ಬೆಳ್ಳಿಪ್ಪಾಡಿ ಕೃಷ್ಣ ರೈ ರೈತ ಸಭಾಂಗಣದಲ್ಲಿ ವಿತರಿಸಲಾಯಿತು . ಸಿದ್ದಕಟ್ಟೆ ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷ ರತ್ನಕುಮಾರ್ ಚೌಟ ಮುಖ್ಯಅತಿಥಿಯಾಗಿ ಭಾಗವಹಿಸಿ ರೈತ ಕಲ್ಯಾಣ ನಿಧಿಯನ್ನು ಫಲಾನುಭವಿಗಳಿಗೆ ವಿತರಿಸಿದರು . ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಮಾತಾನಾಡಿ , ಬೆಳೆ ಸಾಲ ಪಡೆದುಕೊಂಡು ಸಂಘದಲ್ಲಿ ವ್ಯವಹಾರ ಮಾಡಿಕೊಂಡು ಬರುತ್ತಿದ್ದ ರೈತ ಸದಸ್ಯರು ಮರಣ ಹೊಂದಿದಾಗ ಕುಟುಂಬಕ್ಕೆ ಆರ್ಥಿಕ ಸಹಕಾರ ನೀಡುವ ಉದ್ದೇಶದಿಂದ ಸಂಘವು ರೈತ ಕಲ್ಯಾಣ ನಿಧಿ ಯೋಜನೆಯನ್ನು ಸ್ಥಾಪಿಸಿ , ಸದ್ರಿ ಯೋಜನೆಯಡಿಯಲ್ಲಿ ಮೃತ ಸದಸ್ಯರ ಕುಟುಂಬಕ್ಕೆ ಸಹಾಯ ಮಾಡುತ್ತಿದೆ ಎಂದು ತಿಳಿಸಿದರು. ಸಂಘದ ಉಪಾಧ್ಯಕ್ಷ…
ಬಂಟ್ವಾಳ: ಅಮ್ಮಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಕಳೆದ ಸಾಲಿನಲ್ಲಿ ಒಟ್ಟು 277.22 ಕೋಟಿಗೂ ಮಿಕ್ಕಿ ವ್ಯವಹಾರ ನಡೆಸಿ, ರೂ 1.13 ಕೋಟಿ ಮೊತ್ತದ ಲಾಭ ಗಳಿಸುವ ಮೂಲಕ ಸದಸ್ಯರಿಗೆ ಶೇ10ರಷ್ಟು ಲಾಭಾಂಶ ವಿತರಿಸುತ್ತಿದೆ ಎಂದು ಸಂಘದ ಅಧ್ಯಕ್ಷೆ ಮಲ್ಲಿಕಾ ವಿ ಶೆಟ್ಟಿ ಹೇಳಿದರು. ತೊಡಂಬಿಲ ಸೇಕ್ರೆಡ್ ಹಾರ್ಟ್ ಚರ್ಚ್ ಹಾಲ್ ನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಂಘವು ಸದಸ್ಯರಿಗೆ ಅನೇಕ ಯೋಜನೆಗಳನ್ನು ರೂಪಿಸಿದ್ದು ಅದರ ಸದುಪಯೋಗ ಪಡೆಯುವಂತೆ ವಿನಂತಿಸಿದರು, ಸಂಘವು ಅಡಿಟ್ ವರ್ಗಿಕರಣದಲ್ಲಿ “ಎ” ಸ್ಥಾನಮಾನ ಪಡೆದು, ಸಾಲ ವಸೂಲಾತಿಯಲ್ಲಿ ಶೇ 99.40 ಪ್ರಗತಿ ದಾಖಲಿಸಿದೆ ಎಂದರು. ವಾರ್ಷಿಕ ಮಹಾ ಸಭೆಯನ್ನು ಸಂಘದ ಹಿರಿಯ ಸದಸ್ಯರಾದ ಪದ್ಮನಾಭ ರಾವ್, ರಾಘವನ್ ನಾಯರ್, ಮೊಂತು ಡಿ ಸೋಜಾ, ಪಿಲಿಪ್ ಮೊಂತೆರೋ, ಪ್ಲಾವಿಯ ಮೊಂತೆರೋ, ಉದ್ಘಾಟಿಸಿದರು. ಇದೇ ವೇಳೆ ಸಂಘದ ಸಿಇಒ ಅಜಯ್ ಕುಮಾರ್ ಅಜಿಲ ವಾರ್ಷಿಕ ವರದಿ ಮಂಡಿಸಿ, ರೂ47.85ಕೋಟಿ ಠೇವಣಿ ಸಂಗ್ರಹ,…
ಬಂಟ್ವಾಳ: ನರಿಕೊಂಬು ಗ್ರಾಮದ ಅರುಂಧತಿ ಸಂಜೀವಿನಿ ಒಕ್ಕೂಟದ ಮಹಾಸಭೆಯು ಪಂಚಾಯತಿ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಕಾರ್ಯಕ್ರಮದಲ್ಲಿ ನರಿಕೊಂಬು ಗ್ರಾ.ಪಂ. ಅಧ್ಯಕ್ಷ ಸಂತೋಷ್ ಕುಮಾರ್, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹರೀಶ್ ಎಚ್, ಎಸ್ ಡಿಎ ಗೋಪಾಲ್ ಬಿಸ್ಪೆ, ಒಕ್ಕೂಟದ ಅಧ್ಯಕ್ಷೆ ವಿದ್ಯಾ ಪುಷ್ಪರಾಜ್, ಕೋಶಾಧಿಕಾರಿ ಗೀತಾ ಉಪಸ್ಥಿತರಿದ್ದರು. ಕೃಷಿ ಇಲಾಖೆಯ ಹನುಮಂತ ಸದಸ್ಯರಿಗೆ ಅಣಬೆ ಹಾಗೂ ಮಲ್ಲಿಗೆ ಕೃಷಿಯ ಬಗ್ಗೆ ಮಾಹಿತಿ ನೀಡಿದರು. ಸಂಪನ್ಮೂಲ ವ್ಯಕ್ತಿ ಪುಷ್ಪಲತಾ ಪರಿವರ್ತನಾ ಕಾರ್ಯಕ್ರಮದಡಿ ಮಾದಕ ವ್ಯಸನ ಮುಕ್ತ ಕರ್ನಾಟಕ ಬಗ್ಗೆ ಮಾಹಿತಿ ನೀಡಿ ಪ್ರತಿಜ್ಞೆ ವಿಧಿ ಬೋಧಿಸಿದರು. ಎಸ್ ಡಬ್ಲ್ಯು ಎಂ ವಾಹನ ಚಾಲಕಿ ಮತ್ತು ನಿರ್ವಾಹಕಿಯನ್ನು ಅಭಿನಂದಿಸಲಾಯಿತು. ಎಲ್ ಸಿ ಆರ್ ಪಿ ರಶ್ಮಿ ಸ್ವಾಗತಿಸಿದರು. ಒಕ್ಕೂಟದ ಕಾರ್ಯದರ್ಶಿ ಗಾಯತ್ರಿ 2024-25 ನೇ ಸಾಲಿನ ವರದಿಯನ್ನು ಮಂಡಿಸಿದರು. ರೂಪ ಲೆಕ್ಕಪತ್ರ ಮಂಡಿಸಿದರು.ವೀಣಾ ವಂದಿಸಿದರು.ಪಶು ಸಖಿ ಸೌಮ್ಯ ಕಾರ್ಯಕ್ರಮ ನಿರೂಪಿಸಿದರು. ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತರು, ಒಕ್ಕೂಟದ ಸದಸ್ಯರು ಭಾಗವಹಿಸಿದ್ದರು.
ಬಂಟ್ವಾಳ: ದೀನ ದುರ್ಬಲರು, ಹಿಂದುಳಿದ ವರ್ಗಗಳ ಜನರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ಹಿಂದುಳಿದ ವರ್ಗದ ಜನರು ಶಿಕ್ಷಣ ವಂತರಾಗಿ ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳಲು ಕಾರಣಕರ್ತರಾದವರು ಎಂದು ಬಂಟ್ವಾಳ ಪುರಸಭಾಧ್ಯಕ್ಷ ವಾಸು ಪೂಜಾರಿ ಹೇಳಿದರು. ಬಂಟ್ವಾಳ ತಾಲೂಕು ಪಂಚಾಯತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬಂಟ್ವಾಳ ಇದರ ಆಶ್ರಯದಲ್ಲಿ ಬಿ.ಸಿ.ರೋಡಿನ ಎಸ್ ಜೆ ಎಸ್ ಆರ್ ವೈ ಸಭಾಂಗಣದಲ್ಲಿ ನಡೆದ ಡಿ. ದೇವರಾಜ ಅರಸು ಅವರ 110 ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ತಾಲೂಕು ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿ ಸಚಿನ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಜೋ ಪ್ರದೀಪ್ ಡಿಸೋಜ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ನೋಣಯ್ಯ ನಾಯ್ಕ, ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ್ ಕುಮಾರ್ ರೈ, ಜಾನುವಾರು ಅಭಿವೃದ್ಧಿ ಅಧಿಕಾರಿ ಕೃಷ್ಣಮೂರ್ತಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ…
ಬಂಟ್ವಾಳ: ಧರ್ಮಸ್ಥಳ ಧರ್ಮ ರಕ್ಷಣಾ ವೇದಿಕೆ ಬಂಟ್ವಾಳ ಇದರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳ ಮೇಲಿನ ಅವಹೇಳನವನ್ನು ಖಂಡಿಸಿ ಜನಾಗ್ರಹ ಸಭೆ ಬಿ.ಸಿ.ರೋಡಿನಲ್ಲಿ ಬುಧವಾರ ನಡೆಯಿತು. ಬಿ.ಸಿ.ರೋಡಿನ ತಾಲೂಕು ಆಡಳಿತ ಸೌಧದ ಮುಂಭಾಗ ನಡೆದ ಸಭೆಯಲ್ಲಿ ಯಕ್ಷಗಾನ ಅರ್ಥಧಾರಿ ಉಜಿರೆ ಅಶೋಕ್ ಭಟ್ ಮಾತನಾಡಿ ದೇಶದ ಅಸ್ಮಿತೆ ಪುಣ್ಯ ಕ್ಷೇತ್ರಗಳಲ್ಲಿದೆ. ಅಂತಹ ಪುಣ್ಯಕ್ಷೇತ್ರಗಳಲ್ಲೊಂದಂತಹ ಧರ್ಮಸ್ಥಳ ಹಾಗೂ ಧರ್ಮಧಿಕಾರಿಯ ವಿರುದ್ರ ಅಪಪ್ರಚಾರ, ಅವಹೇಳನದ ಮೂಲಕ ದೇಶದ ಅಸ್ಮಿತೆಯನ್ನು ನಾಶ ಮಾಡುವ ಕಾರ್ಯ ನಡೆಯುತ್ತಿದೆ. ಕ್ಷೇತ್ರದ ದಾನ ಪರಂಪರೆಯ ಮೇಲೆ ಆಕ್ರಮಣವಾಗುತ್ತಿದೆ. ನಮ್ಮ ಧರ್ಮ ಕ್ಷೇತ್ರದ ವಿರುದ್ಧ ಅಪಚಾರ ಆಗುವಾಗ ನಾವೆಲ್ಲ ಒಟ್ಟಾಗಿ ಮೈ ಕೊಡವಿ ಎದ್ದು ನಿಲ್ಲಬೇಕು, ಧರ್ಮಸ್ಥಳ ಕ್ಷೇತ್ರದ ವಿರುದ್ದ ಅಪಪ್ರಚಾರ ಮಾಡುವವರಿಗೆ ಹಣ ಎಲ್ಲಿಂದ ಬರುತ್ತಿದೆ, ಅವರ ಹಿಂದೆ ಯಾರಿದ್ದಾರೆ ಎನ್ನುವುದು ತನಿಖೆಯಾಗಬೇಕು, ಕ್ಷೇತ್ರದ ಪರವಾದ ಹೋರಾಟ ಅಭಿಯಾನ ಆಗಬೇಕು, ಈ ಒಟ್ಟು ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವರ್ಗಾಯಿಸಬೇಕು ಎಂದು ಆಗ್ರಹಿಸಿದರು. ಬಿ.ಸಿ.ರೋಡಿನ…
ಬಂಟ್ವಾಳ: ಇಲ್ಲಿನ ಫರ್ಲಾ ವೆಲಂಕಣಿ ಮಾತೆಯ ದೇವಾಲಯದಲ್ಲಿ ಭಾರತೀಯ ಕಥೊಲಿಕ್ ಯುವ ಸಂಚಲನ ಫರ್ಲಾ ಘಟಕದ ಆಶ್ರಯದಲ್ಲಿ ಯುವ ಸಂಭ್ರಮ- ೨೦೨೫ ಹಾಗೂ ಭರತ ನಾಟ್ಯದಲ್ಲಿ ವಿಶ್ವ ದಾಖಲೆ ಮಾಡಿದ ರಿಮೊನಾ ಇವೆಟ್ ಪಿರೇರಾ ಇವರ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ದೇವಾಲಯದ ಧರ್ಮಗುರು ವಂದನೀಯ ಗುರು ಮಾರ್ಕ್ ಅರುಣ್ ಡಿಸೋಜ ಆಶೀರ್ವಚನ ನೀಡಿ ಯುವಕರು ದೇಶದ ಶಕ್ತಿ, ಅವರೆಲ್ಲಾ ಏಕತೆ ಮತ್ತು ಛಲದಿಂದ ಒಗ್ಗೂಡಿದರೆ ಮಾತ್ರ ಸಮಾಜಕ್ಕೆ ಉತ್ತಮ ಕೊಡುಗೆ ನೀಡಲು ಸಾಧ್ಯ ಎಂದರು. ಬಳಿಕ ವಿಶ್ವದಾಖಲೆಯ ಸಾಧಕಿ ರಿಮೊನಾ ಇವೆಟ್ ಪಿರೇರಾ ಇವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ವಂದನೀಯ ಗುರು ಗಿಲ್ಬರ್ಟ್ ಮಸ್ಕರೇನಸ್, ವಂದನೀಯ ಗುರು ವಿಲ್ಫ್ರೆಡ್ ರೊಡ್ರಿಗಸ್ , ಧರ್ಮಪ್ರಾಂತ್ಯದ ಜೊತೆ ಕಾರ್ಯದರ್ಶಿ ಪ್ಲೋಯ್ಡ್ ವಿನ್ಸೆಂಟ್ ಪಿಂಟೊ, ಸಂಪನ್ಮೂಲ ವ್ಯಕ್ತಿ ಡಾ. ಸ್ಟೀವನ್ ಡಿಸೋಜ, ದೀಪ್ತಿ ಡಿಸೋಜ, ಘಟಕ ಅಧ್ಯಕ್ಷೆ ರೀಮಾ ಮಿನೇಜಸ್, ಚರ್ಚ್ ಪಾಲನಾ ಪರಿಷತ್ ಸದಸ್ಯರು, ಐಸಿಯಂ ಮತ್ತು ವೈಸಿಎಸ್ ಪದಾಧಿಕಾರಿಗಳು ಮತ್ತು ಸಚೇತಕರು…
ಬಂಟ್ವಾಳ: ವಿಶ್ವಕರ್ಮ ಸಮಾಜ ಸೇವಾ ಸಂಘ ಬಂಟ್ವಾಳ ಇದರ ಆಶ್ರಯದಲ್ಲಿ ಶ್ರಾವಣದಲ್ಲಿ ಒಂದು ದಿನ ವಿಶೇಷ ಕಾರ್ಯಕ್ರಮ ಬಂಟ್ವಾಳ ಅಜೆಕಲದ ವಿಶ್ವಕರ್ಮ ಸಭಾಭವನದಲ್ಲಿ ವಿಜ್ರಂಭಣೆಯಿಂದ ನಡೆಯಿತು. ದೀಪ ನಮಸ್ಕಾರ ಪೂಜೆ, ವಿವಿಧ ಮನೋರಂಜನಾ ಆಟಗಳು, ಶ್ರಾವಣ ಮಾಸದ ಪ್ರವಚನ, ಸಭಾ ಕಾರ್ಯಕ್ರಮ, ವಿವಿಧ ಖಾದ್ಯಗಳ ಸಜ ಭೋಜನ, ನೃತ್ಯ ಮೊದಲಾದ ವಿಶೇಷ ಕಾರ್ಯಕ್ರಮಗಳೊಂದಿಗೆ ಸಂಪನ್ನ ಗೊಂಡಿತು. ಸಭಾ ಕಾರ್ಯಕ್ರಮವನ್ನು ನಿವೃತ್ತ ಶಿಕ್ಷಕಿ ರತ್ನಾವತಿ ಜೆ. ಆಚಾರ್ಯ ಬೈಕಾಡಿ ಉದ್ಘಾಟಿಸಿದರು. ಬಳಿಕ ಗೌರವ ಸನ್ಮಾನ ಸ್ವೀಕರಿಸಿ ಮಾತನಾಡಿ ಅವರು ತುಳುನಾಡಿನಲ್ಲಿ ನಾವು ನಮ್ಮ ಪರಂರಪೆರಯಿಂದ ಬಂದ ಆಚಾರ ವಿಚಾರಗಳನ್ನು ಪಾಲಿಸಿಕೊಂಡು ಅವುಗಳನ್ನು ನಮ್ಮ ಮುಂದಿನ ತಲೆಮಾರಿಗೆ ದಾಟಿಸುವ ಪ್ರಯತ್ನ ಮಾಡಬೇಕಾಗಿದೆ. ನಮ್ಮದೇಶದಲ್ಲಿ ಹಬ್ಬಗಳು ಪ್ರಧಾನ. ಶ್ರಾವಣ ಮಾಸದಲ್ಲಿ ಹಬ್ಬಗಳು ತುಂಬಾ ವಿಶೇಷವಾಗಿದೆ. ಶ್ರಾವಣವನ್ನು ಶಿವನ ಆರಾಧನೆಯ ತಿಂಗಳು ಎನ್ನುತ್ತಾರೆ, ಸಮುದ್ರ ಮಂಥನ ನಡೆದು ಶಿವ ವಿಷ ಸೇವಿಸಿದ್ದು ಶ್ರಾವಣ ಮಾಸದಲ್ಲಿ ಎನ್ನುವ ನಂಬಿಕೆ ಇದೆ. ಸಮುದಾಯದ ಸಂಘಟನೆ ಮಾಡಲು ಈ ಕಾರ್ಯಕ್ರಮ ಒಂದು…








