Author: admin

ಬಂಟ್ವಾಳ: ಇಲ್ಲಿನ ಬಂಟ್ವಾಳ ಪೇಟೆಯಿಂದ ಮೂಡಬಿದಿರೆ, ವಾಮದಪದವು ಮತ್ತಿತರ ಭಾಗಗಳಿಗೆ ಹೋಗುವ ಖಾಸಗಿ ಬಸ್ಸುಗಳು ಕೊಟ್ರಮಣ ಗಂಡಿ ತರಕಾರಿ ಅಂಗಡಿ ಬಳಿ ರಸ್ತೆಯಲ್ಲಿಯೇ ನಿಲ್ಲುವುದರಿಂದ ಇತರ ವಾಹನಗಳ ಸಂಚಾರಕ್ಕೆ ಹಾಗೂ ಪಾದಾಚಾರಿಗಳಿಗೆ ತುಂಬಾ ತೊಂದರೆಯಾಗುತ್ತಿರುವ ಹಿನ್ನಲೆಯಲ್ಲಿ ಆ.18 ಸೋಮವಾರದಿಂದ ಕೊಟ್ರಮಣ ಗಂಡಿಯಲ್ಲಿರುವ ಬಸ್ಸು ನಿಲ್ದಾಣದಲ್ಲಿ ಕಡ್ಡಾಯವಾಗಿ ಬಸ್ಸು ನಿಲುಗಡೆ ಮಾಡಬೇಕು, ತಪ್ಪಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆ ಹಾಗೂ ಬಂಟ್ವಾಳ ಪುರಸಭೆ ಜಂಟಿ ಪ್ರಕಟಣೆ ಹೊರಡಿಸಿದೆ. ಬಂಟ್ವಾಳ ಕೊಟ್ರಮಣ ಗಂಡಿಯಲಿ ವಿಶಾಲವಾದ ಬಸ್ಸು ತಂಗುದಾಣ, ಪ್ರಯಾಣಿಕರ ತಂಗುದಾಣ ಸಹಿತ ಸುಸಜ್ಜಿತ ಶೌಚಾಲಯ ವ್ಯವಸ್ಥೆ ಇದ್ದರೂ ಕೂಡ ಹಲವು ವರ್ಷಗಳಿಂದ ಮೂಡಬಿದಿರೆ, ವಾಮದಪದವು ಮತ್ತಿತರ ಭಾಗಗಳಿಗೆ ಹೋಗುವ ಖಾಸಗಿ ಬಸ್ಸುಗಳು ಬಸ್ಸು ನಿಲ್ದಾಣದಲ್ಲಿ ನಿಲುಗಡೆಯಾಗದೆ ಬಂಟ್ವಾಳ ಪೇಟೆಯಿಂದ ಬಂಟ್ವಾಳ ಬೈಪಾಸ್‌ಗೆ ತಿರುವು ಪಡೆಯುವ ರಸ್ತೆಯಲ್ಲಿಯೇ ನಿಲುಗಡೆಯಾಗುತ್ತಿದೆ. ಪ್ರಯಾಣಿಕರನ್ನು ಇಲ್ಲಿಯೇ ಹತ್ತಿಸಿಕೊಂಡು ತುಂಬಾ ಹೊತ್ತುಗಳ ಕಾಲ ರಸ್ತೆಯಲ್ಲಿಯೇ ನಿಲುಗಡೆಯಾಗುತ್ತಿರುವುದರಿಂದ ಈ ರಸ್ತೆಯ ಮೂಲಕ ಸಂಚರಿಸುವ ಇತರ ಎಲ್ಲಾ ವಾಹನಗಳಿಗೆ…

Read More

ಬಿ .ಸಿ .ರೋಡ್ _ಶ್ರೀ ಸಾಯಿ ಕಿಡ್ ಝೋನ್ ವಿದ್ಯಾ ಸಂಸ್ಥೆಯಲ್ಲಿ ಸ್ವಾತ್ರಂತ್ರ್ಯ ದಿನಾಚರಣೆ.ಬಂಟ್ವಾಳ: ಬಿ ಸಿ ರೋಡ್ ಶ್ರೀ ಸಾಯಿ ಕಿಡ್ ಝೋನ್ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ ತೇಜಸ್ವಿನಿ ಪೂಜಾರಿ ಯವರು ಧ್ವಜಾರೋಹಣ ಗೈದರು. ನಂತರ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಬಿ‌.ಸಿ.ರೋಡ್ ಅಮರ್ ಗ್ರೂಪ್ ನ ಮಾಲಕ ಕೆ. ಸತೀಶ್ ಕುಮಾರ್ ರವರು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವನ್ನು ವಿತರಿಸಿ,ನಂತರ ಶುಭವನ್ನು ಹಾರೈಸಿದರು. ಅತಿಥಿಗಳಾಗಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ರಾದ ತೇಜಸ್ವಿನಿ ಪೂಜಾರಿ, ಉಪಾಧ್ಯಕ್ಷ ರಾದ ಸುಂದರ್ ಎನ್, ಕೋಶಾಧ್ಯಕ್ಷ ರಾದ ಜಯಶ್ರೀ ರವರು ಭಾಗವಹಿಸಿದರು. ಆದಿತ್ಯವಾರ ದಂದು ಪೋಷಕರಿಗೆ ನಡೆದ ಬೆಂಕಿ ಬಳಸದೆ ಅಡುಗೆ ತಯಾರಿ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ಐತಪ್ಪ ಪೂಜಾರಿ ಯವರು ವಹಿಸಿ ಸ್ವಾತ್ರಂತ್ರ್ಯ ದಿನಾಚರಣೆಯ ಬಗ್ಗೆ ಮಾತನಾಡಿದರು. ವಿದ್ಯಾರ್ಥಿ…

Read More

ಬಂಟ್ವಾಳ : ಕಲ್ಲಡ್ಕದ ವಜ್ರಕಾಯ ಫ್ರೆಂಡ್ಸ್ ಇದರ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವವನ್ನು ಕಲ್ಲಡ್ಕ ಸತ್ಯದೇವತಾ ಗುಡಿಯ ಬಳಿ ಸಂಭ್ರಮ‌ ಸಡಗರದಿಂದ ಆಚರಿಸಲಾಯಿತು. ನಿವೃತ್ತ ಶಿಕ್ಷಕ ರಾಧಾಕೃಷ್ಣ ಅಡ್ಡಂತಾಯ ರವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಧ್ವಜಾರೋಹಣವನ್ನು ನೆರವೇರಿಸಿದರು. ಅವರು ಮಾತನಾಡಿ ನಮ್ಮ‌ದೇಶದ ಸ್ವಾತಂತ್ರ್ಯದ ಹೋರಾಟಕ್ಕೆ ಕೇವಲ‌ 62 ವರ್ಷದ ಇತಿಹಾಸ ವಿರುವುದಲ್ಲ..‌ ಬದಲಾಗಿ ಈ ದೇಶಕ್ಕೆ ಅಲೆಕ್ಸಾಂಡರ್ ಕ್ರಿ.ಪೂ.327 ದಾಳಿ ಮಾಡಿದಾಗ ಅವನನ್ನು ಎದುರಿಸಿದಂತಹ ಪುರೂರವನಿಂದ ಇಲ್ಲಿಯವರೆಗೆ‌ ಸಾವಿರಾರು ವರ್ಷಗಳ ಕಾಲ ಅನೇಕ ಮಂದಿ‌ ದೇಶಕ್ಕಾಗಿ ಹೋರಾಟ ಮಾಡಿದ್ದಾರೆ ಎಂದರು. ಅತಿಥಿಗಳಾಗಿ ರತ್ನಾಕರ ಶೆಟ್ಟಿ ಕಲ್ಲಡ್ಕ , ಕೃಷ್ಣಪ್ಪ ಕುಲಾಲ್ ಕಲ್ಲಡ್ಕ ಜನಾರ್ಧನ್,‌ ಚೇತನ್ ಟೈಲರ್, ದಾಮೋದರ್ ಪಂಡಿತ್, ನಾರಾಯಣ ಬಂಡಾರಿ, ಪ್ರೇಮ, ಲೀಲಾವತಿ, ಲಕಿತಾ ಆರ್ ಶೆಟ್ಟಿ ಪಾಲ್ಗೊಂಡಿದ್ದರು. ವಜ್ರಕಾಯ ಫ್ರೆಂಡ್ಸ್ ನ ಪ್ರಮುಖರಾದ ವಿಜ್ಞೇಶ್ ಕುಲಾಲ್, ಸತೀಶ್, ಹೊನ್ನಪ್ಪ ದಯಾನಂದ, ಸದಾನಂದ, ತಿಲಕ್ ಕಿರಣ್, ಧನಂಜಯ ಮೊದಲಾದವರು ಉಪಸ್ಥಿತರಿದ್ದರು . ಜಗದೀಶ್ ರೈ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಚಂದ್ರಶೇಖರ್…

Read More

ಬಂಟ್ವಾಳ: ಇಲ್ಲಿನ ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ‌ ಆಚರಣಾ ಸಮಿತಿ ವತಿಯಿಂದ‌ 79ನೇ ಸ್ವಾತಂತ್ರ್ಯ ದಿನವನ್ನು ತಾಲೂಕು ಆಡಳಿತ ಸೌಧದ ಮುಂಭಾಗ ಆಚರಿಸಲಾಯಿತು. ‌ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್ ಧ್ವಜಾರೋಹಣ ನೆರವೇರಿಸಿದರು. ಶಾಸಕ ರಾಜೇಶ್ ನಾಯ್ಕ್ ವಿವಿಧ ತುಕುಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು. ಬಳಿಕ ಡಾ. ಬಿ.ಆರ್‌. ಅಂಬೇಡ್ಕರ್ ಸಮುದಾಯ ಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಅರ್ಚನಾ ಭಟ್ ಸಂದೇಶ ನೀಡಿ ನಮಗೆ ಸಿಕ್ಕಿರುವ ಸ್ವಾತಂತ್ರ್ಯ ವನ್ನು ದುರುಪಯೋಗ ಪಡಿಸದೆ ರಾಷ್ಟ್ರದ ಪ್ರಗತಿಗೆ ಕೈ ಜೋಡಿಸಬೇಕು ಎಂದರು. ಬಂಟ್ವಾಳ ಪುರಸಭಾಧ್ಯಕ್ಷ ಬಿ.‌ವಾಸು ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ ದೇಶಕ್ಕೆ ಸ್ವಾತಂತ್ರ್ಯ ಬಂದು 79 ವರ್ಷ ಸಂದರೂ ಇಂದಿಗೂ ಅನೇಕ ಮಂದಿ ಮೂಲಭೂತ ಸೌಲಭ್ಯದಿಂದ‌ ವಂಚಿತರಾದ ಜನರಿದ್ದಾರೆ. ‌ಅವರಿಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿ ವರ್ಗ ಮೂಲಭೂತ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸ್ಪಂದನೆ ನೀಡುವ ಕಾರ್ಯ ಆಗಬೇಕಿದೆ ಎಂದರು. ಬೂಡ ಅಧ್ಯಕ್ಷ ಬೇಬಿ ಕುಂದರ್ ಮಾತನಾಡಿ ಬಂಟ್ವಾಳದ ಸ್ವಾತಂತ್ರ್ಯ ಆಚರಣೆ ಉತ್ಸಾಹ…

Read More

ಬಂಟ್ವಾಳ: ಇಲ್ಲಿನ ಸಂಚಯಗಿರಿಯಲ್ಲಿರುವ ನಾಗರಿಕ ಕ್ರಿಯಾ ಸಮಿತಿ ಆಶ್ರಯದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಕ್ರಿಯಾ ಸಮಿತಿಯ ಅಧ್ಯಕ್ಷ ಸುರೇಶ್ ಬಂಗೇರ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿ ಪರಿಸರದ ಸ್ವಚ್ಚತೆಯನ್ನು ಕಾಪಾಡುವ ಸಂಕಲ್ಪ ಕೈಗೊಳ್ಳಬೇಕು ಎಂದರು. ಸಮಿತಿಯ ಮಾಜಿ ಅಧ್ಯಕ್ಷ ಸುಧಾಕರ ಸಾಲ್ಯಾನ್ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿ ಸ್ವಾತಂತ್ರ್ಯ ಸಂಭ್ರಮ‌ ಕೇವಲ ಒಂದು ದಿನಕ್ಕೆ ಸೀಮಿತವಾಗದೆ ದೇಶಕ್ಕಾಗಿ‌ ಹೋರಾಡಿದವರನ್ನು ಅನುದಿನವೂ ನೆನೆಪಿಸಿಕೊಳ್ಳಬೇಕು ಎಂದರು. ಸಮಿತಿಯ ಪ್ರಮುಖರಾದ ನರಸಿಂಹ ರಾಜ ಹೊಳ್ಳ, ಹರೀಶ್ ಶೆಣೈ ತಾಯಮ್ಮ,‌ ಎ. ದಾಮೋದರ್ ಸಂಚಯಗಿರಿ, ಧನಂಜಯ ಬಾಳಿಗ ಹಾಗೂ ಸದಸ್ಯರು ಹಾಗೂ ಸಂಚಯಗಿರಿ ನಿವಾಸಿಗಳು ಉಪಸ್ಥಿತರಿದ್ದರು. ನಿವೃತ್ತ ಶಿಕ್ಷಕ ಸಂಕಪ್ಪ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Read More

ಬಂಟ್ವಾಳ: ಆಲದಪದವು ನೂರುಲ್ ಇಸ್ಲಾಂ ಮದರಸ ಹಾಗೂ ಮಸ್ಜಿದ್ ನಲ್ಲಿ 79 ನೇ ಸ್ವಾತಂತ್ರ್ಯ ದಿನ ಆಚರಿಸಲಾಯಿತು. ಹಿರಿಯರಾದ ಪುತುಮೋನು ಬಸ್ತಿಕೋಡಿ ಧ್ವಜರೋಹಣ ನೆರವೇರಿಸಿದರು.‌ ಮಸೀದಿ ಅಧ್ಯಕ್ಷ ಹಂಝ ಬಸ್ತಿಕೋಡಿ ಮತ್ತು ಇಮಾಮ್ ರಾದ ಅಬೂಬಕ್ಕರ್ ಸಿದ್ದೀಕ್ ಮಹ್ದಾನಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಸಿರಾಜ್ ಬಸ್ತಿಕೋಡಿ, ಕೊಶಾಧಿಕಾರಿ ಇಮ್ರಾನ್ ಬಸ್ತಿಕೋಡಿ ಹಾಗೊ ಹಾಜಿ ಅಬ್ದುಲ್ ರಹಿಮಾನ್ ಬಸೀರ್ ಪಾಲ್ಕೆ ಅಬ್ಬು ನಡಾಯಿ ಹಾಗೊ ಜಮಾತರು ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಜರಿದ್ದರು.

Read More

ಬಂಟ್ವಾಳ: ತಾಲೂಕಿನಲ್ಲಿ ಗರಿಷ್ಠ ಸಂಖ್ಯೆಯ ರೋಟರಿ ಕ್ಲಬ್ ಸಂಸ್ಥೆಗಳು ಸಾಮಾಜಿಕ ಸೇವಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದು, ಈ ಪೈಕಿ ಕಡಿಮೆ ಅವಧಿಯಲ್ಲಿ ಗರಿಷ್ಠ ಮಟ್ಟದ ಸಾಧನೆ ಮಾಡಿರುವ ಹೆಗ್ಗಳಿಕೆ ಲೊರೆಟ್ಟೊ ಹಿಲ್ಸ್ ರೋಟರಿ ಕ್ಲಬ್‌ಗೆ ಸಲ್ಲುತ್ತದೆ ಎಂದು ಇಂಟರ್‍ಯಾಕ್ಟ್ ಕ್ಲಬ್ ಜಿಲ್ಲಾ ಉಪಾಧ್ಯಕ್ಷ ಬೊಂಡಾಲ ಚಿತ್ತರಂಜನ್ ಶೆಟ್ಟಿ ಹೇಳಿದರು. ಇಲ್ಲಿನ ಅಗ್ರಾರ್ ಶಾಲೆಯಲ್ಲಿ ಶನಿವಾರ ಏರ್ಪಡಿಸಿದ್ದ ಇಂಟರ್‍ಯಾಕ್ಟ್ ಕ್ಲಬ್ ಪದಗ್ರಹಣದಲ್ಲಿ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ ಅವರು ಮಾತನಾಡಿದರು. ಲೊರೆಟ್ಟೊ ಹಿಲ್ಸ್ ರೋಟರಿ ಕ್ಲಬ್ ಅಧ್ಯಕ್ಷ ವಿಜಯ ಫೆರ್ನಾಂಡಿಸ್ ಅಧ್ಯಕ್ಷತೆ ವಹಿಸಿದ್ದರು. ಇದೇ ವೇಳೆ ಅವರು ರೂ.40 ಸಾವಿರ ವೆಚ್ಚದ 11 ಸೂಚನಾ ಫಲಕಗಳನ್ನು ಶಾಲೆಗೆ ಹಸ್ತಾಂತರಿಸಿದರು. ಮುಖ್ಯಶಿಕ್ಷಕಿ ಪ್ರಶಾಂತಿ ಮೋನಿಸ್ ಮಾತನಾಡಿದರು. ವಲಯ ಸೇನಾನಿ ರಾಮಚಂದ್ರ ಶೆಟ್ಟಿಗಾರ್, ಕ್ಲಬ್‌ನ ಕಾರ್ಯದರ್ಶಿ ಮೋಹನ್ ಕೆ. ಶ್ರೀಯಾನ್ ರಾಯಿ, ಮಾಜಿ ಅಧ್ಯಕ್ಷೆ ಶ್ರುತಿ ಮಾಡ್ತಾ, ಆಂಟೋನಿ ಸಿಕ್ವೇರಾ, ಸುರೇಶ ಶೆಟ್ಟಿ, ಅರುಣ್ ಮಾಡ್ತ ಪ್ರಮುಖರಾದ ಪಿ.ಜೆ.ರೋಡ್ರಿಗಸ್, ರಾಜೇಶ ಶೆಟ್ಟಿ ಸೀತಾಳ, ಸದಾನಂದ…

Read More

ಬಂಟ್ವಾಳ: ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ನೇತ್ರಾವತಿ ಸಂಗಮ ಲೀಜನ್ ಇದರ ವತಿಯಿಂದ ೭೮ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಬುಧವಾರ ಬಂಟ್ವಾಳ ಸರಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಬಂಟ್ವಾಳ ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕ ಸಂದೀಪ್ ಕೆ.ಎಸ್. ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಪುಷ್ಪಲತಾ, ಎಸ್‌ಸಿಐ ಅಧ್ಯಕ್ಷ ತಾರಾನಾಥ ಕೊಟ್ಟಾರಿ, ಸ್ಥಾಪಕಾಧ್ಯಕ್ಷ ಜಯಾನಂದ ಪೆರಾಜೆ, ಕಾರ್ಯದರ್ಶಿ ಶೈಲಜಾ ರಾಜೇಶ್, ಸದಸ್ಯರಾದ ರವೀಂದ್ರ ಕುಕ್ಕಾಜೆ, ರೇಖಾರಾವ್, ಸನ್ಮತಿಜಯಕೀರ್ತಿ, ಸಂದೀಪ್ ಸಾಲ್ಯಾನ್, ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಅಧ್ಯಕ್ಷ ಸುಮಿತ್ ಕುಲಾಲ್ ಸೊರ್ನಾಡು ಉಪಸ್ಥಿತರಿದ್ದರು.

Read More

ಬಂಟ್ವಾಳ: ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದ 2024-25ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಕಾರ್ಯಕ್ರಮ ಆಗತ-ಸ್ವಾಗತ ೨೦೨೫ ಬುಧವಾರ ಆಜಾದ್ ಭವನದಲ್ಲಿ ನಡೆಯಿತು. ಗಣ್ಯರಿಂದ ದೀಪ ಪ್ರಜ್ವಲನ, ವಿದ್ಯಾರ್ಥಿಗಳಿಂದ ಸರಸ್ವತಿ ವಂದನೆ, ಬಳಿಕ ಗಣ್ಯ ಅತಿಥಿಗಳು ಅಗ್ನಿಹೋತ್ರಕ್ಕೆ ಹವಿಸ್ಸನ್ನು ಅರ್ಪಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳಿಗೆ ಹಾಗೂ ಉಪನ್ಯಾಸಕರಿಗೆ ಆರತಿ ಬೆಳಗಿ, ಕುಂಕುಮ ಹಚ್ಚಿ ಸ್ವಾಗತಿಸಲಾಯಿತು. ವಿದ್ಯಾರ್ಥಿಗಳು ಹಿರಿಯರ ಆಶೀರ್ವಾದ ಪಡೆದರು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅಧ್ಯಕ್ಷತೆ ವಹಿಸಿದ್ದರು. ಭಾರತೀಯ ಸಂಸ್ಕೃತಿ ಆಧಾರಿತ ಮಹರ್ಷಿ ಶಿಕ್ಷಣದ ಅಗತ್ಯತೆ ಮತ್ತು ಅನಿವಾರ್ಯತೆಯನ್ನು ತಿಳಿಸಿದರು. ವಿದ್ಯಾಕೇಂದ್ರದಲ್ಲಿ ಮಾನವೀಯ ಮೌಲ್ಯಗಳನ್ನೊಳಗೊಂಡ ಶಿಕ್ಷಣ ನೀಡುತ್ತಿರುವುದಾಗಿ ಹೇಳಿದರು. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ. ಪಿ. ಎಲ್ ಧರ್ಮ, ಭಾಜಪಾ ಕಾಸರಗೋಡು ಇದರ ಜಿಲ್ಲಾಧ್ಯಕ್ಷೆ ಎಂ. ಎಲ್. ಅಶ್ವಿನಿ, ಉದ್ಯಮಿ ಬಲರಾಮ ಆಚಾರ್ಯ, ರಾಜಿ ಬಲರಾಮ ಆಚಾರ್ಯ, ಮುರಳೀಧರ, ಮೀರಾ ಮುರಳಿ ಮುಖ್ಯ ಅಭ್ಯಾಗತರಾಗಿ ಉಪಸ್ಥಿತರಿದ್ದರು. …

Read More

ಬಂಟ್ವಾಳ: ಸೌತ್‌ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬಂಟ್ವಾಳ ವಲಯದ ವಾರ್ಷಿಕ ಸಭೆ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ವಲಯದ ಅಧ್ಯಕ್ಷ ಕಿಶೋರ್ ಎಸ್. ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು. ಅವರು ಮಾತನಾಡಿ ವಲಯವು ರಜತ ಸಂಭ್ರಮವನ್ನು ಆಚರಿಸುತಿದ್ದು, ಈ ಸಂದರ್ಭದಲ್ಲಿ ಸಂಘದ ಸದಸ್ಯರಿಗೆ ಅಂಚೆ ಜೀವ ವಿಮೆಯನ್ನು ಮಾಡಿಸಿದ್ದು, ಮಾತ್ರವಲ್ಲದೆ, ಮುಂದಿನ ದಿನಗಳಲ್ಲಿ ಸಂಘದ ಸದಸ್ಯತ್ವನ್ನು ನವೀಕರಿಸಿದ ಸದಸ್ಯರಿಗೆ ತುರ್ತು ವೈದ್ಯಕೀಯ ಚಿಕಿತ್ಸೆಗೆ ಸಂಘದಿಂದ ಆರ್ಥಿಕ ನೆರವನ್ನು ನೀಡಲಾಗುವುದು ಎಂದು ಹೇಳಿದರು. ಜಿಲ್ಲಾ ಅಧ್ಯಕ್ಷ ಪದ್ಮಪ್ರಸಾದ್ ಜೈನ್ ಕಾರ್ಯಕ್ರಮ ಉದ್ಘಾಟಿಸಿದರು. ವೇದಿಕೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಬಂಟ್ವಾಳ, ಜಿಲ್ಲಾ ಕೋಶಾಧಿಕಾರಿ ನವೀನ ರೈ, ಜಿಲ್ಲಾ ಕಟ್ಟಡ ಸಮಿತಿ ಅಧ್ಯಕ್ಷ ಆನಂದ್ ಎನ್., ಜಿಲ್ಲಾ ಸಂಚಾಲಕ ಕರುಣಾಕರ ಕಾಣಂಗಿ, ಎಸ್‌ಕೆಪಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷ ಹರೀಶ್ ರಾವ್, ವಲಯದ ಗೌರವಾಧ್ಯಕ್ಷ ಹರೀಶ್ ಕುಂದರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಪ್ರಶಾಂತ್ ಕಲ್ಲಡ್ಕ ವರದಿಯನ್ನು ವಾಚಿಸಿದರು, ಕೋಶಾಧಿಕಾರಿ ವರುಣ್ ಕಲ್ಲಡ್ಕ ೨೪-೨೫…

Read More