Author: admin
ಬಂಟ್ವಾಳ: ದ.ಕ. ಜಿಲ್ಲೆಯ ಕಾರಣಿಕ ದೈವ ಸ್ಥಾನ ಸಜೀಪ ಮೂಡ ಗ್ರಾಮದ ಪಣೋಲಿಬೈಲು ಕಲ್ಲುರ್ಟಿ ದೈವಸ್ಥಾನದಲ್ಲಿ ಆ. 15 ರಂದು ಶುಕ್ರವಾರ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಅಗೇಲು ಸೇವೆ ನಡೆಯುವುದಿಲ್ಲ ಆ.17 ರಂದು ಆದಿತ್ಯವಾರದಿಂದ ಎಂದಿನಂತೆ ಅಗೇಲು ಸೇವೆ ಮತ್ತು ಕೋಲ ಸೇವೆ ನಡೆಯಲಿದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.
ಬಂಟ್ವಾಳ: ಅವಿಭಕ್ತ ಕುಟುಂಬಗಳು ವಿಭಕ್ತ ಕುಟುಂಬಗಳಾದ ಬಳಿಕ, ಯುವ ಸಮುದಾಯ ಉದ್ಯೋಗ ಹರಸುತ್ತಾ ನಗರಗಳತ್ತ ಮುಖಮಾಡಿದ್ದು ತುಳುನಾಡಿನ ತರವಾಡು ಮನೆಗಳಲ್ಲಿ ಸೇರುವ ಕುಟುಂಬಿಕರ ಸಂಖ್ಯೆ ಕಡಿಮೆಯಾಗಿತ್ತು. ಬದಲಾವಣೆಯ ಕಾಲಘಟ್ಟದಲ್ಲಿ ಇತ್ತೀಚಿನ ದಿನಗಳಲ್ಲಿ ಕುಟುಂಬಿಕರು, ಯುವ ಸಮುದಾಯ ಮತ್ತೆ ತಮ್ಮ ತರವಾಡು ಮನೆಗಳತ್ತ ಆಗಮಿಸಿ, ಕುಟುಂಬದ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಪ್ರವೃತ್ತಿಯನ್ನು ಇತ್ತೀಚಿನ ದಿನಗಳಲ್ಲಿ ಕಾಣುತ್ತಿದ್ದೇವೆ. ಇದಕ್ಕೆ ಉದಾಹರಣೆ ಎನ್ನುವಂತೆ ಸಜೀಪಪಡು ಗ್ರಾಮದ ಕೋಟೆಕಣಿಯ ಮುಗ ಮನೆ ಅಂಚನ್ ಕುಟುಂಬಸ್ಥರ ತರವಾಡು ಮನೆಯಲ್ಲಿ ನಡೆದ ಆಟಿಡೊಂಜಿ ಅಂಚನ್ ಕೂಟ ಕುಟುಂಬಿಕರಲ್ಲಿ ಸಂಭ್ರಮದ ವಾತವರಣವನ್ನು ಸೃಷ್ಟಿಸಿದೆ. ಮುಗ ಮನೆಯಲ್ಲಿ ದಿನವಿಡಿ ನಡೆದ ವಿವಿಧ ಕಾರ್ಯಕ್ರಮಗಳಲ್ಲಿ, ಆಟೋಟಗಳಲ್ಲಿ ಕುಟುಂಬ ಸದಸ್ಯರು ಭಾಗವಹಿಸಿ ಸಂಭ್ರಮಿಸಿದರು. ಬೆಳಿಗ್ಗೆ ಆಟಿಡೊಂಜಿ ಅಂಚನ್ ಕೂಟವನ್ನು ಕುಟುಂಬದ ಹಿರಿಯರು ದೀಪ ಬೆಳಗಿಸಿ ಉದ್ಘಾಟಿಸಿದರು. ಮುಗಮನೆ ಅಂಚನ್ ಕುಟುಂಬಸ್ಥರ ಸೇವಾ ಟ್ರಸ್ಟ್ ನ ಅಧ್ಯಕ್ಷ ಪ್ರಕಾಶ್ ಅಂಚನ್ ತೆಂಗಿನ ಹೂ ಅರಳಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿ ಕುಟುಂಬದಲ್ಲಿ…
ಬಂಟ್ವಾಳ: ಬಿ ಸಿ ರೋಡ್ ಶ್ರೀಸಾಯಿ ಕಿಡ್ ಝೋನ್ ವಿದ್ಯಾ ಸಂಸ್ಥೆಯಲ್ಲಿ ಪೋಷಕರಿಗೆ ಬೆಂಕಿ ಬಳಸದೆ ಅಡುಗೆ ತಯಾರಿ ಮಾಡುವ ಸ್ಪರ್ಧೆ ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಬಿ.ಸಿ.ರೋಡಿನ ಹೋಟೆಲ್ ಪ್ರಿಯದರ್ಶಿನಿ ಮಾಲಕ ಸಂತೋಷ್ ಕುಮಾರ್ ರೈ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಸ್ವಾತಿ ಶೆಟ್ಟಿ ಮಂಗಳೂರು, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ ತೇಜಸ್ವಿನಿ ಪೂಜಾರಿ ,ಉಪಾಧ್ಯಕ್ಷ ಸುಂದರ್ ಎನ್, ಕೋಶಾಧ್ಯಕ್ಷೆ ಜಯಶ್ರೀ, ಆಡಳಿತ ಮಂಡಳಿ ಸದಸ್ಯೆ ಆರತಿ ಅಮೀನ್,ಭಾಗವಹಿಸಿದರು. ಸಂಸ್ಥೆಯ ಸಂಚಾಲಕ ಐತಪ್ಪ ಪೂಜಾರಿ ಸ್ವಾಗತಿಸಿ. ಶಿಕ್ಷಕಿ ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು. ಸ್ಪರ್ಧೆಯ ನಿರ್ಣಾಯಕರಾಗಿ ಸ್ವಾತಿ ಶೆಟ್ಟಿ ಮಂಗಳೂರು , ಶಿಕ್ಷಕಿಯರಾದ ಚೈತ್ರ, ಪುಷ್ಪಲತಾ, ಗೀತಾ, ರಂಜಿನಿ, ಶಮ ದಿವ್ಯಾ ಸಹಕರಿಸಿದರು. ರಕ್ಷಕ ಶಿಕ್ಷಕ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಟೌನ್ ವತಿಯಿಂದ ವೀರಕಂಭ ಗ್ರಾಮದ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ “ನವಫಲ” ಹಣ್ಣಿನ ತೋಟ ನಿರ್ಮಾಣ ಮಾಡಲಾಯಿತು. ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷ ವಚನ್ ಶೆಟ್ಟಿ ಹಾಗೂ ಝೋನಲ್ ಲೆಪ್ಟಿನೆಂಟ್ ಸುರೇಶ್ ಸಾಲ್ಯಾನ್ ಹಣ್ಣಿನ ಗಿಡ ನೆಡುವ ಮೂಲಕ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದ ಉದ್ದೇಶ ಹಾಗೂ ಮಹತ್ವದ ಬಗ್ಗೆ ತಿಳಿಸಿಕೊಟ್ಟರು. ಈ ಸಂದರ್ಭ ರೋಟರಿ ಕ್ಲಬ್ ಬಂಟ್ವಾಳ ಟೌನ್ ಕಾರ್ಯದರ್ಶಿ ನಾಗೇಶ್ ಎಂ. ಕೋಶಾಧಿಕಾರಿ ಸೀತಾರಾಮಶೆಟ್ಟಿ ಕಾಂತಾಡಿ, ನಿಕಟಪೂರ್ವ ಕಾರ್ಯದರ್ಶಿ ನಾರಾಯಣ ಸಿ. ಪೆರ್ನೆ, ಸದಸ್ಯರಾದ ಉಮೇಶ್ ಶೆಟ್ಟಿ, ಭಾಸ್ಕರ್, ಶಾಲಾ ಹಿರಿಯ ವಿದ್ಯಾರ್ಥಿ ಚಿನ್ನ ಕಲ್ಲಡ್ಕ ಹಾಗೂ ಶಿಕ್ಷಕರು , ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಾಲೆಯ ಮುಖ್ಯ ಶಿಕ್ಷಕ್ಷಿ ಬೆನಡಿಕ್ಟಾ ಆಗ್ನೇಸ್ ಮಂಡೋನ್ಸಾ ಸ್ವಾಗತಿಸಿದರು, ಸಹಶಿಕ್ಷಕಿ ಸಂಗೀತ ಶರ್ಮ ಕಾರ್ಯಕ್ರಮ ನಿರೂಪಿಸಿದರು.
ಉಡುಪಿ : ಶಿವಮೊಗ್ಗದಲ್ಲಿ ಇತ್ತೀಚೆಗೆ ನಡೆದ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಓಪನ್ ಚಾಂಪಿಯನ್ ಶಿಪ್ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದು ತನಿಷ್ಕ ಪವನ್ ಕುಮಾರ್ ಸಾಧನೆ ಮಾಡಿದ್ದಾಳೆ. ಉಡುಪಿ ಅಜ್ಜರಕಾಡು ಸೈಂಟ್ ಸಿಸಿಲಿಯ ಪ್ರೌಢಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಈಕೆ ಭಾರತೀಯ ರೈಲ್ವೆ ಇಲಾಖೆಯ ಪೊಲೀಸ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಂಟ್ವಾಳ ತಾಲೂಕಿನ ಕೂರಿಯಾಳದ ಪವನ್ ಕುಮಾರ್ ಮತ್ತು ಅಕ್ಷತಾ ಪವನ್ ಕುಮಾರ್ ದಂಪತಿಯ ಸುಪುತ್ರಿ ಹಾಗೂ ಜಗದೀಶ್ ಭಂಡಾರಿ ಕುರಿಯಾಳ ಮತ್ತು ಮೋಹಿನಿ ಜಗದೀಶ್ ಭಂಡಾರಿ ಅವರ ಮೊಮ್ಮಗಳು. ಇನ್ಸ್ಟಿಟ್ಯೂಟ್ ಆಫ್ ಬುಡಕಾನ್ ಕರಾಟೆ ಮಾರ್ಷಲ್ ಆರ್ಟ್ ನ ತರಬೇತುದಾರ ಸಂತೋಷ್ ಕುಮಾರ್ ಶೆಟ್ಟಿ ಅವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ.
ಮಂಚಿ: ನಮ್ಮ ಆದಾಯದಲ್ಲಿ ಕನಿಷ್ಠ ಒಂದು ಭಾಗವನ್ನು ಸಮಾಜದಲ್ಲಿ ತೀರಾ ಬಡತನದಲ್ಲಿರುವವರಿಗೆ ದಾನ ಮಾಡಿದರೆ ಸಮಾಜದ ಋಣ ತೀರಿಸಿದಂತಗುತ್ತದೆ. ನಾನು ಕೂಡ ಚಿಕ್ಕವನಿದ್ದಾಗ ಬಡತನದ ರುಚಿಕಂಡವನು ನಿಮ್ಮ ಸ್ನೇಹಮಿಲನ ತಂಡದ ಸೇವಾ ಚಟುವಟಿಕೆ ಶ್ಲಾಘನೀಯ.ಪ್ರಸ್ತುತ ಕಾಲದಲ್ಲಿ ಪ್ರತಿಯೊಬ್ಬರೂ ಆರೋಗ್ಯ ವಿಮೆ ಮಾಡಿದರೆ ಆಪತ್ಕಾಲದಲ್ಲಿ ಅದು ನಮ್ಮ ಕೈ ಹಿಡಿಯುತ್ತದೆ ಎಂದು ಹಿರಿಯ ವಕೀಲ ಶ್ರೀಧರ ಶೆಟ್ಟಿ ಪುಳಿಂಚ ತಿಳಿಸಿದರು. ಅವರು ಮಂಚಿಯ ಲಯನ್ಸ್ ಸೇವಾ ಮಂದಿರದಲ್ಲಿ ಜರುಗಿದ ಸ್ನೇಹ ಮಿಲನ ಕಲ್ಲಡ್ಕ ಇದರ 11ನೇ ವರ್ಷದ ವಾರ್ಷಿಕ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದರು. ಪ್ರೌಢ ಶಾಲಾ ವಿಭಾಗದ ವಿಜ್ಞಾನ ಮಾದರಿಯಲ್ಲಿ ರಾಷ್ಟ್ರ ಮಟ್ಟದ ಪ್ರದರ್ಶನ ನೀಡಿದ ಜಗನ್ ಏಲ್ತಿಮಾರು ಇವರಿಗೆ ಸಾಧಕ ಸ್ನೇಹಿತ ಪುರಸ್ಕಾರ ನೀಡಲಾಯಿತು. ವರ್ಷಂಪ್ರತಿಯಂತೆ ಈ ವರ್ಷದ ಸಾಂತ್ವನ ನಿಧಿ ರೂ.50 ಸಾವಿರವನ್ನು ಮೂರು ಬಡ ಕುಟುಂಬಗಳಿಗೆ ಹಂಚಿಕೆ ಮಾಡಲಾಯಿತು. ವೇದಿಕೆಯಲ್ಲಿ ಲಯನ್ಸ್ ಕ್ಲಬ್ ಕೊಳ್ನಾಡು ಸಾಲೆತ್ತೂರು ಇದರ ಅಧ್ಯಕ್ಷ ಉಮನಾಥ ರೈ ಮೇರಾವು, ಹಾಲು ಉತ್ಪಾದಕರ ಸಹಕಾರಿ…
ಬಂಟ್ವಾಳ: ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಇದರ ವಾರ್ಷಿಕ ಮಹಾಸಭೆಯು ನಿತೀಶ್ ಕುಲಾಲ್ ಪಲ್ಲಿಕಂಡ ಅಧ್ಯಕ್ಷತೆಯಲ್ಲಿ ಸ್ಪರ್ಶ ಕಲಾ ಮಂದಿರದಲ್ಲಿ ಭಾನುವಾರ ನಡೆಯಿತು. 2024-25 ಸಾಲಿನ ವರದಿಯನ್ನು ಕಾರ್ಯದರ್ಶಿ ಪುನೀತ್ ಕಾಮಾಜೆ ವಾಚಿಸಿದರು. ಕೋಶಾಧಿಕಾರಿ ಸಂತೋಷ್ ಮಯ್ಯರಬೈಲು ಲೆಕ್ಕಪತ್ರ ಮಂಡಿಸಿ ಅನುಮೋದನೆ ಪಡೆಯಲಾಯಿತು. ರಾಜ್ಯಾಧ್ಯಕ್ಷ ಸುಧಾಕರ್ ಸಾಲ್ಯಾನ್ ಉಪಸ್ಥಿತಿಯಲ್ಲಿ 2025- 26 ನೇ ಸಾಲಿಗೆ ಹೊಸ ಪದಾಧಿಕಾರಿಗಳ ಆಯ್ಕೆ ನಡೆದು ಸುಮಿತ್ ಸಾಲ್ಯಾನ್ ಅಧ್ಯಕ್ಷರಾಗಿ , ಜಯಗಣೇಶ್ ಬಂಗೇರ ದಾಸಕೋಡಿ ಪ್ರಧಾನ ಕಾರ್ಯದರ್ಶಿಯಾಗಿ, ಸಂತೋಷ್ ಮಯ್ಯರ ಬೈಲು ಕೋಶಾಧಿಕಾರಿಯಾಗಿ, ದುರ್ಗಾಶ್ರೀ ಪ್ರದೀಪ್ ಮಹಿಳಾ ಸಂಚಾಲಕಿಯಾಗಿ ಮತ್ತು ಎಚ್ಕೆ ನಯನಾಡು ಗೌರವ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಈ ಸಂಧರ್ಭದಲ್ಲಿ ಜಿಲ್ಲೆಯ,ವಿಭಾಗೀಯ ಹಾಗೂ ಬಂಟ್ವಾಳ ಯುವ ವೇದಿಕೆ ಪ್ರಮುಖಕರು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಬಂಟ್ವಾಳ: ಬಿ.ಸಿ.ರೋಡು- ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ಬದಿ ಲಯನ್ಸ್ ಕ್ಲಬ್ ಜಿಲ್ಲಾ ಯೋಜನೆಯಾಗಿ ಸಾಲುಮರಗಳನ್ನು ನೆಟ್ಟಿದ್ದು ಬಂಟ್ವಾಳ ಲಯನ್ಸ್ ಕ್ಲಬ್ ಕಳೆದ 4 ವರ್ಷಗಳಿಂದ ನಿರ್ವಹಣೆಯನ್ನು ನಡೆಸಿಕೊಂಡು ಬರುತ್ತಿದೆ. ಲಯನ್ಸ್ ಕ್ಲಬ್ ನ ಜಿಲ್ಲಾ ಗವರ್ನರ್ ಆಗಿದ್ದ ವಸಂತ್ ಕುಮಾರ್ ಶೆಟ್ಟಿಯವರ ಅವಧಿಯಲ್ಲಿ ಜಿಲ್ಲಾ ಯೋಜನೆಯಾಗಿ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಬಿ.ಸಿ.ರೋಡು- ಪುಂಜಾಲಕಟ್ಟೆಯ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲದಲ್ಲಿ ಗಿಡಗಳನ್ನು ನೆಟ್ಟು ಬೆಳೆಸಲಾಗಿತ್ತು. ಇದರ ನಿರ್ವಹಣೆಯ ಜವಾಬ್ದಾರಿಯನ್ನು ಬಂಟ್ವಾಳ ಲಯನ್ಸ್ ಕ್ಲಬ್ ನಡೆಸಿಕೊಂಡು ಬರುತ್ತಿದ್ದು ಬೇಸಿಗೆಯಲ್ಲಿ ಗಿಡಗಳಿಗೆ ನೀರುಣಿಸಿ, ಮಳೆಗಾಲದಲ್ಲಿ ಅಗಲವಾಗಿ ವಿಸ್ತರಿಸಿಕೊಂಡ ಗೆಲ್ಲುಗಳನ್ನು ತೆರವುಗೊಳಿಸಿ ನಿರ್ವಹಣೆ ಮಾಡುತ್ತಿದೆ. ಈ ವರ್ಷವೂ ಕ್ಲಬ್ ಅಧ್ಯಕ್ಷ ರೋಹಿತಾಶ್ವ ಬಂಗ ಅವರ ನೇತೃತ್ವದಲ್ಲಿ ಮರಗಳ ನಿರ್ವಹಣೆ ಕಾರ್ಯ ನಡೆಸಲಾಯಿತು. ಈ ಸಂದರ್ಭ ಮಾಜಿ ಗವರ್ನರ್ ವಸಂತ ಕುಮಾರ್ ಶೆಟ್ಟಿ, ಬಂಟ್ವಾಳ ಲಯನ್ಸ್ ಕ್ಲಬ್ ಅಧ್ಯಕ್ಷ ರೋಹಿತಾಶ್ವ ಬಂಗ, ಕೋಶಾಧಿಕಾರಿ ರಾಮಕೃಷ್ಣ ರಾವ್, ಮಾಜಿ ಅಧ್ಯಕ್ಷರಾದ ಶ್ರೀನಿವಾಸ ಪೂಜಾರಿ, ಪ್ರಶಾಂತ್ ಕೋಟ್ಯಾನ್, ಸದಸ್ಯರಾದ ಸತ್ಯನಾರಾಯಣ…
ಬಂಟ್ವಾಳ: ಜನರಿಗೆ ಆರೋಗ್ಯ ಭಾಗ್ಯ ಇದ್ದಾಗ ಸಕಲೈಶ್ವರ್ಯವೂ ದೊರೆತಂತೆ, ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನ ಬಡವರ ಪಾಲಿಗೆ ಸ್ವರ್ಗವಾಗಿದ್ದು ಸೇವಾ ಕಾರ್ಯದ ಮೂಲಕ ಜನರಿಗೆ ಸ್ಪಂದನೆಯನ್ನು ನೀಡುತ್ತಿದೆ. ದೀನ ದುರ್ಬಲರ, ರೋಗಿಗಳ ಸೇವೆ ಮಾಡುವ ಮೂಲಕ ಆದರ್ಶ ಕೆಲಸವನ್ನು ಮಾಡುತ್ತಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದ.ಕ.ಜಿಲ್ಲಾ ನಿರ್ದೇಶಕ ದಿನೇಶ್ ಡಿ. ಹೇಳಿದರು. ಕೇಂದ್ರ ಸರ್ಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಸೇವಾಂಜಲಿ ಪ್ರತಿಷ್ಠಾನದ ವತಿಯಿಂದ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ಕ್ಷಯರೋಗಿಗಳಿಗೆ ಪೌಷ್ಟಿಕಾಹಾರದ ಕಿಟ್ ವಿತರಿಸಿ ಮಾತನಾಡಿದರು. ಇಂದಿನ ದಿನದಲ್ಲಿ ನಾವು ಸೇವಿಸುವ ಆಹಾರ ವಿಷಯುಕ್ತವಾಗುತ್ತಿದೆ ಯೋಗ, ಪ್ರಾಣಯಾಮದ ಮೂಲಕ ಆರೋಗ್ಯ ರಕ್ಷಣೆ ಮಾಡುವ ಅನಿವಾರ್ಯತೆ ಸೃಷ್ಟಿಯಾಗಿದೆ. ಇಂದು ಕ್ಷಯ ರೋಗಿಗಳು ರೋಗದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಚಿಕಿತ್ಸೆಯ ಜೊತೆಗೆ ಪೌಷ್ಟಿಕಾಹಾರ ಸೇವನೆ ಮಾಡಿದಾಗ ರೋಗ ನಿವಾರಣೆ ಮಾಡಲು ಸಾಧ್ಯವಿದೆ ಎಂದು ತಿಳಿಸಿದರು. ಜನಜಾಗೃತಿ ವೇದಿಕೆ ಸದಸ್ಯ ಸದಾನಂದ ಆಳ್ವ ಕಂಪ ಮಾತನಾಡಿ ಹಿಂದೆ ಭಾರತದಲ್ಲಿ ಕ್ಷಯ ರೋಗಿಗಳ…
ಕರ್ನಾಟಕ ರಾಜ್ಯ ಟೈಲರ್ ಎಸೋಸಿಯೇಶನ್ ನ ಬಂಟ್ವಾಳ ಕ್ಷೇತ್ರ ಸಮಿತಿಯ ಮಹಾಸಭೆಬಂಟ್ವಾಳ: ಕರ್ನಾಟಕ ರಾಜ್ಯ ಟೈಲರ್ ಎಸೋಸಿಯೇಶನ್ ಬಂಟ್ವಾಳ ಕ್ಷೇತ್ರ ಸಮಿತಿಯ ಮಹಾಸಭೆ, ಟೈಲರ್ ವೃತ್ತಿ ಬಾಂಧವರಿಗೆ ಸನ್ಮಾನ ಮತ್ತು ಟೈಲರ್ ಗಳ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಬಿ.ಸಿ.ರೋಡಿನ ಅಂಬೇಡ್ಕರ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ರಾಜ್ಯಾಧ್ಯಕ್ಷ ನಾರಾಯಣ ಬಿ.ಎ. ಉದ್ಘಾಟಿಸಿದರು. ಅವರು ಮಾತನಾಡಿ ವಾರ್ಷಿಕ ಮಹಾಸಭೆ ಟೈಲರ್ ಗಳ ಹಬ್ಬವಾಗಿದೆ. ಇಂತಹ ಕಾರ್ಯಕ್ರಮದಲ್ಲಿ ಎಲ್ಲರೂ ಜೊತೆಗೂಡಿ ಸಂಘಟನೆಯನ್ನು ಬಲಪಡಿಸುವುದರೊಂದಿಗೆ ನಮ್ಮ ಮುಂದಿನ ಕಾರ್ಯಯೋಜನೆಗಳನ್ನು ರೂಪಿಸಲು ಇದು ವೇದಿಕೆಯಾಗಿದೆ ಎಂದು ತಿಳಿಸಿದರು.ಅಂಚೆ ಇಲಾಖೆಯ ಮಾರುಕಟ್ಟೆ ವಿಸ್ತರಣಾಧಿಕಾರಿ ಗುರುಪ್ರಸಾದ್ ಮಾಹಿತಿ ನೀಡಿ ಟೈಲರ್ ವೃತ್ತಿಯಲ್ಲಿ ತೊಡಗಿಸಿಕೊಂಡ ಬಹುತೇಕರು ಮದ್ಯಮ ವರ್ಗದವರು. ಭವಿಷ್ಯದ ಹಿತದೃಷ್ಟಿಯಿಂದ ಅಂಚೆ ಇಲಾಖೆಯಲ್ಲಿ ಕಡಿಮೆ ಪ್ರೀಮಿಯಂನ ಅಪಘಾತ ಹಾಗೂ ಆರೋಗ್ಯ ವಿಮೆಗಳಿದ್ದು ಮಾಡಿಸಿಕೊಳ್ಳುವಂತೆ ತಿಳಿಸಿದರು. ಕೆಎಸ್ಟಿಎ ಬಂಟ್ವಾಳ ಕ್ಷೇತ್ರ ಸಮಿತಿಯ ಅಧ್ಯಕ್ಷ ನಾಗೇಶ್ ಎಂ. ಅಧ್ಯಕ್ಷತೆ ವಹಿಸಿ ಮಾತನಾಡಿ ಸದಸ್ಯರ ಸಹಕಾರದಿಂದಾಗಿ ತನ್ನ ಅಧಿಕಾರವಧಿಯಲ್ಲಿ…








