Author: admin
ಬಂಟ್ವಾಳ: ಸ್ನೇಹ ಮಿಲನ ಕಲ್ಲಡ್ಕ ಇದರ 11ನೇ ವಾರ್ಷಿಕೋತ್ಸವ ಮಂಚಿ ಲಯನ್ಸ್ ಸೇವಾ ಮಂದಿರದಲ್ಲಿ ಭಾನುವಾರ ನಡೆಯಿತು. ಕೊಳ್ನಾಡು ಸಾಲೆತ್ತೂರು ಲಯನ್ಸ್ ಕ್ಲಬ್ ನ ಡಾ. ಗೋಪಾಲಕೃಷ್ಣ ಆಚಾರ್ ಮಂಚಿ ಕಾರ್ಯಕ್ರಮ ಉದ್ಘಾಟಿಸಿದರು. ಅವರು ಮಾತನಾಡಿ ಅಂತರಾಷ್ಟ್ರೀಯ ಸ್ನೇಹ ದಿನದ ದಿನವೇ ಸ್ನೇಹಕೂಟ ಆಯೋಜನೆಗೊಂಡಿರುವುದು ವಿಶೇಷ. ಸ್ನೇಹ ಮಿಲನದ ಸದಸ್ಯರು ಸಮಾಜಕ್ಕೆ ತಮ್ಮಿಂದಾಗುವ ಸೇವೆ ನೀಡಿರುವುದು ಸಂತೋಷ ತಂದಿದೆ. ಈ ಸಂಸ್ಥೆ ಗಟ್ಟಿಯಾಗಿ ಬೆಳೆಯಲಿ. ಕೃಷ್ಣ ಸುಧಾಮರ ಸ್ನೇಹದಂತೆ ಉಳ್ಳವರು, ಬಡವರು ಎನ್ನುವ ಭೇದವಿಲ್ಲದೆ ಉತ್ತಮ ಬಾಂಧವ್ಯ ಇದ್ದಾಗ ಸಂಘಟನೆ ಇನ್ನಷ್ಟೂ ಬಲಗೊಳ್ಳಲಿದೆ ಎಂದರು. Advertisement ಕಲ್ಲಡ್ಕ ಮ್ಯೂಸಿಯಂನ ಸಂಸ್ಥಾಪಕ ಮಹಮ್ಮದ್ ಯಾಸೀರ್ ಕಲ್ಲಡ್ಕ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿದ್ದು ಇಂತಹ ಸಂಘಟನೆಯ ಮೂಲಕ ಹೃದಯ ತಪಾಸಣ ಶಿಬಿರ ಹಮ್ಮಿಕೊಳ್ಳುವ ಅವಶ್ಯಕತೆ ಇದೆ. ಮುಂದಿನ ದಿನಗಳಲ್ಲಿ ತನ್ನಿಂದಾಗುವ ಸಹಕಾರ ನೀಡುವುದಾಗಿ ತಿಳಿಸಿದರು. ಸ್ನೇಹ ಮಿಲನದ ಅಧ್ಯಕ್ಷ ವಿಶ್ವನಾಥ ಅಂಚನ್ ಅಧ್ಯಕ್ಷತೆ ವಹಿಸಿದ್ದರು.ಕೇಶವ ಏಳ್ತಿಮಾರ್ ಅನಿಸಿಕೆ ವ್ಯಕ್ತಪಡಿಸಿದರು. ಸ್ಥಾಪಕ…
ಬಂಟ್ವಾಳ: ಕರ್ನಾಟಕ ರಾಜ್ಯ ಟೈಲರ್ ಎಸೋಸಿಯೇಷನ್ ಬಂಟ್ವಾಳ ಕ್ಷೇತ್ರ ಸಮಿತಿ ಇದರ ಮಹಾಸಭೆ ಹಾಗೂ ಟೈಲರ್ ವೃತ್ತಿ ಬಾಂಧವರಿಗೆ ಸನ್ಮಾನ ಮತ್ತು ಟೈಲರ್ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಆ. 3ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಬಿ.ಸಿ. ರೋಡಿನ ಅಂಬೇಡ್ಕರ್ ಸಭಾಭವನದಲ್ಲಿ ನಡೆಯಲಿದೆ. ಕೆಎಸ್ಟಿಎ ಬಂಟ್ವಾಳ ಕ್ಷೇತ್ರ ಸಮಿತಿಯ ಅಧ್ಯಕ್ಷ ನಾಗೇಶ್ ಎಂ. ಅಧ್ಯಕ್ಷತೆ ವಹಿಸುವರು. ಕೆಎಸ್ಟಿಎ ರಾಜ್ಯಾಧ್ಯಕ್ಷ ನಾರಾಯಣ ಬಿ.ಎ., ಪ್ರಧಾನ ಕಾರ್ಯದರ್ಶಿ ಎ. ಪ್ರಜ್ವಲ್ ಕುಮಾರ್, ಉಪಾಧ್ಯಕ್ಷ ಸುರೇಶ್ ಸಾಲ್ಯಾನ್, ಜಿಲ್ಲಾಧ್ಯಕ್ಷೆ ವಿದ್ಯಾ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಮೋಹನ್ ಎಸ್. ಕೋಡಿ, ಕೋಶಾಧಿಕಾರಿ ಚಕ್ರೇಶ್ ಅಮೀನ್, ಉಪಾಧ್ಯಕ್ಷ ದೇಜಪ್ಪ ವಿ. ಪೂಜಾರಿ, ನಿಕಟಪೂರ್ವ ಕೋಶಾಧಿಕಾರಿ ಈಶ್ವರ್ ಕುಲಾಲ್, ಬಂಟ್ವಾಳ ಕ್ಷೇತ್ರ ಸಮಿತಿ ಕಾರ್ಯದರ್ಶಿ ಯಾದೇಶ್ ತುಂಬೆ, ಕೋಶಾಧಿಕಾರಿ ತುಳಸಿ ಆರ್ ಭಾಗವಹಿಸಲಿದ್ದಾರೆ.
ಬಂಟ್ಚಾಳ: ಮಡಂತ್ಯಾರಿಲ್ಲಿ ನಡೆದ ಜೆಸಿಐ ವಲಯ 15ರ ವ್ಯವಹಾರ ಸಮ್ಮೇಳನ ಮೃದಂಗ ಕಾರ್ಯಕ್ರಮದಲ್ಲಿ ಜೆಸಿಐ ಬಂಟ್ವಾಳದ ಸದಸ್ಯೆ, ಬಂಟ್ಚಾಳ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಶ್ವಿನಿ ಬಾಲಕೃಷ್ಣ ಅವರಿಗೆ ಸಾಧನಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭ ವಲಯಾಧ್ಯಕ್ಷ ಅಭಿಲಾಷ್ ಬಿ.ಎ., ವಲಯ ಉಪಾಧ್ಯಕ್ಷರಾದ ರಂಜಿತ್ ಎಚ್.ಡಿ. , ಸಂತೋಷ್ ಕುಮಾರ್ ಶೆಟ್ಟಿ, ವಲಯಾಧಿಕಾರಿಗಳಾದ ಅಶೋಕ್ ಗುಂಡ್ಯಲ್ಕೆ, ರವಿಚಂದ್ರ ಪಾಟಾಳಿ, ಪೂರ್ವ ವಲಯಾಧಿಕಾರಿಗಳಾದ ರಾಧಕೃಷ್ಣ ಬಂಟ್ವಾಳ, ಡಾ. ಬಾಲಕೃಷ್ಣ ಕುಮಾರ್ ಉಪಸ್ಥಿತರಿದ್ದರು.
ಬಂಟ್ವಾಳ: ಶ್ರೀ ಸಾಯಿ ಕಿಡ್ ಝೋನ್ ವಿದ್ಯಾ ಸಂಸ್ಥೆ ಹಾಗೂ ರಕ್ಷಕ ಶಿಕ್ಷಕ ಸಂಘದ ಆಶ್ರಯದಲ್ಲಿ ಆಟಿದ ಕೂಟ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ನಡೆಯಿತು.ಯೆನೆಪೋಯ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಸಹಾಯಕ ಪ್ರಾಧ್ಯಪಕ ಡಾ.ಬಾಲಕೃಷ್ಣ ಕುಮಾರ್ ಉದ್ಘಾಟಿಸಿದರು. ಆಟಿ ತಿಂಗಳ ಮಹತ್ವ ಮತ್ತು ಸಂಸ್ಕೃತಿ ,ಆಚಾರ ವಿಚಾರ ಗಳ ಬಗ್ಗೆ ತಿಳಿಸಿ ಶ್ರೀ ಸಾಯಿ ಕಿಡ್ ಝೋನ್ ಸಂಸ್ಥೆ ಹಲವಾರು ಹೊಸ ಹೊಸ ಕಾರ್ಯಕ್ರಮಗಳ ಮೂಲಕ ಮಾದರಿ ಸಂಸ್ಥೆ ಯಾಗಿ ಬೆಳೆದು ನಿಂತಿದೆ ಎಂದರು.ವೇದಿಕೆ ಯಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ ತೇಜಸ್ವಿನಿ ಪೂಜಾರಿ ಹಾಗೂ ಉಪಾಧ್ಯಕ್ಷ ಸುಂದರ್ ಎನ್. ಕೋಶಾಧ್ಯಕ್ಷೆ ಜಯಶ್ರೀ,ಆಡಳಿತ ಮಂಡಳಿಯ ಸದಸ್ಯರಾದ ಆರತಿ ಅಮೀನ್, ರಾಜೇಶ್ ಅಮಿನ್ ಉಪಸ್ಥಿತರಿದ್ದರು. ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ಐತಪ್ಪ ಪೂಜಾರಿ ವಹಿಸಿದ್ದರು. ಆಟಿ ದ ಕೂಟ ಕಾರ್ಯಕ್ರಮ ದಲ್ಲಿ ಒಟ್ಟು 49 ಬಗೆ ಬಗೆಯ ತಿಂಡಿ ತಿನಿಸುಗಳನ್ನು ತಯಾರು ಮಾಡಿ ತಂದು ಆಟಿ ದ ಕೂಟ ವನ್ನು…
ಬಂಟ್ವಾಳ: ಏರ್ಯ ಆಳ್ವ ಫೌಂಡೇಷನ್ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ಇದರ ಸಹಯೋಗದಲ್ಲಿ ವಿದ್ಯಾರ್ಥಿಗಳ ಸಾಹಿತ್ಯ ಸಾಂಸ್ಕೃತಿಕ ಕಮ್ಮಟ ಭಾನುವಾರ ಏರ್ಯಬೀಡುವಿನಲ್ಲಿ ನಡೆಯಿತು, ಏರ್ಯ ಬಾಲಕೃಷ್ಣ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಿದರು. ಸಂಚಯಗಿರಿ ರಾಣಿ ಅಬ್ಬಕ್ಕ ತುಳುಅಧ್ಯಯನ ಕೇಂದ್ರದ ಅಧ್ಯಕ್ಷ ಡಾ. ತುಕರಾಂ ಪೂಜಾರಿ, ಬಂಟ್ವಾಳ ಕನ್ನಡ ಸಾಹಿತ್ಯ ಪರಿಷತ್ತ್ ಗೌರವ ಕಾರ್ಯದರ್ಶಿ ವಿ.ಸು. ಭಟ್, ಅಮ್ಟಾಡಿ ಗ್ರಾ.ಪಂ. ಅಧ್ಯಕ್ಷ ವಿಜಯ್ಕುಮಾರ್,ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜ, ಉದ್ಯಮಿ ಚಂದ್ರಹಾಸ ಶೆಟ್ಟಿ ರಂಗೋಲಿ, ರತ್ನಾಕರ ಶೆಟ್ಟಿ ಮಂಡ್ಯಡ್ಕ ಗುತ್ತು ಕಲಾವಿದ ಸದಾಶಿವ ಡಿ. ತುಂಬೆ, ನಿವೃತ್ತ ಮುಖ್ಯ ಶಿಕ್ಷಕ ಮಹಾಬಲೇಶ್ವರ ಹೆಬ್ಬಾರ್, ಶಿಕ್ಷಕ ಜಯರಾಮ ಪಡ್ರೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕೇಶವ ಎಚ್.ಕಟೀಲು ಸ್ವಾಗತಿಸಿ, ಏರ್ಯರ ನೆನಪುಗಳನ್ನು ಮೆಲುಕು ಹಾಕಿದರು. ನಲ್ಕೆಮಾರು ಶಾಲೆಯ ಶಿಕ್ಷಕ ಜಗನ್ನಾಥ ವಂದಿಸಿದರು. ಕಾರ್ಯಕ್ರಮ ಸಂಯೋಜಕ ದಾಮೋದರ್ ಮಾಸ್ತರ್ ಏರ್ಯ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಮಹಾಬಲೇಶ್ವರ ಹೆಬ್ಬಾರ್ ಓದುವ ಹವ್ಯಾಸ, ಚಿತ್ರಕಲಾ ಶಿಕ್ಷಕ ತಾರಾನಾಥ ಕೈರಂಗಳ ಚಿತ್ರ…
ಬಂಟ್ವಾಳ: ವೆಲಂಕಣಿ ಮಾತೆ ದೇವಾಲ ಫರ್ಲಾ, ಮಹಿಳಾ ಸಂಘಟನೆ ಫರ್ಲಾ ಘಟಕ, ಮತ್ತು ಸ್ತ್ರೀ ಆಯೋಗ ಫರ್ಲಾ ಇವರ ಸಹಭಾಗಿತ್ವದಲ್ಲಿ ಹಿರಿಯರ ದಿನ ಹಾಗೂ ಆಟಿಡೊಂಜಿ ಕೂಟ ಕಾರ್ಯಕ್ರಮ ಭಾನುವಾರ ನಡೆಯಿತು. ಚರ್ಚ್ ಧರ್ಮಗುರು ಅತೀ ವಂದನೀಯ ತಿಯೊದೊರಾ ಡಿ ಕ್ಹುನರವರ ಮುಂದಾಳತ್ವದಲ್ಲಿ ಬಲಿ ಪೂಜೆ ನಡೆಯಿತು.. ಚರ್ಚ್ ನ ಸಭಭವನದಲ್ಲಿ ಸಂಘಟನೆಯ ಸ್ತ್ರೀಯರಿಗಾಗಿ ಗಿಡಮೂಲಿಕೆ ಆಯುರ್ವೆದ ಸಸ್ಯಗಳ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಅತೀ ವಂದನೀಯ ಫಾ.ಮಾರ್ಕ್ ಡಿಸೋಜಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅತೀ ವಂದನೀಯ ಫಾ.ಗಿಲ್ಬರ್ಟ್ ಮಸ್ಕರೇನ್ಹಸ್, ಸಂಪನ್ಮೂಲ ವ್ಯಕ್ತಿಯಾಗಿ ಭಗಿನಿ ಆಗ್ನೇಸ್ ಫ್ರ್ಯಾಂಕ್ (ಬೆಥನಿ) ಭಾಗವಹಿಸಿದ್ದರು. ಚರ್ಚ್ ಪಾಲನಾ ಸಮಿತಿಯ ಉಪಧ್ಯಾಕ್ಷ ನವಿನ್ ಮಿನೇಜಸ್, ಕಾರ್ಯದರ್ಶಿ ಹಿಲ್ಡಾ ಪಿರೇರಾ, ಆಯೋಗ ಸಂಯೋಜಕಿ ಸುನಿತಾ ರೊಡ್ರಿಗಸ್, ಹಿರಿಯರಾದ ಲಿಯೊ ಮಿನೇಜಸ್, ಸಂಘಟನೆ ಅಧ್ಯಕ್ಷೆ ಐರಿನ್ ಯಂ. ಡಿಸೋಜ, ಕಾರ್ಯದರ್ಶಿ ಜೋಯ್ಸ್ ಡಿಸೋಜಾ ಉಪಸ್ಥಿತಿದ್ದರು. ಸುನಿತಾ ಬ್ಯಾಪ್ಟಿಸ್ಟ್, ಜ್ಯೋತಿ ಸಿಕ್ವೇರ ಕಾರ್ಯಕ್ರಮ ನಿರೂಪಿಸಿದರು. ಮಹಿಳಾ ಸಂಘಟನೆಯ ಸದಸ್ಯರು ತಾವೇ ತಯಾರಿಸಿದ ಮಳೆಗಾಲದ…
ಮಂಗಳೂರು: ಕರ್ನಾಟಕ ಅಮೆಚೂರು ಜೂಡೋ ಅಸೋಸಿಯೇಷನ್ ಆಶ್ರಯದಲ್ಲಿ ಬೆಳಗಾವಿ ಜಿಲ್ಲಾ ಅಮೆಚೂರು ಜೂಡೋ ಅಸೋಷಿಯೇಷನ್ ಸಹಯೋಗದಲ್ಲಿ ಬಾಲಕ, ಬಾಲಕಿಯರಿಗಾಗಿ ನಡೆದ ಕರ್ನಾಟಕ ರಾಜ್ಯಮಟ್ಟದ ಮುಕ್ತ ಜೂಡೋ ಪಂದ್ಯಾಟದ ಮಿನಿ ಕಿಡ್ಸ್ ವಿಭಾಗದಲ್ಲಿ ಮಂಗಳೂರಿನ ವಿಭಾ ಕಂಚಿನ ಪದಕ ಗೆದ್ದುಕೊಂಡು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಬೆಳಗಾವಿಯ ಗಾಂಧಿ ಭವನದಲ್ಲಿ ಜುಲೈ 25 ರಿಂದ 27ರವರೆಗೆ ಜೂಡೋ ಪಂದ್ಯಾಟ ನಡೆದಿದೆ. ಈಕೆ ಎಸ್ಇಎಫ್ಎಲ್ಸಿ ವಿದ್ಯಾಸಂಸ್ಥೆಯಲ್ಲಿ ಮೂರನೇ ತರಗತಿಯ ವಿದ್ಯಾರ್ಥಿಯಾಗಿದ್ದು ಮಾರ್ಷಲ್ ಆರ್ಟ್ ತರಬೇತುದಾರ ರಾಜೇಶ್ ಬ್ರಹ್ಮರಕೂಟ್ಲು ಅವರಿಂದ ನಂದಾದೀಪಾ ಅಪಾರ್ಟ್ಮೆಂಟ್ನಲ್ಲಿ ತರಬೇತಿ ಪಡೆಯುತ್ತಿದ್ದಾರೆ.
ಬಂಟ್ವಾಳ: ಕರ್ನಾಟಕ ಅಮೆಚೂರು ಜೂಡೋ ಅಸೋಸಿಯೇಷನ್ ಆಶ್ರಯದಲ್ಲಿ ಬೆಳಗಾವಿ ಜಿಲ್ಲಾ ಅಮೆಚೂರು ಜೂಡೋ ಅಸೋಷಿಯೇಷನ್ ಸಹಯೋಗದಲ್ಲಿ ಬಾಲಕ, ಬಾಲಕಿಯರಿಗಾಗಿ ನಡೆದ ಕರ್ನಾಟಕ ರಾಜ್ಯಮಟ್ಟದ ಮುಕ್ತ ಜೂಡೋ ಪಂಟ್ಯಾಟದಲ್ಲಿ ಯಶ್ವಿನಿ ಬೆಳ್ಳಿ ಪದಕ ಹಾಗೂ ಹಂಸಿಕಾ ಕಂಚಿನ ಪದಕವನ್ನು ಗೆದ್ದುಕೊಂಡು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಬೆಳಗಾವಿಯ ಗಾಂಧಿ ಭವನದಲ್ಲಿ ಜುಲೈ 25 ರಿಂದ 27ರವರೆಗೆ ಜೂಡೋ ಪಂಟ್ಯಾಟ ನಡೆದಿದ್ದು ಬಹುಮಾನ ವಿಜೇತ ಇಬ್ಬರೂ ವಿದ್ಯಾರ್ಥಿಗಳು ಪೊಳಲಿ ಶ್ರೀ ರಾಜರಾಜೇಶ್ವರೀ ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇವರಿಗೆ ಮಾರ್ಷಲ್ ಆರ್ಟ್ ತರಬೇತುದಾರ ರಾಜೇಶ್ ಬ್ರಹ್ಮರಕೂಟ್ಲು ಅವರಿಂದ ತರಬೇತಿ ನೀಡಿದ್ದಾರೆ.
ಬಂಟ್ವಾಳ: ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ವಿಶೇಷ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮುಂದಿನ ಎರಡು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಭುವನೇಶ್ ಪಚ್ಚಿನಡ್ಕ ಅವಿರೋಧವಾಗಿ ಆಯ್ಕೆ ಯಾದರು. ಉಪಾಧ್ಯಕ್ಷರಾಗಿ ಜಯಪ್ರಕಾಶ್ ಜೆ ಎಸ್ ಜಕ್ರಿಬೆಟ್ಟು ಪ್ರಧಾನ ಕಾರ್ಯದರ್ಶಿಯಾಗಿ ಶ್ರೀನಿವಾಸ್ ಪೂಜಾರಿ ಮೆಲ್ಕಾರ್ ಜೊತೆ ಕಾರ್ಯದರ್ಶಿಯಾಗಿ ಆನಂದ್ ಸಾಲಿಯಾನ್ ಶಂಭೂರು ಕೋಶಾಧಿಕಾರಿಯಾಗಿ ಸುನೀಲ್ ಕುಂದರ್ ಮೊಡಂಕಾಪು ಲೆಕ್ಕ ಪರಿಶೋಧಕರಾಗಿ ಪ್ರಶಾಂತ್ ಕೋಟ್ಯಾನ್ ಸಂಚಯಗಿರಿ ಇವರುಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ನಿಕಟ ಪೂರ್ವ ಅಧ್ಯಕ್ಷ ಬಿ. ಸಂಜೀವ ಪೂಜಾರಿ ಗುರುಕೃಪಾ, ಮಾಜಿ ಅಧ್ಯಕ್ಷರಾದ ಕೆ. ಹರಿಕೃಷ್ಣ ಬಂಟ್ವಾಳ್, ರಾಮಪ್ಪ ಪೂಜಾರಿ ಮಾರ್ನಬೈಲು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ವೀರೇಂದ್ರ ಅಮೀನ್ ವಗ್ಗ, ಸಂಜೀವ ಪೂಜಾರಿ ಕುಚ್ಚಿಗುಡ್ಡೆ ಸತೀಶ್ ಬಿ. ಮಿತ್ತಬೈಲ್, ರಮೇಶ್ ತುಂಬೆ, ಗೋಪಾಲ್ ಪೂಜಾರಿ ಕಣೆಜಾಲು, ಬೇಬಿ ಕುಂದರ್ ಅಜ್ಜಿಬೆಟ್ಟು, ಲೋಕೇಶ್ ಕೋಟ್ಯಾನ್ ಎಕ್ಕುಡೇಲ್, ರಾಮಚಂದ್ರ ಸುವರ್ಣ ತುಂಬೆ, ಗಣೇಶ್ ಪೂಜಾರಿ ಪೂಂಜಾರೆಕೋಡಿ, ಹರೀಶ್ ಕೋಟ್ಯಾನ್ ಕುದನೆ, ರಾಜೇಶ್ ಸುವರ್ಣ ರಾಜಲಕ್ಷ್ಮಿ, ಪ್ರೇಮನಾಥ್…
ಬಂಟ್ವಾಳ: ಮಾರ್ನಬೈಲು ಅಯ್ಯಪ್ಪ ಸ್ವಾಮಿ ಮಂದಿರದ ಅಭಿವೃದ್ಧಿ ಮತ್ತು ಭೂಮಿ ಖರೀದಿ ಸಂಕಲ್ಪ ಸಿದ್ಧಿಗಾಗಿ 18 ಗುರುವಾರ ಪರ್ಯಂತ ನಡೆದ ಪಂಚಾರತಿ ಸೇವೆ ಯಶಸ್ವಿಯಾಗಿ ಸಮಾಪನಗೊಂಡಿತು. ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಜಗನ್ನಾಥ ಚೌಟ ಬದಿಗುಡ್ಡೆ ಮಾತನಾಡಿ ಕಲಿಯುಗದಲ್ಲಿ ಸಮಸ್ಯೆಗಳು ಸಾಮಾನ್ಯ. ಅವುಗಳನ್ನು ಎದುರಿಸಿಕೊಂಡು ಮುನ್ನಡೆಯಬೇಕಾದುದು ನಮ್ಮ ಧರ್ಮ. ನಮಗೆ ಈ ಮಾನವ ಧರ್ಮವು ದೊರಕಿರುವುದು ಪೂರ್ವ ಜನ್ಮದ ಪುಣ್ಯ. ನಾವು ಮಾಡುತ್ತಿರುವ ಎಲ್ಲಾ ಕೆಲಸ ಕಾರ್ಯಗಳು ಪೂರ್ವ ಜನ್ಮದ ಪುಣ್ಯದ ಕಾರ್ಯದಲ್ಲಿ ನಿರ್ಧರಿತ ವಾಗಿದೆ. ಅಯ್ಯಪ್ಪ ಮಂದಿರಕ್ಕೆ ಜಾಗ ಖರೀದಿ ಮಾಡುವ ಈ ಪುಣ್ಯ ಕಾರ್ಯದಲ್ಲಿ ನಾವೆಲ್ಲರೂ ಕೈ ಜೋಡಿಸೋಣ ಎಂದರು. ಮಹಾದೇವ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪುಷ್ಪರಾಜ್ ಕುಕ್ಕಾಜೆ ಮಾತನಾಡಿ ಪಂಚಾರತಿ ಸೇವೆಯ ಪರಿಕಲ್ಪನೆಯೇ ಅತ್ಯಂತ ವಿಶಿಷ್ಠವಾದುದು. 18 ಗುರುವಾರದ ಪಂಚಾರತಿ ಸೇವೆಯನ್ನು ಭಕ್ತರಿಗಾಗಿ ಈ ಮಂದಿರದಲ್ಲಿ ಮುಂದುವರಿಸಿಕೊಂಡು ಹೋಗಬೇಕು. ಅದು ಈ ಮಂದಿರದ ವಿಶೇಷ ಸೇವೆಯಾಗಿ ಮುಂದುವರಿಯಬೇಕು ಎಂದು ಆಶಿಸಿದರು ಪಂಚಾರತಿ…








