Author: admin

ಬಂಟ್ವಾಳ: ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ಕಾಲೇಜಿನ ವಿದ್ಯಾರ್ಥಿನಿ ವೀಕ್ಷಾ ವಿ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ತಿಪಟೂರಿನ ಕಲ್ಪತರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ನಡೆದ ಸ್ಪರ್ಧೆಯಲ್ಲಿ ಅವರು 21 ಕಿಮೀ ಹಾಫ್ ಮ್ಯಾರಥಾನ್‌ನಲ್ಲಿ ಬೆಳ್ಳಿ ಪದಕ ಮತ್ತು 10 ಕಿ.ಮೀ ಓಟದಲ್ಲಿ ಚಿನ್ನದ ಪದಕ ಗಳಿಸಿದ್ದಾರೆ. ವೀಕ್ಷಾ ಅವರು ಮಂಜುಳಾ ಮತ್ತು ಬಂಟ್ವಾಳ ನಗರ ಠಾಣೆಯ ಎಎಸೈ ವಿಜಯಗೌಡ ಅವರ ಪುತ್ರಿ. .

Read More

ಉಳ್ಳಾಲ: ಹಿಂದುಳಿದ ವರ್ಗಳ ಕಲ್ಯಾಣ ಇಲಾಖೆಯ ವತಿಯಿಂದ ನಡೆಸಲ್ಪಡುವ ಡಿ. ದೇವರಾಜ ಅರಸು ಮೆಟ್ರಿಕ್ ನಂತರದ ಸ್ನಾತಕೋತ್ತರ ವಿದ್ಯಾರ್ಥಿ ನಿಲಯದ ರಜತ ಸಂಭ್ರಮದ ಹಾಸ್ಟೆಲ್ ಡೇ ಅನರ್ಘ್ಯ- 2026 ಕಾರ್ಯಕ್ರಮ ವಿಜ್ರಂಭಣೆಯಿಂದ ನಡೆಯಿತು. ‌ ಚಿತ್ರನಟ, ಹಿರಿಯ ರಂಗಭೂಮಿ ಕಲಾವಿದ ಅರವಿಂದ ಬೋಳಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಬೇರೆ ಬೇರೆ ಮನೆಯಿಂದ ಬಂದರೂ ಇಲ್ಲಿ ಒಂದೇ ಕುಟುಂಬದ ಸದಸ್ಯರಂತೆ ವಿದ್ಯಾರ್ಥಿಗಳು ಜೊತೆಯಾಗಿರುವುದು ವಿಶೇಷವಾದ ಅನುಭವವನ್ನು ನೀಡುತ್ತದೆ , ವಿದ್ಯಾ ಸಂಸ್ಥೆಗಳು ದೇವಸ್ಥಾನದಂತೆ ಶ್ರೇಷ್ಟ ಎಂದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಬಿಂದಿಯಾ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಶ್ರದ್ಧೆಯಿಂದ ಕೆಲಸ ಮಾಡಿದಾಗ ಯಶಸ್ಸು ಸಾಧಿಸಲು ಸಾಧ್ಯವಿದೆ. ಏನನ್ನು ಯೋಚಿಸುತ್ತೇವೆಯೋ ಅದೇ ಆಗುತ್ತೇವೆ, ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಪ್ರಯತ್ನ ಇರಲಿ ಎಂದು ಆಶಿಸಿದರು. ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ. ಮಾಧವ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ‌ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಜೀವನ ನಡೆಸಿ ನಮ್ಮ ಗುರಿಯನ್ನು ಸಾಧಿಸ…

Read More

ಬಂಟ್ವಾಳ: ತುರ್ತು ಸಂದರ್ಭದಲ್ಲಿ ಜನರಿಗೆ ಆಗೂ ಆಸ್ಪತ್ರೆಗಳ ರಕ್ತನಿಧಿಗೆ ರಕ್ತದ ಅವಶ್ಯಕತೆ ಇದ್ದಾಗ ಸೇವಾಂಜಲಿ ಸಂಸ್ಥೆ ನಿರಂತರ ಶಿಬಿರಗಳನ್ನು ಹಮ್ಮಿಕೊಂಡು ರಕ್ತದ ಬೇಡಿಕೆಯನ್ನು ಪೂರೈಸುತ್ತಿರುವುದು ಉತ್ತಮ ಕಾರ್ಯ ಎಂದು ಬಂಟ್ವಾಳ ಉಪವಿಭಾಗದ ಸಹಾಯಕ ಅಧೀಕ್ಷಕ ಯಶ್ ಕುಮಾರ್ ಶರ್ಮ‌ ಹೇಳಿದರು. ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ , ಕೆ. ಎಸ್. ಹೆಗ್ಡೆ ಆಸ್ಪತ್ರೆಯ ಸಹಯೋಗದೊಂದಿಗೆ ಫರಂಗಿಪೇಟೆಯ ಸೇವಾಂಜಲಿ ಸಭಾಗ್ರಹದಲ್ಲಿ ಭಾನುವಾರ ನಡೆದ 135 ನೇ ರಕ್ತದಾನ ಶಿಬಿರವನ್ನು ದೀಪ ಬೆಳಗಿಸಿ, ಸ್ವಯಂ ರಕ್ತದಾನ ಮಾಡುವ ಮೂಲಕ‌ ಉದ್ಘಾಟಿಸಿ ಮಾತನಾಡಿದರು. ನಗರ ಭಾಗದಲ್ಲಿ ಬ್ಲಡ್ ಬ್ಯಾಂಕ್ ಗಳು ಅಗತ್ಯ ಸಂದರ್ಭದಲ್ಲಿ ರಕ್ತ ಒದಗಿಸುವ ಕೆಲಸ‌ಮಾಡುತ್ತದೆ ಆದರೆ ಗ್ರಾಮೀಣ ಭಾಗಗಳಲ್ಲಿ ಅತಂಹ ವ್ಯವಸ್ಥೆಗಳು ಇರುವುದಿಲ್ಲ.‌ ಸೇವಾಂಜಲಿ ಸಂಸ್ಥೆ ಹಲವು‌ ವರ್ಷಗಳಿಂದ‌ ಇಂತಹ ಸೇವಾ ಕಾರ್ಯ ನಡೆಸುತ್ತಿರುವುದು ಅಭಿನಂದನೀಯ ಎಂದರು. ರೋಟರಿ ಜಿಲ್ಲೆ‌‌ 3181ನ ಮಾಜಿ ಗವರ್ನರ್ ಎನ್.‌ಪ್ರಕಾಶ್ ಕಾರಂತ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ರಕ್ತದ ಕೊರತೆ ಎದುರಿಸುತ್ತಿರುವ ಈ ಕಾಲಘಟ್ಟದಲ್ಲಿ ಆಸ್ಪತ್ರೆಗಳ…

Read More

ಬಂಟ್ವಾಳ :ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಕೆ. ಎಸ್. ಹೆಗ್ಡೆ ಆಸ್ಪತ್ರೆ, ದೇರಳಕಟ್ಟೆ ಇವರ ಸಹಯೋಗದಲ್ಲಿ 135ನೇ ರಕ್ತದಾನ ಶಿಬಿರವು ಮಾ.29ರಂದು ಭಾನುವಾರ ಬೆಳಿಗ್ಗೆ ಗಂಟೆ 9ರಿಂದ 1ರ ವರೆಗೆ ಫರಂಗಿಪೇಟೆಯ ಸೇವಾಂಜಲಿ ಸಭಾಗೃಹದಲ್ಲಿ ನಡೆಯಲಿದೆ. ಬಂಟ್ವಾಳ ಉಪವಿಭಾಗದ ಎಎಸ್ಪಿ ಯಶ್ ಕುಮಾರ್ ಶರ್ಮ‌ ಶಿಬಿರ ಉದ್ಘಾಟಿಸುವರು, ರೋಟರಿ ಜಿಲ್ಲಾ ಮಾಜಿ ಗವರ್ನರ್ ಎನ್. ಪ್ರಶಾಂತ್ ಕಾರಂತ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು ಎಂದು ಸೇವಾಂಜಲಿ ಪ್ರತಿಷ್ಠಾನ ಆಡಳಿತ ಟ್ರಸ್ಟಿ ಕೆ ಕೃಷ್ಣಕುಮಾರ್ ಪೂಂಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬಂಟ್ಚಾಳ : ಇಲ್ಲಿಯ ನಗರದ ನಂದನಹಿತ್ಲು  ಶ್ರೀ ವೈದ್ಯನಾಥ,ಅರಸು, ಜುಮಾದಿ ಬಂಟ ದೈವಸ್ಥಾನದ ವರ್ಷಾವಧಿ ಉತ್ಸವವು ಎ.1 ರಿಂದ 3 ರವರೆಗೆ ನಡೆಯಲಿರುವ  ಪ್ರಯುಕ್ತ ಕೋಳಿಕುಂಟವು ಮಂಗಳವಾರ ನೆರವೇರಿತು. ಈ ಸಂದರ್ಭ ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷ ಗಣೇಶ್ ಸುವರ್ಣ ತುಂಬೆ, ಕ್ಷೇತ್ರದ ಮನೆತನದವರಾದ ವಿಶ್ವನಾಥ ಪೊಣ್ಣಂಗಿಲಗುತ್ತು,ಲೋಕೇಶ್ ಬಂಗೇರಗಾಣದಪಡ್ಪು,ಲೋಕನಾಥ ಬಡಕೊಟ್ಟು,  ಸಂಜೀವ ಪೆಲತ್ತಿಮಾರು ಹಾಗೂ ಸ್ಥಳೀಯ ಪ್ರಮುಖರು,ಗ್ರಾಮಸ್ಥರು, ಉಪಸ್ಥಿತರಿದ್ದರು. ಕ್ಷೇತ್ರದಲ್ಲಿ ಪುನರ್ ಕಲಶಾಭಿಷೇಕ ಪ್ರಯುಕ್ತ     ಮಾ. 30 ರಂದು ಸಂಜೆ ವೈಧಿಕ ವಿಧಿ ವಿಧನಗಳು ನಡೆಯಲಿದೆ.ಮಾ.31 ರಂದು ಕಲಶಾಭಿಷೇಕ,ನಾಗತಂಬಿಲ ಸೇವೆ ಬಳಿಕ ಹಿಂದುಯುವ ಸೇನೆ ಬಂಟ್ವಾಳ ತಾಲೂಕು ಹಾಗೂ ಕ್ಷೇತ್ರದ ಅಡಳಿತ ಸಮಿತಿ ವತಿಯಿಂದ ನಿರ್ಮಿಸಲಾದ ನೂತನ ದ್ವಾರದ ಉದ್ಘಾಟನೆ ನಡೆಯಲಿದೆ.

Read More

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಇದರ ಉಳಿ ಭೂಮಿಕ ಜ್ಞಾನವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ವಿಶ್ವನಾಥ್ ವಹಿಸಿದ್ದರು. ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷ ಗಿರಿಯಪ್ಪ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಚಿದಾನಂದ ರೈ ಅವರು ಮಾತಾಡಿ ಗ್ರಾಮ ಅಭಿವೃದ್ಧಿ ಯೋಜನೆಯಿಂದ ಮಹಿಳೆಯರ ಸಬಲೀಕರಣಕ್ಕಾಗಿ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಮಾತೃಶ್ರೀ ಹೇಮಾವತಿ ಅಮ್ಮನವರ ಈ ಸಮಾಜಮುಖಿ ಕಾರ್ಯಕ್ರಮದಿಂದ ಅದೆಷ್ಟು ಕುಟುಂಬ ತನ್ನ ಸ್ವಂತ ಕಾಲಲ್ಲಿ ನಿಲ್ಲಲು ಸಹಕಾರಿಯಾಗಿದೆ. ಎಂದು ತಿಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಹಿಳಾ ಸಾಂತ್ವನ ಕೇಂದ್ರದ ಆಪ್ತ ಸಮಾಲೋಚಕಿ ವಿದ್ಯಾ ಮಹಿಳೆಯರ ಹಕ್ಕು ಮತ್ತು ಕಾನೂನಿನ ಬಗ್ಗೆ ಸದಸ್ಯರಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕೇಂದ್ರದ ಸದಸ್ಯರಿಗೆ ಸ್ಪರ್ಧೆ ಏರ್ಪಡಿಸಲಾಯಿತು . ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು. ಕೇಂದ್ರದ ಸದಸ್ಯರು…

Read More

ಬಂಟ್ವಾಳ: ಇಲ್ಲಿಯ ನಗರದ ನಂದನಹಿತ್ಲು ಶ್ರೀ ವೈದ್ಯನಾಥ ಅರಸು ಜುಮಾದಿ ಬಂಟ ದೈವಸ್ಥಾನ ದ ಪುನರ್ ಕಲಶಾಭಿಷೇಕ ಹಾಗೂ ಕಾಲಾವಧಿ ನೇಮೋತ್ಸವವು ಮಾ.30ರಿಂದ ಎ. 3 ರವರೆಗೆ ನಡೆಯಲಿದೆ ಎಂದು ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷ ಗಣೇಶ್ ಸುವರ್ಣ ತುಂಬೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾ.30 ರಂದು ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆ ಸ್ವಸ್ತಿ ಪುಣ್ಯಾಹವಾಚನ, ಸಪ್ತಶುದ್ಧಿ, ವಾಸ್ತು ಪೂಜೆ, ವಾಸ್ತು ಹೋಮ, ರಾಕ್ಷೆಘ್ನ ಹೋಮ, ದಿಕ್ಪಾಲಕ ಬಲಿ ಮಾ. 31 ಬೆಳಿಗ್ಗೆ 6 ಕ್ಕೆ ಗಣಹೋಮ, ಶ್ರೀ ನಾಗದೇವರಿಗೆ ಪಂಚವಿಂಶತಿ ಕಲಶಾಭಿಷೇಕ, ನಾಗತಂಬಿಲ (ಸರ್ಪತ್ರಯ ಹೋಮ)ಸಂಜೆ 6 ಕ್ಕೆ ಶ್ರೀ ಕ್ಷೇತ್ರದ ಧರ್ಮ ದೈವಗಳಿಗೆ ಕಲಶಾಧಿವಾಸ, ಅಧಿವಾಸ ಹೋಮಗಳು ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಎ.1ರಂದು ಬೆಳಿಗ್ಗೆ 6 ಕ್ಕೆ ಗಣಹೋಮ, ಕಲಶ ಪ್ರತಿಷ್ಠೆ, ಪ್ರಧಾನ ಹೋಮ, ಶ್ರೀ ದೈವಗಳಿಗೆ ಪುನರ್ ಕಲಶಾಭಿಷೇಕ, ನಾಗದೇವರಿಗೆ ತಂಬಿಲ ಸೇವೆ,ಮಧ್ಯಾಹ್ನ 12 ಕ್ಕೆ ಮಹಾಪೂಜೆ, 12.30ಕ್ಕೆ ಅನ್ನಸಂತರ್ಪಣೆ, ಸಂಜೆ 7 ರಿಂದ 8.30 ರವರೆಗೆ ಭಜನಾ…

Read More

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಪ್ರಗತಿ ಬಂಧು ಸ್ವಸಹಾಯ ಸಂಘದಿಂದ ಜನರಲ್ಲಿ ಸ್ವಾಭಿಮಾನದ ಬದುಕಿನ ಜೊತೆಗೆ ಆರ್ಥಿಕ ಶಕ್ತಿ ಹಾಗೂ ಧೈರ್ಯ ಬಂದಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ದ.ಕ. ಜಿಲ್ಲಾ ನಿರ್ಧೇಶಕ ದಿನೇಶ್ ಡಿ. ಹೇಳಿದರು. ಕುರಿಯಾಳ ಶಾಲೆಯಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ ಇದರ ಬಿ.ಸಿ.ರೋಡು ವಲಯದ ಪ್ರಗತಿ ಬಂಧು ಸ್ವಸಹಾಯ ಸಂಘದ ಕುರಿಯಾಳ ಒಕ್ಕೂಟದ ಪದಗ್ರಹಣ ಸಮಾರಂಭದಲ್ಲಿ ನೂತನ ಪದಾಧಿಕಾರಿಗಳಿಗೆ ಜವಾಬ್ದಾರಿ ಹಸ್ತಾಂತರಿಸಿ ಮಾತನಾಡಿದರು. ಶುಭ ಸಮೂಹ ಸಂಸ್ಥೆಯ ಚಂದ್ರಾವತಿ ಸೇಸಪ್ಪ ಕೋಟ್ಯಾನ್ ದೀಪ ಪ್ರಜ್ವಲಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ರೋನಾಲ್ಡ್ ಡಿಸೋಜಾ ಮಾತನಾಡಿ ಜನರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪ್ರಯೋಜನವನ್ನು ಪಡೆದು ಇನ್ನಿತರರಿಗೆ ಪ್ರೇರಣೆ ನೀಡುವ ಕಾರ್ಯ ಆಗಬೇಕು ಎಂದು ತಿಳಿಸಿದರು. ನೂತನ ಅಧ್ಯಕ್ಷ ನವಿನ್ ಪೂಜಾರಿ ಅನಿಸಿಕೆ ವ್ಯಕ್ತಪಡಿಸಿ ಎಲ್ಲರ ಸಹಕಾರ ಕೋರಿದರು. ಅಮ್ಟಾಡಿ ಕೃಷಿ ಪತ್ತಿನ…

Read More

ಬಂಟ್ವಾಳ: ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಶೋಸಿಯೇಷನ್ ಬಂಟ್ವಾಳ ವತಿಯಿಂದ ಮೂಡೂರು- ಪಡೂರು ಕಂಬಳದ ಬಂಟ್ವಾಳ ಕಂಬಳ ಶೀರ್ಷಿಕೆ ಯಲ್ಲಿ ಜಿಲ್ಲಾ ಮಟ್ಟದ ಫೋಟೋ ಸ್ಪರ್ಧೆ ಯನ್ನು ಆಯೋಜಿಸಲಾಗಿದ್ದು ಇದರ ವಿಜೇತರಾಗಿ ನವೀನ್ ದೇವಾಡಿಗ ಬಂಟ್ವಾಳ ಪ್ರಥಮ, ಸ್ಟೀವನ್ ಪಾಯಸ್ ಮಂಗಳೂರು ದ್ವಿತೀಯ, ಚಂದ್ರ ಕಲ್ಮಲೆ ತೃ ತೀಯ ಬಹುಮಾನ ಗಳಿಸಿದ್ದಾರೆ. ಪತ್ರಿಕಾ ಛಾಯಾಗ್ರಾಹಕ ಆಸ್ಟ್ರೋ ಮೋಹನ್ ಉಡುಪಿ ತೀರ್ಪುಗಾರರಾಗಿದ್ದರು.

Read More

ಬಂಟ್ವಾಳ :ತಾಲೂಕಿನ ಕಳ್ಳಿಗೆ ಗ್ರಾಮದ ಯುವಕರ ಸಂಘ ಹಾಗೂ ಮಹಿಳಾ ಸಂಘ ದೇವಂದಬೆಟ್ಟು,ಇದರ 42ನೇ ವರ್ಷದ ವಾರ್ಷಿಕೋತ್ಸವವು ಎ.18ರಂದು ಶನಿವಾರ ನಡೆಯಲಿದ್ದು, ಇದರ ಪೂರ್ವಭಾವಿಯಾಗಿ ಆಮಂತ್ರಣ ಪತ್ರಿಕೆ ಬಿಡುಗಡೆಯು ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದ ಸನ್ನಿದಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಪ್ರದಾನ ಅರ್ಚಕರಾದ ಕೆ ಶಿವರಾಮ ಶಿವರಾಯ, ಯುವಕರ ಸಂಘದ ಅಧ್ಯಕ್ಷರಾದ ಶಶಿಧರ್ ಕನಪಾಡಿ,ಕೋಶಾಧಿಕಾರಿ ಪ್ರಶಾಂತ್ ಕನಪಾಡಿ, ಪ್ರಮುಖರಾದ ಮನೋಜ್ ಕನಪಾಡಿ, ಜಗದೀಶ್ ಬಂಗೇರ ಕಂಜತ್ತೂರು,ಚೇತನ್ ದೇವಂದಬೆಟ್ಟು, ಉದಯ ದೇವಂದಬೆಟ್ಟು, ಚಂದ್ರಹಾಸ ಕರ್ಕೇರ ದೇವಂದಬೆಟ್ಟು ಮತ್ತಿತರರು ಉಪಸ್ಥಿತರಿದ್ದರು

Read More