Author: admin

ಬಂಟ್ವಾಳ: ಕಾರ್ಮಿಕರಿಗೆ ಹಾಗೂ ಗುತ್ತಿಗೆದಾರರಿಗೆ ಯಾವುದೇ ಪೂರ್ವ ಸೂಚನೆ ನೀಡದೆ ಏಕಾಏಕಿ ಬಾಗಿಲು ಮುಚ್ಚಿರುವ ಫರಂಗಿಪೇಟೆಯ ಬೀಡಿ ಕಂಪೆನಿಯ ವಿರುದ್ಧ ಬುಧವಾರ ಡಿಪೋ ಮುಂಭಾಗ ಕಾರ್ಮಿಕರು ಹಾಗೂ ಗುತ್ತಿಗೆದಾರರು ಪ್ರತಿಭಟನೆ ನಡೆಸಿದರು. ಸೌತ್ ಕೆನರಾ ಹೋಂ ಇಂಡಸ್ಟ್ರೀಸ್ ಡಿಪೋ ಫರಂಗಿಪೇಟೆಯಲ್ಲಿ ಕಳೆದ 60 ವರ್ಷಗಳಿಂದ ಬೀಡಿ ಉದ್ದಿಮೆಯನ್ನು ನಡೆಸುತ್ತಿದ್ದು 40 ಮಂದಿ ಬೀಡಿ ಗುತ್ತಿಗೆದಾರರು ಹಾಗೂ 3ಸಾವಿರಕ್ಕಿಂತಲೂ ಅಧಿಕ ಬೀಡಿ ಕಾರ್ಮಿಕರು ದುಡಿಯುತಿದ್ದಾರೆ. ಆದರೆ ಈ ಬೀಡಿ ಸಂಸ್ಥೆ ಯಾವುದೇ ಸೂಚನೆಯನ್ನು ನೀಡದೆ ಕಳೆದ ಏ.1ರಿಂದ ಕಂಪೆನಿಯನ್ನು ಮುಚ್ಚಿದ್ದು ಗುತ್ತಿಗೆದಾರರು ಹಾಗೂ ಕಾರ್ಮಿಕರು ಕೆಲಸ ಇಲ್ಲದೆ ಕಂಗಲಾಗಿದ್ದಾರೆ. ಈ ಬಗ್ಗೆ ಈಗಾಗಲೇ ದ.ಕ. ಜಿಲ್ಲಾ ಸಹಾಯಕ ಕಾರ್ಮಿಕ ಆಯುಕ್ತರಿಗೆ ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಮೂಲಕ ಒತ್ತಾಯಿಸಿದರೂ ಕಂಪೆನಿ ಮಾಲೀಕರು ಹಠಮಾರಿ ಧೋರಣೆ ಅನುಸರಿಸಿದ್ದಾರೆ ಎಂದು ಪ್ರತಿಭಟನಕಾರರು ಆರೋಪಿಸಿ ಕೆಲಸವಿಲ್ಲದ ದಿನಗಳ ಪರಿಹಾರ ವೇತನ ಹಾಗೂ ಕೆಲಸವನ್ನು ಪುನರಾರಂಭಿಸಬೇಕು ಎಂದು ಒತ್ತಾಯಿಸಿದರು. ಕಾರ್ಮಿಕ ಸಂಘಟನೆಗಳ ಮುಖಂಡರಾದ ಜೆ. ಬಾಬು ಕೃಷ್ಣ ಶೆಟ್ಟಿ ,…

Read More

ಬಂಟ್ವಾಳ: ಶಿಕ್ಷಣದ ಬೆಲೆ,ಶಿಕ್ಷಕನಿಗೆ ಇರುವ ಮಹತ್ವ, ಶಿಕ್ಷಣದ ಆದರ್ಶತೆಯು ವಿದ್ಯಾರ್ಥಿಗಳಲ್ಲಿ ಚಿಕ್ಕ ವಯಸ್ಸಿನಲ್ಲಿಯೇ ಮೂಡಿ ಬಂದಾಗ ಶಿಕ್ಷಣದ ಮೇಲೆ ಒಲವು ಮೂಡುತ್ತದೆ ಹಾಗೂ ಕಲಿಕೆಯ ಕಡೆಗೆ ಗಮನವನ್ನು ಹರಿಸಲು ಬೇಕಾದ ಮಾನಸಿಕ ತಯಾರಿಯನ್ನು ಮಾಡಲು ಸಹಾಯವಾಗುತ್ತದೆ, ತನ್ನ ಗೆಳೆಯರ ಜೊತೆ ಸಂತಸದಿಂದ ಕಲಿತಾಗ ಶಿಕ್ಷಣವು ಆನಂದದಾಯಕವಾಗಿರುತ್ತದೆ ಅದಕ್ಕೆ ಬೇಕಾದ ಪೂರಕ ಸನ್ನಿವೇಶಗಳನ್ನು ಶಾಲಾ ಮಟ್ಟದಲ್ಲಿ ಒದಗಿಸಿದಾಗ ಶಿಕ್ಷಣವು ಗಟ್ಟಿಯಾಗುತ್ತದೆ ಎಂದು ರೋಟರಿ ಕ್ಲಬ್ ಬಿ.ಸಿ. ರೋಡ್ ಸಿಟಿ ಇದರ ಅಧ್ಯಕ್ಷ ರೊ.ಗಣೇಶ್ ಶೆಟ್ಟಿ ಅಭಿಪ್ರಾಯ ಪಟ್ಟರು ಅವರು ವೀರಕಂಬ ಗ್ರಾಮದ ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಭ ಇಲ್ಲಿನ ಪೂರ್ವ ಪ್ರಾಥಮಿಕ ತರಗತಿ ಮಕ್ಕಳ ಕಿಂಡರ್ ಗಾರ್ಟನ್ ಪದವಿಯನ್ನು ಪ್ರದಾನ ಮಾಡಿ ಮಾತನಾಡಿದರು,. ಇಂದು ಸಮಾಜ ಶಿಕ್ಷಣಕ್ಕೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಸನ್ನದ್ದವಾಗಿದೆ, ಒಂದು ಶಾಲೆಯ ವ್ಯವಸ್ಥೆಗೆ ಪೂರಕವಾಗಿ ಆ ಶಾಲೆಯ ಶಿಕ್ಷಕರು, ಸಂಘ ಸಂಸ್ಥೆಗಳು, ಪೋಷಕರು ಒಟ್ಟಾಗಿ ಸೇರಿದಾಗ ಶಾಲಾ ವಿದ್ಯಾರ್ಥಿಗಳ ಸರ್ವಾಂಗಣ ಬೆಳವಣಿಗೆ ಸಾಧ್ಯವಾಗುತ್ತದೆ, ಕೇವಲ…

Read More

ಬಂಟ್ವಾಳ: ವಿದ್ಯಾಭ್ಯಾಸದ ಬಳಿಕ ತಾನು ಈ ಉದ್ಯೋಗ ಪಡೆಯಬೇಕು, ಇಂತಹ ಕಚೇರಿಯಲ್ಲಿ ಕೆಲಸ ನಿರ್ವಹಿಸಬೇಕು, ಸ್ವ ಉದ್ಯೋಗ ಮಾಡಬೇಕು ಎನ್ನುವ ಆಸೆ ಸಾಮಾನ್ಯವಾಗಿ ಎಲ್ಲಾ ಮಹಿಳೆಯರಲ್ಲೂ ಇರುತ್ತದೆ. ಆದರೆ ಇಲ್ಲೊಬ್ಬಳು ಮಹಿಳೆ ತಾನು ಆಟೋ ಚಾಲಕಿಯಾಗಬೇಕು ಎಂದು ಬಯಸಿ, ಆಟೋ ಚಾಲನೆಯ ತರಬೇತಿ ಪಡೆದು, ರಿಕ್ಷಾ ಖರೀದಿಸಿ ಇಂದು ಯಶಸ್ವಿ ಆಟೋ ಚಾಲಕಿಯಾಗಿದ್ದಾರೆ.ಬಂಟ್ವಾಳ ತಾಲೂಕಿನ ಅಗ್ರಾರ್ ಬಳಿಯ ಮಡ್ಯಾರ್ ನಿವಾಸಿ ವನಿತಾ ಕುಲಾಲ್ ಈ ಸಾಧನೆಯನ್ನು ಮಾಡಿದವರು. ಗಂಡು ದಿಕ್ಕಿಲ್ಲದೆ, ಬಡತನದಿಂದ ನಲುಗಿ ಹೋಗಿದ್ದ ತನ್ನ ಕುಟುಂಬಕ್ಕೆ ಆರ್ಥಿಕ ಚೈತನ್ಯ ತುಂಬಲು ವನಿತಾ ಆಟೋ ಚಾಲಕಿಯಾಗಿ, ಮಹಿಳೆ ಮನಸ್ಸು ಮಾಡಿದರೆ ಪುರುಷ ಕೇಂದ್ರಿತವಾಗಿರುವ ಈ ಕ್ಷೇತ್ರದಲ್ಲೂ ಶ್ರಮಿಸಿ ಸಾಧನೆ ಮಾಡಬಹುದು ಎಂದು ತೋರಿಸಿಕೊಟ್ಟಿದ್ದಾರೆ. ಬಂಟ್ವಾಳದ ಅಗ್ರಾರ್ ಬಳಿಯ ಮಡ್ಯಾರಿನ ತಿಮ್ಮಪ್ಪ ಮೂಲ್ಯ ಹಾಗೂ ವೀರಮ್ಮ ಕುಟುಂಬದ ನಾಲ್ಕು ಮಕ್ಕಳ ಪೈಕಿ ವನಿತಾ ಕೊನೆಯವರು. ಕುಟುಂಬಕ್ಕೆ ಆಧಾರವಾಗಬೇಕಿದ್ದ ತಂದೆ ಹಾಗೂ ಅಣ್ಣನನ್ನು ಕಳೆದುಕೊಂಡು ತಾಯಿಯ ಆರೈಕೆಯಲ್ಲಿಯೇ ದ್ವಿತೀಯ ಪಿಯುಸಿಯವರೆಗೆ ವಿದ್ಯಾಭ್ಯಾಸ ಪಡೆದು ಬಡತನದಿಂದಾಗಿ…

Read More

ಬಂಟ್ವಾಳ: ದ.ಕ.ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಿತಿ ಉಪಾಧ್ಯಕ್ಷ, ಸಾಮಾಜಿಕ ಹಾಗೂ ಆರ್‌ಟಿಐ ಕಾರ್ಯಕರ್ತ ಪದ್ಮನಾಭ ಸಾವಂತ ಅವರ ಸಾವು ಮೇಲ್ನೋಟಕ್ಕೆ ಆತ್ಮಹತ್ಯೆಯಂತೆ ಕಂಡು ಬಂದರೂ ಸರಿಯಾಗಿ ಪರಿಶೀಲಿಸಿದರೆ ಇದೊಂದು ಕೊಲೆ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ ಎಂದು ಕೆಪಿಸಿಸಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಆರೋಪಿಸಿದ್ದಾರೆ.ಬಿ.ಸಿ.ರೋಡಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಪದ್ಮನಾಭ ಸಾಮಂತ್ ಆರ್‌ಟಿಐ ಕಾರ್ಯಕರ್ತನಾಗಿದ್ದು, ಬಂಟ್ವಾಳದಲ್ಲಿ ನಡೆದ ಅನೇಕ ಅಕ್ರಮ ಹಾಗೂ ಭ್ರಷ್ಟಾಚಾರ ಹಾಗೂ ಬಿಜೆಪಿ ಮುಖಂಡರು ಸೇರಿದಂತೆ ಸಮಾಜದಲ್ಲಿ ನಡೆಯುವ ಅನ್ಯಾಯ ವಿರುದ್ದ ದಿಟ್ಟತನದಿಂದ ಹೋರಾಟ ನಡೆಸಿ ಅಕ್ರಮಗಳನ್ನು ಬಯಲಿಗೆಳೆದಿದ್ದ. ಆ ಕಾರಣಕ್ಕಾಗಿ ಬ್ರಾಣ ಬೆದರಿಕೆ ಇತ್ತು ಈ ಬಗ್ಗೆ ಈ ಬಗ್ಗೆ ಪೊಲೀಸ್ ಠಾಣೆಗಳಿಗೆ ದೂರನ್ನು ನೀಡಿದ್ದ.ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಪದ್ಮನಾಭ ಸಾಮಂತನ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಎರಡೇ ದಿನದಲ್ಲಿ ಈತನ ಶವ ಪತ್ತೆಯಾಗಿರುವುದು ಇದೊಂದು ವ್ಯವಸ್ಥಿತ ಕೊಲೆ ಎನ್ನುವುದು ಸಾಬೀತಾಗುತ್ತದೆ. ಪೊಲೀಸ್ ದೂರು ನೀಡಿzವರನ್ನು ಹಾಗೂ ಅದರ ಹಿಂದಿರುವ ವ್ಯಕ್ತಿಗಳನ್ನು…

Read More

ಬಂಟ್ವಾಳ: ಬಿಜೆಪಿ ಕಾರ್ಯಕರ್ತರ ನಡುವೆ ಬಂಟ್ವಾಳದ ಸಭೆಯಲ್ಲಿ ಹೊಡೆದಾಟ ನಡೆದಿದೆ ಎಂದು ತುಮಕೂರು ಪಾವಗಡದ ಘಟನೆಯ ವಿಡಿಯೋವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ದುರುದ್ದೇಶದೊಂದಿಗೆ ಪ್ರಸಾರ ಮಾಡಿದ ಬಗ್ಗೆ ಬಂಟ್ವಾಳ ಬಿಜೆಪಿಯ ನಿಯೋಗ ಸೋಮವಾರ ಉಪ ಚುನಾವಣಾಧಿಕಾರಿ ಹಾಗೂ ಬಂಟ್ವಾಳ ನಗರ ಠಾಣಾಧಿಕಾರಿಗಳಿಗೆ ಮಾದರಿ ನೀತಿಸಂಹಿತೆಯ ಉಲ್ಲಂಘನೆಯ ಬಗ್ಗೆ ದೂರು ನೀಡಿದೆ. ಬಿಜೆಪಿ ನಿಯೋಗದಲ್ಲಿ ಬಂಟ್ವಾಳ ಮಂಡಲ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್ ಪ್ರಮುಖರಾದ ಗೋವಿಂದ ಪ್ರಭು, ದೇವಪ್ಪ ಪೂಜಾರಿ, ರಾಮದಾಸ ಬಂಟ್ವಾಳ್, ರವೀಶ್ ಶೆಟ್ಟಿ , ಡೊಂಬಯ ಅರಳ, ಮೋನಪ್ಪ ದೇವಸ್ಯ, ದಿನೇಶ್ ಶೆಟ್ಟಿ ದಂಬೆದಾರ್ ಉಪಸ್ಥಿತರಿದ್ದರು.

Read More

ಬಂಟ್ವಾಳ: ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ೧೪ನೇ ಬಿ.ಸಿ.ರೋಡು ಶಾಖೆ ಜಿ.ಕೆ. ಸ್ಮಾರ್ಟ್ ಸಿಟಿ ಕಟ್ಟಡದ ಒಂದನೇ ಮಹಡಿಯಲ್ಲಿ ಭಾನುವಾರ ಉದ್ಘಾಟನೆಗೊಂಡಿತು.ಆರ್ಯ ಈಡಿಗ ಸಂಸ್ಥಾನ ಸೋಲೂರು ಮಠದ ತೀರ್ಥಾಧಿಪತಿ, ಹೊಸ್ಮಾರು ಬಲ್ಯೊಟ್ಟು ಶ್ರೀ ಗುರುಕೃಪಾ ಸೇವಾಶ್ರಮದ ಶ್ರೀ ವಿಖ್ಯಾತಾನಂದ ಸ್ವಾಮೀಜಿ ನೂತನ ಶಾಖೆಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿ ಒಳಿತು ಮಾಡುವ ಮನೋಭಾವ ಇದ್ದಲ್ಲಿ ಅಭಿವೃದ್ದಿ ಕೆಲಸಗಳು ನಿತಂತರವಾಗಿ ನಡೆಯುತ್ತಿರುತ್ತದೆ. ಬ್ರಹ್ಮಶ್ರೀ ನಾರಾಯಣ ಗುರುಗಳ ಚಿಂತನೆ ಸಜೀಪಮುನ್ನೂರು ಮೂರ್ತೆದಾರರ ಸಹಕಾರಿ ಸಂಘದಲ್ಲಿ ಅನುಷ್ಠಾನಗೊಂಡಿದ್ದು ಎಲ್ಲರಿಂದಲೂ ಹಣ ಶೇಖರಣೆ ಮಾಡಿ ಬಡವವರ ಕಷ್ಟಕ್ಕೆ ಆರ್ಥಿಕ ಸಹಕಾರ ನೀಡುವ ಮೂಲಕ ಅದು ವಿನಿಯೋಗವಾಗುತ್ತಿದೆ ಎಂದು ತಿಳಿಸಿದರು. ಸಹಕಾರಿ ಸಂಘಗಳಲ್ಲಿ ಗ್ರಾಹಕರಿಗೆ ನನ್ನದು ಎನ್ನುವ ಆತ್ಮೀಯ ಮನೋಭಾವವಿರುತ್ತದೆ, ಬ್ಯಾಂಕ್ ಅಭಿವೃದ್ಧಿಯಾಗಬೇಕಾದರೆ ಸಿಬ್ಬಂದಿಗಳು ಗ್ರಾಹಕರಿಗೆ ಮಾರ್ಗದರ್ಶನ ಮಾಡುವ ಕೆಲಸ ಆಗಬೇಕಾಗಿದೆ ಎಂದರು. ಮಾಜಿ ಸಚಿವ ಬಿ. ರಮಾನಾಥ ರೈ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಬ್ರಹ್ಮಶ್ರೀ ನಾರಾಯಣ ಗುರುಗಳ ಅಪೇಕ್ಷೆಯ ಕಾರ್ಯ ಸಜೀಪಮುನ್ನೂರು ಮೂರ್ತೆದಾರರ ಸಹಕಾರಿ ಸಂಘದ…

Read More

ಬಂಟ್ವಾಳ: ಸಾಮಾಜಿಕ ಕಾರ್ಯಕರ್ತ, ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಪದ್ಮನಾಭ ಸಾಮಂತ್ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಅವರ ಶವ ಪತ್ತೆಯಾಗಿದೆ.ವಾಮದಪದವಿನ ಅವರ ಮನೆ ಬಳಿಯ ಗುಡ್ಡದಲ್ಲಿರುವ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ವಿವಿಧ ಸಾಮಾಜಿಕ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಪದ್ಮನಾಭ ಸಾಮಂತ್ ಅವರ ಸಾವು ಅನೇಕ ಊಹಪೋಹಗಳಿಗೆ ಕಾರಣವಾಗಿದೆ. ಇತ್ತೀಚೆಗೆ ಉದ್ಯೋಗ ಕೊಡಿಸುವ ನೆಪದಲ್ಲಿ ಹಣ ಪಡೆದುಕೊಂಡಿದ್ದರು ಎನ್ನುವ ಆರೋಪದಡಿ ಪದ್ಮನಾಭ ಸಾಮಂತ್ ವಿರುದ್ದ ಪುಂಜಾಲಕಟ್ಟೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಂಟ್ವಾಳದ ಅನೇಕ ಹಗರಣಗಳನ್ನು ಬಯಲಿಗೆಳೆದು ಸಾಮಾಜಿಕ ಜಾಲಾತಾಣದಲ್ಲಿ ಹರಡುತ್ತಿದ್ದರು, ಸಾಮಾಜಿಕ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಅವರು ಅನೇಕ ಮಂದಿ ವಿರೋಧಿಗಳನ್ನೂ ಕಟ್ಟಿಕೊಂಡಿದ್ದರು ಎನ್ನಲಾಗಿದೆ. ಪದ್ಮನಾಭ ಸಾಮಂತ್ ಅವರು ಆತ್ಮಹತ್ಯೆ ಮಾಡಿಕೊಂಡರೋ? ಅಥವಾ ಇನ್ಯಾವುದೋ ಕಾರಣಕ್ಕೆ ಕೊಲೆ ನಡೆದಿದೆಯೊ? ಎನ್ನುವುದು ತನಿಖೆಯಿಂದ ತಿಳಿದು ಬರಬೇಕಾಗಿದೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.

Read More

ಬಂಟ್ವಾಳ: ತಾಲೂಕಿನ ಗ್ರಾಮೀಣ ಪ್ರದೇಶವಾದ ಸಜೀಪಮೂಡ ಗ್ರಾಮದಲ್ಲಿ ಸ್ಥಾಪನೆಗೊಂಡ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಕನಿಷ್ಠ ಅವಧಿಯಲ್ಲಿಯೇ ಗರಿಷ್ಠ ಸಾಧನೆಯನ್ನು ಮಾಡಿಕೊಂಡು ಅವಿಭಜಿತ ದ.ಕ. ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲನ್ನು ಸಾಧಿಸಿಕೊಂಡು ಮುನ್ನಡೆಯುತ್ತಿದೆ. ಸಂಘದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಮುಂದಾಳತ್ವದಲ್ಲಿ, ಅನುಭವಿ ನಿರ್ದೇಶಕರ ಮಾರ್ಗದರ್ಶನದಲ್ಲಿ, ಕ್ರಿಯಾಶೀಲ ಸಿಬ್ಬಂದಿಗಳ ಸಹಕಾರದೊಂದಿಗೆ ಸಂಘ ಲಾಭದಾಯಕವಾಗಿ ಪ್ರಗತಿಯ ಹೆಜ್ಜೆ ಇಟಿದ್ದು ಸಂಘದ 14ನೇ ಶಾಖೆ ಉದ್ಘಾಟನೆಗೆ ಸಜ್ಜುಗೊಂಡಿದೆ.ಮಾ.31ರಂದು ಭಾನುವಾರ ಬೆಳಿಗ್ಗೆ 9.30ಗಂಟೆಗೆ ಸರಿಯಾಗಿ ಬಂಟ್ವಾಳ ತಾಲೂಕು ಕೇಂದ್ರವಾದ ಬಿ.ಸಿ.ರೋಡಿನ ಹೃದಯಭಾಗದಲ್ಲಿರುವ ಜಿ.ಕೆ. ಸ್ಮಾರ್ಟ್ ಸಿಟಿ ಕಟ್ಟಡದ ಒಂದನೇ ಮಹಡಿಯಲ್ಲಿ ಸಂಘದ ನೂತನ 14ನೇ ಶಾಖೆಯನ್ನು ಆರ್ಯ ಈಡಿಗ ಸಂಸ್ಥಾನ ಸೋಲೂರು ಮಠದ ತೀರ್ಥಾಧಿಪತಿ, ಹೊಸ್ಮಾರು ಬಲ್ಯೊಟ್ಟು ಶ್ರೀ ಗುರುಕೃಪಾ ಸೇವಾಶ್ರಮದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಉದ್ಘಾಟಿಸುವರು. ಸಂಘದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಅಧ್ಯಕ್ಷತೆ ವಹಿಸುವರು, ಮುಖ್ಯ ಅತಿಥಿಗಳಾಗಿ ಬಿ.ಸಿ.ರೋಡಿನ ಶ್ರೀ ಅನ್ನಪೂಣೇಶ್ವರೀ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಭುವನೇಶ್…

Read More

ಬಂಟ್ವಾಳ: ಬಿ.ಸಿ.ರೋಡ್ ನ ಅಜ್ಜಿಬೆಟ್ಟುವಿನಲ್ಲಿರುವ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದ ರಚನೆಯಾಗಿದ್ದು, ಅಧ್ಯಕ್ಷರಾಗಿ ಪಿಡಬ್ಲ್ಯುಡಿ ಗುತ್ತಿಗೆದಾರ ಗಣೇಶ್ ಕಾಮಾಜೆ ಆಯ್ಕೆಯಾಗಿದ್ದಾರೆ. ಶಾಲೆಯಲ್ಲಿ ಭಾನುವಾರ ಹಿರಿಯ ವಿದ್ಯಾರ್ಥಿಗಳ ಸಭೆ ನಡೆದಿದ್ದು, ಗೌರವಾಧ್ಯಕ್ಷರಾಗಿ ಡಾ. ರಮೇಶಾನಂದ ಸೋಮಯಾಜಿ, ಅಧ್ಯಕ್ಷರಾಗಿ ಗಣೇಶ್ ಕಾಮಾಜೆ, ಉಪಾಧ್ಯಕ್ಷರಾಗಿ ಗುರುದತ್ತ ಹೆಗ್ಡೆ, ಕಾರ್ಯದರ್ಶಿಯಾಗಿ ಕಿಶೋರ್ ಕುಲಾಲ್ ಆಯ್ಕೆಗೊಂಡರು. ಒಟ್ಟು 19 ಮಂದಿಯ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ಈ ಸಂದರ್ಭ ಸಂದೀಪ್ ಸಾಲ್ಯಾನ್, ಸತೀಶ್ ಕುಲಾಲ್ ಮತ್ತು ಕಿಶೋರ್ ಅವರು ಅನಿಸಿಕೆ ವ್ಯಕ್ತಪಡಿಸಿದರು. ಮುಖ್ಯೋಪಾಧ್ಯಾಯಿನಿ ಲಕ್ಷ್ಮೀ, ಎಸ್.ಡಿ.ಎಂ.ಸಿ. ಅಧ್ಯಕ್ಷ ಹರೀಶ ಮಾಂಬಾಡಿ, ಸದಸ್ಯರಾದ ದೇವದಾಸ್, ಸಹಶಿಕ್ಷಕರಾದ ತಾಹಿರಾ, ಸುಶೀಲಾ, ಹೇಮಾವತಿ ಉಪಸ್ಥಿತರಿದ್ದರು.

Read More

ಬಂಟ್ವಾಳ: ದಿ.ಕೆ.ಸೇಸಪ್ಪ ಕೋಟ್ಯಾನ್ ಸ್ಮಾರಕ ವೃತ್ತ ನಿರ್ಮಾಣ ಸಮಿತಿ ಇದರ ವತಿಯಿಂದ ಬೆಂಜನಪದವು ಸಮೀಪದ ಕಲ್ಪನೆಯಲ್ಲಿ ಸೇಸಪ್ಪ ಕೋಟ್ಯಾನ್ ಸ್ಮಾರಕವೃತ್ತದ ಲೋಕಾರ್ಪಣೆ ಹಾಗೂ ಅವರ ಪುತ್ತಳಿ ಅನಾವರಣ ಕಾರ್ಯಕ್ರಮ ಭಾನುವಾರ ಸಂಜೆ ನಡೆಯಿತು. ಪೊಳಲಿ ಶ್ರೀ ರಾಮಕೃಷ್ಣ ತಪೋವನದ ಶ್ರೀವಿವೇಕಾ ಚೈತನ್ಯಾನಂದ ಸ್ವಾಮೀಜಿ, ತೊಡಂಬಿಲ ಸೇಕ್ರೆಡ್ ಹಾರ್ಟ್ ಚರ್ಚಿನ ಧರ್ಮಗುರುಗಳಾದ ವಂ. ಆಂಟನಿ ಲೋಬೋ, ಉದ್ದೊಟ್ಟು ಮಸೀದಿ ಧರ್ಮಗುರು ಕೆ.ವಿ. ಮಜೀದ್ ಧಾರಿಮಿ ಉದ್ಘಾಟಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಪೊಳಲಿ ಶ್ರೀ ರಾಮಕೃಷ್ಣ ತಪೋವನದ ಶ್ರೀ ವಿವೇಕಾ ಚೈತನ್ಯಾನಂದ ಸ್ವಾಮೀಜಿ ಆಶೀರ್ವಚನ ನೀಡಿ ಸೇಸಪ್ಪ ಕೋಟ್ಯಾನ್ ಅವರು ವಿಶೇಷವಾದ ಜೀವನ ನಡೆಸಿದ್ದಾರೆ. ವಿದ್ಯಾಭ್ಯಾಸ ಇಲ್ಲದೆ ಇದ್ದರೂ ಕೂಡ ಉದಾರ ಮನಸ್ಸಿನ ವ್ಯಕ್ತಿತ್ವ ಹಾಗೂದೈವಿಕ ಗುಣ ಅವರಲ್ಲಿತ್ತು, ಯಾವುದೇ ಜಾತಿ ಧರ್ಮದವರು ಕೈ ಚಾಚಿದಾಗ ನೆರವು ನೀಡುವ ಧೀಮಂತ ವ್ಯಕ್ತಿ ಅವರಾಗಿದ್ದರು ಎಂದರು.‌ ಇಲ್ಲಿನ ಪುತ್ತಳಿಗೆ ಅವಮಾನ ಆಗಬಾರದು, ಉತ್ತಮವಾಗಿ ನಿರ್ವಹಣೆ ಹಾಗೂ ರಕ್ಷಣೆ ಮಾಡುವ ಜವಬ್ದಾರಿ ನಮ್ಮೆಲ್ಲರದ್ದಾಗಿದ್ದು ಅದು ನಾವು…

Read More