Author: admin
ಬಂಟ್ವಾಳ: ಲಯನ್ಸ್ ಇಂಟರ್ ನ್ಯಾಷನಲ್ ಜಿಲ್ಲೆ 317 ಡಿ ಇದರ ಎಲ್ ಸಿಐ ಎಫ್ ನಿಧಿಯಿಂದ ಅಕ್ಷಯ ಪಾತ್ರೆ ಫೌಂಡೇಷನ್ ಗೆ 25 ಲಕ್ಷ ರೂ.ವೆಚ್ಚದ ಶಾಲೆಗಳಿಗೆ ಆಹಾರ ಸಾಗಟ ಮಾಡುವ ವಾಹನವನ್ನು ಕೊಡುಗೆಯಾಗಿ ನೀಡಲಾಯಿತು. ಬಂಟ್ವಾಳ ತಾಲೂಕಿನ ಬೆಂಜನಪದವಿನಲ್ಲಿರುವ ಅಕ್ಷಯ ಪಾತ್ರೆ ಸಂಸ್ಥೆಯ ಆವರಣದಲ್ಲಿ ಬುಧವಾರ ಸಂಜೆ ಲಯನ್ಸ್ ಜಿಲ್ಲಾ ಗವರ್ನರ್ ಕುಡ್ಪಿ ಅರವಿಂದ ಶೆಣೈ ಅವರು ಮಂಗಳೂರು ಅಕ್ಷಯ ಪಾತ್ರೆಯ ಉಪಾಧ್ಯಕ್ಷ ಸನಂಧನ ಪ್ರಭು ಅವರಿಗೆ ವಾಹನದ ಕೀ ಹಸ್ತಾಂತರಿಸಿದರು. ಈ ಸಂದರ್ಭ ಬೆಂಜನಪದವಿನ ಅಕ್ಷಯಪಾತ್ರೆ ಅಡುಗೆ ಕೋಣೆಯ ಕಾರ್ಯನಿರ್ವಹಣೆಯ ಬಗ್ಗೆ ಸನಂಧನ ಪ್ರಭು ಅವರು ಲಯನ್ಸ್ ಜಿಲ್ಲಾ ಪದಾಧಿಕಾರಿಗಳಿಗೆ ಮಾಹಿತಿ ನೀಡಿದರು. ಬಳಿಕ ಸಂಸ್ಥೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನಂದನ ಪ್ರಭು ಮಾತನಾಡಿ ಪ್ರತಿನಿತ್ಯ 21 ಸಾವಿರ ಮಕ್ಕಳಿಗೆ ಆರೋಗ್ಯಪೂರ್ಣ ಹಾಗೂ ಶುಚಿಯಾದ ಆಹಾರ ಪೂರೈಕೆಯಾಗುತ್ತಿದೆ. ಲಯನ್ಸ್ ಸಂಸ್ಥೆಯ ಇಂತಹ ಸೇವಾ ಕಾರ್ಯಗಳು ಅನೇಕ ಮಂದಿಗೆ ಪ್ರೇರಣೆ ನೀಡುತ್ತದೆ ಎಂದು ತಿಳಿಸಿದರು. ಅರವಿಂದ ಶೆಣೈ ಅವರು ಮುಂದಾಳತ್ವ…
ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ, ಕೇಂದ್ರ ಸರಕಾರದ ಗ್ರಾಮೀಣಾಭಿವೃದ್ಧಿ ಫೌಂಡೇಶನ್ ಇದರ ಸಹಯೋಗದಿಂದಿಗೆ ರೂಟ್ಯಾಗ್ ಸ್ಮಾರ್ಟ್ ವಿಲೇಜ್ ಸೆಂಟರ್ ವತಿಯಿಂದ ಮಾಹಿತಿ, ತಂತ್ರಜ್ಞಾನ ಶಿಬಿರ ಬುಧವಾರ ಫರಂಗಿಪೇಟೆಯ ಸೇವಾಂಜಲಿಯಲ್ಲಿ ನಡೆಯಿತು. ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ಕಾರ್ಯಕ್ರಮ ಉದ್ಘಾಟಿಸಿದರು. ಸೆಕ್ಷನ್ ಇನ್ಫಿನ್ 8 ನ ಸ್ಥಾಪಕ ನಿರ್ದೇಶಕ ವಿಶ್ವಾಸ್ ವಿ.ಎಸ್. ಮಾಹಿತಿ ನೀಡಿ ಉತ್ತರ ಭಾರತದಲ್ಲಿ ರೂಟೇಜ್ ಸ್ಮಾರ್ಟ್ ವಿಲೇಜ್ ಸೆಂಟರ್ ಸಾಕಷ್ಟು ಕಾರ್ಯನಿರ್ವಹಿಸುತ್ತಿವೆ. ಆದರೆ ದಕ್ಷಿಣ ಭಾರತದಲ್ಲಿ ಕಾರ್ಕಳದ ನಿಟ್ಟೆ ಹಾಗೂ ಬಂಟ್ವಾಳದ ಫರಂಗಿಪೇಟೆಯಲ್ಲಿ ಮಾತ್ರ ಇದೆ. ಗ್ರಾಮೀಣ ಭಾಗದಲ್ಲಿ ಜನರನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ ಅವರಿಗೆ ವೃತ್ತಿಗೆ ಪೂರಕವಾಗುವ ತಂತ್ರಜ್ಞಾನವನ್ನು ಅಭಿವೃದ್ದಿ ಪಡಿಸುವ ಕಾರ್ಯ ಈ ಸಂಸ್ಥೆಯ ಮೂಲಕ ನಡೆಯುತ್ತಿದೆ ಎಂದರು. ಸೇವಾಂಜಲಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಚೇತನ್, ದಂತ ಚಿಕಿತ್ಸಾ ಕೇಂದ್ರದ ವೈದ್ಯಾಧಿಕಾರಿ ಡಾ. ಪ್ರತೀಕ್ಷಾ ಕುಡ್ವ, ಡಾ. ರೀಮಾ, ಮೇರಮಜಲು ಗ್ರಾ.ಪಂ. ಮಾಜಿ ಅಧ್ಯಕ್ಷೆ ಬೃಂದಾ ಪೂಜಾರಿ,…
ಬಂಟ್ವಾಳ: ಇಲ್ಲಿನ ಮೂಡನಡುಗೋಡು ಗ್ರಾಮದ ದಡ್ಡಲಕಾಡು ಶ್ರೀ ಜಗದಾಂಬಿಕ ಕ್ಷೇತ್ರದ ೨೦೨೬-೨೭ನೇ ನೇ ಸಾಲಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ರಾಜೇಶ್ ಪೂಜಾರಿ ಕೇದಾಯಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಗೌರವಾಧ್ಯಕ್ಷರಾಗಿ ಪುರುಷೋತ್ತಮ ಪೂಜಾರಿ ದಡ್ಡಲಕಾಡು, ಕೃಷ್ಣಪ್ಪ ನಾಯ್ಕ ಸೇಸಗುರಿ, ಪ್ರಧಾನ ಕಾರ್ಯದರ್ಶಿಯಾಗಿ ಯಶವಂತ ಡಿ., ಕೋಶಾಧಿಕಾರಿಯಾಗಿ ರೋಹಿತ್ ಕುಮಾರ್, ಉಪಾಧ್ಯಕ್ಷರಾಗಿ ಮನೋಹರ ಎಸ್. ನೆಕ್ಕರೆ, ಪ್ರವೀಣ್ ಡಿ., ಜೊತೆ ಕಾರ್ಯದರ್ಶಿಯಾಗಿ ಯತೀಶ್ ಎನ್., ರಾಮಕೃಷ್ಣ ಪೂಜಾರಿ, ಗೌರವ ಸಲಹೆಗಾರರಾಗಿ ವಿಶ್ವನಾಥ ಪೂಜಾರಿ ಡೆಚ್ಚಾರ್, ಪುರುಷೋತ್ತಮ ಪೂಜಾರಿ ಬನತ್ತೋಡಿ, ಸಂಘಟನಾ ಕಾರ್ಯದರ್ಶಿಯಾಗಿ ರಾಜೇಶ್ ಡಿ. ದಡ್ಡಲಕಾಡು, ತಾರಾನಾಥ ಸಪಲ್ಯ ದಡ್ಡಲಕಾಡು, ಉಮೇಶ್ ಪೂಜಾರಿ ದಡ್ಡಲಕಾಡು ಸಹಾಯಕ ಕಾರ್ಯದರ್ಶಿಯಾಗಿ ತೀರ್ಥಕುಮಾರ್ ಬನತ್ತೋಡಿ, ಶರತ್ ನಾವೂರು, ಮಹಿಳಾ ಪ್ರತಿನಿಧಿಯಾಗಿ ಹೇಮಾವತಿ ಬನತ್ತೋಡಿ, ರೂಪಾಶ್ರೀ ಡೆಚ್ಚಾರ್, ಮೀನಾಕ್ಷಿ ಬಿ.ದಡ್ಡಲಕಾಡು ಆಯ್ಕೆಯಾದರು.
ಬಂಟ್ವಾಳ: ಜಾತಿ ಸಮುದಾಯಗಳ ಬಗ್ಗೆ ಅವಹೇಳನ ಮಾಡಿದ ಅನಿತಾ ಕಾಸರಗೋಡು ಎಂಬುವವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆಆಗ್ರಹಿಸಿ ತಾ.ಪಂ.ಮಾಜಿ ಸದಸ್ಯ ಪ್ರಭಾಕರ ಪ್ರಭು ರಾಜ್ಯ ಪೊಲೀಸ್ ಮಹಾ ನಿರ್ದೇಶಕರನ್ನು ಆಗ್ರಹಿಸಿದ್ದಾರೆ.ಕೇರಳ ರಾಜ್ಯದ ಕಾಸರಗೋಡು ನಿವಾಸಿ ಅನಿತಾ ಎಂಬುವವರು ಸಾಮಾಜಿಕ ಜಾಲತಾಣಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎರಡು ಪ್ರಬಲ ಜಾತಿ ಸಮುದಾಯಗಳ ಬಗ್ಗೆ ಮನಬಂದಂತೆ ಅವಹೇಳನಕಾರಿ ಪದಗಳನ್ನು ಬಳಕೆ ಮಾಡಿ ಬಿಲ್ಲವ ಜಾತಿ ಹಾಗೂ ಬಂಟ ಜಾತಿಯ ಬಗ್ಗೆ ಕೆಟ್ಟ ಶಬ್ದಗಳನ್ನು ಬಳಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದಾರೆ . ಈ ಬಗ್ಗೆ ಪ್ರಶ್ನಿಸಿದರೆ ಮತ್ತೆ ಮುಂದುವರಿದು ಯಾವುದೆ ಕಾನೂನು ,ನಿಯಮಗಳನ್ನು ಲೆಕ್ಕಿಸದೇ ಬಿಲ್ಲವ ಸಮುದಾಯದ ಬಗ್ಗೆ ಆವ್ಯಾಚ್ಚ ಪದಗಳಿಂದ ನಿಂದಿಸಿರುತ್ತಾರೆ .ಒಂದು ಧರ್ಮವನ್ನು ಓಲೈಕೆ ಮಾಡಿಕೊಂಡು ಬಿಲ್ಲವ, ಬಂಟ್ಸ್ ಜಾತಿ ಸಮುದಾಯವನ್ನು ನಿಂದಿಸುವ ಈ ಮಹಿಳೆಯ ಕುರಿತು ಸಾರ್ವಜನಿಕರಲ್ಲಿ ಅನುಮಾನ ಉಂಟಾಗಿದ್ದು ಇವರ ಬಗ್ಗೆ ಪೂರ್ವಪರ ತನಿಖೆಯಾಗಬೇಕು.ಯಾವುದೇ ಒಬ್ಬ ವ್ಯಕ್ತಿಯಿಂದ ತೊಂದರೆಗೆ ಒಳಗಾದರೆ ಆ ವ್ಯಕ್ತಿಯ ಬಗ್ಗೆ ವೈಯಕ್ತಿಕ ನಿಂದನೆ ಮಾಡಬೇಕೇ…
ಬಂಟ್ವಾಳ: ದ.ಕ. ಜಿಲ್ಲಾ ಗ್ಯಾರೇಜು ಮಾಲಕರ ಸಂಘದ ಬಂಟ್ವಾಳ ವಲಯದ ಪದಗ್ರಹಣ ಸಮಾರಂಭ ಬಿ.ಸಿ.ರೋಡಿನ ಗಾಣದ ಪಡ್ಪುವಿನಲ್ಲಿರುವ ಆಟೋಲೈನ್ಸ್ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಉದ್ಯಮಿ ಸಂದೇಶ್ ಶೆಟ್ಟಿ ಅರೆಬೆಟ್ಟು ಮಾತನಾಡಿ ಗ್ಯಾರೇಜು ಮಾಲಕರ ಸಂಘದಲ್ಲಿ ಮಾತು ಮೌನವಾಗಿ, ಕೆಲಸ ಮಾತನಾಡುತ್ತಿದೆ, ಸಮಾಜದಲ್ಲಿ ಸಂಘಟನೆ ಹೇಗೆ ಇರಬೇಕು, ಹೇಗೆ ಬೆಳೆಯಬೇಕು ಎನ್ನುವುದಕ್ಕೆ ಗ್ಯಾರೇಜು ಮಾಲಕರ ಸಂಘದ ಬಂಟ್ವಾಳ ವಲಯ ಮಾದರಿಯಾಗಿದೆ ಎಂದರು. ಜಿಲ್ಲಾ ಸಂಘದ ಉಪಾಧ್ಯಕ್ಷ ಸತೀಶ್ ಪೂಜಾರಿ ಪದಗ್ರಹಣ ಅಧಿಕಾರಿಯಾಗಿ ಭಾಗವಹಿಸಿ ನೂತನ ಪದಾಧಿಕಾರಿಗಳಿಗೆ ಪದಗ್ರಹಣ ಭೋದಿಸಿದರು ಅವರು ಮಾತನಾಡಿ ಸುಧೀರ್ ಪೂಜಾರಿ ನೇತ್ರತ್ವದಲ್ಲಿ ಸಂಘ ಉತ್ತಮ ಕೆಲಸ ಮಾಡಿದ್ದು ಮುಂದಿನ ದಿನಗಳಲ್ಲೂ ಮಾತೃ ಸಂಘದಿಂದ ಎಲ್ಲಾ ಸಹಕಾರ ನೀಡುವುದಾಗಿ ತಿಳಿಸಿದರು. ನಿರ್ಗಮನ ಅಧ್ಯಕ್ಷ ಸುಧೀರ್ ಪೂಜಾರಿ ಮಾತನಾಡಿ ಅಧ್ಯಕ್ಷ ಎನ್ನುವುದು ಪದವಿ, ಅಧಿಕಾರಕ್ಕಿಂತಲೂ ಅದೊಂದು ಜವಬ್ದಾರಿ ಎಂದು ಕೆಲಸ ಮಾಡಿದಾಗ ಸಂಘಟನೆಯನ್ನು ಬಲಪಡಿಸಲು ಸಾಧ್ಯವಿದೆ ಎಂದರು. ನೂತನ ಅಧ್ಯಕ್ಷ ಗಣೇಶ್ ಸುವರ್ಣ ಮಾತನಾಡಿ ದೇವರ ಅನುಗ್ರಹ,…
ಬಂಟ್ವಾಳ :ಫರಂಗಿಪೇಟೆ ಹಿಂದೂ ಧಾರ್ಮಿಕ ಸೇವಾ ಸಮಿತಿ ಇದರ ಆಶ್ರಯದಲ್ಲಿ ನಡೆಯುವ 44ನೇ ವರುಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಾಲೋಚನಾ ಸಭೆಯು ಭಾನುವಾರ ಸೇವಾಂಜಲಿ ಸಭಾಗೃಹದಲ್ಲಿ ನಡೆಯಿತು. ಈ ಸಂದರ್ಭ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಉಪನ್ಯಾಸಕಿ ಕೆ.ಕವಿತಾ ದೇವದಾಸ ಅರ್ಕುಳ ಇವರು ಸರ್ವಾನುಮತದಿಂದ ಆಯ್ಕೆಯಾಗಿದ್ದು ಅವಿಭಜಿತ ದ.ಕ.ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿರುವುದು ಪ್ರಥಮವಾಗಿದೆ. ಕೆ.ಕವಿತಾ ದೇವದಾಸ ಅರ್ಕುಳ ಇವರು ಕಳೆದ 33ವರ್ಷಗಳಿಂದ ತುಂಬೆ ಪದವಿ ಪೂರ್ವ ಕಾಲೇಜಿನಲ್ಲಿ ಲೆಕ್ಕ ಶಾಸ್ತ್ರ ಹಾಗೂ ವ್ಯವಹಾರ ಅಧ್ಯಯನ ವಿಷಯದಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ, ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ವಾಣಿಜ್ಯ ಉಪನ್ಯಾಸಕರ ಸಂಘದ ಕೋಶಾಧಿಕಾರಿಯಾಗಿ, ಫರಂಗಿಪೇಟೆ ಅಂಜನಾದೇವಿ ಮಾತೃ ಮಂಡಳಿಯ ಸ್ಥಾಪಕ ಅಧ್ಯಕ್ಷರಾಗಿದ್ದಾರೆ. ಸೇವಾಂಜಲಿ ಪ್ರತಿಷ್ಠಾನದ ಸದಸ್ಯರಾಗಿ ಇಲ್ಲಿ ನಡೆಯುವ ಶ್ರೀ ವರಮಾಲಕ್ಷ್ಮೀ ಪೂಜೆ ಸಹಿತ ಎಲ್ಲಾ ಕಾರ್ಯಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಇವರ ನಾಯಕತ್ವ ಗುಣ, ಸಮಾಜಮುಖಿ ಸೇವೆಯಿಂದಾಗಿ ಮಹಿಳೆಯೊಬ್ಬರು ಪ್ರಥಮ ಭಾರಿಗೆ ಫರಂಗಿಪೇಟೆ ಗಣೆಶೋತ್ಸವ ಸಮಿತಿಯ…
ಬಂಟ್ವಾಳ: ಶಿವಗಿರಿ ಮಹಿಳಾ ಸಹಕಾರ ಸಂಘ ಮೆಲ್ಕರ್ ಪಾಣೆಮಂಗಳೂರು ಇದರ ಆಡಳಿತ ಮಂಡಳಿ ಚುನಾವಣೆ ನಡೆದಿದ್ದು ಅಧ್ಯಕ್ಷರಾಗಿ ಜಯಂತಿ ವಿ ಪೂಜಾರಿ ಇವರು ಎರಡನೇ ಬಾರಿಗೆ ಪುನರ್ ಆಯ್ಕೆಯಾಗಿರುತ್ತಾರೆ. ಉಪಾಧ್ಯಕ್ಷರಾಗಿ ಪುಷ್ಪಾವತಿ ಶ್ರೀನಿವಾಸ್, ನಿರ್ದೇಶಕರಾಗಿ ಅಭಿನಯ ಚಿದಾನಂದ, ಜ್ಯೋತಿಲಕ್ಷ್ಮಿ ರಾಜೇಶ್, ವನಿತಾ ಕೂಸಪ್ಪ, ತುಳಸಿ ಪುರಂದರ, ಶ್ವೇತಾ ಡಿ ಪೂಜಾರಿ, ಧನಲಕ್ಷ್ಮೀ ಮಿಥುನ್, ಪ್ರಮೀಳಾ ಮನೋಜ್, ವಿನೋದ ಆನಂದ ಪೂಜಾರಿ ಇವರು ಮುಂದಿನ ೫ ವರ್ಷದ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಂಟ್ವಾಳ: ಪ್ರತೀ ತಿಂಗಳು ಕ್ಷಯ ರೋಗಿಗಳಿಗೆ ಪೌಷ್ಟಿಕಾಹಾರ ನೀಡುವ ಸರಕಾರ ಮಾಡಬೇಕಾದ ಕಾರ್ಯವನ್ನು ಖಾಸಗಿ ಸಂಸ್ಥೆಯಾದ ಸೇವಾಂಜಲಿ ಪ್ರತಿಷ್ಠಾನ ಅತ್ಯಂತ ಮುತುವರ್ಜಿ ವಹಿಸಿ ಮಾಡುತ್ತಿರುವುದು ಅಭಿನಂದನೀಯ ಎಂದು ಬಂಟ್ವಾಳ ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ಸಚಿನ್ ಕುಮಾರ್ ಹೇಳಿದರು. ಕೇಂದ್ರ ಸರಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನದ ಆಶ್ರಯದಲ್ಲಿ ನಡೆದ ಕ್ಷಯ ರೋಗಿಗಳಿಗೆ ಆಹಾರ, ದವಸಧಾನ್ಯ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಹಲವಾರು ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿರುವ ಸೇವಾಂಜಲಿ ಪ್ರತಿಷ್ಠಾನ ಪ್ರಧಾನಿಯವರ ಕ್ಷಯ ಮುಕ್ತ ಭಾರತ ಅಭಿಯಾನಕ್ಕೆ ಅಳಿಲ ಸೇವೆಯನ್ನು ನೀಡುತ್ತಿದೆ. ಕ್ಷಯ ರೋಗಿಗಳು ಔಷಧಿಯ ಜೊತೆಗೆ ಪೌಷ್ಟಿಕಾಂಶದ ಆಹಾರವನ್ನು ಸೇವಿಸಿ ಕ್ಷಯ ಮುಕ್ತ ಸಮಾಜ ನಿರ್ಮಾಣ ಕಾರ್ಯದಲ್ಲಿ ಕೈ ಜೋಡಿಸುವಂತೆ ವಿನಂತಿಸಿದರು. ಸೇವಾಂಜಲಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಚೇತನ್ ಆರೋಗ್ಯ ಮಾಹಿತಿ ನೀಡಿ ಕೆಮ್ಮು ಮೊದಲಾದ ಕ್ಷಯ ರೋಗದ ಲಕ್ಷಣಗಳು ಕಂಡು ಬಂದಾಗ ಸಕಾಲದಲ್ಲಿ ವೈದ್ಯರಿಂದ ತಪಸಣೆ ನಡೆಸಿ ಔಷಧೋಪಾಚಾರ ಮಾಡಿದಾಗ ರೋಗ ನಿರ್ಮೂಲನೆ ಮಾಡಲು ಸಾಧ್ಯವಿದೆ ಎಂದರು.…
ಬಂಟ್ವಾಳ: ಇಲ್ಲಿನ ಜೆಸಿಐ ಬಂಟ್ವಾಳ ಈ ವರ್ಷ ನಡೆಸಿದ ವಿವಿಧ ಕಾರ್ಯಕ್ರಮಗಳಿಗೆ ಹಲವಾರು ಪ್ರಶಸ್ತಿ, ಪುರಸ್ಕಾರಗಳು ಲಭಿಸಿದೆ. ಜೆಸಿಐ ಕಾಪುವಿನ ಆತಿಥ್ಯದಲ್ಲಿ ಕಾಪುವಿನ ಇನಾಸನ್ ಆಡಿಟೋರಿಯಂನಲ್ಲಿ ಭಾನುವಾರ ನಡೆದ ವಲಯದ ಮಧ್ಯಂತರ ಸಮ್ಮೇಳನ ಸಂಗಮದಲ್ಲಿ ಜೆಸಿಐ ಬಂಟ್ವಾಳದ ಅಧ್ಯಕ್ಷ ಕಿಶೋರ್ ಕುಮಾರ್ ಆಚಾರ್ಯ ಅವರಿಗೆ ವಲಯಾಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಪ್ರಶಸ್ತಿ ಪ್ರದಾನ ಮಾಡಿದರು. ಅತ್ಯುತ್ತಮ ಘಟಕ ವಿನ್ನರ್, ಅತ್ಯುತ್ತಮ ಅಧ್ಯಕ್ಷ ರನ್ನರ್, ಡೈಮಂಡ್ ಸ್ಟಾರ್ ಪ್ರೆಸಿಡೆಂಟ್, ಗೋಲ್ಡನ್ ಸ್ಟಾರ್ ಪ್ರೆಸಿಡೆಂಟ್, ಪ್ರೋ ಪ್ರೆಸಿಡೆಂಟ್, ಲೇಬರ್ ಡೇ ಪ್ರೋಗ್ರಾಮ್ ಅವಾರ್ಡ್, ದಾನ್ ಪ್ರೋಗ್ರಾಮ್ ಅವಾರ್ಡ್, ಸೈಲೆಂಟ್ ಸ್ಟಾರ್ ಪ್ರೋಗ್ರಾಮ್ ಅವಾರ್ಡ್, ಸೇರಿದಂತೆ ಹಲವಾರು ಪುರಸ್ಕಾರಗಳು ಪ್ರಾಪ್ತವಾಗಿದೆ. ಈ ಸಂದರ್ಭ ವಲಯಾಧಿಕಾರಿಗಳಾದ ಕಾಶೀನಾಥ್ ಗೋಗಟೆ, ಸುಹಾಸ್ ಮರಿಕೆ, ಜೆಸಿಐ ಬಂಟ್ವಾಳದ ಲೇಡಿ ಜೇಸಿ ಸಂಯೋಜಕಿ ಅನುಷಾ ಕಿಶೋರ್ ಮತ್ತಿತರರು ಉಪಸ್ಥಿತರಿದ್ದರು.
ಬಂಟ್ವಾಳ: ಕರುನಾಡು ಬಾರಿಟೆಬಲ್ ಟ್ರಸ್ಟ್ ಇದರ 12 ನೇ ಸೇವಾ ಯೋಜನೆಯಾಗಿ ದ.ಕ.ಜಿ.ಪಂ.ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರಿಯಪಾದೆ ಇಲ್ಲಿನ ಮಕ್ಕಳಿಗೆ ಪುಸ್ತಕ ವಿತರಣೆ ಮಾಡಲಾಯಿತು. ಈ ಸಮಯದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು, ಎಸ್.ಡಿ.ಎಂ.ಸಿ ಅಧ್ಯಕ್ಷರು, ಸದಸ್ಯರುಗಳು ಹಾಗೂ ಸಂಸ್ಥೆಯ ಎಲ್ಲಾ ಸೇವಾ ಮಾಣಿಕ್ಯರು ಹಾಜರಿದ್ದರು.








