Author: admin

ಬಂಟ್ವಾಳ: ಶ್ರೀ ಸಾಯಿ ಕಿಡ್ ಝೋನ್ ವಿದ್ಯಾ ಸಂಸ್ಥೆಗಳು ಹಾಗೂ ರಕ್ಷಕ ಶಿಕ್ಷಕ ಸಂಘ ದ ಆಶ್ರಯದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳಿಗೆ, ಹಳೇ ವಿದ್ಯಾರ್ಥಿ ಗಳಿಗೆ, ಪೋಷಕರಿಗೆ ಸಿಬ್ಬಂದಿ ವರ್ಗದವರಿಗೆ ಕೆಸರ್ಡ್ ಒಂಜಿ ದಿನ ಕೆಸರು ಗದ್ದೆ ಕ್ರೀಡಾಕೂಟ ಸ್ಪರ್ಶ ಕಲಾ ಮಂದಿರದ ಗದ್ದೆಯಲ್ಲಿ ನಡೆಯಿತು. ಶ್ರೀ ರಕ್ತೇಶ್ವರಿ ದೇವೀ ಸನ್ನಿಧಿಯ ಸೇವಾ ಸಮಿತಿ ಅಧ್ಯಕ್ಷ ರಾದ ವಿಶ್ವನಾಥ್ ಬಿ. ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾದ  ಸಂಜೀವ ಪೂಜಾರಿ ಗುರುಕೃಪ   ಇವರು ತೆಂಗಿನ ಹೂ ಅರಳಿಸಿ ಕ್ರೀಡಾ ಕೂಟ ಕ್ಕೆ ಶುಭ ಕೋರಿದರು. ಮುಖ್ಯ ಅತಿಥಿಗಳಾಗಿ ಸುನೀಲ್ ಆಚಾರ್ಯ  ಅಪೂರ್ವ ಜ್ಯುವೆಲ್ಲರ್ಸ್ ಬಿ ಸಿ ರೋಡ್ ಗದ್ದೆಗೆ ಹಾಲು ಹಾಕುವ ಮುಖೇನ ಕ್ರೀಡಾ ಕೂಟಕ್ಕೆ ಯಶಸ್ಸನ್ನು ಕೋರಿದರು.ಗೌರವ ಅತಿಥಿಗಳಾಗಿ  ರಕ್ಷಕ ಶಿಕ್ಷಕ ಸಂಘದ ಮಾಜಿ ಅಧ್ಯಕ್ಷರಾದ  ಮ್ಯಾಥ್ಯೂ ಫ್ರಾನ್ಸಿಸ್ ಡಿ ಕುನ್ಹಾ , ಸವಿತಾ ಅರುಣ್ ಪ್ರಕಾಶ್ ಮೊಡoಕಾಪು,  ಅಭಿಲಾಶ್ ಭಟ್ ,  ಜ್ಞಾನೇಶ್ ರಾವ್,ರಕ್ಷಕ ಶಿಕ್ಷಕ ಸಂಘದ…

Read More

ಬಂಟ್ವಾಳ: ಮಂಗಳೂರಿನ ವಾಮಂಜೂರ್ ಚರ್ಚ್ ಹಾಲ್ ಸಭಾಂಗಣದಲ್ಲಿ ಇತ್ತೀಚಿಗೆ ನಡೆದ ನಾಲ್ಕು ಕಂದಾಯ ಜಿಲ್ಲೆಯೆಗನ್ನೊಳಗೊಂಡ ಲಯನ್ಸ್ ಜಿಲ್ಲೆ 317ಡಿ ಇದರ ವಾರ್ಷಿಕ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ,  ಪ್ರತಿಷ್ಠಿತ ಲಯನ್ಸ್ ಕ್ಲಬ್ ಬಂಟ್ವಾಳಕ್ಕೆ “ತೃತೀಯ ಅತ್ಯುತ್ತಮ  ಕ್ಲಬ್ ಪ್ರಶಸ್ತಿ” ಲಭಿಸಿರುತ್ತದೆ. ವರ್ಷವಿಡೀ ಸಂಯೋಜಿಸಿದ ಆಡಳಿತಾತ್ಮಕ ಕಾರ್ಯಕ್ರಮಗಳು, ನಿರಂತರ ಸೇವಾ ಕಾರ್ಯಕ್ರಮಗಳು, ದೇಣಿಗೆಗಳು, ಶಾಶ್ವತ ಯೋಜನೆಗಳು, ಸಾರ್ವಜನಿಕ ಸಂಪರ್ಕ ಜನಸ್ನೇಹಿ ಕಾರ್ಯಕ್ರಮಗಳ ಸಂಯೋಜನೆಯಿಂದ ಈ ಪ್ರಶಸ್ತಿ ಪಡೆಯಲು ಸಾಧ್ಯವಾಗಿದೆ. ಲಯನ್ಸ್ ಜಿಲ್ಲೆಯ ರಾಜ್ಯಪಾಲರಾದ ಲಯನ್ ಭಾರತಿ ಬಿ ಎಂ ಪ್ರಶಸ್ತಿ ನೀಡಿದ್ದು, ಅಧ್ಯಕ್ಷರಾದ ರಾಧಾಕೃಷ್ಣ ಬಂಟ್ವಾಳ, ಕಾರ್ಯದರ್ಶಿ ದೇವಿಕಾ ದಾಮೋದರ್ , ಕೋಶಾಧಿಕಾರಿ ದೇವಪ್ಪ ಪೂಜಾರಿ ಮತ್ತು ಕ್ಲಬ್ ಸದಸ್ಯರುಗಳು  ಜತೆಯಾಗಿ ಈ ಗೌರವ ಸ್ವೀಕರಿಸಿದರು. ಲಯನ್ಸ್ ಜಿಲ್ಲೆಯ ಪೂರ್ವ ರಾಜ್ಯಪಾಲರಾದ ವಸಂತ ಕುಮಾರ್ ಶೆಟ್ಟಿ, ಸಾರ್ವಜನಿಕ ಸಂಪರ್ಕ ಅಧಿಕಾರಿ ಶ್ರೀನಿವಾಸ್ ಪೂಜಾರಿ, ಸಂಪುಟ ಸದಸ್ಯರಾದ ಜಗದೀಶ್ ಎಡಪಡಿತ್ತಾಯ, ನಿಯೋಜಿತ ಅಧ್ಯಕ್ಷರಾದ ರೋಹಿತಾಶ್ವ , ನಿಯೋಜಿತ ಕೋಶಾಧಿಕಾರಿ ರಾಮಕೃಷ್ಣ ರಾವ್, ಸದಸ್ಯರುಗಳಾದ ಮುಕುಂದ್ ಪ್ರಭು,…

Read More

ಬಂಟ್ವಾಳ: ತರವಾಡು ಮನೆಗಳಲ್ಲಿ ಕುಟುಂಬಿಕರ ಜೊತೆ ವೈವಿಧ್ಯಮಯ ಮನರಂಜನೆಯ ಆಟಗಳು ನಡೆಯುವುದರಿಂದ ಯುವಕ ಯುವತಿಯರು ಮತ್ತು ಮಕ್ಕಳಲ್ಲಿ ತರವಾಡು ಮನೆಯ ಬಗ್ಗೆ ಆಸಕ್ತಿ ಹೆಚ್ಚಾಗುತ್ತದೆ ಎಂದು ತಾರಾನಾಥ ಬಿ.ಸಿ.ರೋಡು ಹೇಳಿದರು. ಕುಲಾಲ್ ಬಂಗೇರಾ ಕುಟುಂಬದ ತರವಾಡು ಮನೆ ಬೊಳ್ಮಾ ಇಲ್ಲಿ ನಡೆದ ಕುಟುಂಬಿಕರ ಕೆಸರ್ಡ್ ಒಂಜಿ ದಿನ‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮವನ್ನು ಕುಟುಂಬದ ಗುರಿಕಾರ ಹರೀಶ್ ಕೊಡ್ಡೆ ಉದ್ಘಾಟಿಸಿದರು. ಕುಟುಂಬದ ಹಿರಿಯರಾದ ರಾಘವ್ ವಿಟ್ಲ, ಪದ್ಮನಾಭ ಉರ್ವ, ಸೋಮನಾಥ ಓರ್ಕಡಿ, ದೇಜಪ್ಪ ಬಸ್ರಾ,ಉಪಸ್ಥಿತರಿದ್ದರು ಉಪಾಧ್ಯಕ್ಷರಾದ ನವೀನ್ ಸ್ವಾಗತಿಸಿ ಅಕ್ಷಯ್ ವಂದಿಸಿ ಕಾರ್ಯದರ್ಶಿ ರವೀನಾ ಬಂಗೇರಾ ಕಾರ್ಯಕ್ರಮ ನಿರೂಪಿಸಿದರು.

Read More

ಬಂಟ್ವಾಳ: ದ.ಕ. ಜಿಲ್ಲಾ‌ ಶಾಮಿಯಾನ ಮಾಲಕರ ಸಂಘ ಇದರ ಬಂಟ್ವಾಳ ಘಟಕದ 8ನೇ ವಾರ್ಷಿಕ ಮಹಸಭೆ ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ದ.ಕ. ಜಿಲ್ಲಾ ಶಾಮಿಯಾನ ಮಾಲಕರ ಸಂಘದ ಅಧ್ಯಕ್ಷ ಬಾಬು ಕೆ. ವಿಟ್ಲ ಮಾತನಾಡಿ ಸಂಘ ಗಟ್ಟಿಯಾಗಬೇಕು, ಸಂಘಟನೆಯ ಜೊತೆ ಇದ್ದುಕೊಂಡು ಉದ್ಯಮ ಮಾಡಿದಾಗ ಸಂಘಟನೆಯೊಂದಿಗೆ ನಮಗೂ ಬಲ ಬರುತ್ತದೆ . ಸಂಘದ ಪ್ರತಿಯೊಬ್ಬ ಸದಸ್ಯರು ಸಂಘದ ಅಭಿವೃದ್ಧಿಗಾಗಿ ಸಹಕರಿಸುವಂತೆ ತಿಳಿಸಿದರು. ಬಂಟ್ವಾಳ ಘಟಕದ ಅಧ್ಯಕ್ಷ ಶ್ರೀನಿವಾಸ ಪೂಜಾರಿ ಮೆಲ್ಕಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ ರಕ್ತದಾನ ಶಿಬಿರದಲ್ಲಿ ಸಂಘದ ಸದಸ್ಯರು ಸೇರಿದಂತೆ ಮಹಿಳೆಯರು ರಕ್ತದಾನ ಮಾಡುವ ಮೂಲಕ ಕಾರ್ಯಕ್ರಮ ಅರ್ಥಪೂರ್ಣವಾಗಿದೆ. ಶಾಮಿಯಾನ ಮಾಲಕರ ಸಂಘವೂ ಸದೃಡವಾಗಿದ್ದು ಜಿಲ್ಲಾಧ್ಯಕ್ಷರ ಕಾರ್ಯ ವೈಖರಿ ತೃಪ್ತಿ ತಂದಿದೆ ಎಂದರು. ಕಾರ್ಯಕ್ರಮದಲ್ಲಿ ಹಿರಿಯ ಶಾಮಿಯಾನ ಮಾಲಕರಾದ ಅಬ್ದುಲ್ ಕರೀಂ, ಸುರೇಶ್ ಪೂಜಾರಿ, ತಿಮ್ಮಪ್ಪ ಅವರಿಗೆ ಗೌರವ ಅಭಿನಂದನೆ ಸಲ್ಲಿಸಲಾಯಿತು. ಶೈಕ್ಷಣಿಕ ಸಾಧನೆ ಮಾಡಿದ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ…

Read More

ಬಂಟ್ವಾಳ: ಖ್ಯಾತ ಸಾಹಿತಿ, ಚಿಂತಕ ಏರ್ಯ ಲಕ್ಷ್ಮೀ ನಾರಾಯಣ ಆಳ್ವ ಅವರ ಜನ್ಮಶತಾಬ್ದಿ ಕಾರ್ಯಕ್ರಮಕ್ಕೆ ಆಗಸ್ಟ್ 28ರಂದು ಚಾಲನೆ ನೀಡುವುದಾಗಿ ಏರ್ಯ ಲಕ್ಷ್ಮೀನಾರಾಯಣ ಆಳ್ವ ಜನ್ಮಶತಮಾನೋತ್ಸವ ಸಮಿತಿ ಅಧ್ಯಕ್ಷ ಡಾ. ಬಿ.ಎ. ವಿವೇಕ್ ರೈ ಹಾಗೂ ಏರ್ಯ ಬಾಲಕೃಷ್ಣ ಹೆಗ್ಡೆ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾಹಿತ್ಯ, ಶೈಕ್ಷಣಿಕ, ಧಾರ್ಮಿಕ, ಸಹಕಾರ, ಕೃಷಿ, ಸಹಿತ ವಿವಿಧ ಕ್ಷೇತ್ರಗಳಲ್ಲಿ ತನ್ನನ್ನು ತಾನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಏರ್ಯ ಲಕ್ಷ್ಮೀನಾರಾಯಣ ಆಳ್ವ ಅವರು 1926 ಮಾರ್ಚ್ 19ರಂದು ಜನಿಸಿದ್ದು ಮುಂದಿನ 2026ಕ್ಕೆ ಜನ್ಮಶತಮಾನೋತ್ಸವ ವರ್ಷವಾಗಲಿದೆ. ಈ ನಿಟ್ಟಿನಲ್ಲಿ ಅವರ 100ನೇ ಜನ್ಮದಿನದ ಸವಿನೆನೆಪಿಗಾಗಿ ವಿವಿಧ ಸಾಮಾಜಿಕ, ಶೈಕ್ಷಣಿಕ, ಸಾಹಿತ್ಯಿಕ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಸ್ಮರಣೀಯಗೊಳಿಸುವ ಯೋಜನೆ ಹಾಕಿಕೊಳ್ಳಲಾಗಿದೆ. ಆ. 28ರಂದು ಗುರುವಾರ ಏರ್ಯಬೀಡಿನಲ್ಲಿ ಅವರ ಜನ್ಮಶತಮಾನೋತ್ಸವಕ್ಕೆ ಚಾಲನೆ ನೀಡಿ ಬಳಿಕ ಮುಂದಿನ ಒಂದು ವರ್ಷಗಳ ಕಾಲ ಏರ್ಯ ಅವರ ನೆನೆಪಿನ ವಿವಿಧ ಕಾರ್ಯಕ್ರಮಗಳನ್ನು ನಡೆಸಲು ತೀರ್ಮಾನಿಸಿರುವುದಾಗಿ ಅವರು ತಿಳಿಸಿದ್ದಾರೆ. ವಿದ್ಯಾರ್ಥಿಗಳ ಸಾಹಿತ್ಯ ಸಾಂಸ್ಕೃತಿಕ ಕಮ್ಮಟ: ಏರ್ಯ…

Read More

ಬಂಟ್ವಾಳ: ಸಜೀಪನಡು ಗ್ರಾಮದಲ್ಲಿ ದಾರಿದೀಪ ದುರಸ್ತಿ, ಚರಂಡಿ ಹೂಳೆತ್ತುವ ಬಗ್ಗೆ ಮಾಡಿದ ಮನವಿಗೆ ಪಂಚಾಯತಿ ನಿರ್ಲಕ್ಷ ಧೋರಣೆ ಅನುಸರಿಸಿದೆ ಎಂದು ಆರೋಪಿಸಿ ಪಂಚಾಯತಿನ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಮಹಮ್ಮದ್ ನಾಸೀರ್ ಪಂಚಾಯತಿ ಕಚೇರಿ ಮುಂದೆ ಏಕಾಂಗಿಯಾಗಿ ಪ್ರತಿಭಟನೆ ಆರಂಭಿಸಿದ್ದಾರೆ. ಪಂಚಾಯತಿಯ ಜಗಲಿಯಲ್ಲಿಯೇ ಚಾಪೆ ಹಾಸಿ ಧರಣಿ ಆರಂಭಿಸಿರುವ ಮಹಮ್ಮದ್ ನಾಸೀರ್ ಬೇಡಿಕೆ ಈಡೇರುವ ವರೆಗೂ ಧರಣಿ ಮುಂದುವರೆಸುವುದಾಗಿ ತಿಳಿಸಿದ್ದಾರೆ. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಜೀಪ ನಡು ಗ್ರಾ.ಪಂ. ವ್ಯಾಪ್ತಿಯಲ್ಲಿರುವ ದಾರಿದೀಪ ದುರಸ್ತಿ ಹಾಗೂ ಚರಂಡಿ ಹೂಳೆತ್ತುವ ಬಗ್ಗೆ ಸಾಮಾನ್ಯ ಸಭೆಯಲ್ಲಿ ಚರ್ಚಿಸಲಾಗಿದೆ. ಇಲ್ಲಿನ ದಾರಿ ದೀಪದ ವ್ಯವಸ್ಥೆ ತೀರಾ ಕೆಟ್ಟದಾಗಿದೆ. ಇತ್ತೀಚೆಗೆ ದೇರಾಜೆ ಪರಿಸರದಲ್ಲಿ ಅಹಿತಕರ ಘಟನೆ ನಡೆದಿದ್ದು ಪೊಲೀಸ್ ಠಾಣೆಯಿಂದ ಸೂಚನೆ ಬಂದ ಬಳಿಕ 3 ದಾರಿ ದೀಪಗಳನ್ನು ದುರಸ್ತಿ ಮಾಡಲಾಗಿದೆ. ಇತರ ಭಾಗಗಳಲ್ಲೂ ಬೀದಿ ದೀಪ ದುರಸ್ತಿ ಪಡಿಸುವಂತೆ 2 ಬಾರಿ ಅಧ್ಯಕ್ಷರು ಹಾಗೂ ಪಿಡಿಓ ಅವರಿಗೆ ಮನವಿ…

Read More

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅವರು ಪುಂಜಾಲಕಟ್ಟೆಯಲ್ಲಿ ರೂ.18 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀ ನಾರಾಯಣ ಗುರು ವಸತಿ ಶಾಲೆಯ ಕಟ್ಟಡವನ್ನು ಪರಿಶೀಲಿಸಿ ಸುದ್ದಿಗಾರರ ಜೊತೆ ಮಾತನಾಡಿದರು. ಹಾಲಿ ಬಾಡಿಗೆ ಕಟ್ಟಡದಲ್ಲಿ ವಿದ್ಯಾರ್ಥಿಗಳಿಗೆ ಕುಳಿತುಕೊಳ್ಳಲು ವಸತಿ ಕೊರತೆಯಿದ್ದು, ಈಗಾಗಿ ಸ್ಥಳಾಂತರ ತುರ್ತು ಅಗತ್ಯವಾಗಿದೆ. ಈಗಾಗಿ ಶೀಘ್ರವಾಗಿ ಪೂಜೆ ನೆರವೇರಿಸಿ ವಿದ್ಯಾರ್ಥಿಗಳ ಸ್ಥಳಾಂತರಕ್ಕೆ ನಿರ್ದೇಶನ ನೀಡಿದರು. ಇದೇ ಸಂದರ್ಭದಲ್ಲಿ ಮೇಲ್ದರ್ಜೆಗೇರಿರುವ ಪುಂಜಾಲಕಟ್ಟೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸುಮಾರು ರೂ. 12 ಕೋಟಿ ಅನುದಾನದಲ್ಲಿ ನಿರ್ಮಾಣವಾಗುವ ಕಟ್ಟಡವನ್ನು ಪರಿಶೀಲಿಸಿ , ಕಾಮಗಾರಿಗಳ ಕುರಿತು ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಇಂಜಿನಿಯರ್ ಅವರಿಂದ ಮಾಹಿತಿ ಪಡೆದುಕೊಂಡರು. ಬಂಟ್ವಾಳ ಹಾಗೂ…

Read More

ಬಂಟ್ವಾಳ: ಏರ್ಯ ಆಳ್ವ ಫೌಂಡೇಷನ್ ಮತ್ತು ಕನ್ನಡ ಸಾಹಿತ್ಯ ಪರಿಷತ್ ಬಂಟ್ವಾಳ ಇದರ ಸಹಯೋಗದಲ್ಲಿ ವಿದ್ಯಾರ್ಥಿಗಳ ಸಾಹಿತ್ಯ ಸಾಂಸ್ಕೃತಿಕ ಕಮ್ಮಟ ಜು.27ರಂದು ಆದಿತ್ಯವಾರ ಏರ್ಯಬೀಡು ಮನೆಯಲ್ಲಿ ನಡೆಯಲಿದ್ದು ಇದರ ಅಂಗವಾಗಿ ಮಿನಿಕಥೆ ರಚನಾ ಸ್ಪರ್ಧೆ ಹಾಗೂ ಕವನ ಸ್ಪರ್ಧೆ ನಡೆಯಲಿದೆ. ಮಿನಿಕಥೆ ರಚನೆಗೆ 100 ಪದಗಳ ಒಳಗಿನ ಸ್ವರಚಿತ ಕಥೆಯಾಗಿರಬೇಕು. ಕವನ ಸ್ಪರ್ಧೆಗೆ ಪ್ರಾಥಮಿಕ ವಿಭಾಗಕ್ಕೆ ಬಾಲ್ಯ, ಪ್ರೌಢ ವಿಭಾಗಕ್ಕೆ ಪ್ರಕೃತಿ, ಕಾಲೇಜು ವಿಭಾಗಕ್ಕೆ ಕಾಮನ ಬಿಲ್ಲು ಎನ್ನುವ ವಿಷಯವನ್ನು ನೀಡಲಾಗಿದ್ದು ಸ್ಪರ್ಧಾಳುಗಳು ಜು.24ರೊಳಗಾಗಿ ತಮ್ಮ ಕಥೆ ಹಾಗೂ ಕವನವನ್ನು ದಾಮೋದರ್ ಏರ್ಯ ಇವರ ದೂರವಾಣಿ ಸಂಖ್ಯೆ 9449645537ಗೆ ಕಳುಹಿಸಿ ಕೊಡುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬಂಟ್ವಾಳ: ಶ್ರೀ ಸಾಯಿ ಕಿಡ್ ಝೋನ್ ವಿದ್ಯಾಸಂಸ್ಥೆ ವತಿಯಿಂದ ಪ್ರಥಮ ಬಾರಿಗೆ ಸಂಸ್ಥೆಯ ರಕ್ಷಕ ಶಿಕ್ಷಕ ಸಂಘದ ಸಹಕಾರ ದೊಂದಿಗೆ ಕೆಸರ್ಡ್ ಒಂಜಿ ದಿನ ಕ್ರೀಡಾಕೂಟ ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರಲ್ಲಿ ಜುಲೈ 20 ರಂದು ಆದಿತ್ಯವಾರ ನಡೆಯಲಿದೆ. ಶ್ರೀ ರಕ್ತೇಶ್ವರೀ ದೇವೀ ದೇವಸ್ಥಾನ ದ ಸೇವಾ ಸಮಿತಿ ಯ ಅಧ್ಯಕ್ಷ ವಿಶ್ವನಾಥ್ ಬಿ. ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ . ಮುಖ್ಯ ಅತಿಥಿ ಯಾಗಿ ಉದ್ಯಮಿ ಬಿ. ಸಂಜೀವ ಪೂಜಾರಿ. ಗುರು ಕೃಪಾ, ಅತಿಥಿಗಳಾಗಿ ಸ್ವರ್ಣೋದ್ಯಮಿ ಸುನೀಲ್ ಆಚಾರ್ಯ ರಕ್ಷಕ ಶಿಕ್ಷಕ ಸಂಘದ ಮಾಜಿ ಅಧ್ಯಕ್ಷ ರಾದ ಮ್ಯಾಥ್ಯೂ ಫ್ರಾನ್ಸಿಸ್. ಡಿ ಕುನ್ಹಾ. ಸವಿತಾ ಅರುಣ್ ಪ್ರಕಾಶ್ ಅಭಿಲಾಶ್ ಭಟ್, ಜ್ಞಾನೇಶ್ ಜಿ ರಾವ್. ಅಧ್ಯಕ್ಷೆ ತೇಜಸ್ವಿನಿ ಪೂಜಾರಿ ಭಾಗವಹಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ಐತಪ್ಪ ಪೂಜಾರಿ ವಹಿಸಲಿದ್ದು ,ಕ್ರೀಡಾಕೂಟ ದ ಮೇಲ್ವಿಚಾರಕರಾಗಿ ರಾಜೇಶ್ ಅಮಿನ್, ಸುಂದರ್ ಎನ್, ಜಯಶ್ರೀ ಹಾಗೂ ರಕ್ಷಕ ಶಿಕ್ಷಕ ಸಂಘದ ಎಲ್ಲಾ ಸದಸ್ಯರು, ಶಿಕ್ಷಕರು…

Read More

ಬಂಟ್ವಾಳ : ಪತ್ರಕರ್ತರ ಸಮಾಜಮುಖೀ ಬರಹಗಳು ಗ್ರಾಮೀಣ ಪ್ರದೇಶದ ಹಲವು ಸಮಸ್ಯೆಗಳಿಗೆ ಪರಿಹಾರ ಒದಗಿಸಿದೆ ಎಂದು ಕಾವಳಪಡೂರು ಸರ್ಕಾರಿ ಪದವಿಪೂರ್ವ ಕಾಲೇಜಿನ‌ ಪ್ರೌಢಶಾಲಾ‌ವಿಭಾಗದ ಶಾಲಾಭಿವೃದ್ಧಿ‌ ಸಮಿತಿ ಅಧ್ಯಕ್ಷ ಪಿ.ಜಿನರಾಜ ಆರಿಗ ಹೇಳಿದ್ದಾರೆ. ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆಯ ಅಂಗವಾಗಿ ಕಾವಳಪಡೂರು‌ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ನಡೆದ “ವಿದ್ಯಾರ್ಥಿಗಳ ಜೊತೆ ಪತ್ರಕರ್ತರು ಹೀಗೊಂದು ಮಾತುಕತೆ” ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮೀಣ ಭಾಗದ ಅಭಿವೃದ್ಧಿಯಲ್ಲಿ ಪತ್ರಕರ್ತರ ಪಾಲು ಮಹತ್ವದ್ದು ಎಂದ‌ ಅವರು,ನಿಮ್ಮ ಕಾರ್ಯದಿಂದ ಮುಂದಿನ ದಿನಗಳಲ್ಲಿ ಗ್ರಾಮೀಣ ಪರಿಸರದ ಇನ್ನಷ್ಟು ಸಮಸ್ಯೆಗಳು ಪರಿಹಾರವಾಗಲಿ, ನಿಮ್ಮ ಮೂಲಕ ಉತ್ತಮ ಕಾರ್ಯಗಳಿಗೆ ಹೆಚ್ಚು ಪ್ರಚಾರ ದೊರೆತು,ಸಾರ್ವಜನಿಕರಿಗೆ ಪ್ರಯೋಜನ ವಾಗಲಿ ಎಂದರು. ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ಅಧ್ಯಕ್ಷತೆ ವಹಿಸಿದ್ದರು. ಪ್ರೌಢಶಾಲಾ ಮುಖ್ಯಶಿಕ್ಷಕ ಶೇಖ್ ಆದಂ ಸಾಹೇಬ್ ಮಾತನಾಡಿ, ಶಿಕ್ಷಕರು ವಿದ್ಯಾರ್ಥಿಗಳನ್ನು ತಿದ್ದಿದರೆ, ಪತ್ರಕರ್ತರು ಸಮಾಜವನ್ನು ತಿದ್ದುವ ಕಾರ್ಯ ಮಾಡುತ್ತಿದ್ದಾರೆ,…

Read More