Author: admin

ಬಂಟ್ವಾಳ: ಬಿ.ಸಿ.ರೋಡಿನ ಶ್ರೀ ಸಾಯಿ ಕಿಡ್ ಝೋನ್ ವಿದ್ಯಾಸಂಸ್ಥೆಯಲ್ಲಿ ಶನಿವಾರ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿಗಳಿಂದ ಪ್ರಾಣಯಾಮ ಮತ್ತು ಸರಳ ಯೋಗಾಸನಗಳನ್ನು ಶಿಕ್ಷಕಿಯರಾದ ಚೈತ್ರ , ಪುಷ್ಪಲತಾ ,ಪೂರ್ಣಿಮಾ ಮತ್ತು ರಂಜಿನಿ ಯವರ ಮಾರ್ಗದರ್ಶನದಲ್ಲಿ ನಡೆಸಲಾಯಿತು.

Read More

ಬಂಟ್ವಾಳ: ಲಯನ್ಸ್ ಕ್ಲಬ್ ಬಂಟ್ವಾಳದ ವರ್ಷದ ಕೊನೆಯ ಸಭೆ “ವಂದನಾರ್ಪಣೆ” ಕಾರ್ಯಕ್ರಮವು ಇತ್ತೀಚಿಗೆ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು. ಕ್ಲಬ್ ಅಧ್ಯಕ್ಷ ರಾಧಾಕೃಷ್ಣ ಬಂಟ್ವಾಳ ರವರು ವರ್ಷದ ಒಟ್ಟು ಚಟುವಟಿಕೆಗಳ ವಿವರಗಳನ್ನು ಸಭೆಯ ಮುಂದಿಟ್ಟು, ನಂತರ ವರ್ಷದ ಪ್ರತೀ ಕಾರ್ಯಕ್ರಮಗಳಿಗೆ ಸಹಕರಿಸಿದ, ಬೆಂಬಲಿಸಿದ ಎಲ್ಲಾ ಸದಸ್ಯರಿಗೆ ಕೃತಜ್ಞತಾಪೂರ್ವಕವಾಗಿ ಮನದಾಳದ ಮಾತುಗಳೊಂದಿಗೆ ಗೌರವಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಸ್ಥಾಪಕಾಧ್ಯಕ್ಷ ಲಯನ್ ಡಾ.ಬಿ. ವಸಂತ ಬಾಳಿಗಾ ಮತ್ತು ಪೂರ್ವ ರಾಜ್ಯಪಾಲಮತ್ತು ಲಯನ್ಸ್ ಸೇವಾ ಟ್ರಸ್ಟ್ ಅಧ್ಯಕ್ಷ ಲಯನ್ ವಸಂತ ಕುಮಾರ್ ಶೆಟ್ಟಿ ಅತಿಥಿಗಳಾಗಿ ಭಾಗವಹಿಸಿದ್ದು, ವರ್ಷದ ಚಟುವಟಿಕೆ ಮತ್ತು ಸದಸ್ಯರೆಲ್ಲರ ಬಗೆಗಿನ ಅಧ್ಯಕ್ಷರ ಮನದಾಳದ ಮಾತುಗಳನ್ನೊಳಗೊಂಡ “ಮೆಲುಕು” ಸಂಚಿಕೆ ಬಿಡುಗಡೆ ಗೊಳಿಸಿ, ವರ್ಷದ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿದರು. ವೇದಿಕೆಯಲ್ಲಿ ಸಂಸ್ಥೆಯ ಕಾರ್ಯದರ್ಶಿ ಲಯನ್ ದೇವಿಕಾ ದಾಮೋದರ್, ಕೋಶಾಧಿಕಾರಿ ಲಯನ್ ದೇವಪ್ಪ ಪೂಜಾರಿ, ಲಿಯೋ ಅಧ್ಯಕ್ಷೆ ಖುಷಿ ಟಿ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಲಯನ್ಸ್ ಜಿಲ್ಲೆಯ ನಾಯಕರುಗಳು, ಸಂಸ್ಥೆಯ ಪೂರ್ವಾಧ್ಯಕ್ಷರುಗಳು, ಕುಟುಂಬ ಸದಸ್ಯರು, ಸಂಸ್ಥೆಯ ಹಿತೈಷಿಗಳು…

Read More

ಬಂಟ್ವಾಳ: ಗಂಡ-ಹೆಂಡತಿಯ ಮೃತದೇಹ ಪತ್ತೆಯಾಗಿದ್ದು, ಗಂಡ ನೇಣು ಬಿಗಿದ ಸ್ಥಿತಿಯಲ್ಲಿದ್ದು, ತುಂಬು ಗರ್ಭಿಣಿಯಾಗಿದ್ದ ಹೆಂಡತಿಯ ಮೃತದೇಹ ಮಲಗುವ ಕೋಣೆಯಬೆಡ್ಡಿನ ಕೆಳಗೆ ಪತ್ತೆಯಾದ ಘಟನೆ ನಾವೂರು ಗ್ರಾಮದ ಬಡಗುಂಡಿ ಎಂಬಲ್ಲಿ ಜೂ.19ರ ಗುರುವಾರ ನಡೆದಿದೆ. ಸಜೀಪಮೂಡ ಗ್ರಾಮದ ಮಿತ್ತಮಜಲು ನಿವಾಸಿ ತಿಮ್ಮಪ್ಪ ಮೂಲ್ಯ ಹಾಗೂ ಅವರ ಪತ್ನಿ ಜಯಂತಿ ಮೃತಪಟ್ಟವರು. ತಿಮ್ಮಪ್ಪಮೂಲ್ಯ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಪತ್ನಿಯ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಕುತ್ತಿಗೆ ಭಾಗದಲ್ಲಿ ಗಾಯಗಳಿವೆಎನ್ನಲಾಗಿದೆ. ತಿಮ್ಮಪ್ಪ ಅವರ ಮನೆ ಮಿತ್ತಮಜಲಿನಲ್ಲಿದ್ದು, ಪತ್ನಿಯ ಮನೆ ಬಡಗುಂಡಿಯಲ್ಲಿದೆ. ಇವರಿಗೆ ಕಳೆದ 15 ವರ್ಷಗಳ ಹಿಂದೆಮದುವೆಯಾಗಿದ್ದು, ಈವರೆಗೆ ಮಕ್ಕಳಾಗಿರಲಿಲ್ಲ. ಪ್ರಸ್ತುತ ಪತ್ನಿ ಗರ್ಭಿಣಿಯಾಗಿದ್ದು, ಸೀಮಂತದ ದಿನಾಂಕವೂ ನಿಗದಿಯಾಗಿತ್ತು ಎನ್ನಲಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬಂಟ್ವಾಳ: ಬಿ.ಸಿ.ರೋಡಿನ ಪ್ರತಿಷ್ಠಿತ ಶ್ರೀ ಸಾಯಿ ಕಿಡ್ ಝೋನ್ ವಿದ್ಯಾಸಂಸ್ಥೆಗಳ ರಕ್ಷಕ ಶಿಕ್ಷಕ ಸಂಘದ ವಾರ್ಷಿಕ ಮಹಾ ಸಭೆ ಶನಿವಾರ ಶಾಲೆಯಲ್ಲಿ ನಡೆಯಿತು.ಲೈಫ್ ಸ್ಕಿಲ್ ಟ್ರೈನರ್ ಜೆಸ್ಟಾಲಕ್ಷ್ಮಿ ಇವರು ಪೋಷಕರಿಗೆ ಉಪಯುಕ್ತ ಮಾಹಿತಿ ಗಳನ್ನು ನೀಡಿದರು. ಬಳಿಕ 2024 ರ ಸಾಲಿನಲ್ಲಿ ಪೊಲೀಸ್ ಇಲಾಖೆಯಲ್ಲಿ ಅತ್ತ್ಯುತ್ತಮ ಸೇವೆ ಸಲ್ಲಿಸಿ ಮುಖ್ಯಮಂತ್ರಿಯಿಂದ ಚಿನ್ನದ ಪದಕ ಪಡೆದ ಸಂಸ್ಥೆಯ ಪೋಷಕ ಸಿಟಿ ಕ್ರೈಂ ಬ್ರಾಂಚ್ ನ ಸಿಎಚ್ ಸಿ ಸುಧೀರ್ ಕುಮಾರ್ ಜಾರಂದಗುಡ್ಡೆ ಅವರನ್ನು ರಕ್ಷಕ ಶಿಕ್ಷಕ ಸಂಘದ ವತಿಯಿಂದ ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಶಾಲಾ ಸಂಚಾಲಕರಾದ ಐತಪ್ಪ ಪೂಜಾರಿ ,ಸಂಘದ ಅಧ್ಯಕ್ಷ ಜ್ಞಾನೇಶ್ ರಾವ್,ಉಪಾಧ್ಯಕ್ಷೆ ಸುಪ್ರೀತ, ಕೋಶಾಧ್ಯಕ್ಷ ದೇವೇಂದ್ರಪ್ಪ ,ಆಡಳಿತ ಮಂಡಳಿ ಯ ಸದಸ್ಯರಾದ ರಾಜೇಶ್ ಅಮೀನ್, ಆರತಿ ಅಮೀನ್, ಸಮಿತಿ ಸದಸ್ಯರಾದ ಸುಂದರ್ , ಮಹೇಶ್, ಶೇಖರ್ ಮತ್ತು ಶಾಲಾ ಶಿಕ್ಷಕ ವರ್ಗ ದವರು , ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಶಿಕ್ಷಕಿ ಪೂರ್ಣಿಮಾ ವರದಿ ವಾಚಿಸಿ, ಚೈತ್ರ ವಂದಿಸಿದರು. ಪುಷ್ಪಲತಾ ಕಾರ್ಯಕ್ರಮ ನಿರೂಪಿಸಿದರು.…

Read More

ಬಂಟ್ವಾಳ : ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 17ನೇ ಅಳದಂಗಡಿ ಶಾಖೆ, ಅಳದಂಗಡಿಯ ಗುರುದೇವ ಸಂಕೀರ್ಣದಲ್ಲಿ ಭಾನುವಾರ ಶುಭಾರಂಭಗೊಂಡಿತು. ನೂತನ ಶಾಖೆಯನ್ನು ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿ ಮಾತನಾಡಿ ದುರ್ಬಲ ವರ್ಗದವರಿಗೆ ಆರ್ಥಿಕವಾಗಿ ಶಕ್ತಿ ನೀಡುವ ಉದ್ದೇಶದಿಂದ ಈ ಸಹಕಾರಿ ಸಂಘ ಆರಂಭವಾಗಿದ್ದು ಈ ಸಂಘದ ಎಲ್ಲಾ ಶಾಖೆಗಳನ್ನು ಉದ್ಘಾಟಿಸುವ ಅವಕಾಶ ಸಿಕ್ಕಿರುವುದು ನನ್ನ ಸುಯೋಗ ಎಂದು ತಿಳಿಸಿದರು. ಸಜೀಪಮೂಡ ಗ್ರಾಮದಲ್ಲಿ ಸಂಜೀವ ಪೂಜಾರಿ ನೇತೃತ್ವದಲ್ಲಿ ನಿರ್ಮಾಣಗೊಂಡ ಬ್ರಹ್ಮಶ್ರೀ ನಾರಾಯಣ ಗುರುಗಳ ಜ್ಞಾನ ಮಂದಿರವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಉದ್ಘಾಟಿಸಿ ಆರ್ಥಿಕ ಸಹಕಾರ ನೀಡಿದ್ದರು ಎಂದು ನೆನೆಪಿಸಿಕೊಂಡ ರಮಾನಾಥ ರೈ, ಅಪನಂಬಿಕೆ ಅವಿಶ್ವಾಸದ ಈ ಕಾಲಘಟ್ಟದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶ ಸಮಾಜಕ್ಕೆ ಅಗತ್ಯವಾಗಿದೆ ಎಂದರು. ಭದ್ರತಾ ಕೋಶವನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು. ಮೂರ್ತೆದಾರ ಕುಲ ಕಸುಬುದಾರರಿಗೆ ಆರ್ಥಿಕ ಚೈತನ್ಯ ನೀಡುವ ಕಾರ್ಯ ಈ ಸಂಘದ ಮೂಲಕ ಆಗಿದೆ. ಮಹಿಳೆಯರಿಗೆ ಉದ್ಯೋಗ ಕೊಡುವ…

Read More

ಬಂಟ್ವಾಳ : ತಾಲೂಕಿನ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 17ನೇ ಅಳದಂಗಡಿ ಶಾಖೆ, ಅಳದಂಗಡಿಯ ಗುರುದೇವ ಸಂಕೀರ್ಣದಲ್ಲಿ ಜೂ.15ರಂದು ಆದಿತ್ಯವಾರ ಬೆಳಿಗ್ಗೆ ಗಂಟೆ 10.30ಕ್ಕೆ ಶುಭಾರಂಭಗೊಳ್ಳಲಿದೆ. 17ನೇ ಅಳದಂಗಡಿ ಶಾಖೆಯನ್ನು ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸುವರು. ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಅಧ್ಯಕ್ಷತೆ ವಹಿಸುವರು. ಭದ್ರತಾ ಕೋಶವನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಅಳದಂಗಡಿ ಗ್ರಾ.ಪಂ. ಅಧ್ಯಕ್ಷೆ ಸರಸ್ವತಿ, ಅಳದಂಗಡಿ ಚರ್ಚ್‌ನ ಧರ್ಮಗುರುಗಳಾದ ವಂ.ಫಾ. ಎಲಿಯಾಸ್ ಡಿಸೋಜಾ, ನೂರುಲ್ ಇಸ್ಲಾಂ ಜುಮ್ಮಾ ಮಸೀದಿ ಖತೀಬರಾದ ಮಹಮ್ಮದ್ ಮುಸ್ತಾಫಾ ಹಿಮಮಿ, ಶ್ರೀ ಕ್ಲಿನಿಕ್‌ನ ವೈದ್ಯ ಡಾ. ಎನ್.ಎಂ. ತುಳಪುಳೆ, ಕಟ್ಟಡ ಮಾಲಕ ಸಂಜೀವ ಪೂಜಾರಿ ಕೊಡಂಗೆ, ಅಳದಂಗಡಿ ಅರಮನೆಯ ಶಿವಪಸಾದ್ ಅಜಿಲರು, ಪ್ರಗತಿಪರ ಕೃಷಿಕ ಗಂಗಾಧರ ಮಿತ್ತಮಾರ್, ಅಳದಂಗಡಿ ಕೃಷಿಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಸುಭಾಷ್…

Read More

ಬಂಟ್ವಾಳ: ಶಿಬಿರದ ಮೂಲಕ ಮದ್ಯವ್ಯಸನಿಯ ಮನವೊಲಿಸಿ ದುಷ್ಚಟವನ್ನು ನಿರ್ಮೂಲನಗೊಳಿಸುವುದರ ಜೊತೆಗೆ ಊರಿನಗೂಡಂಗಡಿಗಳಲ್ಲಿ ಕಾನೂನು ಬಾಹಿರವಾಗಿ ಮದ್ಯ ಮಾರಾಟ ಮಾಡುವ ವ್ಯಾಪಾರಿಗಳ ಮನವೊಲಿಸಿ ಮದ್ಯ ಮಾರಾಟ ಮಾಡದಂತೆಜಾಗೃತಗೊಳಿಸುವ ಕಾರ್ಯವು ಆಗಬೇಕಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಹಾಗೂ ಮದ್ಯವರ್ಜನ ವ್ಯವಸ್ಥಾಪನ ಸಮಿತಿ ಮೋಂತಿಮಾರುಇದರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನಾ ಕೇಂದ್ರ  ಇದರ ವಿಸ್ತರಣಕಾರ್ಯಕ್ರಮದ ಅಂಗವಾಗಿ ಮೋಂತಿಮಾರಿನ ಶ್ರೀ ದುರ್ಗಾಪರಮೇಶ್ವರಿ ದೇವಿ ದೇವಸ್ಥಾನದಲ್ಲಿ ನಡೆದ 1937ನೇ ಮದ್ಯವರ್ಜನಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಕುಡಿತದ ಚಟದಿಂದಾಗಿ ಅನೇಕ ಕುಟುಂಬಗಳು ಇಂದು ಬಲಿಪಶುವಾಗಿದೆ. ಈ ದಿನ ಕುಡಿತಕ್ಕೊಳಗಾದವರ ಕುಟುಂಬ ಸಂತೋಷಪಡುವ ದಿನ. ಪರಿವರ್ತನೆಯ ಕಾಲಘಟದಲ್ಲಿ ಸರಕಾರ ಎಷ್ಟು ಸವಲತ್ತುಗಳನ್ನು ನೀಡಿದರೂ ದುಶ್ಚಟದಿಂದಾಗಿ ಅದನ್ನು ಪಡೆಯಲುಸಾಧ್ಯವಾಗುತ್ತಿಲ್ಲ. ಡಾ. ವಿರೇಂದ್ರ ಹೆಗ್ಗಡೆಯವರ ಅಪೇಕ್ಷೆಯ ಈ ಕಾರ್ಯಕ್ರಮಕ್ಕೆ ನಾವೆಲ್ಲರೂ ಸಹಕಾರ ನೀಡೋಣ ಎಂದು ಶುಭಹಾರೈಸಿದರು.…

Read More

ಬಂಟ್ವಾಳ : ಮಾರ್ನಬೈಲು ಅಯ್ಯಪ್ಪ ಸ್ವಾಮಿ ಮಂದಿರದ ಅಭಿವೃದ್ಧಿ ಮತ್ತು ಭೂಮಿ ಖರೀದಿ ಸಂಕಲ್ಪ ಸಿದ್ಧಿಗಾಗಿ 18 ಗುರುವಾರ ಪರ್ಯಂತ ನಡೆಯುತ್ತಿರುವ ವಿಶೇಷ ಕಾರ್ಯಕ್ರಮ ಪಂಚಾರತಿ ಸೇವೆಯ 12ನೇ ಗುರುವಾರದ ಪಂಚಾರತಿ ಸೇವೆ ನಡೆಯಿತು. ಪಂಚ ಅಭ್ಯಾಗತರಾಗಿ ಸಹಕಾರಿ ಧುರೀಣ ಸ್ಕ್ಯಾಡ್ಸ್ ಅಧ್ಯಕ್ಷ ಕೆ. ರವೀಂದ್ರ ಕಂಬಳಿ, ಬಿ.ಸಿ.ರೋಡು, ಸಪ್ತಗಿರಿ ಪ್ರಿಂಟರ್‍ಸ್ ಮ್ಹಾಲಕ ಸಾಮಾಜಿಕ ನೇತಾರ ರಾಮ್‌ದಾಸ್ ಬಂಟ್ವಾಳ, ದುಬೈನ ಮೆಕ್ಯಾನಿಕಲ್ ಇಂಜಿನಿಯರ್ ಕರುಣಾಕರ ಬಿ. ಎಂ. ಮಾರ್ನಬೈಲು, ಕತಾರ್ ನಾರ್ತ್ ಆಯಿಲ್ ಕಂಪನಿ ಇಂಜಿನಿಯರ್ ಗಣೇಶ್ ಪ್ರಸಾದ್ ಬೇಂಕ್ಯ, ಕುವೈಟ್‌ನ ಉದ್ಯೋಗಿ ಹರೀಶ್ ಸಪಲಿಗ ಮಳಲಿ ನಾಗನವಳಚ್ಚಿಲು ಇವರುಗಳು ಪಂಚಾರತಿ ಬೆಳಗಿ ಶುಭ ಹಾರೈಸಿದರು. ಅಯ್ಯಪ್ಪ ಮಂದಿರದ ಪ್ರಧಾನ ಅರ್ಚಕರುಗಳಾದ ಸಂಜೀವ ಗುರುಸ್ವಾಮಿ ಅಮ್ಟೂರು ಮತ್ತು ಕೃಷ್ಣ ಗುರುಸ್ವಾಮಿ ಮಾರ್ನಬೈಲು, ಮಂದಿರದ ಆಡಳಿತ ಟ್ರಸ್ಟ್ ಅಧ್ಯಕ್ಷರಾದ ಪುರುಷೋತ್ತಮ ಪೂಜಾರಿ ನಾಗನವಳಚ್ಚಿಲು, ಪ್ರಧಾನ ಕಾರ್ಯದರ್ಶಿ ಯಶವಂತ ಕೆ. ಪುತ್ತೂರು, ಕೋಶಾಧಿಕಾರಿ ಗಣೇಶ್ ಗುಡ್ಡೆಯಂಗಡಿ, ಅಭಿವೃದ್ಧಿ ಸಮಿತಿ ಗೌರವ ಅಧ್ಯಕ್ಷ…

Read More

ಬಂಟ್ವಾಳ: ಇಲ್ಲಿನ ಲಯನ್ಸ್ ಕ್ಲಬ್ ಬಂಟ್ವಾಳದ 2025-26 ನೇ ಸಾಲಿಗೆ ಅಧ್ಯಕ್ಷರಾಗಿ ಲಯನ್ ರೋಹಿತಾಶ್ವ ಬಂಗಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಲಯನ್ ಡಾ. ದಿವ್ಯ ವಸಂತ್ ಶೆಟ್ಟಿ. ಖಜಾಂಚಿಯಾಗಿ ರಾಮಕೃಷ್ಣ ರಾವ್, ಪ್ರಥಮ ಉಪಾಧ್ಯಕ್ಷರಾಗಿಲಯನ್ ಚಿತ್ರ ಯಡಪಾಡಿತ್ತಾಯ, ಸೇವಾ ಕಾರ್ಯಕ್ರಮ ಗಳ ಸಂಚಾಲಕರಾಗಿ ಲಯನ್ ಮಧ್ವರಾಜ್ ಕಲ್ಮಾಡಿ,‌ ಶಾಶ್ವತ ಕಾರ್ಯಕ್ರಮಗಳ  ಸಂಚಾಲಕರಾಗಿ ಲಯನ್ ಪ್ರಶಾಂತ್ ಕೋಟ್ಯಾನ್ ಹಾಗೂ 11 ನಿರ್ದೇಶಕರು ಆಯ್ಕೆ ಯಾಗಿದ್ದಾರೆ. ನೂತನ ಅಧ್ಯಕ್ಷರಾಗಿ ಆಯ್ಕೆಯಾದ  ರೋಹಿತಾಶ್ವ ಅವರು, ಮಂಗಳ ಪದವು ಹಾಲು ಉತ್ಪದಕಾರ ಸಂಘದ  ನಿರ್ದೇಶಕರು, ಅಧ್ಯಕ್ಷರಾಗಿ, ಪಾಣೆ ಮಂಗಳೂರು ರೈತರ ಸೇವಾ ಸಹಕಾರಿ ಸಂಘ ದ ನಿರ್ದೇಶಕರಾಗಿ, ಮಂಗಳ ಪದವು ಭಜನಾ ಮಂದಿರ ದಸ್ಥಾಪಕ ಟ್ರಷ್ಟಿ ಯಾಗಿ ಸಮಾಜ ಮುಖಿ ಕೆಲಸದಲ್ಲಿ ತನ್ನನ್ನು ತಾನೇ ತೊಡಗಿಸಿ ಕೊಂಡಿದ್ದಾರೆ

Read More

ಬಂಟ್ವಾಳ; ಪೂಂಜಾಲಕಟ್ಟೆ ಠಾಣೆಯ ಪಿ.ಎಸ್.ಐ ಆಗಿ ಕಾರ್ಯನಿ ರ್ವಹಿಸುತ್ತಿದ್ದ ನಂದಕುಮಾರ್. ಎಂ.ಎಸ್ ಅವರಿಗೆ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಪ್ರಮೋಷನ್ ನೀಡಿ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಒಟ್ಟು 36 ಮಂದಿಗೆ ಪ್ರಮೋಷನ್ ಲಭಿಸಿದ್ದು ನಂದಕುಮಾರ್ ಅವರಿಗೆ ಬಡ್ತಿ ನೀಡಿ ಡಿ.ಎಸ್.ಬಿ ದ.ಕ ಜಿಲ್ಲೆ ಇಲ್ಲಿಗೆ ಇನ್ಸ್ ಪೆಕ್ಟರ್ ಆಗಿ ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ

Read More