Author: admin
ಬಂಟ್ವಾಳ: ಮಾರ್ನಬೈಲು ಅಯ್ಯಪ್ಪ ಸ್ವಾಮಿ ಮಂದಿರದ ಅಭಿವೃದ್ಧಿ ಹಾಗೂ ಜಮೀನು ಖರೀದಿ ಸಂಕಲ್ಪ ಸಿದ್ಧಿಗಾಗಿ೧೮ ಗುರುವಾರಗಳಪರ್ಯಂತ ನಡೆಯಲಿರುವ ಪಂಚಾರತಿ ಸೇವೆಯ ೯ನೇ ವಾರದ ಪಂಚಾರತಿ ಸೇವೆ ನಡೆಯಿತು. ಪಂಚ ಅಭ್ಯಾಗತರಾಗಿ ಶ್ರೀ ಕ್ಷೇತ್ರ ನಂದಾವರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕಾಂತಾಡಿಗುತ್ತು, ಸದಸ್ಯಮೋಹನದಾಸ ಪೂಜಾರಿ ಬೊಳ್ಳಾಯಿ, ಉದ್ಯಮಿ ಶೇಖರ ಪೂಜಾರಿ ಬಲ್ನಾಡ್, ಉಮೇಶ್ ಬಲ್ನಾಡ್, ಗುತ್ತಿಗೆದಾರ ಗಣೇಶ್ಕಾಮಾಜೆ ಭಾಗವಹಿಸಿ, ಪಂಚಾರತಿ ಬೆಳಗಿ ಶುಭ ಹಾರೈಸಿದರು. ಅಯ್ಯಪ್ಪ ಸ್ವಾಮಿ ಮಂದಿರದ ಆಡಳಿತ ಟ್ರಸ್ಟ್ ಗೌರವಾಧ್ಯಕ್ಷರಾದ ಸಂಜೀವ ಗುರುಸ್ವಾಮಿ ಕೃಷ್ಣ ಗುರುಸ್ವಾಮಿ, ಅಭಿವೃದ್ಧಿ ಸಮಿತಿಕಾರ್ಯದರ್ಶಿ ಅಶೋಕ್ ಗಟ್ಟಿ ನಂದಾವರ, ಕೋಶಾಧಿಕಾರಿ ರಂಜಿತ್ ರಾವ್, ಟ್ರಸ್ಟ್ ಕಾರ್ಯದರ್ಶಿ ಯಶವಂತ ಕೆ. ಪುತ್ತೂರು, ಭಜನಾಮಂಡಳಿ ಅಧ್ಯಕ್ಷ ಸುರೇಶ್ ಕುಲಾಲ್ ಕಲ್ಲಾಡಿಗೋಳಿ, ಕಾರ್ಯದರ್ಶಿ ನಿತಿನ್ ಕುಮಾರ್ ಮಾರ್ನಬೈಲು, ಪದಾಧಿಕಾರಿಗಳಾದಯೋಗೀಶ್ ಗಟ್ಟಿ ನಂದಾವರ, ನಾಗೇಶ್ ಕುಲಾಲ್ ಕೋಮಾಲಿ, ರಾಜೀವ ಕೊಟ್ಟಾರಿ ಕಲ್ಲಡ್ಕ, ವಿಶ್ವನಾಥ ಆಚಾರ್ಯ ಮಾರ್ನಬೈಲು, ತಾರಾ ಭಾಸ್ಕರ್ ದೇವಾಡಿಗ, ಜಯಾನಂದ ಪಾಡಿ, ವಸಂತ ಪೂಜಾರಿ ನಾಗನವಳಚ್ಚಿಲು, ದಯಾನಂದ…
ಬಂಟ್ವಾಳ: ಪುತ್ತೂರಿನ ಕಬಕ ಬಳಿ ನಡೆದ ರಸ್ತೆ ಅಪಘಾತದಲ್ಲಿ ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮ ಪಂಚಾಯತ್ ಸದಸ್ಯಅರುಣ್ ಬೋರುಗುಡ್ಡೆ ಹಾಗೂ ಅವರ ಮಗ ಧ್ಯಾನ್ ಮೃತಪಟ್ಟಿದ್ದಾರೆ. ತನ್ನ ಬೈಕ್ ನಲ್ಲಿ ಮಗನೊಂದಿಗೆ ಮದುವೆ ಕಾರ್ಯಕ್ರಮನಿಮಿತ್ತ ಪುತ್ತೂರು ಕಡೆಗೆ ಹೋಗುತ್ತಿದ್ದಾಗ ಕಬಕದ ಕುವೆಹಿತ್ತಿಲು ಎಂಬಲ್ಲಿ ಕೆಎಸ್ಆರ್ ಟಿಸಿ ಬಸ್ಸು ಡಿಕ್ಕಿಯಾಗಿ ಈ ದುರ್ಘಟನೆನಡೆದಿದೆ. ಅರುಣ್ ಸ್ಥಳದಲ್ಲೇ ಮೃತಪಟ್ಟರೆ ಬೈಕ್ ನ ಹಿಂಬದಿ ಸವಾರನಾಗಿದ್ದ ಪುತ್ರ ಧ್ಯಾನ್ ಗಂಭೀರ ಗಾಯಗೊಂಡಿದ್ದುಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ನರಿಕೊಂಬು ಪಂಚಾಯತ್ ಸದಸ್ಯರಾಗಿರುವಇವರು ಇತ್ತೀಚೆಗಷ್ಟೇ ಬಂಟ್ವಾಳದ ಸಮಾಜ ಸೇವಾ ಸಹಕಾರಿ ಸಂಘದ ಸದಸ್ಯರಾಗಿ ಚುನಾಯಿತರಾಗಿದ್ದರು. ಬಂಟ್ವಾಳ ತಾಲೂಕು, ಹಾಗೂ ನರಿಕೊಂಬು ಕುಲಾಲ ಸಂಘ ಸಹಿತ ಇನ್ನಿತರ ಸಂಘಟನೆಯಲ್ಲಿ ಸಕ್ರಿಯರಾಗಿದ್ದರೆ. ಧ್ಯಾನ್ ಸ್ಥಳೀಯ ಶಾಲೆಯಲ್ಲಿ 10 ನೇತರಗತಿಯ ವಿದ್ಯಾರ್ಥಿಯಾಗಿದ್ದಾನೆ. ಅರುಣ್ ಬೋರುಗುಡ್ಡೆ ಅವರು ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ
ಬಂಟ್ವಾಳ: ಫಾದರ್ ಮುಲ್ಲರ್ ಆಸ್ಪತ್ರೆ ತುಂಬೆ , ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜು ತುಂಬೆ ಇದರ ಆಶ್ರಯದಲ್ಲಿಅಂತರಾಷ್ಟ್ರೀಯ ನರ್ಸಸ್ ಡೇ ಯನ್ನು ತುಂಬೆ ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜಿನ ಸಭಾಂಗಣದಲ್ಲಿ ಶನುವಾರ ಸಂಜೆಆಚರಿಸಲಾಯಿತು. ಸಂಸ್ಥಾಪಕರಾದ ಫಾದರ್ ಮುಲ್ಲರ್ ಹಾಗೂ ಫ್ಲೋರೆನ್ಸ್ ನೈಂಟಿಗೇಲ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸಂಸ್ಥೆಯ ನಿರ್ದೇಶಕ ರೆ.ಫಾ. ರಿಚರ್ಡ್ ಎಲೋಸಿಯಷ್ ಕುವೆಲ್ಲೋ ಅಧ್ಯಕ್ಷತೆ ವಹಿಸಿ ಮಾತನಾಡಿ ನಮ್ಮ ಜೀವನ ಅತ್ಯಂತ ಮೌಲ್ಯಯುತವಾದುದು, ದೇವರು ನಮಗೆ ಜೀವನ ನೀಡಿದ್ದಾನೆ, ಈ ಜೀವನವನ್ನುಅತ್ಯುತ್ತಮವಾಗಿ ಜೀವಿಸಿ ದೇವರಿಗೆ ಕೃತಜ್ಞತೆ ಸಲ್ಲಿಸಬೇಕು ಎಂದರು. ಮತ್ತೊಬ್ಬರನ್ನು ಪ್ರೀತಿಸಿ ಗೌರವಿಸಿದಾಗ ದೇವರು ನಮ್ಮನ್ನುಆಶೀರ್ವದಿಸುತ್ತಾನೆ, ಅಂತೆಯೇ ನರ್ಸ್ ವೃತ್ತಿ ಅತ್ಯಂತ ಪವಿತ್ರವಾದುದು, ಪ್ರತೀ ರೋಗಿಗಳನ್ನು ಪೀತಿಸಿ ಅವರನ್ನು ಉತ್ತಮವಾಗಿಆರೈಕೆ ಮಾಡುವ ಸಂಕಲ್ಪ ನರ್ಸ್ ಗಳದ್ದಾಗ ಬೇಕು, ಆಗ ದೇವರು ನಮ್ಮನ್ನು ಅನುಗ್ರಹಿಸುತ್ತಾನೆ ಎಂದರು ಸಂಸ್ಥೆಯ ಪ್ರಾಂಶುಪಾಲರು ಹಾಗೂ ನರ್ಸಿಂಗ್ ಸೂಪರಿಂಟೆಂಡ್ ಭಗಿನಿ ಡಾ. ಜೂಡಿ ಮಾತನಾಡಿ ನರ್ಸಿಂಗ್ ಕೇವಲ ವೃತ್ತಿಯಲ್ಲ, ಅದೊಂದು ಸೇವೆ. ಸಮಾಜದ…
ಬಂಟ್ವಾಳ: ಭಾರತ ಮಾತೆಗೆ ವಿಜಯದ ಸಿಂಧೂರವಿಟ್ಟ ಭಾರತ ದೇಶದ ಮಹಾ ಸೈನಿಕರ ಶ್ರೀರಕ್ಷೆಗಾಗಿ ಮತ್ತಷ್ಟು ವಿಜಯ ತಂದುಕೊಡುವಂತೆ, ಅಟ್ಟಹಾಸ ಮೆರೆದ ಜಿಹಾದೀ ದೇಶ ಪಾಕಿಸ್ತಾನದ ಶತ್ರುಗಳ ಸಂಹಾರಕ್ಕೆ ಮತ್ತು ಪಾಕಿಸ್ತಾನದ ಪರವಿರುವ ದೇಶವಿರೋಧಿಗಳನ್ನ ಸಂಪೂರ್ಣವಾಗಿ ನಾಶಗೊಳಿಸುವಂತೆ ಅಮ್ಟೂರು ಬಿಜೆಪಿ ಸಮಿತಿಯ ವತಿಯಿಂದ ಮೊಗರ್ನಾಡು ಸಾವಿರಸೀಮೆಯ ಒಡೆಯ ನಿಟಿಲಾಕ್ಷ ಶ್ರೀ ಸದಾಶಿವ ದೇವರ ಸನ್ನಿಧಿಯಲ್ಲಿ ಕ್ಷೇತ್ರದ ಪ್ರಧಾನ ಅರ್ಚಕ ಸಂಪ್ರೀತ್ ಭಟ್ ಇವರು ವಿಶೇಷಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿಯ ಜಿಲ್ಲಾ ಕಾರ್ಯದರ್ಶಿ ದಿನೇಶ್ ಅಮ್ಟೂರು, ಪಕ್ಷದ ಹಿರಿಯ ನಾಯಕರಾದ ವಿಠಲ ಪ್ರಭು, ಪ್ರಮುಖರಾದ ಬಿ.ಎನ್. ಪ್ರಭಾಕರ ಶೆಟ್ಟಿ ಬೈದರಡ್ಕ, ಶೇಖರ್ ಕೊಟ್ಟಾರಿ, ಮಹಾಬಲ ಸಾಲಿಯಾನ್, ನವೀನ್ ಶೆಟ್ಟಿ ನೆಟ್ಲ, ನವೀನ್ಗಟ್ಟಿ ನೆಟ್ಲ, ಗುರುವಪ್ಪ ಗೌಡ ನೆಟ್ಲ, ಪ್ರೇಮ ಗುರುಪ್ರಸಾದ್, ಸಂದೀಪ್ ಶೆಟ್ಟಿ ಬೈದರಡ್ಕ, ಕೌಶಿಲ್ ಶೆಟ್ಟಿ ಬಾಳಿಕೆ, ಹರಿಣಾಕ್ಷಿ ನೆಟ್ಲ, ಪ್ರಶಾಂತ್ ನಾಯ್ಕ್ ನೆಟ್ಲ, ಕಿಶೋರ್ ಕಟ್ಟೆಮಾರ್, ದಿವಾಕರ ಪಡೀಲ್, ಅಮಿತ್ ಕಲ್ಲಡ್ಕ, ದೇವಕಿ ದಿವಾಕರ ಪೂಜಾರಿ, ಕಾರ್ತಿಕ್ಕುಲಾಲ್, ವಿಶ್ವನಾಥ್…
ಬಂಟ್ವಾಳ: ಮಾರ್ನಬೈಲು ಶ್ರೀ ಅಯ್ಯಪ್ಪಸ್ವಾಮಿ ಮಂದಿರದ ಅಭಿವೃದ್ದಿ ಹಾಗೂ ಜಮೀನು ಖರೀದಿ ಸಂಕಲ್ಪ ಸಿದ್ಧಿಗಾಗಿ 18 ಗುರುವಾರಗಳ ಪರ್ಯಂತ ನಡೆಯಲಿರುವ ವಿಶೇಷ ಪಂಚಾರತಿ ಸೇವೆಯ 7ನೇ ಗುರುವಾರದ ಪಂಚಾರತಿ ಸೇವೆ ನಡೆಯಿತು. ಪಂಚಭ್ಯಾಗತರಾಗಿ ಮಂಚಿ ಹಾಲು ಉತ್ಪಾದಕರ ಸಹಕಾರ ಸಂಘ ನಿ., ಕುಕ್ಕಾಜೆ ಇದರ ಅಧ್ಯಕ್ಷ ನಿಶ್ಚಲ್ ಜಿ. ಶೆಟ್ಟಿ ಕಲ್ಲಾಡಿ, ಉದ್ಯಮಿ ರಾಘವೇಂದ್ರ ಗಟ್ಟಿ ಮಾರ್ನಬೈಲು, ಸರಕಾರಿ ಪ್ರೌಢಶಾಲೆ, ಮಂಚಿ ಇದರ ಹಿರಿಯ ವಿದ್ಯಾರ್ಥಿಸಂಘದ ಅಧ್ಯಕ್ಷ ರಾಮ್ಪ್ರಸಾದ್ ರೈ ತಿರುವಾಜೆ, ಮಹಾದೇವ ವಿವಿದೋದ್ಧೇಶ ಸಹಕಾರಿ ಸಂಘ ನಿ., ಕುಕ್ಕಾಜೆ ಇದರ ನಿರ್ದೇಶಕ ಜಯಪ್ರಕಾಶ್ ರೈ ಮೇರಾವು, ಸಜೀಪಮುನ್ನೂರು ಗ್ರಾಮ ಪಂಚಾಯತಿ ಸದಸ್ಯ ಸಂದೀಪ್ ಕುಮಾರ್ ನಾಗನವಳಚ್ಚಿಲು ಶ್ರೀದೇವರಿಗೆ ಪಂಚಾರತಿ ಬೆಳಗಿದರು. ಅಯ್ಯಪ್ಪ ಸ್ವಾಮಿ ಮಂದಿರದ ಆಡಳಿತ ಟ್ರಸ್ಟ್ ಗೌರವಾಧ್ಯಕ್ಷರಾದ ಸಂಜೀವ ಗುರುಸ್ವಾಮಿ, ಕೃಷ್ಣ ಗುರುಸ್ವಾಮಿ, ಅಧ್ಯಕ್ಷಪುರುಷೋತ್ತಮ ಪೂಜಾರಿ ನಾಗನವಳಚ್ಚಿಲು, ಅಭಿವೃದ್ಧಿ ಸಮಿತಿ ಕಾರ್ಯದರ್ಶಿ ಅಶೋಕ್ ಗಟ್ಟಿ ನಂದಾವರ, ಭಜನಾ ಮಂಡಳಿಅಧ್ಯಕ್ಷ ಸುರೇಶ್ ಕುಲಾಲ್ ಕಲ್ಲಾಡಿಗೋಳಿ, ಕಾರ್ಯದರ್ಶಿ ನಿತಿನ್ ಕುಮಾರ್ ಮಾರ್ನಬೈಲು,…
ಬಂಟ್ವಾಳ: ನೆಲ, ಜಲ, ಮೂಲ ಸಂಸ್ಕೃತಿಯನ್ನು ಉಳಿಸದಿದ್ದರೆ ನಮ್ಮ ನೆಲೆ ಉಳಿಯಲು ಸಾಧ್ಯವಿಲ್ಲ. ದೇಶ ಉಳಿದರೆ ಧರ್ಮಉಳಿಯುತ್ತದೆ. ಆ ನಿಟ್ಟಿನಲ್ಲಿ ಉಗ್ರರ ನಿರ್ಮೂಲನದ ಮೂಲಕ ಭವ್ಯ ಭಾರತಕ್ಕೆ ಗಟ್ಟಿ ಹೆಜ್ಜೆ ಇಡಲಾಗಿದೆ ಎಂದು ಒಡಿಯೂರು ಶ್ರೀಗುರುದೇವ ದತ್ತ ಸಂಸ್ಥಾನಂನ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಪುದು ಗ್ರಾಮದ ಸುಜೀರು ದೈಯಡ್ಕದಲ್ಲಿ ಶ್ರೀ ರಕ್ತೇಶ್ವರಿ ಸಪರಿವಾರ ದೈವಗಳ ಸಾನಿಧ್ಯದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದಧಾರ್ಮಿಕ ಸಭೆಯಲ್ಲಿ ಭಾಗವಹಿಸಿ ಅವರು ಆಶೀರ್ವಚನ ನೀಡಿದರು. ತುಳುನಾಡು ಧರ್ಮದ ಬೀಡು. ಧರ್ಮ ಕಾರ್ಯದ ಮೂಲಕದೈಯಡ್ಕ ಧರ್ಮಡ್ಕ ಆಗಿದೆ ಎಂದರು. ಹಿಂದೂ ಮುಖಂಡ ಸತ್ಯಜಿತ್ ಸುರತ್ಕಲ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಭಗವಂತನ ಆರಾಧನೆಯಿಂದಿಗೆ ಧರ್ಮದಹಾದಿಯಲ್ಲಿ ಸಾಗಲು ಸಾಧ್ಯವಿದೆ. ಭಗವಂತನ ಬಿಂಬದ ಮುಂದೆ ಅವನ ಪ್ರತಿಬಿಂಬವಾಗಿರುವ ನಾವು ಅವನಂತಾಗಲುಪ್ರಯತ್ನಿಸಿದಾಗ ಬದುಕು ಹಸನಾಗಲು ಸಾಧ್ಯವಿದೆ. ಇದನ್ನೇ ನಮ್ಮೆಲ್ಲಾ ಧರ್ಮಗ್ರಂಥಗಳು ತಿಳಿಸಿ ಕೊಟ್ಟಿವೆ ಎಂದರು. ಕಾರ್ಯಕ್ರಮದಲ್ಲಿ ರವೀಂದ್ರ ಕಂಬಳಿ ಅವರನ್ನು ಗೌರವಿಸಲಾಯಿತು. ರಾಮಕೃಷ್ಣ ಚೌಟ ಸುಜೀರುಗುತ್ತು ಅಧ್ಯಕ್ಷತೆ ವಹಿಸಿದ್ದರು. ಜ್ಯೋತಿಷಿ ಅನಿಲ್…
ಬಂಟ್ವಾಳ: ನಮ್ಮ ಊರು ನಮ್ಮ ಕೆರೆ ಯೋಜನೆಯಡಿ ಕೆರೆ, ಸರೋವರಗಳು ಉತ್ತಮ ರೀತಿಯಲ್ಲಿ ಅಭಿವೃದ್ಧಿಯಾಗುತ್ತಿದೆ. ಇದರಿಂದಾಗಿ ಸ್ಥಳೀಯ ಬೋರ್ವೆಲ್ ಹಾಗೂ ಬಾವಿಗಳಲ್ಲಿ ನೀರು ಮರುಪೂರಣಗೊಂಡಿದೆ. ಅನೇಕ ಕೆರೆಗಳು ಹೂಳು ತುಂಬಿಮುಚ್ಚಿಹೋಗಿ ಕ್ರಿಕೆಟ್ ಮೈದಾನದಂತಾಗಿದ್ದು, ರಾಜ್ಯದ್ಯಂತ ಅತಂಹ ಕೆರೆಗಳನ್ನು ಜನರ ಸಹಕಾರದೊಂದಿಗೆಪುನರುಜ್ಜೀವನಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ, ಕರಿಯಂಗಳ ಗ್ರಾಮ ಪಂಚಾಯತಿ ಮತ್ತು ಕೆರೆ ಅಭಿವೃದ್ಧಿ ಸಮಿತಿಕರಿಯಂಗಳ ಇದರ ಸಹಯೋಗದೊಂದಿಗೆ ಕರಿಯಂಗಳ ಗ್ರಾಮದ ಪೊಳಲಿ ಬಳಿ ಪುನಶ್ಚೇತನ ಗೊಂಡಿರುವ ಕಾಳಿ ಸರೋವರದಹಸ್ತಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಿ ಕೆರೆಗೆ ಬಾಗಿನ ಅರ್ಪಿಸಿ ಬಳಿಕ ನಡೆದ ಸಭಾಕಾರ್ಯಕ್ರಮದಲ್ಲಿ ಮಾತನಾಡಿದರು. ಇಂದುಎಲ್ಲಾ ಕಡೆ ನೀರಿನ ಕೊರತೆ ಎದುರಾಗಿದೆ. ದ.ಕ. ಜಿಲೆಯಲ್ಲಿ ಸಾಕಷ್ಟು ಮಳೆಯಾದರೂ ಕೂಡ ಬೇಸಿಗೆಯಲ್ಲಿ ನೀರಿನ ಅಭಾವಉಂಟಾಗುತ್ತದೆ. ಮನೆಯ ಮುಂದೆ ನಳ್ಳಿ ಇದ್ದರೂ ಅದರಲ್ಲಿ ನೀರೆ ಬಾರದಿದ್ದರೆ ಏನು ಪ್ರಯೋಜನ? ಈ ವಿಚಾರವನ್ನುಮುಂದಿಟ್ಟುಕೊಂಡು ಶ್ರೀಕ್ಷೇತ್ರ ಗ್ರಾಮಾಭಿವೃದ್ದಿ ಯೋಜನೆಯ ಮೂಲಕ…
ಬಂಟ್ವಾಳ: ಪುದು ಗ್ರಾಮದ ಸುಜೀರು ದೈಯಡ್ಕ ಬಳಿಯ ಶ್ರೀ ರಕ್ತೇಶ್ವರಿ ಸಪರಿವಾರ ದೈವಗಳ ಸಾನಿಧ್ಯದಲ್ಲಿ ರಕ್ತೇಶ್ವರಿ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಮತ್ತು ನೇಮೋತ್ಸವವು ಮೇ 8ಮತ್ತು 9 ರಂದು ನಡೆಯಲಿದೆ. ಮೇ 8 ರಂದು ಗೋಪೂಜೆ, ವಾಸ್ತು ಪೂಜೆ, ರಕ್ಷೆಘ್ನ ಹೋಮ, ದೈವಗಳ ಬಿಂಬ ಶುದ್ಧಿ ನಡೆಯಲಿದೆ. ಮೇ 9ರಂದು ಶ್ರೀ ಅಶ್ವತ್ಥನಾರಾಯಣ ಹಾಗೂ ರಕ್ತೇಶ್ವರಿ ಸಪರಿಹಾರ ದೈವಗಳ ಪ್ರತಿಷ್ಠೆ – ಕಲಶಾಭಿಷೇಕ ನಡೆಯಲಿದೆ. ಮಧ್ಯಾಹ್ನ 11 ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಒಡಿಯೂರು ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಸುಜೀರುಗುತ್ತು ಯಜಮಾನರಾದ ರಾಮಕೃಷ್ಣ ಚೌಟ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪ್ರಕಾಶ್ಚಂದ್ರ ರೈ ದೇವಸ್ಯ, ಜ್ಯೋತಿಷಿ ಅನಿಲ್ ಪಂಡಿತ್, ಉದ್ಯಮಿ ಅಜಿತ್ ಚೌಟ ದೇವಸ್ಯ, ಉದ್ಯಮಿ ಸಂಜೀವ ಪೂಜಾರಿ ಬಿ.ಸಿ.ರೋಡು, ಹಿಂದು ಮುಖಂಡ ಸತ್ಯಜಿತ್ ಸುರತ್ಕಲ್, ಉದ್ಯಮಿ ಉಮೇಶ್ ಸಾಲಿಯಾನ್, ಪುದು ಗ್ರಾಮ ಪಂಚಾಯತ್ ಸದಸ್ಯ ವಿಷು ಕುಮಾರ್ ಭಾಗವಹಿಸಲಿದ್ದಾರೆ. ರಾತ್ರಿ ರಕ್ತೇಶ್ವರಿ ದೈವದ ನೇಮ ಮತ್ತು ಕೊರತಿ ಗುಳಿಗ…
ಬಂಟ್ವಾಳ: ಮಾರ್ನಬೈಲ್ ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದ ಅಭಿವೃದ್ಧಿ ಹಾಗೂ ಜಮೀನು ಖರೀದಿ ಸಂಕಲ್ಪಕ್ಕಾಗಿ 18 ಗುರುವಾರಗಳ ಪರ್ಯಂತ ನಡೆಯುವ ಪಂಚಾರತಿ ಸೇವೆಯಲ್ಲಿ ಶ್ರೀ ಕ್ಷೇತ್ರ ನಂದಾವರ ಬ್ರಹ್ಮಕಲಶ ಸಮಿತಿ ಕಾರ್ಯಾಧ್ಯಕ್ಷ ವಿಶ್ವನಾಥ ಆಳ್ವ ಕಾಂತಾಡಿಗುತ್ತು, ಗಿರೀಶ್ ಬಂಗೇರ ನೀಲ್ಯ ಮುಂಬಯಿ, ಪಾಣೆಮಂಗಳೂರು ಶ್ರೀ ವೀರವಿಠ್ಠಲ ವೆಂಕಟರಮಣ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೆಸರ ಬಿ. ಯೋಗೀಶ ಪೈ , ಉದ್ಯಮಿ ಜನಾರ್ದನ ಪೂಜಾರಿ, ಸೋಮವಾರಪೇಟೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಶಾಖಾ ವ್ಯವಸ್ಥಾಪಕ ಪ್ರಸಾದ್ ಕುಮಾರ್ ಮಾರ್ನಬೈಲು ಪಂಚಾರತಿ ಬೆಳಗಿಸಿದರು. ಅಯ್ಯಪ್ಪ ಸ್ವಾಮಿ ಮಂದಿರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದಾಮೋದರ ಬಿ.ಎಂ. ಮಾರ್ನಬೈಲು ಪ್ರಸ್ತಾವನೆಗೈದರು. ಅಯ್ಯಪ್ಪ ಸ್ವಾಮಿ ಮಂದಿರದ ಆಡಳಿತ ಟ್ರಸ್ಟ್ ಗೌರವಾಧ್ಯಕ್ಷರಾದ ಸಂಜೀವ ಗುರುಸ್ವಾಮಿ, ಕೃಷ್ಣ ಗುರುಸ್ವಾಮಿ, ಅಧ್ಯಕ್ಷ ಪುರುಷೋತ್ತಮ ಪೂಜಾರಿ ನಾಗನವಳಚ್ಚಿಲು, ಶಬರಿ ಮಾತೃ ಮಂಡಳಿ ಅಧ್ಯಕ್ಷೆ ಗಾಯತ್ರಿ ಆರ್. ಕಂಬಳಿ, ಭಜನಾ ಮಂಡಳಿ ಅಧ್ಯಕ್ಷ ಸುರೇಶ್ ಕುಲಾಲ್ ಕಲ್ಲಾಡಿಗೋಳಿ, ಪದಾಧಿಕಾರಿಗಳಾದ ಯಾದವ ಬಂಗೇರ ಕಂಚಿಲ, ಸಂದೀಪ್ ಕುಮಾರ್…
ಬಂಟ್ವಾಳ: ವೈದ್ಯರ ಸಲಹೆ, ಪೋಷಕಾಂಶಯುಕ್ತ ಆಹಾರ ಸೇವನೆ, ಮನೆಯ ಪರಿಸರ ಸ್ವಚ್ಚ ವಾಗಿಟ್ಟುಕೊಳ್ಳುವ ಮೂಲಕ ಕ್ಷಯ ರೋಗವನ್ನು ನಿವಾರಿಸಲು ಸಾಧ್ಯವಿದೆ. ರೋಗಿಳನ್ನು ದೂರವಿಡುವ ಬದಲು ಅವರ ರೋಗ ನಿವಾರಣೆಗೆ ಸೇವಾಂಜಲಿ ಸಂಸ್ಥೆಯಂತೆ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಶ್ರೇಷ್ಠವಾದ ಕಾರ್ಯ ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ. ಹೇಳಿದರು. ಕೇಂದ್ರ ಸರಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನದ ಆಶ್ರಯದಲ್ಲಿ ಸೋಮವಾರ ಸೇವಾಂಜಲಿ ಸಭಾಂಗಣದಲ್ಲಿ ನಡೆದ ಕ್ಷಯರೋಗಿಗಳಿಗೆ ದವಸಧಾನ್ಯಯುಕ್ತ ಪೌಷ್ಟಿಕ ಆಹಾರ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯು ಸಂಶೋಧನಾ ವಿದ್ಯಾರ್ಥಿ ಡಾ. ಮಹಮ್ಮದ್ ಬಿಲಾಲ್ ಪಾಷ ಮಾತನಾಡಿ ಔಷಧಿಗಿಂತ ಹೆಚ್ಚಿನ ಶಕ್ತಿ ಪೌಷ್ಟಿಕಾಹಾರ ನೀಡುತ್ತದೆ. ಸೇವಾಂಜಲಿ ಸಂಸ್ಥೆ ದಾನಿಗಳ ಸಹಕಾರ ಪಡೆದು ಕ್ಷಯರೋಗಿಗಳಿಗೆ ನೀಡುವ ಆಹಾರವನ್ನು ರೋಗಿಗಳೇ ಸೇವಿಸಿ ರೋಗಮುಕ್ತರಾಗಬೇಕೆಂದು ತಿಳಿಸಿದರು. ವೇದಿಕೆಯಲ್ಲಿ ಸೇವಾಂಜಲಿಯ ನಾರಾಯಣ ಬಡ್ಡೂರು, ಸಾರಮ್ಮ ಉಪಸ್ಥಿತರಿದ್ದರು. ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ಕಾರ್ಯಕ್ರಮ ನಿರೂಪಿಸಿದರು. ಪ್ರಶಾಂತ್ ತುಂಬೆ,…








