Author: admin

ಬಂಟ್ವಾಳ: ಮಾರ್ನಬೈಲು ಶ್ರೀ ಅಯ್ಯಪ್ಪ ಮಂದಿರದ ಅಭಿವೃದ್ದಿ ಹಾಗೂ ಭೂಮಿ ಖರೀದಿಯ ಸಂಕಲ್ಪ ಸಿದ್ದಿಗಾಇ ೧೮ ಗುರುವಾರಗಳ ಕಾಲ ನಡೆಯುವ ಪಂಚಾರತಿ ಸೇವೆಯ ೪ನೇ ವಾರದ ಸೇವೆಯಲ್ಲಿ ಪಂಚ ಅಭ್ಯಾಗತರಾಗಿ ರತ್ನಾಕರ ಶೆಟ್ಟಿ ಕಲ್ಲಡ್ಕ, ಕೃಷ್ಣ ಬಿ. ಜೋಗೊಟ್ಟು ಅಮ್ಟೂರು, ಸಂಜೀವ ಬಿ. ಶೆಟ್ಟಿ ಬೋಳಂತೂರುಗುತ್ತು, ನಾಗೇಶ್ ಕುಲಾಳ್‌ನರಿಕೊಂಬು, ರಾಮಕೃಷ್ಣ ಪೂಜಾರಿ ಮಿತ್ತಮಜಲು ಶ್ರೀ ದೇವರಿಗೆ ಪಂಚಾರತಿ ಬೆಳಗಿದರು. ಅಯ್ಯಪ್ಪ ಸ್ವಾಮಿ ಮಂದಿರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದಾಮೋದರ ಬಿ.ಎಂ. ಮಾರ್ನಬೈಲು ಪ್ರಸ್ತಾವನೆಗೈದರು. ಅಯ್ಯಪ್ಪ ಸ್ವಾಮಿ ಮಂದಿರದ ಆಡಳಿತ ಟ್ರಸ್ಟ್ ಗೌರವಾಧ್ಯಕ್ಷ ಸಂಜೀವ ಗುರುಸ್ವಾಮಿ, ಕೃಷ್ಣ ಗುರುಸ್ವಾಮಿ, ಅಧ್ಯಕ್ಷ ಪುರುಷೋತ್ತಮ ಪೂಜಾರಿ ನಾಗನವಳಚ್ಚಿಲು, ಕಾರ್ಯದರ್ಶಿ ಯಶವಂತ ಕೆ. ಪುತ್ತೂರು, ಅಭಿವೃದ್ಧಿ ಸಮಿತಿ ಕಾರ್ಯದರ್ಶಿ ಅಶೋಕ್ ಗಟ್ಟಿ ನಂದಾವರ, ಕೋಶಾಧಿಕಾರಿ ರಂಜಿತ್ ರಾವ್ ಬಟ್ಟಡ್ಕ, ಭಜನಾ ಮಂಡಳಿ ಅಧ್ಯಕ್ಷ ಸುರೇಶ್ ಕುಲಾಲ್ ಕಲ್ಲಾಡಿಗೋಳಿ, ಪದಾಧಿಕಾರಿಗಳಾದ ನಾಗೇಶ್ ಕುಲಾಲ್ ಕೋಮಾಲಿ, ಯೋಗೀಶ್ ಗಟ್ಟಿ ನಂದಾವರ, ರಾಜೀವ ಕೊಟ್ಟಾರಿ ಕಲ್ಲಡ್ಕ, ವಿಶ್ವನಾಥ ಆಚಾರ್ಯ ಮಾರ್ನಬೈಲು, ದಯಾನಂದ…

Read More

ಬಂಟ್ವಾಳ: ಪಂಜಿಕಲ್ಲು ಗ್ರಾಮದಲ್ಲಿ 10 ವರ್ಷಗಳಿಂದ ಹಂದಿ ಸಾಕಾಣಿಕೆಯ ಗೂಡಿನಲ್ಲಿ ಗುಡಿಸಲು ನಿರ್ಮಿಸಿ ಕೊಂಡು ಜೀವನ ನಡೆಸುತ್ತಿದ್ದ ಬಡಕುಟುಂಬಕ್ಕೆ ಸುಸಜ್ಜಿತ ಸ್ವಂತ ಮನೆಯ ಕನಸೊಂದು ಸಾಕಾರಗೊಳ್ಳುತ್ತಿದೆ. ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ, ಪಂಜಿಕಲ್ಲು ಗ್ರಾ.ಪಂ. ಮಾಜಿ ಅಧ್ಯಕ್ಷ ದೇವಪ್ಪ ಕುಲಾಲ್ ಮುಂದಾಳತ್ವದಲ್ಲಿ, ದಾನಿಗಳ ಸಹಕಾರದೊಂದಿಗೆ ಮನೆ ನಿರ್ಮಾಣ ಕಾರ್ಯ ನಡೆದಿದೆ. ಗುಡಿಸಲಿನಲ್ಲಿ ವಾಸವಿದ್ದರೂ ಈ ಮನೆಯ ಹುಡುಗನ ಶೈಕ್ಷಣಿಕ ಸಾಧನೆ ಮನೆ ನಿರ್ಮಾಣಕ್ಕೆ ಪ್ರೇರಣೆ ನೀಡಿದೆ. ಪಂಜಿಕಲ್ಲು ಗ್ರಾಮದ ಸೋಮಶೇಖರ್ ಹಾಗೂ ಸುಶೀಲ ದಂಪತಿ ಕುಂಜರಬೆಟ್ಟು ಎಂಬಲ್ಲಿ ತಮ್ಮ ಸ್ವಂತ ಮನೆಯಲ್ಲಿ ವಾಸಗಿದ್ದರು. 10 ವರ್ಷಗಳ ಹಿಂದೆ ಈ ಹಳೆಯ ಮನೆ ಜೀರ್ಣಾವಸ್ಥೆಗೆ ತಲುಪಿ ಕುಸಿದು ಬಿದ್ದಿತ್ತು. ಬಡತನದಲ್ಲಿ ಜೀವನ ನಡೆಸುತ್ತಿದ್ದ ಇವರಿಗೆ ಹೊಸ ಮನೆ ನಿರ್ಮಿಸಲು ಸಾಧ್ಯವಾಗದೇ ಇದರ ಪಕ್ಕದಲ್ಲೇ ಪಾಳುಬಿದ್ದಿದ್ದ ಹಂದಿ ಸಾಕಾಣಿಕೆಯ ಗೂಡಿಗೆ ಸಿಮೆಂಟ್ ಶೀಟು ಇಟ್ಟು, ಟರ್ಪಾಲು ಹಾಸಿ ಗುಡಿಸಲು ನಿರ್ಮಿಸಿಕೊಂಡು ವಾಸವಿದ್ದರು. ಈ ದಂಪತಿಗೆ 3 ಮಂದಿ ಮಕ್ಕಳು. ಓರ್ವ ಪುತ್ರ…

Read More

ಮೂಲ್ಕಿ: ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಅಂಗವಾಗಿ ಬ್ರಹ್ಮರಥೋತ್ಸವ ವೇಳೆ ದೇವರ ತೇರು ಮುರಿದು ಬಿದ್ದಿರುವ ಘಟನೆ ತಡರಾತ್ರಿ ನಡೆದಿದೆ. ಶನಿವಾರ ಬೆಳಗ್ಗಿನ ಜಾವ ಸುಮಾರು 1.40 ರಿಂದ 2 ಗಂಟೆ ವೇಳೆ ಬ್ರಹ್ಮರಥೋತ್ಸವ ತೇರಿನ ಮೇಲ್ಬಾಗ ಕುಸಿದು ಬಿದ್ದಿದೆ. ಈ ಸಂದರ್ಭದಲ್ಲಿ ಅರ್ಚಕರು ತೇರಿನಲ್ಲೇ ಇದ್ದರು. ಅದೃಷ್ಟವಶಾತ್ ಯಾರಿಗೂ ಗಂಭೀರ ಗಾಯಗಳಾಗಿಲ್ಲ.. ಈ ಘಟನೆಯು ಭಕ್ತ ಸಮೂಹದಲ್ಲಿ ಭಾರೀ ಆತಂಕಕ್ಕೆ ಕಾರಣವಾಯಿತು. ಬಳಿಕ ದೇವರ ಉತ್ಸವವನ್ನು ಚಂದ್ರ ಮಂಡಲ ರಥದಲ್ಲಿ ದೇವರ ಉತ್ಸವ ಮುಂದುವರಿಸಲಾಯಿತು.

Read More

ಬಂಟ್ವಾಳ: ಕರ್ನಾಟಕ- ತಮಿಳುನಾಡು ಗಡಿಭಾಗ, ಚಾಮರಾಜನಗರ, ಬಿಳಿಗಿರಿರಂಗನ ಬೆಟ್ಟದಲ್ಲಿ ಕಾಣಸಿಗುವ ಬುಡಕಟ್ಟು ಆದಿವಾಸಿಗಳಾದ ಸೋಲಿಗರ ಸಾಂಸ್ಕೃತಿಕ ವೈವಿಧ್ಯಮಯ ಕಾರ್ಯಕ್ರಮ ವಾಮದಪದವಿನ ಸರಕಾರಿ ಪದವಿ ಕಾಲೇಜಿನಲ್ಲಿ ಬುಧವಾರ ಅನಾವರಣಗೊಂಡಿತು. ಬಸವರಾಜ್ ನೇತೃತ್ವದ ಸೋಲಿಗರ ತಂಡ ಜನಪದ ಹಾಡು, ನೃತ್ಯ ಪ್ರಾಕಾರಗಳೊಂದಿಗೆ ಸೋಲಿಗರ ಜೀವನ ವ್ಯವಸ್ಥೆಯನ್ನು ವಿದ್ಯಾರ್ಥಿಗಳ ಮುಂದೆ ತೆರೆದಿಟ್ಟಿತು. ಸೋಲಿಗರ ಸಾಂಪ್ರದಾಯಿಕ ನೃತ್ಯಕ್ಕೆ ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳು, ವಿದ್ಯಾರ್ಥಿಗಳು ಹೆಜ್ಜೆ ಹಾಕಿ ಸಂಭ್ರಮಿಸಿದರು. ಆದಿವಾಸಿಗಳು ಈ ನೆಲದ ಮೂಲ ನಿವಾಸಿಗಳು. ತಮ್ಮದೇ ಆದ ಸಾಂಸ್ಕೃತಿಕ, ಸಾಮಾಜಿಕ ಬದುಕನ್ನು ಕಟ್ಟಿಕೊಂಡಿರುವ ಅವರು ಪ್ರಕೃತಿ ಹಾಗೂ ಪ್ರಕೃತಿ ಸಂಪನ್ಮೂಲಗಳನ್ನು ತಮ್ಮ ಬದುಕಿಗಾಗಿ ಅವಲಂಬಿಸಿಕೊಂಡಿದ್ದಾರೆ. ಇಂತಹ ಬುಡಕಟ್ಟು ಜನಾಂಗದವರು ತಮ್ಮದೇ ಆದ ಸಂಗೀತ, ನೃತ್ಯ, ಸಂಗೀತ ಪರಿಕರಗಳನ್ನು ಹೊಂದಿತ್ತು, ಅವುಗಳಿಗೆ ಹೆಚ್ಚಿನ ಮಹತ್ವ ನೀಡುತ್ತಾರೆ. ಕಾಡಿನೊಳಗೆ ಬದುಕು ಸಾಗಿಸುವ ಸೋಲಿಗರ ಸಾಂಸ್ಕೃತಿಕ ವೈವಿಧ್ಯತೆ ಅಳಿವಿನಂಚಿಗೆ ಸಾಗುತ್ತಿದ್ದು ಇದನ್ನು ಉಳಿಸಿ ಬೆಳೆಸುವುದರ ಜೊತೆಗೆ ಇಂದಿನ ವಿದ್ಯಾರ್ಥಿಗಳಿಗೆ ಪರಿಚಯ ಮಾಡುವ ಉದ್ದೇಶದಿಂದ ಆಯೋಜಿಸಿದ ಕಾರ್ಯಕ್ರಮ ಕಾಲೇಜ್ ಕ್ಯಾಂಪಸ್‌ನಲ್ಲಿ ಆದಿವಾಸಿಗಳ ಹೊಸ…

Read More

ಬಂಟ್ವಾಳ: ಸಜೀಪ ಮಾಗಣೆಯ ಶ್ರೀ ನಾಲ್ಕೈತ್ತಾಯ ದೈವದ ಗಡಿ ಪ್ರಧಾನರಾಗಿ ಸಜೀಪಗುತ್ತು ಮನೆತನದ ಮುತ್ತಣ್ಣ ಶೆಟ್ಟಿ ನೇಮಕಗೊಂಡಿದ್ದಾರೆ. ಸಜೀಪ ಗುತ್ತು ಮನೆತನದ ಹಿರಿಯರು – ಕಿರಿಯರು ಸೇರಿ ಸಜೀಪ ಮಾಗಣಿ ಶ್ರೀ ನಡಿಯೇಲು ದೈವಂಗಳ ಅಪ್ಪಣೆ ಪಡೆದು ಶ್ರೀ ನಾಲ್ಕೈತ್ತಾಯ ದೈವದ ಅನುಮತಿಯೊಂದಿಗೆ, ಇತ್ತೀಚೆಗೆ ನಡೆದ ಸಜೀಪ ಮಾಗಣೆ ಶ್ರೀ ಮಿತ್ತಮಜಲು ಕ್ಷೇತ್ರದ ವಾರ್ಷಿಕ ಬಿಸು ಜಾತ್ರೆಯಲ್ಲಿ ಗಡಿ ಬೂಳ್ಯ ನೀಡಿ ಗಡಿ ಪ್ರಧಾನರ ನೇಮಕ ಮಾಡಲಾಯಿತು. ಮಾಗಣೆಯ ಕಟ್ಟುಕಟ್ಟಳೆಯ ಪ್ರಕಾರ ಮಂಗಳವಾರದಂದು ಅರಸು ದೈವಂಗಳ ನೇಮದಲ್ಲಿ ಮಾಗಣೆಯ ಗುತ್ತು ಬರ್ಕೆಯ ಪ್ರಮುಖರ ಉಪಸ್ಥಿತಿಯಲ್ಲಿ, ಮಾಗಣೆಯ ತಂತ್ರಿಗಳು ದೈವಂಗಳ ಅಪ್ಪಣೆಯಂತೆ ಕಲಶ ಸ್ನಾನ ಮಾಡಿಸಿ ಸಜೀಪ ಗುತ್ತು ಮನೆತನದವರ ಸಮಕ್ಷಮದಲ್ಲಿ ದೈವಂಗಳು ಕಾಳಪ್ಪ ಶೆಟ್ಟಿ ಎಂಬ ಹೆಸರನ್ನಿತ್ತು ಗಡಿಬೂಳ್ಯ ನೀಡಿ, ಗಡಿ ಪ್ರಧಾನರಾಗಿ ಮುತ್ತಣ್ಣ ಶೆಟ್ಟಿಯವರನ್ನು ನೇಮಕ ಮಾಡಲಾಯಿತು. ಸಜೀಪ ಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್, ಪಾಲೆ ಮಂಟಮೆ ಸಂಸಾರ, ಕಾಂತಾಡಿ ಗುತ್ತು ಗಡಿಪ್ರಧಾನರಾದ ಗಣೇಶ್ ನಾಯಕ್ ಯಾನೆ…

Read More

Advertisements ಬಂಟ್ವಾಳ: ಇಲ್ಲಿನ ಲೋಕೋಪಯೋಗಿ ಇಲಾಖೆ ಉಪವಿಭಾಗದಲ್ಲಿ ಸಹಾಯಕ ಎಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸಿ ಇದೀಗ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಆಗಿ ಪದೋನ್ನತಿಗೊಂಡಿರುವ ಪ್ರೀತಂ ಅವರಿಗೆ ಬೀಳ್ಕೊಡುಗೆ ಸಮಾರಂಭ ಲೋಕೋಪಯೋಗಿ ಇಲಾಖೆ ಕಚೇರಿಯಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಲೋಕೋಪಯೋಗಿ ಇಲಾಖೆಯ ಬಂಟ್ವಾಳ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಜೈಪ್ರಕಾಶ್ ಸಿ. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪುತ್ತೂರು ಪಿಡಬ್ಲ್ಯುಡಿ ಎಇಇ ರಾಜೇಶ್ ರೈ, ಸುಳ್ಯ ಎಇಇ ಗೋಪಾಲ್ ಹಾಗೂ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗ ಎಇಇ ತಾರಾನಾಥ ಸಾಲ್ಯಾನ್ ಉಪಸ್ಥಿತರಿದ್ದರು. ಇಂಜಿನಿಯರ್ ಅರುಣ್ ಪ್ರಕಾಶ್ ಡಿಸೋಜಾ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು ಇಂಜಿನಿಯರ್ ದಿಲೀಪ್ ವಂದಿಸಿದರು. ಈ ಸಂದರ್ಭ ಕಚೇರಿ ಸಿಬ್ಬಂದಿಗಳು ಹಾಗೂ ಗುತ್ತಿಗೆದಾರರು ಹಾಜರಿದ್ದರು.

Read More

ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ನಡೆಯುತ್ತಿರುವ ಭರತನಾಟ್ಯ ತರಗತಿಯವಾರ್ಷಿಕ ಸಂಭ್ರಮ ಭಾನುವಾರ ಸಂಜೆ ಫರಂಗಿಪೇಟೆಯ ಸೇವಾಂಜಲಿ ಸಭಾಗೃಹದಲ್ಲಿ ನಡೆಯಿತು. ತುಂಬೆ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಕವಿತಾ ದೇವದಾಸ್ ಕಾರ್ಯಕ್ರಮ‌ ಉದ್ಘಾಟಿಸಿ ಮಾತನಾಡಿ ಪ್ರಾಚೀನ ನೃತ್ಯ ಕಲೆಯಾದ ಭರತನಾಟ್ಯದ ಹುಟ್ಟು ಹಾಗೂ ದೇವಸ್ಥಾನದ ಸಂಸ್ಕೃತಿಗೆ ಅವಿನಾಭಾವ ಸಂಬಂಧವಿದೆ. ಭಾವ, ರಾಗ, ತಾಳದ ಸಮ್ಮಿಲನ ಭರತನಾಟ್ಯ. ಇದು ಕೇವಲ ನೃತ್ಯಕಲೆಯಲ್ಲದೆ ಭಗವಂತನನ್ನು ಸಾಕ್ಷತ್ಕರಿಸುವ ಸಾಧನವಾಗಿದೆ. ಮನೋರಂಜನೆಯ ಜೊತೆಗೆ ಸಂಸ್ಕಾರವನ್ನು ನೀಡುತ್ತದೆ, ಇದರಲ್ಲಿರುವ ಮುದ್ರೆಗಳಿಗೆ ವಿಶಿಷ್ಠವಾದ ಅರ್ಥವಿದೆ ಎಂದು ತಿಳಿಸಿದರು. Advertisement ಸೇವಾಂಜಲಿ ಪ್ರತಿಷ್ಠಾನದ ಟ್ರಸ್ಟಿ ತೇವು ತಾರಾನಾಥ ಕೊಟ್ಟಾರಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಇಂದು ಗುರು ಪರಂಪರೆ ಉಳಿದಿರುವುದು ಕಲಾಕ್ಷೇತ್ರದಲ್ಲಿ ಮಾತ್ರ. ಕಲೆಗಳು ಆರಾಧನ ಪದ್ದತಿಯಲ್ಲಿದ್ದು ಭರತನಾಟ್ಯದಂತಹ ಕಲೆಯಿಂದ‌ ಸಂಸ್ಕೃತಿ ಉಳಿಯಲು ಸಾಧ್ಯವಿದೆ. ಇದರಿಂದ ಶಾರದೆಯ ಅನುಗ್ರಹವಾಗುವುದರ ಜೊತೆಗೆ ಅಂತಃ ಸತ್ವ ಮಕ್ಕಳಲ್ಲಿ ಜಾಗೃತವಾಗುತ್ತದೆ ಎಂದರು. ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ಮಾತನಾಡಿ ಕಳೆದ…

Read More

ಬಂಟ್ವಾಳ: ಪಾಣೆಮಂಗಳೂರಿನ ಹಳೇಯ ಉಕ್ಕಿನ ಸೇತುವೆಯ ಅಡಿಭಾಗದಲ್ಲಿ ನೇತ್ರಾವತಿ ನದಿಯಲ್ಲಿ ಮೃತದೇಹವೊಂದು ಪತ್ತೆಯಾಗಿದೆ. ಪ್ಯಾಂಟ್, ಟೀ ಶರ್ಟ್ ಧರಿಸಿದ ಗಂಡಸಿನ ಶವ ಇದಾಗಿದ್ದು ನೀರಿನಲ್ಲಿ ತೇಲಾಡುತ್ತಿರುವುದನ್ನು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಂಟ್ವಾಳ ನಗರ ಪೊಲೀಸರು ಸ್ಥಳಕ್ಕೆ ಧಾವಿಸಿ ಶವ ಮೇಲೆತ್ತುವ ಕಾರ್ಯ ಆರಂಭಿಸಿದ್ದಾರೆ. ಸ್ಥಳದಲ್ಲಿ ಕುತೂಹಲಿಗರ ದಂಡು ಜಮಾಯಿಸುತ್ತಿದೆ Advertisement

Read More

Advertisement ಬಂಟ್ವಾಳ: ಮಾರ್ನಬೈಲು ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದ ಅಭಿವೃದ್ದಿ ಮತ್ತು ಭೂಮಿ ಖರೀದಿ ಸಂಕಲ್ಪ ಸಿದ್ಧಿಗಾಗಿ 18 ಗುರುವಾರ ಪರ್ಯಂತ ನಡೆಯುತ್ತಿರುವ ವಿಶೇಷ ಪಂಚಾರತಿ ಸೇವೆಯ 3ನೇ ಗುರುವಾರದ ಪಂಚಾರತಿ ಸೇವೆಯು ನಡೆಯಿತು. ಪಂಚ ಅಭ್ಯಾಗತರಾಗಿ ಮುನ್ನೂರು ಮಾಗಣೆಯ – ದುಗ್ಗಪ್ಪ ಭಂಡಾರಿ ಯಾನೆ ಗಂಗಾಧರ ಭಂಡಾರಿ ಆಳ್ವರಪಾಲು, ಟೆಲಿಕಾಂ ಇಲಾಖೆಯ ನಿವೃತ್ತ ಸಬ್ ಡಿವಿಜನಲ್ ಇಂಜಿನಿಯರ್ – ಜನಾರ್ಧನ ಬಂಗೇರ ನಾಗನವಳಚ್ಚಿಲು, ಮಾಣಿಲ ಕುಕ್ಕಾಜೆಯ ಶ್ರೀ ಕಾಳಿಕಾಂಬಾ ಆಂಜನೇಯ ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಪುರುಷೋತ್ತಮ ಪೂಜಾರಿ ಕಾರಾಜೆ, ಬಂಟ್ವಾಳ ತಾಲೂಕು ಮಡಿವಾಳರ ಸಮಾಜ ಸೇವಾ ಸಂಘದ ಗೌರವ ಅಧ್ಯಕ್ಷ ಎನ್. ಕೆ. ಶಿವ ಖಂಡಿಗ, ಸಜೀಪ ಮಾಗಣೆ ಗಟ್ಟಿ ಬಾಂಧವರ ಒಕ್ಕೂಟದ ಅಧ್ಯಕ್ಷ ಚಂದ್ರಶೇಖರ ಗಟ್ಟಿ ಅಂದಾಡಿ ಭಾಗವಹಿಸಿ ಶ್ರೀ ಅಯ್ಯಪ್ಪ ದೇವರಿಗೆ ಪಂಚಾರತಿ ಬೆಳಗಿದರು. ಎನ್. ಕೆ. ಶಿವ ಖಂಡಿಗ ಮಾತನಾಡಿ ಭೂಮಿ ಖರೀದಿಯಂತಹ ದೊಡ್ಡ ಕಾರ್ಯಕ್ಕೆ ದೇವರ ಅನುಗ್ರಹ ಅತೀ ಅವಶ್ಯ. ಅದಕ್ಕಾಗಿ ಪಂಚಾರತಿ…

Read More

ಬಂಟ್ವಾಳ: ಇಲ್ಲಿನ ಬಂಟ್ವಾಳ ಪೇಟೆಯಲ್ಲಿ ನಡೆಯುವ ಮಾರಿಪೂಜೆಯು ಎ.11ರಂದು ಶುಕ್ರವಾರ ರಾತ್ರಿ ನಡೆಯಲಿದೆ. ಬಂಟ್ವಾಳದ ಶ್ರೀ ವೈದ್ಯನಾಥ ಅರಸು ಜುಮಾದಿ ಬಂಟ ದೈವಸ್ಥಾನದ ನೇಮೋತ್ಸವದ ಬಳಿಕ ವರ್ಷಂಪ್ರತಿಯಂತೆ ಮಾರಿಪೂಜೆಯು ನಡೆಯುತ್ತಿದ್ದು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದೈವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಗಣೇಶ್ ಸುವರ್ಣ ತುಂಬೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ Advertisement

Read More