Author: admin

Advertisement ಬಂಟ್ವಾಳ: ಸಜೀಪ ಮಾಗಣೆಗೊಳಪಟ್ಟ ಮಿತ್ತಮಜಲು ಕ್ಷೇತ್ರದಲ್ಲಿ ನಡೆಯುವ ವಿಷು ಜಾತ್ರೆಯ ಪ್ರಯುಕ್ತ ಸಜೀಪಮೂಡ ಗ್ರಾಮದ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಎ‌.8 ರಿಂದ ಎ.15 ರವರೆಗೆ ಆಗೇಲು ಮತ್ತು ಕೋಲ ಸೇವೆ ನಡೆಯುವುದಿಲ್ಲ. ಎ.18 ರಿಂದ ಎಂದಿನಂತೆ ಸೇವೆಗಳು ಮುಂದುವರಿಯಲಿದೆ ಎಂದು ದೈವಸ್ಥಾನದ ಪ್ರಕಟಣೆ ತಿಳಿಸಿದೆ.

Read More

ಬಂಟ್ವಾಳ: ಸರಕಾರದ ಸೌಲಭ್ಯಗಳು ಕಾರ್ಯರೂಪಕ್ಕೆ ಬರ ಬೇಕಾದರೆ ಸೇವಾಂಜಲಿಯಂತಹ ಸ್ಥಳೀಯ ಸಂಘ ಸಂಸ್ಥೆಗಳ ನಿಸ್ವಾರ್ಥ ಸೇವೆಯಿಂದ ಮಾತ್ರ ಸಾಧ್ಯ. ಭಾರತ ಉದ್ಧಾರವಾಗಬೇಕಾದರೆ ಯೋಜನೆಗಳನ್ನು ಡೆಲ್ಲಿಯಲ್ಲಿ ಮಾಡಿದರೆ ಮಾತ್ರ ಸಾಲುವುದಿಲ್ಲ, ಅದು ಹಳ್ಳಿ ಹಳ್ಳಿಗೂ ತಲುಪಿ, ಎಲ್ಲರೂ ಕೈ ಜೋಡಿಸಿದಾಗ ಸಾಧ್ಯವಾಗುತ್ತದೆ ಎಂದು ದೇರಳಕಟ್ಟೆಯ ಜ.ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಮೆಡಿಕಲ್ ಸುಪರಿಡೆಂಟ್ ಡಾ. ಸುಮಲತಾ ಆರ್. ಶೆಟ್ಟಿ ಹೇಳಿದರು.ಅವರು ಕೇಂದ್ರ ಸರಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಫರಂಗಿಪೇಟೆಯ ಸೇವಾಂಜಲಿ ಸಭಾಗ್ರಹದಲ್ಲಿ ಸೇವಾಂಜಲಿ ಪ್ರತಿಷ್ಠಾನದ ವತಿಯಿಂದ ಶನಿವಾರ ಕ್ಷಯರೋಗಿಗಳಿಗೆ ಆಹಾರ ದವಸಧಾನ್ಯದ ಕಿಟ್ ವಿತರಿಸಿ ಮಾತನಾಡಿದರು. ಕ್ಷಯ ಮುಕ್ತ ಭಾರತ ನಮ್ಮ ಪ್ರಧಾನಿಯವರ ಕನಸು. ಅದು ಸಾಕಾರಗೊಳ್ಳಬೇಕಾದರೆ ಕೇವಲ ಕ್ಷಯ ರೋಗಿಗಳು ಮಾತ್ರವಲ್ಲದೆ ಸಾರ್ವಜನಿಕರು, ಸಂಘಟನೆಗಳು, ಆಶಾಕಾರ್ಯಕರ್ತೆಯರು ಜೊತೆಗೂಡಬೇಕು. ಕ್ಷಯ ರೋಗಳ ಸಂಖ್ಯೆ ಕಡಿಮೆಯಾಗಿ ಶೂನ್ಯಕ್ಕೆ ತಲುಪಬೇಕು ಎಂದು ಆಶಿಸಿದರು.ಉದ್ಯಮಿ ವಿನಯ್ ಎನ್. ರೈ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಕ್ಷಯ ರೋಗದಿಂದ ಮುಕ್ತವಾಗಲು ಔಷದ ತುಂಬಾ ಮುಖ್ಯ ಅದರ ಜೊತೆಗೆಸರಿಯಾದ ಆಹಾರ ಸೇವನೆಯೂ…

Read More

ಬಂಟ್ವಾಳ: ಲಕ್ಕೇಸಿರಿ ಹಾಗೂ ರಕ್ತೇಶ್ವರೀ ವಿಭಿನ್ನವಾದುದು, ರಕ್ತೇಶ್ವರೀ ದೇವಿಯ ಸ್ವರೂಪ. ಇಲ್ಲಿ ಶಿಲಾ ವಿಗ್ರಹದಲ್ಲಿ ಪೀಠ ಸಹಿತ, ಶಾಸ್ತ್ರೀಯವಾಗಿ ನಿತ್ಯ ಪೂಜೆಯೊಂದಿಗೆ ಶ್ರೀ ರಕ್ತೇಶ್ವರೀಯನ್ನು ಆರಾಧನೆ ಮಾಡಿಕೊಂಡು ಬರಲಾಗುತ್ತಿದೆ ಎಂದು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳು ಹೇಳಿದರು.ಬಿ.ಸಿ.ರೋಡಿನ ಶ್ರೀ ರಕ್ತೇಶ್ವರೀ ದೇವಿ ಸನ್ನೀದಿಯ ಪುನರ್ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕದ ಪ್ರಯುಕ್ತ ಶುಕ್ರವಾರ ರಾತ್ರಿ ನಡೆದ ಸಾಂಸ್ಕೃತಿಕ ಹಾಗೂ ಧಾರ್ಮಿಕ ಸಭಾ ವೇದಿಕೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮನುಷ್ಯ ಜಿಜ್ಞಾಸು, ಮನುಷ್ಯ ಆವಿಷ್ಕಾರ ಅನುಭೂತಿ ಪಡೆಯುವ, ಅನ್ವೇಷಣೆ ಮಾಡುವ ಚಾಕಚಕ್ಯತೆಯನ್ನು ಇಟ್ಟುಕೊಂಡು ಇತರ ಜೀವಿಗಳಿಗೆ ಭಿನ್ನವಾಗಿದ್ದಾನೆ ಎಂದು ತಿಳಿಸಿದರು. ಧರ್ಮ ದೇವರು, ಪ್ರಕೃತಿಯ ಬಗ್ಗೆ ನಿರಂತರವಾದ ಅಧ್ಯಯನ ನಡೆಯುತ್ತಿದೆ, ಅಧ್ಯಯನ ಮಾಡುತ್ತಲೇ ಅದು ಹೆಚ್ಚು ನಿಗೂಡವಾಗುತ್ತಿದೆ ಎಂದು ತಿಳಿಸಿದರು. Advertisement ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಹಿಂದುಗಳು ಈ ಭೂಮಿಯನ್ನು ತಾಯಿಯೆಂದು ಆರಾಧನೆ ಮಾಡುತ್ತಾರೆ. ಇದು ಹಿಂದೂಗಳಿಗೆ ಮಾತೃಭೂಮಿ,…

Read More

ಬಂಟ್ವಾಳ: ಬಿ.ಸಿ.ರೋಡಿನ ಶ್ರೀ ರಕ್ತೇಶ್ವರೀ ದೇವಿ ಸನ್ನಿಧಿಯ ಪುನರ್ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕದ ಪ್ರಯುಕ್ತ ಸೇವಾ ಕಚೇರಿ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ಬೆಳಿಗ್ಗೆ ನಡೆಯಿತು.ಬಂಟ್ವಾಳ ತಹಶೀಲ್ದಾರ್ ಸೇವಾ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿ ಬಂಟ್ವಾಳದ ಜನರನ್ನು ಕಾಯುವ ಶ್ರೀ ರಕ್ತೇಶ್ವರಿ ತಾಯಿಯ ಬ್ರಹ್ಮಕಲಶಾಭಿಷೇಕ ವಿಜ್ರಂಭಣೆಯಿಂದ ನಡೆಯಲಿದ್ದು ಅದರ ಪೂರ್ವಭಾವಿಯಾಗಿ ಸೇವಾ ಕಚೇರಿ ಉದ್ಘಾಟನೆಯಾಗಿದೆ. ಈ ಉತ್ಸವ ಯಶಸ್ವಿಯಾಗಿ ನಡೆಯಲಿ, ಜಗದಂಬೆ ಎಲ್ಲರಿಗೂ ಒಳಿತು ಮಾಡಲಿ ಎಂದು ಶುಭ ಹಾರೈಸಿದರು. Advertisement ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ಎಸ್. ವಿಜಯಪ್ರಸಾದ್ ಮಾತನಾಡಿ ದೇವಿಯ ಬ್ರಹ್ಮಕಲಶಾಭಿಷೇಕ ಸಂಭ್ರಮದಲ್ಲಿ ಎಲ್ಲರೂ ಸಮಾನ ಮನಸ್ಕಾರಾಗಿ ತೊಡಗಿಸಿಕೊಂಡು ಯಶಸ್ವಿಗೊಳಿಸೋಣ ಎಂದರು.ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ರಮೇಶಾನಂದ ಸೋಮಯಾಜಿ, ದೇವಸ್ಥಾನದ ಸೇವಾ ಸಮಿತಿ ಅಧ್ಯಕ್ಷ ಬಿ. ವಿಶ್ವನಾಥ್, ವಿವಿಧ ಸಮಿತಿಗಳ ಪ್ರಮುಖರಾದ ಸಂಜೀವ ಪೂಜಾರಿ ಗುರುಕೃಪಾ, ಬೇಬಿ ಕುಂದರ್, ಭುವನೇಶ್ ಪಚ್ಚಿನಡ್ಕ, ಎನ್. ಶಿವಶಂಕರ್, ಅಶ್ವನಿ ಕುಮಾರ್ ರೈ, ಐತಪ್ಪ ಪೂಜಾರಿ, ಕೆ. ನಾರಾಯಣ ಹೆಗ್ಡೆ, ಬಿ.ಮೋಹನ್, ಗೋಪಾಲ ಸುವರ್ಣ, ಸತೀಶ್ ಶೆಟ್ಟಿ ಮೊಡಂಕಾಪು,…

Read More

ಬಂಟ್ವಾಳ: ಮಾರ್ನಬೈಲು ಶ್ರೀ ಅಯ್ಯಪ್ಪ ಮಂದಿರದ ಅಭಿವೃದ್ದಿ ಮತ್ತು ಭೂಮಿ ಖರೀದಿ ಸಂಕಲ್ಪ ಸಿದ್ಧಿಗಾಗಿ ೧೮ ಗುರುವಾರ ಪರ್ಯಂತ ನಡೆಯಲಿರುವ ವಿಶೇಷ ಪಂಚಾರತಿ ಸೇವೆಯ ಎರಡನೇ ಗುರುವಾರದ ಪಂಚಾರತಿ ಸೇವೆ ನಡೆಯಿತು. ಉದ್ಯಮಿಗಳಾದ ರೋಹಿತ್ ಡಿ. ಶೆಟ್ಟಿ ನಗ್ರಿಗುತ್ತು, ಜಯರಾಮ ಹೆಗ್ಡೆ ಕುಡ್ವಪಾಲು, ಶ್ರೀ ಕ್ಷೇತ್ರ ನಂದಾವರದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ರಾಧಕೃಷ್ಣ ಆಳ್ವ ಕಂಚಿಲ, ಬಂಟ್ವಾಳತಾಲೂಕು ಪಿಡಬ್ಲ್ಯುಡಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ, ಉದ್ಯಮಿ ಗೋಪಾಲ ಮೂಲ್ಯ ನೆಲ್ಲಿ ಭಾಗವಹಿಸಿ ಶ್ರೀ ದೇವರಿಗೆ ಪಂಚಾರತಿ ಬೆಳಗಿದರು. Advertisement ಈ ಸಂದರ್ಭ ಶ್ರೀ ಅಯ್ಯಪ್ಪ ಸ್ವಾಮಿ ಮಂದಿರ ಆಡಳಿತ ಟ್ರಸ್ಟಿನ ಗೌರವಾಧ್ಯಕ್ಷರಾದ ಸಂಜೀವ ಗುರುಸ್ವಾಮಿ, ಕೃಷ್ಣ ಗುರುಸ್ವಾಮಿ, ಅಧ್ಯಕ್ಷ ಪುರುಷೋತ್ತಮ ಪೂಜಾರಿ, ಕಾರ್ಯದರ್ಶಿ ಯಶವಂತ ಕೆ. ಪುತ್ತೂರು, ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿ ಅಶೋಕ್ ಗಟ್ಟಿ ನಂದಾವರ, ಕೋಶಾಧಿಕಾರಿ ರಂಜಿತ್ ರಾವ್ ಬಟ್ಟಡ್ಕ, ಭಜನಾ ಸಮಿತಿ ಅಧ್ಯಕ್ಷ ಸುರೇಶ್ ಕುಲಾಲ್ ಕಲ್ಲಾಡಿಗೋಳಿ ಪದಾಧಿಕಾರಿ ಪ್ರಮುಖರಾದ ಯಾದವ ಬಂಗೇರ ಕಂಚಿಲ,…

Read More

ಬಂಟ್ವಾಳ: ಬಿ.ಕಸ್ಟ ಗ್ರಾಮದ ನೇರಂಬೋಳು ಶ್ರೀ ರಕೇಶ್ವರಿ ಯುವಕ ಸಂಘದ ರಜತ ಸಂಭ್ರಮ ಕಾರ್ಯಕ್ರಮ ಏ.5 ಮತ್ತು 6 ರಂದು ವಿಜೃಂಭಣೆಯಿಂದ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಹರೀಶ ಕುಲಾಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. Advertisement ಸಂಘದ ಗೌರವಾಧ್ಯಕ್ಷ ಮನೋಹರ ನೇರಂಬೋಳು ಮಾತನಾಡಿ, ಈಗಾಗಲೇ 30ಕ್ಕೂ ಮಿಕ್ಕಿ ಮಂದಿ ಬಾಲ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಯಕ್ಷಗಾನ ತರಬೇತಿ ನೀಡಲಾಗಿದ್ದು, ಪ್ರತಿವರ್ಷ ಓರ್ವ ವಿದ್ಯಾರ್ಥಿಯನ್ನು ದತ್ತು ಸ್ವೀಕರಿಸಿ ಉಚಿತ ಶಿಕ್ಷಣ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇಬ್ಬರು ಬಡ ವಿದ್ಯಾರ್ಥಿಗಳನ್ನು ದತ್ತು ಸ್ವೀಕರಿಸಿ ಉಚಿತ ಶಿಕ್ಷಣ ನೀಡಲು ಚಿಂತನೆ ನಡೆಸಲಾಗಿದೆ ಎಂದರು. ರಜತ ಮಹೋತ್ಸವ ಪ್ರಯುಕ್ತ 5ಮತ್ತು 6ರಂದು ಧಾರ್ಮಿಕ, ಸಾಂಸ್ಕೃತಿಕ, ಸಭಾ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ ಮತ್ತು ಯಕ್ಷಗಾನ ಹಾಗೂ ನಾಟಕ ಪ್ರದರ್ಶನಗೊಳ್ಳಲಿದೆ ಎಂದರು.ಸುದ್ದಿಗೋಷ್ಠಿಯಲ್ಲಿ ಯಶೋಧರ ಪೂಜಾರಿ, ರವೀಂದ್ರ ಕುಲಾಲ್, ಹರಿಶ್ಚಂದ್ರ ಪೂಜಾರಿ, ಪದ್ಮನಾಭ ಪೂಜಾರಿ, ಗಣೇಶ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.

Read More

ಬಂಟ್ವಾಳ: ಬಿ.ಸಿ.ರೋಡಿನ ಹೃದಯಭಾಗದಲ್ಲಿರುವ ಶ್ರೀ ರಕ್ತೇಶ್ವರೀ ದೇವಿ ಸನ್ನಿಧಿಯ ಪುನರ್ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕದ ಪ್ರಯುಕ್ತ ಗುರುವಾರ ಸಂಜೆ ಶ್ರೀ ಕ್ಷೇತ್ರಕ್ಕೆ ಹಸಿರುವಾಣಿ ಹೊರೆಕಾಣಿಕೆ ಸಂದಾಯವಾಯಿತು.ಬಿ.ಸಿ.ರೋಡಿನ ಕೈಕಂಬ ಪೊಳಲಿ ದ್ವಾರದ ಬಳಿ ಸಮಾವೇಶಗೊಂಡ ಹೊರೆಕಾಣಿಕೆ ಮೆರವಣಿಗೆಗೆ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ರಮೇಶಾನಂದ ಸೋಮಯಾಜಿ ಚಾಲನೆ ನೀಡಿದರು. ಬಳಿಕ ರಾಷ್ಟ್ರೀಯ ಹೆದ್ದಾರಿಯ ಮೂಲಕ ಭವ್ಯ ಮೆರವಣಿಗೆಯಲ್ಲಿ ಹಸಿರುವಾಣಿಯನ್ನು ಕ್ಷೇತ್ರಕ್ಕೆ ತರಲಾಯಿತು. ಗೊಂಬೆ ಕುಣಿತ, ಬಣ್ಣದ ಕೊಡೆಗಳು, ಕುಣಿತ ಭಜನೆ, ಚೆಂಡೆ ವಾದಾನ ಮೆರವಣಿಗೆಗೆ ವಿಶೇಷ ಮೆರುಗು ನೀಡಿತು. ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ಶಾಸಕ ರಾಜೇಶ್ ನಾಕ್ ಮೆರವಣಿಗೆಯಲ್ಲಿ ಭಾಗವಹಿಸಿದರು. Advertisement ದೇವಸ್ಥಾನದ ಸೇವಾ ಸಮಿತಿ ಅಧ್ಯಕ್ಷ ಬಿ. ವಿಶ್ವನಾಥ್, ಹಸಿರು ಹೊರೆಕಾಣಿಕೆ ಸಮಿತಿ ಸಂಚಾಲಕರಾದ ಬೇಬಿ ಕುಂದರ್, ದೇವದಾಸ್ ಶೆಟ್ಟಿ, ಸಹಸಂಚಾಲಕರಾದ ಚಂದ್ರಹಾಸ ಪಲ್ಲಿಪ್ಪಾಡಿ, ಲೋಕೇಶ್ ಸುವರ್ಣ ಅಲೆತ್ತೂರು, ವಿವಿಧ ಸಮಿತಿಗಳ ಪ್ರಮುಖರಾದ ಸಂಜೀವ ಪೂಜಾರಿ ಗುರುಕೃಪಾ, ಸತೀಶ ಭಂಡಾರಿ, ಚಂದ್ರಹಾಸ ಡಿ. ಶೆಟ್ಟಿ, ಭುವನೇಶ್ ಪಚ್ಚಿನಡ್ಕ, ಪಿ. ಚಂದ್ರಪ್ರಕಾಶ್ ಶೆಟ್ಟಿ, ಎನ್.…

Read More

ಬಂಟ್ವಾಳ : ಇಲ್ಲಿನ ಕುಕ್ಕಿಪಾಡಿ ಗ್ರಾಮದ ಪೆಲತ್ತಕಟ್ಟೆ ಎಂಬಲ್ಲಿ ಚಿರತೆ ದಾಳಿ ನಡೆಸಿ ಒಂದು ತಿಂಗಳ ಕರು ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ.ಇಲ್ಲಿನ ನಿವಾಸಿ, ಕೋಟ್ಯಪ್ಪ ಪೂಜಾರಿ ಎಂಬವರ ಹಟ್ಟಿಯಲ್ಲಿ ನಾಲ್ಕು ದನಗಳಿದ್ದು, ಒಂದು ತಿಂಗಳ ಕರುವನ್ನು ಸ್ವಲ್ಪ ದೂರ ಕಟ್ಟಿ ಹಾಕಿದ್ದರು ಎನ್ನಲಾಗಿದೆ.ಸೋಮವಾರ ತಡರಾತ್ರಿ ಚಿರತೆ ಬಂದಿದ್ದು, ನಾಯಿ ಬೊಗಳಿದಾಗ ಕರುವನ್ನು ಕೊಂದು ಹೊಟ್ಟೆ ಭಾಗ ಮಾಂಸ ಕಚ್ಚಿ ತಿಂದು ಪರಾರಿಯಾಗಿದೆ . ಬಂಟ್ವಾಳ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಈ ಬಗ್ಗೆ ದೂರು ದೂರು ನೀಡಲಾಗಿದೆ. Advertisement

Read More

ಬಂಟ್ವಾಳ: ಬಂಟ್ವಾಳ ತಾ. ಕಾವಳಮೂಡೂರು ಗ್ರಾಮದ ಇತಿಹಾಸ ಪ್ರಸಿದ್ಧ ಭೂಕೈಲಾಸ ಪ್ರತೀತಿಯ ಮಹತೋಭಾರ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕಾವಳಪಡೂರು ಗ್ರಾ.ಪಂ.ಸದಸ್ಯ ವೀರೇಂದ್ರ ಕುಮಾರ್ ಅಮೀನ್ ಅವರು ಆಯ್ಕೆಯಾಗಿದ್ದಾರೆ.ದೇಗುಲದ ಕಚೇರಿಯಲ್ಲಿ ಆಡಳಿತಾಧಿಕಾರಿ ಸಚಿನ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ವ್ಯವಸ್ಥಾಪನ ಸಮಿತಿ ಸಭೆಯಲ್ಲಿ ಅವಿರೋಧವಾಗಿ ಆಯ್ಕೆ ನಡೆಯಿತು.ಪ್ರಧಾನ ಅರ್ಚಕರಾಗಿ ಮಿಥುನ್ ರಾಜ್ ನಾವಡ, ಸಮಿತಿಯ ಸದಸ್ಯರಾಗಿ ಪ್ರಶಾಂತ್, ರಾಧಾ ಆಚಾರ್ಯ, ಧನಲಕ್ಷ್ಮಿ ಸಿ.ಬಂಗೇರ,ಎಂ.ಉದಯ ನಾಯಕ್, ಪ್ರೇಮನಾಥ, ಜನಾರ್ದನ ಆಚಾರ್ಯ, ದಯಾನಂದ ಶೆಟ್ಟಿ ಅಮೈ ಅವರು ಆಯ್ಕೆಯಾಗಿದ್ದಾರೆ. Advertisement ಈ ಸಂದರ್ಭದಲ್ಲಿ ದೇಗುಲದ ಆಡಳಿತವನ್ನು ಆಡಳಿತಾಧಿಕಾರಿ ಅವರು ನೂತನ ಸಮಿತಿಗೆ ಹಸ್ತಾಂತರಿಸಿದರು. ಸಾರ್ವಜನಿಕರ ಪರವಾಗಿ ನೂತನ ಸಮಿತಿಯನ್ನು ಅಭಿನಂದಿಸಲಾಯಿತು.ಪ್ರಮುಖರಾದ ಜಿ.ಪಂ.ಮಾಜಿ ಸದಸ್ಯ ಬಿ.ಪದ್ಮಶೇಖರ ಜೈನ್, ಬಾಲಕೃಷ್ಣ ಆಚಾರ್ಯ, ಪ್ರಭಾಕರ ಆಚಾರ್ಯ, ಬಾಲಕೃಷ್ಣ ಅಂಚನ್, ವಿಶ್ವನಾಥ ಪೂಜಾರಿ ಪೀರ್ಯಗುತ್ತು, ಸತೀಶ್ ಪಡಂತ್ರ್ಯಬೆಟ್ಟು, ರಾಜ್ ಪ್ರಸಾದ್ ಆರಿಗ, ಗೋಪಾಲ ಶೆಟ್ಟಿ ಕೆದ್ದಳಿಕೆ, ಕುಶಲ್ ಶೆಟ್ಟಿ ಕೆದ್ದಳಿಕೆ, ದಾಮೋದರ ಮನ್ಯಗುತ್ತು, ಉಮೇಶ್…

Read More

Advertisement ಬಂಟ್ವಾಳ: ಇಲ್ಲಿನ ತಾಲೂಕು ಹಿರಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸುರಕ್ಷಾಧಿಕಾರಿಯಾಗಿ 39 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ವಯೋ ನಿವೃತ್ತಿ ಹೊಂದಿದ ಮಮತ ಕೆ. ಇವರ ಬೀಳ್ಕೊಡುಗೆ ಸಮಾರಂಭ ನಡೆಯಿತು. ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್. ಆರ್ ತಿಮ್ಮಯ್ಯ, ತಾಲೂಕು ಆರೋಗ್ಯಾಧಿಕಾರಿ ಡಾ|| ಅಶೋಕ್ ಕುಮಾರ್ ರೈ, ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳಾದ ಡಾ. ರಾಜೇಶ್, ಡಾ. ದೀಪಾ ಪ್ರಭು ಮತ್ತಿತರರು ಮಮತಾ ಅವರನ್ನು ಗೌರವಿಸಿದರು. ಇಲಾಖಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Read More