Author: admin

ಬಂಟ್ವಾಳ: ಬಿ.ಸಿ.ರೋಡಿನ ಕೇಂದ್ರ ಭಾಗದಲ್ಲಿರುವ ಶ್ರೀ ರಕ್ತೇಶ್ವರೀ ದೇವಿ ಸನ್ನಿಧಿಯಲ್ಲಿ ಎ.4ರಿಂದ ಎ.9ರವರೆಗೆ ಪುನರ್ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ಬ್ರಹ್ಮಶ್ರೀ ವೇದಮೂರ್ತಿ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ವಿಜ್ರಂಭಣೆಯಿಂದ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ರಮೇಶಾನಂದ ಸೋಮಯಾಜಿ ತಿಳಿಸಿದರು.ಮಂಗಳವಾರ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರೀ ದೇವಿ ದೇವಸ್ಥಾನದಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿ ಎ.3ರಂದು ಗುರುವಾರ ಮಧ್ಯಾಹ್ನ 2 ಗಂಟೆಗೆ ಶ್ರೀ ಕ್ಷೇತ್ರಕ್ಕೆ ಹಸಿರು ಹೊರೆಕಾಣಿಕೆಯ ಭವ್ಯ ಮೆರವಣಿಗೆ ನಡೆಯಲಿದೆ. ಎ. 4ರಂದು ಬೆಳಿಗ್ಗೆ ಉಗ್ರಾಣ ಪೂಜೆ, ಸೇವಾ ಕಚೇರಿ ಉದ್ಘಾಟನೆ, ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ ಸನ್ನಿಧಿಗೆ ತಂತ್ರಿಗಳ ಆಗಮನವಾಗಲಿದ್ದು ರಾತ್ರಿ 7.30ಕ್ಕೆ ಸಾಂಸ್ಕೃತಿಕ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿದೆ. ಎ.5ರಂದು ವಿವಿಧ ಪೂಜಾದಿ ಕಾರ್ಯಕ್ರಮಗಳು, ಎ.6ರಂದು ಸಂಜೆ 6 ಗಂಟೆಗೆ ಶ್ರೀ ಚಕ್ರಪೂಜೆ ನಡೆಯಲಿದೆ. ಎ.8ರಂದು ಸಂಜೆ 7.15ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ, ಎ.9ರಂದು ಬೆಳಿಗ್ಗೆ 8.29ರ ವೃಷಭ ಲಗ್ನ ಸುಮುಹೂರ್ತದಲ್ಲಿ ಶ್ರೀ ರಕ್ತೇಶ್ವರೀ ದೇವಿ…

Read More

ಬಂಟ್ವಾಳ: ಮೊಗರ್ನಾಡು ಸಾವಿರ ಸೀಮೆಯ ಆರಾಧ್ಯ ದೇವರಾದ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನ ವಠಾರದಲ್ಲಿ ಜರಗಲಿರುವ ಅತಿರುದ್ರ ಮಹಾಯಾಗದ ಪ್ರಯುಕ್ತ ಭಾನುವಾರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ಗಣಪತಿ ಹೋಮ, ಅತಿಮಹಾರುದ್ರ ಪಾರಾಯಣ ವಿದ್ವಾನ್ ವೇದಮೂರ್ತಿ ಅನಂತ ಭಟ್ ಓಣಿ ಬೈಲು ನೇತೃತ್ವದಲ್ಲಿ ನಡೆಯಿತು. ಶ್ರೀ ಕ್ಷೇತ್ರದಲ್ಲಿ ಈ ಪಾರಾಯಣ ಮೇ 4 ರಂದು ನಡೆಯುವ ಯಾಗದವರೆಗೂ ಪ್ರತಿನಿತ್ಯ ನಡೆಯಲಿದೆ. ವಾರಾಣಾಸಿ ಕಾಶಿಮಠದ ಶ್ರೀಮದ್ ಶ್ರೀ 1008 ಜಗದ್ಗುರು ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಉಪಸ್ಥಿತಿಯಲ್ಲಿ ಲೋಕ ಕಲ್ಯಾಣಾರ್ಥ ಅತಿ ರುದ್ರ ಮಹಾಯಾಗ ನಡೆಯಲಿದೆ. ಇಂದಿನ ಕಾರ್ಯಕ್ರಮದಲ್ಲಿ ಗೌರವಧ್ಯಕ್ಷ ರಘುನಾಥ ಸೋಮಯಾಜಿ, ಕಾರ್ಯಧ್ಯಕ್ಷ ಜಗನ್ನಾಥ ಚೌಟ ಭಾಗವಹಿಸಿದ್ದರು.

Read More

ಬಂಟ್ವಾಳ: ಶ್ರೀ ಶಾರದ ಸೇವಾ ಪ್ರತಿಷ್ಠಾನ ತುಂಬೆ ಇದರರಜತ ಮಹೋತ್ಸವದ ಹಿನ್ನಲೆಯಲ್ಲಿ ರಜತ ಮಹೋತ್ಸವ ಆಚರಣಾ ಸಮಿತಿ ರಚನೆ ಹಾಗೂ ವಿಸ್ತೃತ ಸಭಾಭವನ ನಿರ್ಮಾಣಕ್ಕೆ ಪೂರ್ವಭಾವಿ ಸಮಾಲೋಚನಾ ಸಭೆ ಭಾನುವಾರ ತುಂಬೆಯ ಶಾರದಾ ಪ್ರತಿಷ್ಠಾನದಲ್ಲಿ ಅಧ್ಯಕ್ಷ ಗಣೇಶ್ ಸುವರ್ಣ ಅಧ್ಯಕ್ಷತೆಯಲ್ಲಿ ನಡೆಯಿತು.ಈ ಸಂದರ್ಭ ರಜತ ಮಹೋತ್ಸವ ಆಚರಣಾ ಸಮಿತಿಯ ಪ್ರಧಾನ ಸಂಚಾಲಕ ತಾರಾನಾಥ ಕೊಟ್ಟಾರಿ ಪ್ರಾಸ್ತವಿಕವಾಗಿ ಮಾತನಾಡಿ ಶಾರದಾ ಪ್ರತಿಷ್ಠಾನ ಶಾಶ್ವತವಾದ ನೆಲೆ ಕಂಡುಕೊಳ್ಳಬೇಕು ಎನ್ನುವ ಉದ್ದೇಶದಿಂದ‌ ದಶಮಾನೋತ್ಸವ ಸುಸಂದರ್ಭದಲ್ಲಿ ಈ ಕಟ್ಟಡ ನಿರ್ಮಾಣವಾಗಿದೆ. ಇಲ್ಲಿ ಸೇವೆ ಸಲ್ಲಿಸುವ ಯುವಕರಲ್ಲಿ ಬದ್ಧತೆಯಿರುವುದರಿಂದ ಈ ಸಂಘಟನೆ ಇಷ್ಟು ಎತ್ತರಕ್ಕೆ ಬೆಳೆದಿದೆ. ಇದೀಗ ರಜತ ವರ್ಷಾಚರಣೆಗೆ ಪಾದಾರ್ಪಣೆ ಮಾಡಿದ್ದು ಶಾಶ್ವತ ಯೋಜನೆಯಾಗಿ ವಿಸ್ತೃತ ಕಟ್ಟಡ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಮುಂದಿನ ಆರು ತಿಂಗಳ ಒಳಗಾಗಿ ಸುಂದರ ಕಟ್ಟಡ ನಿರ್ಮಾಣ ಮಾಡುವ ಉದ್ದೇಶ ಇದೆ ಎಂದು ತಿಳಿಸಿದರು. ಈ ಸಂದರ್ಭ ನೂತನ ರಜತಮಹೋತ್ಸವ ಆಚರಣಾ ಸಮಿತಿಯನ್ನು ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಸಂಸದ ಬ್ರಿಜೇಶ್ ಚೌಟ, ಅಧ್ಯಕ್ಷರಾಗಿ ರಾಘವ…

Read More

ಬಂಟ್ವಾಳ: ಮಾರ್ನಬೈಲು ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದ ಅಭಿವೃದ್ಧಿ ಹಾಗೂ ಭೂಮಿ ಖರೀದಿ ಸಂಕಲ್ಪ ಸಿದ್ಧಿಗಾಗಿ 18 ಗುರುವಾರ ಪರ್ಯಂತ ನಡೆಯಲಿರುವ ವಿಶೇಷ ಪಂಚಾರತಿ ಸೇವೆಗೆ ಗುರುವಾರ ರಾತ್ರಿ ಮಂದಿರದಲ್ಲಿ ಚಾಲನೆ ನೀಡಿಲಾಯಿತು. Advertisement ಭಜನಾ ಮಂಗಳದ ಬಳಿಕ ಪಂಚ ಅತಿಥಿ ಅಭ್ಯಾಗತರಾದಸಜೀಪ ಮಾಗಣೆಯ ತಂತ್ರಿ ವೇದಮೂರ್ತಿ ಎಂ. ಸುಬ್ರಹ್ಮಣ್ಯ ಭಟ್, ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ಕ್ಷೇತ್ರದ ಪ್ರಧಾನ ಅರ್ಚಕ ವೇದಮೂರ್ತಿ ಮಹೇಶ್ ಭಟ್, ಶ್ರೀ ನರಹರಿ ಪರ್ವತ ಸದಾಶಿವ ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ಪರಮೇಶ್ವರ ಮಯ್ಯ, ಬಿ.ಸಿ.ರೋಡಿನ ಶ್ರೀ ಅನ್ನಪೂರ್ಣೇಶ್ವರೀ ನಾಗದೇವರ ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ಈಶ್ವರ ಭಟ್, ಮಾರ್ನಬೈಲು ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದ ಪ್ರಧಾನ ವೈದಿಕರಾದ ವೇದಮೂರ್ತಿ ಶಿವಾನಂದ ಐತಾಳ್ದೇವರಿಗೆ ಪಂಚಾರತಿ ಬೆಳಗಿದರು. ಸಜೀಪ ಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್ ಮಾತನಾಡಿ ದೇವಳದ ಅಭಿವೃದ್ದಿ ಕಾರ್ಯಕ್ಕಾಗಿ ಪಂಚಾರತಿ ಸೇವೆ ಆರಂಭಿಸಿರುವುದು ಹೊಸ ಕಲ್ಪನೆಯಾಗಿದೆ. ಗಂಗಾರತಿ ಯಂತೆ ಪಂಚಾರತಿ ಸೇವೆಯೂ ಯಶಸ್ವಿಯಾಗಿ…

Read More

ಬೆಂಗಳೂರು: ಕುಲಾಲ ಸಂಘ ಬೆಂಗಳೂರು ಇದರ ನೂತನ ಅಧ್ಯಕ್ಷರಾಗಿ ದಿವಾಕರ ಮೂಲ್ಯ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.ಭಾನುವಾರ ನಡೆದ ಸಂಘದ ಜಂಟಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಆಯ್ಕೆ ನಡೆಯಿತು.ಪ್ರಥಮ ಉಪಾಧ್ಯಕ್ಷರಾಗಿ ದಿನೇಶ್ಚಂದ್ರ , ದ್ವಿತೀಯ ಉಪಾಧ್ಯಕ್ಷರಾಗಿ ರಮಾನಾಥ್ ಏತಡ್ಕ, ಪ್ರಧಾನ ಕಾರ್ಯದರ್ಶಿ ಯಾಗಿ ಆಶಾನಂದ್ ಕುಲಶೇಖರ, ಜೊತೆ ಕಾರ್ಯದರ್ಶಿಯಾಗಿ ಹರೀಶ್ ಕಣ್ವತೀರ್ಥ, ಕೋಶಾಧಿಕಾರಿಯಾಗಿ ರಮಾನಂದ್, ಜೊತೆ ಕೋಶಾಧಿಕಾರಿಯಾಗಿ ವೆಂಕಟೇಶ್ ರಟ್ಟಾಡಿ, ಸಂಘಟನಾ ಕಾರ್ಯದರ್ಶಿಯಾಗಿ ಸೇಸಪ್ಪ ಪೊಸಳ್ಳಿ, ಆಂತರಿಕ ಲೆಕ್ಕ ಪರಿಶೋಧಕರಾಗಿ ಹಿಮಕರ್ ಬಂಜನ್, ಮಹಿಳಾ ಘಟಕ ಸಂಚಾಲಕರಾಗಿ ಅನುಸೂಯ ಕೃಷ್ಣಪ್ಪ , ಯುವ ಘಟಕ ಸಂಚಾಲಕರಾಗಿ ಪ್ರಥಮ್ ಚೇಂಡ್ಲಾ, ಕ್ರೀಡಾ ಕಾರ್ಯದರ್ಶಿಯಾಗಿ ರಾಘವೇಂದ್ರ ಕುಲಾಲ್, ಕ್ರೀಡಾ ಜೊತೆಕಾರ್ಯದರ್ಶಿ ಯಾಗಿ ತಿಮ್ಮಪ್ಪ ಕುಲಾಲ್ ಆಯ್ಕೆಯಾದರು. —

Read More

ಬಂಟ್ವಾಳ: ಇಲ್ಲಿನ ಬಂಟ್ವಾಳ ಪೇಟೆಯಲ್ಲಿರುವ ನಂದನಹಿತ್ಲು ಶ್ರೀ ವೈದ್ಯನಾಥ ಅರಸು ಜುಮಾದಿ ಬಂಟ ದೈವಸ್ಥಾನದಲ್ಲಿ ಎ.1ರಿಂದ 3 ರವರೆಗೆ ಕಾಲಾವಧಿ ನೇಮೋತ್ಸವ ನಡೆಯಲಿರುವ ಹಿನ್ನಲೆಯಲ್ಲಿ ಸೋಮವಾರ ದೈವ ಕ್ಷೇತ್ರದಲ್ಲಿ ಕೋಳಿಗುಂಟ ಸಾಂಪ್ರದಾಯಿಕವಾಗಿ ನೆರವೇರಿತು.ಈ ಸಂದರ್ಭ ದೈವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಗಣೇಶ್ ಸುವರ್ಣ ತುಂಬೆ ಕೋಳಿಗುಂಟ ವಿಧಿವಿಧಾನಗಳನ್ನು ನೆರವೇರಿಸಿದರು. ಪೊಣ್ಣಂಗಿಲ ಗುತ್ತುವಿನ ವಿಶ್ವನಾಥ ಪೂಜಾರಿ, ಬಾಳಿಗ ಮನೆತನದ ಸುಧೀರ್ ಬಾಳಿಗ, ಗಾಣದಪಡ್ಪು ಮನೆತನದ ಲೋಕೇಶ್ ಬಂಗೇರ, ಸಂಜೀವ ಪೂಜಾರಿ ಪೆಲತ್ತಿಮಾರ್, ಬಡಕೊಟ್ಟು ಮನೆತನದ ಲೋಕನಾಥ ಪೂಜಾರಿ, ಪ್ರಮುಖರಾದ ಬಾಬು ಶೆಟ್ಟಿ ತುಂಬೆ, ಶ್ರೀಧರ ಪೂಜಾರಿ, ದೇವದಾಸ್ ಅಮೀನ್, ಜಗನ್ನಾಥ ಬಂಟ್ವಾಳ, ಜಯಸುವರ್ಣ, ಶಿವಪ್ರಸಾದ್ ಬಂಟ್ವಾಳ, ಮತ್ತಿತರರು ಭಾಗವಹಿಸಿದ್ದರು. ಎ.೧ ರಂದು ಬೆಳಿಗ್ಗೆ ಗಣಹೋಮ, ನಾಗತಂಬಿಲ, ನವಕ ಕಲಶಾಭಿಷೇಕ,ಅನ್ನಸಂತರ್ಪಣೆ, ರಾತ್ರಿ ೯ ಗಂಟೆಗೆ ಭಂಡಾರ ಅಗಮಿಸಿ ,ಧ್ವಜಾರೋಹಣ ನಡೆದು ಶ್ರೀ ಅರಸು ದೈವದ ನೇಮೋತ್ಸವ ಎ.೨ ರಂದು ರಾತ್ರಿ ೯ ಗಂಟೆಗೆ ಶ್ರೀ ಜುಮಾದಿ ಬಂಟ ದೈವಗಳ ನೇಮೋತ್ಸವ, ಎ. ೩ ರಂದು…

Read More

ಬಂಟ್ವಾಳ: ಜೋಡುಮಾರ್ಗ ಜೇಸಿ ಕೊಡುಗೆಯಾಗಿ ನೀಡಿದ ಸ್ಮಾರ್ಟ್ ಟಿ.ವಿ.ಯನ್ನು ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹಸ್ತಾಂತರಿಸಲಾಯಿತು.ಜೇಸಿ ರಾಷ್ಟ್ರೀಯ ಉಪಾಧ್ಯಕ್ಷ ಜಿ.ಎಸ್.ಎನ್. ವರ್ಮಾ ಅವರು ಮುಖ್ಯ ಶಿಕ್ಷಕಿ ಲಕ್ಷ್ಮೀ ಹಾಗೂ ಶಿಕ್ಷಕವೃಂದಕ್ಕೆ ಹಸ್ತಾಂತರಿಸಿ ಮಾತನಾಡಿ, ಶಾಲಾ ಮಕ್ಕಳಿಗೆ ಇದು ಅನುಕೂಲವಾಗಲಿದೆ ಎಂದು ಶುಭ ಹಾರೈಸಿದರು. ಎಸ್.ಡಿ.ಎಂ.ಸಿ. ಅಧ್ಯಕ್ಷ ಹರೀಶ್ ಮಾಂಬಾಡಿ ಜೋಡುಮಾರ್ಗ ಜೇಸಿಯ ಕೊಡುಗೆಗೆ ಕೃತಜ್ಞತೆ ಸಲ್ಲಿಸಿದರು.ಈ ಸಂದರ್ಭ ಜೇಸಿ ವಲಯಾಧ್ಯಕ್ಷ ಅಭಿಲಾಷ್ ಬಿ.ಎ, ವಲಯ ಉಪಾಧ್ಯಕ್ಷರಾದ ರಂಜಿತ್ ಎಚ್.ಡಿ, ವಲಯ ನಿರ್ದೇಶಕ ಅಜಿತ್ ರೈ, ವಿಘ್ನೇಶ್ ಪ್ರಸಾದ್ ರಾವ್, ಕಾಶಿನಾಥ್ ಗೋಗಟೆ, ವಲಯ ಸಂಯೋಜಕರಾದ ಸುಮಾ ಆಚಾರ್ಯ, ವಿನೀತ್ ಶಗ್ರಿತ್ತಾಯ, ಮಂಜುನಾಥ್, ಪ್ರಚಿತ್, ಗಾಯತ್ರಿ ಲೋಕೇಶ್, ಜೋಡುಮಾರ್ಗ ಜೇಸಿ ಅಧ್ಯಕ್ಷೆ ತೃಪ್ತಿ, ಪಿ, ನಿಕಟಪೂರ್ವಾಧ್ಯಕ್ಷ ಎಂ.ಸುಬ್ರಹ್ಮಣ್ಯ ಪೈ, ಪೂರ್ವಾಧ್ಯಕ್ಷರಾದ ಅಹಮದ್ ಮುಸ್ತಾಫ, ಜೋಡುಮಾರ್ಗ ಜೇಸಿಯ ನಿಕೇಶ್ ಕೆ, ಕಿಶೋರ್, ಸಮತಾ ಕಿಶೋರ್, ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆ ವಿನೋದಾ, ಹಿರಿಯ ಶಿಕ್ಷಕರಾದ ತಾಹಿರಾ, ಸುಶೀಲಾ, ಹೇಮಾವತಿ, ಶಿಕ್ಷಕರಾದ ನಿಶ್ಮಿತಾ, ಪೂರ್ಣಿಮಾ,…

Read More

ಬಂಟ್ವಾಳ: ಪುರತನ ದೈವ ಕ್ಷೇತ್ರವಾಗಿರುವ ಸಜೀಪಮಾಗಣೆಯ ಮಿತ್ತಮಜಲು ಕ್ಷೇತ್ರ ಅಂದಾಜು 2 ಕೋಟಿ ರೂಪಾಯಿ ವೆಚ್ಚದಲ್ಲಿ ನವೀಕರಣಗೊಳ್ಳುತ್ತಿದ್ದು 3 ಗೋಪುರಗಳ ಪುನರ್ ನಿರ್ಮಾಣ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದೆ ಎಂದು ಸಜೀಪಮಾಗಣೆಯ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್ ಹೇಳಿದರು.ಅವರು ಭಾನುವಾರ ಮಾರ್ನಬೈಲು ಶ್ರೀ ಅಯ್ಯಪ್ಪ ಮಂದಿರದಲ್ಲಿ ನಡೆದ ಸಜೀಪ ಮಾಗಣೆಯ ಮಿತ್ತಮಜಲು ಶ್ರೀ ನಡಿಯೇಲು ದೈಯ್ಯಂಗುಲು, ಶ್ರೀ ಉಳ್ಳಾಲ್ತಿ ಹಾಗೂ ಶ್ರೀ ನಾಲ್ಕೈತ್ತಾಯ ಹಾಗೂ ಪರಿವಾರ ದೈವಗಳ ಕ್ಷೇತ್ರದ ನವೀಕೃತ ಗೋಪುರಗಳ ಲೋಕಾರ್ಪಣೆ, ಸಾನಿಧ್ಯ ಕಲಶಾಧಿ ಕಾರ್ಯಕ್ರಮಗಳ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ ಮಾತನಾಡಿದರು. ಎ. 2 ಮತ್ತು 3 ರಂದು ಈ ಕಾರ್ಯಕ್ರಮಗಳು ನಡೆಯಲಿದ್ದು ಹೊರೆಕಾಣಿಕೆ, ಅನ್ನದಾನ ಸ್ವಚ್ಚತೆಯ ಕಾರ್ಯದಲ್ಲಿ ಗ್ರಾಮಸ್ಥರೆಲ್ಲರೂ ಸಕ್ರಿಯವಾಗಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ವಿನಂತಿಸಿದರು. ಇದೇ ಸಂದರ್ಭ ಅವರು ಅಯ್ಯಪ್ಪ ಮಂದಿರದ ಅಭಿವೃದ್ಧಿ ಮತ್ತು ಭೂಮಿ ಖರೀದಿ ಸಂಕಲ್ಪದ ಸಾಕಾರಕ್ಕಾಗಿ ಶ್ರೀ ದೇವರಿಗೆ ೧೮ ಗುರುವಾರಗಳ ಪರ್ಯಂತ ನಡೆಯಲಿರುವ ಪಂಚಾರತಿ ಸೇವೆಯ ಆಮಂತ್ರಣ ಬಿಡುಗಡೆಗೊಳಿಸಿದರು. ಹೊರೆಕಾಣಿಕೆ ಸಮರ್ಪಣೆ…

Read More

ಬಂಟ್ವಾಳ: ಜೆಸಿಐ ಬಂಟ್ವಾಳದ ವತಿಯಿಂದ ಪಲ್ಲಮಜಲುವಿನಲ್ಲಿ ನಿರ್ಮಾಣಗೊಂಡ ಕಮಲಜ್ಜಿಯ ಕುಟೀರವನ್ನು ಜೆಸಿಐ ಭಾರತದ ರಾಷ್ಟ್ರೀಯ ಉಪಾಧ್ಯಕ್ಷ ಜಿ. ಸೂರ್ಯನಾರಾಯಣ ವರ್ಮ‌ ಉದ್ಘಾಟಿಸಿ ಕಮಲಜ್ಜಿಗೆ ಹಸ್ತಾಂತರಿಸಿದರು. ಈ ಸಂದರ್ಭ ಮಾತನಾಡಿದ ಅವರು ಜೆಸಿಐ ಬಂಟ್ವಾಳದ ಸದಸ್ಯರು ಅಗತ್ಯ ಹಾಗೂ ಅರ್ಥಪೂರ್ಣ ಯೋಜನೆಯನ್ನು ಅನುಷ್ಠಾನಗೊಳಿಸಿದ್ದಾರೆ. ಸಮಾಜದ ದುರ್ಬಲರಿಗೆ, ಅಶಕ್ತರಿಗೆ ಉಪಯೋಗವಾಗುವ ಕಾರ್ಯಕ್ರಮ ಹಮ್ಮಿಕೊಳ್ಳುವುದು ಶ್ರೇಷ್ಠವಾದ. ಕಾರ್ಯ ಅದನ್ನು ಜೆಸಿಐ ಬಂಟ್ವಾಳ ಮಾಡಿದೆ. ಈ ಯೋಜನೆ ತುಂಬಾ ಇಷ್ಟವಾಗಿದ್ದು ಇಂತಹ ಸೇವಾ ಕಾರ್ಯವನ್ನು ಮುಂದುವರೆಸಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ವಲಯಾಧ್ಯಕ್ಷ ಅಭಿಲಾಷ್ ಬಿ.ಎ. ಮಾತನಾಡಿ ಜೆಸಿಐ ಬಂಟ್ವಾಳದ ಶಾಶ್ವತ ಯೋಜನೆ ವೃದ್ದ ಮಹಿಳೆಗೆ ಆಸರೆಯಾಗಿದೆ. ಇದೊಂದು ಅತ್ಯುತ್ತಮ ಕಾರ್ಯ ಎಂದು ತಿಳಿಸಿದರು.ಕಾರ್ಮೆಲ್ ಪದವಿ ಕಾಲೇಜಿನ ಪ್ರಾಂಶುಪಾಲೆ ವಂ.ಭ.ಡಾ. ಲತಾ ಫೆರ್ನಾಂಡೀಸ್ ಅನಿಸಿಕೆ ವ್ಯಕ್ತಪಡಿಸಿ ಯುವ ಸಮುದಾಯಕ್ಕೆ ಪ್ರೇರಣೆ ನೀಡುವಂತಹ ಕೆಲಸವನ್ನು ಜೆಸಿಐ ಬಂಟ್ವಾಳ ಮಾಡಿದೆ. ಬಡವರ, ಹಿರಿಯ ಜೀವಗಳ ಕಣ್ಣೊರೆಸುವ ಕಾರ್ಯವನ್ನು ಮುಂದುವರೆಸಿ ಎಂದು ಆಶಿಸಿದರು. ಜೆಸಿಐ ಬಂಟ್ವಾಳದ ಅಧ್ಯಕ್ಷ ಗಣೇಶ್ ಕೆ. ಕುಲಾಲ್ ಅಧ್ಯಕ್ಷತೆ ವಹಿಸಿದ್ದರು.…

Read More

ಬಂಟ್ವಾಳ: ಹಳದಿ ಬಣ್ಣದ ಕಲ್ಲಂಗಡಿ ಹಣ್ಣುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು ಜನಾಕರ್ಷಣೆ ಪಡೆದುಕೊಂಡಿದೆ. ಹಸಿರು ಬಣ್ಣದ ತೈವಾನ್ ಕಲ್ಲಂಗಡಿಗಳ ಮಧ್ಯೆ ಹಳದಿ ಬಣ್ಣದ ಕಲ್ಲಂಗಡಿ ಗ್ರಾಹಕರ ಗಮನ ಸೆಳೆಯುತ್ತಿದೆ. ಹಸಿರು ಕಲ್ಲಂಗಡಿ ಕೆಜಿಗೆ ೨೦ ರೂ.ಗೆ ಮಾರಾಟವಾಗುತಿದ್ದರೆ ಹಳದಿ ಕಲ್ಲಂಗಡಿಗೆ ಕೆಜಿಗೆ ೩೦ ರೂಪಾಯಿ ಇದೆ. ಬಣ್ಣದ ಆಕರ್ಷಣೆಯಿಂದ ಜನರು ಎರಡೂ ಬಣ್ಣದ ಕಲ್ಲಂಗಡಿಯನ್ನು ಮನೆಗೆ ಒಯ್ಯುತ್ತಿದ್ದಾರೆ. —

Read More