Author: admin
ಬಂಟ್ವಾಳ: ಗ್ರಾಮೀಣ ಭಾಗದ ರೈತರಿಗೆ ವರದಾನವಾಗಿರುವ ಸಜೀಪ ಮುನ್ನೂರು ಹಾಗೂ ಸಜೀಪ ಮೂಡ ಏತ ನೀರಾವರಿ ಯೋಜನೆಗಳ ಪೈಪ್ ಲೈನ್ ವಿಸ್ತರಣೆಗೆ ತಲಾ ರೂ. 23 ಲಕ್ಷ ಅನುದಾನ ಮಂಜೂರಾಗಿದೆ. ಈ ಎರಡು ಏತ ನೀರಾವರಿ ಯೋಜನೆಗಳು 90 ಹೆಚ್ ಪಿ ಪಂಪ್ ಸೆಟ್ ಗಳ ಮೂಲಕ ರೈತರಿಗೆ ನೆತ್ರಾವತಿ ನದಿಯಿಂದ ನೀರಾವರಿ ಸೌಲಭ್ಯ ಒದಗಿಸುತ್ತಿದ್ದು ಇದೀಗ ಸ್ಥಳೀಯ ರೈತರ ಬೇಡಿಕೆಯಂತೆ ಹೆಚ್ಚುವರಿ ಜಮೀನುಗಳಿಗೆ 200 ಎಂ.ಎಂ ಪೈಪ್ ಲೈನ್ ಮೂಲಕ ಕೃಷಿ ಚಟುವಟಿಕೆಗಳಿಗೆ ನೀರಾವರಿ ಸೌಲಭ್ಯ ವಿಸ್ತರಣೆಯಾಗಲಿದೆ. ಇತ್ತೀಚೆಗೆ ಏತನೀರಾವರಿ ಯೋಜನೆಯ ಫಲಾನುಭವಿಗಳು ಮಾಜಿ ಸಚಿವ ರಮಾನಾಥ ರೈ ಯವರ ನೇತೃತ್ವದಲ್ಲಿ ಸಜೀಪಮುನ್ನೂರು ಗ್ರಾಮದ ಮಡಿವಾಳ ಪಡ್ಪು ಕೂಸನಕಟ್ಟೆ ಯ ಪಂಪ್ ಹೌಸ್ ಬಳಿ ಸಭೆ ನಡೆಸಿ ಏತ ನೀರಾವರಿಯ ಸೌಲಭ್ಯವನ್ನು ವಿಸ್ತರಿಸುವಂತೆ ಬೇಡಿಕೆಯನ್ನು ಮುಂದಿಟ್ಟಿದ್ದರು. ತಕ್ಷಣ ಸ್ಪಂದಿಸಿದ ಮಾಜಿ ಸಚಿವ ಬಿ.ರಮಾನಾಥ ರೈ ರೈತರ ಬೇಡಿಕೆಯನ್ನು ಸರ್ಕಾರದ ಗಮನಕ್ಕೆ ತಂದು ತ್ವರಿತವಾಗಿ ಅನುದಾನ ಒದಗಿಸುವಲ್ಲಿ ಸಹಕರಿಸಿದ್ದಾರೆ. ರೈತರ ಬೇಡಿಕೆಗೆ…
ಬಂಟ್ವಾಳ: ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ಬಂಟ್ವಾಳ ವಲಯವು ಕಾರ್ಕಳ ದಲ್ಲಿ ನಡೆದ ಜಿಲ್ಲಾ ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆ ಯಲ್ಲಿ ಪ್ರಥಮ ಸ್ಥಾನ ವನ್ನು ಗೆದ್ದುಕೊಂಡಿದೆ. ಈ ಕ್ರೀಡಾಕೂಟ ದಲ್ಲಿ 14 ವಲಯದ ತಂಡಗಳು ಭಾಗವಹಿಸಿದ್ದು ಬಂಟ್ವಾಳ ವಲಯ ಚಾಂಪಿಯನ್ ಆಗಿದೆ
ಗ್ಯಾಸ್ ವಿತರಣೆಯಲ್ಲಿ ಸಮಸ್ಯೆಗಳು ಇರುವ ಕುರಿತು ಸುದ್ದಿಗಳು ಹರಡುತ್ತಿರುವ ಹಿನ್ನೆಲೆಯಲ್ಲಿ ಬಂಟ್ವಾಳ ಭದ್ರಾ ಏಜನ್ಸಿಸ್ ನ ಭಾರತ್ ಗ್ಯಾಸ್ ವಿತರಕರಾದ ಮಂಜುನಾಥ ಆಚಾರ್ಯ ಸ್ಪಷ್ಟನೆಯನ್ನು ನೀಡಿದ್ದಾರೆ ವದಂತಿಗಳಿಗೆ ಗ್ರಾಹಕರು ತಲೆಕೆಡಿಸಿಕೊಳ್ಳುವುದು, ಭೀತಿಪಡುವುದು ಅಗತ್ಯವಿಲ್ಲ. ಎಂದಿನಂತೆ ಸಮಯಕ್ಕೆ ತಲುಪಿಸಲಾಗುತ್ತದೆ ಮನೆಗಳು, ಶಾಲೆಗಳು ಮತ್ತು ಆಸ್ಪತ್ರೆಗಳಿಗೆ ಪೂರೈಕೆ ಸಾಮಾನ್ಯವಾಗಿದೆ. ನಿಮಗೆ ಅಗತ್ಯವಿರುವಾಗ ಮಾತ್ರ ಬುಕ್ ಮಾಡಿ, ಮತ್ತು ಗ್ಯಾಸ್ ಸಿಲಿಂಡರ್ ನಿಮಗೆ ಸಮಯಕ್ಕೆ ತಲುಪುತ್ತದೆ ಎಂದು ಅವರು ತಿಳಿಸಿದ್ದಾರೆ.
ಮಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮಂಗಳೂರಿನ ಮೇರಿಹಿಲ್ ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಡಿ.ದೇವರಾಜ ಅರಸು ಮೆಟ್ರಿಕ್ ನಂತರರ ಬಾಲಕಿಯರ ನಿಲಯದ ರಜತ ಸಂಭ್ರಮದ ಹಾಸ್ಟೇಲ್ ಡೇ ಅಗಮ್ಯ-2026 ಕಾರ್ಯಕ್ರಮ ವಿಜ್ರಂಭಣೆಯಿಂದ ನಡೆಯಿತು. ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ವಿಶ್ವದಾಖಲೆ ಬರೆದ ಮಂಗಳೂರಿನ ಪ್ರತಿಭಾವಂತ ಭರತನಾಟ್ಯ ಪಟು ರೆಮೋನಾ ಎವೆಟ್ ಪಿರೇರಾ ಕಾರ್ಯಕ್ರಮ ಉದ್ಘಾಟಿಸಿದರು. ಅವರು ಮಾತನಾಡಿ ನಮ್ಮ ಕನಸನ್ನು, ನಾವು ಮಾಡುವ ಕಾರ್ಯವನ್ನು ಪ್ರೀತಿಸಬೇಕು ಎಂದರು ನೀವು ಪ್ರತಿಯೊಬ್ಬರು ಪ್ರತಿಭಾನ್ವಿತರು. ಅಸಾಧ್ಯ ಎನ್ನುವುದು ಯಾವುದೂ ಇಲ್ಲ. ನಿರಂತರ ಪ್ರಯತ್ನ ಹಾಗೂ ಬದ್ಧತೆಯಿಂದ ಕೆಲಸ ಮಾಡಿದಾಗ ಸಾಧನೆ ಮಾಡಲು ಸಾಧ್ಯ ಆದ್ದರಿಂದ ಎಂದಿಗೂ ನಿಮ್ಮ ಪ್ರಯತ್ನವನ್ನು ಬಿಡಬೇಡಿ ಎಂದು ನಿಲಯದ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ನಂದಿಕೂರು ಎಜುಕೇಷನ್ ಟ್ರಸ್ಟ್ ನ ಆಡಳಿತಾಧಿಕಾರಿ ಸಾಯಿನಾಥ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ಜೀತ ವಿಮುಕ್ತಿಗಾಗಿ ಶ್ರಮಿಸಿದವರು,…
ಬಂಟ್ವಾಳ : ಜಿಲ್ಲೆಯ ಕಾರಣಿಕ ದೈವಸ್ಥಾನ ತಾಲೂಕಿನ ಸಜೀಪಮೂಡ ಗ್ರಾಮದ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಮಾರ್ಚ್ ತಿಂಗಳಿನಲ್ಲಿ ತಾ,17,20, 22, 24,ರಂದು ಅಗೇಲು ಸೇವೆ ಇರುವುದಿಲ್ಲ. ತಾ, 27.29.31 ಅಗೇಲು ಸೇವೆ ನಡೆಯುತ್ತದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.
ಬಂಟ್ವಾಳ: ಪಾಣೆಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಬೈಕ್ ಗಳ ಮಧ್ಯೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಬೆಳಿಗ್ಗೆ ಮೃತಪಟ್ಟ ಘಟನೆ ನಡೆದಿದೆ. ಸ್ಥಳೀಯ ನಾಟಿ ನಿವಾಸಿ ರಕ್ಷಿತ್ ಶೆಟ್ಟಿ ಮೃತ ಬೈಕ್ ಸವಾರನಾಗಿದ್ದಾನೆ. ಪಾಣೆಮಂಗಳೂರಿನಲ್ಲಿ ಎರಡು ಬೈಕ್ ಗಳ ಮಧ್ಯೆ ಶುಕ್ರವಾರ ರಾತ್ರಿ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ರಕ್ಷಿತ್ ಶೆಟ್ಟಿಯವರಿಗೆ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಆದರೆ ದೇಹ ಚಿಕಿತ್ಸೆಗೆ ಸ್ಪಂಧಿಸದೆ ಕೊನೆಯುಸಿರೆಳೆದಿರುವುದಾಗಿ ತಿಳಿದು ಬಂದಿದೆ. ಮೃತ ರಕ್ಷಿತ್ ಪಾಣೆಮಂಗಳೂರು ಬಳಿಯ ನಾಟಿ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು ವಿಡಿಯೋಗ್ರಾಫರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಭಾನುವಾರ ಅವರ ಮಗಳ ಹುಟ್ಟುಹಬ್ಬವಿದ್ದು ಮನೆಮಂದಿ ಸಿದ್ದತೆ ನಡೆಸಿದ್ದರು. ಈ ನಡುವೆ ಈ ದುರ್ಘಟನೆ ಮನೆ ಮಂದಿಯನ್ನು ಕಂಗೆಡಿಸಿದೆ. ಇವರ ಸಹೋದರ ರಂಜಿತ್ ಶೆಟ್ಟಿ ಕೆಲ ವರ್ಷಗಳ ಹಿಂದೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಸೊಂಟದ ಕೆಳಭಾಗ ಬಲಹೀನರಾಗಿ…
ಬಂಟ್ವಾಳ : ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ವಿದ್ಯಾರ್ಥಿನಿ ಭಾರ್ಗವಿ ಯು.ಎಸ್ ಅವರು ಮಂಗಳೂರು ವಿಶ್ವವಿದ್ಯಾನಿಲಯದ ಎಂ.ಕಾಂ ಪರೀಕ್ಷೆಯಲ್ಲಿ 7ನೇ ರ್ಯಾಂಕ್ ಪಡೆಯುವ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ. ಇವರು ಪುಂಜಾಲಕಟ್ಟೆಯ ನಿವಾಸಿ ಉಮಾನಾಥ್ ಮತ್ತು ಶ್ರೀಲತಾ ಎಂ.ಜೆ ದಂಪತಿಯ ಪುತ್ರಿಯಾಗಿದ್ದು, ಕಳೆದ ಬಾರಿಯ ಕೆ-ಸೆಟ್ (ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ) . ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ 97ನೇ ರ್ಯಾಂಕ್ ಪಡೆದು ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಹರಾಗಿದ್ದರು.
ಬಂಟ್ವಾಳ: ಇಲ್ಲಿನ ಫರಂಗಿಪೇಟೆಯ ಬಳಿಯ ಕುಂಪನಮಜಲುವಿನಲ್ಲಿ ಶ್ರೀ ದುರ್ಗಾಪರಮೇಶ್ವರೀ ವಾರಾಹಿ ಅಮ್ಮನವರ ಕ್ಷೇತ್ರದ ಜೀಣೋದ್ಧಾರದ ಪ್ರಯುಕ್ತ ಭೂಮಿ ಪೂಜೆ ಗುರುವಾರ ನಡೆಯಿತು. ವಾಸ್ತುಶಿಲ್ಪಿ ರಮೇಶ್ ಕಾರಂತ ಅವರ ನೇತೃತ್ವದಲ್ಲಿ, ಸುಜೀರು ಗಣೇಶ್ ಭಟ್ ಅವರ ಪೌರೋಹಿತ್ಯದಲ್ಲಿ, ಧರ್ಮದರ್ಶಿ ಅರ್ಕುಳ ಬೀಡು ವಜ್ರನಾಭ ಶೆಟ್ಟಿಯವರು ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭ ಸದಾನಂದ ಆಳ್ವ ಕಂಪ, ಶ್ರೀಮಂತ ರಾಜಗುಳಿಗ ಕ್ಷೇತ್ರದ ಧರ್ಮದರ್ಶಿ ಸತೀಶ್ ಬಂದಲೆ, ಶ್ರೀ ದುರ್ಗಾಪರಮೇಶ್ವರೀ ವಾರಾಹಿ ಅಮ್ಮನವರ ಸೇವಾ ಟ್ರಸ್ಟ್ ಅಧ್ಯಕ್ಷ ರಜತ್ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕುಮಾರ್ ಮಲೆಮಾರ್, ಧರ್ಮದರ್ಶಿ ಸುನೀಲ್ ಕುಮಾರ್, ಸೇವಾ ಟ್ರಸ್ಟ್ನ ಪದಾಧಿಕಾರಿಗಳು, ಸದಸ್ಯರು, ಜೀರ್ಣೊದ್ಧಾರ ಸಮಿತಿ ಪದಾಧಿಕಾರಿಗಳು, ಸದಸ್ಯರು ಹಾಗೂ ಭಕ್ತಾದಿಗಳು ಭಾಗವಹಿಸಿದ್ದರು. ಕುಂಪಣಮಜಲು ಕುಚ್ಚೂರು ಸ್ಥಳದಲ್ಲಿ ಅನಾದಿಕಾಲದಿಂದಲೂ ಋಷಿಮುನಿಗಳು ದೇವಿಶಕ್ತಿಯನ್ನು ಆರಾಧಿಸಿಕೊಂಡು ಬರುತ್ತಿದ್ದರು. ನಂತರದ ಯುಗದಲ್ಲಿ ವಾಸವಾಗಿದ್ದ ಆದಿವಾಸಿ ಕಾಡ ಜನಾಂಗದವರು ಶಕ್ತಿಯನ್ನು ಆರಾಧಿಸಿಕೊಂಡು ಬರುತ್ತಿದ್ದರು. ಕಾಲಕ್ರಮೇಣ ಗಿರಿಜಾ ಎಂಬವರು ತಮ್ಮ ಮನೆಯಲ್ಲಿ ಶ್ರೀ ದುರ್ಗಾಪರಮೇಶ್ವರೀ ವಾರಾಹಿ ಅಮ್ಮನವರನ್ನು…
ಬಂಟ್ವಾಳ: ಸಹಕಾರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುವುದರೊಂದಿಗೆ ಇತರ ಕ್ಷೇತ್ರಗಳಲ್ಲೂ ಸಹಕಾರ ಕ್ಷೇತ್ರವನ್ನು ಪಸರಿಸಿಕೊಂಡು, ಆರೋಗ್ಯ ಶಿಕ್ಷಣ, ಮತ್ತಿತರ ಕ್ಷೇತ್ರದಲ್ಲಿ ಸಲ್ಲಿಸಿದ ಸಮಾಜ ಸೇವೆಯನ್ನು ಪರಿಗಣಿಸಿ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭುರವರನ್ನು ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್( ರಿ ). ಪುಂಜಾಲಕಟ್ಟೆ ಇವರ ವತಿಯಿಂದ ಜರಗಿದ ಸಾಮೂಹಿಕ ವಿವಾಹ ಸಂದರ್ಭದಲ್ಲಿ ಕೊಡಮಾಡುವ ರಾಜ್ಯ ಮಟ್ಟದ ಸ್ವಸ್ತಿಕ್ ಸಂಭ್ರಮ ಪುರಸ್ಕಾರ 2026 ನೀಡಿ ಗೌರವಿಸಲಾಯಿತು. ಸಮಾರಂಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪಾಡಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ರವಿಶಂಕರ್ ಶೆಟ್ಟಿ ಬಡಾಜೆಗುತ್ತು,ಸ್ವಸ್ತಿಕ್ ಪ್ರೆಂಡ್ಸ್ ಕ್ಲಬ್ ಸ್ಥಾಪಕಾಧ್ಯಕ್ಸ ಎಂ. ತುಂಗಪ್ಪ ಬಂಗೇರ, ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಬಿಜೆಪಿ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್, ಬಿಜೆಪಿ ಮುಖಂಡರಾದ ಸಂದೇಶ ಶೆಟ್ಟಿ,ಪ್ರಮುಖರಾದ ಹರೀಂದ್ರ ಪೈ, ವಾಲ್ಟರ್ ನಂದಳಿಕೆ, ಕಿರಣ್ ಚಂದ್ರ ಪುಷ್ಪಗಿರಿ, ಜಗನ್ನಾಥ ಶೆಟ್ಟಿ ಪುನೀತ್ ಕುಮಾರ್, ಶಾರದಾ, ಗೀತಾ ಹೆಗ್ಡೆ, ಅಬ್ದುಲ್ ಹಮೀದ್,ಮೋಹನ್ ಶೆಟ್ಟಿ, ಹೇಮಂತ್ ಕುಮಾರ್, ಸತೀಶ್…
ಬಂಟ್ವಾಳ: ಶರ್ವಾ ಣಿ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ,ನಿ. ಬಿ.ಸಿ.ರೋಡ್ ಇದರ ಪ್ರಥಮ ವಾರ್ಷಿಕ ಕಾರ್ಯಕ್ರಮ ಮಾರ್ಚ್ 6 ಶುಕ್ರವಾರದಂದು ಬಿ.ಸಿ.ರೋಡಿನ, ವಿವೇಕನಗರದ ಶಕ್ತಿ ಕಂಪೌಂಡ್ ನಲ್ಲಿ ನೆರವೇರಿತು. ಬಾಲಕೃಷ್ಣ ಪ್ರಭು ಮತ್ತು ಜಯಲಕ್ಷ್ಮಿ ಪ್ರಭು ದೀಪ ಪ್ರಜ್ವಲಿಸಿದರು. ಬಳಿಕ ಶ್ರೀ ದೇವಿ ನೃತ್ಯಾರಾಧನಾ ಕಲಾ ಕೇಂದ್ರ (ರಿ) ಪುತ್ತೂರು ಇಲ್ಲಿನ ವಿದ್ಯಾರ್ಥಿಗಳಿಂದ ಭರತನಾಟ್ಯ ಮತ್ತು ಸಂಗೀತ ಕಾರ್ಯಕ್ರಮ ನಡೆಯಿತು. ಸಂಜೆ ನಡೆದ ಸಭಾಕಾರ್ಯಕ್ರಮದಲ್ಲಿ ಸಹಕಾರಿ ಸಂಘದ ಅಧ್ಯಕ್ಷರಾದ ರೋಹಿಣಿ ಉದಯ್ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ದ. ಕ ಜಿಲ್ಲಾ ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ ನಿ ಬಂಟ್ವಾಳ. ಇದರ ಅಧ್ಯಕ್ಷ ಸುಭಾಶ್ಚಂದ್ರ ಜೈನ್ ಮತ್ತು ಅಪೂರ್ವ ಜ್ಯುವೆಲ್ಲರ್ಸ್ ಬಿ.ಸಿ.ರೋಡ್, ಇದರ ಮಾಲೀಕರಾದ ಸುನೀಲ್ ಬಿ. ಭಾಗವಹಿಸಿ ಶುಭ ಹಾರೈಸಿದರು. ಸಹಕಾರಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಉದಯ ವೆಂಕಟೇಶ್ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ ಒಂದು ವರ್ಷದಲ್ಲಿ ಸಹಕಾರಿಯ ಅಭಿವೃದ್ಧಿಯ ಬಗ್ಗೆ ವಿವರಿಸಿದರು. ಒಂದು ವರ್ಷದಲ್ಲಿ ಸಹಕಾರಿಯ ಅಭಿವೃದ್ಧಿಯಲ್ಲಿ…








