Author: admin

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಹಾಗೂ ರೋಟರಿ ಆನ್ಸ್ ಕ್ಲಬ್ ವತಿಯಿಂದ ಬೊಂಡಾಲದ ಸರಕಾರಿ ಪ್ರಾಥಮಿಕ ಶಾಲೆಯ 45 ವಿದ್ಯಾರ್ಥಿಗಳಿಗೆ ಸಮವಸ್ತ್ರ ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭ ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ಬಸ್ತಿ ಮಾಧವ ಶೆಣೈ, ಆನ್ಸ್ ಕ್ಲಬ್ ಅಧ್ಯಕ್ಷೆ ಗೌರಿ ಶೆಣೈ, ರೋಟರಿ ಕ್ಲಬ್ ಬಂಟ್ವಾಳದ ಸದಸ್ಯರಾದ ಕೆ. ನಾರಾಯಣ ಹೆಗ್ಡೆ, ಪ್ರತಿಭಾ ಎ. ರೈ, ಶಾಲಾ ಮುಖ್ಯೋಪಾಧ್ಯಾಯಿನಿ ರೇಖಾ, ಎಸ್‌ಡಿಎಂಸಿ ಅಧ್ಯಕ್ಷ ಜನಾರ್ದನ ಕುಲಾಲ್ ಬೊಂಡಾಲ, ಹಿರಿ ವಿದ್ಯಾರ್ಥಿ ವಿನೋದ್ ಶೆಟ್ಟಿ, ಬೊಂಡಾಲ, ವಸಂತ್ ಅಂಚನ್, ವಿದ್ಯಾರ್ಥಿಗಳ ಪೋಷಕರು ಮತ್ತು ಶಿಕ್ಷಕರು ಉಪಸ್ಥಿತರಿದ್ದರು.

Read More

ಬಂಟ್ವಾಳ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಂಗಳೂರು, ಜ.ಕೆ.ಎಸ್. ಹೆಗ್ಡೆ ಚಾರಿಟೆಬಲ್ ಆಸ್ಪತ್ರೆ ಮಂಗಳೂರು ಇದರ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ‌ ಉಚಿತ ಆರೋಗ್ಯ ತಪಾಸಣಾ ಶಿಬಿರ ಫರಂಗಿಪೇಟೆಯ ಸೇವಾಂಜಲಿ ಸಭಾಗ್ರಹದಲ್ಲಿ ಮಂಗಳವಾರ ಬೆಳಿಗ್ಗೆ ನಡೆಯಿತು. ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ಕಾರ್ಯಕ್ರಮ ಉದ್ಘಾಟಿಸಿದರು. ಅವರು ಮಾತನಾಡಿ ಪರಿಸರ ಸಂರಕ್ಷಣೆ ನಮ್ಮೆಲರ ಆದ್ಯ ಕರ್ತವ್ಯವಾಗಿದ್ದು ಜನರಲ್ಲಿ ಜಾಗೃತಿಯ ಪ್ರಜ್ಞೆ ಮೂಡಿಸುವ ಇಂತಹ ಕಾರ್ಯಕ್ರಮ ಪ್ರಸ್ತುತವಾಗಿದೆ. ಗಿಡಗಳನ್ನು ನೆಡುವುದರ ಜೊತೆಗೆ ಅವುಗಳ ಪಾಲನೆಯ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಮೂಲಕ ಪರಿಸರ ಸಂರಕ್ಷಣೆಗೆ ನಮ್ಮ ಕೊಡುಗೆಯನ್ನು ನೀಡಬೇಕು ಎಂದರು. ಮೊಡಂಕಾಪು ದೀಪಿಕಾ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಮಹಾಬಲೇಶ್ವರ ಹೆಬ್ಬಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಮರದ ಮೇಲೆ ಕುಳಿತು ಬುಡ ಕಡಿಯುವ ಕಾಳಿದಾಸನ ಕತೆಯಂತೆ ಪ್ರಕೃತಿಯ ಮೇಲೆ ಹಾಕುವ ಒಂದೊಂದು ಕೊಡಲಿ ಪೆಟ್ಟು ನಮ್ಮ ಜೀವನಕ್ಕೆ ಹಾಕುತ್ತಿರುವ ಕೊಡಲಿ ಏಟು ಎನ್ನುವುದನ್ನು ನಾವು ಮರೆಯುತ್ತಿದ್ದೇವೆ ಎಂದರು. ಸೇವಾಂಜಲಿ ದಂತ…

Read More

ಬಂಟ್ವಾಳ: ಜೆಸಿಐ ಬಂಟ್ವಾಳದ ವತಿಯಿಂದ ಕೊಳಲು ವಾದಕ ಶಿವಪ್ರಸಾದ್ ಬಿ.ಸಿ.ರೋಡು, ಮಹಿಳಾ ಉದ್ಯಮಿ ಸುಹಾಸಿನಿ ವಿಶ್ವನಾಥ ಆಚಾರ್ಯ ಹಾಗೂ ಕೇಬಲ್ ಸಂಸ್ಥೆಯ ಸಿಬ್ಬಂದಿ ಆಶಾಲತಾ ಅವರಿಗೆ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಪುರಸ್ಕಾರ ನೀಡಿ ಗೌರವಿಸಲಾಯಿತು. ಈ ಸಂದರ್ಭ ಜೆಸಿಐ ಬಂಟ್ವಾಳದ ಅಧ್ಯಕ್ಷ ಕಿಶೋರ್ ಕುಮಾರ್ ಆಚಾರ್ಯ, ಕಾರ್ಯದರ್ಶಿ ಕಿರಣ್ ಕುಮಾರ್, ಉಪಾಧ್ಯಕ್ಷ ಶ್ರೀನಿವಾಸ್ ಅರ್ಬಿಗುಡ್ಡೆ, ಲೇಡಿ ಜೆಸಿ ಸಂಯೋಜಕಿ ಅನುಷಾ ಕಿಶೋರ್, ಪೂರ್ವಾಧ್ಯಕ್ಷರಾದ ಲೋಕೇಶ್ ಸುವರ್ಣ, ಸದಾನಂದ ಬಂಗೇರ, ರಾಜೇಂದ್ರ ಕೆ. ಉಪಸ್ಥಿತರಿದ್ದರು.

Read More

ಬಂಟ್ವಾಳ: ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ಬಂಟ್ವಾಳ ವಲಯದ ವತಿಯಿಂದ ಕೈಕಂಬದಲ್ಲಿರುವ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾರತ ಸರಕಾರ ದ ನಿಕ್ಷಯ್ ಮಿತ್ರ ಯೋಜನೆಯಡಿಯಲ್ಲಿನ ಕ್ಷಯ ರೋಗಿಗೆ ಪೌಷ್ಟಿಕ ಆಹಾರ ಸಾಮಗ್ರಿಯನ್ನು ನೀಡಲಾಯಿತು. ಈ ಸಂಧರ್ಭದಲ್ಲಿ ವಲಯದ ಅಧ್ಯಕ್ಷ ರಾಜೇಂದ್ರ ಕೆ. ವೈದ್ಯಧಿಕಾರಿ ಡಾ. ಅಶ್ವಿನಿ ಬಾಲಕೃಷ್ಣ, ಮಾಜಿ ಅಧ್ಯಕ್ಷ ಹರೀಶ್ ಕುಂದರ್, ಗೌರವಾಧ್ಯಕ್ಷ ಕಿಶೋರ್, ಕಾರ್ಯದರ್ಶಿ ರವಿ ಕಲ್ಪನೆ, ಉಪಾಧ್ಯಕ್ಷ ಹರೀಶ್ ನಾಟಿ, ಕೋಶಾಧಿಕಾರಿ ಕೃಷ್ಣ ರಾಜ್ ರಾವ್, ಛಾಯಾ ಕಾರ್ಯದರ್ಶಿ ಪ್ರಶಾಂತ್ ಕಲ್ಲಡ್ಕ ಹಾಗೂ ಆಸ್ಪತ್ರೆ ಯ ಸಿಬ್ಬಂದಿ ಗಳು ಉಪಸ್ಥಿತರಿದ್ದರು

Read More

ಬಂಟ್ವಾಳ: ಪುದು ಗ್ರಾಮದ‌ ಸುಜೀರು ದತ್ತನಗರದಲ್ಲಿರುವ ಶ್ರೀ ವೀರಮಾರುತಿ ಹನುಮಾನ್ ಮಂದಿರದ ವತಿಯಿಂದ‌ ಸ್ಥಳೀಯ ವಿದ್ಯಾರ್ಥಿಗಳ ಶಾಲಾ ಕಲಿಕೆಗೆ ಪೂರಕವಾಗುವ ನಿಟ್ಟಿನಲ್ಲಿ ಆರ್ಥಿಕ ಸಹಾಯವನ್ನು ನೀಡಲಾಯಿತು. ಮಂದಿರದ ವಠಾರದಲ್ಲಿ ಬುಧವಾರ ಬೆಳಿಗ್ಗೆ ನಡೆದ ಕಾರ್ಯಕ್ರಮವನ್ನು ಜಿಲ್ಲಾ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಪೊಳಲಿ ಗಿರಿಪ್ರಕಾಶ್ ತಂತ್ರಿ ವಿದ್ಯಾನಿಧಿಯನ್ನು ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು. ಅವರು ಮಾತನಾಡಿ ಇಂದು ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆಯನ್ನು ಕಾಣುತ್ತಿದ್ದು ವಿದ್ಯಾರ್ಥಿಗಳು ಸಂಸ್ಕಾರವನ್ನು ರೂಢಿಸಿಕೊಂಡು ವಿದ್ಯಾವಂತರಾಗಬೇಕು.‌ ಸ್ಥಳೀಯ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪುಸ್ತಕ ವಿತರಣಾ ಕಾರ್ಯಕ್ತಮವನ್ನು ವೀರ ಹನುಮಾನ್ ಮಂದಿರದ ವತಿಯಿಂದ ನಿರಂತರವಾಗಿ ಹಮ್ಮಿಕೊಂಡು ಬರುತ್ತಿರುವುದು ಅಭಿನಂದನೀಯ ಎಂದರು. ಮಂದಿರದ ಆಡಳಿತ ಸಮಿತಿ ಅಧ್ಯಕ್ಷ ಸುರೇಂದ್ರ ಕಂಬಳಿ ಪ್ರಾಸ್ತವಿಕವಾಗಿ ಮಾತನಾಡಿ ಮಂದಿರ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದ್ದು ಕೆಲವೊಂದು ಯೋಜನೆಗಳನ್ನು ಹಾಕಿಕೊಂಡಿದೆ. ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಪುಸ್ತಕಗಳು ಸಿಗುವ ಕಾರಣ ಈ ವರ್ಷ ಅದರ ಮೌಲ್ಯವನ್ನು ನಗದು ರೂಪದಲ್ಲಿ ನೀಡಲಾಗಿದೆ ಎಂದು ತಿಳಿಸಿದರು. ಕುದ್ರೋಳಿ ಭಗವತಿ ಕ್ಷೇತ್ರದ ಅರ್ಚಕ ಬೀರಣ್ಣ ಆತರ್,…

Read More

ಬಂಟ್ವಾಳ: ಸೆಕ್ಯೂರ್ ಇನ್ಶುರೆನ್ಸ್ ಕನ್ಸಲ್ಟನ್ಸಿ ಇದರ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ “ಗ್ರೀನ್” ರೀಲ್ಸ್ ಕಾಂಟೆಸ್ಟ್ -2026 ಆಯೋಜಿಸಿದೆ. ಸ್ಪರ್ಧಾಳುಗಳು ಪರಿಸರಕ್ಕೆ ಸಂಬಂಧಪಟ್ಟ 60 ನಿಮಿಷದ ವಿಡಿಯೋವನ್ನು ಮಾಡಿ ಕಳುಹಿಸಿಕೊಡುವಂತೆ ಸಂಘಟಕರು ವಿನಂತಿಸಿಕೊಂಡಿದ್ದಾರೆ. ವಿವರಗಳು ಈ ಕೆಳಗಿನಂತಿದೆ: ನಿಯಮಗಳು ಮತ್ತು ಮಾರ್ಗಸೂಚಿಗಳು ಸ್ಪರ್ಧಿಗಳು ಯಾವುದೇ ಔಷಧೀಯ ಸಸಿ ಅಥವಾ ಮರವನ್ನು ಪರಿಚಯಿಸುವ ಅರ್ಥಪೂರ್ಣ ಹಾಗೂ ಸೃಜನಾತ್ಮಕ 60 ಸೆಕೆಂಡ್‌ಗಳ ವೀಡಿಯೊವನ್ನು ತಯಾರಿಸಬೇಕು. ವೀಡಿಯೊದಲ್ಲಿ ಅದರ ಹೆಸರು, ಔಷಧೀಯ ಉಪಯೋಗಗಳು, ಪರಿಸರದ ಮಹತ್ವ ಹಾಗೂ ಮಾನವ ಆರೋಗ್ಯಕ್ಕೆ ಇರುವ ಪ್ರಯೋಜನಗಳನ್ನು ಮಾಹಿತಿ ಪ್ರಧಾನ ಮತ್ತು ಆಕರ್ಷಕ ರೀತಿಯಲ್ಲಿ ವಿವರಿಸಬೇಕು. ಯಾವುದೇ ಭಾಷೆಯ ನಿರ್ಬಂಧ ಇರುವುದಿಲ್ಲ. ಸ್ಪರ್ಧಿಗಳು ತಮ್ಮ ವೀಡಿಯೊದಲ್ಲಿ ಯಾವುದೇ ಭಾಷೆಯನ್ನು ಬಳಸಬಹುದು. ವೀಡಿಯೊದಲ್ಲಿ ಕೆಳಗಿನ ವಿಷಯಗಳನ್ನು ಸ್ಪಷ್ಟವಾಗಿ ವಿವರಿಸಬೇಕು: * ಔಷಧೀಯ ಸಸಿ / ಮರದ ಹೆಸರು * ಔಷಧೀಯ ಉಪಯೋಗಗಳು ಮತ್ತು ಆರೋಗ್ಯ ಲಾಭಗಳು * ಪ್ರಕೃತಿ ಹಾಗೂ ಮಾನವ ಜೀವನದಲ್ಲಿ ಅದರ ಮಹತ್ವ ವೀಡಿಯೊವನ್ನು ಕೇವಲ ಪೋರ್ಟ್ರೇಟ್…

Read More

ಬಂಟ್ವಾಳ: ಮೆಕ್ಯಾನಿಕ್ ಗಳು ಜೀವನದ ಪಯಣವನ್ನು ರೂಪಿಸಬಲ್ಲರು. ವಾಹನಗಳು ನಿಂತರೆ ಚಲನೆಯೇ ನಿಲ್ಲುತ್ತದೆ, ಮೆಕ್ಯಾನಿಕ್‌ಗಳ ಸೇವೆಯಿಂದ ಆ ಚಲನೆ ಮುನ್ನಡೆಯುತ್ತದೆ ಎಂದು ಪ್ರಗತಿಪರ ಕೃಷಿಕ ಪ್ರಕಾಶ್ ಕಾರಂತ್ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಗ್ಯಾರೇಜು ಮಾಲಕರ ಸಂಘ ಇದರ ಬಂಟ್ವಾಳ ವಲಯದ ರಜತ ಸಂಭ್ರಮ ಕಾರ್ಯಕ್ರಮ ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬಂಟ್ವಾಳ ಬಂಟರ ಸಂಘದ ಅಧ್ಯಕ್ಷ ಜಗನ್ನಾಥ ಚೌಟ ಮಾತನಾಡಿ ಗ್ಯಾರೇಜು ಮಾಲಕರು ತಾವು ಮಾಲಕರಾಗಿದ್ದರೂ ಕೆಲಸವನ್ನು ಅರಿತುಕೊಂಡ ಕೆಲಸಗಾರರು. ವೃತ್ತಿ ನಿಷ್ಠೆಯೊಂದಿಗೆ ಸಂಘದ ಸೇವಾಕಾರ್ಯದಲ್ಲೂ ತೊಡಗಿಸಿಕೊಂಡಿರುವುದು ಅಭಿನಂದನೀಯ ಎಂದರು. ಬೂಡ ಮಾಜಿ ಅಧ್ಯಕ್ಷ ಪಿಯೂಸ್ ಎಲ್. ರೋಡ್ರಿಗಸ್ ಮಾತನಾಡಿ ಗ್ಯಾರೇಜು ಮಾಲಕರ ಮಾನವೀಯ ಸೇವೆ ವಿಶಿಷ್ಠವಾದುದು. ಗ್ಯಾರೇಜು ಮಾಲಕರ ಸಂಘದಲ್ಲಿ ಎಲ್ಲಾ ಸಮುದಾಯದ ವ್ಯಕ್ತಿಗಳಿದ್ದು ಈ ಸಂಘದಲ್ಲಿ ಸಮುದಾಯ ಭವನ ನಿರ್ಮಿಸಿದರೇ ಎಲ್ಲರಿಗೂ ಅನುಕೂಲವಾಗಲಿದೆ ಎಂದರು. ಕಾಲಿನಲ್ಲಿ ಚಿತ್ರ ಬರೆದು ಬುಕ್ ಆಫ್ ರೆಕಾರ್ಡ್ ನಲ್ಲಿ ಸಾಧನೆ ಬರೆದ ಕೌಶಿಕ್…

Read More

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘ ಇದರ ಬಂಟ್ವಾಳ ವಲಯದ ರಜತ ಸಂಭ್ರಮ, ವಾರ್ಷಿಕ ಮಹಾಸಭೆ ಮತ್ತು ಪದಗ್ರಹಣ ಸಮಾರಂಭ ಬಿ.ಸಿ.ರೋಡಿನ ಸ್ಪರ್ಶಾಕಲಾಮಂದಿರದಲ್ಲಿ ಸಂಘದ ಅಧ್ಯಕ್ಷ ಸುಧೀರ್ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆಯಿತು. 2026 ರಿಂದ‌ 2028ನೇ ಸಾಲಿಗೆ ಅಧ್ಯಕ್ಷರಾಗಿ ಗಣೇಶ್ ಸುವರ್ಣ ತುಂಬೆ, ಕಾರ್ಯದರ್ಶಿಯಾಗಿ ಉಮೇಶ್ ಶೆಟ್ಟಿ, ಕೋಶಾಧಿಕಾರಿಯಾಗಿ ರಮೇಶ್ ಭಂಡಾರಿ ಆಯ್ಕೆಯಾಗಿದ್ದು ಅಧಿಕಾರ ಸ್ವೀಕರಿಸಿದರು. ಬಳಿಕ ಸಭಾ ಕಾರ್ಯಕ್ರಮವನ್ನು ಉದ್ಯಮಿ ಶಶಿಧರ ಪೈ ಉದ್ಘಾಟಿಸಿದರು. ಅವರು ಮಾತನಾಡಿ ಗ್ಯಾರೇಜು ಮಾಲಕರ ಸಂಘ ಬಲಿಷ್ಠವಾಗಿ ಬೆಳೆದಿದ್ದು ರಜತ ಸಂಭ್ರಮ‌ ಆಚರಿಸುತ್ತಿರುವುದು ಅಭಿನಂದನೀಯ. ವೃತ್ತಿಯ ಜೊತೆಗೆ ಸಮಾಜ ಸೇವೆ ಮಾಡುತ್ತಿರುವುದು ಶ್ರೇಷ್ಠ ಕೆಲಸ ಎಂದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಕೀಲ ಅಶ್ವನಿ ಕುಮಾರ್ ರೈ ಮಾತನಾಡಿ ಕಾರ್ಮಿಕರಾಗಿ ಬಂದು ಇಂದು ಗ್ಯಾರೇಜು ಮಾಲಕರಾಗಿರುವುದು ನಿಜವಾದ ಸಾಧನೆ. ಗ್ಯಾರೇಜು ಮಾಲಕರಿಗೆ ಸಮಾಜದ ಮೇಲಿರುವ ಕಳಕಳಿ ಸೇವಾ ಕಾರ್ಯದಲ್ಲಿ ಎದ್ದು ಕಾಣುತ್ತಿದೆ. ಆ ಮೂಲಕ ಸಮಾಜದ ಋಣ ಸಂಧಾಯ ಮಾಡುವ ಕಾರ್ಯ…

Read More

ಬಂಟ್ವಾಳ: ಭರತನಾಟ್ಯ ಕಲಾ ಸೇವೆಯನ್ನು ಗುರುತಿಸಿ ಪ್ರತಿಷ್ಠಿತ ಅಂತರಾಷ್ಟ್ರೀಯ ಆರ್ಯಭಟ – 2026 ಪ್ರಶಸ್ತಿಯನ್ನು ಶ್ರೀ ದೇವಿ ನೃತ್ಯಾರಾಧನಾ ಕಲಾ ಕೇಂದ್ರ (ರಿ) ಪುತ್ತೂರು ಇದರ ನೃತ್ಯಗುರು ವಿದುಷಿ ರೋಹಿಣಿ ಉದಯ್ ಇವರಿಗೆ ಇಂದು ಪ್ರದಾನ ಮಾಡಲಾಯಿತು. ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ , ಅತಿಥಿಗಳಾದ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿಗಳಾದ ರಾಜೇಂದ್ರ ಬಾದಾಮಿಕರ್, ನಾಡೋಜ ಡಾ. ಮಹೇಶ್ ಜೋಶಿ, ಅಂತರಾಷ್ಟ್ರೀಯ ವಿದ್ವಾಂಸರಾದ ಅರಳುಮಲ್ಲಿಗೆ ಪಾರ್ಥಸಾರಥಿ, ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಹೆಚ್ ಎಲ್ ಎನ್ ರಾವ್, ಇವರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು Advertisement

Read More

ಉಳ್ಳಾಲ: ಮಂಗಳೂರು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ತೊಕ್ಕೊಟ್ಟಿನ ಹೊಟೇಲ್ ವಿನಮ್ರ ರೆಸ್ಟೋರೆಂಟ್ ನ ಸಭಾಂಗಣದಲ್ಲಿ ಮಂಗಳೂರು ಮಂಡಲ ಒಬಿಸಿ ಮೋರ್ಚಾದ ಅಧ್ಯಕ್ಷ ಗಣೇಶ್ ಸುವರ್ಣ ತುಂಬೆ ಇವರ ಅಧ್ಯಕ್ಷತೆಯಲ್ಲಿ ಬುಧವಾರ ಸಂಜೆ ನಡೆಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ದೀಪ ಪ್ರಜ್ವಲಿಸಿ ಬಳಿಕ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಅವರು ಮಾತನಾಡಿ ಜಿಲ್ಲೆಯ ಬಿಜೆಪಿ ಓಬಿಸಿ ಮೋರ್ಚಾ ಕ್ರಿಯಾಶೀಲವಾಗಿದ್ದುಕೊಂಡು ಉತ್ತಮವಾದ ಕೆಲಸವನ್ನು ಮಾಡುತ್ತಿದೆ. ನೂತನ ಅಧ್ಯಕ್ಷರಾಗಿರುವ ಗಣೇಶ್ ಸುವರ್ಣ ಪುದು ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಯಶಸ್ವಿಯಾಗಿ ಕೆಲಸ ನಿರ್ವಹಿಸಿದ್ದು ಈಗ ಅವರ ಜೊತೆ ಉತ್ತಮ ತಂಡವಿದೆ ಎಂದರು. ಸಂಘಟನೆಯನ್ನು ಬಲಪಡಿಸುವ ದೊಡ್ಡ ಜವಬ್ದಾರಿ ನಮ್ಮೆಲ್ಲರ ಮೇಲಿದೆ. ಸಂಘಟನೆಗೆ ಚ್ಯುತಿ ಬಾರದಂತೆ ಕೆಲಸ ಮಾಡಬೇಕು ಎಂದು ತಿಳಿಸಿದರು. ಬಿಜೆಪಿ ಮಂಗಳೂರು ಮಂಡಲ ಅಧ್ಯಕ್ಷ ಜಗದೀಶ್ ಆಳ್ವ ಕುವೈತ್ತಬೈಲು ಮಂಗಳೂರು ಮಂಡಲ ಒಬಿಸಿ ಮೋರ್ಚಾದ ನೂತನ ಪದಾಧಿಕಾರಿಗಳ…

Read More