Author: admin
ಮಂಗಳೂರು: ಹ್ಯಾಮರ್ ಥ್ರೋನಲ್ಲಿ ಮಂಗಳೂರಿನ ಸೇಂಟ್ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಖುಷಿ ಸಾಲ್ಯಾನ್ ನೂತನ ದಾಖಲೆ ನಿರ್ಮಿಸಿದ್ದಾರೆ. ವಿಶ್ವೇಶ್ವರಯ್ಯ ತಾಂತ್ರಿಕ ಯುನಿವರ್ಸಿಟಿ ಆಶ್ರಯದಲ್ಲಿ ಶಿವಮೊಗ್ಗದಲ್ಲಿ ನಡೆದ 26ನೇ ರಾಜ್ಯ ಮಟ್ಟದ ಅಂತರ್ಕಾಲೇಜು ಅಥ್ಲೆಟಿಕ್ ಮೀಟ್ 2024-25ರಲ್ಲಿ ಹ್ಯಾಮರ್ ಥ್ರೋನಲ್ಲಿ ಪ್ರಥಮ ಸ್ಥಾನಿಯಾಗಿ ಚಿನ್ನದ ಪದಕ ಗೆದ್ದುಕೊಂಡು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮಹಮ್ಮದ್ ಹ್ಯಾರೀಸ್ ಅವರಿಂದ ತರಬೇತಿ ಪಡೆಯುತ್ತಿರುವ ಇವರು ಉಮೆಶ್ ಕೆಲಿಂಜ ಹಾಗೂ ಭವಾನಿ ಉಮೇಶ್ ಅವರ ಸುಪುತ್ರಿ
ಬಂಟ್ವಾಳ: ಬಿ.ಸಿ.ರೋಡಿನ ಕೇಂದ್ರಭಾಗದಲ್ಲಿರುವ ಶ್ರೀ ರಕ್ತೇಶ್ವರೀ ದೇವಿ ದೇವಸ್ಥಾನದಲ್ಲಿ ಎ.4ರಿಂದ ಎ.9ರ ವರಗೆ ಪುನರ್ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಕಾರ್ಯಕ್ರಮ ಭಾನುವಾರ ಬೆಳಿಗ್ಗೆ ದೇವಸ್ಥಾನದ ಬಳಿಯ ಸಮತಟ್ಟುಗೊಳಿಸಿದ ವಿಶಾಲ ಗದ್ದೆ ಪ್ರದೇಶದಲ್ಲಿ ದೇವಸ್ಥಾನದ ತಂತ್ರಿ ಪಳನೀರು ಶ್ರೀ ಅನಂತಭಟ್ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭ ಶ್ರೀ ರಕ್ತೇಶ್ವರೀ ದೇವಿ ಸನ್ನೀದಿ ಸೇವಾಸಮಿತಿ ಅಧ್ಯಕ್ಷ ಬಿ. ವಿಶ್ವನಾಥ್, ಉಪಾಧ್ಯಕ್ಷ ಬಿ. ಸಂಜೀವ ಪೂಜಾರಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ರಮೇಶಾನಂದ ಸೋಮಯಾಜಿ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವಪ್ಪ ಕುಲಾಲ್, ಪಂಜಿಕಲ್ಲು, ಬೂಡ ಅಧ್ಯಕ್ಷ ಬೇಬಿ ಕುಂದರ್, ವಿವಿಧ ಸಮಿತಿಯ ಪ್ರಮುಖರಾದ ಅಶ್ವನಿ ಕುಮಾರ್ ರೈ, ಭುವನೇಶ್ ಪಚ್ಚಿನಡ್ಕ, ಐತಪ್ಪ ಪೂಜಾರಿ, ಚಂದ್ರಹಾಸ ಡಿ. ಶೆಟ್ಟಿ, ರವೀಂದ್ರ ಕಂಬಳಿ, ದೇವದಾಸ್ ಶೆಟ್ಟಿ, ನಾರಾಯಣ ಹೆಗ್ಡೆ, ಉಮೇಶ್ ಕುಮಾರ್ ವೈ, ಕಿಶೋರ್ ಕುಮಾರ್, ಸತೀಶ್ ಕುಮಾರ್, ಬಿ. ಮೋಹನ್, ಸದಾಶಿವ ಕೈಕಂಬ, ಗೋಪಾಲ ಸುವರ್ಣ, ನೇಮಿರಾಜ ಶೆಟ್ಟಿ ಕೊಡಂಗೆ,…
ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಜ| ಕೆ.ಎಸ್. ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ಇವರ ಸಹಯೋಗದೊಂದಿಗೆ 130ನೇ ರಕ್ತದಾನ ಶಿಬಿರ ಭಾನುವಾರ ಫರಂಗಿಪೇಟೆಯ ಸೇವಾಂಜಲಿ ಸಭಾಗೃಹದಲ್ಲಿ ನಡೆಯಿತು.ರೋಟರಿ ಕ್ಲಬ್ ಬಂಟ್ವಾಳದ ನಿಯೋಜಿತ ಅಧ್ಯಕ್ಷ ಬಸ್ತಿ ಮಾಧವ ಶೆಣೈ ಶಿಬಿರ ಉದ್ಘಾಟಿಸಿ ಮಾತನಾಡಿ ಸೇವಾಂಜಲಿ ಪ್ರತಿಷ್ಠಾನದ ಮೂಲಕ ನಿರಂತರವಾಗಿ ರಕ್ತದಾನ ಶಿಬಿರ ನಡೆಯುತ್ತಿರುವುದು ಅಭಿನಂದನೀಯ. ಇದರ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜ ಅವರು ಎಲ್ಲಾ ಸಮಯದಲ್ಲೂ ಜನರ ಸೇವೆಗೆ ಲಭ್ಯವಿರುವುದು ಅವರ ಸೇವಾತತ್ಪರತೆಗೆ ಸಾಕ್ಷಿ ಎಂದರು.ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜ ಅವರು ಪ್ರಾಸ್ತವಿಕವಾಗಿ ಮಾತನಾಡಿ ಒಬ್ಬ ವ್ಯಕ್ತಿ ರಕ್ತದಾನ ಮಾಡುವುದರಿಂದ 4 ಮಂದಿಯ ಜೀವ ಉಳಿಸಲು ಸಾಧ್ಯವಿದೆ ಎಂದರು. ಸೇವಾಂಜಲಿ ಆರೋಗ್ಯ ಕೇಂದ್ರದ ವೈದ್ಯ ಡಾ. ಚೇತನ್ ಆರೋಗ್ಯ ಮಾಹಿತಿ ನೀಡಿದರು.ಸದಾನಂದ ಟೈಲರ್ ತುಂಬೆ ಹಾಗೂ ಪ್ರಶಾಂತ್ ಸುಜೀರ್ ರಕ್ತದಾನ ಮಾಡುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು.ಜ.ಕೆ.ಎಸ್. ಹೆಗ್ಡೆ. ಆಸ್ಪತ್ರೆಯ ವೈದ್ಯೆ ಡಾ. ಮಂಜುಶ್ರೀ, ಸೇವಾಂಜಲಿಯ ಉಮಾ ಚಂದ್ರಶೇಖರ್…
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬಂಟ್ವಾಳ ಇದರ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ 3 ತಿಂಗಳ ಕಾಲ ಹೊಲಿಗೆ ತರಬೇತಿಯನ್ನು ವಗ್ಗ ವಲಯದ ವಾಮದಪದವು ಪ್ರೇರಣಾ ಜ್ಞಾನವಿಕಾಸ ಕೇಂದ್ರದಲ್ಲಿ ನಡೆಸಲಾಗಿದ್ದು ಅದರ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು. ಪುಂಜಾಲಕಟ್ಟೆ ವಲಯದ ಜನಜಾಗೃತಿ ವೇದಿಕೆ ಸದಸ್ಯ ಹರೀಂದ್ರ ಪೈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಮಹಿಳೆಯರ ಏಳಿಗಾಗಿ ಜ್ಞಾನವಿಕಾಸ ಕೇಂದ್ರದಡಿಯಲ್ಲಿ ನಡೆದಂತಹ ಹೊಲಿಗೆ ತರಬೇತಿ ಯಶಸ್ವಿಯಾಗಿದೆ ಎಂದರು.ಮಾತೃಶ್ರೀ ಅಮ್ಮ ಕಾರ್ಯಕ್ರಮ ದಡಿಯಲ್ಲಿ ಕಲಿತಂತಹ ಹೊಲಿಗೆ ವೃತ್ತಿ ನಿಂತ ನಿರಾಗದೆ ಮುಂದುವರಿಸುವ ಬಗ್ಗೆ ಹಾಗೂ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಬಂಟ್ವಾಳ ತಾಲೂಕು ಯೋಜನಾಧಿಕಾರ ಜಯಾನಂದ ಪಿ. ಮಾಹಿತಿ ನೀಡಿದರು.ಅತೀ ಹೆಚ್ಚು ಸಾಲ ನೀಡುವ ಸಂಸ್ಥೆ ಹಾಗೂ ಅತಿ ಹೆಚ್ಚು ಸಮಾಜಕಕ್ಕೆ ಅನುದಾನ ವಿತರಣೆ ಮಾಡುವ ಸಂಸ್ಥೆ ಎಂದರೆ ಅದು ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ.ತೆಗೆದ ಸಾಲವನ್ನು ಸರಿಯಾಗಿ ವಿನಿಯೋಗಿಸಿ ಕೊಂಡು ಸದುಪಯೋಗ ಪಡೆಸಿ ಕೊಳ್ಳಿ ಹಾಗೂ ಸಾಲದ ಕಂತು ಬಾಕಿ ಮಾಡದೆ…
ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಜ| ಕೆ.ಎಸ್. ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ಇವರ ಸಹಯೋಗದೊಂದಿಗೆ 130ನೇ ರಕ್ತದಾನ ಶಿಬಿರ ಮಾ.16ರಂದು ಭಾನುವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಫರಂಗಿಪೇಟೆಯ ಸೇವಾಂಜಲಿ ಸಭಾಗೃಹದಲ್ಲಿ ನಡೆಯಲಿದೆ.ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ಎಸ್. ವಿಜಯ ಪ್ರಸಾದ್ ಶಿಬಿರ ಉದ್ಘಾಟಿಸುವರು, ರೋಟರಿ ಕ್ಲಬ್ ಮಾಜಿ ಜಿಲ್ಲಾ ಗವರ್ನರ್ ಎನ್. ಪ್ರಕಾಶ್ ಕಾರಂತ್ ಉಪಸ್ಥಿತರಿರುವರು ಎಂದು ಸೇವಾಂಜಲಿ ಪ್ರತಿಷ್ಠಾನ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಂಟ್ವಾಳ: ಗ್ರಾಮಸ್ಥರು ಭಾಗವಹಿಸದೆ ಇರುವ ಗ್ರಾಮಸಭೆ ಅಪೂರ್ಣ ಗ್ರಾಮ ಸಭೆ ಎಂದು ನರಿಕೊಂಬು ಗ್ರಾಮ ಪಂಚಾಯತಿ ಅಧ್ಯಕ್ಷ ಸಂತೋಷ್ ಕುಮಾರ್ ಹೇಳಿದರು.ಅವರು ಸೋಮವಾರ ನರಿಕೊಂಬು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ರೋಟರಿ ಸಭಾ ಭವನದಲ್ಲಿ ನಡೆದ ನರಿಕೊಂಬು ಗ್ರಾಮ ಪಂಚಾಯತಿನ ದ್ವಿತೀಯ ಸುತ್ತಿನ ಗ್ರಾಮಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಗ್ರಾಮಸ್ಥರಿಗೆ ವಿವಿಧ ಇಲಾಖೆಗಳ ಮಾಹಿತಿ ನೀಡುವ ಸಲುವಾಗಿ ಎಲ್ಲಾ ಇಲಾಖೆಗಳು ಹಾಜರಿದ್ದರು ಗ್ರಾಮಸ್ಥರೇ ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸದೆ ಇರುವುದರಿಂದ ಗ್ರಾಮ ಸಭೆಯು ಪರಿಪೂರ್ಣ ಆಗಲು ಸಾಧ್ಯವಿಲ್ಲ. ಈ ದೃಷ್ಟಿಯಲ್ಲಿ ಮುಂದಿನ ಗ್ರಾಮ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಬರುವ ಹಾಗೆ ಗ್ರಾಮ ವ್ಯಾಪ್ತಿಯ ಪಂಚಾಯತ್ ಸದಸ್ಯರ ಜೊತೆಗೆ ವ್ಯಾಪ್ತಿಯ ಅಂಗನವಾಡಿ ಶಿಕ್ಷಕಿಯರು, ಆಶಾ ಕಾರ್ಯಕರ್ತೆಯರು ಕೈಜೋಡಿಸಬೇಕೆಂದು ಮನವಿ ಮಾಡಿದರು.ಗ್ರಾಮ ಸಭೆಯ ಮಾರ್ಗದರ್ಶಿ ಅಧಿಕಾರಿಯಾಗಿ ಸಾಮಾಜಿಕ ಅರಣ್ಯ ವಲಯ ಬಂಟ್ವಾಳದ ಉಪವಲಯ ಅರಣ್ಯ ಅಧಿಕಾರಿ ಕೃಷ್ಣಜೋಗಿ ಭಾಗವಹಿಸಿ ಸೂಕ್ತ ಸಲಹೆ ಹಾಗೂ ಮಾರ್ಗದರ್ಶನ ನೀಡಿದರು.ವಿವಿಧ ಇಲಾಖೆಗಳಾದ ಮೆಸ್ಕಾಂ, ಆರೋಗ್ಯ ಇಲಾಖೆ, ಕಂದಾಯ, ಮಹಿಳಾ ಮತ್ತು…
ಬಂಟ್ವಾಳ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಜೆಸಿಐ ಬಂಟ್ವಾಳದ ಲೇಡಿ ಜೇಸಿ ವಿಭಾಗ ಹಾಗೂ ಕಾರ್ಮೆಲ್ ಕಾಲೇಜು ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಮಹಿಳಾ ಸಾಧಕಿ ಕುಂಞಪಾತು ಕಾಮಜಲು ಅವರನ್ನು ಸನ್ಮಾನಿಸಲಾಯಿತು. ಶನಿವಾರ ಮೊಡಂಕಾಪುವಿನ ಕಾರ್ಮೆಲ್ ಪದವಿ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲೆ ವಂ.ಡಾ. ಲತಾ ಫೆರ್ನಾಡೀಸ್ ಉದ್ಘಾಟಿಸಿದರು. ಲೇಡಿ ಜೇಸಿ ವಿಭಾಗದ ಅಧ್ಯಕ್ಷೆ ಬಬಿತಾ ಗಣೇಶ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗದ ಆಪ್ತ ಸಮಾಲೋಚಕಿ ದಿವ್ಯಾ ಎನ್., ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮದ ಆಪ್ತ ಸಮಾಲೋಚಕಿ ಅಕ್ಷತಾ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಆರೋಗ್ಯ ಸಲಹೆ ನೀಡಿದರು. ಜೆಸಿಐ ಬಂಟ್ವಾಳದ ಅಧ್ಯಕ್ಷ ಗಣೇಶ್ ಕೆ. ಕುಲಾಲ್, ಕೋಶಾಧಿಕಾರಿ ಜೀವಿತಾ ಯತೀಶ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಶ್ವಿನಿ ಬಾಲಕೃಷ್ಣ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಲೇಡಿ ಜೇಸಿ ವಿಭಾಗದ ಅಧ್ಯಕ್ಷೆ ಬಬಿತಾ ಗಣೇಶ್ ಸ್ವಾಗತಿಸಿದರು. ಸದಸ್ಯೆ ಸ್ವಾತಿಶ್ರೀ ವಂದಿಸಿದರು. ಕಾಲೇಜಿನ ವಿದ್ಯಾರ್ಥಿನಿ ಪ್ರೇಕ್ಷಾ ಕಾರ್ಯಕ್ರಮ ನಿರೂಪಿಸಿದರು. ನಿಕಟಪೂರ್ವಾಧ್ಯಕ್ಷೆ ರಶ್ಮಿ…
ಬಂಟ್ಬಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಇದರ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ 3 ತಿಂಗಳ ಕಾಲ ವಾಮದ ಪದವು ಹೈಸ್ಕೂಲ್ ನಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಟ್ಯೂಷನ್ ತರಗತಿ ಹಮ್ಮಿಕೊಂಡಿದ್ದು ಸಮಾರೋಪ ಕಾರ್ಯಕ್ರಮ ಗುರಿವಾರ ನಡೆಯಿತು. ಕಾರ್ಯಕ್ರಮ ದ ಅಧ್ಯಕ್ಷತೆಯನ್ನು ಶಾಲಾ ಎಸ್ ಡಿ ಎಂಸಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ ವಹಿಸಿದ್ದರು. ಶ್ರೀ ಕ್ಷೇತ್ರಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಜಯಾನಂದ ಪಿ. ದೀಪ ಪ್ರಜ್ವಲಿಸಿದರು. ವಗ್ಗ ವಲಯದ ಜನಜಾಗ್ರತಿ ವೇದಿಕೆಯ ಸದಸ್ಯ ನವೀನ್ ಚಂದ್ರ ಶೆಟ್ಟಿ ಶಾಲಾ ಮುಖ್ಯೋಪಾಧ್ಯಾಯ ಬಾಲಕೃಷ್ಣ ಮಾತನಾಡಿದರು.ಸೇವಾಪ್ರತಿನಿಧಿ ಮೋಹನ್ ದಾಸ್, ಕೇಂದ್ರದ ಸಂಯೋಜಕಿ ಗುಣವತಿ ಉಪಸ್ಥಿತರಿದ್ದರು. ಟ್ಯೂಷನ್ ಪಡೆದ ವಿದ್ಯಾರ್ಥಿಗಳು ಅನಿಸಿಕೆಯನ್ನು ವ್ಯಕ್ತಪಡಿಸಿದರು.ಮುಖ್ಯೋಪಾಧ್ಯಾಯ ಬಾಲಕೃಷ್ಣ ಸ್ವಾಗತಿಸಿ,ಶಿಕ್ಷಕ ಸುಧಾಕರ್ ವಂದಿಸಿದರು. ತಾಲೂಕು ಸಮನ್ವಯಧಿಕಾರಿ ಶೃತಿ ಕಾರ್ಯಕ್ರಮ ನಿರೂಪಿಸಿದರು.
ಬಂಟ್ವಾಳ: ನೂತನವಾಗಿ ಸ್ಥಾಪನೆಯಾದ ಶರ್ವಾಣಿ ಕ್ರೆಡಿಟ್ ಸೌಹಾರ್ದ ಕೋ.ಅಪರೇಟಿವ್ ಸೊಸೈಟಿ ನಿ. ಇದರ ಉದ್ಘಾಟನಾ ಸಮಾರಂಭ ಬಿ.ಸಿ.ರೋಡಿನ ಶಕ್ತಿ ಕೌಂಪೌಂಡ್ ನಲ್ಲಿ ನಡೆಯಿತು.ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಅರ್ಚಕ ವೆಂಕಟರಮಣ ಅಸ್ರಣ್ಣ ಆಡಳಿತ ಕಚೇರಿಯನ್ನು ಉದ್ಘಾಟಿಸಿ ದೀಪ ಪ್ರಜ್ವಲಿಸಿದರು. ಬಳಿಕ ಕ್ಯಾಲೆಂಡರ್ ಬಿಡುಗಡೆ ಮಾಡಿ ಆಶೀರ್ವಚನ ನೀಡಿ ಕಲಾಸೇವೆ ಮಾಡುತ್ತಿರುವ ಉದಯ ವೆಂಕಟೇಶ್ ಭಟ್ ದಂಪತಿ ಸಹಕಾರಿ ಸಂಘವನ್ನು ಸ್ಥಾಪಿಸಿ ಗ್ರಾಹಕರಿಗೆ ಸೇವೆ ನೀಡುವ ಕಾರ್ಯಕ್ಕೆ ಮುಂದಾಗಿರುವುದು ಅಭಿನಂದನೀಯ. ದೇವರ ಅನುಗ್ರಹದಿಂದ ಸಂಸ್ಥೆ ಯಶಸ್ವಿಯಾಗಿ ಮುನ್ನಡೆಯಲಿ ಎಂದು ಶುಭ ಹಾರೈಸಿದರು.ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಬೆಂಗಳೂರು ಇದರ ನಿರ್ದೇಶಕಿ ಭಾರತಿ ಜಿ. ಭಟ್ ನಿರಖು ಠೇವಣಿ ಪತ್ರ ಬಿಡುಗಡೆಗೊಳಿಸಿ ಮಾತನಾಡಿ ಸಹಕಾರಿ ತತ್ವ ಎನ್ನುವುದು ವೇದಗಳ ಕಾಲದಿಂದಲ್ಲೇ ರಕ್ತಗತವಾಗಿ ಬಂದಿದೆ. ಇಂದಿನ ಕಾಲಘಟದಲ್ಲಿ ಸಹಕಾರಿ ತತ್ವ ಅಗತ್ಯವಾಗಿ ಬೇಕಿದ್ದು ರಾಷ್ಟ್ರೀಕೃತ ಬ್ಯಾಂಕ್ ಗಳಿಗೆ ಹೋಲಿಸಿದರೆ ಇಂದು ಸಹಕಾರಿ ಸಂಘಗಳು ಜನರಿಗೆ ಹೆಚ್ಚು ಆಪ್ತವಾಗಿದೆ ಎಂದರು. ಪುತ್ತೂರು ಪುರಸಭೆಯ…
ಬಂಟ್ವಾಳ: ಜಾತಿ, ಧರ್ಮದ ಭೇದವಿಲ್ಲದೆ ಸಮಾಜದ ಎಲ್ಲಾ ವರ್ಗದ, ಎಲ್ಲಾ ಸಮುದಾಯದ ಜನರಿಗೂ ಕೃಷ್ಣ ಕುಮಾರ್ ಪೂಂಜ ಅವರ ನೇತೃತ್ವದಲ್ಲಿ ಸೇವಾಂಜಲಿ ಪ್ರತಿಷ್ಠಾನ ನಿರಂತರವಾಗಿ ಸೇವಾ ಕಾರ್ಯವನ್ನು ನಡೆಸಿಕೊಂಡು ಬರುತ್ತಿದೆ. ಕಳೆದ ಎರಡೂವರೆ ವರುಷದಿಂದ ದಾನಿಗಳ ಸಹಕಾರದೊಂದಿಗೆ ಕ್ಷಯ ರೋಗಿಗಳನ್ನು ಗುರುತಿಸಿ ಅವರಿಗೆ ಆಹಾರದ ಕಿಟ್ ವಿತರಿಸುವ ಕಾರ್ಯ ಶ್ರೇಷ್ಠವಾದದ್ದು ಎಂದುತುಂಬೆ ಗ್ರಾ.ಪಂ ಉಪಾಧ್ಯಕ್ಷ ಗಣೇಶ್ ಸಾಲ್ಯಾನ್ಹೇಳಿದರು.ಅವರು ಕೇಂದ್ರ ಸರಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಫರಂಗಿ ಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ಸೇವಾಂಜಲಿ ಪ್ರತಿಷ್ಠಾನದ ವತಿಯಿಂದ ನಡೆದ ಕ್ಷಯರೋಗಿಗಳಿಗೆ ಪೌಷ್ಠಿಕ ಆಹಾರ ಹಾಗೂ ದವಸಧಾನ್ಯದ ಕಿಟ್ ವಿತರಿಸಿ ಮಾತನಾಡಿದರು.ಸೇವಾಂಜಲಿ ಆರೋಗ್ಯ ಕೇಂದ್ರದ ವೈದ್ಯ ಡಾ. ಚೇತನ್ ಆರೋಗ್ಯ ಮಾಹಿತಿ ನೀಡಿ ಕ್ಷಯ ರೋಗಿಗಳು ಪ್ರತಿತಿಂಗಳು ಇಮೋಗ್ಲೋಬಿನ್, ರಕ್ತದೊತ್ತಡ, ಶುಗರ್ ತೂಕ ಪರೀಕ್ಷೆ ಮಾಡಿಕೊಳ್ಳಬೇಕು, ಆಹಾರ ಪದ್ದತಿಯನ್ನು ಯುಕ್ತವಾಗಿ ಪಾಲಿಸಿಕೊಂಡು ಪೌಷ್ಠಿಕ ಆಹಾರವನ್ನು ಸೇವಿಸಬೇಕು ಎಂದು ತಿಳಿಸಿದರು.ಕುಮ್ಡೇಲು ಶ್ರೀ ಕೋರ್ದಬ್ಬು ದೈವಸ್ಥಾನದ ಆಡಳಿತ ಮೋಕ್ತೇಸರ ಕೆ.ಭಾಸ್ಕರ ಚೌಟ, ನಾರಾಯಣ ಬಡ್ಡೂರು ವೇದಿಕೆಯಲ್ಲಿ ಉಪಸ್ಥಿತರಿದ್ದರುಸೇವಾಂಜಲಿಯ ಟ್ರಸ್ಟಿ…








