Author: admin

ಬಂಟ್ವಾಳ: ಬಿ.ಸಿ.ರೋಡಿನ ನಾಗರಿಕ ಕ್ರಿಯಾ ಸಮಿತಿ ಸಂಚಯಗಿರಿ ಇದರ ಆಶಯದಲ್ಲಿ ಸಂಚಯಗಿರಿಯ ಸಂಗೀತ ಕ್ಷೇತ್ರದ ಪ್ರತಿಭೆಗಳಿಗೆ ಅವಕಾಶ ಒದಗಿಸುವ ವಿನೂತನ ಕಾರ್ಯಕ್ರಮ ಸಂಚಯ ಮೆಲೋಡಿಸ್ ಗೆ ಚಾಲನೆ ನೀಡಲಾಯಿತು.ಕರೋಕೆ ಗಾಯಕ, ಭಾರತೀಯ ಜೀವ ವಿಮಾ ನಿಗಮದ ಬಿ.ಸಿ.ರೋಡು ಶಾಖೆಯ ಆಡಳಿತಾಧಿಕಾರಿ ರವಿ ಕುಮಾರ್ ಹಾಸನ ಕಾರ್ಯಕ್ರಮ ಉದ್ಘಾಟಿಸಿದರು. ಅವರು ಮಾತನಾಡಿ ಸಂಗೀತ ಕ್ಷೇತ್ರದ ಪ್ರತಿಭೆಗಳಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಇದೊಂದು ಉತ್ತಮ ಕಾರ್ಯಕ್ರಮ, ಈ ವೇದಿಕೆಯ ಮೂಲಕ ಹೊಸ ಪ್ರತಿಭೆಗಳ ಅನಾವರಣ ಆಗಲಿ ಎಂದು ಶುಭ ಹಾರೈಸಿದರು. ಬಳಿಕೆ ಕರೋಕೆ ಹಾಡು ಹಾಡುವ ಮೂಲಕ ಕಾರ್ಯಕ್ರಮಕ್ಕೆ ಶುಭ ಚಾಲನೆ ನೀಡಿದರು.ನಾಗರಿಕ ಕ್ರಿಯಾ ಸಮಿತಿಯ ಅಧ್ಯಕ್ಷ ಸುರೇಶ್ ಬಂಗೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ದಿನ ನಿತ್ಯ ಕೆಲಸದ ಒತ್ತಡದಲ್ಲಿರುವ ನಮಗೆ ಮನೋರಂಜನೆಯನ್ನು ಪಡೆಯಲು ಈ ಕಾರ್ಯಕ್ರಮದಿಂದ ಸಾಧ್ಯವಿದೆ. ಸಂಚಯ ಮೆಲೋಡೀಸ್ ಮೂಲಕ ಸ್ಥಳೀಯ ಪ್ರತಿಭೆಗಳಿಗೂ‌ ವೇದಿಕೆ ಸಿಗಲಿದೆ ಎಂದರು.ನಾಗರಿಕ ಕ್ರಿಯಾ ಸಮಿತಿಯ ಉಪಾಧ್ಯಕ್ಷೆ ತಾಯಮ್ಮ,ಕೋಶಾಧಿಕಾರಿ ಎ. ದಾಮೋದರ್, ಕ್ರೀಡಾ ಕಾರ್ಯದರ್ಶಿ ಧನಂಜಯ…

Read More

ಬಂಟ್ವಾಳ: ಜೆಸಿಐ ಬಂಟ್ವಾಳದ ವತಿಯಿಂದ ಸೆಲ್ಯೂಟ್ ಟೂ ಸೈಲೆಂಟ್ ವರ್ಕರ್ ಪ್ರಶಸ್ತಿಯನ್ನು ಸೆಕ್ಯುರಿಟಿ ಗಾರ್ಡ್ ವಾಸುದೇವಾ ಅಲೆತ್ತೂರು ಅವರಿಗೆ ಪ್ರದಾನ ಮಾಡಲಾಯಿತು.ಇತ್ತಿಚೆಗೆ ನಡೆದ ಘಟಕದ ಮಾಸಿಕ ಸಭೆಯಲ್ಲಿ ಅಧ್ಯಕ್ಷ ಗಣೇಶ್ ಕೆ. ಕುಲಾಲ್ ಪ್ರಶಸ್ತಿ ನೀಡಿ ಗೌರವಿಸಿದರು. ಇದರ ಪೂರ್ವಭಾವಿಯಾಗಿ ಸದಸ್ಯರಿಗೆ ಘಟಕ ಅಭಿವೃದ್ಧಿ ಮತ್ತು ನಿರ್ವಹಣೆ ತರಬೇತಿಯನ್ನು ವಲಯ ಉಪಾಧ್ಯಕ್ಷ ರಂಜಿತ್ ಎಚ್. ಡಿ. ನೀಡಿದರು. ನಿಕಟಪೂರ್ವಾಧ್ಯಕ್ಷೆ ರಶ್ಮಿ ಶೆಟ್ಟಿ, ಕಾರ್ಯದರ್ಶಿ ಕಿಶೋರ್ ಕುಮಾರ್ ಆಚಾರ್ಯ, ಕೋಶಾಧಿಕಾರಿ ಜೀವಿತಾ, ಲೇಡಿ ಜೇಸಿ ಅಧ್ಯಕ್ಷೆ ಬಬಿತಾ ಗಣೇಶ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Read More

ಮಂಗಳೂರು: ಇಲ್ಲಿನ ಮೇರಿಹಿಲ್ ನಲ್ಲಿರುವ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇದರ ಆಶ್ರಯದಲ್ಲಿ ನಡೆಯುತ್ತಿರುವ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ “ಅಗಮ್ಯ- 2025” ಹಾಸ್ಟೆಲ್ ಡೇ ಕಾರ್ಯಕ್ರಮ ವಿಜ್ರಂಭಣೆಯಿಂದ ನಡೆಯಿತು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿಂದಿಯ ನಾಯಕ್ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಡಿ. ದೇವರಾಜ ಅರಸು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಮಾಡಿ ಅವರು ಮಾತನಾಡಿ ಮನುಷ್ಯರು ಪರಸ್ಪರ ಒಬ್ಬರಿಗೊಬ್ಬರು ಸಹಾಯ ಮಾಡುವ ಮೂಲಕ ನಾಗರಿಕ ಸಮಾಜ ನಿರ್ಮಿಸಲು ಸಾಧ್ಯವಿದೆ. ಮಾನವೀಯತೆ ಮತ್ತು ಸಂತೃಪ್ತಿ ಎನ್ನುವ ಮೌಲ್ಯ ಮನುಷ್ಯನಲ್ಲಿ ಇದ್ದರೆ ಜೀವನ ಸಾರ್ಥಕವಾಗುತ್ತದೆ. ದುರಾಸೆ ಮನುಷ್ಯನ ಖುಷಿಯನ್ನು ನಾಶ ಮಾಡತ್ತದೆ. ಮತ್ತೊಬ್ಬರ ಸಂತೊಷದಲ್ಲಿ ನಾವು ಸಂತೋಷ ಕಂಡಾಗ ನೆಮ್ಮದಿಯ ಬದುಕು ನಮ್ಮದಾಗುತ್ತದೆ ಎಂದು ತಿಳಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬಂಟ್ವಾಳ ರಾಯಿ ಪ್ರಾಥಮಿಕ ಶಾಲೆಯ ಶಿಕ್ಷಕ ಸಿದ್ದಪ್ಪ ದೊಡ್ಡ ಕರಿಯಪ್ಪ ಮಾತನಾಡಿ ಶಿಕ್ಷಣದಿಂದ ಜಗತ್ತನ್ನು ಆಳಬಹುದಾಗಿದ್ದುಸ್ಪರ್ಧಾತ್ಮಕ ಯುಗದಲ್ಲಿ ನಾವೇನು ಮಾಡುತ್ತಿದ್ದೇವೆ ಎನ್ನುವುದನ್ನು…

Read More

ಬಂಟ್ವಾಳ: ಬಿ.ಸಿ.ರೋಡಿನ ಕೇಂದ್ರಭಾಗದಲ್ಲಿರುವ ಶ್ರೀ ರಕ್ತೇಶ್ವರೀ ದೇವಿ ಸನ್ನಿಧಿಯಲ್ಲಿ ಎ.4ರಿಂದ ಎ.9ರವರೆಗೆ ಪುನರ್ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಪದ್ಮನಾಭ ತಂತ್ರಿ ಶನಿವಾರ ಬೆಳಿಗ್ಗೆ ದೇವಸ್ಥಾನದ ಸಭಾಂಗಣದಲ್ಲಿ ಬಿಡುಗಡೆಗೊಳಿಸಿದರು.ಅವರು ಮಾತನಾಡಿ ತುಳುನಾಡಿನ ಜೀವನಾಡಿ ಎನ್ನುವಂತೆ ದೈವ ದೇವರುಗಳು ಇಲ್ಲಿ ಹಾಸು ಹೊಕ್ಕಾಗಿದ್ದಾರೆ ಎಂದರು.ವವಿಧ ಬಗೆಯ ಕಲೆಗಳನ್ನು ಬೆಳೆಸಿದ ಕೀರ್ತಿ ಅವಿಭಜಿತ ದ.ಕ. ಜಿಲ್ಲೆಗಿದೆ. ಕಲೆಯ ಉಪಾಸನೆಯೇ ದೇವರ ಉಪಾಸನೆ. ನಮ್ಮನ್ನು ನಾವು ಅರಿತುಕೊಂಡು ಸ್ವತಂತ್ರವಾಗಿ ಬದುಕಬೇಕೆನ್ನುವುದೇ ಸನಾತನ ಧರ್ಮದ ಸಂಸ್ಕೃತಿ ಎಂದು ತಿಳಿಸಿದರು. ನಮಲ್ಲಿ ನಾವು ವಿಶ್ವಾಸವನ್ನು ಕಳೆದುಕೊಂಡಾಗ ನಾವು ಬೇರೆಯವರಲ್ಲೂ ಅವಿಶ್ವಾಸವನ್ನು ಕಾಣುತ್ತೇವೆ. ಶಾಂತಿ, ಆಧ್ಯಾತ್ಮಿಕ ಶಕ್ತಿಗಾಗಿ ಇಂದು ಪ್ರಪಂಚದ ಬೇರೆ ರಾಷ್ಟ್ರಗಳು ಭಾರತ ವನ್ನು ನೋಡುತ್ತಿದೆ. ಆ ನಿಟ್ಟಿನಲ್ಲಿ ಒಂದು ಕ್ಷೇತ್ರ ಬೆಳಗಿದರೆ ಆ ಊರೇ ಅಭಿವೃದ್ದಿಯಾಗುತ್ತದೆ ಎಂದು ತಿಳಿಸಿದರು.ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ರಮೇಶಾನಂದ ಸೋಮಯಾಜಿ, ಬಂಟ್ವಾಳ ಪುರಸಭೆ ಅಧ್ಯಕ್ಷ ವಾಸು ಪೂಜಾರಿ, ಸಹ ಕಾರ್ಯಧ್ಯಕ್ಷ ಜಗನಾಥ ಚೌಟ…

Read More

ಬಂಟ್ವಾಳ: ಬಿ.ಸಿ.ರೋಡು ಅಜ್ಜಿಬೆಟ್ಟುವಿನ ಬಸವ ಮಂಟಪದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಕ್ಕಮಹಾದೇವಿ ಶಿಶುಮಂದಿರದ 15 ನೇ ವಾರ್ಷಿಕೋತ್ಸವ, ಪಾದಪೂಜೆ ಹಾಗೂ ಮಕ್ಕಳ ಸಾಮೂಹಿಕ ಹುಟ್ಟುಹಬ್ಬ ಸಹಿತ ಶಿಶುಮಂದಿರದ ಶಿಶುಗಳ ಪ್ರತಿಭಾ ದಿನೋತ್ಸವ ಶುಕ್ರವಾರ ನಡೆಯಿತು. ಜೆಸಿಐ ಬಂಟ್ವಾಳದ ಕಾರ್ಯದರ್ಶಿ ಕಿಶೋರ್ ಕುಮಾರ್ ಆಚಾರ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಶಿಕ್ಷಣ ವ್ಯವಸ್ಥೆ ವ್ಯಾಪಾರಿಕರಣವಾಗುತ್ತಿರುವ ಈ ಕಾಲದಲ್ಲಿ ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಶಿಕ್ಷಣವನ್ನು ಇಲ್ಲಿ ನೀಡಲಾಗುತ್ತಿದೆ ಎಂದರು. ಕಟ್ಟಡದ ಉನ್ನತೀಕರಣಕ್ಕೆ ನಾವೆಲ್ಲರೂ ಸಹಕರಿಸೋಣ ಎಂದು ತಿಳಿಸಿದರು.ಕಲ್ಲಡ್ಕ ಶ್ರೀರಾಮ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಪ್ರೀತಾ ಬೌದ್ದಿಕ್ ನೀಡಿ ನಮ್ಮಲ್ಲಿ ಏನಾದರೂ ಬದಲಾವಣೆ ಮಾಡಲು ಸಾಧ್ಯವಾದರೆ ಇಂತಹ ಕಾರ್ಯಕ್ರಮ ಗಳು ಅರ್ಥಪೂರ್ಣವಾಗಲು ಸಾಧ್ಯವಿದೆ ಎಂದರು.ಮಕ್ಕಳ ಹುಟ್ಟಹಬ್ಬವನ್ನು ಕೇಕ್ ಕತ್ತರಿಸಿ, ದೀಪ ಆರಿಸಿ ಆಚರಿಸುವ ಬದಲು ತುಪ್ಪದ ದೀಪ ಇಟ್ಟು, ಮನೆಯಲ್ಲೇ ತಯಾರಿಸಿದ ಸಿಹಿ ತಿನ್ನಿಸಿ, ಮಕ್ಕಳಿಂದಲೇ ಗಿಡಗಳನ್ನು ನೆಟ್ಟು, ದೇವಸ್ಥಾನದಲ್ಲಿ ಭಜನೆಯನ್ನು ನಡೆಸಿ ಅರ್ಥಪೂರ್ಣವಾಗಿ, ನಮ್ಮತನವನ್ನು ಉಳಿಸಿಕೊಂಡು.ಆಚರಿಸುವಂತೆ ತಿಳಿಸಿದರು.ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಅಧ್ಯಕ್ಷ ಸತೀಶ್…

Read More

ಬಂಟ್ವಾಳ: ಇಲ್ಲಿನ ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಎಂಬವರ ಪುತ್ರ ದಿಗಂತ್ ನಾಪತ್ತೆಯಾಗಿ ದಿನ ಕಳೆದರೂ ಆತನ ಬಗ್ಗೆ ಇನ್ನೂ ಯಾವುದೇ ಸುಳಿವು ಸಿಗದಿರುವ ಕಾರಣ ಸ್ಥಳೀಯ ಗ್ರಾಮಸ್ಥರು ಫರಂಗಿಪೇಟೆಯಲ್ಲಿರುವ ಪೊಲೀಸ್ ಹೊರ ಠಾಣೆಗೆ ಗುರುವಾರ ಬೆಳಿಗ್ಗೆ ದಿಢೀರ್ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಈ ಸಂದರ್ಭ ಪೊಲೀಸ್ ಇಲಾಖೆಗೆ ಎಚ್ಚರಿಕೆ ನೀಡಿದ ಪ್ರತಿಭಟನಕಾರರು ಮುಂದಿನ‌ 24 ಗಂಟೆಯ ಒಳಗಾಗಿ ಬಾಲಕನನ್ನು ಪತ್ತೆ ಮಾಡಬೇಕು ತಪ್ಪಿದ್ದಲ್ಲಿ ಮತ್ತೆ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು. ಎಡಿಷನಲ್ ಎಸ್ಪಿ ರಾಜೇಂದ್ರ ಅವರ ಜೊತೆ ಪ್ರತಿಭಟನಕಾರರು ಮಾತುಕತೆ ನಡೆಸಿದರು.ಬಳಿಕ ಫರಂಗಿಪೇಟೆಯ ಆಂಜನೇಯ ದೇವಸ್ಥಾನದಲ್ಲಿ ಗ್ರಾಮಸ್ಥರು ಸಭೆ ನಡೆಸಿ ಮಾ.1 ರಂದು ಶನಿವಾರ ಬೆಳಗ್ಗಿನಿಂದ ಫರಂಗಿಪೇಟೆಯ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಗೊಳಿಸಿ ಪ್ರತಿಭಟನೆ ಮಾಡಲು ತೀರ್ಮಾನಿಸಲಾಯಿತು. ಈ ಪ್ರತಿಭಟನೆ ಯಶಸ್ವಿಯಾಗಲು ಎಲ್ಲಾ ಸಂಘ ಸಂಸ್ಥೆಗಳು, ಸ್ಥಳೀಯ ಆರು ಗ್ರಾಮಗಳ ಗ್ರಾಮಸ್ಥರು, ವ್ಯಾಪಾರಿಗಳು, ಸಹಕಾರ ನೀಡುವಂತೆ ಕೋರಲಾಯಿತು. ಈ ಸಂದರ್ಭ ಪ್ರಮುಖರಾದ ಭರತ್ ಕುಮ್ಡೇಲು, ಉಮೇಶ್ ಶೆಟ್ಟಿ ಬರ್ಕೆ,…

Read More

ಬಂಟ್ವಾಳ: ಲಯನ್ಸ್ ಕ್ಲಬ್ ಬಂಟ್ವಾಳಕ್ಕೆ ಲಯನ್ಸ್ ಜಿಲ್ಲೆಯ ಪ್ರಾಂತ್ಯ 3ರ ಪ್ರಾಂತ್ಯಾಧ್ಯಕ್ಷ ಲಯನ್ ಯೂಜಿನ್ ಲೋಬೋ ರವರ ಅಧಿಕೃತ ಭೇಟಿ ಕಾರ್ಯಕ್ರಮವು ಮಂಗಳವಾರ ಸಂಜೆ ಬಿ.ಸಿ.ರೋಡಿನಲ್ಲಿರುವ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು. ಲಯನ್ಸ್ ಜಿಲ್ಲಾ ಸಂಯೋಜಕ, ತರಬೇತುದಾರ ಲಯನ್ ವಿಜಯ ವಿಷ್ಣು ಮಯ್ಯ ಕ್ಲಬ್ ಓರಿಯೆಂಟೇಷನ್ ಕಾರ್ಯಾಗಾರ ನಡೆಸಿಕೊಟ್ಟರು. ಪ್ರಾಂತ್ಯದ ಬೇರೆ ಬೇರೆ ಕ್ಲಬ್ ಗಳ ಅಧ್ಯಕ್ಷರುಗಳು, ಸದಸ್ಯರುಗಳು ಉಪಸ್ಥಿತರಿದ್ದರು.ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಸೇವಾ ಕಾರ್ಯಕ್ರಮವಾಗಿ ಮನೆ ನಿರ್ಮಾಣಕ್ಕೆ ಸಹಾಯಧನ ನೀಡಲಾಯಿತು. ಪ್ರಾಂತ್ಯಾಧ್ಯಕ್ಷ ಯೂಜಿನ್ ಲೋಬೋ ಮಾತನಾಡಿ ಸೇವೆಯ ಮೂಲಕ ಸಂತೃಪ್ತಿಯನ್ನು ಕಾಣಬಹುದು. ದುಡಿಮೆಯಲ್ಲಿ ಸ್ವಲ್ಪ ಹಣವನ್ನು ಕಷ್ಟದಲ್ಲಿರುವವರಿಗೆ ನೀಡಿದಾಗ ವ್ಯಕ್ತಿತ್ವಕ್ಕೂ ಶೋಭೆ, ಸಂಸ್ಥೆಗೂ ಘನತೆ ಎಂದು ತಿಳಿಸಿದರು.ಕ್ಲಬ್ ಅಧ್ಯಕ್ಷ ರಾಧಕೃಷ್ಣ ಬಂಟ್ವಾಳ ಅಧ್ಯಕ್ಷತೆ ವಹಿಸಿದ್ದರು. ಬಳಿಕ ಪ್ರಾಂತ್ಯಾಧ್ಯಕ್ಷ ಯೂಜಿನ್ ಲೋಬೋ ಹಾಗೂ ಪತ್ರಕರ್ತ ಸಂದೀಪ್ ಸಾಲ್ಯಾನ್ ಅವರನ್ನು ಕ್ಲಬ್ ವತಿಯಿಂದ ಗೌರವಿಸಲಾಯಿತು. ಕಾರ್ಯಕ್ರಮದ ಆತಿಥ್ಯ ನೀಡಿದ ಲಯನ್ ಕೃಷ್ಣಶ್ಯಾಮ್, ಸತ್ಯನಾರಾಯಣ ರಾವ್, ದುರ್ಗಾಪರಮೇಶ್ವರ ಭಟ್ ರವರಿಗೆ ಗೌರವಿಸಲಾಯಿತು.ಪ್ರಾಂತ್ಯದ ರಾಯಭಾರಿ…

Read More

ಬಂಟ್ವಾಳ: ಕರ್ನಾಟಕ ರಾಜ್ಯ ಸರಕಾರಿ ಹಿರಿಯ ಹಾಗೂ ಪದವಿಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘ ಬೆಂಗಳೂರು. ಇದರ ಬಂಟ್ವಾಳ ತಾಲೂಕು ಘಟಕದ ಪುನರ್ ರಚನಾ ಸಭೆ ಶನಿವಾರ ಬಿ.ಸಿ.ರೋಡಿನ ರಾಜ್ಯ ಸರಕಾರಿ ನೌಕರರ ಸಭಾ ಭವನದಲ್ಲಿ ಜರುಗಿತು. ಹಾಲಿ ಅಧ್ಯಕ್ಷೆ ಪ್ರೇಮ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ದ. ಕ. ಜಿಲ್ಲಾಧ್ಯಕ್ಷ ನಿಂಗರಾಜು ಕೆ.ಪಿ. ಭಾಗವಹಿಸಿ ನೂತನ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ತಾಲೂಕು ಘಟಕದ ನೂತನ ಗೌರವಾಧ್ಯಕ್ಷರಾಗಿ ಪ್ರೇಮ ಕೆ., ಅಧ್ಯಕ್ಷರಾಗಿ ಶಂಕರ್.ಪಿ, ಉಪಾಧ್ಯಕ್ಷರಾಗಿ ಚಂದ್ರಾವತಿ ಮತ್ತು ಉಮ್ಮರಗಿ ಶರಣಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ದಾಮೋದರ ಏರ್ಯ, ಸಹಕಾರ್ಯದರ್ಶಿಯಾಗಿ ನವೀನ ಕುಮಾರಿ ಮತ್ತು ವಿಶ್ವನಾಥ ಗೌಡ. ಬಿ ಖಜಾಂಜಿಯಾಗಿ ಪುಟ್ಟರಂಗನಾಥ.ಟಿ ಸಂಘಟಕಾರ್ಯದರ್ಶಿಯಾಗಿ ವಿಜಯಲಕ್ಷ್ಮಿ ಮತ್ತು ರವಿಕುಮಾ‌ರ್, ನಿರ್ದೇಶಕರಾಗಿ ರೋಹಿಣಿ ಮತ್ತು ಭವಾನಿ ಆಯ್ಕೆಗೊಂಡರು. ಈ ಸಂದರ್ಭದಲ್ಲಿ ಸ್ಥಾಪಕ ಅಧ್ಯಕ್ಷ ನಾರಾಯಣ ಪೂಜಾರಿ, ನಿವೃತ್ತ ಶಿಕ್ಷಕ ಆನಂದ ಎಂ. ಮತ್ತು ಕಲ್ಲಡ್ಕ ಮಾದರಿ ಶಾಲೆಯ ಪದವೀಧರ ಮುಖ್ಯ ಶಿಕ್ಷಕ ಅಬೂಬಕ್ಕರ್ ಅಶ್ರಫ್…

Read More

ಬಂಟ್ವಾಳ: ಲಯನ್ಸ್ ಕ್ಲಬ್ ಕೊಳ್ನಾಡು ಸಾಲೆತ್ತೂರು ಹಾಗೂ ಲಯನ್ಸ್ ಕ್ಲಬ್ ಅಮ್ಟೂರು ಇಲ್ಲಿಗೆ ಲಯನ್ಸ್ ಜಿಲ್ಲಾ ಗವರ್ನರ್ ಭಾರತಿ ಬಿ. ಇವರ ಅಧಿಕೃತ ಭೇಟಿ ಕಾರ್ಯಕ್ರಮ ಮಂಚಿಯಲ್ಲಿರುವ ಲಯನ್ಸ್ ಕ್ಲಬ್ ಕೊಳ್ನಾಡು ಸಾಲೆತ್ತೂರುವಿನ ಸಭಾಂಗಣದಲ್ಲಿ ನಡೆಯಿತು.ಕ್ಲಬ್ ಸದಸ್ಯ, ನಿಕಟಪೂರ್ವ ಪ್ರಾಂತೀಯ ಅಧ್ಯಕ್ಷ ರಮಾನಂದ ನೂಜಿಪ್ಪಾಡಿವರು ಕೊಡುಗೆಯಾಗಿ ನೀಡಿದ ಶೋಕೇಸ್‌ನ್ನು ಗವರ್ನರ್ ಉದ್ಘಾಟಿಸಿದರು.ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಾದ ಸುಮನ ಕ್ರಾಸ್ತ, ಮಹಮ್ಮದ್ ಶರೀಫ್, ಸಲೋಮಿ, ರಿಷಲ್, ರಿನೀಶ್ ಅವರನ್ನು ಸನ್ಮಾನಿಸಲಾಯಿತು. ಸೇವಾ ಕಾರ್ಯಕ್ರಮದ ಅಂಗವಾಗಿ ಅರ್ಹರಿಗೆ ಆರ್ಥಿಕ ನೆರವಿನ ಚೆಕ್ ಹಸ್ತಾಂತರಿಸಲಾಯಿತು. ಡಾ. ಗೋಪಾಲಾಚಾರ್ ಅವರು ನೀಡಿದ ಗಿಡಗಳು ಹಾಗೂ ಪುಸ್ತಕಗಳನ್ನು ಹಸ್ತಾಂತರಿಸಲಾಯಿತು. ಕೊಳ್ನಾಡು ಸಾಲೆತ್ತೂರಿನ ನೂತನ ಲಿಯೋ ಕ್ಲಬ್ ಉದ್ಘಾಟಿಸಲಾಯಿತು. ಸದಸ್ಯರನ್ನು ಘಟಕಕ್ಕೆ ಸೇರಿಸಿಕೊಳ್ಳಲಾಯಿತು.ಲಯನ್ಸ್ ಮಾಜಿ ಜಿಲ್ಲಾ ಗವರ್ನರ್ ಲಯನ್ ವಸಂತ ಕುಮಾರ್ ಶೆಟ್ಟಿಯವರು ನೂತನವಾಗಿ ಅಸ್ಥಿತ್ವಕ್ಕೆ ಬಂದ ಲಿಯೋ ಕ್ಲಬ್ ಪದಾಧಿಕಾರಿಗಳಿಗೆ ಪದಗ್ರಹಣ ನೆರವೇರಿಸಿ ಪ್ರಮಾಣ ವಚನ ಭೋದಿಸಿದರು. ಅವರು ಮಾತನಾಡಿ ಎರಡು ಕ್ಲಬ್‌ಗಳು ಗ್ರಾಮೀಣ…

Read More

ಬಂಟ್ವಾಳ: ಸಮಾಜ ಸೇವಾ ಸಹಕಾರಿ ಸಂಘ ಇದರ ನೂತನ ಸಾಲಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಸುರೇಶ್ ಕುಲಾಲ್ ಪುನರಾಯ್ಕೆಯಾಗಿದ್ದು ಉಪಾಧ್ಯಕ್ಷರಾಗಿ ಜನಾರ್ದನ ಬೊಂಡಾಲ ಆಯ್ಕೆಗೊಂಡರು.ಬಂಟ್ವಾಳದ ಬೈಪಾಸ್ ಜಂಕ್ಷನ್ ನಲ್ಲಿರುವ ಸಂಘದ ಪ್ರಧಾನ ಕಚೇರಿಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಬಳಿಕ ನಡೆದ ಸಭೆಯಲ್ಲಿ ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ ನೂತನ ಅಧ್ಯಕ್ಷ ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿ ಸಮಾಜ ಸೇವಾ ಸಹಕಾರಿ ಸಂಘದ ಸ್ಥಾಪಕಾಧ್ಯಕ್ಷ ಡಾ. ಅಮ್ಮೆಂಬಳ ಬಾಳಪ್ಪ ಅವರ ಕನಸು ನನಸಾಗಿದೆ. ಅಧ್ಯಕ್ಷ ಸುರೇಶ್ ಕುಲಾಲ್ ಮತ್ತವರ ತಂಡದ ಪ್ರಾಮಾಣಿಕ ಕೆಲಸದಿಂದಾಗಿ ಇಂದು ಸಂಘ ಜಿಲ್ಲಾ ಮಟ್ಟದಲ್ಲಿ ಎದ್ದು ಕಾಣುತ್ತಿದೆ ಎಂದರು.ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕರುಣೇಂದ್ರ ಪೂಜಾರಿ ಕೊಂಬರ ಬೈಲು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಅಪಪ್ರಚಾರ ವನ್ನು ಮೆಟ್ಟಿ ನಿಂತು ಚುನಾವಣೆಯಲ್ಲಿ ಎಲ್ಲಾ ಸ್ಥಾನವನ್ನು ಗೆಲ್ಲುವ ಮೂಲಕ ಸುರೇಶ್ ಕುಲಾಲ್ ಅವರ ತಂಡ ಉತ್ತಮ ಕಾರ್ಯ ಮಾಡಿದೆ ಎಂದರು.ತಾ.ಪಂ. ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು, ಶಂಭೂರು…

Read More