Author: admin
ಬಂಟ್ವಾಳ: ಸರ್ವಜ್ಞನ ತ್ರಿಪದಿಗಳು ಶಾಲೆ ಪರೀಕ್ಷೆಗಷ್ಟೇ ಅಲ್ಲ, ಜೀವನ ಪರೀಕ್ಷೆಗೂ ಸಹಕಾರಿ ಎಂದು ಪತ್ರಕರ್ತ ಸಂದೀಪ್ ಸಾಲ್ಯಾನ್ ಹೇಳಿದರು.ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ಹಾಗೂ ಬಂಟ್ವಾಳ ತಾಲೂಕು ಮಟ್ಟದ ಶ್ರೀ ಕವಿ ಸರ್ವಜ್ಞ ಜಯಂತಿ ಆಚರಣೆಯಲ್ಲಿ ಅವರು ಉಪನ್ಯಾಸ ನೀಡಿದರು.ಹದಿನಾರನೇ ಶತಮಾನದಲ್ಲಿ ಸರ್ವಜ್ಞ ಬರೆದ ತ್ರಿಪದಿಗಳು ಇಂದಿಗೂ ಪ್ರಸ್ತುತವಾಗಿದ್ದು, ಅದು ಸಾರ್ವಕಾಲಿಕವಾಗಿದೆ. ಇದನ್ನು ಅಳವಡಿಸಿದವರ ಬದುಕು ಉತ್ಕೃಷ್ಟವಾಗುತ್ತದೆ ಎಂದು ಅವರು ಹೇಳಿ, ಸರ್ವಜ್ಞ ಮಹಾನ್ ಸಂತನಾದ ಬಗೆ ವಿವರಿಸಿದರು. ಸರ್ವಜ್ಞ ಜಯಂತಿ ಆಚರಣೆಯನ್ನು ಸರ್ವಜ್ಞ ಜಯಂತಿ ಆಚರಣಾ ಸಪ್ತಾಹದ ಮೂಲಕ ಶಾಲೆಗಳಲ್ಲಿ ಮಾಡಿದರೆ ಹೆಚ್ಚು ಅರ್ಥಪೂರ್ಣ ಆಗುತ್ತದೆ ಎಂದವರು ಸಲಹೆ ನೀಡಿದರು. ಅಧ್ಯಕ್ಷತೆಯನ್ನು ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಕಾರ್ಯಧ್ಯಕ್ಷ ನಾರಾಯಣ ಸಿ.ಪೆರ್ನೆ ವಹಿಸಿ ಶುಭ ಹಾರೈಸಿದರು. ರಾಜ್ಯ ಕುಲಾಲ ಕುಂಬಾರರ ಮಹಿಳಾ ಸಂಘ ಬಂಟ್ವಾಳದ ಅಧ್ಯಕ್ಷೆ ನಳಿನಿ ಮಹಾಬಲ, ಯುವ ವೇದಿಕೆ ತಾಲೂಕು ಅಧ್ಯಕ್ಷ ನಿತೀಶ್ ಕುಲಾಲ್ ಪಲ್ಲಿಕಂಡ, ವಿಜಯ…
ಬಂಟ್ವಾಳ: ಇಲ್ಲಿನ ಇತಿಹಾಸ ಪ್ರಸಿದ್ದ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥ ಹಾಗೂ ಸಾನಿಧ್ಯ ಅಭಿವೃದ್ದಿಗಾಗಿ ಶತಚಂಡಿಕ ಯಾಗ ಸೇವಾ ರೂಪದಲ್ಲಿ ದೊಡ್ಡ ರಂಗಪೂಜೆ ಉತ್ಸವ ಮಾ. 1 ಶನಿವಾರದಿಂದ ಮೊದಲ್ಗೊಂಡು ಮಾ.7ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಶ್ರೀ ವೇದಮೂರ್ತಿ ಪೊಳಲಿ ಶ್ರೀ ಕೃಷ್ಣ ತಂತ್ರಿಗಳ ಮಾರ್ಗದರ್ಶನದಲ್ಲಿ ನಡೆಯಲಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ತಿಳಿಸಿದರು. ಪೊಳಲಿಯ ಸರ್ವಮಂಗಳ ಸಭಾಂಗಣದಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಅವರು ಮಾಹಿತಿ ನೀಡಿ ಮಾ.1 ಶನಿವಾರ ಬೆಳಿಗ್ಗೆ ಗಂಟೆ 8ರಿಂದ ಸಾಮೂಹಿಕ ಪ್ರಾರ್ಥನೆ, ಗಣಪತಿ ಹೋಮ, ಸಪ್ತಸತಿ ಪಾರಾಯಣ ಆರಂಭ, ನವಾಕ್ಷರೀ ಜಪ. ಮಾ.2 ಆದಿತ್ಯವಾರ ಬೆಳಿಗ್ಗೆ ಗಂಟೆ 7.30 ರಿಂದ ಪಾರಾಯಣ, ನವಾಕ್ಷರೀ ಜಪ, ಮೃತ್ಯುಂಜಯ ಹೋಮ, ಸುಬ್ರಹ್ಮಣ್ಯ ಸಹಸ್ರನಾಮ ಹೋಮ ಸಾಯಂಕಾಲ ಗಂಟೆ 3.30 ರಿಂದ ಶ್ರೀಚಕ್ರ ಪೂಜೆ, ಮಾ.3 ಸೋಮವಾರ ಬೆಳಿಗ್ಗೆ ಗಂಟೆ 7.30 ರಿಂದ ಪಾರಾಯಣ, ನವಾಕ್ಷರೀ ಜಪ, ನವಗ್ರಹ ಹೋಮ, ಮಾ.4 ಮಂಗಳವಾರ ಬೆಳಿಗ್ಗೆ ಗಂಟೆ 7.30 ರಿಂದ,…
ಬಂಟ್ವಾಳ: ಶ್ರೀ ಕುಪ್ಪೆಟ್ಟು ಪಂಜುರ್ಲಿಯ ಮೂಲಸ್ಥಾನ ಕುಪ್ಪೆಟ್ಟು ಬರ್ಕೆಯಲ್ಲಿ ಪುನರ್ ಪ್ರತಿಷ್ಠಾ ಮಹೋತ್ಸವ ಮತ್ತು ನೇಮೋತ್ಸವ ಫೆ. 18ರಿಂದ ಫೆ.22 ಶನಿವಾರದವರೆಗೆ ವಿಜ್ರಂಭಣೆಯಿಂದ ನಡೆಯಲಿದೆ ಎಂದು ಪ್ರತಿಷ್ಠಾ ಮಹೋತ್ಸವ ಸಮಿತಿ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ತಿಳಿಸಿದರು. ಅವರು ಬಿ.ಸಿ.ರೋಡಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಶ್ರೀ ಕೊಡಮಣಿತ್ತಾಯ, ಲೆಕ್ಕೆಸಿರಿ, ಮೈಸಂದಾಯ, ಹಿರಿಯಜ್ಜ, ಕುಪ್ಪೆಟ್ಟು ಕಲ್ಲುಟಿ ಪಂಜುರ್ಲಿ, ಮಂತ್ರ ಜಾವದೆ, ಬಂಟ ಪಂಜುರ್ಲಿ ಮತ್ತು ಗಡುಪಾಡಿ ಜಾಗದ ಕಲ್ಲುರ್ಟಿ ಪಂಜುರ್ಲಿ ದೈವಗಳ ಪುನರ್ ಪ್ರತಿಷ್ಠೆ ಹಾಗೂ ನೇಮೋತ್ಸವ ನಡೆಯಲಿದೆ ಎಂದು ತಿಳಿಸಿದರು. ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ದಿನೇಶ್ ಸುವರ್ಣ ರಾಯಿ ಮಾಹಿತಿ ನೀಡಿ ನೀಡಿ ಫೆ. ೧6ರಂದು ಸಂಗಬೆಟ್ಟು ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನದಿಂದ ಹೊರೆಕಾಣಿಕೆ ಮೆರವಣಿಗೆಗೆ ಶ್ರೀ ಕ್ಷೇತ್ರ ಪೂಂಜದ ಕೃಷ್ಣಪ್ರಸಾದ್ ಆಸ್ರಣ್ಣ ಚಾಲನೆ ನೀಡಲಿದ್ದಾರೆ, ಫೆ. 18ರಂದು ಬೆಳಗ್ಗೆ ಸಾನಿಧ್ಯದಲ್ಲಿ ಆಶ್ಲೇಷಾ ಪೂಜೆಯೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಳ್ಳುತ್ತವೆ. ಫೆ.19 ಮತ್ತು ಫೆ. 20ರಂದು ಧಾರ್ಮಿಕ ಕಾರ್ಯಕ್ರಮಗಳು ಇರಲಿದ್ದು, ಫೆ.21ರಂದು ಸಂಜೆ ಶ್ರೀ…
ಬಂಟ್ವಾಳ: ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ ವೇಣೂರು ಶಾಖೆಯಲ್ಲಿ ಈ ಸ್ಟಾಂಪಿಂಗ್ ವ್ಯವಸ್ಥೆಯ ಉದ್ಘಾಟನಾ ಸಮಾರಂಭ ಬುಧವಾರ ನಡೆಯಿತು.ವೇಣೂರು ಬಿಲ್ಲವ ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ ಈ ಸ್ಟಾಂಪಿಂಗ್ ವ್ಯವಸ್ಥೆ ಉದ್ಘಾಟಿಸಿ ಶುಭ ಹಾರೈಸಿದರು, ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ವೇಣೂರು ಇದರ ಪ್ರಬಂಧಕ ರಂಜಿತ್ ದೀಪ ಬೆಳಗಿಸಿದರು. ವೇಣೂರು ಜುಮ್ಮಾ ಮಸೀದಿ ಅಧ್ಯಕ್ಷ ಜಕ್ರೀಯ ಶುಭ ಹಾರೈಸಿದರು. ಸಂಘದ ಅಧ್ಯಕ್ಷ ಕೆ.ಸಂಜೀವ ಪೂಜಾರಿ ಮಾತನಾಡಿ ಇದರ ಸೇವೆಯನ್ನು ಎಲ್ಲ ಗ್ರಾಹಕರು ಪಡೆದುಕೊಂಡು ನಮ್ಮ ಸಂಘದಲ್ಲಿ ಉತ್ತಮ ರೀತಿಯಲ್ಲಿ ವ್ಯವಹರಿಸಿ ಸಂಘದ ಶ್ರೇಯೋಭಿವೃದ್ಧಿಗಾಗಿ ಸಹಕರಿಸಬೇಕಾಗಿ ವಿನಂತಿಸಿದರು. ವೇಣೂರು ಮೂರ್ತೇದರರ ಸಂಘದ ಅಧ್ಯಕ್ಷ ರಮೇಶ್ ಪೂಜಾರಿ, ವೆಂಕಟರಮಣ ಕೋ- ಆಪರೇಟಿವ್ ವೇಣೂರು ಶಾಖಾ ವ್ಯವಸ್ಥಾಪಕ ಗಾಯನ್ ಉಪಸ್ಥಿತರಿದ್ದರು. ಸಂಘದ ನಿರ್ದೇಶಕರಾದ ಸುಂದರ ಪೂಜಾರಿ, ರಮೇಶ್ ಅನ್ನಪ್ಪಾಡಿ, ಜಯಶಂಕರ ಕಾನ್ಸ್ಲೆ, ಆಶಿಶ್ ಪೂಜಾರಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಮತಾ ಜಿ, ಎಜಿಎಂ ಶಿಲ್ಪಾ ಉಪಸ್ಥಿತರಿದ್ದರು. ನಿರ್ದೇಶಕ ಅರುಣ್ ಕುಮಾರ್ ಸ್ವಾಗತಿಸಿದರು,…
ಬಂಟ್ವಾಳ: ತಾಲೂಕಿನ ಸಜೀಪಮಾಗಣೆಯ ಪ್ರಧಾನ ದೇವಾಲಯ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಭ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.ಉಳಿದಂತೆ ಸಮಿತಿ ಸದಸ್ಯರಾಗಿ ಪ್ರಧಾನ ಅರ್ಚಕರಾದ ವೇ.ಮೂ.ಮಹೇಶ್ ಭಟ್, ದೇವಿಪ್ರಸಾದ್ ಪೂಂಜಾ ಬರಂಗರೆ,ಸುಧೀರ್ ಕುಮಾರ್, ಕೆ.ಕಾನ್ಸಲೆ, ಕೆ.ಮೋಹನದಾಸ್ ಪೂಜಾರಿ, ನವೀನ್ ಕುಮಾರ್ ಪಣೋಲಿಬೈಲ್, ಅಣ್ಣುನಾಯ್ಕ್ ನಗ್ರಿ, ಸುಜಾತಗಣೇಶ್ ಶೆಟ್ಟಿ, ಬೇಬಿ ಯೋಗೀಶ್ ಪೂಜಾರಿ ಅವರು ನೇಮಕಗೊಂಡಿದ್ದಾರೆ.ನೂತನ ವ್ಯವಸ್ಥಾಪನಾ ಸಮಿತಿ ಸೋಮವಾರ ದೇವಳದಲ್ಲಿ ಅಧಿಕಾರ ಸ್ವೀಕರಿಸಿದೆ. ಈ ಸಂದರ್ಭ ದೇವಳದ ಆಡಳಿತಾಧಿಕಾರಿಯಾಗಿದ್ದ ತಾರನಾಥ ಸಾಲಿಯಾನ್ ಪಿ., ಕಾರ್ಯನಿರ್ವಹಣಾಧಿಕಾರಿ ಪ್ರವೀಣ್, ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಎ.ಸಿ.ಭಂಡಾರಿ, ಸಜೀಪಮುನ್ನೂರು ಮೂರ್ತೆದಾರರ ಸೇ.ಸ.ಸಂಘದ ಅಧ್ಯಕ್ಷ ಸಂಜೀವಪೂಜಾರಿ ಬೊಳ್ಳಾಯಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು.
ಬಂಟ್ವಾಳ: ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾoಬಾ ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಸಜೀಪಮೂಡ ಗ್ರಾಮದ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆ.12ರಿಂದ ಫೆ.16ರವರೆಗೆ ಅಗೇಲು ಮತ್ತು ಕೋಲ ಸೇವೆ ಇರುವುದಿಲ್ಲ. ಫೆ.18ರಿಂದ ಎಂದಿನಂತೆ ಅಗೇಲು ಸೇವೆ ನಡೆಯುತ್ತದೆ ಎಂದು ದೈವಸ್ಥಾನದ ಪ್ರಕಟಣೆ ತಿಳಿಸಿದೆ.
ಬಂಟ್ವಾಳ: ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ok ದುರ್ಗಾಂಬ ಕ್ಷೇತ್ರದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಬ್ರಹ್ಮಶ್ರೀ ವೇದಮೂರ್ತಿ ನಿಲೇಶ್ವರ ಕೆ. ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ಉಪಸ್ಥಿತಿಯಲ್ಲಿ ಫೆ. 12ರಿಂದ ಆರಂಭಗೊಂಡು ಫೆ.17ರವರೆಗೆ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.ಫೆ.12ರಂದು ಧ್ವಜಾರೋಹಣ, ರಾತ್ರಿ 7ಕ್ಕೆ ಸಜೀಪನಡುಶ್ರೀ ನಾಲ್ಕೈತ್ತಾಯ ದೈವಸ್ಥಾನದಿಂದ ಭಂಡಾರ ಹೊರಟು, ರಾತ್ರಿ 8.30ಕ್ಕೆ ಕ್ಷೇತ್ರ ತಲುಪಲಿದೆ. ರಾತ್ರಿ 10 ರಿಂದ ದೇವರ ಬಲಿ, ಉತ್ಸವ ನಡೆಯಲಿದೆ. ಫೆ. 13ರಂದು ಬಯನ ಬಲಿ ಉತ್ಸವ. ಫೆ. 14ರಂದು ನಡು ಬಲಿ ಮತ್ತು ಪಾಲಕಿ ಉತ್ಸವ, ಫೆ. 15ರಂದು ಲಲಿತಾ ಸಹಸ್ರನಾಮ ಯಾಗ, ಮಹಾರಥೋತ್ಸವ, ಫೆ.16ರಂದು ಧ್ವಜಾವರೋಹಣ, ಶ್ರೀ ನಾಲ್ಕೈತ್ತಾಯ ದೈವದ ನೇಮ, ಫೆ. 17ರಂದು ಸಂಪ್ರೋಕ್ಷಣೆ ಮತ್ತು ಮಂತ್ರಾಕ್ಷತೆ ನಡೆಯಲಿದೆ.
ಬಂಟ್ವಾಳ: ಇಲ್ಲಿನ ಬಿ.ಸಿ.ರೋಡಿನ ಕೇಂದ್ರ ಭಾಗದಲ್ಲಿರುವ ಶ್ರೀ ಚಂಡಿಕಾ ಪರಮೆಶ್ವರೀ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ ಫೆ.12 ರಿಂದ ಫೆ.14ರವೆರೆಗೆ ನಡೆಯಲಿದೆ.ಫೆ.12ರಂದು ಬೆಳಿಗ್ಗೆ 7ಕ್ಕೆ ಪ್ರಾರ್ಥನೆ ಬಳಿಕ ಪುಣ್ಯಾಹ ವಾಚನ, ಪ್ರಾಸಾದ ಶುದ್ಧಿ, ವಾಸ್ತುಹೋಮ, ರಕ್ಷೋಘ್ನ ಹೋಮ, ವಾಸ್ತು ಬಲಿ, ಮಹಾಪೂಜೆ ನಡೆಯಲಿದೆ. ಸಂಜೆ 4.30ರಿಂದ ಮೋಕ್ಷ ಸಂಗ್ರಾಮ ಯಕ್ಷಗಾನ ತಾಳಮದ್ದಳೆ ನಡೆಯಲಿದೆ.ಫೆ.13ರಂದು ಬೆಳಿಗ್ಗೆ 8.30ಕ್ಕೆ ಗಣಹೋಮ, 9ರಿಂದ 12ರವರೆಗೆ ಬಿಂಬ ಕಲಶ ಪೂಜೆ, ಬಿಂಬ ಕಲಶಾಭಿಷೇಕ, 12.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 6.30ಕ್ಕೆ ದೀಪಾಲಂಕರ ಪೂಜೆ, ವಾದ್ಯ ಸೇವೆ, ರಾತ್ರಿ 8ಕ್ಕೆ ಮಹಾಪೂಜೆ ನಡೆಯಲಿದೆ. 8.30ಕ್ಕೆ ಬಲಿ ಹೊರಟು, 10ಕ್ಕೆ ವಸಂತಕಟ್ಟೆ ಪೂಜೆ ನಡೆಯಲಿದೆ. 10.30ಕ್ಕೆ ವಿಶೇಷ ನರ್ತನ ಬಲಿ ನಡೆಯಲಿದೆ.ಫೆ.14ರಂದು ಬೆಳಿಗ್ಗೆ ಗಣಹೋಮ. 8ಕ್ಕೆ ದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ ನಡೆಯಲಿದೆ. 11ಕ್ಕೆ ನವಕ ಕಲಶಾಭಿಷೇಕ, 12.30ಕ್ಕೆ ಮಹಾಪೂಜೆ, 1ಕ್ಕೆ ಮಂತ್ರಾಕ್ಷತೆ ಪ್ರಸಾದ ವಿತರಣೆ ನಡೆಯಲಿದೆ. ಬಳಿಕ ಹರಕೆ ಬಂದ ಸೀರೆಗಳ ಏಲಂ…
ಬಂಟ್ವಾಳ: ತಾಲೂಕಿನ ಕರಿಯಂಗಳ ಗ್ರಾಮದ ಬಡಕಬೈಲ್ ಜಂಕ್ಷನ್ ನ ಬಳಿ 3-4 ಕಟ್ಟಡಗಳಿಗೆ ನಿನ್ನೆ ರಾತ್ರಿ ಅಗ್ನಿ ಆಕಸ್ಮಿಕದಿಂದ ಸಮಸ್ಯೆ ಉಂಟಾಯಿತು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸ್ಥಳೀಯರ ಸಹಕಾರದೊಂದಿಗೆ ಬೆಂಕಿ ನಂದಿಸಿದರು, ರಾತ್ರಿ 1.00 ಗಂಟೆಗೆ ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳದ ಕಾರ್ಯಾಚರಣೆ ವೀಕ್ಷಣೆ ಮಾಡಿ, ಮನೆಮಂದಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ ಉಳಿಪ್ಪಾಡಿ ಸಾಂತ್ವನ ಹೇಳಿದರು. ಕಂದಾಯ ನಿರೀಕ್ಷಕ ವಿಜಯ್ ಆರ್ ಸಹಿತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಂಟ್ವಾಳ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.) ಕರ್ನಾಟಕ ನೇತ್ರಾವತಿ ವಲಯ ಬಂಟ್ವಾಳ ತಾಲೂಕು ಇವರ ವತಿಯಿಂದ ಮಹತೋಭಾರ ಶ್ರೀಕಾರಿಂಜೇಶ್ವರ ದೇಗುಲದಲ್ಲಿ ರಥಸಪ್ತಮಿಯ ಪ್ರಯುಕ್ತ 108 ಸೂರ್ಯ ನಮಸ್ಕಾರ ನಡೆಯಿತು. ಮಹತೋಭಾರ ಶ್ರೀ ಕಾರಿಂಜೇಶ್ವರ ದೇಗುಲದ ಅರ್ಚಕ ಮಿಥುನ್ ಭಟ್ ನಾವಡ ಇವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪತಂಜಲಿ ಯೋಗ ಶಿಕ್ಷಣ ಸಮಿತಿಯ ಜಿಲ್ಲಾ ವಿಸ್ತರಣಾ ಪ್ರಮುಖ್ ಈಶ್ವರ್, ತಾಲೂಕು ಸಂಚಾಲಕ ನಾರಾಯಣ, ಶಾಖಾ ಸಂಚಾಲಕ ಹೇಮಂತ್ ಹಾಗೂ ತಾಲೂಕು ಪ್ರಮುಖರು ಹಾಗೂ ಬಂಟ್ವಾಳ ತಾಲೂಕಿನ ಎಲ್ಲಾ ಯೋಗ ಬಂಧುಗಳು ಭಾಗವಹಿಸಿದ್ದರು.ಪ್ರಕಾಶ್ ರವರು ರಥಸಪ್ತಮಿಯ ವಿಶೇಷದ ಬಗ್ಗೆ ಬೌದ್ಧಿಕ್ ನೀಡಿದರು.ನಯನ ನಿರೂಪಿಸಿ, ಸುಗುಣ ವಂದಿಸಿದರು.








