Author: admin
ಬಂಟ್ವಾಳ : ಬಿ.ಮೂಡ ಗ್ರಾಮದ ಸಂಚಯಗಿರಿ ನಾಗರಿಕ ಕ್ರಿಯಾ ಸಮಿತಿ ಇದರ 2025- 26ನೇ ಸಾಲಿನ ಮಹಾಸಭೆಯು ಸಂಚಯ ಗಿರಿಯ ನರಸಿಂಹ ಹೊಳ್ಳ ಕಲಾ ವೇದಿಕೆಯಲ್ಲಿ ಮಂಗಳವಾರ ನಡೆಯಿತು. ಅಧ್ಯಕ್ಷರಾಗಿ ಸುರೇಶ್ ಬಂಗೇರವರು ಸತತ ನಾಲ್ಕನೇ ಬಾರಿಗೆ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.ಕಾರ್ಯದರ್ಶಿಯಾಗಿ ಹರೀಶ ಶೆಣೈ, ಕೋಶಾಧಿಕಾರಿಯಾಗಿ ಎ.ದಾಮೋದರ್, ಗೌರವಾಧ್ಯಕ್ಷರಾಗಿ ನರಸಿಂಹರಾಜ ಹೊಳ್ಳ ,ಕ್ರೀಡಾ ಕಾರ್ಯದರ್ಶಿಯಾಗಿ ಧನಂಜಯ ಬಾಳಿಗ, ಉಪಾಧ್ಯಕ್ಷರಾಗಿ ತಾಯಮ್ಮ,ಸಮಿತಿ ಸದಸ್ಯರುಗಳಾಗಿ ಸಂಕಪ್ಪ ಶೆಟ್ಟಿ, ಪಾಂಡುರಂಗ ನಾಯಕ್ , ಸುಧಾಕರ್ ಸಾಲಿಯಾನ್, ಪುರಂದರ ಶೆಟ್ಟಿ ,ಪ್ರಭಾಕರ ಪ್ರಭು, ದಾಮೋದರ ಗೌಡ ,ರಾಘವೇಂದ್ರ ಬನ್ನಿಂತಾಯ, ಸತೀಶ್ ಬಂಗೇರ ,ಶೇಖರ್ ಕುಲಾಲ್, ಪ್ರದೀಪ್ ,ಪವಿತ್ರ ಕುಮಾರ್ ,ಪ್ರಿಯಾಲತ, ಭವತಾರಿಣಿ, ರೀಟಾ ಆಯ್ಕೆಯಾದರು
ಬಂಟ್ವಾಳ: ಕ್ಷಯರೋಗ ಗುಣವಾಗುವ ಕಾಯಿಲೆ, ಸರಿಯಾದ ಪೌಷ್ಠಿಕ ಆಹಾರ ಸೇವನೆ ಹಾಗೂ ಚಿಕಿತ್ಸಾ ಪದ್ದತಿಯಿಂದ ಅನೇಕ ಮಂದಿ ರೋಗಮುಕ್ತರಾಗಿ ಮುಖ್ಯವಾಹಿನಿಗೆ ಬಂದಿದ್ದಾರೆ. ಕೇಂದ್ರ ಸರಕಾರದ ಈ ಯೋಜನೆಯನ್ನು ಸೇವಾಂಜಲಿ ಸಂಸ್ಥೆ ಕ್ಷಯ ರೋಗಿಗಳಿಗೆ ಒದಗಿಸುವ ಮೂಲಕ ಅವರ ಬಾಳಿಗೆ ಆಶಾಕಿರಣವಾಗಿದೆ ಎಂದು ವಳಚ್ಚಿಲ್ನ ಶ್ರೀನಿವಾಸ ತಾಂತ್ರಿಕ ಮಹಾ ವಿದ್ಯಾಲಯದ ಪ್ರಾಂಶುಪಾಲ ಡಾ. ಶ್ರೀನಿವಾಸ್ ಮಯ್ಯ ಡಿ. ಹೇಳಿದರು.ಕೇಂದ್ರ ಸರ್ಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ಕ್ಷಯ ರೋಗಿಗಳಿಗೆ ದವಸಧಾನ್ಯದ ಕಿಟ್ ವಿತರಿಸಿ ಅವರು ಮಾತನಾಡಿದರು.ಉದ್ಯಮಿ ತೇವು ತಾರಾನಾಥ ಕೊಟ್ಟಾರಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಕೃಷ್ಣ ಕುಮಾರ್ ಪೂಂಜ ಅವರು ಸ್ವಂತಕ್ಕಿಂತ ಸಮಾಜಕ್ಕೆ ಹೆಚ್ಚು ಸಮಯವನ್ನು ಮೀಸಲಿಟ್ಟು ಸೇವಾಕಾರ್ಯಗಳನ್ನು ಮಾಡಿದವರು. ಪ್ರಧಾನ ಮಂತ್ರಿಯವರ ಕರೆಯ ಮೇರೆಗೆ ಪ್ರತೀ ತಿಂಗಳು ಕ್ಷಯ ರೋಗಿಗಳಿಗೆ ಆಹಾರದ ಕಿಟ್ ನೀಡಿ ಸ್ವಸ್ಥ ಸಮಾಜ ನಿರ್ಮಾಣ ಕಾರ್ಯದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಾರೆ ಎಂದರು.ಸೇವಾಂಜಲಿ ಪ್ರತಿಷ್ಠಾನ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ಪ್ರಾಸ್ತವಿಕವಾಗಿ ಮಾತನಾಡಿ…
ಬಂಟ್ವಾಳ: ಜೆಸಿಐ ಜೋಡುಮಾರ್ಗ ನೇತ್ರಾವತಿ ಹಾಗೂ ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಜಂಟಿ ಆಶ್ರಯದಲ್ಲಿ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ ಮಂಗಳವಾರ ಬಿ.ಸಿ.ರೋಡಿನ ಪ್ರೀತಿ ಕಾಂಪ್ಲೆಕ್ಸ್ನಲ್ಲಿ ನಡೆಯಿತು.ಜೆಸಿಐ ಜೋಡುಮಾರ್ಗ ನೇತ್ರಾವತಿ ಅಧ್ಯಕ್ಷೆ ತೃಪ್ತಿ ಪಿ., ಅಧ್ಯಕ್ಷತೆ ವಹಿಸಿ ಕ್ಯಾನ್ಸರ್ ಬೆಗೆಗಿನ ಆರೋಗ್ಯ ಮಾಹಿತಿ ನೀಡಿದರು. ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷ ಕಿಶೋರ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು. ಜೆಸಿಐ ಕಾರ್ಯದರ್ಶಿ ಪ್ರಗತಿ ಕೆ. ವಂದಿಸಿದರು, ಕಾರ್ಯಕ್ರಮ ಸಂಯೋಜಕ ಹರಿಶ್ಚಂದ್ರ ಆಳ್ವ , ರೋಟರಿಯ ನಿಕಟಪೂರ್ವಾಧ್ಯಕ್ಷ ಸುರೇಶ್ ಸಾಲ್ಯಾನ್, ಜೊತೆ ಕಾರ್ಯದರ್ಶಿ ನಾಗೇಶ್ ಕುಲಾಲ್ ಉಪಸ್ಥಿತರಿದ್ದರು.
ಬಂಟ್ವಾಳ: ಜಿಲ್ಲಾ ಕಾಂಗ್ರೆಸ್ ಮುಖಂಡ ಬೊಂಡಾಲ ಚಿತ್ತರಂಜನ್ ಶೆಟ್ಟಿಯವರ ಪಿಸ್ತೂಲಿನಿಂದ ಮಿಸ್ ಫೈರಿಂಗ್ ಆಗಿ ಅವರ ಕಾಲಿಗೆ ಗಾಯವಾದ ಘಟನೆ ಮಂಗಳವಾರ ಸಂಜೆ ಅನಂತಾಡಿಯಲ್ಲಿ ನಡೆದಿದೆ. ಅತಕ್ಷಣ ಅವರೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಅನಂತಾಡಿಯಲ್ಲಿ ಕ್ಲಲಿನ ಕೋರೆಯ ಇನ್ಚಾರ್ಜ್ ಚಿತ್ತರಂಜನ್ ಶೆಟ್ಟಿಯವರಿಗಿದ್ದು ಅಲ್ಲಿಗೆ ತೆರಳಿದ್ದ ವೇಳೆ ತನ್ನ ಲೈಸನ್ಸೆಡ್ ಪಿಸ್ತೂಲನ್ನು ಹೊರತೆಗೆಯುವ ವೇಳೆ ಆಕಸ್ಮಿಕವಾಗಿ ಮಿಸ್ಫೈಯರಿಂಗ್ ಆಗಿ ಕಾಲಿಗೆ ಗಾಯವಾಗಿದೆ ಎಂದು ಪೊಲೀಸರು ತಿಳಿಸಿದ್ದರೆ. ಪಿಸ್ತೂಲ್ ಲಾಕ್ ಆಗದೆ ಈ ಅವಘಡ ಸಂಭವಿಸಿರುವುದಾಗಿ ತಿಳಿದು ಬಂದಿದೆ. ಸುದ್ದಿ ತಿಳಿದ ನಂದಾವರದ ಪವರ್ ಇಕ್ಬಾಲ್ ಅವರು ಸ್ಥಳಕ್ಕೆ ತೆರಳಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಘಟನೆಯ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ: ಜೆಸಿಐ ಬಂಟ್ವಾಳ, ಬಂಟ್ವಾಳ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಕನ್ನಡ ಸಾಹಿತ್ಯ ಪರಿಷತ್ತು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ವಲಯ ಇದರ ಸಹಯೋಗದಲ್ಲಿ ಮಂಗಳೂರಿನ ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಇದರ ಸಹಕಾರದೊಂದಿಗೆ ವಿಶ್ವ ಕಾನ್ಸರ್ ದಿನದ ಅಂಗವಾಗಿ ಆರೋಗ್ಯ ಮಾಹಿತಿ ಮತ್ತು ಆರೋಗ್ಯ ಉಚಿತ ತಪಾಸಣಾ ಶಿಬಿರ ಮಂಗಳವಾರ ಬಿ.ಸಿ.ರೋಡಿನ ಕನ್ನಡ ಭವನದಲ್ಲಿ ನಡೆಯಿತು. ಬಂಟ್ವಾಳ ತಾಲೂಕು ಕಸಾಪ ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಶಿಬಿರ ಉದ್ಘಾಟಿಸಿ ಮಾತನಾಡಿ ಸರಿಯಾದ ಆಹಾರ ಕ್ರಮ, ಶಿಸ್ತುಬದ್ಧ ಜೀವನ ಹಾಗೂ ದೃಢ ಮನಸ್ಸಿನಿಂದ ಕ್ಯಾನ್ಸರ್ ರೋಗದಿಂದ ಗುಣಮುಖರಾಗಲು ಸಾಧ್ಯವಿದೆ ಎಂದರು.ಜೆಸಿಐ ಬಂಟ್ವಾಳದ ಅಧ್ಯಕ್ಷ ಗಣೇಶ್ ಕೆ. ಕುಲಾಲ್ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಶ್ವಿನಿ ಬಾಲಕೃಷ್ಣ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮಹಿಳಾ ಜ್ಞಾನವಿಕಾಸ ಕೇಂದ್ರದ ಸಮನ್ವಯಾಧಿಕಾರಿ ಶ್ರುತಿ, ಎ.ಜೆ. ಆಸ್ಪತ್ರೆಯ ಸಮುದಾಯ ಆರೋಗ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ವಾಮನ ನಾಯಕ್,…
ಬಂಟ್ವಾಳ: ಕ್ರೀಡೆಯಿಂದ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವನ್ನು ಕಾಪಡಲು ಸಾಧ್ಯವಿದೆ. ಲಯನ್ಸ್ ಕ್ಲಬ್ ಬಂಟ್ವಾಳ ಹಾಗೂ ಇತರ ಸಂಘಟನೆಗಳ ಸಹಕಾರದಲ್ಲಿ ನಡೆದ ಕ್ರಿಕೆಟ್ ಪಂದ್ಯಾಟ ತಾಲೂಕಿನ ಎಲ್ಲಾ ವೃತ್ತಿಪರ ಸಂಘಟನೆಗಳನ್ನು ಸಂಘಟಿಸುವ ಮೂಲಕ ಪರಸ್ಪರ ಪ್ರೀತಿ, ಬಾಂಧವ್ಯವನ್ನು ವೃದ್ಧಿಸಿದೆ ಎಂದು ಶಾಸಕ ರಾಜೇಶ್ ನಾಕ್ ಹೇಳಿದರು ಅವರು ಲಯನ್ಸ್ ಕ್ಲಬ್ ಬಂಟ್ವಾಳ ಇದರ ನೇತೃತ್ವದಲ್ಲಿ ರಾರಾಸಂ ಫೌಂಡೇಶನ್ ಬಂಟ್ವಾಳ, ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಇದರ ಸಹಯೋಗದೊಂದಿಗೆ ಭಾನುವಾರ ಬಂಟ್ವಾಳದ ಎಸ್ವಿಎಸ್ ಮೈದಾನದಲ್ಲಿ ನಡೆದ ರಿಪಬ್ಲಿಕ್ ಟ್ರೋಫಿ ಕ್ರಿಕೆಟ್ ಪಂದ್ಯಾಟದಲ್ಲಿ ಭಾಗವಹಿಸಿ ಮಾತನಾಡಿದರು.ಬಂಟ್ವಾಳ ತಹಶೀಲ್ದಾರ್ ಅರ್ಚನಾ ಡಿ. ಭಟ್ ಕ್ರಿಕೆಟ್ ಪಂದ್ಯಾಟ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ಸಚಿನ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ. ಲಯನ್ಸ್ ಕ್ಲಬ್ ಸ್ಥಾಪಕಾಧ್ಯಕ್ಷ ಡಾ. ಬಿ. ವಸಂತ ಬಾಳಿಗಾ, ಪುರಸಭೆ ಅಧ್ಯಕ್ಷ ವಾಸು ಪೂಜಾರಿ, ಬೂಡ ಅಧ್ಯಕ್ಷ ಬೇಬಿ ಕುಂದರ್, ಲಯನ್ಸ್ ಪೂರ್ವ ರಾಜ್ಯಾಪಾಲ ಸಂಜಿತ್ ಶೆಟ್ಟಿ, ಬಂಟರ ಸಂಘದ…
ಬಂಟ್ವಾಳ: ಅಚಲ ಕಾಯಕ ನಿಷ್ಠರಾಗಿದ್ದ ಮಡಿವಾಳ ಮಾಚಿದೇವ ಅವರು ವಚನ ಸಾಹಿತ್ಯ ಮತ್ತು ಧರ್ಮದ ಸಂರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಅವರ ವಚನಗಳ ಸಂದೇಶದಂತೆ ಇಂದು ಮನಗಳಲ್ಲಿರುವ ಕೊಳೆಯನ್ನು ತೊಳೆಯುವ ಅನಿವಾರ್ಯತೆ ಇದೆ ಎಂದು ತಹಸೀಲ್ದಾರ್ ಡಿ. ಅರ್ಚನಾ ಭಟ್ ಹೇಳಿದರು. ಅವರು ಶನಿವಾರ ಬಿ.ಸಿ.ರೋಡಿನ ಆಡಳಿತ ಸೌಧದ ಸಭಾಂಗಣದಲ್ಲಿಬಂಟ್ವಾಳ ತಾಲೂಕು ಮಟ್ಟದ ಮಡಿವಾಳ ಮಾಚಿದೇವ ಜಯಂತಿ ಆಚರಣೆ ಉದ್ಘಾಟಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ಕೇಂದ್ರ ಸ್ಥಾನೀಯ ಉಪತಹಶೀಲ್ದಾರ್ ನರೇಂದ್ರನಾಥ ಮಿತ್ತೂರು, ತಾಲೂಕು ಕಛೇರಿ ಸಿಬ್ಬಂದಿ, ಗ್ರಾಮ ಆಡಳಿತ ಅಧಿಕಾರಿಯವರು, ಗ್ರಾಮ ಸಹಾಯಕರು ಹಾಜರಿದ್ದರು. —
ಬಂಟ್ವಾಳ: ಮೆಲ್ಕಾರ್ ನ ತರಕಾರಿ ಅಂಗಡಿಗೆ ಕಳ್ಳರು ನುಗ್ಗಿ ನಗದು ದೋಚಿದ ಘಟನೆ ಬೆಳಕಿಗೆ ಬಂದಿದೆ. ಮಹಮ್ಮದ್ ಶರೀಫ್ ಎಂಬವರ ಮಾಲಕತ್ವದ ಚಂದ್ರಿಕಾ ತರಕಾರಿ ಅಂಗಡಿಯ ಬೀಗ ಮುರಿದು ಹಣಕ್ಕಾಗಿ ಜಾಲಾಡಿದ್ದಾರೆ. ಶರೀಫ್ ಅವರು ಸಾಮಾಜಿಕ ಸೇವಾ ಕರ್ತರಾಗಿದ್ದು ಸರಕಾರಿ ಶಾಲೆಯ ಅಭಿವೃದ್ದಿಗಾಗಿ ತನ್ನ ಅಂಗಡಿಯಲ್ಲಿ ಇಟ್ಟಿದ್ದ ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ಕಳ್ಳರು ದೋಚಿದ್ದಾರೆ. ಕಾಣಿಕೆ ಡಬ್ಬಿ ತುಂಬಿದ್ದು ಅಂದಾಜು 5 ಸಾವಿರಕ್ಕಿಂತಲೂ ಅಧಿಕ ಮೊತ್ತದ ಹಣ ಅದರಲ್ಲಿತ್ತು ಎನ್ನಲಾಗಿದೆ. ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿರುವುದಾಗಿ ತಿಳಿದು ಬಂದಿದೆ.
ಬಂಟ್ವಾಳ: ಬಿ.ಸಿ.ರೋಡಿನ ಶ್ರೀ ರಕ್ತೇಶ್ವರೀ ದೇವಿ ಸನ್ನಿಧಿಯಲ್ಲಿ ಮುಂದಿನ ಎ.4 ರಿಂದ ಎ.9ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದ್ದು ಪೂರ್ವಭಾವಿಯಾಗಿ ಗುರುವಾರ ಸಂಜೆ ದೇವಸ್ಥಾನದ ಸಭಾಂಗಣದಲ್ಲಿ ಸೇವಾ ಸಮಿತಿ ಹಾಗೂ ಬ್ರಹ್ನಕಲಶೋತ್ಸವ ಸಮಿತಿಯ ಸಮಾಲೋಚನಾ ಸಭೆ ನಡೆಯಿತು. ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ವಿಶ್ವನಾಥ ಬಿ., ಪ್ರಮುಖರಾದ ಡಾ. ರಮೇಶಾದ ಸೋಮಯಾಜಿ, ಜಗನ್ನಾಥ ಚೌಟ, ವಕೀಲ ಅಶ್ವನಿ ಕುಮಾರ್ ರೈ, ಸಂಜೀವ ಪೂಜಾರಿ ಗುರುಕೃಪಾ, ಸತೀಶ್ ಭಂಡಾರಿ, ಐತಪ್ಪ ಪೂಜಾರಿ, ನಾರಾಯಣ ಹೆಗ್ದೆ , ಬಿ. ಮೋಹನ್, ಲೋಕನಾಥ ಶೆಟ್ಟಿ, ಗೋಪಾಲ ಸುವರ್ಣ, ಸದಾನಂದ ಶೆಟ್ಟಿ ರಂಗೋಲಿ, ಪುರುಷ ಸಾಲ್ಯಾನ್ ನೆತ್ತರಕೆರೆ ಮತ್ತಿತರರು ಉಪಸ್ಥಿತರಿದ್ದರು. ಬ್ರಹ್ಮಕಲಶೋತ್ಸವದ ಬಗ್ಗೆ ಸಮಾಲೋಚನೆ ನಡೆಸಲಾಯಿತು.
ಬಂಟ್ವಾಳ: ನಾಗರಿಕ ಸಮಾಜದಲ್ಲಿ ಅನೇಕ ಮಂದಿ ವಿವಿಧ ರೀತಿಯ ಸಮಾಜ ಸೇವೆಗಳನ್ನು ಮಾಡುತ್ತಿರುತ್ತಾರೆ. ಕೆಲವರ ಸಮಾಜ ಸೇವೆಯನ್ನು ಸಮಾಜ ಗುರುತಿಸಿಕೊಂಡಿದ್ದರೆ, ಅನೇಕ ಮಂದಿಯ ಸಮಾಜ ಸೇವೆಗಳು ಎಲೆಮರೆಯ ಕಾಯಿಯಂತೆ ಬೆಳಕಿಗೆ ಬಾರದೆ ಉಳಿದುಬಿಡುತ್ತದೆ. ಬಂಟ್ವಾಳ ತಾಲೂಕಿನ ಮಾಣಿಲ ಗ್ರಾಮದ ಈ ಮುಸ್ಲಿಂ ದಂಪತಿ ಅಪೂರ್ವವಾದ ಹಾಗೂ ಮಾದರಿ ಸೇವಾ ಕಾರ್ಯಗಳನ್ನು ಮಾಡಿದರೂ ಎಲೆಮರೆಯ ಕಾಯಿಯಾಗಿ ಉಳಿದು ಬಿಟ್ಟಿದ್ದಾರೆ!ಕರ್ನಾಟಕ ಹಾಗೂ ಕೇರಳ ರಾಜ್ಯದ ಗಡಿಭಾಗದಲ್ಲಿದೆ ಮಾಣಿಲ ಎನ್ನುವ ಸಣ್ಣ ಗ್ರಾಮ. ಈಗಷ್ಟೇ ಅಭಿವೃದ್ದಿಯ ಹೆಜ್ಜೆಗಳನ್ನು ಕಾಣುತ್ತಿರುವ ಈ ಗ್ರಾಮದ ಕಾಮಜಲು ಎನ್ನುವ ಸಣ್ಣ ಊರಿನಲ್ಲಿರುವ ಪಿ. ಮಹಮ್ಮದ್ ಕುಂಞ ಹಾಗೂ ಕುಂಞಪಾತು ದಂಪತಿಗಳ ಸಾಧನೆ ಅಪೂರ್ವವಾದುದು. ಪತಿ ಮಹಮ್ಮದ್ ಕುಂಞ ಊರಿನ ಬಡ ಮಕ್ಕಳಿಗಾಗಿ ತನ್ನ ಅಂಗಡಿಯಲ್ಲೇ ಶಾಲೆ ತೆರೆದ ಅಕ್ಷರ ಸಂತನಾದರೆ, ಪತ್ನಿ ಈ ಊರಿಗೆ ಸರಕಾರಿ ಬಸ್ಸನ್ನು ತರಿಸಿದ ಸಾಹಸಿ. ಶಾಲೆ ತೆರೆದ ಅಕ್ಷರ ಸಂತ:ಮಹಮ್ಮದ್ ಕುಂಞ ಅವರ ತಂದೆಗೆ ೧೪ ಮಂದಿ ಮಕ್ಕಳು. ತಾನೇ ಹಿರಿಯವನಾದ ಕಾರಣ ಹೆಚ್ಚು…








