Author: admin
ಬಂಟ್ವಾಳ:ಜೇಸಿ ಜೋಡುಮಾರ್ಗ ನೇತ್ರಾವತಿಯ ನೂತನ ತಂಡದ ಪದಗ್ರಹಣ ಬಿ.ಸಿ.ರೋಡಿನ ರೋಟರಿ ಸಭಾಂಗಣದಲ್ಲಿ ಮಂಗಳವಾರ ಸಂಜೆ ನಡೆಯಿತು. ಈ ಸಂದರ್ಭಜೇಸಿ ವಲಯ 15ರ ಅಧ್ಯಕ್ಷ ಅಭಿಲಾಷ್ ಬಿ.ಎ. ಮಾತನಾಡಿ, ಜೇಸಿ ಆಂದೋಲನವು ಸಾಮಾಜಿಕವಾಗಿ ತೊಡಗಿಸಿಕೊಂಡಿದ್ದು, ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿ ಕೆಲಸ ಮಾಡುತ್ತಿದೆ. ಜೋಡುಮಾರ್ಗ ನೇತ್ರಾವತಿಗೆ ಯುವ ತಂಡ ದೊರಕಿದ್ದು, ಹಿರಿಯರ ಮಾರ್ಗದರ್ಶನದೊಂದಿಗೆ ಮುನ್ನಡೆಯಲಿರುವುದು ಸಂತೋಷದ ಸಂಗತಿ ಎಂದರು. ಮುಖ್ಯ ಅತಿಥಿಯಾಗಿ ಯೆನೆಪೊಯ ಮೆಡಿಕಲ್ ಕಾಲೇಜಿನ ಅನಾಟಮಿ ವಿಭಾಗದ ಉಪನ್ಯಾಸಕಿ ಪ್ರಿಯಾ ಮಿನೇಜಸ್ ಮಾತನಾಡಿ, ನಮ್ಮ ವ್ಯಕ್ತಿತ್ವವನ್ನು ರೂಪುಗೊಳಿಸಲು ಇಂಥ ಸಂಸ್ಥೆಗಳು ಸಹಕಾರಿಯಾಗುತ್ತದೆ. ನಮ್ಮ ಬದುಕು ಪೆನ್ಸಿಲ್ ಇದ್ದಂತೆ. ಸ್ಪಷ್ಟವಾಗಿ ಬರೆಯಬೇಕೆಂದರೆ, ಅದು ಹೆಚ್ಚು ಚೂಪಾಗಬೇಕು, ಹಾಗೆಯೇ ನಮ್ಮ ಕುರಿತು ಇರುವ ಹೊಗಳಿಕೆ ಹಾಗೂ ಟೀಕೆ, ವಿಮರ್ಶೆಗಳನ್ನು ಸಕಾರಾತ್ಮಕವಾಗಿ ಸ್ವೀಕರಿಸಿಕೊಂಡು ಮುನ್ನಡೆಯಬೇಕು ಎಂದು ಕಿವಿಮಾತು ಹೇಳಿದರು. ಗೌರವ ಅತಿಥಿಯಾಗಿ ಭಾಗವಹಿಸಿದ ಜೇಸಿ ವಲಯ 15ರ ರೀಜನ್ ಎ ಉಪಾಧ್ಯಕ್ಷೆ ಅಶ್ವಿನಿ ಐತಾಳ್ ಮಾತನಾಡಿ, ಜೋಡುಮಾರ್ಗ ಜೇಸಿಯ ಜೊತೆಗಿನ ಒಡನಾಟವನ್ನು ನೆನಪಿಸಿಕೊಂಡರು. ಇದೇ ವೇಳೆ ಕೊಯಿಲ…
ಬಂಟ್ವಾಳ: ಕಳೆದ 52 ವರ್ಷಗಳಿಂದ ನಿರಂತರವಾಗಿ ಸೇವಾ ಕಾರ್ಯಗಳನ್ನು ಸಂಘಟಿಸುತ್ತಿರುವ ಲಯನ್ಸ್ ಕ್ಲಬ್ ಬಂಟ್ವಾಳ ಇದರ ನೇತೃತ್ವದಲ್ಲಿ ಕಲೆ, ಸಾಹಿತ್ಯ, ಸಾಂಸ್ಕೃತಿಕ ಶೈಕ್ಷಣಿಕ ಪ್ರೋತ್ಸಾಹದ ಕಾರ್ಯಕ್ರಮಗಳನ್ನು ಕಳೆದ 15 ವರ್ಷಗಳಿಂದ ಸಂಘಟಿಸುತ್ತಿರುವ ರಾರಾಸಂ ಫೌಂಡೇಷನ್ ಬಂಟ್ವಾಳ ಹಾಗೂ ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಬಂಟ್ವಾಳ ತಾಲೂಕಿನ ವಿವಿಧ ವೃತ್ತಿಪರ ಸಂಘಟನೆ ಹಾಗೂ ಸಂಸ್ಥೆಗಳ ಆಹ್ವಾನಿತ ತಂಡಗಳ ಕ್ರಿಕೆಟ್ ಪಂದ್ಯಟ ರಿಪಬ್ಲಿಕ್ ಟ್ರೋಫಿ 2025 ಫೆ.2 ಆದಿತ್ಯವಾರ ಬಂಟ್ವಾಳದ ಭಂಡಾರಿಬೆಟ್ಟುವಿನಲ್ಲಿರುವ ಎಸ್ವಿಎಸ್ ಮೈದಾನದಲ್ಲಿ ನಡೆಯಲಿದೆ.ಬೆಳಿಗ್ಗೆ 9 ಗಂಟೆಗೆ ಶಾಸಕ ರಾಜೇಶ್ ನಾಯ್ಕ್ ಪಂದ್ಯಾಟ ಉದ್ಘಾಟಿಸುವರು, ಲಯನ್ಸ್ ಕ್ಲಬ್ ಬಂಟ್ವಾಳದ ಅಧ್ಯಕ್ಷ ರಾಧಕೃಷ್ಣ ಬಂಟ್ವಾಳ ಅಧ್ಯಕ್ಷತೆ ವಹಿಸುವರು, ಮುಖ್ಯ ಅತಿಥಿಗಳಾಗಿ ತಹಶೀಲ್ದಾರ್ ಅರ್ಚನಾ ಡಿ. ಭಟ್, ಡಿವೈಎಸ್ಪಿ ವಿಜಯಪ್ರಸಾದ್, ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ಸಚಿನ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ. ಲಯನ್ಸ್ ಕ್ಲಬ್ ಸ್ಥಾಪಕಾಧ್ಯಕ್ಷ ಡಾ. ಬಿ. ವಸಂತ ಬಾಳಿಗಾ, ಪುರಸಭೆ ಅಧ್ಯಕ್ಷ ವಾಸು ಪೂಜಾರಿ, ಬೇಬಿ ಕುಂದರ್ ಮತ್ತಿತರ ಗಣ್ಯರು…
ಬಂಟ್ವಾಳ ತಾಲೂಕಿನಾದ್ಯಂತ ಮನೆ ಮಾತಾಗಿರುವ ಆನಿಯಾ ದರ್ಬಾರ್ ಗ್ರೂಪ್ ಆಫ್ ಹೊಟೇಲ್ಸ್ ಇದರ ಸಹ ಸಂಸ್ಥೆ ಆಲಿಯಾ ಐಸ್ ಕ್ರೀಂ ಪಾರ್ಲರ್ ಬಿ.ಸಿ.ರೋಡಿನ ಸ್ಮಾರ್ಟ್ ಸಿಟಿ ಕಟ್ಟಡದಲ್ಲಿ ಶುಭಾರಂಭಗೊಂಡಿತು.ಸಯದ್ ಕೆ.ಪಿ.ಎಸ್. ಝೈನುಲ್ ಜಮುಲುಲ್ಲಿಲಿ ತಂಙಳ್ ಕಾಜೂರು ನೂತನ ಐಸ್ ಕ್ರೀಂ ಪಾರ್ಲರನ್ನು ಉದ್ಘಾಟಿಸಿ ದುವಾ ನೇರವೇರಿಸಿದರು.ಸಯ್ಯದ್ ಮಾಡ ತಂಙಳ್, ಇರ್ಷಾದ್ ದಾರಿಮಿ ಮಿತ್ತಬೈಲ್ , ಮಾಜಿ ಶಾಸಕ ಮೊಹಿದ್ದೀನ್ ಬಾವಾ, ಕೇರಳದ ಶಾಸಕ ಸಿಂಧು ಪಿ.ವಿ.ಅನ್ವರ್, ಶಿಗ್ಗಾವಿಯ ಮಾಜಿ ಸಂಸದ ಮಂಜುನಾಥ ಹೊನ್ನೂರು ಭೇಟಿ ನೀಡಿ ಶುಭ ಹಾರೈಸಿದರು.ಬಂಟ್ವಾಳದ ವಕೀಲ ಅಶ್ವನಿ ಕುಮಾರ್ ರೈ ಶುಭ ಹಾರೈಸಿ ಮಾತನಾಡಿ ಬಿ.ಸಿ.ರೋಡು ಭಾಗದಲ್ಲಿ ಆನಿಯ ದರ್ಬಾರ್ ಹೋಟೇಲ್ ಯಶಸ್ಬಿಯಾಗಿ ನಡೆಯುತ್ತಿದ್ದು ಹೊಸ ಉದ್ಯಮಕ್ಕೆ ಹಂಝ ಬಸ್ತಿಕೋಡಿಯವರು ಮುಂದಾಗಿದ್ದು ಅದು ಯಶಸ್ವಿಯಾಗಲಿ ಎಂದರು.ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ.ಸಂಜೀವ ಪೂಜಾರಿ ಮಾತನಾಡಿ ಆನಿಯ ದರ್ಬಾರ್ ಬಂಟ್ವಾಳ ತಾಲೂಕಿನಲ್ಲಿ ಯಶಸ್ವಿಯಾಗಿದ್ದು ಐಸ್ ಕ್ರೀಂ ಪಾರ್ಲರ್ ಕೂಡ ಹೆಚ್ಚು ಗ್ರಾಹಕರನ್ನು ತನ್ನತ್ತ ಸೆಳೆಯಲಿ ಎಂದರು.…
ಬಂಟ್ವಾಳ : ಸರಕಾರಿ ಪದವಿಪೂರ್ವ ಕಾಲೇಜು ಬಿ.ಮೂಡ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ, ರೋವರ್ಸ್ ಘಟಕ, ಇಕೋಕ್ಲಬ್ ಮತ್ತು ಬಂಟ್ವಾಳ ಲಯನ್ಸ್ ಕ್ಲಬ್ ಇವುಗಳ ಜಂಟಿ ಆಶ್ರಯದಲ್ಲಿ ಗಣರಾಜ್ಯೋತ್ಸವ ಪ್ರಯುಕ್ತ ವಿಶೇಷ ಸ್ವಚ್ಚತಾ ಕಾರ್ಯವನ್ನು ಬಿ.ಸಿ.ರೋಡ್ ಪರಿಸರದಲ್ಲಿ ನಡೆಸಲಾಯಿತು. ಬಿ.ಸಿ.ರೋಡ್ ಸರ್ಕಲ್ ಬಳಿಯಿಂದ ರೈಲು ನಿಲ್ದಾಣದವರೆಗಿನ ಹಳೆಯ ಹೆದ್ದಾರಿಯ ಉಭಯ ಬದಿಗಳಲ್ಲಿನ ತ್ಯಾಜ್ಯಗಳನ್ನು ವಿಲೇವಾರಿ ಮಾಡಲಾಯಿತು. ಸ್ವಚ್ಚತಾ ಕಾರ್ಯಕ್ಕೆ ಬಿ.ಮೂಡ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಯೂಸುಫ್ ವಿಟ್ಲ ಚಾಲನೆ ನೀಡಿ ಶಾಲಾಕಾಲೇಜುಗಳ ಪರಿಸರದಲ್ಲಿ ಸ್ವಚ್ಚತಾ ಕಾರ್ಯ ನಡೆಸುವುದು ಶಿಕ್ಷಣ ಸಂಸ್ಥೆಗಳ ಸಾಮಾಜಿಕ ಜವಾಬ್ದಾರಿಯಾಗಿದ್ದು ಈ ನಿಟ್ಟಿನಲ್ಲಿ ನಮ್ಮ ಸಂಸ್ಥೆಯು ಮುತುವರ್ಜಿಯಿಂದ ಪ್ರತಿ ವರ್ಷ ಸುತ್ತಮುತ್ತಲ ಪರಿಸರ ಸ್ವಚ್ಚತೆಗೆ ಆದ್ಯತೆ ನೀಡುತ್ತಿದೆ ಎಂದು ಹೇಳಿದರು. ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ್ದ ಬಂಟ್ವಾಳ ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ ರಾಧಾಕೃಷ್ಣ ಅವರು ,ರಾಷ್ಟ್ರೀಯ ಹಬ್ಬದ ಸಂದರ್ಭದಲ್ಲಿ ಅದೂ ಭಾನುವಾರದಂದು ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಸೇರಿ ಸಾಮಾಜಿಕ ಸೇವಾ ಚಟುವಟಿಕೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿರುವುದು ಶ್ಲಾಘನೀಯ ಎಂದು…
ಬಂಟ್ವಾಳ: ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ತಮ್ಮದೇ ಚೌಕಟ್ಟಿನಲ್ಲಿ ಕೆಲಸ ನಿರ್ವಹಿಸಿದಾಗ ದೇಶದ ಪ್ರಗತಿ ಸಾಧ್ಯವಾಗಲಿದೆ. ಮುಷ್ಯತ್ವದ ಮೂಲಕ ಕಾರ್ಯ ನಿರ್ವಹಿಸಿದಾಗ ಎಲ್ಲ ಸಮಸ್ಯೆಗಳೂ ಪರಿಹಾರವಾಗಲಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು. ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಿ.ಸಿ.ರೋಡಿನ ತಾಲೂಕು ಆಡಳಿತ ಸೌಧದಲ್ಲಿ ನಡೆದ 76ನೇ ಬಂಟ್ವಾಳ ತಾಲೂಕುಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ತಹಶೀಲ್ದಾರ್ ಅರ್ಚನ ಡಿ. ಭಟ್ ಗಣರಾಜ್ಯೋತ್ಸವ ಸಂದೇಶ ನೀಡಿ ಸಂವಿಧಾನದ ಪೂರ್ವಪೀಠಿಕೆಯಲ್ಲಿ ದೇಶದ ಆತ್ಮ ಅಡಗಿದೆ. ನಮ್ಮ ದೇಶದ ಸಂವಿಧಾನ ಸುಂದರವಾಗಿದೆ.ಇದರ ಆಳಕ್ಕೆ ಹೋದಂತೆ ಸಂವಿಧಾನದ ಮಹತ್ವ ಅರಿವಾಗುತ್ತದೆ. ಸಂವಿಧಾನ ದೇಶದ ಎಲ್ಲರಿಗೂ ಸಮಾನ ಅವಕಾಶಗಳನ್ನು ನೀಡಿದೆ ಎಂದರು. ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ 7 ನೇ ತರಗತಿ ವಿದ್ಯಾರ್ಥಿ ನಿನಾದ್ ಕೈರಂಗಳ ಪ್ರಧಾನ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.ಬಂಟ್ವಾಳ ಪುರಸಭೆ ಅಧ್ಯಕ್ಷ ವಾಸುಪೂಜಾರಿ, ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ…
ಬಂಟ್ವಾಳ: ಸಂಚಯಗಿರಿ ನಾಗರಿಕ ಕ್ರಿಯಾ ಸಮಿತಿಯ ವತಿಯಿಂದ ಗಣರಾಜ್ಯೋತ್ಸವ ದಿನ ಆಚರಿಸಲಾಯಿತು.ಕ್ರಿಯಾ ಸಮಿತಿಯ ಅಧ್ಯಕ್ಷ ಸುರೇಶ್ ಬಂಗೇರ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ಎಸ್ ವಿ.ಎಸ್ ಶಾಲೆಯ ಮುಖ್ಯೋಪಾಧ್ಯಾಯ ಸತೀಶ್ ಬಂಗೇರ ಪ್ರಧಾನ ಭಾಷಣ ಮಾಡಿ ಜಗತ್ತಿನಲ್ಲಿಯೇ ಅತ್ಯಂತ ದೊಡ್ಡದಾದ ಸಂವಿಧಾನವನ್ನು ಭಾರತ ಹೊಂದಿದೆ. ನಮ್ಮದು ಪ್ರಜಾಪ್ರಭುತ್ವ ದೇಶ ಎನ್ನುವುದು ಪ್ರಜೆಗಳಾದ ನಮಗೆಲ್ಲರಿಗೂ ಹೆಮ್ಮೆ ಎಂದು ತಿಳಿಸಿದರು. ನಾಗರಿಕ ಕ್ರಿಯಾ ಸಮಿತಿಯ ಗೌರವಾಧ್ಯಕ್ಷ ನರಸಿಂಹರಾಜ್ ಹೊಳ್ಳ, ಉಪಾಧ್ಯಕ್ಷೆ ಪ್ರಿಯಾಲತಾ, ಕಾರ್ಯದರ್ಶಿ ಶೇಖರ್ ಕುಲಾಲ್ ಉಪಸ್ಥಿತರಿದ್ದರು. ಸದಸ್ಯ ಸುಧಾಕರ ಸಾಲ್ಯಾನ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು, ಕೋಶಾಧಿಕಾರಿ ಎ. ದಾಮೋದರ್ ವಂದಿಸಿದರು.
ಬಂಟ್ವಾಳ: ಜೇಸಿಐ ಜೋಡುಮಾರ್ಗ ನೇತ್ರಾವತಿ ಘಟಕದ ವತಿಯಿಂದ ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಸುಸ್ಥಿರ ಭವಿಷ್ಯಕ್ಕಾಗಿ ಯುವ ಜನತೆ ವಿಷಯದ ಬಗ್ಗೆ ಕೊಯಿಲ ಸರಕಾರಿ ಪ್ರೌಢಶಾಲೆಯಲ್ಲಿ ಭಾಷಣ ಸ್ಪರ್ಧೆಯನ್ನು ಆಯೋಜಿಸಿಸಲಾಯಿತು. ರಾಷ್ಟ್ರೀಯ ಯುವ ದಿನಾಚರಣೆಯ ಪ್ರಯುಕ್ತ ಸ್ವಾಮಿ ವಿವೇಕಾನಂದರ ಆದರ್ಶ ಹಾಗೂ ಚಿಂತನೆಗಳನ್ನು ಪ್ರಸ್ತುತ ಯುವ ಜನತೆಗೆ ಪರಿಚಯಿಸುವ ಉದ್ದೇಶದಿಂದ ಜೆಸಿಐ ಜೋಡುಮಾರ್ಗ ನೇತ್ರಾವತಿ ಘಟಕದಿಂದ ಪ್ರಾಜೆಕ್ಟ್ ಡೈರೆಕ್ಟರ್ ರಮ್ಯಾ ಸೋಮಯಾಜಿ ಇವರ ನೇತೃತ್ವದಲ್ಲಿ ವಲಯ ತರಬೇತುದಾರರಾದ ಡಾ. ವಿನಾಯಕ್ ಕೆ. ಎಸ್. ತರಬೇತಿಯನ್ನು ನೀಡಿದರು.ಶಾಲೆಯ ಮುಖ್ಯೋಪಾಧ್ಯಾಯಿನಿ ಸೌಜನ್ಯ, ಡಾ. ಕಾಶಿನಾಥ್ ಶಾಸ್ತ್ರಿ, ಸಹಶಿಕ್ಷಕಿ ಸೌಮ್ಯ ಉಪಸ್ಥಿತರಿದ್ದರು.
ಬಂಟ್ವಾಳ: ಕಳೆದ 30 ವರ್ಷಗಳಿಂದ ತೆಂಗಿನ ಮರ ಹಾಗೂ ಅಡಿಕೆಮರ ಏರುವ ಕಾಯಕ ನಿರ್ವಹಿಸುತ್ತಿರುವ ವಲೇರಿಯನ್ ರೋಡ್ರಿಗಸ್ ಅವರಿಗೆ ಜೆಸಿಐ ಬಂಟ್ವಾಳದ ವತಿಯಿಂದ ಸೆಲ್ಯೂಟ್ ಟೂ ಸೈಲೆಂಟ್ ವರ್ಕರ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಸೋಮವಾರ ಬಿ.ಸಿ.ರೋಡಿನ ಪ್ರೀತಿ ಕಾಂಪ್ಲೆಕ್ಸ್ ನಲ್ಲಿ ಘಟಕದ ಅಧ್ಯಕ್ಷ ಗಣೇಶ್ ಕೆ. ಕುಲಾಲ್ ಅಧ್ಯಕ್ಷತೆಯಲ್ಲಿ ನಡೆದ ಸಂಘದ ಮಾಸಿಕ ಸಭೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಲಯ ಉಪಾಧ್ಯಕ್ಷ ರಂಜಿತ್ ಎಚ್. ಡಿ. ಓರಿಯಂಟೇಷನ್ ತರಬೇತಿ ನಡೆಸಿಕೊಟ್ಟರು. ಬಳಿಕ ಮಾಸಿಕ ಸಭೆ ನಡೆಯಿತು. ಈ ಸಂದರ್ಭ ನಿಕಟಪೂರ್ವಾಧ್ಯಕ್ಷೆ ರಶ್ಮಿ ಶೆಟ್ಟಿ, ಕಾರ್ಯದರ್ಶಿ ಕಿಶೋರ್ ಕುಮಾರ್ ಆಚಾರ್ಯ, ಲೇಡಿ ಜೇಸಿ ಸಂಯೋಜಕಿ ಬಬಿತಾ ಗಣೇಶ್, ಪೂರ್ವಾಧ್ಯಕ್ಷರು ಹಾಗೂ ಸದಸ್ಯರು ಭಾಗವಹಿಸಿದ್ದರು.
ಬಂಟ್ವಾಳ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಒಲಂಪಿಕ್ ಅಸೋಸಿಯೇಷನ್ ಜಿಲ್ಲಾಡಳಿ ಮಂಗಳೂರು ಹಾಗೂ ಉಡುಪಿ ಜಿಲ್ಲೆ ಇದರ ಜಂಟಿ ಆಶ್ರಯದಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯ ಕ್ರೀಡಾಕೂಟ -2025 ಜೂಡೋ ವಿಭಾಗದಲ್ಲಿ ತೇಜ ಜೆ. ಕಂಚಿನ ಪದಕ ಗೆದ್ದುಕೊಂಡಿದ್ದಾರೆ.ಇವರು ಪೊಳಲಿ ಸರ್ವಮಂಗಳ ಸಭಾಂಗಣದಲ್ಲಿ ಮಾರ್ಷಲ್ ಆರ್ಟ್ ತರಬೇತುದಾರ ರಾಜೇಶ್ ಬ್ರಹ್ಮರಕೂಟ್ಲು ಇವರಿಂದ ಮಿಕ್ಸೆಡ್ ಮಾರ್ಷಲ್ ಆರ್ಟ್ ತರಬೇತಿಯನ್ನು ಪಡೆಯುತ್ತಿದ್ದಾರೆ. ಪೊಳಲಿ ಸುಬ್ರಾಯ ಕಾರಂತರು ಸಹಕರಿಸಿದ್ದಾರೆ.ಮಿಕ್ಸೆಡ್ ಮಾರ್ಷಲ್ ಆರ್ಟ್ ತರಬೇತುದಾರ ರಾಜೇಶ್ ಬ್ರಹ್ಮರಕೂಟ್ಲು ಅವರು ಕಳೆದ ಹಲವಾರು ವರ್ಷಗಳಿಂದ ಪೊಳಲಿ ಸುಮಂಗಳ ಸಭಾಭವನ ಹಾಗೂ ಜ್ಯೋತಿಗುಡ್ಡೆ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಜೂಡೋ, ಟ್ವಿಂಕಾಂಡೋ, ಸ್ಕೇಟಿಂಗ್ ಮೊದಲಾದ ತರಬೇತಿಯನ್ನು ಉಚಿತವಾಗಿ ನೀಡುತ್ತಿದ್ದು ಆಸಕ್ತರು ಅವರನ್ನು ಸಂಪರ್ಕಿಸಬಹುದಾಗಿದೆ (9964673040).
ಬಂಟ್ವಾಳ: ಕರ್ನಾಟಕ ಡಾ|| ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ನೃತ್ಯ ಪರಿಕರಗಳ ವಿಶ್ವವಿದ್ಯಾಲಯ ಮೈಸೂರು ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಹಂಸಿಕಾ ಶೇ.87 ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಫರಂಗಿಪೇಟೆ ಸೇವಾಂಜಲಿ ಟ್ರಸ್ಟ್ ನಲ್ಲಿ ನಡೆಯುವ ಭರತನಾಟ್ಯ ತರಗತಿಯ ನೃತ್ಯಗುರು ವಿದುಷಿ ಮಂಜುಳಾ ಸುಬ್ರಹ್ಮಣ್ಯ , ನಾಟ್ಯರಂಗ ಪುತ್ತೂರು ಇವರ ಶಿಷ್ಯೆ. ಸರಕಾರಿ ಪ್ರೌಢಶಾಲೆ ಪೊಳಲಿಯಲ್ಲಿ ಎಂಟನೇ ತರಗತಿಯಲ್ಲಿ ಓದುತ್ತಿರುವ ಈಕೆ ನೆತ್ರಕೆರೆ ರಾಜೇಶ್ ಹಾಗೂ ಶೋಭಾ ಇವರ ಪುತ್ರಿ.








