Author: admin
ಬಂಟ್ವಾಳ: ನಾವೂರು ಗ್ರಾಮದ ಶ್ರೀ ಸುಬ್ರಾಯ ವಿಷ್ಣುಮೂರ್ತಿ ನಾವೂರೇಶ್ವರ ದೇವಸ್ಥಾನದಲ್ಲಿ ಶ್ರೀ ಸುಬ್ರಾಯ ವಿಷ್ಣುಮೂರ್ತಿ ನಾವೂರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಎರಡು ದಿನಗಳ ಕಾಲ ಕ್ಷೇತ್ರದ ತಂತ್ರಿಗಳಾದ ನಡ್ವಾಂತಾಡಿ ಶ್ರೀಪಾದ ಪಾಂಗಣ್ಣಯರ ನೇತೃತ್ವದಲ್ಲಿ ನಡೆಯಿತು. ಶನಿವಾರ ಸಂಜೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ ಪುಣ್ಯಾಹ ವಾಚನ, ದುರ್ಗಾ ನಮಸ್ಕಾರ ಪೂಜೆ, ಮಹಾ ಪೂಜೆ, ಉತ್ಸವ ಬಲಿ, ವಸಂತಕಟ್ಟೆ ಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಭಾನುವಾರ ಬೆಳಿಗ್ಗೆ ೧೨ ಕಾಯಿ ಗಣಪತಿ ಹೋಮ, ನವಕಲಶ ಪ್ರಧಾನ ಹೋಮ, ಕಲಶಾಭಿಶೇಕ, ಮಹಾಪೂಜೆ, ದರ್ಶನ ಬಲಿ ಉತ್ಸವ, ವಸಂತ ಕಟ್ಟೆಪೂಜೆ, ಬಟ್ಟಲು ಕಾಣಿಕೆ ಪ್ರಸಾದ, ಪಿಲಿಚಾಮುಂಡಿ ದೈವಕ್ಕೆ ಬಿಂಬ ಸಮರ್ಪಣೆ ಪಂಚಪರ್ವ, ಪ್ರಸನ್ನ ಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ಜರುಗಿತು. ಈ ಸಂದರ್ಭ ದೇವಸ್ಥಾನದ ಆಡಳಿತ ಸಮಿತಿ, ಉತ್ಸವ ಸಮಿತಿಯ ಪದಾಧಿಕಾರಿಗಳು ಹಾಗೂ ಅಪಾರ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದರು.
ಬಂಟ್ವಾಳ: ಇಲ್ಲಿನ ಬಡ್ಡಕಟ್ಟೆ ರಾಯರ ಚಾವಡಿಯ ಶ್ರೀ ಪಂಜುರ್ಲಿ ಪಿಲಿಚಾಮುಂಡಿ ಕಲ್ಲುರ್ಟಿ ಕಲ್ಕುಡ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ ಜ.24 ಮತ್ತು 25ರಂದು ನಡೆಯಲಿದೆ.ಜ.24 ಶುಕ್ರವಾರ ಬೆಳಿಗ್ಗೆ ಗಣಹೋಮ, ನೇಮೋತ್ಸವದ ಮುಹೂರ್ತ, ಶ್ರೀ ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ ಪೂಜೆ, ಶ್ರೀ ನಾಗಸನ್ನಿಧಿಯಲ್ಲಿ ನಾಗತಂಬಿಲ, ಮಧ್ಯಾಹ್ನ ಶ್ರೀ ಮುಖ್ಯಪ್ರಾಣ ದೇವಸ್ಥಾನದಲ್ಲಿ ಮಹಾಪೂಜೆ, ಅಶ್ವತ್ಥ ಕಟ್ಟೆಯಲ್ಲಿ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ಅಶ್ವತ್ಥ ನಾರಾಯಣ ಕಟ್ಟೆ ಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಪ್ರಸಾದ ನಡೆಯಲಿದೆ.ಸಂಜೆ 4ಕ್ಕೆ ದೈವಸ್ಥಾನದಲ್ಲಿ ನವಕ ಪ್ರಧಾನ ಹೋಮ, ರಾತ್ರಿ ಶ್ರೀ ಮುಖ್ಯಪ್ರಾಣ ದೇವರ ಸನ್ನೀದಿಯಲ್ಲಿ ರಂಗಪೂಜೆ, ದೈವಸ್ಥಾನದಿಂದ ನೇಮೋತ್ಸವ ಗದ್ದೆಗೆ ಭಂಡಾರ ಹೊರಡುವುದು, ರಾತ್ರ್ರಿ 9.30ಕ್ಕೆ ಶ್ರೀ ಪಿಲಿಚಾಮುಂಡಿ ಕಲ್ಕುಡ ದೈವಗಳಿಗೆ ನೇಮೋತ್ಸವ, 12.30ಕ್ಕೆ ಶ್ರೀ ಪಿಲಿಚಾಮುಂಡಿ ಕಲ್ಕುಡ ದೈವಗಳ ವಲಸರಿ ನಡೆಯಲಿದೆ.ಜ.25ಶನಿವಾರ ಸಂಜೆ 5.30ಕ್ಕೆ ಶ್ರೀ ಪಂಜುರ್ಲಿ ದೈವಕ್ಕೆ ಎಣ್ಣೆ ಬೂಳ್ಯ, ಗಂಟೆ 9ಕ್ಕೆ ಶ್ರೀ ಪಂಜುರ್ಲಿ-ಕಲ್ಲುರ್ಟಿ ದೈವಗಳಿಗೆ ನೇಮೋತ್ಸವ ನಡೆಯಲಿದೆ.
ಬಂಟ್ವಾಳ: ತ್ಯಾಗ ಮತ್ತು ಸೇವೆ ಭಾರತ ದೇಶದ ಮೌಲ್ಯ ಮತ್ತು ಆದರ್ಶಗಳಾಗಿದೆ.ದತ್ತನಗರ ಎಂದರೆ ಭಗವಂತನು ಇತ್ತ ನಗರ ಎಂದರ್ಥ. ಅಹಂಕಾರ, ಮಮಕಾರ ಇದ್ದಲ್ಲಿ ಭಗವಂತನಿರುವುದಿಲ್ಲ. ದತ್ತನಗರದಲ್ಲಿ ನಾನು ಎಂಬ ಭಾವ ಇಲ್ಲದೇ ಇರುವುದರಿಂದ ಭಗವಂತ ಇಲ್ಲಿ ನೆಲೆಸಿದ್ದಾನೆ ಎಂದು ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.ಅವರು ಪುದು ಗ್ರಾಮದ ಸುಜೀರು ದತ್ತನಗರ ಶ್ರೀ ವೀರ ಹನುಮಾನ್ ಮಂದಿರದ ೨೩ನೇ ವಾರ್ಷಿಕೋತ್ಸವದ ಪ್ರಯುಕ್ತ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ಭಾರತದ ಸೌಂದರ್ಯ ಆಧ್ಯಾತ್ಮಿಕತೆಯಲ್ಲಿ ಅಡಗಿದೆ. ಆಧ್ಯಾತ್ಮ ಇದ್ದಲ್ಲಿ ಸಾಮರಸ್ಯದ ಬದುಕು ಇದೆ ಎಂದರು.ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿಭಜನೆಯ ಮುಖಾಂತರ ದೇವರನ್ನು ಕಾಣಲು ಸಾಧ್ಯವಿದೆ. ಭಜನೆ ಇದ್ದಲ್ಲಿ ಭಗವಂತನ ಸಾಕ್ಷಾತ್ಕಾರವಾಗುತ್ತದೆ. ಇಲ್ಲಿ ೨೩ ವರ್ಷದಿಂದ ಭಜನೆ ನಡೆಯುತಿದ್ದು ಭಗವಂತನ ಸಾಕ್ಷತ್ಕಾರವಾಗುವುದರ ಜೊತೆಗೆ ಹಿಂದೂ ಸಮಾಜ ಸಂಘಟಿತವಾಗಿದೆ ಎಂದರು.ವಿಹಿಂಪ ಮಂಗಳೂರು ವಿಭಾಗ ಕಾರ್ಯದರ್ಶಿ ದೇವಿ ಪ್ರಸಾದ್ ಶೆಟ್ಟಿ ಕೊಡ್ಮಾಣ್ ಜಗತ್ತಿಗೆ ಜ್ಞಾನದ ಬೆಳಕು ನೀಡಿರುವುದು…
ಬಂಟ್ವಾಳ: ಪುದು ಗ್ರಾಮದ ಸುಜೀರು ಶ್ರೀ ವೀರ ಹನುಮಾನ್ ಮಂದಿರದ 23ನೇ ವಾರ್ಷಿಕೋತ್ಸವ ಜ.15ರಂದು ನಡೆಯಲಿದೆ.ಬೆಳಿಗ್ಗೆ ಪೊಳಲಿ ಗಿರಿಪ್ರಕಾಶ್ ತಂತ್ರಿ ನೇತೃತ್ವದಲ್ಲಿ ಗಣಹೋಮ, ಪಂಚಾಮೃತ ಅಭಿಷೇಕ, ಸಾಮೂಹಿಕ ಸತ್ಯನಾರಾಯಣ ಪೂಜೆ ಮಹಾಪೂಜೆ ನಡೆಯಲಿದೆ. ಬೆಳಿಗ್ಗೆ 11 ಗಂಟೆಗೆ ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿ ಉಪಸ್ಥಿತಿಯಲ್ಲಿ ಧಾರ್ಮಿಕ ಸಭೆ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಸಂಸದ ಬೃಜೇಶ್ ಚೌಟ, ವಿಹಿಂಪ ಮಂಗಳೂರು ವಿಭಾಗ ಕಾರ್ಯದರ್ಶಿ ದೇವಿ ಪ್ರಸಾದ್ ಶೆಟ್ಟಿ ಕೊಡ್ಮಾಣ್, ಬಿಜೆಪಿ ಮಾಜಿ ರಾಜಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಗುತ್ತಿಗೆದಾರ ಮನೋಹರ್ ಡಿ ದೇವಾಡಿಗ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ವಕೀಲೆ ಸುಚಿತ್ರಾ ಅವಿನಾಶ್, ಪುದು ಗ್ರಾ.ಪಂ. ಸದಸ್ಯ ವಿಶು ಕುಮಾರ್ ಭಾಗವಹಿಸಲಿದ್ದಾರೆ.ಮಧ್ಯಾಹ್ನ 1 ಕ್ಕೆ ಪ್ರಸಾದ ವಿತರಣೆಯಾಗಿ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 6 ರಿಂದ ಭಜನೆ ಪ್ರಾರಂಭಗೊಂಡು ರಾತ್ರಿ 8.30ಕ್ಕೆ ಮಂಗಳಾರತಿ , ಪ್ರಸಾದ ವಿತರಣೆ ಬಳಿಕ ಯಕ್ಷಗಾನ ಬಯಲಾಟ ನಡೆಯಲಿದೆ.
ಬಂಟ್ವಾಳ: ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಇತ್ತೀಚೆಗೆ ತಾಲೂಕಿನ 10 ಕಡೆಗಳಲ್ಲಿ ನೋಂದಾವಣಿ ಬಾಕಿ ಇರುವ ಮತ್ತು ತಿರಸ್ಕೃತ ಅರ್ಜಿಗಳ ವಿಲೇವಾರಿ ಶಿಬಿರ ಯಶಸ್ವಿಯಾಗಿದ್ದು ರಾಜ್ಯಮಟ್ಟದಲ್ಲಿ ಬಂಟ್ವಾಳ ತಾಲೂಕು ಗುರುತಿಸಿಕೊಳ್ಳುವಂತಾಗಿದೆ ಎಂದು ಬಂಟ್ವಾಳ ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ ತಿಳಿಸಿದ್ದಾರೆ.ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿ 576 ಫಲಾನುಭವಿಗಳು ಶಿಬಿರದಲ್ಲಿ ಭಾಗಿಯಾಗಿದ್ದು 84 ಹೊಸ ಅರ್ಜಿಗಳು ಬಂದಿವೆ. ಬಂಟ್ವಾಳ ತಾಲೂಕಿನಲ್ಲಿ 2024ರ ಡಿಸೆಂಬರ್ ಅಂತ್ಯದವರೆಗೆ 70093ಮಂದಿ ಫಲಾನುಭವಿಗಳು ಗೃಹಲಕ್ಷ್ಮೀ ಯೋಜನೆಗೆ ನೊಂದಾಯಿಸಿದ್ದು ಇವರಲ್ಲಿ 67388 ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮೀ ಮೊತ್ತ ಜಮೆಯಾಗಿದೆ. ಅನ್ನಭಾಗ್ಯ ಯೋಜನೆಯಡಿ ಶಿಬಿರದಲ್ಲಿ ಒಟ್ಟು 795 ಅರ್ಜಿಗಳು ಬಂದಿದ್ದು 538ಅರ್ಜಿಗಳು ವಿಲೇವಾರಿಯಾಗಿದ್ದು 256 ಅರ್ಜಿಗಳು ತನಿಖಾ ಹಂತದಲ್ಲಿದೆ ಎಂದು ತಿಳಿಸಿದರು. ಬಂಟ್ವಾಳ ತಾಲೂಕಿನಲ್ಲಿ 2023-24ನೇ ಸಾಲಿನಲ್ಲಿ ಪದವಿ ಹಾಗೂ ಡಿಪ್ಲೋಮ ಪೂರೈಸಿರುವ ನಿರಿದ್ಯೋಗಿ ಯುವಕ ಯುವತಿಯರಿಗೆ ಜ.16ರಂದು ನೋಂದಾವಣೆ ಪ್ರಕ್ರಿಯೆಯನ್ನು ತಾಲೂಕು ಪಂಚಾಯತಿ ಎಸ್ಜೆಎಸ್ಆರ್ವೈ ಸಭಾಂಗಣದಲ್ಲಿ ಆಯೋಜಿಸಲು ನಿರ್ಧರಿಸಲಾಗಿದ್ದು ನಿರುದ್ಯೋಗಿ ಯುವಕ…
ಬಂಟ್ವಾಳ: ಸಜೀಪ ಮಾಗಣೆಗೊಳಪಟ್ಟ ಸಜೀಪಮೂಡ ಗ್ರಾಮದ ಸಂಕೇಶದಲ್ಲಿರುವ ಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದಲ್ಲಿ ನಡೆಯುವ ಪುದ್ದಾರ್ ಮೆಚ್ಚಿ ಜಾತ್ರೆಯ ಪ್ರಯುಕ್ತ ಜ.8ರಿಂದ ಜ.16ರವರೆಗೆ ಪಣೋಲಿಬೈಲು ಶ್ರೀ ಕಲ್ಲುರ್ಟಿ ಕ್ಷೇತ್ರದಲ್ಲಿ ಅಗೇಲು ಮತ್ತು ಕೋಲ ಸೇವೆ ಇರುವುದಿಲ್ಲ. ಜ.17ರಿಂದ ಎಂದಿನಂತೆ ಅಗೇಲು ಮತ್ತು ಕೋಲ ಸೇವೆ ನಡೆಯುತ್ತದೆ ಎಂದು ದೈವಸ್ಥಾನದ ಪ್ರಕಟಣೆ ತಿಳಿಸಿದೆ.
ಬಂಟ್ವಾಳ: ಧರ್ಮ ಹಾಗೂ ಸಂಸ್ಕೃತಿ ಜೊತೆಗೆ ಸಾಗಬೇಕಾದರೆ ಸಂಸ್ಕಾರ ಬೇಕು. ಅದನ್ನು ಸಾಧಿಸಲು ಇರುವ ಸುಲಭದ ದಾರಿ ಭಜನೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂನ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.ಶ್ರೀ ಮೂಕಂಬಿಕಾ ಕೃಪಾ ಶ್ರೀ ರಾಮ ಭಜನಾ ಮಂದಿರ ಬ್ರಹ್ಮರಕೂಟ್ಲು ಇದರ 53ನೇ ವರ್ಷದ ಏಕಹಾ ಭಜನಾ ಮಹೋತ್ಸವದ ಪ್ರಯುಕ್ತ ಸೋಮವಾರ ಸಂಜೆ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.ವೇದ, ಉಪನಿಷತ್ತಿನ ಸಾರವನ್ನು ಭಜನೆಯಿಂದ ತಿಳಿಯಲು ಸಾಧ್ಯವಿದೆ. ರಾಮನ ಆದರ್ಶವನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಆಗ ಸಂಸ್ಕಾರ, ಸಂಸ್ಕೃತಿ ಉಳಿಯಲು ಸಾಧ್ಯವಿದೆ.ರಾಮರಸ ತುಂಬಿದಾಗ ಸಮಾಜದಲ್ಲಿ ಪರಿವರ್ತನೆಯಾಗಲು ಸಾಧ್ಯವಿದೆ. ಮೊದಲು ನಾವು ಪರಿವರ್ತನೆಯಾಗಿ ಸಮಾಜವನ್ನು ಪರಿವರ್ತಿಸಬೇಕು ಭಗವಂತನ ಅನುಸಂಧಾನವಾಗಲು ಭಜನೆಯಿಂದ ಸಾಧ್ಯ ಎಂದು ತಿಳಿಸಿದರು. ಮುಖ್ಯ ಅತಿಥಿ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ ಭಜನೆಯಿಂದ ಸಾಮಾನ್ಯ ವ್ಯಕ್ತಿಗೂ ದೇವರನ್ನು ಒಲಿಸಲು ಸಾಧ್ಯವಿದೆ. ಜ್ಞಾನದ ಕೊರತೆ ಇದ್ದವನಿಗೆ ದೇವರ ಭಯ ಭಕ್ತಿ ಹೆಚ್ಚು. ಅವಿಭಜಿತ ದ.ಕ. ಜಿಲ್ಲೆಯಲ್ಲಿ ಜನರು ಯಕ್ಷಗಾನದ…
ಬಂಟ್ವಾಳ: ಸರಕಾರಿ ಪದವಿ ಪೂರ್ವ ಕಾಲೇಜು ಸಜೀಪ ಮೂಡ ಇದರ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಸ್.ಶ್ರೀಕಾಂತ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಸೋಮವಾರ ನಡೆಯಿತು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ, ಸಜಿಪ ಮಾಗಣೆ ತಂತ್ರಿ ಎಂ.ಸುಬ್ರಹ್ಮಣ್ಯ ಭಟ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ವಿದ್ಯಾರ್ಥಿಗಳು ಶಿಸ್ತು, ಸಂಯಮ, ಶ್ರದ್ಧೆ, ವಿನಯ ತಾಳ್ಮೆಯಿಂದ ವಿದ್ಯೆ ಕಲಿತು ಹೆತ್ತವರಿಗೆ ಹಾಗೂ ಕಲಿತ ಶಿಕ್ಷಣ ಸಂಸ್ಥೆಗೆ ಒಳ್ಳೆಯ ಹೆಸರನ್ನು ತರುವಂತೆ ಹಿತವಚನ ನೀಡಿದರು.ಕಾಲೇಜು ಪ್ರಾಚಾರ್ಯ ಸುರೇಶ್ ಬಿ. ಐತಾಳ ಸ್ವಾಗತಿಸಿ, ಪ್ರಾಸ್ತವಿಕವಾಗಿ ಮಾತನಾಡಿ ವಿದ್ಯಾರ್ಥಿಗಳು ಆದರ್ಶ ಗುಣಗಳನ್ನು ಮೈಗೂಡಿಸಿಕೊಂಡು ಉತ್ತಮ ನಾಗರಿಕರಾಗಿ ರೂಪಗೊಳ್ಳುವಂತೆ ತಿಳಿಸಿದರು. ಈ ಸಂದರ್ಭ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರಾದ ವಿಶ್ವನಾಥ ಕೊಟ್ಟಾರಿ, ಸುರೇಶ್ ಶೆಟ್ಟಿ ಕೊಯಮಜಲು ಉಪಸ್ಥಿತರಿದ್ದರು. ಉಪನ್ಯಾಸಕಕರಾದ ಬಾಲಕೃಷ್ಣ ನಾಯ್ಕ್ ಕೆ. ಬೆಳ್ಳಾರೆ ವರದಿ ವಾಚಿಸಿದರು, ಬಾಲಕೃಷ್ಣ ಎನ್.ವಿ. ಸನ್ಮಾನ ಪತ್ರ ವಾಚಿಸಿ, ವಂದಿಸಿದರು. ಶೋಭಾ ಕೆ., ಸ್ಪೂರ್ತಿ…
ಬಂಟ್ವಾಳ: ತಾಲೂಕು ಮರಾಟಿ ಸಮಾಜ ಸೇವಾ ಸಂಘ ಇದರ ಆಶ್ರಯದಲ್ಲಿ ಶ್ರೀ ಮಹಮ್ಮಯಿ ದೇವಿ ಅಮ್ಮನವರ ಸಾಮೂಹಿಕ ಗೋಂದೊಲು ಪೂಜೆ, ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ಜ.10ರಂದು ಶುಕ್ರವಾರ ಕಲ್ಲಡ್ಕ ಪೂರ್ಲಿಪಾಡಿಯಲ್ಲಿರುವ ಮರಾಟಿ ಭವನದಲ್ಲಿ ನಡೆಯಲಿದೆ.ಬೆಳಿಗ್ಗೆ 8.30ರಿಂದ ದೇವತಾ ಪ್ರಾರ್ಥನೆ, ಮಧ್ಯಾಹ್ನ 12 ಕ್ಕೆ ಪೂಜಾ ಸಿದ್ಧತೆ, ಮಧ್ಯಾಹ್ನ 1ಕ್ಕೆ ಅನ್ನಪ್ರಸಾದ, ಸಂಜೆ 4 ಗಂಟೆಗೆ ಭೈರವ ಆರಾಧನೆ ನಡೆದು ೬ ಗಂಟೆಗೆ ಶ್ರೀ ಮಹ್ಮಮಾಯಿ ದೇವಿ ಅಮ್ಮನವರ ಸಾಮೂಹಿಕ ಗೋಂದೊಲು ಪೂಜೆ ಆರಂಭಗೊಳ್ಳಲಿದೆ. ರಾತ್ರಿ 8 ಗಂಟೆಗೆ ಸಭಾ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ನಡೆಯಲಿದೆ. ಸಂಘದ ಅಧ್ಯಕ್ಷ ನಾರಾಯಣ ನಾಯ್ಕ್ ಪೆರ್ನೆ ಅಧ್ಯಕ್ಷತೆ ವಹಿಸುವರು, ಮುಖ್ಯ ಅತಿಥಿಗಳಾಗಿ ಕಾರ್ಪೋರೆಟ್ ಅಫೇರ್ಸ್ ಮಿನಿಸ್ಟ್ರಿ ನಿವೃತ್ತ ಪ್ರಾದೇಶಿಕ ನಿರ್ದೆಶಕ ಬಿ.ಎನ್. ಹರೀಶ್, ನ್ಯಾಯವಾದಿ ಪ್ರವೀಣ್ ಕುಮಾರ್ ಮುಗುಳಿ, ಲೋಕೋ ಪೈಲಟ್ ವನಿತಾ ಭಾಗವಹಿಸುವರು. ಸಂಜೆ 9 ರಿಂದ ಭಜನಾ ಸಂಕೀರ್ತನೆ ನಡೆಯಲಿದೆ, ರಾತ್ರಿ 12.30ಕ್ಕೆ ಸಾಮೂಹಿಕ…
ಬಂಟ್ವಾಳ: ದ.ಕ. ಜಿಲ್ಲಾ ಗ್ಯಾರೇಜ್ ಮಾಲಕರ ಸಂಘ ಮಂಗಳೂರು ಇದರ ಬಂಟ್ವಾಳ ವಲಯಕ್ಕೆ ನೂತನ ಜಿಲ್ಲಾಧ್ಯಕ್ಷ ದಿನಕರ ಕುಲಾಲ್ ಭೇಟಿ ಕಾರ್ಯಕ್ರಮ ಭಾನುವಾರ ನಡೆಯಿತು. ಗಾಣದಪಡ್ಪುವಿನ ಆಟೋಲೈನ್ಸ್ ಗ್ಯಾರೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ದಿನಕರ ಕುಲಾಲ್ ಮಾತನಾಡಿ ಗ್ಯಾರೇಜು ಮಾಲಕರ ಸಂಘದ ಬಂಟ್ವಾಳ ವಲಯ ಜಿಲ್ಲೆಯ ಇತರ ಸಂಘಗಳಿಗೆ ಮಾದರಿಯಾಗಿದೆ. ಅಶಕ್ತರಿಗೆ ನೆರವು, ವಿದ್ಯಾಪ್ರೋತ್ಸಾಹದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿರುವುದು ಅಭಿನಂದನೀಯ ಎಂದರು.ದ.ಕ. ಗ್ಯಾರೇಜ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಜನಾರ್ದನ ಅತ್ತಾವರ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಫಲಾಪೇಕ್ಷೆ ಇಲ್ಲದೆ ಮಾಡುವ ಸೇವೆಯಿಂದ ದೇವರು ಸಂತೃಪ್ತನಾಗುತ್ತಾನೆ. ಕೊಡವಂತಹ ನಿರ್ಮಲ ಮನಸ್ಸು ನಮಗೆ ಇರಬೇಕು ಎಂದರು. ಸ್ವಂತ ಭವನ ನಿರ್ಮೊಸುವ ಕನಸು ಅತೀ ಶೀಘ್ರದಲ್ಲಿ ನನಸಾಗಲಿ ಎಂದರು. ಬಂಟ್ವಾಳ ವಲಯದ ಅಧ್ಯಕ್ಷ ಸುಧೀರ್ ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ ನಮ್ಮ ದುಡಿಮೆಯ ಒಂದು ಭಾಗವನ್ನು ಅಶಕ್ತರಿಗೆ ನೀಡಿ ಅವರ ಕಣ್ಣೀರೊರೆಸುವ ಕಾರ್ಯವನ್ನು ಬಂಟ್ವಾಳ ವಲಯ ನಿರಂತರವಾಗಿ…








