Author: admin

ಬಂಟ್ವಾಳ: ಎಫ್ ಇ ಆರ್ ಡಿ ಟ್ರಸ್ಟ್ (ರಿ) ಆಶ್ರಯದಲ್ಲಿ ಪರಿಸರ ಜಾಗೃತಿಗಾಗಿಮೀನು ಉತ್ಸವ ಕಾರ್ಯಕ್ರಮ ಆದಿತ್ಯವಾರ ಬಾಳ್ತಿಲ ಕೆರೆಯಲ್ಲಿ ಜರಗಿತು. Advertisement ಈ ಸಂದರ್ಭದಲ್ಲಿ ಮೀನುಗಳ ಅವಶ್ಯಕತೆ ಹಾಗೂ ಅವುಗಳು ಪರಿಸರದಲ್ಲಿ ಉಂಟು ಮಾಡುವ ಸಮತೋಲನದ ಬಗ್ಗೆ ವಿಚಾರ ವಿನಿಮಯವನ್ನು ನಡೆಸಲಾಯಿತು. ಮೀನುಗಳು ನೀರಿನ ಶುದ್ಧೀಕರಣವನ್ನು ಹೇಗೆ ನಡೆಸುತ್ತವೆ ಎಂಬುದನ್ನು ಮಾದರಿಯ ಮೂಲಕ ಜಾಗೃತಿ ಮೂಡಿಸಲಾಯಿತು. ಕೃಷಿ ಹೊಂಡ, ಇಂಗು ಗುಂಡಿಯ ಮಹತ್ವ ಹಾಗೂ ಅಂತರ್ಜಲ ಹೆಚ್ಚಿಸಲು ನಾವು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು. ಟ್ರಸ್ಟ್ ವತಿಯಿಂದ ಬಾಳ್ತಿಲ ಗ್ರಾಮದ ಸರಕಾರಿ ಕೆರೆಗಳಿಗೆ ಹಾಗೂ ಸುತ್ತ ಮುತ್ತಲಿನ ಕೆರೆಗಳಿಗೆ ಮೀನು ಮರಿ ಬಿಡಲಾಯಿತು. ಕಾರ್ಯಕ್ರಮದಲ್ಲಿ ಟಸ್ಟ್‌ನ ಪದಾಧಿಕಾರಿಗಳು, ಸ್ಥಳೀಯರು, ರೈತ ಸಂಘದ ನಾಯಕರು ಭಾಗವಹಿಸಿದ್ದರು. Advertisement

Read More

ಚಿಂತನಾ ಸಭೆ ನಡೆಸುವ ಮೂಲಕ ಬಿಲ್ಲವ ಸಮಾಜವನ್ನು ಜಾಗೃತಿ ಗೊಳಿಸುವ ಕಾರ್ಯ: ಡಾ. ಪ್ರಣಾವಾನಂದ ಸ್ವಾಮೀಜಿ ಬಂಟ್ವಾಳ: ೧೮ ವರ್ಷಗಳ ಕಾಲ ರಾಜ್ಯಸಭಾ ಸದಸ್ಯರಾಗಿ, ೪೯ ವರ್ಷ ಕಾಂಗ್ರೆಸ್‌ನ ನಿಷ್ಠಾವಂತ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿರುವ ಕಾಂಗ್ರೆಸ್‌ನ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ರಾಜಕೀಯವಾಗಿ ಮುಗಿಸುವ ಹುನ್ನಾರ ಕಾಂಗ್ರೆಸ್ ಪಕ್ಷದಲ್ಲಿ ನಡೆದಿದೆ. ಜನಾರ್ದನ ಪೂಜಾರಿಯವರನ್ನು ಮೂಲೆ ಗುಂಪು ಮಾಡಿದಂತೆ ಬಿ.ಕೆ ಹರಿಪ್ರಸಾದ್ ಅವರನ್ನು ಕಡೆಗಣಿಸುತ್ತಿರುವುದು ಕಾಣುತ್ತಿದೆ. ಬಿ.ಕೆ. ಹರಿಪ್ರಸಾದ್ ಅವರಿಗೆ ತಕ್ಷಣ ಸೂಕ್ತ ಸ್ಥಾನಮಾನ ನೀಡಬೇಕು ತಪ್ಪಿದ್ದಲ್ಲಿ ಮುಂಬರುವ ತಾ.ಪಂ. ಜಿ.ಪಂ. ಕಾಪೋರೇಷನ್ ಹಾಗೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ತಕ್ಕ ಬೆಲೆ ತೆರಲಿದೆ ಎಂದು ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಅಧ್ಯಕ್ಷ ಡಾ. ಪ್ರಣವಾನಂದ ಸ್ವಾಮೀಜಿ ಎಚ್ಚರಿಕೆ ನೀಡಿದರು. Advertisement ಬಂಟ್ವಾಳದ ಮೆಲ್ಕಾರ್‌ನ ಬಿರ್ವ ಸಭಾಂಗಣದಲ್ಲಿ ಭಾನುವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಬಿ.ಕೆ. ಹರಿಪ್ರಸಾದ್ ಅವರ ಬೆನ್ನೆಲುಬಾಗಿ ಬಿಲ್ಲವ ಸಮಾಜ ನಿಲ್ಲಲಿದೆ. ಈಗ ಸರಕಾರ ಹನಿಮೂನ್ ಪಿರೇಡ್‌ನಲ್ಲಿದ್ದು ಅದು ಮುಗಿದ…

Read More

ಬಂಟ್ವಾಳ: ಮಂಗಳೂರು ವಿಶ್ವವಿದ್ಯಾನಿಲಯದಿಂದ ಅಂಗೀಕೃತವಾದ ದೇಶದ ಮೊತ್ತ ಮೊದಲ ಕೇಶ ವಿನ್ಯಾಸ ಕಾಲೇಜು ಆಗಸ್ಟ್‌ನಲ್ಲಿ ಮಂಗಳೂರಿನ ದೇರಳಕಟ್ಟೆಯಲ್ಲಿ ಶಿವಾ’ಸ್ ಕಾಲೇಜ್ ಹೆಸರಲ್ಲಿ ಕಾರ್ಯಾರಂಭಗೊಳ್ಳಲಿದೆ. ಆರು ತಿಂಗಳ ಸರ್ಟಿಫಿಕೇಟ್ ಕೋರ್ಸ್ ಮತ್ತು ಒಂದು ವರ್ಷ ಡಿಪ್ಲೊಮ ಪೂರೈಸಿದ ವಿದ್ಯಾರ್ಥಿಗಳಿಗೆ ಮಂಗಳೂರು ವಿಶ್ವವಿದ್ಯಾನಿಲಯ ಪ್ರಮಾಣೀಕೃತ ಸರ್ಟಿಫಿಕೇಟ್ ಸಿಗಲಿದೆ. Advertisement ಬಹು ಬೇಡಿಕೆಯಿರುವ ಕೇಶ ವಿನ್ಯಾಸ ಕ್ಷೇತ್ರದಲ್ಲಿ ಯುವ ಸಮುದಾಯಕ್ಕೆ ಉದ್ಯೋಗವಕಾಶ ಒದಗಿಸುವ ಉದ್ದೇಶದೊಂದಿಗೆ ಈ ಕಾಲೇಜು ಆರಂಭಗೊಂಡಿದ್ದು, ಕೇಶ ವಿನ್ಯಾಸ ಕ್ಷೇತ್ರದಲ್ಲಿ ಹೊಸ ಪರಿಕಲ್ಪನೆಯೊಂದಿಗೆ ಹೊಸ ಮೈಲುಗಲ್ಲು ಸಾಧಿಸಿದ, ಮೂಲತಃ ಕಾರ್ಕಳ ಅತ್ತೂರು ನಿವಾಸಿ, ಮುಂಬೈಯ ಯಶಸ್ವಿ ಉದ್ಯಮಿ ಶಿವಾ’ಸ್ ಸಂಸ್ಥೆಯ ಸಂಸ್ಥಾಪಕ ಡಾ. ಶಿವರಾಮ ಕೆ. ಭಂಡಾರಿ ನೂತನ ಶಿವಾ’ಸ್ ಇಂಟರ್ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಪ್ರೊಫೆಶನಲ್ ಇನ್ನೋವೇಶನ್ಸ್ (ಸೀಪಿ) ಕಾಲೇಜು ಸ್ಥಾಪನೆಯ ರೂವಾರಿ ಆಗಿದ್ದಾರೆ. ಸರ್ಟಿಫಿಕೇಟ್ ಪ್ರೋಗ್ರಾಂ ಕೋರ್ಸ್:ಮುಂಬೈಯಲ್ಲಿ ಜನಪ್ರಿಯತೆಯನ್ನು ಪಡೆದುಕೊಂಡಿರುವ ಪ್ರತಿಷ್ಠಿತ ಶಿವಾಸ್ ಸಂಸ್ಥೆ, ಮೌಲ್ಯವರ್ಧಿತ ಮತ್ತು ಕೌಶಲ್ಯವರ್ಧಿತ ಹೇರ್ ಎಂಡ್ ಬ್ಯೂಟಿ ಥೆರಪಿ (ಸರ್ಟಿಫಿಕೆಟ್ ಪ್ರೋಗ್ರಾಮ್ ಇನ್ ಹೇರ್ ಆಂಡ್…

Read More

ಡಿಶ್ ಅಳವಡಿಸುವ ವೇಳೆ ಕಾಲು ಜಾರಿ ಬಿದ್ದು ಯುವಕ ಸಾವು ಬಂಟ್ವಾಳ: ಇಲ್ಲಿನ ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿ ಸಮೀಪದ ಕೈಕಂಬ ಎಂಬಲ್ಲಿ ಮೂರನೇ ಮಹಡಿಯಲ್ಲಿ ಡಿಶ್ ಅಳವಡಿಸುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ಯುವಕ ಸಾವನ್ನಪ್ಪಿದ ಘಟನೆ ಶುಕ್ರವಾರ ನಡೆದಿದೆ. ಕೊಯಿಲ ಗ್ರಾಮದ ಗೋವಿಂದಬೆಟ್ಟು ನಿವಾಸಿ ಚಾಲಕ ಜಯಂತ ಶ್ರೀಯಾನ್ ಎಂಬವರ ಪುತ್ರ ಯತಿನ್ ಗಾಣಿಗ (30) ಮೃತ ದುರ್ದೈವಿ. ಇವರು ವಸತಿ ಗೃಹವೊಂದರ ಮೂರನೇ ಮಹಡಿಯಲ್ಲಿ ಡಿಶ್ ಅಳವಡಿಸುತ್ತಿದ್ದ ವೇಳೆ ಕಾಲು ಜಾರಿ ಬಿದ್ದಿದ್ದಾರೆ. ಈ ಮಹಡಿ ಕೆಳಗೆ ಬಾವಿಗೆ ಅಳವಡಿಸಿದ್ದ ಕಬ್ಬಿಣದ ರಕ್ಷಣಾ ಬೇಲಿಗೆ ಇವರ ತಲೆ ಬಡಿದು ತೀವ್ರ ರಕ್ತಸ್ರಾವ ಸಹಿತ ಗಂಭೀರ ಗಾಯಗೊಂಡಿದ್ದರು. ಸ್ಥಳೀಯರು ಕೂಡಲೇ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ 10 ವರ್ಷಗಳಿಂದ ಟಿವಿ ರಿಪೇರಿ, ಡಿಶ್ ಅಳವಡಿಕೆ ಮತ್ತು ಎಸಿ ಮೆಕ್ಯಾನಿಕ್ ವೃತಿ ನಡೆಸುತ್ತಿದ್ದು ಮನೆಗೆ ಆಧಾರ ಸ್ತಂಭವಾಗಿದ್ದರು. ಮೃತರಿಗೆ…

Read More

ತುಂಬೆಯಲ್ಲಿ ಬಸ್ಸು ತಂಗುದಾಣ ಉದ್ಘಾಟನೆ ಬಂಟ್ವಾಳ: ಫಾದರ್ ಮುಲ್ಲರ್ ಆಸ್ಪತ್ರೆ ವತಿಯಿಂದ ತುಂಬೆ ಜಂಕ್ಷನ್‌ನಲ್ಲಿ ನಿರ್ಮಿಸಿದ ಬಸ್ ತಂಗುದಾಣವನ್ನು ತುಂಬೆ ಗ್ರಾಮ ಪಂಚಾಯತಿ ಅಧ್ಯಕ್ಷ ಪ್ರವೀಣ್ ಬಿ ತುಂಬೆ ಉದ್ಘಾಟಿಸಿದರು. ಅವರು ಮಾತನಾಡಿ ತುಂಬೆ ಗ್ರಾಮವು ಸ್ಮಾರ್ಟ್ ಸಿಟಿ ಆಗುವಲ್ಲಿ ಫಾದರ್ ಮುಲ್ಲರ್ ಆಸ್ಪತ್ರೆ ತುಂಬೆ ಹಾಗೂ ಬಿ.ಎ ಗ್ರೂಪ್‌ನ ಕೊಡುಗೆ ಅಪಾರವಾದದ್ದು. ನಾವೆಲ್ಲರು ಪ್ರೀತಿಯಿಂದ, ಸಹಬಾಳುವೆಯಿಂದ ಕೆಲಸ ಮಾಡುವುದು ಬಹು ಮುಖ್ಯ ಎಂದರು. Advertisement Advertisement ತುಂಬೆಯಲ್ಲಿ ಬಸ್ಸು ತಂಗುದಾಣ ಉದ್ಘಾಟನೆ ಬಿ.ಎ ಗ್ರೂಪ್‌ನ ವ್ಯವಸ್ಥಾಪಕ ನಿರ್ದೇಶಕರಾದ ಬಿ ಅಬ್ದುಲ್ ಸಲಾಂ, ತುಂಬೆ ಪಂಚಾಯತಿ ಪಿಡಿಓ ಚಂದ್ರಾವತಿ , ಫಾದರ್ ಮುಲ್ಲರ್ ಸೇವಾ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾದರ್ ರಿಚ್ಚರ್ಡ್ ಅಲೋಷಿಯಸ್ ಕೊವೆಲ್ಲೋ, ತುಂಬೆಯ ಫಾದರ್ ಮುಲ್ಲರ್ ಆಸ್ಪತ್ರೆಯ ಆಡಳಿತಾಧಿಕಾರಿ ವಂದನೀಯ ಫಾದರ್ ಸಿಲ್ವೆಸ್ಟರ್ ವಿನ್ಸೆಂಟ್ ಲೋಬೊ, ವೈದ್ಯಕೀಯ ಅಧೀಕ್ಷಕ ಡಾ. ಕಿರಣ್ ಶೆಟ್ಟಿ, ಪಂಚಾಯತಿಸದಸ್ಯ ಮಹಮ್ಮದ್ ವಳವೂರು ಉಪಸ್ಥಿತರಿದ್ದರು.ಜೇಸನ್ ಕರ್ಕಡ ವಂದಿಸಿದರು. ಸುಷ್ಮಾ ಪ್ರಶಾಂತ್ ಕಾರ್‍ಯಕ್ರಮವನ್ನು ನಿರೂಪಿಸಿದರು

Read More

ಮಂಚಕಲ್ಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪುಸ್ತಕ ಹಾಗೂ ಶಾಲಾ ಸಾಮಾಗ್ರಿ ವಿತರಣೆ ಬಂಟ್ವಾಳ: ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಅಂಕ ಗಳಿಕೆ ಜೊತೆಗೆ ತಂದೆ-ತಾಯಿ ಮತ್ತು ಗುರು ಹಿರಿಯರನ್ನು ಗೌರವಿಸುವ ಮನೋಭಾವ ಬಾಲ್ಯದಿಂದಲೇ ರೂಢಿಸಿಕೊಳ್ಳಬೇಕು ಎಂದು ಬಂಟ್ವಾಳ ತಾಲೂಕು ಬ್ರಹ್ಮಶ್ರೀ ನಾರಾಯಣ ಗುರು ವಿಚಾರ ವೇದಿಕೆ ಅಧ್ಯಕ್ಷ ನವೀನ್ ಕೋಟ್ಯಾನ್ ಹೇಳಿದರು. Advertisement ಇಲ್ಲಿನ ಸಿದ್ಧಕಟ್ಟೆ ಸಮೀಪದ ಮಂಚಕಲ್ಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದ ವಿವಿಧ ದಾನಿಗಳ ನೆರವಿನಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಸಹಿತ ಬ್ಯಾಗ್ ಮತ್ತು ಕೊಡೆ ಮತ್ತಿತರ ಸಾಮಾಗ್ರಿ ವಿತರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. Advertisement ನಿವೃತ್ತ ಶಿಕ್ಷಕಿ ನಾಗವೇಣಿ ಮಿಜಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬಡ ಮಕ್ಕಳಿಗೆ ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಸುಸಜ್ಜಿತ ಮೂಲ ಸೌಕರ್ಯವೂ ಅಗತ್ಯವಿದೆ ಎಂದರು.ಇದೇ ವೇಳೆ ನಾರಾಯಣಗುರು ವಿಚಾರ ವೇದಿಕೆ ಸಹಿತ ವಿವಿಧ ದಾನಿಗಳು ಕೊಡುಗೆ ನೀಡಿದ ಉಚಿತ ಪುಸ್ತಕ, ಬ್ಯಾಕ್, ಕೊಡೆ, ಸ್ಲೇಟು, ಬೆಲ್ಟ್,…

Read More

ಸಜೀಪಮೂಡ ಗ್ರಾಮಲ್ಲಿ ಇಂದಿರಾ ಸೇವಾ ಕೇಂದ್ರ ಉದ್ಘಾಟನೆ ಬಂಟ್ವಾಳ: ಸಜೀಪಮೂಡ ಗ್ರಾಮದ ಬೊಳ್ಳಾಯಿ ಜಂಕ್ಷನ್ ಹಾಗೂ ಸುಭಾಶ್‌ನಗರದ ಬ್ರಹ್ಮಶ್ರೀ ನಾರಾಯಣ ಗುರು ಸಭಾಂಗಣದ ಆವರಣದಲ್ಲಿ ಸಜೀಪಮೂಡ ವಲಯ ಕಾಂಗ್ರೆಸ್ ವತಿಯಿಂದ ನಿರ್ವಹಿಸಲ್ಪಡುವ ಇಂದಿರಾ ಸೇವಾ ಕೇಂದ್ರವನ್ನು ಮಾಜಿ ಸಚಿವ ಬಿ. ರಮಾನಾಥ ರೈ ಭಾನುವಾರ ಉದ್ಘಾಟಿಸಿದರು. Advertisement ಈ ಸಂದರ್ಭ ಮಾತನಾಡಿದ ಅವರು ಸರ್ಕಾರದ ಎಲ್ಲಾ ಸೌಲಭ್ಯಗಳು ಜನರಿಗೆ ಸುಲಭವಾಗಿ ದೊರಕುವಂತಾಗಲೂ ಪಕ್ಷದ ವತಿಯಿಂದ ಇಂದಿರಾ ಸೇವಾ ಕೇಂದ್ರಗಳನ್ನು ಆರಂಭಿಸಲಾಗಿದ್ದು ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು. ಹೊಸ ಸರ್ಕಾರ ಘೋಷಣೆ ಮಾಡಿದ ಗ್ಯಾರಂಟಿಗಳನ್ನು ಅನುಷ್ಠಾನ ಮಾಡವ ಪ್ರಯತ್ನದಲ್ಲಿದೆ. ಈ ಯೋಜನೆಗಳು ಅನುಷ್ಠಾನವಾಗದಂತೆ ತಡೆಯುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ ಎಂದು ಆರೋಪಿಸಿದರು. ಮಹಿಳೆಯರು ಸರ್ಕಾರಿ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಿ ಸಂತೋಷ ಪಡುತ್ತಿದ್ದಾರೆ. ಉಳಿದ ಎಲ್ಲಾ ಗ್ಯಾರಂಟಿಗಳನ್ನು ಸರಕಾರ ಖಂಡಿತವಾಗಿಯೂ ಅನುಷ್ಠಾನ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸಜೀಪಮೂಡ ಗ್ರಾಮಲ್ಲಿ ಇಂದಿರಾ ಸೇವಾ ಕೇಂದ್ರ ಉದ್ಘಾಟನೆ Advertisement ಈ ಸಂದರ್ಭ ಜಿ.ಪಂ. ಮಾಜಿ…

Read More

ಕಡೆಗೋಳಿಯಲ್ಲಿ ಅಮ್ಟಾಡಿ ವ್ಯವಸಾಯ ಸೇವಾ ಸಹಕಾರಿ ಸಂಘದ 4ನೇ ಶಾಖೆ ಉದ್ಘಾಟನೆ ಬಂಟ್ವಾಳ : ಅಮ್ಟಾಡಿ ವ್ಯವಸಾಯ ಸೇವಾ ಸಹಕಾರಿ ಸಂಘದ ೪ ನೇ ಕಡೆಗೋಳಿ ಶಾಖೆಯ ಉದ್ಘಾಟನೆ ತುಂಬೆ, ಕಡೆಗೋಳಿಯ ಸಾಯಿ ಕಾಂಪ್ಲೆಕ್ಸ್‌ನ ನೂತನ ಕಟ್ಟಡದಲ್ಲಿ ರವಿವಾರ ನಡೆಯಿತು.ಮಾಜಿ ಸಚಿವ ಬಿ.ರಮಾನಾಥ ರೈ ಅವರು ನೂತನ ಶಾಖೆಯನ್ನು ಹಾಗೂ ಬಳಿಕ ನಡೆದ ಸಭಾಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪ್ರಾಮಾಣಿಕ ಸೇವೆಯಿಂದಾಗಿ ದ.ಕ.ಜಿಲ್ಲೆಯಲ್ಲಿ ಸಹಕಾರಿ ಚಳುವಳಿಗಳು ಪರಿಣಾಮಕಾರಿಯಾಗಿ ಬೆಳೆದು ಬಂದಿದೆ. ಸಹಕಾರಿ ಕ್ಷೇತ್ರ ಬೆಳೆಯಬೇಕಾದರೆ ಜನರ ಸಹಕಾರ ಅಗತ್ಯ ಎಂದ ಅವರು, ಮುಂದಿನ ದಿನಗಳಲ್ಲಿ ರಾಜ್ಯ ಸರಕಾರ ರೈತರಿಗೆ ಶೂನ್ಯ ಬಡ್ಡಿ ದರದ ಸಾಲವನ್ನು 5 ಲಕ್ಷ ರೂ.ಗಳಿಗೆ ಹೆಚ್ಚಿಸುವ ಚಿಂತನೆ ಹೊಂದಿದೆ ಎಂದರು. ತುಂಬೆ ಗ್ರಾಮ ಪಂಚಾಯತಿ ಅಧ್ಯಕ್ಷ ಪ್ರವೀಣ್ ಬಿ.ತುಂಬೆ ಅವರು ಮುಖ್ಯ ಅತಿಥಿಯಾಗಿ ಮಾತನಾಡಿ, ಅಮ್ಟಾಡಿ ಸಹಕಾರಿ ಸಂಘವು ಸದಸ್ಯರ ಮಕ್ಕಳಿಗೆ ಶಿಕ್ಷಣಕ್ಕೆ ಆರ್ಥಿಕ ಸಹಾಯ ನೀಡಿ ಪ್ರೋತ್ಸಾಹ ನೀಡುವ ಮೂಲಕ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದು ಉತ್ತಮ ಕಾರ್ಯ…

Read More

ಬಂಟ್ವಾಳ: ರೋಟರಿ ಜಿಲ್ಲೆ ೩೧೮೧ರ ಪ್ರಸ್ತತ ಸಾಲಿನ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಅವರೊಂದಿಗೆ ಸೇವಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಈ ವರ್ಷದ ಅಮೋಘ ಯಶಸ್ಸಿಗೆ ಕಾರಣಿಕರ್ತರಾದ ರೋಟರಿ ಜಿಲ್ಲೆಯ ಪದಾಧಿಕಾರಿಗಳಿಗೆ, ರೋಟರಿ ಸದಸ್ಯರಿಗೆ ಕೃತಜ್ಞತೆ ಸಲ್ಲಿಸುವ ಕಾರ್ಯಕ್ರಮ ಧನ್ಯೋಸ್ಮಿ ಶನಿವಾರ ಸಂಜೆ ಬೆಂಜನಪದವಿನ ಶುಭ ಆಡಿಟೋರಿಯಂನಲ್ಲಿ ನಡೆಯಿತು. Advertisement Advertisement ಕಾರ್ಯಕ್ರಮವನ್ನು ಜಿಲ್ಲಾ ಸಹಾಯಕ ತರಬೇತುದಾರ ಎಂ. ಎಂ. ಸುರೇಶ್ ಚೆಂಗಪ್ಪ ಹಾಗೂ ಪೂರ್ವ ಜಿಲ್ಲಾ ಗವರ್ನರ್ ಕೃಷ್ಣ ಶೆಟ್ಟಿ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಜಿಲ್ಲಾ ಸಹಾಯಕ ತರಬೇತುದಾರ ಎಂ. ಎಂ. ಸುರೇಶ್ ಚೆಂಗಪ್ಪ ಮಾತನಾಡಿ ಪ್ರಕಾಶ್ ಕಾರಂತ್ ಅವರ ಮುಖದಲ್ಲಿ ಒಂದು ನಗುವಿದೆ, ಆ ನಗುವಿನ ಹಿಂದೆ ಆಕಾಂಕ್ಷೆ ಇದೆ. ತಾನು ಮಾಡುವ ಪ್ರತಿಯೊಂದು ಕೆಲಸ ವಿಭಿನ್ನವಾಗಿರಬೇಕು ಎನ್ನುವ ಕಲ್ಪನೆಯಿಟ್ಟುಕೊಂಡು ಅದಕ್ಕಾಗಿ ಅವಿರತ ಶ್ರಮ ಪಟ್ಟು ಯಶಸ್ವಿಯಾಗಿದ್ದಾರೆ ಎಂದರು.ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ 3182 ಪೂರ್ವ ಗವರ್ನರ್ ಅಭಿನಂದನ್ ಶೆಟ್ಟಿ ಮಾತನಾಡಿ ನಮ್ಮ ಕಲ್ಪನೆಗೂ ಮೀರಿದ ನಾಯಕತ್ವ ಪ್ರಕಾಶ್ ಕಾರಂತ್ ಅವರನ್ನು…

Read More

ಬಂಟ್ವಾಳ: ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಯಥಾಸ್ಥಿತಿ ಮುಂದುವರಿಸಲು ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅವರು ತೋಟಗಾರಿಕಾ ಸಚಿವರಿಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯು ರಾಜ್ಯ ಸರಕಾರ ದ ಪಾಲುದಾರಿಕೆಯಲ್ಲಿ ಕಳೆದ ಕೆಲವು ವರ್ಷಗಳಿಂದ ರಾಜ್ಯದಲ್ಲಿ ಯಶಸ್ವಿಯಾಗಿ ಅನುಷ್ಠಾನ ಗೊಂಡು ಹವಾಮಾನ ವೈಫಲ್ಯರೀತ್ಯಗಳಿಂದ ಬೆಳೆಗಳು ಹಾನಿಗೋಳಗಾಗಿ ನಷ್ಟ ಅನುಭವಿಸಿದಾಗ ರೈತರಿಗೆ ಸ್ವಲ್ಪ ಮಟ್ಟಿನಲ್ಲಿ ಸಂಕಷ್ಟ ಪರಿಹಾರ ಗೊಂಡು ಜೀವನಕ್ಕೆ ಒಂದಷ್ಟು ವರದಾನ ವಾಗುತ್ತಿತ್ತು. ಈ ಯೋಜನೆ ಯಿಂದ ಕರಾವಳಿಯ ಅಡಿಕೆ ಮತ್ತು ಕರಿಮೆಣಸು ಬೆಳೆಯುವ ರೈತರಿಗೆ ತುಂಬಾ ಅನುಕೂಲವಾಗುತ್ತಿತ್ತು. ಈ ಯೋಜನೆಯ ಒಟ್ಟು ಪ್ರೀಮಿಯಂ ಮೊತ್ತದ ಶೇ ೧೦ ರಷ್ಟು ಪಾಲು ರೈತ ಪಾವತಿ ಮಾಡುತ್ತಿದ್ದು, ಉಳಿದಂತೆ ಶೇ ೯೦ ರಷ್ಟು ಪಾಲನ್ನು ಕೇಂದ್ರ ಹಾಗೂ ರಾಜ್ಯ ಸರಕಾರ ಗಳ ಸಹಯೋಗದಲ್ಲಿ ಭರಿಸಿಕೊಂಡು ರೈತರ ಸಂಕಷ್ಟಕ್ಕೆ ಕೇಂದ್ರ ಮತ್ತು…

Read More