Author: admin
ಬಂಟ್ವಾಳ: ಮಧುರ ಮನಸ್ಸುಗಳ ಮಿಲನವೇ ಸಹಮಿಲನ ಎಂದು ಕೃಷಿ ವಿಜ್ಞಾನಿ ಹರೀಶ್ ಶೆಣೈ ಹೇಳಿದರು.ನಾಗರಿಕ ಕ್ರಿಯಾ ಸಮಿತಿ ಸಂಚಯಗಿರಿ ಇದರ ಆಶ್ರಯದಲ್ಲಿ ನಡೆದ 29ನೇ ವರ್ಷದ ಸಹಮಿಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ನಾಗರಿಕ ಕ್ರಿಯಾ ಸಮಿತಿಯ ಮೂಲಕ ಸಂಚಯಗಿರಿ ಅಭಿವೃದ್ದಿ ಕಾಣುತ್ತಿದೆ, ಇಂತಹ ಸಂಘಟನೆಗಳು ಇದ್ದಾಗ ಸಮಾಜಕ್ಕೆ ಒಳಿತಾಗುತ್ತದೆ ಎಂದರುಪ್ರಾಧ್ಯಪಕ ಡಾ. ದಾಮೋದರ ಗೌಡ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಕನಸು, ಗುರಿ,ಸತತ ಪ್ರಯತ್ನ ಇದ್ದಾಗ ಸಾಧನೆ ಮಾಡಲು ಸಾಧ್ಯವಿದೆ. ಕನಸನ್ನು ನನಸು ಮಾಡುವತ್ತ ನಮ್ಮ ಗುರಿಯಿರಬೇಕು. ಅವಕಾಶವನ್ನು ಸದುಪಯೋಗಪಡಿಸಿಕೊಂಡಾಗ ಯಶಸ್ಸು ಪಡೆಯಲು ಸಾಧ್ಯವಿದೆ ಎಂದು ತಿಳಿಸಿದರು.ನಾಗರಿಕ ಕ್ರಿಯಾ ಸಮಿತಿಯ ಅಧ್ಯಕ್ಷ ಸುರೇಶ್ ಬಂಗೇರ ಅಧ್ಯಕ್ಷತೆ ವಹಿಸಿದ್ದರು. ಪುರುಷೋತ್ತಮ ಹೆಬ್ಬಾರ್ ಮರಕಡ ಭಾಗವಹಿಸಿದ್ದರು. ನಾಗರಿಕ ಕ್ರಿಯಾ ಸಮಿತಿ ಗೌರವಾಧ್ಯಕ್ಷ ನರಸಿಂಹ ರಾಜ್ ಹೊಳ್ಳ, ಉಪಾಧ್ಯಕ್ಷೆ ಪ್ರಿಯಾಲತಾ, ಕ್ರೀಡಾ ಕಾರ್ಯದರ್ಶಿ ಪುರಂದರ ಶೆಟ್ಟಿ ಉಪಸ್ಥಿತರಿದ್ದರು. 75 ವರ್ಷ ದಾಟಿದ ಹಿರಿಯರನ್ನು ಸನ್ಮಾನಿಸಲಾಯಿತು. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಸಾಧಕರನ್ನು ಗೌರವಿಸಲಾಯಿತು. ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ…
ಬಂಟ್ವಾಳ: ಕುರಿಯಾಳ ಗ್ರಾಮದ ದುರ್ಗಾನಗರ ಶ್ರೀ ಓಂಕಾರೇಶ್ವರೀ ದೇವಿ ಭಜನಾ ಮಂದಿರದ ವಾರ್ಷಿಕೋತ್ಸವ ಗುರುವಾರ ವೈಭವದಿಂದ ನಡೆಯಿತು ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆ, ಗಣಹೋಮ, ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸಂಕೀರ್ತನೆ ನಡೆಯಿತು. ಅರ್ಚಕ ಸುದರ್ಶನ್ ಬಲ್ಲಾಳ್ ನೇತೃತ್ವದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ನಾಗದೇವರಿಗೆ ನಾಗತಂಬಿಲ, ಆಶ್ಲೇಷ ಬಲಿ, ಮಹಾಪೂಜೆ ನಡೆಯಿತು. ಮಧ್ಯಾಹ್ನ ಶ್ರೀ ಓಂಕಾರೇಶ್ವರೀ ದೇವಿಗೆ ಮಹಾಪೂಜೆ ನಡೆದು ಪ್ರಸಾದ ವಿತರಿಸಲಾಯಿತು. ಬಳಿಕ ಅನ್ನಸಂತರ್ಪಣೆ ನಡೆಯಿತು. ಸಂಜೆ ಭಜನಾ ಮಂಗಳ, ರಾತ್ರಿ ಶ್ರೀ ಓಂಕಾರೇಶ್ವರೀ ದೇವಿಗೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಶಾಸಕ ರಾಜೇಶ್ ನಾಯ್ಕ್ ಹಾಗೂ ಸತ್ಯಜಿತ್ ಸುರತ್ಕಲ್ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಸಭಾ ಕಾರ್ಯಕ್ರಮದಲ್ಲಿ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವಪ್ಪ ಕುಲಾಲ್ ಪಂಜಿಕಲ್ಲು ಹಾಗೂ ರಾಮ ಧರ್ಮ ಶಿಕ್ಷಣದ ಮನೋಹರ್ ಕಲ್ಲಡ್ಕ ಅವರನ್ನು ಗೌರವಿಸಲಾಯಿತು.ರಾತ್ರಿ ಸಸಿಹಿತ್ಲು ಮೇಳದಿಂದ ಮಹಾಶಕ್ತಿ ಮಂತ್ರದೇವತೆ ಯಕ್ಷಗಾನ ಬಯಲಾಟ ನಡೆಯಿತು.
ಬಂಟ್ವಾಳ: ಶ್ರೀರಾಮ ಮತ್ತು ಶ್ರೀ ಕೃಷ್ಣ ದೇಶದ ಮಣ್ಣಿನ ಚಿಂತನೆಯನ್ನು ಕೊಟ್ಟವರು ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.ಶ್ರೀ ಕೃಷ್ಣ ಮಂದಿರ ಅಮ್ಟೂರು ಇದರ 25ನೇ ವರ್ಷದ ವಾರ್ಷಿಕ ಮಹೋತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಹಿಂದೂ ಸಮಾಜ ಅಸಂಘಟಿತ ವಾಗಿದ್ದಾಗ ಈ ದೇಶಕ್ಕೆ ಮುಸಲ್ಮಾನರ ಆಕ್ರಮಣವಾಗಿತ್ತು. ಇದು ಶ್ರೀರಾಮ, ಶ್ರೀ ಕೃಷ್ಣರ ಭೂಮಿ ಹೊರತು ಇದು ಬೇರ್ಯಾರಿಗೂ ಸೇರಿದ್ದಲ್ಲ. ಈ ಬಗ್ಗೆ ಹಿಂದೂ ಸಮಾಜ ಜಾಗೃತವಾಗಿರಬೇಕು ಎಂದು ತಿಳಿಸಿದರು.ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರನಂದ ಸ್ವಾಮೀಜಿ ಆಶೀರ್ವಚನ ನೀಡಿ 25 ವರ್ಷಗಳ ಹಿಂದೆ ಶ್ರೀ ಕೃಷ್ಣ ಮಂದಿರ ಮಂದಿರ ನಿರ್ಮಿಸುವ ಮೂಲಕ ಇಲ್ಲಿ ಧರ್ಮ ಬಿತ್ತುವ ಕೆಲಸ ಆಗಿದೆ ಎಂದರು. ಭಗವದ್ಗೀತೆಯನ್ನು ಅಳವಡಿಸಿಕೊಂಡು ಬೇರೆ ದೇಶಗಳು ಸದೃಢವಾಗಿದೆ. ಆದರೆ ಭಾರತ ಅಳವಡಿಸಿಕೊಳ್ಳದೆ ಇರುವುದರಿಂದ ಸದೃಡವಾಗಿಲ್ಲ. ಸ್ಮಾರ್ಟ್ ಸಿಟಿ ಮಂಗಳೂರು ಡ್ರಗ್ ಸಿಟಿಯಾಗುತ್ತಿದೆ. ಹಿಂದೂ ಸಮಾಜ ಸದೃಢವಾಗಬೇಕಾದರೆ ಜಾತಿಯಿಂದ ಹೊರ ಬಂದು ಹಿಂದೂ ಎನ್ನುವ…
ಬಂಟ್ವಾಳ: ನಮ್ಮ ದೈನಂದಿನ ಆಹಾರ ಪದ್ದತಿ ಸರಿ ಇದ್ದಾಗ, ಆಯಾಯ ಋತುವಿಗೆ ಸರಿಯಾದ ಆಹಾರ ಸೇವನೆ ಮಾಡಿದಾಗ ಸಕಲ ರೋಗದಿಂದ ದೂರವಿರಬಹುದು ಎಂದು ಗೋವಿನತೋಟ ರಾಧಸುರಭಿ ಗೋ ಮಂದಿರದ ಅಧ್ಯಕ್ಷ ಭಕ್ತಿಭೂಷಣ್ ಪ್ರಭುಜಿ ಹೇಳಿದರು. ಶ್ರೀ ರಾಮ ವೈದ್ಯನಾಥ ಭಜನಾ ಮಂದಿರ ಸುಜೀರು ಇದರ ಅಮೃತ ಮಹೋತ್ಸವದ ಏಕಹ ಭಜನೆ, ರುದ್ರಯಾಗದ ಪ್ರಯುಕ್ತ ಭಾನುವಾರ ಮಂದಿರದ ಆವರಣದಲ್ಲಿ ನಡೆದ ಮಾತೃ ಸಂಗಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಮಂಗಳೂರು ವಿವಿ ಉಪನ್ಯಾಸಕಿ ವಿನುತ ಸಾಲೆತ್ತೂರು ಮಾತನಾಡಿ ಸಂಸ್ಕಾರ ಹಾಗೂ ಸಂಸ್ಕೃತಿ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ನಮ್ಮಲ್ಲಿರುವ ಸಂಸ್ಕಾರ ನಮ್ಮನ್ನು ಎತ್ತರಕ್ಕೆ ಕೊಂಡೊಯ್ಯುತ್ತದೆ., ಮಕ್ಕಳ ನಡವಳಿಕೆಯ ಬಗ್ಗೆ ಪೋಷಕರು ಸದಾ ಗಮನ ಹರಿಸಿಕೊಂಡು ಮಕ್ಕಳು ದಾರಿ ತಪ್ಪದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದರು. ಅಮೃತ ಮಹೋತ್ಸವ ಸಮಿತಿ ಐತಪ್ಪ ಆಳ್ವ ಸುಜೀರುಗುತ್ತು, ಗೌರವಾಧ್ಯಕ್ಷ ಪ್ರಕಾಶ್ಚಂದ್ರ ರೈ ದೇವಸ್ಯ, ಭಜನಾ ಂಮದಿರ ಸಮಿತಿ ಅಧ್ಯಕ್ಷ ಚಂದ್ರಶೇಖರ ಗಾಂಭೀರ ಸುಜೀರುಗುತ್ತು, ಗೌರವ ಸಲಹೆಗಾರ ಕಮಲಾಕ್ಷ ಗಂಧಗಾಡು, ಹಿರಿಯರಾದ…
ಪುದು ಗ್ರಾಮದ ಸುಜೀರು ಶ್ರೀ ದೈವರಾಜ ಕೋರ್ದಬ್ಬು ದೈವಸ್ಥಾನದ ವರ್ಷಾವಧಿ ನೇಮೋತ್ಸವದ ಪ್ರಯುಕ್ತ ಧಾರ್ಮಿಕ ಸಭಾ ಕಾರ್ಯಕ್ರಮ
ಬಂಟ್ವಾಳ: ಪುದು ಗ್ರಾಮದ ಸುಜೀರು ಶ್ರೀ ದೈವರಾಜ ಕೋರ್ದಬ್ಬು ದೈವಸ್ಥಾನದ ವರ್ಷಾವಧಿ ನೇಮೋತ್ಸವದ ಪ್ರಯುಕ್ತ ಧಾರ್ಮಿಕ ಸಭಾ ಕಾರ್ಯಕ್ರಮ ಶನಿವಾರ ನಡೆಯಿತು.ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜ್ಯೊತಿಷಿ ಅನಿಲ್ ಪಂಡಿತ್ ಮಾತನಾಡಿದೇವರ ನಾಮ ಸ್ಮರಣೆಯಿಂದ ಪಾಪಗಳು ಪರಿಹಾರವಾಗುತ್ತದೆ. ನಿತ್ಯ ದೇವತಾ ಕಾರ್ಯಕ್ರಮಗಳ ಮೂಲಕ ನಮ್ಮನ್ನು ನಾವು ತೊಡಗಿಸಕೊಳ್ಳಬೇಕು ಎಂದರು.ಕಾರ್ಯಕ್ರಮದಲ್ಲಿ ಮುದರ ಸುಜೀರು ದೈಯ್ಯಡ್ಕ, ಯತೀನ್, ದಾಮೋದರ ಸಪಲ್ಯತಾರಾನಾಥ ಕುಲಾಲ್ ಅವರನ್ನು ಗೌರವಿಸಲಾಯಿತು.ಉದ್ಯಮಿ ಜಗದೀಶ್ ರೈ, ಗೌರವಾಧ್ಯಕ್ಷ ಆಶಿತ್ ಶೆಟ್ಟಿ, ಪ್ರಸಾದ್ ಸುಜೀರು, ಜಗದೀಶ್ ಕುಮ್ಡೇಲು , ಅಧ್ಯಕ್ಷ ರಾಮಕೃಷ್ಣ ಶೆಟ್ಟಿ ಸುಜೀರು ಹೊಸಮನೆ, ವಿಶು ಕುಮಾರ್, ಸುಂದರ ಗುರಿಕಾರ ಭಾಗವಹಿಸಿದ್ದರು.ಕೋಶಾಧಿಕಾರಿ ನಾಗೇಶ್ ಅಮೀನ್ ಸ್ವಾಗತಿಸಿದರು, ದತ್ತನಗರ ವೀರ ಹನುಮಾನ್ ಮಂದಿರದ ಅಧ್ಯಕ್ಷ ಸುರೇಂದ್ರ ಕಂಬಳಿ ಸುಜೀರು ಬೀಡು ಪ್ರಾಸ್ತವಿಕವಾಗಿ ಮಾತನಾಡಿದರು. ಗಣೇಶ್ ದತ್ತನಗರ ಕಾರ್ಯಕ್ರಮ ನಿರೂಪಿಸಿದರು.ವೇದಮೂರ್ತಿ ಗಣೇಶ್ ಭಟ್ ಅವರ ನೇತೃತ್ವದಲ್ಲಿ ಸಾಮುಹಿಕ ಶನೈಶ್ಚರ ಪೂಜೆ ನಡೆಯಿತು. ಬಳಿಕ ಮಹಾಪೂಜೆ ನಡೆದು ಅನ್ನಸಂರ್ಪಣೆ ನಡೆಯಿತು.
ಬಂಟ್ವಾಳ: ಪುದು ಗ್ರಾಮದ ಸುಜೀರು ಶ್ರೀ ದೈವರಾಜ ಕೋರ್ದಬ್ಬು ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವ ಕಾರ್ಯಕ್ರಮವು ಡಿ.28 ಶನಿವಾರ ಮತ್ತು ಡಿ.29 ಭಾನುವಾರ ನಡೆಯಲಿದೆ.ಡಿ.27 ರಂದು ದೇವತಾ ಪ್ರಾರ್ಥನೆಯೊಂದಿಗೆ ವಿವಿಧ ಧಾರ್ಮಿಕ ಕಾರ್ಯಕ್ರಮಳು ಆರಂಭಗೊಳ್ಳಲಿದೆ. ಡಿ.28 ರಂದು ಬೆಳಿಗ್ಗೆ 7.30 ಕ್ಕೆ ಗಣಹೋಮ, 8.30 ಕ್ಕೆ ದೈವದ ಭಂಡಾರ ಏರಲಿದೆ. 9.30ಕ್ಕೆ ಸಾಮೂಹಿಕ ಶನೈಶ್ಚರ ಪೂಜೆ ನಡೆಯಲಿದೆ. 11 ಗಂಟೆಗೆ ಮಹಾಪೂಜೆ ನಡೆದು ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಪ್ರಸಾದ ವಿತರಣೆಯಾಗಿ ಅನ್ನದಾನ ನಡೆಯಲಿದೆ. ಅಂದು ರಾತ್ರಿ 10 ಗಂಟೆಗೆ ಶ್ರೀದೈವರಾಜ ಕೋರ್ದಬ್ಬು ತನ್ನಿಮಾನಿಗ ದೈವಕ್ಕೆ ನೇಮ ನಡೆಯಲಿದೆ. ಡಿ.29 ರಂದು ಸಂಜೆ 5 ಗಂಟೆಗೆ ರಾಹು ಗುಳಿಗ ದೈವಕ್ಕೆ ಹಾಗೂ ರಾತ್ರಿ 9 ಗಂಟೆಗೆ ಗುಳಿಗ ಪಂಜುರ್ಲಿ ದೈವಕ್ಕೆ ನೇಮ ನಡೆಯಲಿದೆ.
ಬಂಟ್ವಾಳ: ವಿದ್ಯಾರ್ಥಿಗಳಲ್ಲಿ ಬೇರೆ ಬೇರೆ ಪ್ರತಿಭೆಗಳಿರುತ್ತದೆ, ವಿವಿಧ ಚಟುವಟಿಕೆಗಳಲ್ಲಿ ಆಸಕ್ತಿಯಿರುತ್ತದೆ. ಅವುಗಳನ್ನು ಪೋಷಕರು ಗುರುತಿಸಿ ಪ್ರೋತ್ಸಾಹ ನೀಡಿದಾಗ ವಿದ್ಯಾರ್ಥಿಗಳು ಪ್ರತಿಭಾವಂತರಾಗುತ್ತಾರೆ ಎಂದು ಹಿರಿಯ ರಂಗ ಭೂಮಿ ಕಲಾವಿದೆ ಸರೋಜಿನಿ ಶೆಟ್ಟಿ ಹೇಳಿದರು.ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ, ಏರ್ಯ ಆಳ್ವ ಫೌಂಡೇಶನ್ ಮೊಡಂಕಾಪು ಇದರ ಸಹಯೋಗದೊಂದಿಗೆ ಏರ್ಯ ಲಕ್ಷ್ಮೀ ನಾರಾಯಣ ಆಳ್ವರವರ ಸ್ಮರಣಾರ್ಥ ಫರಂಗಿಪೇಟೆಯ ಸೇವಾಂಜಲಿ ಸಭಾಗೃಹದಲ್ಲಿ ನಡೆದ 2ನೇ ವರ್ಷದ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆ ವರ್ಣಾಂಜಲಿ 2024ನ್ನು ಉದ್ಘಾಟಿಸಿ ಮಾತನಾಡಿದರು.ಸೇವಾಂ ಜಲಿ ಸಂಸ್ಥೆಯ ಮೂಲಕ ಕೃಷ್ಣಕುಮಾರ್ ಪೂಂಜ ಅವರು ಬಡವರಿಗೆ, ರೋಗಿಗಳಿಗೆ ಶಕ್ತಿ ತುಂಬುವ ಕಾರ್ಯವನ್ನು ಮಾಡುತ್ತಿದ್ದಾರೆ. ಈ ಸೇವೆ ನಿರಂತರವಾಗಿ ನಡೆಯಲಿ ಎಂದು ಆಶಿಸಿದರು. ದೀಪಿಕಾ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಮಹಾಬಲೇಶ್ವರ ಹೆಬ್ಬಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಚಿತ್ರಕಲೆಯಂತಹ ಸಹಪಠ್ಯ ಚಟುವಟಿಕೆಗಳಲ್ಲಿ ಮಕ್ಕಳು ತೊಡಗಿಸಿಕೊಂಡರೆ ಅವರ ಕಲಿಕೆಗೆ ಅಡ್ಡಿಯಾಗುವುದಿಲ್ಲ ಬದಲಾಗಿ ಕಲಿಕೆಗೆ ಪೂರಕವಾಗಲಿದೆ ಎಂದರು.ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜ ಸ್ವಾಗತಿಸಿ, ಪ್ರಾಸ್ತವಿಕ ಮಾತುಗಳನ್ನಾಡಿದರು. ಶಿಕ್ಷಕ ದೇವದಾಸ್ ವಂದಿಸಿದರು,…
ಬಂಟ್ವಾಳ: ಕುರಿಯಾಳ ಗ್ರಾಮದ ದುರ್ಗಾನಗರ ಶ್ರೀ ಓಂಕಾರೇಶ್ವರೀ ದೇವಿ ಭಜನಾ ಮಂದಿರದ ವಾರ್ಷಿಕೋತ್ಸವ ಡಿ.26ರಂದು ಗುರುವಾರ ನಡೆಯಲಿದೆ.ಆ ದಿನ ಬೆಳಿಗ್ಗೆ ಗಂಟೆ 5ಕ್ಕೆ ಸಾಮೂಹಿಕ ಪ್ರಾರ್ಥನೆ, ಗಣಹೋಮ, ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸಂಕೀರ್ತನೆ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ಅರ್ಚಕ ಸುದರ್ಶನ್ ಬಲ್ಲಾಳ್ ನೇತೃತ್ವದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, 11ರಿಂದ ನಾಗದೇವರಿಗೆ ನಾಗತಂಬಿಲ, ಆಶ್ಲೇಷ ಬಲಿ, ಮಹಾಪೂಜೆ ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ಶ್ರೀ ಓಂಕಾರೇಶ್ವರೀ ದೇವಿಗೆ ಮಹಾಪೂಜೆ ನಡೆದು ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 6.30ಕ್ಕೆ ಭಜನಾ ಮಂಗಳ, ರಾತ್ರಿ 8.30ಕ್ಕೆ ಶ್ರೀ ಓಂಕಾರೇಶ್ವರೀ ದೇವಿಗೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಗಂಟೆ 9.30ರಿಂದ ಸಸಿಹಿತ್ಲು ಮೇಳದಿಂದ ಮಹಾಶಕ್ತಿ ಮಂತ್ರದೇವತೆ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಬಂಟ್ವಾಳ: ಲಯನ್ಸ್ ಕ್ಲಬ್ ಬಂಟ್ವಾಳದ ಆಶ್ರಯದಲ್ಲಿ ಕ್ರಿಸ್ಮಸ್ ಸಂಭ್ರಮ ಕಾರ್ಯಕ್ರಮ ಬಿ.ಸಿ.ರೋಡಿನ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಮಂಗಳವಾರ ಸಂಭ್ರಮದಿಂದ ನಡೆಯಿತು.ತೊಡಂಬಿಲ ಚರ್ಚಿನ ಧರ್ಮ ಗುರುಗಳಾದ ವಂ. ಆಂಟೋನಿ ಲೋಬೊ ಕ್ರಿಸ್ಮಸ್ ಸಂಭ್ರಮವನ್ನು ಉದ್ಘಾಟಿಸಿ ಮಾತನಾಡಿ ಪರರ ಸಂಕಷ್ಟಗಳಿಗೆ ಸ್ಪಂದಿಸುವ ಮೂಲಕ ನಮ್ಮಲ್ಲಿ ಸಂತೃಪ್ತಿ ಕಾಣಬಹುದು. ನಮ್ಮ ಮನೋಸ್ಥಿತಿ, ಹಣಸ್ಥಿತಿ ಹಾಗೂ ಪರಿಸ್ಥಿತಿ ಯನ್ನು ಅರಿತುಕೊಂಡು, ಹತೋಟಿಯಲ್ಲಿಟ್ಟುಕೊಂಡು ಮುಂದುವರಿದಾಗ ಬದುಕಿಗೆ ಹೊಸ ರೂಪವನ್ನು ಕೊಡಲು ಮತ್ತು ಜೀವನದಲ್ಲಿ ಸಾರ್ಥಕತೆ ಕಾಣಲು ಸಾಧ್ಯವಾಗುತ್ತದೆ . ಮಾತ್ರವಲ್ಲದೆ, ಜೀವನದ ಯಶಸ್ಸಿಗೆ ಒಂದಷ್ಟು ಸೂತ್ರಗಳನ್ನು ಹೇಳುವ ಮುಖೇನ ಕ್ರಿಸ್ಮಸ್ ಸಂದೇಶ ನೀಡಿ ಆಶೀರ್ವದಿಸಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಕ್ರಿಸ್ಮಸ್ ಪ್ರಧಾನ ಸಂಯೋಜಕ ಅರುಣ್ ಪೀಟರ್ ಪಿಂಟೋ ಶುಭ ಹಾರೈಸಿದರು. ವಾಲ್ಟರ್ ನೊರಾನ್ಹಾ ಮತ್ತು ಡೊನಾಲ್ಡ್ ಬಂಟ್ವಾಳ್ ಅತಿಥಿಗಳ ಪರಿಚಯ ಮಾಡಿದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಲಯನ್ಸ್ ಕ್ಲಬ್ ಪೂರ್ವಾಧ್ಯಕ್ಷ ಗೋಳ್ತಮಜಲು ಮೊಹಮ್ಮದ ಹನೀಫ್ ಅವರನ್ನು ಅಭಿನಂದಿಸಲಾಯಿತು.ಪೂರ್ವ ರಾಜ್ಯಪಾಲ ವಸಂತ ಕುಮಾರ್ ಶೆಟ್ಟಿ ಶುಭಾಶಂಸನೆಗೈದರು. ಸ್ಪರ್ಧಾ ವಿಜೇತರಿಗೆ ಬಹುಮಾನ ನೀಡಲಾಯಿತು.…
ಬಂಟ್ವಾಳ: ಸರಕಾರಿ ಪದವಿ ಪೂರ್ವ ಕಾಲೇಜು ಸಜೀಪಮೂಡ ಇಲ್ಲಿನ ಪ್ರೌಢಶಾಲಾ ವಿಭಾಗದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಗುರುವಾರ ಶಾಲೆಯ ಜ್ಞಾನಜ್ಯೋತಿ ವೇದಿಕೆಯಲ್ಲಿ ವಿಜ್ರಂಭಣೆಯಿಂದ ನಡೆಯಿತು.ಶಾಲಾ ಎಸ್ ಡಿಎಂಸಿ ಕಾರ್ಯಧ್ಯಕ್ಷ ಜಯಪ್ರಕಾಶ್ ಪೆರ್ವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ವಿದ್ಯಾರ್ಥಿಗಳು ತಮಗೆ ಸಿಗುವ ಅವಕಾಶವನ್ನು ಸದುಪಯೋಗಿಸಿಕೊಂಡಾಗ ತಮ್ಮೊಳಗಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಸಾಧ್ಯವಿದೆ. ಕಲಿಕೆಯ ಜೊತೆಗೆ ಇನ್ನಿತರ ಸಹಪಠ್ಯ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದು ತಿಳಿಸಿದರು. ಹಿರಿಯರಾದ ಪ್ರಭಾಕರ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಅವರು ಮಾತನಾಡಿ ವಿದ್ಯಾರ್ಥಿಗಳ ಪ್ರತಿಭೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಅತ್ಯಗತ್ಯ ಎಂದರು.ಕಾರ್ಯಕ್ರಮದಲ್ಲಿ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಶಾರಾದ ಎಸ್. ರಾವ್, ಯಕ್ಷಗುರು ಕರ್ಗಲ್ ವಿಶ್ವೇಶ್ವರ ಭಟ್, ಹಿರಿಯ ವಿದ್ಯಾರ್ಥಿ ಸಂದೀಪ್ ಸಾಲ್ಯಾನ್ ಅವರನ್ನು ಗೌರವಿಸಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಕ್ರೀಡಾಕೂಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.ವೇದಿಕೆಯಲ್ಲಿ ಬಂಟ್ವಾಳ ತಾ.ಪಂ. ಮಾಜಿ ಅಧ್ಯಕ್ಷ ಯಶವಂತ ದೇರಾಜೆ, ಸಜೀಪಮೂಡ ಗ್ರಾ.ಪಂ. ಸದಸ್ಯರಾದ ವಿಶ್ವನಾಥ ಬೆಳ್ಚಾಡ ಕೂಡೂರು, ಹಮೀದ್ ಕೊಳಕೆ, ಆಯುಷ್…








